Tag: ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ

  • ಕುಮಾರಸ್ವಾಮಿಯವರ ಹೇಳಿಕೆ ಸ್ವಾಗತಿಸುತ್ತೇನೆ: ದಿನೇಶ್ ಕಲ್ಲಹಳ್ಳಿ

    ಕುಮಾರಸ್ವಾಮಿಯವರ ಹೇಳಿಕೆ ಸ್ವಾಗತಿಸುತ್ತೇನೆ: ದಿನೇಶ್ ಕಲ್ಲಹಳ್ಳಿ

    ಬೆಂಗಳೂರು: ನಾನು ಕುಮಾರಸ್ವಾಮಿಯವರ ಹೇಳಿಕೆಯನ್ನು ಸ್ವಾಗತ ಮಾಡುತ್ತೇನೆ. ಯಾರು ಬ್ಲ್ಯಾಕ್‍ಮೇಲ್ ಮಾಡುತ್ತಿದ್ದಾರೋ ಅವರನ್ನು ಈ ಕೂಡಲೇ ಬಂಧಿಸಬೇಕು ಎಂದು ದಿನೇಶ್ ಕಲ್ಲಹಳ್ಳಿಯವರು ಹೇಳಿದ್ದಾರೆ.

    ಇಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ ವೈಯಕ್ತಿಕವಾಗಿ ಯಾವುದೇ ಭದ್ರತೆ ನೀಡಿರಲಿಲ್ಲ, ಕೇವಲ ಮನೆಗೆ ಮಾತ್ರ ಭದ್ರತೆ ನೀಡಿದ್ದರು. ಆದರೆ ಇಂದು ಭದ್ರತೆ ಒದಗಿಸಿದ್ದಾರೆ ಹಾಗಾಗಿ ತನಿಖೆಗೆ ಸಹಕಾರ ನೀಡುವ ಸಲುವಾಗಿ ವಿಚಾರಣೆಗೆಂದು ಠಾಣೆಗೆ ಬಂದಿದ್ದೇನೆ ಎಂದರು.

    ನಾನು ಕುಮಾರಸ್ವಾಮಿಯವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಯಾರು ಬ್ಲಾಕ್‍ಮೇಲ್ ಮಾಡುತ್ತಿದ್ದರೋ ಅವರನ್ನು ಈ ಕೂಡಲೇ ಬಂಧಿಸಬೇಕು ಎಂದು ತಿಳಿಸಿದರು. ಇನ್ನೂ ಸಂತ್ರಸ್ತೆ ವಿಚಾರವಾಗಿ ಮಾತನಾಡಿದ ಅವರು, ನನಗೆ ಬಂದ ಮಾಹಿತಿಯನ್ನು ಪಡೆದು ದೂರು ಉಲ್ಲೇಖಿಸಿದ್ದೇನೆ. ಪೊಲೀಸ್ ಇಲಾಖೆಯವರು ತನಿಖೆ ಮಾಡಿ ಉಳಿದ ಮಾಹಿತಿಯನ್ನು ಪತ್ತೆ ಮಾಡಬೇಕು. ಈಗಾಗಲೇ ಎಲ್ಲವನ್ನು ದೂರಿನಲ್ಲಿ ಸ್ಪಷ್ಟವಾಗಿ ತಿಳಿಸಿಲಾಗಿದೆ. ಸತ್ಯಾಸತ್ಯತೆಯನ್ನು ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳಬೇಕೆಂದು ಎಂದು ಹೇಳಿದರು

    ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸಿನವರು ಉತ್ತಮವಾಗಿ ತನಿಖೆ ಮಾಡುತ್ತಿದ್ದಾರೆ. ತನಿಖೆ ಪೂರಕವಾಗಿ ಏನು ನೀಡಬೇಕೆಂದು ನಂತರ ನಾನು ತಿಳಿಸುತ್ತೇನೆ ಎಂದು ನುಡಿದರು.

  • ಶಾಸಕ ಹ್ಯಾರಿಸ್ ಮಗನಿಂದ ಹಲ್ಲೆ ಪ್ರಕರಣ- ಹಲ್ಲೆಗೊಳಗಾದ ಯುವಕನ ಮೇಲೂ ಎಫ್‍ಐಆರ್

    ಶಾಸಕ ಹ್ಯಾರಿಸ್ ಮಗನಿಂದ ಹಲ್ಲೆ ಪ್ರಕರಣ- ಹಲ್ಲೆಗೊಳಗಾದ ಯುವಕನ ಮೇಲೂ ಎಫ್‍ಐಆರ್

    ಬೆಂಗಳೂರು: ಶಾಂತಿನಗರ ಎಂಎಲ್‍ಎ ಹ್ಯಾರಿಸ್ ಮಗ ಮಹಮ್ಮದ್ ನಲಪಾಡ್ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದ್ದು, ಇದೀಗ ಹಲ್ಲೆಗೊಳಗಾದ ವಿದ್ವತ್ ಮೇಲೆಯೂ ಪೊಲೀಸರು ಎಫ್‍ಐ ಆರ್ ದಾಖಲಿಸಿದ್ದಾರೆ.

    ಯುವಕನ ಮೇಲೆ ಕಬ್ಬನ್‍ಪಾರ್ಕ್ ಪೊಲೀಸರು ಎಫ್‍ಐಆರ್ ದಾಖಲು ಮಾಡಿಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

    ವಿದ್ವತ್- ಹಲ್ಲೆಗೊಳಗಾದ ಯುವಕ.

    ಫೆ.17ರಂದು ವಿದ್ವತ್ ತನ್ನ ಸ್ನೇಹಿತರೊಂದಿಗೆ ಊಟ ಮಾಡಲು ಬಂದಿದ್ದರು. ಈ ವೇಳೆ ವಿದ್ವತ್ ಕಾಲು ನಾಲಪ್ಪಾಡ್ ಸ್ನೇಹಿತನಿಗೆ ತಗುಲಿದ್ದಕ್ಕೆ ಜಗಳವಾಗಿತ್ತು. ಜಗಳದ ಸಮಯದಲ್ಲಿ ನಾನು ಯಾರು ಗೊತ್ತಾ..? ನನ್ನನ್ನು ಕೇಳಲು ನೀನು ಯಾರು ನನ್ನಪ್ಪ ಯಾರು ಗೊತ್ತಾ ಎಂದು ವಿದ್ವತ್ ಪ್ರಶ್ನಿಸಿದ್ದರು. ಅಲ್ಲದೇ ವಿದ್ವತ್ ಹಾಗೂ ಸ್ನೇಹಿತರು ಏಕಾಏಕಿ ಅರುಣ್ ಬಾಬು ಮೇಲೆ ಹಲ್ಲೆ ಮಾಡಿದ್ದರು. ಅವಾಚ್ಯ ಶಬ್ದಗಳಿಂದ ಕೂಡ ನಿಂದನೆ ಮತ್ತು ಜೀವ ಬೆದರಿಕೆ ಆರೋಪ ಮಾಡಲಾಗಿದೆ.

    ಉದ್ಯಮಿ ಲೋಕಿ ಅಲಿಯಾಸ್ ಲೋಕನಾಥನ್ ಪುತ್ರ ವಿದ್ವತ್, ಅತಿಯಾಗಿ ಕುಡಿದಿದ್ದರಿಂದ ಸ್ವತಃ ಬಿದ್ದು ಮುಖಕ್ಕೆ ಗಾಯವಾಗಿದೆ ಎಂದು ಅರುಣ್ ಬಾಬು ದೂರು ನೀಡಿದ್ದರು. ಆದ್ರೆ ಮಲ್ಯ ಆಸ್ಪತ್ರೆಯಲ್ಲಿ ವಿದ್ವತ್ ವೈದ್ಯಕೀಯ ತಪಾಸಣೆ ನಡೆಸಿರೋ ವೈದ್ಯರು, ವಿದ್ವತ್ ಮದ್ಯ ಸೇವನೆ ಮಾಡಿಲ್ಲ ಎಂದು ಹೇಳಿದ್ದರು.

    ಸದ್ಯ ಪ್ರಕರಣ ಸಂಬಂಧಿಸಿದಂತೆ ಎ1 ಆರೋಪಿ ಮಹಮ್ಮದ್ ನಲಪಾಡ್ ಕಬ್ಬನ್ ಪಾರ್ಕ್ ಪೊಲೀಸರಿಗೆ ಶರಣಾಗಿದ್ದು, ಈತನ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

    ಎಲ್ಲಿದ್ದ ನಲಪಾಡ್?: ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣ ಸಂಬಂಧ ಕೇಸ್ ದಾಖಲಾಗುತ್ತಿದ್ದಂತೆ ನಲಪಾಡ್ ಎಸ್ಕೇಪ್ ಆಗಿದ್ದು, ಕಬ್ಬನ್‍ಪಾರ್ಕ್ ಠಾಣೆ ಕೂಗಳತೆಯಲ್ಲೇ ಅಡಗಿಕೊಂಡಿದ್ದನು. ಯುಬಿ ಸಿಟಿ ಪಕ್ಕದಲ್ಲಿರುವ ಐಷಾರಾಮಿ 7 ಸ್ಟಾರ್ ಹೋಟೆಲ್‍ನ ರೂಂ ನಂಬರ್ 882 ನಲ್ಲಿ ಯಾವುದೇ ಭಯವಿಲ್ಲದೇ ಪಾರ್ಟಿಯೊಂದಲ್ಲಿ ಪಾಲ್ಗೊಂಡಿದ್ದನು. ಇದೀಗ ಅಪ್ಪ ಮಾಧ್ಯಮದ ಮುಂದೆ ಮಾತನಾಡಿದ ಕೇವಲ ಒಂದು ಗಂಟೆಯಲ್ಲಿಯೇ ಕಬ್ಬನ್ ಪಾರ್ಕ್ ಪೊಲೀಸರಿಗೆ ಶರಣಾಗಿರೋ ನಲಪಾಡ್ ವಿರುದ್ಧ ಸೆಕ್ಷನ್ 307 ಅಡಿ (ಕೊಲೆ ಯತ್ನ) ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಇಂದು ಆರೋಪಿ ನಲಪಾಡ್ ನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

  • ಅಪ್ಪ ಹೇಳಿದ 1ಗಂಟೆಯಲ್ಲೇ ಮಗ ಸರೆಂಡರ್ – ನಲಪಾಡ್‍ಗೆ ಜ್ಯೂಸ್ ನೀಡಿ ರಾಜಮರ್ಯಾದೆ ಕೊಟ್ಟ ಪೊಲೀಸರು!

    ಅಪ್ಪ ಹೇಳಿದ 1ಗಂಟೆಯಲ್ಲೇ ಮಗ ಸರೆಂಡರ್ – ನಲಪಾಡ್‍ಗೆ ಜ್ಯೂಸ್ ನೀಡಿ ರಾಜಮರ್ಯಾದೆ ಕೊಟ್ಟ ಪೊಲೀಸರು!

    ಬೆಂಗಳೂರು: ಪ್ರಭಾವಿ ಶಾಸಕ ಹ್ಯಾರಿಸ್ ಗೂಂಡಾ ಪುತ್ರ ಮಹಮ್ಮದ್ ನಲಪಾಡ್ ನ ಗೂಂಡಾಗಿರಿ ಪ್ರಕರಣ ಸಂಬಂಧ ಕಳೆದ 36 ಗಂಟೆಗಳಿಂದ ತಲೆ ಮರೆಸಿಕೊಂಡಿದ್ದ ನಲಪಾಡ್‍ನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

    ಇಂದು ಬೆಳಗ್ಗೆ ಹ್ಯಾರಿಸ್‍ರ ಶಾಂತಿನಗರ ನಿವಾಸಕ್ಕೆ ಅಶೋಕನಗರ ಪೊಲೀಸರು ಭೇಟಿ ಹುಟುಕಾಟ ನಡೆಸಿದ್ರು. ಈ ವೇಳೆ ನನ್ನ ಮಗನಿಗೆ ಶರಣಾಗಲು ಹೇಳಿದ್ದೇನೆ ಅಂತ ಶಾಸಕರು ಹೇಳಿದ್ದರು. ಶಾಸಕರು ಮಾತನಾಡಿದ ಕೇವಲ 1 ಗಂಟೆಯಲ್ಲಿ ವಿವಿಐಪಿ ಗೂಂಡಾ ಮಗ ನಲಪಾಡ್‍ನನ್ನು ಕಬ್ಬನ್‍ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಆತನಿಗೆ ರಾಜ ಮರ್ಯಾದೆ ಕೊಟ್ಟು ಕರೆದುಕೊಂಡು ಬಂದಿದ್ದಾರೆ. ಬಳಿಕ ಠಾಣೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಎದುರೇ ಕುಳ್ಳಿರಿಸಿ ನೋಡಲು ಟಿವಿ, ಕುಡಿಯಲು ಜ್ಯೂಸ್ ವ್ಯವಸ್ಥೆ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣ: ಕೊನೆಗೂ ಪೊಲೀಸರಿಗೆ ಶರಣಾದ ಶಾಸಕ ಹ್ಯಾರಿಸ್ ಪುತ್ರ

    ಹ್ಯಾರಿಸ್ ಮನೆಯಿಂದ ಹೊರಬಂದ ಕಾರಿನಲ್ಲೇ ನಲಪಾಡ್ ಠಾಣೆ ಕಡೆ ತೆರಳಿದ್ದ ಎನ್ನಲಾಗಿದೆ. ಹಾಗಾದ್ರೆ ಬೆಳಗ್ಗೆ ಪೊಲೀಸರು ಮನೆಯಲ್ಲಿ ಹುಡುಕಾಟ ನಡೆಸಿದ್ದು ಸುಳ್ಳಾ..? ಮಗ ಫೋನ್ ಸ್ವಿಚ್ ಆಫ್ ಆಗಿದೆ ಎಂದು ಬೆಳಗ್ಗೆ ಕಥೆ ಕಟ್ಟಿದ್ದ ಹ್ಯಾರಿಸ್ ಗುಟ್ಟಾಗಿ ಮಗನನ್ನು ಠಾಣೆಗೆ ಕಳಿಸಿ ಶರಣಾಗುವಂತೆ ಸೂಚಿಸಿದ್ರಾ..? ಎಂಬ ಅನುಮಾನ ಕಾಡ್ತಿದೆ. ಇದನ್ನೂ ಓದಿ: ಮಗನನ್ನು ನಾನೇ ಸರೆಂಡರ್ ಮಾಡಿಸ್ತೇನೆ- ಪೊಲೀಸರು ಬರ್ತಿದ್ದಂತೆ ಕಥೆ ಕಟ್ಟಿದ ಶಾಸಕ ಹ್ಯಾರಿಸ್

    ಎಲ್ಲಿದ್ದ ನಲಪಾಡ್?: ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣ ಸಂಬಂಧ ಕೇಸ್ ದಾಖಲಾಗುತ್ತಿದ್ದಂತೆ ನಲಪಾಡ್ ಎಸ್ಕೇಪ್ ಆಗಿದ್ದು, ಕಬ್ಬನ್‍ಪಾರ್ಕ್ ಠಾಣೆ ಕೂಗಳತೆಯಲ್ಲೇ ಅಡಗಿಕೊಂಡಿದ್ದನು. ಯುಬಿ ಸಿಟಿ ಪಕ್ಕದಲ್ಲಿರುವ ಐಷಾರಾಮಿ 7 ಸ್ಟಾರ್ ಹೋಟೆಲ್‍ನ ರೂಂ ನಂಬರ್ 882 ನಲ್ಲಿ ಯಾವುದೇ ಭಯವಿಲ್ಲದೇ ಪಾರ್ಟಿಯೊಂದಲ್ಲಿ ಪಾಲ್ಗೊಂಡಿದ್ದನು. ಇದೀಗ ಅಪ್ಪ ಮಾಧ್ಯಮದ ಮುಂದೆ ಮಾತನಾಡಿದ ಕೇವಲ ಒಂದು ಗಂಟೆಯಲ್ಲಿಯೇ ಕಬ್ಬನ್ ಪಾರ್ಕ್ ಪೊಲೀಸರಿಗೆ ಶರಣಾಗಿರೋ ನಲಪಾಡ್ ವಿರುದ್ಧ ಸೆಕ್ಷನ್ 307 ಅಡಿ (ಕೊಲೆ ಯತ್ನ) ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಇಂದು ಆರೋಪಿ ನಲಪಾಡ್ ನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹ್ಯಾರಿಸ್ ಪುತ್ರನಿಂದ ಯುವಕನ ಮೇಲೆ ಹಲ್ಲೆ ಪ್ರಕರಣ- ಆರೋಪಿಗಳನ್ನು ಬಂಧಿಸದಿದ್ದರೆ ಪೊಲೀಸರೇ ನೇರ ಹೊಣೆ: ರಾಮಲಿಂಗಾ ರೆಡ್ಡಿ

    ಯುವಕನ ಮೇಲೆ ರೆಸ್ಟೊರೆಂಟ್ ನಲ್ಲಿ ಹಲ್ಲೆ ನಡೆಸಿದ ಬಳಿಕ ಹ್ಯಾರೀಸ್ ಪುತ್ರ ಮಹಮ್ಮದ್ ನಲಪಾಡ್ ತಲೆಮರೆಸಿಕೊಂಡಿದ್ದನು. ಈ ಕುರಿತು ಇಂದು ಬೆಳಗ್ಗೆ ಶಾಸಕ ಹ್ಯಾರಿಸ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ನನ್ನ ಮಗ ಫೋನ್ ಸ್ವಿಚ್ ಆಫ್ ಮಾಡ್ಕೊಂಡಿದ್ದನು. ನಿನ್ನೆ ರಾತ್ರಿ ಅವ್ನ ಅಮ್ಮನಿಗೆ ಫೋನ್ ಮಾಡಿದ್ದನು. ಆಗ ಸರೆಂಡರ್ ಆಗುವಂತೆ ನಾನೇ ಮಗನಿಗೆ ಹೇಳಿರುವುದಾಗಿ ತಿಳಿಸಿದ್ದರು.

    https://www.youtube.com/watch?v=aQxY3U–B2g