Tag: ಕಬಡ್ಡಿ

  • ಪುಟ್ಟಣ್ಣಯ್ಯರ ಕೊನೆ ಕ್ಷಣಗಳನ್ನ ನೆನೆದು ಕಣ್ಣೀರು ಹಾಕಿದ ಪತ್ನಿ, ಮಗ

    ಪುಟ್ಟಣ್ಣಯ್ಯರ ಕೊನೆ ಕ್ಷಣಗಳನ್ನ ನೆನೆದು ಕಣ್ಣೀರು ಹಾಕಿದ ಪತ್ನಿ, ಮಗ

    ಮಂಡ್ಯ: ರೈತ ಬಂಧು ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ಪತ್ನಿ ಸುನೀತ ಪುಟ್ಟಣ್ಣಯ್ಯ ಹಾಗೂ ಮಗ ದರ್ಶನ್ ಅವರು ಪುಟ್ಟಣ್ಣಯ್ಯ ಅವರೊಂದಿಗಿನ ಕೊನೆ ಕ್ಷಣಗಳನ್ನು ನೆನೆದು ಕಣ್ಣೀರಾಗುತ್ತಿದ್ದಾರೆ.

    ಮಗ ದರ್ಶನ್ ತಂದೆಗೆ ಚುನಾವಣೆಯಲ್ಲಿ ಸಹಾಯ ಮಾಡಲು ಅಮೇರಿಕಾದಿಂದ ಬಂದು ಕೆಲವೇ ದಿನಗಳಾಗಿತ್ತು. ಕೊನೆಯ ಬಾರಿಗೆ ದರ್ಶನ್ ತಂದೆಯೊಂದಿಗೆ ಫೋನಿನಲ್ಲಿ ಮಾತನಾಡಿದ್ದರು. ಇದೀಗ ತನ್ನ ತಂದೆಯ ಕಾಲುಚೀಲವನ್ನು ಕೈಯಾರೆ ಬಿಚ್ಚಿದ್ದನ್ನು ನೆನೆದು ಮಗ ದರ್ಶನ್ ಕಣ್ಣೀರು ಹಾಕಿದ್ರು.

    ಪತ್ನಿ ಸುನೀತ ಅವರು ಇಡೀ ದಿನ ಪುಟ್ಟಣ್ಣಯ್ಯ ಅವರ ಜೊತೆಯಿದ್ದರಂತೆ. ಬೇಬಿ ಬೆಟ್ಟದಲ್ಲಿ ನಡೆದ ಕಾರ್ಯಕ್ರಮಕ್ಕೂ ಜೊತೆಯಲ್ಲೇ ಹೋಗಿದ್ರಂತೆ. ಆದ್ರೆ ಚೆನ್ನಾಗಿಯೇ ಇದ್ದ ಪುಟ್ಟಣ್ಣಯ್ಯ ಅವರು ಸಾವನ್ನಪ್ಪಿದ್ದು ಸಂಕಟ ತಂದಿದೆ ಎಂದು ದುಃಖಿಸಿದ್ರು.

    ಅಮೇರಿಕಾದಲ್ಲಿರಿರುವ ಹೆಣ್ಣಮಕ್ಕಳು ಮತ್ತು ಕುಟುಂಬಸ್ಥರು ಬರಬೇಕಾಗಿರುವುದರಿಂದ ಅಂತ್ಯಕ್ರಿಯೆ ಬುಧವಾರ ನಡೆಯುತ್ತದೆ. ತಡವಾಗಿ ಅಂತ್ಯಕ್ರಿಯೆ ನಡೆಯುತ್ತಿರುವುದಕ್ಕೆ ಅಭಿಮಾನಿಗಳು ಕ್ಷಮಿಸಬೇಕು ಪುಟ್ಟಣ್ಣಯ್ಯ ಪತ್ನಿ ಸುನೀತ ಮನವಿ ಮಾಡಿಕೊಂಡ್ರು.

    ವೇದಿಕೆಯಲ್ಲಿಯೇ ಹೃದಯಾಘಾತ: ರೈತ ಬಂಧು, ಅಭಿಮಾನಿಗಳಲ್ಲಿ ಮೇಲುಕೋಟೆ ಮಾಣಿಕ್ಯ ಎಂದೇ ಖ್ಯಾತರಾಗಿದ್ದ ಕೆ.ಎಸ್.ಪುಟ್ಟಣ್ಣಯ್ಯ ಅವರು ಓರ್ವ ಕಬಡ್ಡಿ ಹಾಗೂ ಕುಸ್ತಿ ಪಟುವಾಗಿದ್ದರು. ಮಂಡ್ಯ ಜಿಲ್ಲೆಯ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಬಡ್ಡಿ ಪಂದ್ಯ ವೀಕ್ಷಣೆಗೆ ಆಗಮಿಸಿದ್ದರು. ಈ ಪಂದ್ಯದಲ್ಲಿ ಪುಟ್ಟಣ್ಣಯ್ಯ ಬೆಂಬಲಿತ ಪಾಂಡವಪುರ ಟೀಂ ಗೆದ್ದಿತ್ತು. ಹೀಗಾಗಿ ಗೆದ್ದ ತಂಡವನ್ನು ಸನ್ಮಾನಿಸಲು ಪುಟ್ಟಣ್ಣಯ್ಯ ವೇದಿಕೆ ಮೇಲೆ ಆಸೀನರಾಗಿದ್ದರು.

    ಅಭಿಮಾನಿಗಳು, ಸ್ಥಳೀಯ ಮುಖಂಡರೊಂದಿಗೆ ಕುಳಿತು ಖುಷಿಯಾಗಿಯೇ ಪಂದ್ಯ ವೀಕ್ಷಿಸಿದ್ದ ಪುಟ್ಟಣ್ಣಯ್ಯರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ವೇದಿಕೆಯಲ್ಲೇ ಕುಸಿದು ಬಿದ್ದ ಅವರನ್ನು ಕೂಡಲೇ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯ್ತು. ಆದ್ರೆ ವಿಧಿ ಅದಾಗಲೇ ಪುಟ್ಟಣ್ಣಯ್ಯ ಬದುಕಿನ ಹೋರಾಟವನ್ನು ಕಿತ್ತುಕೊಂಡು ಬಿಟ್ಟಿತ್ತು. ಬಳಿಕ ಪುಟ್ಟಣ್ಣಯ್ಯ ಮೃತದೇಹವನ್ನು ಹುಟ್ಟೂರು ಕ್ಯಾತನಹಳ್ಳಿಗೆ ರವಾನಿಸಲಾಯಿತು. ಈ ವೇಳೆ ಸಾವಿರಾರು ಅಭಿಮಾನಿಗಳು ಅಗಲಿದ ನಾಯಕನ ಅಂತಿಮ ದರ್ಶನಕ್ಕೆ ಮುಗಿಬಿದ್ದರು. ಇನ್ನು ನಟ ದರ್ಶನ್ ರಾತ್ರೋರಾತ್ರಿ ಪುಟ್ಟಣ್ಣಯ್ಯರ ಅಂತಿಮ ದರ್ಶನ ಪಡೆದರು. ಈ ವೇಳೆ ಪೊಲೀಸರು ಅಭಿಮಾನಿಗಳನ್ನು ನಿಯಂತ್ರಿಸಲು ಹರಸಾಹಸ ಪಟ್ಟರು.

  • ಸ್ಯಾಂಡಲ್‍ವುಡ್ ನಟನ ಮೇಲೆ ಕಬಡ್ಡಿ ಆಟಗಾರರಿಂದ ಹಲ್ಲೆ

    ಸ್ಯಾಂಡಲ್‍ವುಡ್ ನಟನ ಮೇಲೆ ಕಬಡ್ಡಿ ಆಟಗಾರರಿಂದ ಹಲ್ಲೆ

    ಬೆಂಗಳೂರು: ಕಬಡ್ಡಿ ಸೋತಿದ್ದಕ್ಕೆ ಹತಾಶೆಗೊಂಡು ಸ್ಯಾಂಡಲ್‍ವುಡ್ ನಟನಿಗೆ ಮತ್ತೊಂದು ತಂಡ ಥಳಿಸಿದ ಘಟನೆ ಅನ್ನಪೂರ್ಣೇಶ್ವರಿ ನಗರದ ಬಿಬಿಎಂಪಿ ಪಾರ್ಕ್ ನಲ್ಲಿ ನಡೆದಿದೆ.

    18 ಪ್ಲಸ್ ಸಿನಿಮಾದ ನಾಯಕ ನಟ ಭರತ್ ಮೇಲೆ ಹಲ್ಲೆ ನಡೆಸಲಾಗಿದೆ. ಕಬಡ್ಡಿ ಟೂರ್ನಿಯಲ್ಲಿ ಭಾಗವಹಿಸಿದ್ದ ಭರತ್ ತಂಡ ಟ್ರೋಫಿಯನ್ನು ಗೆದ್ದುಕೊಂಡಿತ್ತು. ಫೈನಲ್ ಪಂದ್ಯದಲ್ಲಿ ಸೋತಿದ್ದಕ್ಕೆ ಸಿಟ್ಟಾಗಿ ಕಿಟ್ಟಿ, ಪ್ರೇಮ್, ನಂದು ಎಂಬವರು ನಟ ಭರತ್ ಹಾಗೂ ನವೀನ್ ಕುಮಾರ್ ಮೇಲೆ ಹಲ್ಲೆ ನಡೆಸಿದ್ದಾರೆ.

    2 ದಿನಗಳ ಹಿಂದೆ ನಟನ ಮೇಲೆ ಹಲ್ಲೆ ನಡೆದಿದೆ. ಹಲ್ಲೆಯ ನಂತರ ಭರತ್ ಮುಖ ಊದಿಕೊಂಡಿದೆ. ಅನ್ನಪೂರ್ಣೆಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಕೊನೆ ಗಳಿಗೆಯಲ್ಲಿ `ಕಬಡ್ಡಿ’ಯಿಂದ ಹೊರ ಬಂದ ಹೃತಿಕ್ ರೋಶನ್

    ಕೊನೆ ಗಳಿಗೆಯಲ್ಲಿ `ಕಬಡ್ಡಿ’ಯಿಂದ ಹೊರ ಬಂದ ಹೃತಿಕ್ ರೋಶನ್

    ಮುಂಬೈ: ಬಾಲಿವುಡ್ ನಟ ಹೃತಿಕ್ ರೋಶನ್ ಯಾವಾಗಲ್ಲೂ ಸುದ್ದಿಯಲ್ಲಿಯೇ ಇರುತ್ತಾರೆ. ಆದರೆ ಹೃತಿಕ್ ತಾವು ನಟಿಸುತ್ತಿರುವ ಚಿತ್ರಗಳ ಬಗ್ಗೆ ಸಾಕಷ್ಟು ಖುಷಿ ಹಂಚಿಕೊಳ್ಳುತ್ತಿದ್ದಾರೆ. ಈಗ ಸದ್ಯ ರಾಕೇಶ್ ಓಂ ಪ್ರಕಾಶ್ ಮೆಹೆರಾ ಚಿತ್ರದಿಂದ ಹೊರ ಬಂದಿದ್ದಾರೆ.

    ರಾಕೇಶ್ ಓಂ ಪ್ರಕಾಶ್ ಮೆಹೆರಾ ಮತ್ತು ರಾಣಿ ಸಕ್ರುವಾಲಾ ಅವರ ಕಬ್ಬಡಿ ಚಿತ್ರದಿಂದ ಹೃತಿಕ್ ಹೊರ ಬಂದಿದ್ದಾರೆ ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ. ಈ ಚಿತ್ರದ ಎಲ್ಲಾ ಫಾರ್ಮಾಲಿಟಿಗಳನ್ನು ಹೃತಿಕ್ ಒಪ್ಪಿಕೊಂಡಿದ್ದರು. ಕಬಡ್ಡಿ ಆಡುವ ಸ್ಥಿತಿಯಲ್ಲಿ ನಾನು ಇಲ್ಲ. ಒಂದು ವೇಳೆ ಕಬಡ್ಡಿ ಚಿತ್ರವನ್ನು 2018 ಏಪ್ರಿಲ್ ವರೆಗೆ ಹೃತಿಕ್ ಕೆಲಸ ಮಾಡಬೇಕಾಗುತ್ತದೆ. ಆದರೆ ಈಗ ಈ ಚಿತ್ರಕ್ಕಾಗಿ ಸಮಯ ಇಲ್ಲ ಎಂದು ಹೃತಿಕ್ ಚಿತ್ರತಂಡಕ್ಕೆ ತಿಳಿಸಿದ್ದಾರೆ.

    ಯಶ್ ರಾಜ್ ಚಿತ್ರ ಮತ್ತು ಕಬಡ್ಡಿ ಚಿತ್ರವನ್ನು ಕೂಡ ಹೃತಿಕ್ ನಿರಾಕರಿಸಿದ್ದಾರೆ ಎಂದು ಹೇಳಲಾಗಿದೆ. ಈ ಚಿತ್ರದಲ್ಲಿ ಟೈಗರ್ ಶ್ರಾಫ್ ಜೊತೆ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರ ಇನ್ ಟ್ರಸ್ಟಿಂಗ್ ಇಲ್ಲ ಎಂದು ಚಿತ್ರದ ಕಥೆಯನ್ನು ಬದಲಿಸೋಕೆ ಹೇಳಿದ್ದಾರೆ. ನಂತರ ಈ ಚಿತ್ರವನ್ನು ಕೂಡ ನಿರಾಕರಿಸಿದ್ದಾರೆ.

    ಹೃತಿಕ್ ಚಿತ್ರವನ್ನು ನಿರಾಕರಿಸುತ್ತಿರುವುದು ಇದು ಮೊದಲ ಬಾರಿ ಅಲ್ಲ. ಈ ಮೊದಲು ವಿಕಾಸ್ ಬಹಲ್ ಜೊತೆ ಈ ರೀತಿ ನಡೆದುಕೊಂಡಿದ್ದಾರೆ. ಈಗ ಹೃತಿಕ್ ಆನಂದ್ ಕುಮಾರ್ ಅವರ ಸೂಪರ್-30 ಚಿತ್ರದಲ್ಲಿ ನಟಿಸುತ್ತಿದ್ದಾರೆ.

  • ಮಾನ ಮರ್ಯಾದೆ ಇದ್ರೆ ಕ್ಷೇತ್ರ ಬಿಟ್ಟು ತೊಲಗು- ಶಾಸಕ ಸಿ.ಟಿ. ರವಿ ವಿರುದ್ಧ ತಿರುಗಿಬಿದ್ದ ರೈತರು

    ಮಾನ ಮರ್ಯಾದೆ ಇದ್ರೆ ಕ್ಷೇತ್ರ ಬಿಟ್ಟು ತೊಲಗು- ಶಾಸಕ ಸಿ.ಟಿ. ರವಿ ವಿರುದ್ಧ ತಿರುಗಿಬಿದ್ದ ರೈತರು

    ಚಿಕ್ಕಮಗಳೂರು: `ಮೂರು ಬಾರಿ ಶಾಸಕ, ಒಮ್ಮೆ ಮಂತ್ರಿಯಾಗಿದ್ದೀಯಾ. ಆದ್ರೂ ನಿನ್ನ ಕೊಡುಗೆ ಶೂನ್ಯ. ಚಿಕ್ಕ ಚಿಕ್ಕ ಯೋಜನೆಗಳನ್ನೂ ಮುಗಿಸಿಲ್ಲ. ಚುನಾವಣೆ ಸಂದರ್ಭ ಗ್ರಾಮವಾಸ್ತವ್ಯ, ಕಬ್ಬಡಿ, ಡ್ಯಾನ್ಸ್ ಮಾಡೋ ಗಿಮಿಕ್ ಮಾಡೋದ್ರಲ್ಲಿ ನೀನು ನಿಸ್ಸೀಮ. ನಿನ್ನ ಕೈಲಿ ಆಗದಿದ್ರೆ ಕ್ಷೇತ್ರ ಬಿಟ್ಟು ಹೋಗು’ ಅಂತ ಶಾಸಕ ಸಿಟಿ ರವಿಯವರನ್ನು ಚಿಕ್ಕಮಗಳೂರಿನ ಮತದಾರರು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.

    ಇದಕ್ಕೆ ಕಾರಣ ಬೆಳವಾಡಿ, ಕಳಸಾಪುರ, ಲಕ್ಯಾ, ದೇವನೂರು ಭಾಗದ 60-70 ಹಳ್ಳಿಗಳಿಗೆ ನೀರು ಒದಗಿಸುವ ಉದ್ದೇಶದಿಂದ ಕರಗಡ ಯೋಜನೆ ಪ್ರಾರಂಭಿಸಲಾಗಿತ್ತು. ಆದ್ರೆ ಇದನ್ನ ಮುಗಿಸದ ಕಾರಣ ಶಾಸಕ ರವಿಯನ್ನ ಮುಂದಿನ ಎಲೆಕ್ಷನ್‍ನಲ್ಲಿ ಸೋಲಿಸಬೇಕು ಅಂತಾ ಮತದಾರರು ಪಣ ತೊಟ್ಟಿರುವುದಾಗಿ ಕರಗಡ ನೀರಾವರಿ ಹೋರಾಟ ಸಮಿತಿ ಸಂಚಾಲಕ ರವೀಶ್ ಕ್ಯಾತನಬೀಡು ಹೇಳಿದ್ದಾರೆ.

    ಇದನ್ನೂ ಓದಿ: ಶಾಸಕ ಸಿ.ಟಿ ರವಿಯಿಂದ ಕಬಡ್ಡಿ, ವಾಲಿಬಾಲ್ ಮೋಡಿ!

    `ಶಾಸಕ ಸಿ.ಟಿ. ರವಿಯನ್ನ ಸೋಲಿಸಿ’ ಎಂಬ ಸ್ಲೋಗನ್ ಅಡಿ ಊರೂರು ಪ್ರಚಾರ ಮಾಡೋಕೆ ರೈತರು, ಕರಗಡ ಹೋರಾಟ ಸಮಿತಿ ಸದಸ್ಯರು ನಿರ್ಧರಿಸಿದ್ದಾರೆ. ಈಗಾಗಲೇ ಐದಾರು ಗ್ರಾಮಗಳಲ್ಲಿ ಗ್ರಾಮವಾಸ್ತವ್ಯ ಮಾಡಿದ್ದ ಶಾಸಕ ಸಿ.ಟಿ. ರವಿ ಈ ಹಿಂದೆ ಕರಗಡ ಯೋಜನೆ ಶೀಘ್ರದಲ್ಲೇ ಮುಗಿಸ್ತೀವಿ ಅಂತಾ ಹೇಳಿ ಮಣ್ಣು ಅಗೆಯೋ ಕೆಲಸ ಮಾಡಿದ್ರು. ಆದ್ರೆ ಇದು ಬರೀ ಪೋಸ್ ಕೊಡಲಷ್ಟೇ ಅನ್ನೋದು ರೈತರ ಆರೋಪ.

    ಒಟ್ಟಿನಲ್ಲಿ ಕರಗಡ ನೀರಾವರಿ ಹೋರಾಟ ಸಮಿತಿ ಸಿಟಿ ರವಿ ವಿರುದ್ಧ ತಾಲೂಕಿನಾದ್ಯಂತ ಜನಜಾಗೃತಿ ಮೂಡಿಸಲು ಮುಂದಾಗಿದೆ.

    ಇದನ್ನೂ ಓದಿ: ವಿಡಿಯೋ: ಗ್ರಾಮಸ್ಥರೊಂದಿಗೆ ವೇದಿಕೆಯೇರಿ ಸಖತ್ ಸ್ಟೆಪ್ ಹಾಕಿದ ಶಾಸಕ ಸಿ.ಟಿ ರವಿ!

     

  • ವಿಡಿಯೋ: ಗ್ರಾಮಸ್ಥರೊಂದಿಗೆ ವೇದಿಕೆಯೇರಿ ಸಖತ್ ಸ್ಟೆಪ್ ಹಾಕಿದ ಶಾಸಕ ಸಿ.ಟಿ ರವಿ!

    ವಿಡಿಯೋ: ಗ್ರಾಮಸ್ಥರೊಂದಿಗೆ ವೇದಿಕೆಯೇರಿ ಸಖತ್ ಸ್ಟೆಪ್ ಹಾಕಿದ ಶಾಸಕ ಸಿ.ಟಿ ರವಿ!

    ಚಿಕ್ಕಮಗಳೂರು: ಈ ಹಿಂದೆ ಕಬಡ್ಡಿ, ವಾಲಿಬಾಲ್ ಆಡುವ ಮೂಲಕ ಜನರನ್ನು ಮನರಂಜಿಸಿದ್ದ ಶಾಸಕ ಸಿ.ಟಿ ರವಿ, ಇದೀಗ ಗ್ರಾಮಸ್ಥರೊಂದಿಗೆ ವೇದಿಕೆಯೇರಿ ಸಖತ್ತಾಗಿ ಸ್ಟೆಪ್ ಹಾಕೋ ಮೂಲಕ ಡ್ಯಾನ್ಸ್ ಗೂ ಸೈ ಎಂದಿದ್ದಾರೆ.

    ಚಿಕ್ಕಮಗಳೂರು ತಾಲೂಕಿನ ಗಾಳಿಪೂಜೆಯಲ್ಲಿ ಶನಿವಾರ ಗ್ರಾಮ ವಾಸ್ತವ್ಯದ ವೇಳೆ ಗ್ರಾಮಸ್ಥರೊಂದಿಗೆ ವೇದಿಕೆ ಮೇಲೆಯೇರಿ ಕುಣಿದು ಕುಪ್ಪಳಿಸಿದ್ದಾರೆ. ಗ್ರಾಮ ವಾಸ್ತವ್ಯದಲ್ಲಿ ಗ್ರಾಮಸ್ಥರ ಸಮಸ್ಯೆಯನ್ನು ಆಲಿಸಿದ ಬಳಿಕ ಸಿಟಿ ರವಿ ವೇದಿಕೆಯೇರಿದ್ದಾರೆ ಎನ್ನಲಾಗಿದೆ.

    ಈ ಹಿಂದೆ ಬೂಲನಹಳ್ಳಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿದ ಶಾಸಕ ಸಿ ಟಿ ರವಿ ಅವರು ಗ್ರಾಮ ಸಭೆಯ ಬಳಿಕ ಚಡ್ಡಿ ಹಾಗೂ ಟೀ ಶರ್ಟ್ ತೊಟ್ಟು ಸ್ಥಳೀಯ ಯುವಕರೊಂದಿಗೆ ಕಬಡ್ಡಿ ಆಡುವ ಮೂಲಕ ತಮ್ಮ ಹಳೆಯ ದಿನಗಳನ್ನು ಮೆಲುಕು ಹಾಕಿಕೊಂಡಿದ್ದರು.

    ಇದನ್ನೂ ಓದಿ: ಶಾಸಕ ಸಿ.ಟಿ ರವಿಯಿಂದ ಕಬಡ್ಡಿ, ವಾಲಿಬಾಲ್ ಮೋಡಿ-ಫೋಟೋಗಳಲ್ಲಿ ನೋಡಿ

    ಕ್ರೀಡಾಂಗಣಕ್ಕಿಳಿದ ಬಳಿಕ ಪ್ರೋಫೆಷನಲ್ ಆಟಗಾರನಂತೆ ಮೈದಾನದಲ್ಲಿದ್ದ ಕಲ್ಲುಗಳನ್ನ ಆಯ್ದು ಗ್ರೌಂಡ್ ಗೆ ನಮಸ್ಕರಿಸಿ ಕೋರ್ಟ್ ಒಳಗೆ ಪ್ರವೇಶಿಸಿದ್ದರು. ಶಾಸಕರು ಕಬಡ್ಡಿ ಆಡುವುದನ್ನು ನೋಡಲು ಗ್ರಾಮದ ಜನರೆಲ್ಲಾ ಆಸೀನರಾಗಿದ್ದರು. ಮಹಿಳೆಯರು ಕೂಡ ಮಕ್ಕಳ ಸಮೇತ ಗ್ರೌಂಡ್ ಸುತ್ತಲೂ ಕಿಕ್ಕಿರಿದು ಸೇರಿದ್ರು. ಶಾಸಕ ರವಿ ರೈಡ್ ಗೆ ಇಳಿಯುತ್ತಿದ್ದಂತೆ ಕೂಗುತ್ತಾ ಬೆಂಬಲಿಸಿದ್ದರು. ನಾನು ವಿಧಾನಸೌಧದ ಶಾಸಕನಲ್ಲ, ಜನಸಾಮಾನ್ಯರ ಶಾಸಕ ಎಂದು ಹೇಳ್ತಿದ್ದ ರವಿ ಅದೇ ರೀತಿ ನಡೆದುಕೊಂಡ್ರು ಅಂತ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದರು.

    ಕಬಡ್ಡಿಯ ಬಳಿಕ ಗ್ರಾಮೀಣ ಕ್ರೀಡಾಕೂಟವಾದ ಹಗ್ಗಜಗ್ಗಾಟದಲ್ಲೂ ಭಾಗವಹಿಸಿ, ವಾಲಿಬಾಲ್ ಆಡುವ ಮೂಲಕ ಎಲ್ಲರ ಮನರಂಜಿಸಿದ್ದರು.

  • ಶಾಸಕ ಸಿ.ಟಿ ರವಿಯಿಂದ ಕಬಡ್ಡಿ, ವಾಲಿಬಾಲ್ ಮೋಡಿ!

    ಶಾಸಕ ಸಿ.ಟಿ ರವಿಯಿಂದ ಕಬಡ್ಡಿ, ವಾಲಿಬಾಲ್ ಮೋಡಿ!

    ಚಿಕ್ಕಮಗಳೂರು: ಬಿಜೆಪಿ ಮುಖಂಡ, ಶಾಸಕ ಸಿ.ಟಿ.ರವಿ ಒಳ್ಳೆ ಕಬಡ್ಡಿ ಆಟಗಾರ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ಅವರ ಕಬಡ್ಡಿ ಆಟವನ್ನ ನೋಡ್ದೋರು ತುಂಬಾ ವಿರಳ. ಆದ್ರೆ, ಇಂದು ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ ಹೋಬಳಿಯ ಬೂಲನಹಳ್ಳಿ ತಾಂಡ್ಯದ ಜನರಿಗೆ ಅದನ್ನ ನೋಡೋ ಭಾಗ್ಯ ಸಿಕ್ತು.

    ಇಂದು ಬೂಲನಹಳ್ಳಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿದ ಶಾಸಕ ಸಿ.ಟಿ.ರವಿ ಗ್ರಾಮ ಸಭೆಯ ಬಳಿಕ ಚೆಡ್ಡಿ ಹಾಗೂ ಟೀ ಶರ್ಟ್ ತೊಟ್ಟು ಸ್ಥಳಿಯ ಯುವಕರೊಂದಿಗೆ ಕಬಡ್ಡಿ ಆಡಿ ತಮ್ಮ ಹಳೆಯ ದಿನಗಳನ್ನ ನೆನಪಿಸಿಕೊಂಡ್ರು.

    ಕ್ರೀಡಾಂಗಣಕ್ಕಿಳಿದ ಬಳಿಕ ಪ್ರೋಫೆಷನಲ್ ಆಟಗಾರನಂತೆ ಮೈದಾನದಲ್ಲಿದ್ದ ಕಲ್ಲುಗಳನ್ನ ಆಯ್ದು ಗ್ರೌಂಡ್ ಗೆ ನಮಸ್ಕರಿಸಿ ಕೋರ್ಟ್ ಒಳಗೆ ಪ್ರವೇಶಿಸಿದ್ರು. ಶಾಸಕ ರವಿ ಕಬಡ್ಡಿ ಆಡುವುದನ್ನು ನೋಡಲು ಗ್ರಾಮದ ಜನರೆಲ್ಲಾ ಆಸೀನರಾಗಿದ್ರು. ಮಹಿಳೆಯರು ಕೂಡ ಮಕ್ಕಳ ಸಮೇತ ಗ್ರೌಂಡ್ ಸುತ್ತಲೂ ಕಿಕ್ಕಿರಿದು ಸೇರಿದ್ರು. ಶಾಸಕ ರವಿ ರೈಡ್ ಗೆ ಇಳಿಯುತ್ತಿದ್ದಂತೆ ಕೂಗುತ್ತಾ ಬೆಂಬಲಿಸಿದ್ರು. ನಾನು ವಿಧಾನಸೌಧದ ಶಾಸಕನಲ್ಲ, ಜನಸಾಮಾನ್ಯರ ಶಾಸಕ ಎಂದು ಹೇಳ್ತಿದ್ದ ರವಿ ಅದೇ ರೀತಿ ನಡೆದುಕೊಂಡ್ರು ಎನ್ನುವುದು ಗ್ರಾಮಸ್ಥರ ಮಾತು.

    ಕಬಡ್ಡಿಯ ಬಳಿಕ ಗ್ರಾಮೀಣ ಕ್ರೀಡಾಕೂಟವಾದ ಹಗ್ಗಜಗ್ಗಾಟದಲ್ಲೂ ಭಾಗವಹಿಸಿ, ವಾಲಿಬಾಲ್ ಆಡುವ ಮೂಲಕ ಎಲ್ಲರ ಮನರಂಜಿಸಿದರು.