Tag: ಕಬ್ಬಿನ ಗದ್ದೆ

  • ಕಬ್ಬಿನ ಗದ್ದೆಯಲ್ಲಿ ಜೋಡಿಯಿಂದ ಸೆಕ್ಸ್- ಅರೆನಗ್ನ ಮಾಡಿ ಜನರಿಂದ ಮೆರವಣಿಗೆ

    ಕಬ್ಬಿನ ಗದ್ದೆಯಲ್ಲಿ ಜೋಡಿಯಿಂದ ಸೆಕ್ಸ್- ಅರೆನಗ್ನ ಮಾಡಿ ಜನರಿಂದ ಮೆರವಣಿಗೆ

    ರಾಂಚಿ: ಅಪ್ರಾಪ್ತ ಬಾಲಕಿಯೊಬ್ಬಳು ಯುವಕನ ಜೊತೆ ಕಬ್ಬಿನ ಗದ್ದೆಯಲ್ಲಿ ಸೆಕ್ಸ್ ಮಾಡುತ್ತಿರುವುದನ್ನು ನೋಡಿ ಜನರು ಇಬ್ಬರನ್ನು ಅರೆನಗ್ನ ಮಾಡಿ ಪೊಲೀಸ್ ಠಾಣೆಗೆ ಕರೆದುಕೊಂಡ ಹೋದ ಘಟನೆ ಜಾರ್ ಖಂಡ್‍ನ ದುಮ್ಕಾದಲ್ಲಿ ನಡೆದಿದ್ದು, ವಿಡಿಯೋ ಈಗ ವೈರಲ್ ಆಗುತ್ತಿದೆ.

    ಬುಧವಾರ ಸಂತ್ರಸ್ತೆಯ ಸೋದರ ಸಂಬಂಧಿಯ ಮದುವೆ ಇತ್ತು. ಈ ವೇಳೆ ಮನೆಯವರು ಹಾಗೂ ಸಂಬಂಧಿಕರು ಮದುವೆ ಕೆಲಸದಲ್ಲಿ ತೊಡಗಿದ್ದಾಗ ಅಪ್ರಾಪ್ತೆ ಕಬ್ಬಿನ ಗದ್ದೆಯಲ್ಲಿ ಯುವಕನ ಜೊತೆ ದೈಹಿಕ ಸಂಬಂಧ ಬೆಳೆಸುತ್ತಿದ್ದಳು. ಈ ವೇಳೆ ಅಲ್ಲಿಗೆ ಬಂದ ಕೆಲವು ಯುವಕರು ದೈಹಿಕ ಸಂಬಂಧ ಬೆಳೆಸುತ್ತಿದ್ದ ಜೋಡಿಯನ್ನು ನೋಡಿದ್ದಾರೆ. ಬಳಿಕ ಯುವಕರು ಆ ಜೋಡಿಯ ಮೇಲೆ ಹಲ್ಲೆ ನಡೆಸಿ ಅವರ ಬಟ್ಟೆಯನ್ನು ಹರಿದಿದ್ದಾರೆ ಎಂದು ಪೊಲೀಸ್ ಅಧಿಕಾರಿ ವೈ.ಎಸ್ ರಮೇಶ್ ತಿಳಿಸಿದ್ದಾರೆ.

    ಯುವಕರು ಬುಧವಾರ ಜೋಡಿಯನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದರು. ಗುರುವಾರ ಬೆಳಗ್ಗೆ ಆಗುತ್ತಿದ್ದಂತೆ ಅವರಿಬ್ಬರನ್ನೂ ಅರೆನಗ್ನ ಮಾಡಿ ಮಾರ್ಕೆಟ್ ರಸ್ತೆಯ ಮೂಲಕ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಈ ವೇಳೆ ರಸ್ತೆಯಲ್ಲಿ ಇದ್ದ ಜನರು ಜೋಡಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

    ಸರೈಯಾಹಾಟ್ ಪೊಲೀಸರು ಸಂತ್ರಸ್ತೆಯ ಹೇಳಿಕೆಯನ್ನು ಆಧರಿಸಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ಹಾಗೂ ಐಪಿಸಿ ಸೆಕ್ಷನ್ 376(2ಎನ್) ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಅಲ್ಲದೆ ಇದು ನಾಚಿಕೆಗೇಡಿನ ಸಂಗತಿ ಹಾಗೂ ಈ ರೀತಿ ಮಾಡಿದವರನ್ನು ಗುರುತಿಸಿ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ವೈ.ಎಸ್ ರಮೇಶ್ ಅವರು ಪ್ರತಿಕ್ರಿಯಿಸಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಬೆಂಕಿಗೆ 5 ಚಿರತೆ ಮರಿಗಳು ಸಜೀವ ದಹನ!

    ಬೆಂಕಿಗೆ 5 ಚಿರತೆ ಮರಿಗಳು ಸಜೀವ ದಹನ!

    ಪುಣೆ: ಮಹಾರಾಷ್ಟ್ರದ ಗಾಮವೊಂದರ ಕಬ್ಬಿನ ಗದ್ದೆಯಲ್ಲಿ ಹಾವನ್ನು ಸಾಯಿಸಲು ಹಚ್ಚಿದ್ದ ಬೆಂಕಿಯಲ್ಲಿ 5 ಚಿರತೆ ಮರಿಗಳು ಸುಟ್ಟು ಸಜೀವ ದಹನವಾಗಿದೆ. ಪುಣೆಯ ಅಂಬೆಗಾಂವ್ ತಾಲೂಕಿನ ಗವಡೆವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

    ಬುಧವಾರ ಕಬ್ಬು ಕಟಾವು ಕಾರ್ಯ ನಡೆಸುತ್ತಿದ್ದ ವೇಳೆ ಗದ್ದೆಯಲ್ಲಿ ಒಟ್ಟು ಮಾಡಿಟ್ಟಿದ್ದ ಕಸದ ರಾಶಿ ಬಳಿ ವಿಷಕಾರಿ ಹಾವು ಕಂಡುಬಂದಿದ್ದು, ಭಯಗೊಂಡ ರೈತರು ಕಸಕ್ಕೆ ಬೆಂಕಿ ಹಚ್ಚಿದ್ದಾರೆ.

    ಕಸಕ್ಕೆ ಹಚ್ಚಿದ್ದ ಬೆಂಕಿ ಪಕ್ಕದಲ್ಲೇ ಇದ್ದ ಪೊದೆಗೂ ತಗುಲಿದೆ. ಪರಿಣಾಮ ಅದರಲ್ಲಿ ಮಲಗಿದ್ದ ಮೂರು ಹೆಣ್ಣು ಮತ್ತು ಎರಡು ಗಂಡು ಚಿರತೆ ಮರಿಗಳು ಬೆಂಕಿಗೆ ಸುಟ್ಟು ಸಾವನ್ನಪ್ಪಿವೆ.

    ಕಾಡಿನ ಸಮೀಪದಲ್ಲಿ ಈ ಕಬ್ಬಿನ ಗದ್ದೆ ಇರುವ ಕಾರಣಕ್ಕೆ ಕಳೆದ ಮೂರು ವಾರಗಳ ಹಿಂದೆ ಚಿರತೆ ಮರಿಗಳು ಜನಿಸಿರಬಹುದು. ಚಿರತೆ ಮರಿಗಳು ಪೊದೆಯಲ್ಲಿದ್ದ ವಿಚಾರ ಗ್ರಾಮಸ್ಥರಿಗೆ ತಿಳಿದಿರಲಿಲ್ಲ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

    ಈ ಮರಿಗಳಿಗಾಗಿ ತಾಯಿ ಚಿರತೆ ಹುಡುಕಿ ಬರುವ ಸಾಧ್ಯತೆ ಇದ್ದು, ಸುತ್ತಮುತ್ತಲಿನ ಜನರಿಗೆ ಜಾಗ್ರತೆಯಿಂದ ಇರುವಂತೆ ಅರಣ್ಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.