ಕಳೆದ 30 ವರ್ಷಗಳ ಹಿಂದಿನ ಸ್ಮರಣೀಯ ಕ್ಷಣಗಳು ಮತ್ತು ಚಿತ್ರರಂಗದ ಸಂಭ್ರಮದ ನಡುವೆ, ಭಾರತೀಯ ಚಿತ್ರರಂಗದ ಇಬ್ಬರು ದಿಗ್ಗಜರಾದ ಸೂಪರ್ಸ್ಟಾರ್ ರಜನಿಕಾಂತ್ (Rajanikanth) ಹಾಗೂ ನಟ ಮೋಹನ್ ಬಾಬು (Mohan Babu) ಚೆನ್ನೈನಲ್ಲಿ ಮತ್ತೆ ಒಂದಾದರು. ಇದಕ್ಕೆ ಕಾರಣಕ್ಕೆ `ಪೆದರಾಯುಡು’ ಸಿನಿಮಾವು ಜೂನ್ 15, 1995ರಂದು ತೆರೆಕಂಡಿತ್ತು. ಇದೀಗ 30 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಬ್ಬರೂ ಸ್ಟಾರ್ ನಟರು, ವಿಷ್ಣು ಮಂಚು ನಟನೆಯ `ಕಣ್ಣಪ್ಪ’ (Kannappa) ಸಿನಿಮಾ ವೀಕ್ಷಿಸಿ ಹಳೇ ನೆನಪಿಗೆ ಹೊರಳಿದರು.
ರವಿ ರಾಜ ಪಿನಿಸೆಟ್ಟಿ ನಿರ್ದೇಶನದಲ್ಲಿ ಮೂಡಿಬಂದ `ಪೆದರಾಯುಡು’ ಸಿನಿಮಾ, ಅಂದಿನ ಕಾಲದಲ್ಲಿ ಬ್ಲಾಕ್ಬಸ್ಟರ್ ಹಿಟ್ ಆಗಿತ್ತು. ಗಟ್ಟಿ ಕಥಾ ಶೈಲಿ ನೆನಪಿನಲ್ಲಿ ಉಳಿಯುವ ಅಭಿನಯಗಳು ಮತ್ತು ಅದ್ವಿತೀಯ ಮಾಸ್ ಆಕರ್ಷಣೆಯಿಂದ ತೆಲುಗು ಚಿತ್ರರಂಗದಲ್ಲಿ ಈ ಚಿತ್ರ ಶಾಶ್ವತವಾಗಿ ಉಳಿದಿದೆ. ಈ ಚಿತ್ರ 30 ವರ್ಷ ಪೂರೈಸಿದ ಬೆನ್ನಲ್ಲೇ ರಜನಿಕಾಂತ್ ಮತ್ತು ಮೋಹನ್ ಬಾಬು (Mohan Babu) ಒಂದೆಡೆ ಸೇರಿ ಕಣ್ಣಪ್ಪ ಚಿತ್ರ ವೀಕ್ಷಿಸಿದರು. ಇದನ್ನೂ ಓದಿ: ರಚಿತಾ ರಾಮ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ : ನಿರ್ದೇಶಕ ನಾಗಶೇಖರ್ ಒತ್ತಾಯ
ಅಂದಹಾಗೆ ಜೂನ್ 27ರಂದು ಜಾಗತಿಕ ಮಟ್ಟದಲ್ಲಿ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಕಣ್ಣಪ್ಪ ಸಿನಿಮಾ ಬಿಡುಗಡೆಗೊಳ್ಳಲಿದೆ. ಈ ಚಿತ್ರದಲ್ಲಿ ಶಿವನ ಭಕ್ತರಾದ ಕಣ್ಣಪ್ಪನ ಕಥೆಯನ್ನು ವಿಶಿಷ್ಟವಾಗಿ ಆವರಿಸಿಕೊಂಡಿದ್ದಾರೆ. ಚಿತ್ರ ವೀಕ್ಷಿಸಿದ ಬಳಿಕ ರಜನಿಕಾಂತ್ ಕೊಂಚ ಭಾವುಕರಾಗಿದ್ದಾರೆ. ಇದನ್ನೂ ಓದಿ: ಪುರಿ ಜಗನ್ನಾಥ್ ನಿರ್ದೇಶನದ ಚಿತ್ರಕ್ಕೆ ಸಂಯುಕ್ತ ಮೆನನ್ ಎಂಟ್ರಿ
`ಇದು ಅಸಾಧಾರಣ ಚಿತ್ರ. ಭಾವನೆ, ದೃಶ್ಯ ವೈಭವ ಮತ್ತು ಆಧ್ಯಾತ್ಮ- all extraordinary’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತ್ತ ರಜನಿಕಾಂತ್ ಬಗ್ಗೆಯೂ ಮಾತನಾಡಿದ ಮೋಹನ್ ಬಾಬು, `ಇವತ್ತು 22 ವರ್ಷಗಳಿಂದ ನಿರೀಕ್ಷಿಸುತ್ತಿದ್ದ ರಜನಿಕಾಂತ್ ಅವರ ಆಲಿಂಗನ ದೊರೆತಿದೆ. ಈಗ ನಾನು ಹೆದರುವುದಿಲ್ಲ. ನಾನು ಅಜೇಯ. ಕಣ್ಣಪ್ಪ ಬರುತ್ತಾನೆ!’ ಎಂದು ಸಂಭ್ರಮದಿಂದ ಹೇಳಿದ್ದಾರೆ. ಇದನ್ನೂ ಓದಿ: ಕನ್ನಡಿಗರಿಗೆ ಅಪಮಾನ ಪ್ರಕರಣ – ಹೇಳಿಕೆ ಕೊಡಲು ಪೊಲೀಸರನ್ನು ಸತಾಯಿಸುತ್ತಿರುವ ಸೋನು ನಿಗಮ್
ಅಂದಹಾಗೆ ಕಣ್ಣಪ್ಪ ಚಿತ್ರವನ್ನು ಮುಖೇಶ್ ಕುಮಾರ್ ಸಿಂಗ್ ನಿರ್ದೇಶನ ಮಾಡಿದ್ದಾರೆ. ಪುತ್ರನ ಚಿತ್ರಕ್ಕೆ ಮೋಹನ್ ಬಾಬು ಬಂಡವಾಳ ಹೂಡಿ ನಿರ್ಮಾಪಕರಾಗಿದ್ದಾರೆ. ಬಹು ತಾರಾಗಣದ ಈ ಸಿನಿಮಾ ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಜೂನ್ ಕೊನೆಯ ವಾರದಲ್ಲಿ ಸಿನಿಮಾ ಬಿಡುಗಡೆ ಆಗಲಿದೆ.


‘ಕಣ್ಣಪ್ಪ’ ಸಿನಿಮಾದಲ್ಲಿ ಕಿರಾತಕ ಎಂಬ ಪಾತ್ರದಲ್ಲಿ ಮೋಹಲ್ ಲಾಲ್ ನಟಿಸಿದ್ದಾರೆ. ನಟನ ವಿಭಿನ್ನ ಗೆಟಪ್ ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಎಂದೂ ಕಾಣಿಸಿಕೊಂಡಿರದ ವಿಭಿನ್ನ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ನಟನ ಬರ್ತ್ಡೇ ಟೀಸರ್ಗೆ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಇದನ್ನೂ ಓದಿ:















ಸ್ಟಾರ್ ಹೀರೋಗಳಿಗೆ ನಾಯಕಿಯಾಗಿ ಮಾತ್ರವಲ್ಲ. ಮಹಿಳಾ ಪ್ರಧಾನ ಸಿನಿಮಾಗಳಲ್ಲಿಯೂ ನಟಿಸುವ ಮೂಲಕ ಕಾಜಲ್ ಸೈ ಎನಿಸಿಕೊಂಡಿದ್ದಾರೆ. ಮದುವೆಯಾಗಿ ಒಂದು ಮಗುವಿನ ತಾಯಿಯಾದ್ಮೇಲೆಯೂ ಕಾಜಲ್ ತಮ್ಮ ಚಾರ್ಮ್ ಉಳಿಸಿಕೊಂಡಿದ್ದಾರೆ. ಅದಕ್ಕಾಗಿಯೇ ಈಗಲೂ ಕೂಡ ಚಿತ್ರರಂಗದಲ್ಲಿ ನಟಿಗೆ ಬೇಡಿಕೆ ಇದೆ. ಸದ್ಯ ‘ಕಣ್ಣಪ್ಪ’ ಚಿತ್ರದ ವಿಚಾರವಾಗಿ ನಟಿ ಸಖತ್ ಸುದ್ದಿಯಾಗುತ್ತಿದ್ದಾರೆ.