Tag: ಕನ್ನಂಬಾಡಿ ಅಣೆಕಟ್ಟು

  • ಕೆಆರ್‌ಎಸ್ ಡ್ಯಾಂಗೆ ಟಿಪ್ಪು ಅಡಿಗಲ್ಲು ಹಾಕಿಲ್ಲ ಅಂತಾರೆ ತಜ್ಞರು; ನಾಮಫಲಕದಲ್ಲಿ ಏನಿದೆ?

    ಕೆಆರ್‌ಎಸ್ ಡ್ಯಾಂಗೆ ಟಿಪ್ಪು ಅಡಿಗಲ್ಲು ಹಾಕಿಲ್ಲ ಅಂತಾರೆ ತಜ್ಞರು; ನಾಮಫಲಕದಲ್ಲಿ ಏನಿದೆ?

    ಮಂಡ್ಯ: ಕನ್ನಂಬಾಡಿ ಕಟ್ಟೆಗೆ (Kannambadi Katte) ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ (Tippu Sultan) ಎಂಬ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆ ಇದೀಗ ವ್ಯಾಪಕ ಚರ್ಚೆಯಾಗುತ್ತಿದೆ. ಒಂದು ಕಡೆ ಇತಿಹಾಸ ತಜ್ಞರು, ಟಿಪ್ಪು ಕನ್ನಂಬಾಡಿ ಕಟ್ಟೆಗೆ ಅಡಿಗಲ್ಲು ಹಾಕಿಲ್ಲ. ಆತ ಬೇರೆ ಕಡೆ ಅಣೆಕಟ್ಟನ್ನು ಕಟ್ಟಬೇಕೆಂದು ಚಿಂತನೆ ಮಾಡಿ ಅಡಿಗಲ್ಲು ಹಾಕಿರೋದು ಎಂದು ಹೇಳುತ್ತಿದ್ದಾರೆ.

    ಇನ್ನೊಂದು ಕಡೆ ಸಚಿವ ಮಹದೇವಪ್ಪ (H C Mahadevappa) ಕೆಆರ್‌ಎಸ್ ಮುಖ್ಯ ದ್ವಾರದಲ್ಲಿ ಇರುವ ನಾಮಫಲಕವನ್ನು ಹಾಕಿ ಎಂದು ನಾನು ಹೇಳಿದ್ದಕ್ಕೆ ಸಾಕ್ಷಿ ಎಲ್ಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾಳೆಯಿಂದ ರಸ್ತೆಗಿಳಿಯಲ್ಲ ಬಸ್? – ಇಂದು ಸಿಎಂ ಸಭೆ, ಖಾಸಗಿ ಬಸ್‌ಗಳನ್ನ ರಸ್ತೆಗಿಳಿಸಲು ಜಿಲ್ಲಾಡಳಿತ ಕ್ರಮ

    ಕೆಆರ್‌ಎಸ್ ಡ್ಯಾಂನ (KRS Dam) ಸೌತ್ ಗೇಟ್‌ನಲ್ಲಿ ನಾಮಫಲಕಗಳು ಇವೆ. ಇದರಲ್ಲಿ ಡ್ಯಾಂ ನಿರ್ಮಾಣದ ಪ್ರಾರಂಭ, ಕಾಮಗಾರಿ ಮುಕ್ತಾಯವಾಗಿದ್ದು, ಆ ಸಂದರ್ಭದಲ್ಲಿ ಯಾವ ರಾಜರಿದ್ದರು? ದಿವಾನರು, ಎಂಜಿನಿಯರ್‌ಗಳು ಯಾರು? ಹಾಗೂ ಡ್ಯಾಂನ ನೀಲಿ ನಕ್ಷೆಯ ಮಾಹಿತಿಗಳನ್ನು ಒಳಗೊಂಡಿವೆ. ಇದಲ್ಲದೇ ಕನ್ನಡ, ಪರ್ಷಿಯನ್, ಇಂಗ್ಲಿಷ್ ಭಾಷೆಯಲ್ಲಿ ಈ ನಾಮಫಲಕಗಳಿವೆ. ಇದನ್ನೂ ಓದಿ: ಕೈದಿ ನಂ. 15528 – ಪ್ರಜ್ವಲ್‍ಗೆ 524 ರೂ. ದಿನಗೂಲಿ, ಕೆಲಸವೇನು ಗೊತ್ತಾ?

    ಇದರಲ್ಲಿ 1794ರಲ್ಲಿ ಟಿಪ್ಪು ಸುಲ್ತಾನ್ ಕಾಲದಲ್ಲಿ ಕಾವೇರಿ ನದಿಗೆ ಅಣೆಕಟ್ಟನ್ನು ನಿರ್ಮಾಣ ಮಾಡಲು ಶಂಕುಸ್ಥಾಪನೆ ಮಾಡಿರುವುದಾಗಿ ಉಲ್ಲೇಖವಾಗಿದೆ. ಆದರೆ ಈ ಬರಹಗಳಲ್ಲಿ ಎಲ್ಲೂ ಸಹ ಕನ್ನಂಬಾಡಿ ಕಟ್ಟೆಯ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದೇವೆ ಎಂದು ಉಲ್ಲೇಖವಾಗಿಲ್ಲ. ಕನ್ನಂಬಾಡಿ ಕಟ್ಟೆಯ ಕಾರ್ಯ ಆರಂಭವಾಗಿದ್ದು 1911ರಲ್ಲಿ, ಅಲ್ಲಿಗೆ ಟಿಪ್ಪು ಅಂದುಕೊಂಡಿದ್ದಕ್ಕೂ ಡ್ಯಾಂ ನಿರ್ಮಾಣ ಕಾರ್ಯ ಆರಂಭವಾಗಿದ್ದಕ್ಕೂ 119 ವರ್ಷಗಳ ಅಂತರವಿದೆ. ಇದನ್ನೂ ಓದಿ: ಗ್ರೌಂಡ್‌ ಪೆನೆಟ್ರೇಟಿಂಗ್ ರೇಡಾರ್‌ನಿಂದ ಅಸ್ಥಿಪಂಜರ ಪತ್ತೆ ಕಾರ್ಯ ನಡೆಸಿ – ಎಸ್‌ಐಟಿಗೆ ದೂರುದಾರ ಹೊಸ ರಿಕ್ವೆಸ್ಟ್‌

    ಹೀಗಾಗಿ ಕನ್ನಂಬಾಡಿ ಕಟ್ಟೆ ನಿರ್ಮಾಣಕ್ಕೆ ಟಿಪ್ಪು ಅಡಿಗಲ್ಲು ಹಾಕಿಲ್ಲ. ಟಿಪ್ಪು ಈ ಭಾಗದಲ್ಲಿ ಒಂದು ಅಣೆಕಟ್ಟನ್ನು ಕಟ್ಟಬೇಕೆಂದು ಶಂಕುಸ್ಥಾಪನೆ ಮಾಡಿದ್ದಾರೆ. ಆದರೆ ಈ ಜಾಗದಲ್ಲಿ ಕನ್ನಂಬಾಡಿ ಕಟ್ಟೆಗೆ ಶಂಕುಸ್ಥಾಪನೆ ಮಾಡಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್. ಟಿಪ್ಪು ಸಹ ಈ ಭಾಗದಲ್ಲಿ ಅಣೆಕಟ್ಟನ್ನು ನಿರ್ಮಾಣ ಮಾಡುಲು ಮುಂದಾಗಿದ್ದರು ಎಂಬ ಕಾರಣಕ್ಕೆ ಟಿಪ್ಪು ಸುಲ್ತಾನ್ ಕುರಿತ ಶಿಲಾನ್ಯಾಸವನ್ನು ಇಲ್ಲಿ ಹಾಕಲಾಗಿದೆ ಎಂದು ಇತಿಹಾಸ ತಜ್ಞರು ಹೇಳುತ್ತಿದ್ದಾರೆ.

  • ತನ್ನನ್ನು ಕಾಪಾಡುವಂತೆ ಕನ್ನಂಬಾಡಿ ಕೂಗಿ ಹೇಳುತ್ತಿದೆ: ಸುಮಲತಾ

    ತನ್ನನ್ನು ಕಾಪಾಡುವಂತೆ ಕನ್ನಂಬಾಡಿ ಕೂಗಿ ಹೇಳುತ್ತಿದೆ: ಸುಮಲತಾ

    – ಗೋಡೆ ಕುಸಿದಿದ್ದು ಎಲ್ಲಿ? ಅಧಿಕಾರಿಗಳು ಹೇಳಿದ್ದೇನು?

    ನವದೆಹಲಿ: ಕನ್ನಂಬಾಡಿ ಅಣೆಕಟ್ಟು ಗೋಡೆ ಕುಸಿದಿರುವುದು ರೆಡ್ ಅಲರ್ಟ್ ಸಂದೇಶ, ತನ್ನನ್ನು ಕಾಪಾಡುವಂತೆ ಡ್ಯಾಂ ಕೂಗಿ ಹೇಳುತ್ತಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

    ಕೆಆರ್‌ಎಸ್ ಡ್ಯಾಂ ಗೋಡೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ರೀತಿಯ ಡ್ಯಾಂ ಮುಂದೆ ನಿರ್ಮಿಸಲು ಸಾಧ್ಯವಿಲ್ಲ, ಅದನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

    ಗೋಡೆ ಕುಸಿದಿದೆ ಎಂದು ನಿರ್ಲಕ್ಷ್ಯ ಮಾಡಿ ಸುಮ್ಮನೆ ಕೋರಲು ಸಾಧ್ಯವಿಲ್ಲ, ಕಿಡ್ನಿಗೆ ಇನ್ಫೆಕ್ಷನ್ ಆಗಿದೆ ಲಿವರ್‌ಗೆ ಏನು ಆಗಲ್ಲ ಅಥವ ಕೊರೊನಾ ಚೀನಾದಲ್ಲಿದೆ ಭಾರತದಲ್ಲಿ ಏನು ಆಗಲ್ಲ ಅಂತಾ ಸುಮ್ನೆ ಕೂತರೆ ಆಗುತ್ತಾ? ಹಾಗೇ ಗೋಡೆ ಕುಸಿತ ಅನ್ನೊದು ಎಚ್ಚರಿಕೆ ಸಂದೇಶವಾಗಿದ್ದು ಈಗಲೇ ಮುನ್ನೆಚ್ಚರಿಕೆ ವಹಿಸಬೇಕು. ಸರ್ಕಾರಕ್ಕೆ ಅಧಿಕಾರಿಗಳು ತಪ್ಪು ಮಾಹಿತಿ ನೀಡುತ್ತಿದ್ದಾರೆ. ನಂಗೂ ತಪ್ಪು ಮಾಹಿತಿ ನೀಡುವ ಪ್ರಯತ್ನ ಮಾಡಿದ್ದಾರೆ. ಒಬ್ಬೊಬ್ಬ ಅಧಿಕಾರಿ ಒಂದೊಂದು ಮಾಹಿತಿ ನೀಡುತ್ತಿದ್ದಾರೆ. ಗೋಡೆ ಕುಸಿತದ ವಿಚಾರದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದು ಸರ್ಕಾರ ಈ ಬಗ್ಗೆ ಗಮನಹರಿಸಬೇಕಿದೆ ಎಂದರು.

    ಕೆಆರ್‌ಎಸ್ ವಿಚಾರದಲ್ಲಿ ನಾವು ರಿಸ್ಕ್ ತೆಗೆದುಕೊಳ್ಳಲು ಸಾಧ್ಯವಿಲ್ಲ, ಈ ವಿಚಾರದಲ್ಲಿ ರಾಜಕೀಯ ಮಾಡಿದವರು ಗೋಡೆ ಕುಸಿತದ ಬಗ್ಗೆ ಏನ್ ಹೇಳ್ತಾರೆ ಅಂತಾ ಪರೋಕ್ಷವಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕುಟುಕಿದರು. ಕೆಆರ್‌ಎಸ್ ಸದ್ಯಕ್ಕೆ ಸೇಫಾಗಿದ್ದು ಅದು ಮುಂದೆಯೂ ಸುರಕ್ಷಿತವಾಗಿರಬೇಕು ಎನ್ನುವುದು ನಮ್ಮ ಬಯಕೆ ಎಂದು ಸುಮಲತಾ ಹೇಳಿದರು. ಇದನ್ನೂ ಓದಿ:  KRS ಡ್ಯಾಂ ಮೆಟ್ಟಿಲಿನ ಗೋಡೆಯಿಂದ 30ಕ್ಕೂ ಹೆಚ್ಚು ಕಲ್ಲು ಕುಸಿತ

    ಗೋಡೆ ಕುಸಿದಿದ್ದು ಎಲ್ಲಿ? ಅಧಿಕಾರಿಗಳು ಹೇಳಿದ್ದೇನು?

    ಕೆಆರ್‌ಎಸ್ ಡ್ಯಾಂನ 80 ಪ್ಲಸ್ ಅಡಿ ಗೇಟುಗಳ ಬಳಿಯಲ್ಲಿರುವ ಮೆಟ್ಟಿಲಿನ ಗೋಡೆಯಿಂದ 30ಕ್ಕೂ ಹೆಚ್ಚು ಕಲ್ಲು ಕುಸಿತಗೊಂಡಿದ್ದು, ಡ್ಯಾಂನಿಂದ ಬೃಂದಾವನ ಹಾಗೂ ಕಾವೇರಿ ಮಾತೆ ಪ್ರತಿಮೆಗೆ ಹೋಗಲು ಈ ಮೆಟ್ಟಿಲುಗಳನ್ನು ನಿರ್ಮಿಸಲಾಗಿತ್ತು. ಡ್ಯಾಂ ಭದ್ರತೆ ದೃಷ್ಟಿಯಿಂದ ಹಲವು ವರ್ಷದ ಹಿಂದೆಯೇ ಮೆಟ್ಟಿಲ ಮೇಲೆ ಸಾರ್ವಜನಿಕರ ಸಂಚಾರ ನಿರ್ಬಂಧಿಸಲಾಗಿತ್ತು. ಸತತ ಮಳೆಯಿಂದಾಗಿ ಕಲ್ಲುಗಳು ಕುಸಿದಿವೆ ಎನ್ನಲಾಗಿದೆ. ಇದನ್ನೂ ಓದಿ: ಕೆಆರ್‌ಎಸ್ ಬಿರುಕು ಬಿಟ್ಟಿರುವುದು ಸತ್ಯ: ಸುಮಲತಾ

    ಯಾರೂ ಆತಂಕಪಡುವ ಅಗತ್ಯವಿಲ್ಲ. ಇದು ಬೃಂದಾವನ ಹಾಗೂ ಕಾವೇರಿ ಮಾತೆ ಪ್ರತಿಮೆಗೆ ಹೋಗುವ ಮಾರ್ಗದ ಮೆಟ್ಟಿಲುಗಳ ಬಳಿ ಕಲ್ಲು ಕುಸಿದಿವೆ. ಇದಕ್ಕೂ ಅಣೆಕಟ್ಟೆಗೂ ಯಾವುದೇ ಸಂಬಂಧವಿಲ್ಲ. ಸ್ಥಳದಲ್ಲಿ ಕಾಮಗಾರಿ ನಡೆಯುತ್ತಿರೋದರಿಂದ ಕಲ್ಲುಗಳು ಕುಸಿದಿವೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.