Tag: ಕಪ್ಪತ್ತಗುಡ್ಡ ಕಣಿವೆ

  • ಕಪ್ಪತ್ತಗುಡ್ಡ ಚಿನ್ನದ ಗುಹೆಗಳನ್ನು ಮುಚ್ಚಲು ಮುಂದಾದ ಜಿಲ್ಲಾಡಳಿತ – ಅಧಿಕಾರಿಗಳಿಗೆ ಗ್ರಾಮಸ್ಥರ ಮುತ್ತಿಗೆ

    ಕಪ್ಪತ್ತಗುಡ್ಡ ಚಿನ್ನದ ಗುಹೆಗಳನ್ನು ಮುಚ್ಚಲು ಮುಂದಾದ ಜಿಲ್ಲಾಡಳಿತ – ಅಧಿಕಾರಿಗಳಿಗೆ ಗ್ರಾಮಸ್ಥರ ಮುತ್ತಿಗೆ

    ಗದಗ: ಗದಗ ಜಿಲ್ಲಾಡಳಿತ ಏಕಾಏಕಿ ಕಪ್ಪತ್ತಗುಡ್ಡದ ಗುಹೆಗಳನ್ನು ಮುಚ್ಚಲು ಮುಂದಾಗಿದ್ದು, ಈ ವೇಳೆ ಜಿಲ್ಲಾಡಳಿತದ ಕ್ರಮದ ವಿರುದ್ಧ ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

    ಜಿಲ್ಲೆಯ ಹೊಸೂರ ಭಾಗದ ಕಪ್ಪತ್ತಗುಡ್ಡ ಕಣಿವೆಯಲ್ಲಿ ಅಕ್ರಮವಾಗಿ ಅದಿರು ತೆಗೆಯುವ ಕೆಲಸವನ್ನು ಇಲ್ಲಿನ ಜನರು ಜೀವದ ಹಂಗು ತೊರೆದು ಮಾಡುತ್ತಿದ್ದರು. ಈ ಕುರಿತು ಪಬ್ಲಿಕ್ ಟಿವಿ ವಿಶೇಷ ವರದಿ ಪ್ರಸಾರ ಮಾಡಿದ್ದು, ವರದಿಯಿಂದ ಎಚ್ಚೆತ್ತ ಜಿಲ್ಲಾಡಳಿತ ಅಧಿಕಾರಿಗಳು ಏಕಾಏಕಿ ಜೆಸಿಬಿ ಮೂಲಕ ಗುಹೆ ಮುಚ್ಚಲು ಮುಂದಾಗಿದ್ದರು. ಆದರೆ ಈ ವೇಳೆ ಗುಹೆಯಲ್ಲಿ ಮೂವರು ಬಂಗಾರದ ಅದಿರು ತರಲು ಹೋಗಿರವ ಶಂಕೆ ವ್ಯಕ್ತವಾಗಿದ್ದು, ಗುಹೆ ಮುಚ್ಚದಂತೇ ಅಧಿಕಾರಿಗಳಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ್ದಾರೆ. 

    ಗುಹೆಗಳ ಹಿಂದಿನ ರಹಸ್ಯ ಏನು?:
    ನೂರಾರು ವರ್ಷಗಳ ಹಿಂದೆ ಬ್ರಿಟಿಷರು ಸಾಂಗ್ಲಿ ಮೈನಿಂಗ್ ಹೆಸರಿನಲ್ಲಿ ಅದಿರು ಮೂಲಕ ಚಿನ್ನ ತೆಗೆಯುತ್ತಿದ್ದರು. ನಂತರದಲ್ಲಿ ಕಾರಣಾಂತರಗಳಿಂದ ಸಾಂಗ್ಲಿ ಮೈನಿಂಗ್ ಸ್ಥಗಿತಗೊಂಡಿತ್ತು. ಬಳಿಕ 1980ರ ದಶಕದಲ್ಲಿ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ ಎಂಬ ಕಂಪನಿ ಕೇಂದ್ರ ಸರ್ಕಾರದ ಅಧೀನದಲ್ಲಿ ನಿಕ್ಷೇಪಗಳನ್ನ ತೆಗೆಯುತ್ತಿದ್ರು. ಈ ವೇಳೆ ತೋಡಿರುವ ಸುರಂಗ ಗುಹೆಗಳು ಹಾಗೆ ಉಳಿದುಕೊಂಡಿವೆ. ಹೀಗಾಗಿ ಈ ಗುಹೆಗಳ ಮೂಲಕ ಈಗಲೂ ಅದಿರು ತರುವ ಜನರು ಇದನ್ನ ಬಂಗಾರದ ಗುಂಡಿ ಅಂತಾನೇ ಕರೆಯುತ್ತಾರೆ.

    500 ಮೀಟರ್ ಆಳಕ್ಕೆ ಹೋದಂತೆ ಕಡಿದಾಗೋ ಈ ಗುಹೆ ಕವಲೊಡೆದು ನಾಲ್ಕೈದು ಕಿಲೋಮೀಟರ್ ವರೆಗೆ ಕ್ರಮಿಸಿವೆ. ಇಲ್ಲಿ ಅನೇಕ ಬಾರಿ ಗುಹೆಗಳು ಕುಸಿದು ಸಾವುನೋವುಗಳು ಸಂಭವಿಸಿದೆ. ಇಲ್ಲಿನ ಒಂದು ಟನ್ ಮಣ್ಣಿನಿಂದ 2 ರಿಂದ 4 ಗ್ರಾಂ ಚಿನ್ನ ತೆಗೆಯಬಹುದಾಗಿದೆ. ಚಿನ್ನ ಸಂಸ್ಕರಣೆಗೆ ಸೈನೇಡ್ ಬಳಕೆಯಿಂದ ಗ್ರಾಮಸ್ಥರ ಆರೋಗ್ಯದ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆಗಳಿವೆ.

     

  • ಕಪ್ಪತ್ತಗುಡ್ಡದಲ್ಲಿ ಜೀವದ ಹಂಗು ತೊರೆದು ಚಿನ್ನದ ಬೇಟೆ- ಸಾವು, ನೋವು ಸಂಭವಿಸಿದ್ರೂ ಬಂದಿಲ್ಲ ಬುದ್ಧಿ

    ಕಪ್ಪತ್ತಗುಡ್ಡದಲ್ಲಿ ಜೀವದ ಹಂಗು ತೊರೆದು ಚಿನ್ನದ ಬೇಟೆ- ಸಾವು, ನೋವು ಸಂಭವಿಸಿದ್ರೂ ಬಂದಿಲ್ಲ ಬುದ್ಧಿ

    ಗದಗ: ಜಿಲ್ಲೆಯ ಹೊಸೂರ ಭಾಗದ ಕಪ್ಪತ್ತಗುಡ್ಡ ಕಣಿವೆಯಲ್ಲಿ ಅಕ್ರಮವಾಗಿ ಅದಿರು ತೆಗೆಯುವ ಕೆಲಸ ನಡೀತಿದೆ. ಈ ಗುಡ್ಡದಲ್ಲಿ ಚಿನ್ನ ಸಿಗುವ ಹತ್ತಾರು ಗುಹೆಗಳಿದ್ದು, ಜನರು ಜೀವದ ಹಂಗು ತೊರೆದು ಅದಿರು ತಂದು ಚಿನ್ನ ತೆಗೆಯುತ್ತಿದ್ದಾರೆ.

    ನೂರಾರು ವರ್ಷಗಳ ಹಿಂದೆ ಬ್ರಿಟಿಷರು ಸಾಂಗ್ಲಿ ಮೈನಿಂಗ್ ಹೆಸರಿನಲ್ಲಿ ಅದಿರು ಮೂಲಕ ಚಿನ್ನ ತೆಗೆಯುತ್ತಿದ್ದರು. ನಂತರದಲ್ಲಿ ಕಾರಣಾಂತರಗಳಿಂದ ಸಾಂಗ್ಲಿ ಮೈನಿಂಗ್ ಸ್ಥಗಿತಗೊಂಡಿತ್ತು. ಬಳಿಕ 1980ರ ದಶಕದಲ್ಲಿ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ ಎಂಬ ಕಂಪನಿ ಕೇಂದ್ರ ಸರ್ಕಾರದ ಅಧೀನದಲ್ಲಿ ನಿಕ್ಷೇಪಗಳನ್ನ ತೆಗೆಯುತ್ತಿದ್ರು. ಈ ವೇಳೆ ತೋಡಿರುವ ಸುರಂಗ ಗುಹೆಗಳು ಹಾಗೆ ಇವೆ. ಹೀಗಾಗಿ ಈ ಗುಹೆಗಳ ಮೂಲಕ ಈಗಲೂ ಅದಿರು ತರುವ ಜನರು ಇದನ್ನ ಬಂಗಾರದ ಗುಂಡಿ ಅಂತಾನೇ ಕರೆಯುತ್ತಾರೆ.

    500 ಮೀಟರ್ ಆಳಕ್ಕೆ ಹೋದಂತೆ ಕಡಿದಾಗೋ ಈ ಗುಹೆ ಕವಲೊಡೆದು ನಾಲ್ಕೈದು ಕಿಲೋಮೀಟರ್‍ವರೆಗೆ ಕ್ರಮಿಸಿದೆ. ಇಲ್ಲಿ ಅನೇಕ ಬಾರಿ ಗುಹೆಗಳು ಕುಸಿದು ಸಾವುನೋವುಗಳು ಸಂಭವಿಸಿದೆ. ಇಲ್ಲಿನ ಒಂದು ಟನ್ ಮಣ್ಣಿನಿಂದ 2 ರಿಂದ 4 ಗ್ರಾಂ ಚಿನ್ನ ತೆಗೆಯಬಹುದಾಗಿದೆ.

    ಚಿನ್ನ ಸಂಸ್ಕರಣೆಗೆ ಸೈನೇಡ್ ಬಳಕೆಯಿಂದ ಗ್ರಾಮದ ಜನರಿಗೆ ಅನೇಕ ಪರಿಣಾಮ ಉಂಟಾಗುವ ಸಾಧ್ಯತೆಗಳಿವೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರೋದು ಅನುಮಾನಕ್ಕೆ ಕಾರಣವಾಗಿದೆ.