Tag: ಕಬೀರ್ ಬೇಡಿ

  • ‘ಕೊರಗಜ್ಜ’ ಸಿನಿಮಾಗೆ ಬಾಲಿವುಡ್ ನಟ ಕಬೀರ್ ಬೇಡಿ ಕನ್ನಡದಲ್ಲಿ ಡಬ್ಬಿಂಗ್

    ‘ಕೊರಗಜ್ಜ’ ಸಿನಿಮಾಗೆ ಬಾಲಿವುಡ್ ನಟ ಕಬೀರ್ ಬೇಡಿ ಕನ್ನಡದಲ್ಲಿ ಡಬ್ಬಿಂಗ್

    ‘ಕಾಂತಾರ’ (Kantara) ಸಿನಿಮಾದ ಸಕ್ಸಸ್ ನಂತರ ಮತ್ತೆ ದೈವದ ಕಥೆಯೊಂದು ತೆರೆಗೆ ಬರಲು ಸಿದ್ಧವಾಗಿದೆ. ಕನ್ನಡದ ಸಿನಿಮಾಗಳು ವಿಶ್ವದೆಲ್ಲೆಡೆ ಸದ್ದು ಮಾಡ್ತಿರೋದನ್ನ ನೋಡಿ, ಪರಭಾಷಿಕರು ಕನ್ನಡದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಾಲಿವುಡ್ ನಟ ಕಬೀರ್ ಬೇಡಿ ಒಂದು ಹೆಜ್ಜೆ ಹೋಗಿ, ಕನ್ನಡದ ‘ಕೊರಗಜ್ಜ’ (Koragajja) ಚಿತ್ರದಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದಾರೆ.

    ಸುಧೀರ್ ಅತ್ತಾವರ್ (Sudhir Attavar) ನಿರ್ದೇಶನದ ‘ಕೊರಗಜ್ಜ’ ಸಿನಿಮಾದಲ್ಲಿ ಬರುವ ಉದ್ಯಾವರ ಅರಸರ ಪಾತ್ರವನ್ನು ಕಬೀರ್ ಬೇಡಿ (Kabir Bedi) ನಟಿಸಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಅವರು ಕನ್ನಡ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಿರ್ದೇಶಕರ ಕೆಲಸವನ್ನು ಅವರು ನಟ ಕಬೀರ್ ಮೆಚ್ಚಿಕೊಂಡಿದ್ದಾರೆ. ಅಲ್ಲದೇ ತಮ್ಮ ಪಾತ್ರಕ್ಕೆ ತಾವೇ ಧ್ವನಿ ನೀಡಿದ್ದಾರೆ. ಇದನ್ನೂ ಓದಿ:‘RRR’ ರೈಟರ್ ವಿಜೇಂದ್ರ ಪ್ರಸಾದ್‌ ಜೊತೆ ಕೇದರನಾಥ್‌ಗೆ ಕಂಗನಾ ಭೇಟಿ

    ಕಬೀರ್ ಬೇಡಿ ಅವರು ತಮ್ಮ ಪಾತ್ರಕ್ಕೆ ತಾವೇ ಡಬ್ಬಿಂಗ್ ಮಾಡುತ್ತೇನೆ ಎಂದು ಶೂಟಿಂಗ್ ಸಂದರ್ಭದಲ್ಲಿ ನಿರ್ದೇಶಕರಿಗೆ ಹೇಳಿದ್ದರು. ಆದರೆ ಅವರ ಮಾತನ್ನು ಒಪ್ಪುವುದು ನಿರ್ದೇಶಕ ಸುಧೀರ್ ಅತ್ತಾವರ್ ಅವರಿಗೆ ಅಷ್ಟು ಸುಲಭದಲ್ಲಿ ಸಾಧ್ಯವಿರಲಿಲ್ಲ. ಯಾಕೆಂದರೆ, ಬಾಲಿವುಡ್, ಹಾಲಿವುಡ್, ಯುರೋಪಿಯನ್ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದ ನಟ ಏಕಾಏಕಿ ದಕ್ಷಿಣ ಭಾರತದ ಅದರಲ್ಲೂ ಕನ್ನಡ, ತುಳು, ಸೊಗಡನ್ನು ಅರಿತು ಕೊರಗಜ್ಜ ಸಿನಿಮಾಗೆ ಡಬ್ಬಿಂಗ್ ಸಿನಿಮಾಗೆ ಸಾಥ್ ನೀಡಿದ್ದಾರೆ. ಮುಂಬೈ ಸ್ಟುಡಿಯೋದಲ್ಲಿ 2-3 ಬಾರಿ ಸಂಭಾಷನೆಯನ್ನು ಒಪ್ಪಿಸುತ್ತಾ ಡಬ್ಬಿಂಗ್ ನಡೆಸುತ್ತಿದ್ದಾರೆ.

    ಸುಧೀರ್ ನಿರ್ದೇಶನದ ಸಿನಿಮಾ ನಟಿ ಭವ್ಯ ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಾಲ್ಕೈದು ಕ್ಯಾಮೆರಾಗಳನ್ನ ಇಟ್ಟುಕೊಂಡು ಸಿನಿಮಾವನ್ನು ಶೂಟ್ ಮಾಡಿದ್ದಾರೆ. ಭಿನ್ನ ಕಥೆಯನ್ನ ತೆರೆಗೆ ತರಲು ಚಿತ್ರತಂಡ ಸಜ್ಜಾಗಿದ್ದಾರೆ. ಸದ್ಯದಲ್ಲೇ ಈ ಕುರಿತ ಅಪ್‌ಡೇಟ್ ಸಿಗಲಿದೆ.

  • ಗುಳಿಗ ದೈವಕ್ಕೆ ಕ್ಷೇತ್ರ ನಿರ್ಮಾಣ, ಅದ್ದೂರಿ ಕೋಲ ಸೇವೆ ಮಾಡಿಸಿದ ಡೈರೆಕ್ಟರ್

    ಗುಳಿಗ ದೈವಕ್ಕೆ ಕ್ಷೇತ್ರ ನಿರ್ಮಾಣ, ಅದ್ದೂರಿ ಕೋಲ ಸೇವೆ ಮಾಡಿಸಿದ ಡೈರೆಕ್ಟರ್

    ‘ಕರಿ ಹೈದ ಕೊರಗಜ್ಜ’ (Kari Haida Koragajja) ಚಿತ್ರೀಕರಣದ ವೇಳೆ ಅನೇಕ ಪವಾಡಗಳು ಗೋಚರಕ್ಕೆ ಬಂದ ವಿಷಯವನ್ನು  ಕಲಾವಿದರಾದ ಕಬೀರ್ ಬೇಡಿ (Kabir Bedi), ಶ್ರುತಿ, ಭವ್ಯ ಹಾಗೂ ಚಿತ್ರ ತಂಡದ ಸದಸ್ಯರು ಈಗಾಗಲೇ ತಮ್ಮ ಅನುಭವವನ್ನು ಹಂಚಿಕೊಂಡಿದ್ದರು.  ಆದರೆ ಮತ್ತೊಂದು ಕುತೂಹಲ ದ ವಿಚಾರವು ಇದುವರೆಗೂ ನಿಗೂಢವಾಗಿತ್ತು. ಇದು ಘಟಿಸಿದ್ದು  ಚಿತ್ರೀಕರಣದ ಆರಂಭಕ್ಕೂ ಮೊದಲು ಪುತ್ತೂರಿನಲ್ಲಿ ಸೆಟ್ ವಿರ್ಮಾಣದ ವೇಳೆ. ಸೆಟ್ ಕೆಲಸಗಾರರು ಸೆಟ್ ನಿರ್ಮಾಣದ ವೇಳೆ ಯಾವುದೋ ಆವೇಶ ಬಂದಂತವರಾಗಿ ಅಲ್ಲಲ್ಲೇ ಮೂರ್ಛೆ ಹೋಗತೊಡಗಿದರು. ಸ್ಥಳಿಯರು ಅರಶಿನ ನೀರನ್ನು ಪ್ರೋಕ್ಷಿಸಿ , ಕೆಲವರನ್ನು ಅಲ್ಲಿನ ಆಸ್ಪತ್ರೆಗೂ ಸೇರಿಸಲಾಯಿತು. ನಂತರ ಆ ಪ್ರದೇಶದಲ್ಲಿ ಯಾರೂ ಸೆಟ್ ಕೆಲಸ ಮಾಡಲು ಮುಂದೆ ಬರಲಿಲ್ಲ. ಸೆಟ್ ಹಾಕಲಿದ್ದ ಆ ಜಾಗವು ಕರಾವಳಿಯ ಉಗ್ರ ರೂಪದ ದೈವ ಗುಳಿಗನ ಸ್ಥಳ ವೆಂದು ಸ್ಥಳಿಯರು ತಿಳಿಸಿದರು. ದೈವದ ಮೇಲಿನ ಗೌರವ-ಭಕ್ತಿಯಿಂದ  ಪುತ್ತೂರಿನಿಂದ ಬೆಳ್ತಂಗಡಿಯ ಅರಣ್ಯ ಪ್ರದೇಶದಲ್ಲಿ ಸೆಟ್ ಕೆಲಸವನ್ನು  ಸ್ಥಳಾಂತರ ಗೊಳಿಸಲಾಯಿತು.

    ಚಿತ್ರದಲ್ಲಿ ಗುಳಿಗ ದೈವದ ಪಾತ್ರವನ್ನು ಹಾಲಿವುಡ್- ಫ಼್ರೆಂಚ್- ಬಾಲಿವುಡ್ ನಟ ಹಾಗೂ ಕೊರಿಯೋಗ್ರಾಫರ್ ಸಂದೀಪ್ ಸೋಪರ್ಕರ್ ಅಭಿನಯಿಸಿದ್ದು, ಮಂಗಳೂರಿನ ಸೋಮೆಶ್ವರ ಸಮುದ್ರ ಕಿನಾರೆಯಲ್ಲಿ ಗುಳಿಗ ದೈವದ ಚಿತ್ರೀಕರಣವನ್ನು ನಡೆಸುತ್ತಿದ್ದಾಗಲೂ, ತಂಡಕ್ಕೆ ಹಲವಾರು ರೀತಿಯ ಅಡೆತಡೆಗಳು ಎದುರಾಯಿತು.  ಈ ಬಗ್ಗೆ ತಿಳಿದವರಲ್ಲಿ ಚಿಂತನ -ಮಂಥನ ನಡೆಸಿದಾಗ ನಿರ್ದೇಶಕ ಸುಧೀರ್ ಅತ್ತಾವರ್ ರವರ ಹಿರಿಯರಿದ್ದ ಮನೆಯಲ್ಲಿ ಗುಳಿಗ ದೈವದ ಸಾನಿಧ್ಯವಿದ್ದು, ಹಲವಾರು ವರ್ಷಗಳಿಂದ ಆ ಮನೆಯಲ್ಲಿ  ಯಾರೂ ವಾಸವಿರದೆ, ಪಾಳು ಬಿದ್ದಕಾರಣ  ದೈವಕ್ಕೆ  ಪೂಜೆ ಪುರಸ್ಕಾರಗಳು ನಡೆಯದಿರುವ ವಿಚಾರ ಗೋಚರಿಸಿತು. ಇದನ್ನೂ ಓದಿ:ಆರ್.ಎಲ್ ಜಾಲಪ್ಪ ವಿರುದ್ಧ ಸ್ಪರ್ಧಿಸಿ ಸೋತಿದ್ದರು ಹಿರಿಯ ನಟ ಶ್ರೀನಿವಾಸ್ ಮೂರ್ತಿ

    ಕೂಡಲೇ ನಿರ್ದೇಶಕರು ದೈವಕ್ಕೆ ಗುಡಿ ನಿರ್ಮಾಣ ಮಾಡುವ ಕಾರ್ಯಕ್ಕೆ ಮುಂದಾಗಿ, ಚಿತ್ರದ ಎಡಿಟಿಂಗ್ ಕೆಲಸ ಮುಗಿದ ಕೂಡಲೇ, ದೈವಸ್ಥಾನದ ಕಾರ್ಯ ಮುಗಿಸಿ, ಗುಳಿಗ ಹಾಗೂ ಕಲ್ಲುರ್ಟಿ ದೈವಗಳಿಗೆ ಅದ್ದೂರಿಯ ಕೋಲ ಸೇವೆಯನ್ನು  ನಡೆಸಿದರು. ಈ ಸಮಯದಲ್ಲಿ ಹಿರಿಯ ನಟಿ ಭವ್ಯ, ನಿರ್ಮಾಪಕರಾದ ತ್ರಿವಿಕ್ರಮ ಸಾಫಲ್ಯ, ಕಾರ್ಯಕಾರಿ ನಿರ್ಮಾಪಕ  ವಿದ್ಯಾಧರ್ ಶೆಟ್ಟಿ, ಕಲಾವಿದರಾದ ಭರತ್ ಸೂರ್ಯ, ರಿತಿಕ ಹಾಗೂ ಹಲವು ತಂತ್ರಜ್ಞರು ಅಹೋರಾತ್ರಿ ವಿಜೃಂಭಣೆಯಿಂದ ನಡೆದ ಕೋಲಸೇವೆಯಲ್ಲಿ ಪಾಲ್ಗೊಂಡಿದ್ದರು. ಇದಕ್ಕೂ ಮುನ್ನ ಚಿತ್ರತಂಡವು ಚಿತ್ರೀಕರಣ ಮುಗಿದ ಕೂಡಲೇ ಕೊರಗಜ್ಜನಿಗೂ ಕೋಲಸೇವೆಯನ್ನು ಅದ್ದೂರಿಯಾಗಿ ನೆರವೇರಿಸಿತ್ತು.

    ಕೊರಗಜ್ಜನ ಕುರಿತಾದ ಸಿನಿಮಾ ಮಾಡಬೇಕೆಂದು ಹಲವಾರು ನಿರ್ಮಾಪಕರು ಕಳೆದ ಕೆಲವು ವರ್ಷಗಳಿಂದ ಪ್ರಯತ್ನಿಸುತ್ತಿದ್ದರು. ಆದರೆ ನಿರ್ಮಾಪಕ ತ್ರಿವಿಕ್ರಮ ರವರು ಬಿಗ್ ಬಜೆಟ್ ನಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದು, ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ.

  • ಕೊರಗಜ್ಜನ ಸಿನಿಮಾದಲ್ಲಿ ಕಾಣಿಸಿಕೊಂಡ ಬಾಲಿವುಡ್ ನಟ ಕಬೀರ್ ಬೇಡಿ

    ಕೊರಗಜ್ಜನ ಸಿನಿಮಾದಲ್ಲಿ ಕಾಣಿಸಿಕೊಂಡ ಬಾಲಿವುಡ್ ನಟ ಕಬೀರ್ ಬೇಡಿ

    ದ್ರತಿ ಕ್ರಿಯೇಷನ್ಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್ ಅಡಿ ತ್ರಿವಿಕ್ರಮ್ ಸಪಲ್ಯ  ನಿರ್ಮಿಸುತ್ತಿರುವ,  ಸುಧೀರ್ ಅತ್ತಾವರ್ ನಿರ್ದೇಶನದ  “ಕರಿ ಹೈದ….ಕರಿ ಅಜ್ಜ …”.ಸಿನೆಮಾದಲ್ಲಿ ಅಂತರರಾಷ್ಟ್ರೀಯ ಖ್ಯಾತಿಯ ಹಾಲಿವುಡ್ ಹಾಗೂ ಬಾಲಿವುಡ್ ನಟ ಕಬೀರ್ ಬೇಡಿ ನಟಿಸಿದ್ದಾರೆ. ಯುರೋಪಿನಾದ್ಯಂತ ಪ್ರಸಿದ್ದಿ ಪಡೆದ ” ಸಂದೀಕನ್” ಟಿವಿ ಸೀರಿಸ್ ನಲ್ಲಿ ನಟಿಸಿರುವ ಕಬೀರ್ ಬೇಡಿ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ.  “ಕರಿ ಹೈದ ಕರಿ ಅಜ್ಜ” ಚಿತ್ರದ ತಮ್ಮ ಪಾತ್ರದ ಬಗ್ಗೆ “ಕಬೀರ್ ಬೇಡಿ” ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದಾರೆ.

    ಸುಧೀರ್ ಅತ್ತಾವರ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ನಟಿಸಿದ್ದು ಖುಷಿಯಾಗಿದೆ. “ಕೊರಗಜ್ಜ” ದೈವದ ಕುರಿತಾದ ಈ ಚಿತ್ರದಲ್ಲಿ ರಾಜನ ಪಾತ್ರ ನನ್ನದು. ಶೃತಿ, ಭವ್ಯ, ಭರತ್ ಸೂರ್ಯ ಮುಂತಾದ ಕಲಾವಿದರ ಜೊತೆ ಅಭಿನಯಿಸಿದ್ದ ಅನುಭವವನ್ನು ಹಂಚಿಕೊಂಡ ಕಬೀರ್ ಬೇಡಿ, ಬೆಂಗಳೂರಿನ ನೃತ್ಯ ಗ್ರಾಮಕ್ಕೆ ಬರುತ್ತಿದ್ದುದ್ದನ್ನು ಹಾಗೂ ಗಿರೀಶ್ ಕಾರ್ನಾಡ್ ಅವರ ಜೊತೆಗಿನ ಒಡನಾಟವನ್ನು ನೆನಪಿಸಿಕೊಂಡರು.‌ ಇದನ್ನೂ ಓದಿ:  ಹಿರಿಯ ನಿರ್ದೇಶಕ ಭಗವಾನ್ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

    ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣವಾಗಿದೆ. ಬೆಳ್ತಂಗಡಿ ಆಸುಪಾಸಿನಲ್ಲೇ ಹೆಚ್ಚು ಚಿತ್ರೀಕರಣವಾಗಿದೆ. ನಿರ್ಮಾಪಕ ತ್ರಿವಿಕ್ರಮ ಸಪಲ್ಯ ಅವರ ಕುಟುಂಬದವರಿಗೆ “ಕೊರಗಜ್ಜ”ನ ಕುರಿತಾದ ಚಿತ್ರ ಮಾಡುವ ಹಂಬಲವಿತ್ತು. ಈ ಕಥೆ ಮೆಚ್ಚಿ ಅವರು ನಿರ್ಮಾಕ್ಕೆ ಮುಂದಾದರು. .  ಕೊರಗಜ್ಜನ ಜೀವನದ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಿ, ಕೊರಗಜ್ಜನ ಜನಾಂಗದ ಮಹನೀಯರೊಂದಿಗೆ ಚರ್ಚೆ ಮಾಡಿ   12ನೇ ಶತಮಾನದಲ್ಲಿದ್ದ ಕೊರಗಜ್ಜನ ಬಗ್ಗೆ ಯಾರಿಗೂ ಗೊತ್ತಿರದ ನಿಜ ಬದುಕಿನ ವಿಷಯವನ್ನು ತಿಳಿಸುವ ಪ್ರಯತ್ನ ಈ ಚಿತ್ರದ ಮೂಲಕ ಮಾಡುತ್ತಿದ್ದೇವೆ. ಭರತ್ ಸೂರ್ಯ “ಕೊರಗಜ್ಜ” ನ ಪಾತ್ರದಲ್ಲಿ ಕಾಣಿಸಿಕೊಳುತ್ತಿದ್ದಾರೆ. ಕಬೀರ್ ಬೇಡಿ, ಶೃತಿ, ಭವ್ಯ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ವಿದ್ಯಾಧರ್ ಶೆಟ್ಟಿ ಸಂಕಲನದ ಜೊತೆಗೆ  ಇತಿಹಾಸದ ದಾಖಲೆ ಮತ್ತು ಪುರಾವೆಗಳನ್ನು ಕಲೆ ಹಾಕಿದ್ದಾರೆ.  ಪವನ್ ವಿ ಕುಮಾರ್ ಮತ್ತು ಗಣೇಶ್ ಕೆಳಮನೆ ಛಾಯಾಗ್ರಹಣ, ಸುಧೀರ್- ಕೃಷ್ಣ ರವಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ ಎಂದು ಮಾಹಿತಿ ನೀಡಿದ ನಿರ್ದೇಶಕ ಸುಧೀರ್ ಅತ್ತಾವರ್, ಕಲಾ‌ ನಿರ್ದೇಶನವನ್ನು ತಾವೇ ಮಾಡಿರುವುದಾಗಿ ಹೇಳಿದರು.

    ನಮ್ಮ ಕುಟುಂಬದವರಿಗೆ “ಕೊರಗಜ್ಜ” ನ ಮೇಲೆ ವಿಶೇಷ ಭಕ್ತಿ. ಹಾಗಾಗಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದೇವೆ. ಚಿತ್ರತಂಡದ ಪ್ರೋತ್ಸಾಹದಿಂದ ಚಿತ್ರ ಉತ್ತಮವಾಗಿ ಮೂಡಿ ಬರುತ್ತಿದೆ. ಅಂದುಕೊಂಡಂತೆ ಆದರೆ, ಏಪ್ರಿಲ್ ಅಥವಾ ಮೇ ನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದರು ನಿರ್ಮಾಪಕ ತ್ರಿವಿಕ್ರಮ ಸಪಲ್ಯ. ಕಬೀರ್ ಬೇಡಿ ಅವರಂತಹ ಮಹಾನ್ ನಟನ ಜೊತೆ ಅಭಿನಯಿಸಿದ್ದು ತುಂಬಾ ಸಂತೋಷವಾಗಿದೆ. ನಾನು ಈ ಚಿತ್ರದಲ್ಲಿ ರಾಣಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಸುಧೀರ್ ಅತ್ತಾವರ್ ಒಳ್ಳೆಯ ಚಿತ್ರ ನಿರ್ದೇಶಿಸುತ್ತಿದ್ದಾರೆ. ನಿಮ್ಮೆಲ್ಲರ ಬೆಂಬಲವಿರಲಿ ಎಂದರು ಹಿರಿಯ ನಟಿ ಭವ್ಯ.

    Live Tv
    [brid partner=56869869 player=32851 video=960834 autoplay=true]

  • ‘ಕಾಂತಾರ’ ನಂತರ ಕೊರಗಜ್ಜ ದೈವದ ನೈಜಕಥೆ

    ‘ಕಾಂತಾರ’ ನಂತರ ಕೊರಗಜ್ಜ ದೈವದ ನೈಜಕಥೆ

    ತ್ರಿವಿಕ್ರಮ್ ಸಪಲ್ಯ  ನಿರ್ಮಿಸುತ್ತಿರುವ , ಸುಧೀರ್ ಅತ್ತಾವರ್ ನಿರ್ದೇಶನದಲ್ಲಿ “ಕರಿ ಹೈದ….ಕರಿ ಅಜ್ಜ …”.ಸಿನೆಮಾದ ಮುಹೂರ್ತ ಸಮಾರಂಭವು  ಅದ್ದೂರಿಯಾಗಿ ನೆರವೇರಿತು. ಬೆಳ್ತಂಗಡಿ ತಾಲೂಕಿನ  ಬಳ್ಳಮಂಜದ ಇತಿಹಾಸ ಪ್ರಸಿದ್ಧ  ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಸ್ಥಳಿಯ ಶಾಸಕ ಶ್ರೀ ಹರೀಶ್ ಪೂಂಜ ರವರು ಕ್ಯಾಮರ ಚಾಲನೆ ಮಾಡುವುದರ ಮೂಲಕ ಅದ್ದೂರಿ ಚಾಲನೆ ನೀಡಿದರು. ಮಾತ್ರಶ್ರೀ ಕಮಲ ಕೆ ಸಪಲ್ಯ ಆರಂಭ ಫಲಕ ತೋರಿಸಿದರು. ಇತ್ತೀಚಿನ ಹಲವಾರು ವರ್ಷಗಳಿಂದ  ಕೊರಗಜ್ಜನ ಮಹಿಮೆ ಮತ್ತು ಕಾರ್ಣಿಕವನ್ನು ತೆರೆಯ ಮೇಲೆ ತರಬೇಕೆಂಬ ಸಹವಾಸವನ್ನು  ಹಲವಾರು ನಿರ್ಮಾಪಕರು ಯತ್ನಿಸುತ್ತಿದ್ದರು. ಇದೀಗ ಸುಧೀರ್ ಅತ್ತಾವರ್ ಕೊರಗಜ್ಜ ನ ಜೀವನದ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಿ, ಕೊರಗಜ್ಜನ ಜನಾಂಗದ ಮಹನೀಯರೊಂದಿಗೆ ಚರ್ಚಿಸಿ, ಸುಮಾರು 12ನೇ ಶತಮಾನದಲ್ಲಿದ್ದ ಕೊರಗಜ್ಜನ  ನಿಜ ಬದುಕಿನ ಯಾರಿಗೂ ತಿಳಿದಿರದಂತಹ ಸಾಕಷ್ಟು ವಿಷಯಗಳನ್ನು ಈ ಸಿನಿಮಾದ ಮೂಲಕ ಜಗತ್ತಿಗೆ ತೋರಿಸುವ ಪ್ರಯತ್ನ ಮಾಡುತ್ತಿದ್ದಾರೆ.

    ಇತ್ತೀಚೆಗೆ  ಸುಧೀರ್ ನಿರ್ದೇಶನದ ಮರಾಠಿ -ಕನ್ನಡ ಸಿನಿಮಾ ಶೂಟಿಂಗ್ ಸಂಪೂರ್ಣ ಗೊಂಡು, ಅರೇಬಿಕ್- ಇಂಗ್ಲಿಷ್ ಸಿನೆಮ ಸಿನಿಮಾ “ಗುಲೇ ಬಕಾವಲಿ” ಮತ್ತು ಮರಾಠಿ-ಕನ್ನಡ ಸಿನಿಮಾ  “ಅಗೋ ಳಿ ಮಂಜಣ್ಣ” ಫ್ಲೋರ್ ನಲ್ಲಿ ಇರುವ ಮಧ್ಯೆಯೇ ಇದೀಗ ಸುಧೀರ್ ಮತ್ತೊಂದು ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಮುಹೂರ್ತ ನಡೆಸುವ ಮೊದಲು ಕೊರಗಜ್ಜನ ಸಮುದಾಯದ ಪ್ರಮುಖ ವ್ಯಕ್ತಿಗಳು  ಡೊಳ್ಳು -ತಮಟೆಗಳ ಸ ವಿಶೇಷ  ಪೂಜೆಯನ್ನು ಶ್ರೀ ಸುಂದರ ಬೆಳುವಾಯಿ, ಶ್ರೀ ಬಾಬು ಪಾಂಗಳ, ಶ್ರೀ ಬಲ್ ರಾಜ್, ಶ್ರೀ ರಮೇಶ್ ಮೊದಲಾದ ಮಹನೀಯರು ಮತ್ತು ಗುರಿಕಾರರು ಹಳೆಯ ಶೈಲಿಯ ಪೂಜಾ ಕಾರ್ಯಕ್ರಮವನ್ನು ನಡೆಸಿಕೊಟ್ಟು ಸಿನೆಮಾಕ್ಕೆ ಶುಭ ಹಾರೈಸಿದರು. ಇದನ್ನೂ ಓದಿ: ಅಜ್ಞಾತ ಸಖಿ ಸಹವಾಸ, ಲಕ್ಷ ಲಕ್ಷ ಗೋತ – ಬಣ್ಣದ ಮಾತಿನಿಂದ 41 ಲಕ್ಷ ಪೀಕಿದ ಮಾಯಾಂಗನೆ!

    ಖ್ಯಾತ ಹಾಲಿವೂಡ್-ಬಾಲಿವೂಡ್ ನಟ  ಕಬೀರ್ ಬೇಡಿ ಯವರು ವಿಶೇಷ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರದಲ್ಲಿ ಖ್ಯಾತ ನಾಟಿಯರಾದ ಭವ್ಯ ಮತ್ತು ಶ್ರುತಿ ಕೂಡಾ ಅಭಿನಯಿಸುತ್ತಿದ್ದಾರೆ.  ಭರತ್ ಸೂರ್ಯ ಎನ್ನುವ ಹೊಸ ಕಲಾವಿದನನ್ನು ಈ ಚಿತ್ರದ ಮೂಲಕ ಪರಿಚಯಿಸುತ್ತಿದ್ದಾರೆ. ವಿದ್ಯಾಧರ್ ಶೆಟ್ಟಿ ಸಂಕಲನದ ಜೊತೆಗೆ ಎಂಟುನೂರು ವರ್ಷಗಳ ಇತಿಹಾಸದ ದಾಖಲೆ ಮತ್ತು ಪುರಾವೆಗಳನ್ನು ಕಲೆ ಹಾಕುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಪವನ್ ವಿ ಕುಮಾರ್ ಮತ್ತು ಗಣೇಶ್ ಕೆಳಮನೆ ಕ್ಯಾಮರಾ, ಸುಧೀರ್- ಕ್ರಷ್ಣ ರವಿ ಸಂಗೀತ, ಸುಧೀರ್ ಅತ್ತಾವರ್ ಕಲೆ ಚಿತ್ರಕ್ಕಿದೆ.  ತ್ರಿವಿಕ್ರಮ ಬೆಳ್ತಂಗಡಿ ನಿರ್ಮಾಣದ  ನಾಲ್ಕನೆಯ ಸಿನೆಮಾ

    Live Tv
    [brid partner=56869869 player=32851 video=960834 autoplay=true]

  • ಹಾಲಿವುಡ್ ಹಾಗೂ ಬಾಲಿವುಡ್ ನಟ ಕಬೀರ್ ಬೇಡಿ ಹಂಟರ್ ಆಗಿ ಕನ್ನಡಕ್ಕೆ ಎಂಟ್ರಿ

    ಹಾಲಿವುಡ್ ಹಾಗೂ ಬಾಲಿವುಡ್ ನಟ ಕಬೀರ್ ಬೇಡಿ ಹಂಟರ್ ಆಗಿ ಕನ್ನಡಕ್ಕೆ ಎಂಟ್ರಿ

    ಅಂತರರಾಷ್ಟ್ರೀಯ  ಖ್ಯಾತಿಯ ಹಾಲಿವುಡ್ ಹಾಗೂ ಬಾಲಿವುಡ್ ನಟ ಕಬೀರ್ ಬೇಡಿ (Kabir Bedi) ಅವರು ಮೊಟ್ಟಮೊದಲ ಬಾರಿಗೆ ವಿನಯ್ (Vinay) ನಿರ್ದೇಶನದ “ಹಂಟರ್” (Hunter) ಕನ್ನಡ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಹಾಲಿವುಡ್ ನಲ್ಲಿ ಹಲವಾರು ಸಿನಿಮಾಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ಕಬೀರ್ ಬೇಡಿ ಅಲ್ಲಿ ಜೇಮ್ಸ ಬಾಂಡ್, ಮೈಕಲ್ ಕೇನ್ ಮೊದಲಾದ ಖ್ಯಾತ ನಾಮರೊಂದಿಗೆ ಅಭಿನಯಿಸಿರುತ್ತಾರೆ.  ಇದೀಗ ನಿರ್ಮಾಪಕ  ತ್ರಿವಿಕ್ರಮ ಸಪಲ್ಯ ರವರು ನಮ್ಮ ಭಾಷೆಯ ಚಿತ್ರಕ್ಕೂ ಅವರನ್ನು ಪರಿಚಯಿಸಿರುವುದು ಚಿತ್ರದ ಕುತೂಹಲವನ್ನು ಹೆಚ್ಚಿಸಿದೆ.

    ಪ್ಯಾನ್ ಇಂಡಿಯಾ ಮಾದರಿಯ ಈ ಸಿನಿಮಾದಲ್ಲಿ ನಿರಂಜನ್ ಮತ್ತು ಸೌಮ್ಯ ಮೆನನ್ ನಾಯಕ-ನಾಯಕಿಯರಾಗಿದ್ದು ಪ್ರಕಾಶ್ ರಾಜ್, ನಾಝರ್ ಮತ್ತು ಸುಮನ್ ಪ್ರಧಾನ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.   ಯುರೋಪ್ ನಾದ್ಯಂತ ಧೂಳೆಬ್ಬಿಸಿದ್ದ ನಂಬರ್ 1 ಟಿವಿ ಸೀರಿಸ್ “ಸಂದೋಕನ್” ನಲ್ಲಿ  ನಟಿಸಿದ್ದ ಬೇಡಿಯವರಿಗೆ      ಕಳೆದ  ಸೆಪ್ಟೆಂಬರ್ ನಲ್ಲಿ ಇಟೆಲಿಯ ವೆನಿಸ್ ನಲ್ಲಿ  “Life time achievement award” ಬಂದ ನಂತರ, ಇದೇ ಮೊದಲ ಬಾರಿಗೆ ಚಿತ್ರ ವೊಂದರಲ್ಲಿ ಅಭಿನಯಿಸಿರುತ್ತಾರೆ. ಅದೂ ನಮ್ಮ ಕನ್ನಡ ಭಾಷೆಯ ಚಿತ್ರ. ಇದನ್ನೂ ಓದಿ:ರಿಲೇಶನ್ ಶಿಪ್ ಇಟ್ಕೊಳ್ಳೋಕೆ ಬಿಗ್ ಬಾಸ್ ಮನೆಗೆ ಬಂದಿಲ್ಲ ಎಂದು ಕಣ್ಣೀರಿಟ್ಟ ನಟಿ ಮಯೂರಿ

    ಇದಲ್ಲದೆ ಕಬೀರ್ ಬೇಡಿಯವರು ತ್ರಿವಿಕ್ರಮ ಸಾಪಲ್ಯರವರ ಮತ್ತೊಂದು ಚಿತ್ರದಲ್ಲೂ ಅಭಿನಯಿಸುತ್ತಿರುವ ಮಾಹಿತಿ ಹೊರಬಿದ್ದಿದೆ. ಅಕ್ಟೋಬರ್ 7 ರಿಂದ ಚಿತ್ರೀಕರಣ ಆರಂಭಗೊಳ್ಳಲಿರುವ ಸುಮಾರು 800 ವರ್ಷಗಳ ಹಿಂದಿನ ಕಥೆಯಾಧಾರಿತ ಪಿರಿಯಾಡಿಕ್ ಸಿನಿಮಾದಲ್ಲಿ  ಬೆಂಗಾಲಿ ನಟ ಸೌಮಿಕ್ ಚಟರ್ಜಿ ಪ್ರಮುಖ ಪಾತ್ರದಲ್ಲಿದ್ದು  ಕನ್ನಡದ ಖ್ಯಾತ ಹಿರಿಯ ನಟಿಯರಾದ ಶ್ರುತಿ ಹಾಗೂ  ಭವ್ಯ  ಮುಖ್ಯ ಪಾತ್ರಗಳಲ್ಲಿ  ಅಭಿನಯಿಸುತ್ತಿದ್ದಾರೆ.

    ಒಟ್ಟಿನಲ್ಲಿ ತ್ರಿವಿಕ್ರಮ (Trivikram) ರವರು  ಎರಡು ಸಿನಿಮಾಗಳನ್ನು ಜಂಟಿಯಾಗಿ ಚಿತ್ರೀಕರಿಸಿ, ಅದೆರಡರಲ್ಲೂ ಕಬೀರ್ ಬೇಡಿಯಂತಹ ವಿಶ್ವದ ಪ್ರಖ್ಯಾತ ನಟನನ್ನು ಕರೆತಂದು ಚಿತ್ರರಂಗದಲ್ಲಿ ಹೊಸ ಸಂಚಲನ ಸ್ರಷ್ಟಿಸಿರುತ್ತಾರೆ.  ಅವರೊಬ್ಬ ದಿಟ್ಟ ನಿರ್ಮಾಪಕ ಎನ್ನುವುವುದಕ್ಕೆ ಇದು ಸಾಕ್ಷಿ.

    Live Tv
    [brid partner=56869869 player=32851 video=960834 autoplay=true]

  • ನಂಬರ್ ಕೇಳಿದ ಹಿರಿಯ ನಟನಿಗೆ ಸನ್ನಿ ಕೊಟ್ಟ ಉತ್ತರವೇನು ಗೊತ್ತಾ?

    ನಂಬರ್ ಕೇಳಿದ ಹಿರಿಯ ನಟನಿಗೆ ಸನ್ನಿ ಕೊಟ್ಟ ಉತ್ತರವೇನು ಗೊತ್ತಾ?

    ಬೆಂಗಳೂರು: ಸನ್ನಿ ಲಿಯೋನ್ ಪಡ್ಡೆ ಹುಡುಗರ ಮನದರಸಿ ಎಂಬುದು ತಿಳಿದಿರುವ ವಿಚಾರ. ಆದರೆ ವಯಸ್ಸಾದವರಿಗೂ ಸನ್ನಿ ಅಷ್ಟೇ ಫೇವರಿಟ್ ಎಂಬುದು ಇದೀಗ ತಿಳಿದಿದೆ. ಎಲ್ಲ ವಯೋಮಾನದವರೂ ಸನ್ನಿಗೆ ಫಿದಾ ಆಗಿದ್ದಾರೆ ಎನ್ನುವುದಕ್ಕೆ ಇಲ್ಲೊಂದು ಉದಾಹರಣೆ ಸಿಕ್ಕಿದೆ.

    ಹೌದು, ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ನಟಿ ಸನ್ನಿ ಲಿಯೋನ್ ಭಾಗವಹಿಸಿದ್ದರು. ಅವರನ್ನು ನೋಡಲು ಅನೇಕರು ಜಮಾಯಿಸಿದ್ದರು. ಜೊತೆಗೆ ಬಾಲಿವುಡ್ ಸೆಲೆಬ್ರಿಟಿಗಳ ದೊಡ್ಡ ಬಳಗವೇ ಅಲ್ಲಿ ನೆರೆದಿತ್ತು. ಇದೇ ಸಮಯ ಬಳಸಿಕೊಂಡ ಹಿರಿಯ ನಟ ಕಬೀರ್ ಬೇಡಿ ಪ್ಲ್ಯಾನ್ ಮಾಡಿದರು. ಕಾರ್ಯಕ್ರಮದಲ್ಲಿ ಖುಷಿಯಿಂದ ಓಡಾಡಿಕೊಂಡಿದ್ದ ಸನ್ನಿ ಲಿಯೋನ್ ಬಳಿಗೆ ತೆರಳಿ ‘ನಿಮ್ಮ ಫೋನ್ ನಂಬರ್ ಕೊಡಿ’ ಎಂದು ಕೇಳಿಯೇ ಬಿಟ್ಟರು.

    ಇದ್ದಕ್ಕಿದ್ದಂತೆ ಯಾರೋ ಫೋನ್ ನಂಬರ್ ಕೇಳಿದರೆ ವಿಚಲಿತರಾಗುವುದು ಸಾಮಾನ್ಯ. ಆದರೆ ಸನ್ನಿ ಲಿಯೋನ್ ಈ ಸಂದರ್ಭವನ್ನು ಉತ್ತಮವಾಗಿಯೇ ನಿಭಾಯಿಸಿದರು. 74 ವರ್ಷದ ನಟ ಕಬೀರ್ ಬೇಡಿ ಹೀಗೆ ಎಲ್ಲರ ಸಮ್ಮುಖದಲ್ಲಿ ಫೋನ್ ನಂಬರ್ ಕೇಳಿದಾಗ ಸನ್ನಿ ಲಿಯೋನ್ ಕಿಂಚಿತ್ತೂ ವಿಚಲಿತರಾಗಲೇ ಇಲ್ಲ. ಅಲ್ಲದೆ ಇಂಥ ಸಂದರ್ಭಗಳನ್ನು ಹೇಗೆ ಹ್ಯಾಂಡಲ್ ಮಾಡಬೇಕು ಎಂಬುದು ಅವರಿಗೆ ಚೆನ್ನಾಗಿ ಕರಗತ ಆದಂತಿದೆ. ಕಬೀರ್ ಮನವಿಯನ್ನು ತುಂಬ ಕೂಲ್ ಆಗಿಯೇ ಸನ್ನಿ ಸ್ವೀಕರಿದರು. ಆದರೆ ತಮ್ಮ ನಂಬರ್ ಕೊಡುವ ಬದಲಿಗೆ ಪತಿ ಡೇನಿಯಲ್ ವೆಬ್ಬರ್ ಅವರ ಫೋನ್ ನಂಬರ್ ನೀಡಿ ಕೈ ತೊಳೆದುಕೊಂಡರು.

    ಇನ್ನು, ಈ ಸಂದರ್ಭದಲ್ಲಿ ಕಬೀರ್ ಬೇಡಿಯವರ ಖಾಸಗಿ ಬದುಕಿನ ಬಗ್ಗೆ ಮೆಲುಕು ಹಾಕುವುದಾದರೆ, ಅವರು ನಾಲ್ಕು ಮದುವೆ ಆಗಿದ್ದಾರೆ. ಇತ್ತೀಚೆಗೆ ತಮ್ಮ 70ನೇ ವಯಸ್ಸಿನಲ್ಲಿ ಬಹುಕಾಲದ ಗೆಳತಿ ಪರ್ವೀನ್ ದುಸಾಂಜ್ ಜೊತೆ ನಾಲ್ಕನೇ ಮದುವೆ ಆಗುವ ಮೂಲಕ ಎಲ್ಲರಿಗೂ ಅವರು ಶಾಕ್ ನೀಡಿದ್ದರು.