Tag: ಕದನ ವಿರಾಮ

  • ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿದೆ: ಪಾಕ್ ವಿದೇಶಾಂಗ ಸಚಿವ ಘೋಷಣೆ

    ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿದೆ: ಪಾಕ್ ವಿದೇಶಾಂಗ ಸಚಿವ ಘೋಷಣೆ

    – ಭಾರತವೂ ಕದನವಿರಾಮಕ್ಕೆ ಒಪ್ಪಿದೆ ಎಂದ ಪಾಕಿಸ್ತಾನ

    ಇಸ್ಲಾಮಾಬಾದ್: ಪಾಕಿಸ್ತಾನ (Pakistan) ಹಾಗೂ ಭಾರತ (India) ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಇಶಾಕ್ ದಾರ್ (Ishaq Dar) ತಿಳಿಸಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಪಾಕಿಸ್ತಾನವು ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆಯಾಗದಂತೆ ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗಾಗಿ ಯಾವಾಗಲೂ ಶ್ರಮಿಸಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಭಾರತ್ ಫೋರ್ಜ್, ಮಹೀಂದ್ರಾ ಕಂಪನಿಗಳಿಗೆ ಯುದ್ಧ ಸಾಮಗ್ರಿ ಉತ್ಪಾದನೆ ಹೆಚ್ಚಳಕ್ಕೆ ಕೇಂದ್ರ ಸೂಚನೆ

    ಕದನವಿರಾಮಕ್ಕೆ ಭಾರತವೂ ಒಪ್ಪಿದೆ ಎಂದು ಇಶಾಕ್ ದಾರ್ ತಿಳಿಸಿದ್ದಾರೆ. ಆದರೆ ಭಾರತ ಈ ಕುರಿತು ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಇದನ್ನೂ ಓದಿ: ಭಾರತ-ಪಾಕಿಸ್ತಾನದಿಂದ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಗೆ: ಟ್ರಂಪ್‌ ಘೋಷಣೆ

    ಎರಡೂ ದೇಶಗಳ ಜೊತೆ ಯಶಸ್ವಿಯಾಗಿ ಮಾತುಕತೆ ನಡೆಸಿದ್ದು, ತಕ್ಷಣದ ಕದನ ವಿರಾಮಕ್ಕೆ ಉಭಯ ರಾಷ್ಟçಗಳು ಒಪ್ಪಿಗೆ ನೀಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಕ್ಸ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್‌ಗೆ ಬೆಂಬಲ ನೀಡಿದ ಟರ್ಕಿ, ಅಜೆರ್ಬೈಜಾನ್‌ಗೆ ಭಾರತ ಪೆಟ್ಟು – 2 ದೇಶಗಳಿಗೆ ಟೂರ್‌ ಪ್ಯಾಕೇಜ್‌ ಸ್ಥಗಿತ

  • ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್‌-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ

    ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್‌-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ

    ಟೆಲ್‌ ಅವಿವ್‌: 2023ರ ಅಕ್ಟೋಬರ್‌ನಿಂದ ನಡೆಯುತ್ತಿರುವ ಇಸ್ರೇಲ್‌-ಲೆಬನಾನ್‌ ಯುದ್ಧದ ನಡುವೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಇಸ್ರೇಲ್‌ನ ಭದ್ರತಾ ಕ್ಯಾಬಿನೆಟ್ 10-1 ಮತಗಳಿಂದ ಯುಎಸ್ ಮತ್ತು ಫ್ರಾನ್ಸ್ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ (Israel-Hezbollah ceasefire) ಒಪ್ಪಂದವನ್ನು ಅನುಮೋದಿಸಿದೆ. ಭಾರತೀಯ ಕಾಲಮಾದ ಪ್ರಕಾರ ಇಂದು ಬೆಳಗ್ಗೆ 7:30 ರಿಂದ ಕದನ ವಿರಾಮ ಜಾರಿಗೆ ಬರಲಿದೆ.

    ಕದನ ವಿರಾಮ ಒಪ್ಪಂದದ ನಂತರ, ಅಮೆರಿಕ ಅಧ್ಯಕ್ಷ ಜೋ ಬೈಡನ್‌ (Joe Biden), ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು (Benjamin Netanyahu) ಮತ್ತು ಲೆಬನಾನ್‌ನ ಪ್ರಧಾನಿ ನಜೀಬ್ ಮಿಕಾಟಿ ಶಾಂತಿ ಸುವ್ಯವಸ್ಥೆ ಸ್ಥಾಪಿಸುವ ಕುರಿತು ಮಾತುಕತೆ ಆಡಿದ್ದಾರೆ.

    ಇದು 13 ತಿಂಗಳಿನಿಂದ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ದಾರಿ ಮಾಡಿಕೊಟ್ಟಿದೆ ಎಂದು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ಮಂಗಳವಾರ ಪ್ರಕಟಿಸಿದೆ. ಆದ್ರೆ ಗಾಝಾದಲ್ಲಿ ಹೋರಾಟ ಮುಂದುವರಿಯುತ್ತದೆ ಎಂದು ಹೇಳಿದೆ.

    ಇಸ್ರೇಲ್‌ನ (Israel) ಅನುಮೋದನೆಯ ನಂತರ, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮತ್ತು ಅವರ US ಅಧ್ಯಕ್ಷ ಜೋ ಬಿಡೆನ್ ಜಂಟಿ ಹೇಳಿಕೆಯನ್ನು ನೀಡಿದರು. ಈ ಸಂಘರ್ಷವು ಹಿಂಸಾಚಾರದ ಮತ್ತೊಂದು ಚಕ್ರವಾಗೋದನ್ನ ತಡೆಯಲು ನಿರ್ಧರಿಸಿದ್ದೇವೆ. ಲೆಬನಾನ್‌ನ ಸಶಸ್ತ್ರ ಪಡೆಗಳನ್ನು ನವೀಕರಿಸಲು ಹಾಗೂ ಆರ್ಥಿಕ ಅಭಿವೃದ್ಧಿಯನ್ನು ಬೆಂಬಲಿಸುವ ಪ್ರಯತ್ನಕ್ಕಾಗಿ ಉಭಯ ರಾಷ್ಟ್ರಗಳು ಬದ್ಧವಾಗಿರಬೇಕು ಎಂದು ಹೇಳಿದ್ದಾರೆ.

    ಜೋ ಬೈಡನ್‌ ಮಾತನಾಡಿ, 60 ದಿನಗಳ ಕದನ ವಿರಾಮ ಅವಧಿಯಲ್ಲಿ ಇಸ್ರೇಲ್ ಕ್ರಮೇಣ ತನ್ನ ಪಡೆಗಳನ್ನು ಹಿಂತೆಗೆದುಕೊಳ್ಳುತ್ತದೆ. ಇದೇ ವೇಳೆ ಲೆಬನಾನ್‌ ಇಸ್ರೇಲ್‌ ಗಡಿಯಲ್ಲಿರುವ ತನ್ನ ಸೇನೆಯನ್ನು ನಿಯಂತ್ರಿಸುತ್ತದೆ ಎಂದು ಭಾವಿಸುತ್ತೇವೆ. ಕದನ ವಿರಾಮ ಒಪ್ಪಂದದ ಪ್ರಕಾರ ಇಸ್ರೇಲಿ ಪಡೆಗಳು ದಕ್ಷಿಣ ಲೆಬನಾನ್‌ನಿಂದ ತನ್ನ ಸೇನೆಯನ್ನು ಹಿಂತೆಗೆದುಕೊಳ್ಳಬೇಕು. ಆ ಪ್ರದೇಶದಲ್ಲಿ ಲೆಬನಾನ್‌ ತನ್ನ ಸೇನೆಯನ್ನು ನಿಯೋಜಿಸಬೇಕು. ಹಿಜ್ಬುಲ್ಲಾ ಮತ್ತು ಇತರ ಯಾವುದೇ ಭಯೋತ್ಪಾದಕ ಸಂಘಟನೆಗಳು ಇಸ್ರೇಲ್‌ನ ಭದ್ರತೆಗೆ ಬೆದರಿಕೆ ಹಾಕಲು ಅನುಮತಿಸುವುದಿಲ್ಲ ಎಂದು ಹೇಳಿದ್ದಾರೆ.

    ಲೆಬನಾನಿನ ವಿದೇಶಾಂಗ ಸಚಿವ ಅಬ್ದುಲ್ಲಾ ಬೌ ಹಬೀಬ್ ಮಾತನಾಡಿ, ಇಸ್ರೇಲಿ ಪಡೆಗಳು ತನ್ನ ಸೇನೆಯನ್ನು ಹಿಂತೆಗೆದುಕೊಳ್ಳುತ್ತಿದ್ದಂತೆ, ದಕ್ಷಿಣ ಲೆಬನಾನ್‌ನಲ್ಲಿ ಕನಿಷ್ಠ 5,000 ಸೈನಿಕರನ್ನು ನಿಯೋಜಿಸಲು ತಮ್ಮ ಸೈನ್ಯವು ಸಿದ್ಧವಾಗಿದೆ. ಜೊತೆಗೆ ಇಸ್ರೇಲ್‌ ದಾಳಿಗಳಿಂದ ನಾಶವಾದ ಮೂಲಸೌಕರ್ಯಗಳನ್ನು ಮರುನಿರ್ಮಾಣ ಮಾಡುವಲ್ಲಿ ಅಮೆರಿಕ ಪಾತ್ರ ವಹಿಸುತ್ತದೆ ಎಂದಿದ್ದಾರೆ.

    ಕಳೆದ ವರ್ಷ ಅಕ್ಟೋಬರ್‌ 7ರಂದು ಹಮಾಸ್‌ ಉಗ್ರರು ಇಸ್ರೇಲ್‌ ಮೇಲೆ ರಾಕೆಟ್‌ ದಾಳಿ ನಡೆಸಿದ ನಂತರ ಯುದ್ಧ ಶುರುವಾಗಿತ್ತು. ಈವರೆಗೆ ಯುದ್ಧದಲ್ಲಿ ಲೆಬನಾನ್‌ನಲ್ಲಿ ಸುಮಾರು 3,800 ಜನರು ಹತ್ಯೆಗೀಡಾಗಿದ್ದಾರೆ, ಸುಮಾರು 16,000 ಮಂದಿ ಗಾಯಗೊಂಡಿದ್ದಾರೆ. ಒಟ್ಟಾರೆ ಎರಡೂ ರಾಷ್ಟ್ರಗಳಿಂದ 43 ಸಾವಿರ ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

  • ಇಸ್ರೇಲ್-ಹಮಾಸ್ ನಡ್ವೆ ಇಂದಿನಿಂದ ಕದನ ವಿರಾಮ – 13 ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್‌ ಸಿದ್ಧತೆ

    ಇಸ್ರೇಲ್-ಹಮಾಸ್ ನಡ್ವೆ ಇಂದಿನಿಂದ ಕದನ ವಿರಾಮ – 13 ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್‌ ಸಿದ್ಧತೆ

    ಟೆಲ್‌ ಅವೀವ್‌: ಅಕ್ಟೋಬರ್‌ 7 ರಿಂದ ನಡೆಯುತ್ತಿರುವ ಇಸ್ರೇಲ್‌-ಹಮಾಸ್‌ ನಡುವಿನ ಭೀಕರ ಯುದ್ಧದಲ್ಲಿ (Israel Hamas War) ಮಹತ್ವದ ಬೆಳವಣಿಗೆ ಕಂಡುಬಂದಿದೆ. ಒತ್ತೆಯಾಳುಗಳ (Hostages) ಬಿಡುಗಡೆಗಾಗಿ ಕದನ ವಿರಾಮ ನಿರ್ಧಾರಕ್ಕೆ ಒಪ್ಪಂದ ಏರ್ಪಟ್ಟಿದ್ದು, ಕೆಲವೇ ಗಂಟೆಗಳಲ್ಲಿ ಕದನ ವಿರಾಮ ಘೋಷಣೆಯಾಗಲಿದೆ.

    ಇಂದಿನಿಂದ ನಾಲ್ಕು ದಿನ ಕದನ ವಿರಾಮ ಘೋಷಣೆಯಾಗಲಿದ್ದು, ಒತ್ತೆಯಾಳುಗಳ ವಿನಿಮಯವೂ ನಡೆಯಲಿದೆ. ಒಟ್ಟು 4 ದಿನಗಳು ಕದನ ವಿರಾಮ ಇರಲಿದೆ. ಮೊದಲ ದಿನವೇ ಹಮಾಸ್‌ ಉಗ್ರರ ಗುಂಪು ಸೆರೆಹಿಡಿದಿದ್ದ 13 ಮಂದಿ ಇಸ್ರೇಲ್‌ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ಮಧ್ಯವರ್ತಿ ಕತಾರ್‌ (Qatar) ಹೇಳಿದೆ.

    ಕತಾರ್‌ ವಿದೇಶಾಂಗ ಸಚಿವಾಲಯದ ಪ್ರಕಾರ, ಭಾರತೀಯ ಕಾಲಮಾನ ಬೆಳಗ್ಗೆ 10:30ರಿಂದಲೇ ಕದನ ವಿರಾಮ ಪ್ರಾರಂಭವಾಗಲಿದೆ. ಆದ್ರೆ ಹಮಾಸ್‌ ಸಂಜೆ 7:30ರ ನಂತರ ಒತ್ತೆಯಾಳುಗಳ ಮೊದಲ ಬ್ಯಾಚ್‌ ಅನ್ನು ಬಿಡುಗಡೆ ಮಾಡಲಿದೆ. ಒಂದೇ ಕುಟುಂಬದ ಮಹಿಳೆಯರು ಮತ್ತು ಮಕ್ಕಳನ್ನು ಒಳಗೊಂಡು 13 ಮಂದಿಯನ್ನು ಹಮಾಸ್‌ ಬಿಡುಗಡೆಗೊಳಿಸಲಿದೆ. ಒಪ್ಪಂದದ ಪ್ರಕಾರ 4 ದಿನಗಳಲ್ಲಿ ಒಟ್ಟು 50 ಮಂದಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದೆ. ಇದನ್ನೂ ಓದಿ: ನೂಪುರ್ ಶರ್ಮಾ ಬೆಂಬಲಿಸಿದ್ದ ಗೀರ್ಟ್ ವೈಲ್ಡರ್ಸ್‌ಗೆ ಚುನಾವಣೆಯಲ್ಲಿ ಗೆಲುವು – ನೆದರ್ಲೆಂಡ್ಸ್ ಪ್ರಧಾನಿಯಾಗಲು ಸಜ್ಜು

    ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಬಿಡುಗಡೆ ಮಾಡಲಿರುವ ಒತ್ತೆಯಾಳುಗಳ ಪಟ್ಟಿ ಸ್ವೀಕರಿಸಿದ್ದು, ಬಿಡುಗಡೆಗೊಳ್ಳಲಿರುವ ಕುಟುಂಬಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ತಿಳಿಸಿದ್ದಾರೆ.

    ಈ ನಡುವೆ ಇಸ್ರೇಲ್‌ ಜೈಲಿನಲ್ಲಿರುವ ಪ್ಯಾಲೆಸ್ತೀನ್ ಕೈದಿಗಳನ್ನೂ ಶುಕ್ರವಾರ ಬಿಡುಗಡೆಗೊಳಿಸುವುದಾಗಿ ಕತಾರ್ ವಿದೇಶಾಂಗ ಸಚಿವಾಲಯದ ವಕ್ತಾರ ಮಜೇದ್ ಅಲ್ ಅನ್ಸಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಹೆಲಿಕಾಪ್ಟರ್‌ನಿಂದ ಇಳಿದು ಗುಂಡು ಹಾರಿಸಿ ಫಿಲ್ಮಿ ಸ್ಟೈಲ್‌ ಹೈಜಾಕ್‌ – ಭಾರತಕ್ಕೆ ಬರುತ್ತಿದ್ದ ಹಡಗು ಅಪಹರಣದ ವಿಡಿಯೋ ರಿಲೀಸ್‌

    ಕತಾರ್‌ ಮತ್ತು ಯುಎಸ್‌ ಆಯೋಜಿಸಿದ ಒಪ್ಪಂದ ಕೊನೆಗೂ ಫಲ ಕೊಟ್ಟಿದ್ದು, 50 ಒತ್ತೆಯಾಳುಗಳ ಬಿಡುಗಡೆ ಸಂಬಂಧ ಇಸ್ರೇಲ್-ಹಮಾಸ್ ನಡುವೆ ಒಪ್ಪಂದ ಏರ್ಪಟ್ಟಿದೆ. ಈ ಒಪ್ಪಂದಕ್ಕೆ ಇಸ್ರೇಲ್ ಸಂಪುಟವೂ ಒಪ್ಪಿಗೆ ಸೂಚಿಸಿತ್ತು. ಈ ಒಪ್ಪಂದದ ಭಾಗವಾಗಿ ಇಸ್ರೇಲ್ 4 ದಿನ ಪ್ಯಾಲೆಸ್ತೀನ್‌ ಮೇಲೆ ಯಾವುದೇ ರೀತಿಯ ದಾಳಿ ಮಾಡುವುದಿಲ್ಲ. ಈ ಸಂದರ್ಭದಲ್ಲಿ 240 ಒತ್ತೆಯಾಳುಗಳ ಪೈಕಿ ಮಕ್ಕಳು, ಮಹಿಳೆಯರು ಸೇರಿ ಕನಿಷ್ಠ 50 ಮಂದಿಯನ್ನು ಹಮಾಸ್ ಬಿಡುಗಡೆ ಮಾಡಬೇಕಾಗುತ್ತದೆ. ಇಸ್ರೇಲ್ ಕೂಡ ತಮ್ಮ ಜೈಲುಗಳಲ್ಲಿರೋ ಪ್ಯಾಲೆಸ್ತೀನ್‌ ಮಹಿಳೆಯರು, ಮಕ್ಕಳನ್ನು ಬಿಡುಗಡೆ ಮಾಡಲಿದೆ.

  • ದಿನಕ್ಕೆ 4 ಗಂಟೆ ಕದನ ವಿರಾಮ – ಗಾಜಾ ಮೇಲಿನ ದಾಳಿಯನ್ನು ಕೊಂಚ ಸಡಿಲಿಸಿದ ಇಸ್ರೇಲ್

    ದಿನಕ್ಕೆ 4 ಗಂಟೆ ಕದನ ವಿರಾಮ – ಗಾಜಾ ಮೇಲಿನ ದಾಳಿಯನ್ನು ಕೊಂಚ ಸಡಿಲಿಸಿದ ಇಸ್ರೇಲ್

    ಟೆಲ್ ಅವಿವ್: ಇಸ್ರೇಲ್-ಹಮಾಸ್ (Israel-Hamas) ನಡುವಿನ ಯುದ್ಧ (War) ಪ್ರಾರಂಭವಾಗಿ ತಿಂಗಳು ಕಳೆದಿದೆ. ಅಕ್ಟೋಬರ್ 7 ರಂದು ಪ್ರಾರಂಭವಾದ ದಾಳಿಗೆ ಇಸ್ರೇಲ್ ಇದೀಗ ಕೊಂಚ ವಿರಾಮಕ್ಕೆ ಒಪ್ಪಿದೆ. ದಿನಕ್ಕೆ 4 ಗಂಟೆ ಕದನ ವಿರಾಮವನ್ನು (Ceasefire) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಅವರು ದೃಢಪಡಿಸಿದ್ದಾರೆ.

    ಗಾಜಾದ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್ ಯುದ್ಧದ ವಲಯದಲ್ಲಿ ನೆಲೆಸಿರುವ ನಾಗರಿಕರನ್ನು ಸುರಕ್ಷಿತ ಪ್ರದೇಶಕ್ಕೆ ತೆರಳಲು ಅನುವುಮಾಡಿಕೊಡುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಯುದ್ಧಕ್ಕೆ ಸಂಪೂರ್ಣ ವಿರಾಮವಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ದಿನದಲ್ಲಿ 20 ಗಂಟೆ ಯುದ್ಧ ನಡೆದರೆ 4 ಗಂಟೆ ದಾಳಿ ನಡೆಸುವುದಿಲ್ಲ ಎಂದು ನೆತನ್ಯಾಹು ತಿಳಿಸಿದ್ದಾರೆ.

    ಆದರೆ ಹಮಾಸ್ ಉಗ್ರರ ವಿರುದ್ಧದ ದಾಳಿ ಎಂದಿಗೂ ನಿಲ್ಲುವುದಿಲ್ಲ. ಇಸ್ರೇಲ್‌ನ ದಾಳಿಯಿಂದಾಗಿ ಸಾಮಾನ್ಯ ಜನರಿಗೆ ತೊಂದರೆಯಾಗಬಾರದು ಎಂದು ಪ್ರತಿ ದಿನ 4 ಗಂಟೆ ದಾಳಿ ನಿಲ್ಲಿಸಲಾಗುತ್ತದೆ. ಆದರೆ ಹಮಾಸ್ ಉಗ್ರರ ವಿರುದ್ಧ ದಾಳಿ ಮುಂದುವರಿಯುತ್ತಲೇ ಇರುತ್ತದೆ. ನಾವು ಗಾಜಾ ನಗರವನ್ನು ವಶಪಡಿಸಿಕೊಳ್ಳಲು ಹಾಗೂ ಇಡೀ ನಗರದ ಮೇಲೆ ಪ್ರಾಬಲ್ಯ ಸಾಧಿಸಲು ಬಯಸುತ್ತಿಲ್ಲ. ಆದರೆ ಉಗ್ರರನ್ನು ಮಾತ್ರ ಸುಮ್ಮನೆ ಬಿಡಲಾಗುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಶ್ರೀರಂಗಪಟ್ಟಣದಲ್ಲಿ ನಿರ್ಬಂಧ – ನಿಷೇಧಾಜ್ಞೆ ಜಾರಿ

    ಇಸ್ರೇಲ್‌ನಲ್ಲಿ 1,400 ಜನರನ್ನು ಕೊಂದಿರುವ ಹಮಾಸ್ ಉಗ್ರರು ಇನ್ನು ಕೂಡಾ ಮಕ್ಕಳು, ವೃದ್ಧರು ಸೇರಿದಂತೆ 239 ಜನರನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡಿದ್ದಾರೆ ಎಂದು ಇಸ್ರೇಲ್‌ನ ಅಧಿಕಾರಿಗಳು ಹೇಳಿದ್ದಾರೆ. ಅವರಲ್ಲಿ ಸುಮಾರು 10 ಅಮೆರಿಕನ್ನರು ಸೇರಿದ್ದಾರೆ ಎಂದು ಯುಎಸ್ ಅಧಿಕಾರಿಗಳು ತಿಳಿಸಿದ್ದಾರೆ. ಗಾಜಾದ ಮೇಲಿನ ದಾಳಿಗೆ ಇಲ್ಲಿಯವರೆಗೆ 10,800ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ರಾತ್ರೋರಾತ್ರಿ ದೆಹಲಿಯಲ್ಲಿ ಮಳೆ – ವಿಷಕಾರಿಯಾಗಿದ್ದ ಗಾಳಿ ಗುಣಮಟ್ಟದಲ್ಲಿ ಸುಧಾರಣೆ

  • ತಕ್ಷಣವೇ ಕದನ ವಿರಾಮ ಘೋಷಿಸಿ: ರಷ್ಯಾಗೆ ಉಕ್ರೇನ್‌ ಮನವಿ

    ತಕ್ಷಣವೇ ಕದನ ವಿರಾಮ ಘೋಷಿಸಿ: ರಷ್ಯಾಗೆ ಉಕ್ರೇನ್‌ ಮನವಿ

    ಕೀವ್‌: ಸೋಮವಾರ ನಡೆದ ನಾಲ್ಕನೇ ಸುತ್ತಿನ ಮಾತುಕತೆಯಲ್ಲಿ ಉಕ್ರೇನ್‌ ತಕ್ಷಣದ ಕದನ ವಿರಾಮ ಘೋಷಿಸುವಂತೆ ರಷ್ಯಾವನ್ನು ಒತ್ತಾಯಿಸಿತು.

    ಕೀವ್‌ನ ಸಮಾಲೋಚಕರು ಪುಟಿನ್‌ ಅವರೊಂದಿಗೆ ನೇರ ಮಾತುಕತೆಗೆ ಒತ್ತಾಯಿಸುತ್ತಿದ್ದಾರೆ ಎಂದು ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‌ ಮೇಲಿನ ಯುದ್ಧ ಅಕ್ಷಮ್ಯ ಅಪರಾಧ: ರಷ್ಯಾ ಪೈಲಟ್‌ ಸಂದೇಶದ ವೀಡಿಯೋ ವೈರಲ್‌

    ಎರಡೂ ದೇಶಗಳು ಮಾತುಕತೆಗಳನ್ನು ಸೋಮವಾರ ವಿರಾಮಗೊಳಿಸಿವೆ. ಮಂಗಳವಾರ ಮಾತುಕತೆ ಮುಂದುವರಿಯಲಿದೆ ಎಂದು ಉಕ್ರೇನ್‌ ಸಮಾಲೋಚಕರೊಬ್ಬರು ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

    ಈ ನಡುವೆ, ಉಕ್ರೇನ್‌ ವಿರುದ್ಧದ ಹೋರಾಟಕ್ಕೆ ಮಿಲಿಟರಿ ನೆರವು ನೀಡುವಂತೆ ಚೀನಾಗೆ ರಷ್ಯಾ ಕೇಳಿದೆ ಎಂಬ ಯುಎಸ್‌ ಸುದ್ದಿ ಸಂಸ್ಥೆಗಳ ವರದಿ ಸುಳ್ಳು ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರರು ಸ್ಪಷ್ಟಪಡಿಸಿದ್ದಾರೆ. ರಷ್ಯಾದಿಂದ ಯಾವುದೇ ಕೋರಿಕೆ ಬಂದಿಲ್ಲ. ಈ ವಿಚಾರವಾಗಿ ಹರಿದಾಡುತ್ತಿರುವುದು ತಪ್ಪು ಮಾಹಿತಿ ಎಂದು ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಪುಟಿನ್ ಮೆದುಳಿನ ಗಂಭೀರ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ: ಗುಪ್ತಚರ ವರದಿ

    ಯುದ್ಧ ಹೀಗೆ ಮುಂದುವರಿದರೆ ಉಕ್ರೇನ್‌ನ ಆರ್ಥಿಕತೆಯಲ್ಲಿ ಶೇ. 35 ರಷ್ಟು ಕುಸಿತ ಉಂಟಾಗಲಿದೆ. ಆಹಾರ ಭದ್ರತೆಗೂ ಹೊಡೆತ ಬೀಳಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಎಚ್ಚರಿಸಿದೆ.

  • ಉಕ್ರೇನ್‍ನ 4 ನಗರಗಳಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ

    ಉಕ್ರೇನ್‍ನ 4 ನಗರಗಳಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ

    ಕೀವ್: ರಷ್ಯಾ ಎರಡನೇ ಬಾರಿಗೆ ಉಕ್ರೇನ್‍ನಲ್ಲಿ ತಾತ್ಕಾಲಿಕವಾಗಿ ಕದನ ವಿರಾಮ ಘೋಷಿಸಿದ್ದು, ಕೀವ್, ಖಾರ್ಕಿವ್, ಸುಮಿ, ಮರಿಯುಪೋಲ್‍ನ ಜನರಿಗೆ ನಗರವನ್ನು ಬಿಟ್ಟು ತೆರಳಲು ಸೂಚಿಸಿದೆ.

    ರಷ್ಯಾ ಉಕ್ರೇನ್‍ನ ಮೇಲೆ ನಡೆಸುತ್ತಿರುವ ದಾಳಿ 12ನೇ ದಿನಕ್ಕೆ ಕಾಲಿಟ್ಟಿದ್ದು, ಎರಡನೇ ಬಾರಿಗೆ 4 ನಗರಗಳಲ್ಲಿ ಕದನ ವಿರಾಮ ಘೋಷಣೆ ಮಾಡಿದೆ. ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 12:30ನಂತರ ತಾತ್ಕಾಲಿಕವಾಗಿ ಕದನ ವಿರಾಮ ಘೋಷಣೆ ಮಾಡಿದೆ.

    ಫ್ರಾನ್ಸ್ ಅಧ್ಯಕ್ಷರ ಸೂಚನೆ ಮೇರೆಗೆ ಕದನ ವಿರಾಮ ಘೋಷಿಸಲಾಗಿದೆ. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಕದನ ವಿರಾಮಕ್ಕೆ ವೈಯಕ್ತಿಕವಾಗಿ ಕೋರಿಕೆಯನ್ನು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 4 ನಗರಗಳಲ್ಲಿ ಕದನ ವಿರಾಮವನ್ನು ಘೋಷಿಸಿ, ನಾಗರಿಕರನ್ನು ತೆರಳುವಂತೆ ಸೂಚಿಸಲಾಗಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ತಿಳಿಸಿದೆ. ಕನದ ವಿರಾಮದ ನಂತರದಲ್ಲಿ ಉಕ್ರೇನ್‍ನ ಈ 4 ನಗರಗಳಲ್ಲಿ ರಷ್ಯಾ ಭಾರೀ ದಾಳಿ ನಡೆಸುವ ಸಾಧ್ಯತೆಯಿದೆ. ಇದನ್ನೂ ಓದಿ: ಮಧ್ಯೆ ಕೆಟ್ಟು ನಿಂತ ಬಸ್ – ರೊಮೆನಿಯಾ ತಲುಪದ 37 ಕನ್ನಡಿಗರು

    ಈಗಾಗಲೇ ಉಕ್ರೇನ್‍ನ ಅಣು ವಿದ್ಯುತ್ ಸ್ಥಾವರಗಳ ಮೇಲೆ ರಷ್ಯಾ ದಾಳಿ ಮಾಡಿದ್ದು, ಅಣು ವಿದ್ಯುತ್ ಸ್ಥಾವರಗಳ ಮೇಲೆ ದಾಳಿಯಿಂದ ದೊಡ್ಡ ಪ್ರಮಾದ ಉಂಟಾಗಿದೆ. ಚೆರ್ನೋಬಿಲ್, ಝಫೋರಿಝೀಯಾ ಎರಡು ಸ್ಥಾವರಗಳನ್ನು ರಷ್ಯಾ ಕೈವಶ ಮಾಡಿಕೊಂಡಿದೆ. ಇದನ್ನೂ ಓದಿ: ರಷ್ಯಾ, ಉಕ್ರೇನ್ ಯುದ್ಧ – 14 ವರ್ಷದ ಬಳಿಕ ಕಚ್ಚಾತೈಲ ಬೆಲೆ ಭಾರೀ ಏರಿಕೆ

  • ಖಾರ್ಕಿವ್‌ನಲ್ಲಿ ಸಿಲುಕಿದ್ದ ಎಲ್ಲಾ ಭಾರತೀಯರ ರಕ್ಷಣೆ – ಎಂಇಎ

    ಖಾರ್ಕಿವ್‌ನಲ್ಲಿ ಸಿಲುಕಿದ್ದ ಎಲ್ಲಾ ಭಾರತೀಯರ ರಕ್ಷಣೆ – ಎಂಇಎ

    ನವದೆಹಲಿ: ಉಕ್ರೇನ್‌ನ 2 ನಗರಗಳಲ್ಲಿ ರಷ್ಯಾ 6 ಗಂಟೆಗಳ ಕದನ ವಿರಾಮ ಘೋಷಿಸಿದ ಬಳಿಕ ಭಾರತೀಯರನ್ನು ಸ್ಥಳಾಂತರಿಸುವ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. ಇದೀಗ ಖಾರ್ಕಿವ್ ನಗರದಲ್ಲಿ ಯಾವುದೇ ಭಾರತೀಯರು ಸಿಲುಕಿಕೊಂಡಿಲ್ಲ ಎಂದು ಭಾರತೀಯ ವಿದೇಶಾಂಗ ಸಚಿವಾಲಯ(ಎಂಇಎ) ದೃಢಪಡಿಸಿದೆ.

    ಉಕ್ರೇನ್‌ನ ಪ್ರಮುಖ ನಗರಗಳಾದ ಖಾರ್ಕಿವ್‌ನಿಂದ ಎಲ್ಲಾ ಭಾರತೀಯರನ್ನು ರಕ್ಷಿಸಲಾಗಿದೆ. ಆದರೆ ಸುಮಿಯಲ್ಲಿ ಇನ್ನೂ 600ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗುವಲ್ಲಿ ನಾವು ಹೆಚ್ಚಿನ ಗಮನ ಹರಿಸುತ್ತಿದ್ದೇವೆ ಎಂದು ಎಂಇಎ ತಿಳಿಸಿದೆ. ಇದನ್ನೂ ಓದಿ: ರಾಯಭಾರ ಕಚೇರಿಯವರು ಕರೆದಾಗ ತಾಯಿಯೇ ಮಕ್ಕಳನ್ನು ಕರೆದಂತಹ ಅನುಭವ ಆಯ್ತು: ವಿದ್ಯಾರ್ಥಿನಿ ರುಬಿನಾ

    ಉಕ್ರೇನ್‌ನಲ್ಲಿ ಇನ್ನೂ ಎಷ್ಟು ಭಾರತೀಯರು ಸಿಲುಕಿದ್ದಾರೆ ಎಂಬುದನ್ನು ಸರ್ಕಾರ ನೋಡುತ್ತಿದೆ. ಇಂದು ಪಿಸೊಚಿನ್‌ಗೆ ಬಂದಿರುವ ಎಲ್ಲಾ ಭಾರತೀಯರನ್ನು ತವರಿಗೆ ಕರೆಸಿಕೊಳ್ಳುವ ಕಾರ್ಯವನ್ನು ಪೂರ್ಣಗೊಳಿಸುವಂತೆ ಸರ್ಕಾರ ಆದೇಶಿಸಿದೆ. ಸದ್ಯ ಪಿಸೊಚಿನ್‌ನಲ್ಲಿ 298 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ. ಇಂದು ಈ ವಿದ್ಯಾರ್ಥಿಗಳ ಸ್ಥಳಾಂತರ ಕಾರ್ಯ ಪುರ್ಣಗೊಳ್ಳುವ ಭರವಸೆ ಇದೆ ಎಂದು ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಜೀವದ ಮೇಲೆ ಅಸೆ ಬಿಟ್ಟು, ಒಂದು ವಾರ ನಡೆದುಕೊಂಡು ಬಂದು ಉಕ್ರೇನ್ ದಾಟಿದೆ: ಸೀನ್ಯ

    ಕಳೆದ 24 ಗಂಟೆಗಳಲ್ಲಿ 5 ವಿಮಾನಗಳು ಭಾರತ ತಲುಪಿದ್ದು, ಸುಮಾರು 2,900 ವಿದ್ಯಾರ್ಥಿಗಳನ್ನು ಕರೆಸಿಕೊಳ್ಳಲಾಗಿದೆ. ಇದುವರೆಗೆ ಸುಮಾರು 13,300 ಜನರು ಭಾರತಕ್ಕೆ ಮರಳಿದ್ದಾರೆ. ಮುಂದಿನ 24 ಗಂಟೆಗಳಿಗೆ 13 ವಿಮಾನಗಳನ್ನು ನಿಯೋಜಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

  • ಉಕ್ರೇನ್‌ನ 2 ನಗರಗಳಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ

    ಉಕ್ರೇನ್‌ನ 2 ನಗರಗಳಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ

    ಕೀವ್: ಉಕ್ರೇನ್‍ನ 2 ನಗರಗಳಲ್ಲಿ ರಷ್ಯಾ ಕದನ ವಿರಾಮ ಘೋಷಿಸಿದ್ದು, ಈ ಅವಧಿಯಲ್ಲಿ ಉಕ್ರೇನ್ ಬಿಟ್ಟು ತೆರಳುವಂತೆ ನಾಗರಿಕರಿಗೆ ಸೂಚಿಸಲಾಗಿದೆ.

    ಈಗಾಗಲೇ ರಷ್ಯಾ ದಾಳಿಗೆ ಉಕ್ರೇನ್‌ ನಲುಗಿ ಹೋಗಿದೆ.  ಆದರೆ ರಷ್ಯಾ ಮುಂದಿನ 6 ಗಂಟೆಗಳ ಕಾಲ ಕದನ ವಿರಾಮ ಘೋಷಣೆ ಮಾಡಿದೆ. ಮರಿಯುಪೋಲ್, ವೋಲ್‍ನೋವಾಕ ನಗರಗಳಲ್ಲಿ ಕದನ ವಿರಾಮ ಘೋಷಿಸಲಾಗಿದೆ. ಕದನ ವಿರಾಮದ ನಂತರ ಮತ್ತಷ್ಟು ದಾಳಿ ನಡೆಯಲಿದೆ. ಭಾರತೀಯ ಕಾಲಮಾನಕ್ಕೆ ಅನ್ವಯವಾಗುವಂತೆ ಇಂದು ಸಂಜೆ 7:30ಕ್ಕೆ ಕದನ ವಿರಾಮ ಅಂತ್ಯವಾಗಲಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ತಿಳಿಸಿದೆ.

    ಇಂದು ರಾತ್ರಿ ಕ್ಷಿಪಣಿ ದಾಳಿ ಇನ್ನಷ್ಟು ತೀವ್ರವಾಗುವ ಸಾಧ್ಯತೆಯಿದೆ. ಖಾರ್ಕಿವ್‌, ಕೀವ್‌ ಸುಮಿ ಮೇಲೆ ಬಾಂಬ್‌ ದಾಳಿ ನಡೆಯುವ ಸಾಧ್ಯತೆಯಿದೆ. ಮರಿಯುಪೋಲ್‌ಗೆ ಮುತ್ತಿಗೆ ಹಾಕುತ್ತಿರುವಾಗ, ರಷ್ಯಾದ ಪಡೆಗಳು ಅದರ ವಿದ್ಯುತ್, ಆಹಾರ, ನೀರು ಮತ್ತು ಸಾರಿಗೆಯನ್ನು ಕಡಿತಗೊಳಿಸಿದ್ದವು. ಇದರಿಂದ ನಾಗರಿಕ ಪ್ರದೇಶಗಳ ಮೇಲೆ ರಷ್ಯಾ ಬಾಂಬ್‌ ದಾಳಿ ಮಾಡುತ್ತಿದೆ ಎಂದು ಟೀಕಿಸುತ್ತಿರುವ ಬೆನ್ನಲ್ಲೆ ರಷ್ಯಾ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಅಲ್ಪ ಅವಧಿಯವರೆಗೆ ಕದನ ವಿರಾಮ ಘೋಷಿಸಿದೆ. ಇದನ್ನೂ ಓದಿ: ಭಾರತದ ಗೋಧಿ ಚೆನ್ನಾಗಿದೆ, ನಿಮ್ಮದು ಕಳಪೆಯಾಗಿದೆ: ಪಾಕಿಸ್ತಾನ ವಿರುದ್ಧ ತಾಲಿಬಾನ್ ಕಿಡಿ

    ಉಕ್ರೇನ್ ಹಾಗೂ ರಷ್ಯಾ ಕದನ ವಿರಾಮ ಘೋಷಿಸುವಂತೆ ಭಾರತ ಕೋರಿತ್ತು. ಅಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಎರಡೂ ದೇಶಗಳು ಕದನ ವಿರಾಮವನ್ನು ಅನುಷ್ಠಾನಗೊಳಿಸಬೇಕಿದೆ. ಐರೋಪ್ಯ ಒಕ್ಕೂಟಗಳು ಕದನ ವಿರಾಮ ಘೋಷಿಸಲು ಹಲವು ದಿನಗಳಿಂದಲೇ ರಷ್ಯಾ ಹಾಗೂ ಉಕ್ರೇನ್‍ಗೆ ಮನವಿ ಮಾಡಿದ್ದವು. ಭಾರತ ಶುಕ್ರವಾರ ಕದನ ವಿರಾಮ ಘೋಷಿಸುವಂತೆ ಮನವಿ ಮಾಡಿತ್ತು.  ಇದನ್ನೂ ಓದಿ: ಕದನ ವಿರಾಮ ಘೋಷಿಸಿ: ರಷ್ಯಾ, ಉಕ್ರೇನ್‌ಗೆ ಭಾರತ ಮನವಿ

  • ಕದನ ವಿರಾಮ ಘೋಷಿಸಿ: ರಷ್ಯಾ, ಉಕ್ರೇನ್‌ಗೆ ಭಾರತ ಮನವಿ

    ನವದೆಹಲಿ: ಉಕ್ರೇನ್ ವಿರುದ್ಧ ರಷ್ಯಾ ಭೀಕರ ಯುದ್ಧ ನಡೆಸುತ್ತಿದ್ದು, ಅಲ್ಲಿ ಸಾವಿರಾರು ಭಾರತೀಯ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ. ಭಾರತ ಅವರೆಲ್ಲರನ್ನೂ ಸ್ಥಳಾಂತರಿಸುವ ಕಾರ್ಯ ಮಾಡುತ್ತಿದ್ದರೂ ಹಲವರು ಇನ್ನೂ ಯುದ್ಧದ ಪರಿಸ್ಥಿತಿಯಿಂದ ತಪ್ಪಿಸಿಕೊಂಡು ಸುರಕ್ಷಿತ ಸ್ಥಳಕ್ಕೆ ಮರಳಲು ಸಾಧ್ಯವಾಗುತ್ತಿಲ್ಲ. ಸ್ಥಳೀಯ ಮಟ್ಟದಲ್ಲಿ ಕದನ ವಿರಾಮ ಘೋಷಿಸುವಂತೆ ರಷ್ಯಾ ಹಾಗೂ ಉಕ್ರೇನ್‌ಗೆ ಭಾರತ ಮನವಿ ಮಾಡಿದೆ.

    ಉಕ್ರೇನ್‌ನಲ್ಲಿ ಫಿರಂಗಿ ದಾಳಿ ನಡೆಯುತ್ತಿದೆ. ಅಲ್ಲಿನ ಪರಿಸ್ಥಿತಿ ಅಪಾಯಕಾರಿಯಾಗಿದ್ದು, ಇಂತಹ ಸನ್ನಿವೇಶದಲ್ಲಿ ನಮ್ಮ ವಿದ್ಯಾರ್ಥಿಗಳು ಪ್ರಯಾಣಿಸುವುದು ನಮಗೆ ಇಷ್ಟವಿಲ್ಲ. ಅವರ ಪ್ರಯಾಣಕ್ಕೆ ಸುರಕ್ಷಿತ ಮಾರ್ಗ ಬೇಕು. ಆಗ ಮಾತ್ರ ನಾವು ವಿದ್ಯಾರ್ಥಿಗಳನ್ನು ಸ್ಥಳಾಂತರಿಸಬಹುದು ಎಂದು ಭಾರತ ತಿಳಿಸಿದೆ. ಇದನ್ನೂ ಓದಿ: ಭಾರತದ ವಿದ್ಯಾರ್ಥಿಯ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ: ಎಂಇಎ

     

    ವಿದ್ಯಾರ್ಥಿಗಳ ಸ್ಥಳಾಂತರಕ್ಕಾಗಿ ಎರಡೂ ಕಡೆಯವರು ಸ್ಥಳೀಯ ಕದನ ವಿರಾಮ ಘೋಷಿಸಿ ಎಂದು ಭಾರತ ರಷ್ಯಾ ಹಾಗೂ ಉಕ್ರೇನ್‌ಗೆ ಮನವಿ ಮಾಡಿದೆ.

    ಖಾರ್ಕಿವ್‌ನಲ್ಲಿ 300 ಭಾರತೀಯರು ಹಾಗೂ ಸುಮಿಯಲ್ಲಿ 700 ಭಾರತೀಯರು ಸಿಲುಕಿರುವುದಾಗಿ ವರದಿಗಳು ತಿಳಿಸಿವೆ. ಇದೀಗ ಉಕ್ರೇನ್‌ನಲ್ಲಿ ಒಟ್ಟು 2,000 ದಿಂದ 3,000 ಭಾರತೀಯರು ಸಿಲುಕಿರುವುದಾಗಿ ಅಂದಾಜಿಸಲಾಗಿದೆ. ಇದನ್ನೂ ಓದಿ: ‘ಆಪರೇಷನ್ ಗಂಗಾ’ ನೆನಪಿಗಾಗಿ ಮಗಳಿಗೆ ಗಂಗಾ ಅಂತ ಹೆಸರಿಡ್ತೀನಿ: ಉಕ್ರೇನ್‍ನಿಂದ ವಾಪಸಾದ ಭಾರತೀಯ

    ಉಕ್ರೇನ್ ಹಾಗೂ ರಷ್ಯಾ ಕದನ ವಿರಾಮ ಘೋಷಿಸುವಂತೆ ಭಾರತ ಕೋರಿದ್ದು, ಅಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಎರಡೂ ದೇಶಗಳು ಕದನ ವಿರಾಮವನ್ನು ಅನುಷ್ಠಾನಗೊಳಿಸಬೇಕಿದೆ. ಐರೋಪ್ಯ ಒಕ್ಕೂಟಗಳು ಕದನ ವಿರಾಮ ಘೋಷಿಸಲು ಹಲವು ದಿನಗಳಿಂದಲೇ ರಷ್ಯಾ ಹಾಗೂ ಉಕ್ರೇನ್‌ಗೆ ಮನವಿ ಮಾಡುತ್ತಿವೆ. ಭಾರತ ಶುಕ್ರವಾರ ಕದನ ವಿರಾಮ ಘೋಷಿಸುವಂತೆ ಮನವಿ ಮಾಡಿದೆ.

  • ಪಾಕ್‍ನಿಂದ ಅಪ್ರಚೋದಿತ ಗುಂಡಿನ ದಾಳಿ- ಭಾರತದ ಪ್ರತಿ ದಾಳಿಗೆ ಐವರು ಪಾಕ್ ಸೈನಿಕರ ಸಾವು

    ಪಾಕ್‍ನಿಂದ ಅಪ್ರಚೋದಿತ ಗುಂಡಿನ ದಾಳಿ- ಭಾರತದ ಪ್ರತಿ ದಾಳಿಗೆ ಐವರು ಪಾಕ್ ಸೈನಿಕರ ಸಾವು

    – ಗುಂಡು, ಶೆಲ್‍ದಾಳಿ ನಡೆಸಿದ ಪಾಕ್

    ಶ್ರೀನಗರ: ಪಾಕಿಸ್ತಾನ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಪ್ರತಿಯಾಗಿ ಭಾರತೀಯ ಸೈನಿಕರು ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಪಾಕಿಸ್ತಾನದ ಐವರು ಯೋಧರು ಸಾವನ್ನಪ್ಪಿದ್ದಾರೆ. ಅಲ್ಲದೆ ಮೂವರು ಗಾಯಗೊಂಡಿದ್ದಾರೆ.

    ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್‍ಎಸಿ)ಯುದ್ದಕ್ಕೂ ಪಾಕ್ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭಾರತೀಯ ಸೈನಿಕರು ಸಹ ಗುಂಡು ಹಾರಿಸಿದ್ದಾರೆ. ಈ ವೇಳೆ ಐವರು ಪಾಕ್ ಸೈನಿಕರು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

    ಪೂಂಚ್ ಜಿಲ್ಲೆಯ ಎಲ್‍ಒಸಿಯ ಮಂಕೋಟೆ ಸೆಕ್ಟರ್ ನಲ್ಲಿ ಸಾರ್ವಜನಿಕ ಆಸ್ತಿಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್ ದಾಳಿ ನಡೆಸಿದೆ. ಪಾಕ್ ಸೇನೆಯ ದಾಳಿಗೆ ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಗಳು ಹಾನಿಗೀಡಾಗಿವೆ. ಹೀಗಾಗಿ ಭಾರತೀಯ ಸೇನೆ ಪ್ರತಿ ದಾಳಿ ನಡೆಸಿದೆ. ಈ ವೇಳೆ ಪಾಕ್‍ನ ಐವರು ಸೈನಿಕರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಮಾತ್ರವಲ್ಲದೆ ಪಾಕ್‍ನ ಹಲವು ಬಂಕರ್ ಗಳು ಸಹ ನಾಶವಾಗಿವೆ ಎಂದು ಮೂಲಗಳು ತಿಳಿಸಿವೆ.

    ಸುಮಾರು 2 ಗಂಟೆಗಳ ಎರಡೂ ಕಡೆಯವರಿಂದ ಗುಂಡಿನ ಚಕಮಕಿ ನಡೆದಿದೆ. 1999ರಲ್ಲಿ ಉಭಯ ದೇಶಗಳು ಸಹಿ ಹಾಕಿದ್ದ ದ್ವಿಪಕ್ಷೀಯ ಕದನ ವಿರಾಮ ಒಪ್ಪಂದವನ್ನು ಪಾಕಿಸ್ತಾನ ನಿರ್ಭಯದಿಂದ ಈ ವರ್ಷದ ಆರಂಭದಿಂದ ಹಲವು ಬಾರಿ ಉಲ್ಲಂಘಿಸಿದೆ.

    ಜನವರಿ 2020ರಿಂದ ಈ ವರೆಗೆ ಜಮ್ಮು ಕಾಶ್ಮೀರದ ಎಲ್‍ಒಸಿಯಲ್ಲಿ 3,200 ಬಾರಿ ಕದನ ವಿರಾಮ ಉಲ್ಲಂಘಿಸಿದ್ದು, ಇದರಿಂದ 100 ಜನರಿಗೆ ಗಾಯಗಳಾಗಿವೆ. 30 ಜನ ನಾಗರಿಕರು ಸಾವನ್ನಪ್ಪಿದ್ದಾರೆ. ಅಲ್ಲದೆ ಶೆಲ್ಲಿಂಗ್ ದಾಳಿಯಿಂದಾಗಿ ಎಲ್‍ಒಸಿ ಬಳಿಯ ಜನ ಜೀವವನ್ನು ಕೈಯಲ್ಲಿ ಹಿಡಿದು ಬದುಕುವಂತಾಗಿದೆ.