Tag: ಕಬಿನಿ ನದಿ

  • ಕಾವೇರಿ, ಕಬಿನಿ, ಕಾಳಿ ಸೇರಿ ರಾಜ್ಯದ 17 ನದಿಗಳ ನೀರು ನೇರವಾಗಿ ಕುಡಿಯೋಕೆ ಯೋಗ್ಯವಲ್ಲ- ವರದಿ ಸ್ಫೋಟ

    ಕಾವೇರಿ, ಕಬಿನಿ, ಕಾಳಿ ಸೇರಿ ರಾಜ್ಯದ 17 ನದಿಗಳ ನೀರು ನೇರವಾಗಿ ಕುಡಿಯೋಕೆ ಯೋಗ್ಯವಲ್ಲ- ವರದಿ ಸ್ಫೋಟ

    – ನದಿ ಹರಿವಿನ ನೀರಿನ ಪರೀಕ್ಷೇಯಲ್ಲಿ ಕಲುಷಿತ
    – ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಬಹಿರಂಗ

    ಬೆಂಗಳೂರು: ಆಧುನಿಕತೆ ಬೆಳೆದಂತೆ ಪರಿಸರದಲ್ಲಿ ಮಾಲಿನ್ಯ (Pollution) ಪ್ರಮಾಣ ಕೂಡ ಹೆಚ್ಚಾಗ್ತಾ ಇದೆ. ಅದರಲ್ಲೂ ಕುಡಿಯುವ ನೀರು ಹಾಗೂ ಗಾಳಿಯಲ್ಲಿ ಕಲುಷಿತ ಪ್ರಮಾಣ ಹೆಚ್ಚುತ್ತಲೇ ಇದೆ. ಇದಕ್ಕೆ ನಿದರ್ಶನ ಎನ್ನುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ (Pollution Control Board) ವರದಿಯೊಂದನ್ನ ಬಿಡುಗಡೆ ಮಾಡಿದೆ.

    ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಿಡುಗಡೆ ಮಾಡಿರುವ ವರದಿಯಲ್ಲಿ ರಾಜ್ಯದ ಪ್ರಮುಖ 17 ನದಿಗಳು ಕಲುಷಿತ ಆಗಿರೋದು ಬಯಲಾಗಿದೆ. ಈ ವರ್ಷ ಮಾಲಿನ್ಯ ನಿಯಂತ್ರಣ ಮಂಡಳಿ ನದಿಗಳ (Rivers) ಹರಿವಿನಲ್ಲಿ ನೀರನ್ನ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿದೆ. ಅದರಲ್ಲಿ 15 ನದಿಗಳ ನೀರು ನೇರವಾಗಿ ಕುಡಿಯೋಕೆ ಯೋಗ್ಯವಲ್ಲ ಅಂತಾ ವರದಿಯಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಎಂಪಿ ಟಿಕೆಟ್ ಏಕೆ ನಿರೀಕ್ಷಿಸಬಾರದು- ಕಮಲ್ ಹಾಸನ್ ಪ್ರಶ್ನೆ

    ಯಾವೆಲ್ಲಾ ನದಿ ನೀರು ಯೋಗ್ಯವಲ್ಲ?: ಅರ್ಕಾವತಿ ನದಿ, ಲಕ್ಷ್ಮಣ ತೀರ್ಥ ನದಿ, ಮಲಪ್ರಭಾ ನದಿ, ತುಂಗಭದ್ರಾ ನದಿ, ಭದ್ರಾ ನದಿ, ಕಾವೇರಿ ನದಿ (Cauvery), ಕಬಿನಿ ನದಿ (Kabini), ಕಗಿನಿ ನದಿ, ಕಾಳಿ ನದಿ, ಕೃಷ್ಣ ನದಿ, ಅಸಂಗಿ ಕೃಷ್ಣ ನದಿ, ಶಿಂಷಾ ನದಿ, ಭೀಮಾ ನದಿ, ನೇತಾವತಿ ನದಿ, ಕುಮಾರಧಾರ ನದಿ, ತುಂಗಾ ನದಿ, ಯಗಚಿ ನದಿಗಳ ನೀರು ನೇರವಾಗಿ ಕುಡಿಯಲು ಯೋಗ್ಯವಲ್ಲ ಎಂದು ವರದಿಯಲ್ಲಿ ಬಹಿರಂಗವಾಗಿದೆ.

    ಮಹಾನಗರಗಳು ಹಾಗೂ ನಗರಗಳಲ್ಲಿನ ಕಂಪನಿಗಳು, ಕಾರ್ಖಾನೆಗಳು (Chemical Factory) ಹೊರಸೂಸುವ ಕೆಮಿಕಲ್ ಹಾಗೂ ತ್ಯಾಜ್ಯದಿಂದಳೇ ನೀರು ಕಲುಷಿತ ಆಗ್ತಿದೆ ಎಂದು ಹೇಳಲಾಗ್ತಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯವರು ಮಾಲಿನ್ಯ ಉಂಟಾಗುವ ಜಾಗದಲ್ಲಿ ಪ್ಲಾಂಟ್‌ಗಳನ್ನ ರಚನೆ ಮಾಡಿ ನಿಯಂತ್ರಣ ಮಾಡದೇ ಇರೋದು ಮಾಲಿನ್ಯಕ್ಕೆ ಕಾರಣವಾಗಿದೆ. ಸರ್ಕಾರ ಕೂಡಲೇ ಎಚ್ಚೆತ್ತು ನಿಯಂತ್ರಣ ಮಾಡಬೇಕು. ಮಾನಿಟರ್‌ಗೆ ಹೆಚ್ಚು ಸಿಬ್ಬಂದಿ ನೇಮಕ ಮಾಡಿ ಮಾನಿಟರ್ ಮೂಲಕ ಮಾಲಿನ್ಯ ತಡೆಗಟ್ಟಬೇಕು ಎಂದು ತಜ್ಞರು ಒತ್ತಾಯಿಸಿದ್ದಾರೆ.

    ಒಟ್ಟಾರೆ 17 ನದಿಗಳು ಕಲುಷಿತ ಆಗಿರೋದು ಮಾಲಿನ್ಯ ನಿಯಂತ್ರಣ ಮಂಡಳಿ ಪರೀಕ್ಷೆಯಲ್ಲಿ ಬಯಲಾಗಿದೆ. ಮಾಲಿನ್ಯ ನಿಯಂತ್ರಣಕ್ಕೆ ಸರ್ಕಾರ ಏನು ಕ್ರಮ ಕೈಗೊಳ್ಳುತ್ತದೆ ಎಂಬುದನ್ನ ಕಾದು ನೋಡಬೇಕಿದೆ. ಇದನ್ನೂ ಓದಿ: ಡಾರ್ಕ್‌ನೆಟ್‌ ಬಳಸಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನ- ರಣಾಂಗಣವಾದ ವಿವಿ ಕ್ಯಾಂಪಸ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಬಿನಿ ಫಾರೆಸ್ಟ್‌ನಲ್ಲಿ  ಗಣೇಶ್, ರಾಜೂಗೌಡ ಫ್ಯಾಮಿಲಿ ಟ್ರಿಪ್

    ಕಬಿನಿ ಫಾರೆಸ್ಟ್‌ನಲ್ಲಿ  ಗಣೇಶ್, ರಾಜೂಗೌಡ ಫ್ಯಾಮಿಲಿ ಟ್ರಿಪ್

    ಮೈಸೂರು: ಸ್ಯಾಂಡಲ್‍ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಸುರಪುರ ಶಾಸಕ ರಾಜೂಗೌಡ ಅವರು ಫ್ಯಾಮಿಲಿ ಜೊತೆಗೆ ಹೆಚ್ ಡಿ ಕೋಟೆಯ ಸುತ್ತಮುತ್ತ ಪ್ರದೇಶಗಳಲ್ಲಿ ಜಾಲಿ ಟ್ರಿಪ್ ಮಾಡುತ್ತಿದ್ದಾರೆ.

    ಸಚಿವ ಸ್ಥಾನದಿಂದ ವಂಚಿತಗೊಂಡು ಮತ್ತು ಸಚಿವ ಆನಂದ್ ಸಿಂಗ್ ರಾಜೀನಾಮೆ ವಿಚಾರದಲ್ಲಿ ಸದಾ ಸುದ್ದಿಯಲ್ಲಿದ್ದ ಸುರಪುರ ಶಾಸಕ ಈಗ ಫ್ಯಾಮಿಲಿ ಜೊತೆಗೆ ಜಾಲಿ ಟ್ರಿಪ್‍ನಲ್ಲಿದ್ದಾರೆ. ಗಣೇಶ್ ಮತ್ತು ರಾಜೂಗೌಡರ ಕುಟುಂಬದ ಜೊತೆಗೆ ಸದ್ಯ ಎಂಜಾಯ್ಮೆಂಟ್ ಮೂಡ್‍ನಲ್ಲಿದ್ದಾರೆ. ಇದನ್ನೂ ಓದಿ: ಮತದಾರ ಪ್ರಭುಗಳ ಖುಣ ತೀರಿಸುವ ಕೆಲಸ ಮಾಡುತ್ತೇನೆ: ಮುನಿರತ್ನ

     

    View this post on Instagram

     

    A post shared by Ganesh (@goldenstar_ganesh)

    ಹೆಚ್ ಡಿ ಕೋಟೆ ಕಾನನ ಪ್ರದೇಶದಲ್ಲಿ ಚಾರಣ ಮಾಡುತ್ತಿರುವ ರಾಜೂಗೌಡರಿಗೆ, ಗಣೇಶ್ ಮತ್ತು ನಟ ರವಿಶಂಕರ್ ಜೊತೆಯಾಗಿದ್ದಾರೆ. ಮೊದಲಿಂದಲೂ ಸಿನಿಮಾ ಮಂದಿಜೊತೆಗೆ ಉತ್ತಮ ಒಡನಾಟ ಹೊಂದಿರುವ ರಾಜೂಗೌಡ ಒಂದೆರಡು ದಿನ ರಾಜಕೀಯ ಜಂಜಾಟ ಬಿಟ್ಟು ಕುಟುಂಬದವರ ಜೊತೆಗೆ ಕಾಲ ಕಳೆಯುತ್ತಿದ್ದಾರೆ. ಹೆಚ್ ಡಿ ಕೋಟೆ ಅರಣ್ಯ ಪ್ರದೇಶದಲ್ಲಿ ವನಮಹೋತ್ಸವ ಆಚರಣೆ ಮಾಡಿದ್ದಾರೆ. ಇದನ್ನೂ ಓದಿ: ಸಮಯ ಪ್ರಜ್ಞೆ ಮೆರೆದ KSRTC ಚಾಲಕ – 50ಕ್ಕೂ ಅಧಿಕ ಮಂದಿ ಪ್ರಯಾಣಿಕರು ಪಾರು

     

    View this post on Instagram

     

    A post shared by Ganesh (@goldenstar_ganesh)

    ಕಬಿನಿ ನದಿಯಲ್ಲಿ ಫ್ಯಾಮಿಲಿ ಜೊತೆಗೆ ಬೋಟ್‍ನಲ್ಲಿ ಕುಳಿತು ಎಂಜಾಯ್ ಮಾಡಿದ್ದಾರೆ. ಕಬಿನಿ ಫಾರೆಸ್ಟ್‌ನಲ್ಲಿ ಸಫಾರಿ ಹೋಗುವಾಗ ಗಣೇಶ್ ಅವರ ಕ್ಯಾಮೆರಾಗೆ ಚಿರತೆ ಸೆರೆ ಸಿಕ್ಕಿದೆ. ಈ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಗಣೇಶ್ ಅವರು ಕುಟುಂಬದ ಜೊತೆಗೆ ಜಾಲಿ ಟ್ರಿಪ್ ಮಾಡುತ್ತಿರುವುದಾಗಿ ಬರೆದುಕೊಂಡಿದ್ದಾರೆ.