Tag: ಕಣ್ಣಿರು

  • ನನ್ನ ಮಗನನ್ನು ನಿಮಗೆ ಬಿಟ್ಟಿದ್ದೇನೆ- ಕಾಂತಾದೇವಿ ಛೋಪ್ರಾ ಕಣ್ಣೀರು

    ನನ್ನ ಮಗನನ್ನು ನಿಮಗೆ ಬಿಟ್ಟಿದ್ದೇನೆ- ಕಾಂತಾದೇವಿ ಛೋಪ್ರಾ ಕಣ್ಣೀರು

    ಬೆಳಗಾವಿ: ಮಗ ಸೌರಭ್ ಛೋಪ್ರಾಗೆ (Saurabh Chopra) ಸವದತ್ತಿಯಲ್ಲಿ (Savadatti) ಕಾಂಗ್ರೆಸ್ (Congress) ಟಿಕೆಟ್ ಕೈ ತಪ್ಪಿದ್ದಕ್ಕಾಗಿ ತಾಯಿ ಕಾಂತಾದೇವಿ ಛೋಪ್ರಾ (Kantadevi Chopra) ಬೆಂಬಲಿಗರ ಮುಂದೆಯೇ ವೇದಿಕೆ ಮೇಲೆ ಮಂಡಿಯೂರಿ ಕಣ್ಣೀರು ಹಾಕಿದ್ದಾರೆ.

    ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಸೌರಭ್ ಛೋಪ್ರಾ ಹಾಗೂ ತಾಯಿ ಕಾಂತಾದೇವಿ ಛೋಪ್ರಾ ಕಣ್ಣೀರು ಹಾಕಿದ್ದಾರೆ. 2013-2018ರಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ತೀವ್ರ ಪೈಪೋಟಿ ಒಡ್ಡಿದ್ದ ಆನಂದ ಚೋಪ್ರಾ (Anand Chopra) ಕೆಲವೇ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಕಳೆದ ಚುನಾವಣೆಯಲ್ಲೂ (Election) ಆನಂದ ಮಾಮನಿಗೆ ತೀವ್ರ ಪೈಪೋಟಿಯನ್ನು ಛೋಪ್ರಾ ನೀಡಿದ್ದರು. ಆನಂದ ಚೋಪ್ರಾ ಸಾವಿನ ನಂತರ ‘ಕೈ’ ಟಿಕೆಟ್ ಆಕಾಂಕ್ಷಿಯಾಗಿದ್ದ ಸೌರಭ್ ಛೋಪ್ರಾಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ನಿನ್ನೆ ಸವದತ್ತಿಯಲ್ಲಿ ಬೆಂಬಲಿಗರ ಸಭೆ ನಡೆಸಲಾಗಿತ್ತು. ಇದನ್ನೂ ಓದಿ: ಹಾಲಾಡಿ ಶ್ರೀನಿವಾಸ ಶೆಟ್ಟಿ ಒಂದು ಸಾವಿರ ಅಂತರದಿಂದ ಕೊನೆಗೆ ಲಕ್ಷ ಮತ ಪಡೆದ ರೋಚಕ ಕಥೆ! 

    ನನ್ನ ಗಂಡನನ್ನು ಕಳೆದುಕೊಂಡಿದ್ದೇನೆ. ನನ್ನ ಮಗನನ್ನು ನಿಮಗೆ ಬಿಟ್ಟಿದ್ದೇನೆ. ನೀವೇನು ಮಾಡುತ್ತೀರಿ ನಿಮಗೆ ಬಿಟ್ಟದ್ದು ಎಂದು ಸಭೆಯಲ್ಲಿ ಕಾಂತಾದೇವಿ ಕಣ್ಣೀರು (Tears) ಹಾಕಿದ್ದಾರೆ. ಸವದತ್ತಿಯಲ್ಲಿ ಬಂಡಾಯದ ಕಹಳೆ ಊದಿದ ಸೌರಭ್ ಛೋಪ್ರಾ ಬಳಿಕ ಕಾಂತಾದೇವಿ ಮಗನಿಗಾಗಿ ಮಂಡಿಯೂರಿ ಬೇಡಿಕೊಂಡಿದ್ದಾರೆ. ಇದನ್ನೂ ಓದಿ: ಸವದತ್ತಿ ಕ್ಷೇತ್ರದಲ್ಲಿ ಮತ್ತೆ ಬಂಡಾಯದ ಬೆಂಕಿ ಹೊತ್ತಿಸಿದ ಸೌರಭ್ ಚೋಪ್ರಾ

  • ಸಿಎಂ ಕುಮಾರಸ್ವಾಮಿ ಕಣ್ಣೀರು ವಿಚಾರ: ಕೆಪಿಸಿಸಿಯಿಂದ ಕೈ ನಾಯಕರಿಗೆ ನೋಟಿಸ್

    ಸಿಎಂ ಕುಮಾರಸ್ವಾಮಿ ಕಣ್ಣೀರು ವಿಚಾರ: ಕೆಪಿಸಿಸಿಯಿಂದ ಕೈ ನಾಯಕರಿಗೆ ನೋಟಿಸ್

    ಬೆಂಗಳೂರು: ಸಿಎಂ ಕುಮಾರಸ್ವಾಮಿಯವರು ಕಣ್ಣೀರ ವಿಚಾರಕ್ಕೆ ಕಾಂಗ್ರೆಸ್ ನಾಯಕರೇ ಕಾರಣ ಎಂಬ ಹೇಳಿಕೆ ನೀಡಿದ್ದ ಇಬ್ಬರು ಕೈ ನಾಯಕರಿಗೆ ಕೆಪಿಸಿಸಿ ನೋಟಿಸ್ ಜಾರಿಗೊಳಿಸಿದೆ.

    ರಾಮನಗರದಲ್ಲಿ ನಡೆದ ಅಭಿನಂದನಾ ಸಮಾವೇಶದಲ್ಲಿ ಸಿಎಂ ಕುಮಾರಸ್ವಾಮಿಯವರು ಕಣ್ಣೀರು ಹಾಕಿದ್ದರ ಕುರಿತು ಪ್ರತಿಕ್ರಿಯಿಸಿದ್ದ ಕೈ ನಾಯಕರುಗಳಾದ ಮಾಜಿ ಸ್ಪೀಕರ್ ಕೋಳಿವಾಡ ಹಾಗೂ ಮಾಜಿ ಶಾಸಕ ಕೆ.ಎನ್. ರಾಜಣ್ಣನವರಿಗೆ ಕೆಪಿಸಿಸಿ ನೋಟಿಸ್ ಜಾರಿಗೊಳಿಸಿದೆ. ಇದನ್ನೂ ಓದಿ: ಸಿಎಂ ಎಚ್‍ಡಿಕೆ ಕಣ್ಣೀರಿಗೆ ಕಾಂಗ್ರೆಸ್ಸಿಗರೇ ಕಾರಣ: ಮಾಜಿ ಸ್ಪೀಕರ್ ಕೋಳಿವಾಡ

    ಮಾಜಿ ಶಾಸಕರಾದ ಕೆ.ಎನ್. ರಾಜಣ್ಣ ಮೈತ್ರಿ ಸರ್ಕಾರದ ಕಾರ್ಯವೈಖರಿಯ ಬಗ್ಗೆ ಟೀಕೆ ನಡೆಸಿದ್ದರು. ಅಲ್ಲದೇ ಮಾಜಿ ಸ್ಪೀಕರ್ ಕೋಳಿವಾಡ ಸಹ ಸಿಎಂ ಕುಮಾರಸ್ವಾಮಿ ಕಣ್ಣೀರಿಗೆ ಕಾಂಗ್ರೆಸ್ ಪಕ್ಷವೇ ಕಾರಣ ಎಂಬುದಾಗಿ ಹೇಳಿಕೆ ನೀಡಿದ್ದರು. ಇವರ ಈ ಹೇಳಿಕೆಯಿಂದಾಗಿ ಕಾಂಗ್ರೆಸ್ ರಾಷ್ಟ್ರೀಯ ಮಟ್ಟದಲ್ಲಿ ಮುಜುಗರ ಉಂಟಾಗಿತ್ತು. ಇದನ್ನೂ ಓದಿ: ಸಂಪುಟ ರಚನೆಯಾದ ಒಂದು ವಾರದಲ್ಲೇ ಸಮ್ಮಿಶ್ರ ಸರ್ಕಾರ ಪತನ : ಕೈ ಮಾಜಿ ಶಾಸಕ ರಾಜಣ್ಣ ಭವಿಷ್ಯ

    ಈ ಹಿನ್ನೆಲೆಯಲ್ಲಿ ಕೆಪಿಸಿಸಿಯು ಇಬ್ಬರೂ ನಾಯಕರುಗಳಿಗೆ ನೀವು ಪಕ್ಷಕ್ಕೆ ಮುಜುಗರ ತರುವಂತೆ ಹೇಳಿಕೆ ನೀಡುತ್ತಿದ್ದು, ನಿಮ್ಮ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬಾರದು ಯಾಕೆ ಎಂದು ಕಾರಣ ಕೇಳಿ ನೋಟಿಸ್ ನೀಡಿದೆ. ಅಲ್ಲದೇ ಈ ನೋಟಿಸ್ ಗೆ ಒಂದು ವಾರದೊಳಗೆ ಉತ್ತರಿಸುವಂತೆ ಸೂಚಿಸಲಾಗಿದೆ.