Tag: ಕಮಲಾನಗರ

  • ಬೆಂಗ್ಳೂರಿನ ಕಮಲಾನಗರದಲ್ಲಿ ಕಟ್ಟಡ ಕುಸಿಯೋ ಭೀತಿ!

    ಬೆಂಗ್ಳೂರಿನ ಕಮಲಾನಗರದಲ್ಲಿ ಕಟ್ಟಡ ಕುಸಿಯೋ ಭೀತಿ!

    – ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ, ಪರಿಶೀಲನೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಕಟ್ಟಡ ಕುಸಿಯುವ ಭೀತಿ ಎದುರಾಗಿದೆ. ಯಾವುದೇ ಕ್ಷಣದಲ್ಲಾದ್ರೂ ಕಟ್ಟಡ ಕುಸಿಯುವ ಸಾಧ್ಯತೆಗಳಿವೆ.

    ಹೌದು. ಕಮಲಾನಗರದ ಶಂಕರ್‍ನಾಗ್ ಬಸ್ ನಿಲ್ದಾಣದ ಬಳಿ ಇರುವ ಮೂರು ಅಂತಸ್ತಿನ ಕಟ್ಟಡ ಕುಸಿದು ಬೀಳುವ ಹಂತದಲ್ಲಿದೆ. ರಾಜೇಶ್ವರಿ ಎಂಬುವರಿಗೆ ಸೇರಿದ ಬಿಲ್ಡಿಂಗ್ ಕುಸಿಯುತ್ತಿರುವ ಮುನ್ಸೂಚನೆ ಸಿಗುತ್ತಿದ್ದಂತೆಯೇ ವಾಸವಿದ್ದ 4 ಕುಟುಂಬ ಹೊರಗೆ ಓಡಿ ಬಂದಿದೆ. ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಬಹುಮಹಡಿ ಕಟ್ಟಡ ಕುಸಿತ- ತಪ್ಪಿದ ಭಾರೀ ಅನಾಹುತ

    ಮನೆಯೊಳಗಡೆ ಪಾತ್ರೆ-ಪಗಟೆ, ಬಟ್ಟೆ, ವಸ್ತುಗಳು ಹಾಗೆಯೇ ಇವೆ. ಸದ್ಯ ಈ 4 ಕುಟುಂಬ ದಿಕ್ಕು ತೋಚದೆ ಕಂಗಾಲಾಗಿವೆ. ಇದೇ ಕಟ್ಟಡದಲ್ಲಿ 6 ಕುಟುಂಬಗಳು ವಾಸವಾಗಿದ್ದವು. ಆದರೆ ಶಿಥಿಲಾವಸ್ಥೆಗೊಂಡಿದ್ದ ಕಾರಣ 3 ಮನೆಗಳನ್ನು ಖಾಲಿ ಮಾಡಲಾಗಿತ್ತು. ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ – ದಾವಣಗೆರೆಯಲ್ಲಿ 20ಕ್ಕೂ ಹೆಚ್ಚು ಮನೆಗಳು ಜಲಾವೃತ

    ಸದ್ಯ ಕಟ್ಟಡದಲ್ಲಿ 4 ಕುಟುಂಬಗಳು ವಾಸವಾಗಿವೆ. ಇದೀಗ ಕುಸಿಯುವ ಹಂತದಲ್ಲಿದ್ದು, ಸ್ಥಳಕ್ಕೆ ಬಿಬಿಎಂಪಿ, ಅಧಿಕಾರಿಗಳು ಹಾಗೂ ಎನ್ ಡಿ ಆರ್ ಎಫ್ ನ ನುರಿತ ತಜ್ಞರಿಂದ ಪರಿಶೀಲನೆ ನಂತರ ತೆರವು ಕಾರ್ಯಾಚರಣೆ ನಡೆಯಲಿದೆ. ಕಟ್ಟಡದ ಸುತ್ತಮುತ್ತ ಮನೆಗೆ ಹಾನಿ ಆಗದಂತೆ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.

  • ಮನೆ, ಅಂಗಡಿಗಳ ಬಳಿ ಅಳವಡಿಸಿರೋ ಸಿಸಿಟಿವಿಗಳೇ ಕಳ್ಳನ ಟಾರ್ಗೆಟ್

    ಮನೆ, ಅಂಗಡಿಗಳ ಬಳಿ ಅಳವಡಿಸಿರೋ ಸಿಸಿಟಿವಿಗಳೇ ಕಳ್ಳನ ಟಾರ್ಗೆಟ್

    ಬೆಂಗಳೂರು: ಮನೆ ಮತ್ತು ಅಂಗಡಿಗಳ ಭದ್ರತೆಗಾಗಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿರುವ ಘಟನೆ ನಗರದ ಕಮಲಾನಗರದಲ್ಲಿ ನಡೆದಿದೆ.

    ಕಮಲಾನಗರದ ರಸ್ತೆಯ ಅಂಗಡಿಯೊಂದರ ಬಳಿ ಅಳವಡಿಸಿದ್ದ ಸಿಸಿಟಿವಿಯನ್ನೇ ಕಳ್ಳ ಕದ್ದು ಎಸ್ಕೇಪ್ ಆಗಿದ್ದು, ಕಳ್ಳನ ಕೃತ್ಯ ಅದೇ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಎಂದಿನಂತೆ ಮಾಲೀಕ ಅಂಗಡಿಯನ್ನು ತೆರೆಯುವ ಸಂದರ್ಭದಲ್ಲಿ ಸಿಸಿಟಿವಿ ಕಳುವಾಗಿರುವುದು ಬೆಳಕಿಗೆ ಬಂದಿದೆ.

    ನಡುರಾತ್ರಿಯಲ್ಲಿ ಅಂಗಡಿ ಬಳಿ ಎಂಟ್ರಿ ಕೊಟ್ಟ ಕದೀಮ ಕ್ಯಾಮೆರಾ ಕದ್ದು ಪರಾರಿಯಾಗಿದ್ದು, ಭದ್ರತೆಗಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದ ಶಾಪ್ ಮಾಲೀಕರಿಗೆ ಘಟನೆ ಶಾಕ್ ನೀಡಿದೆ. ಹಲವು ಕಳವು ಹಾಗೂ ಅಪರಾಧ ಪ್ರಕರಣಗಳಲ್ಲಿ ಸಿಸಿಟಿವಿ ದೃಶ್ಯಗಳೇ ಆರೋಪಿಗಳ ಬಂಧನಕ್ಕೆ ನೆರವು ನೀಡಿದೆ. ಆದರೆ ಈ ಪ್ರಕರಣದಲ್ಲಿ ಸಿಸಿಟಿವಿಯೇ ಕಳ್ಳತನವಾಗಿದೆ. ಘಟನೆಯ ಕುರಿತು ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬ್ರೇಕ್ ವೈಫಲ್ಯದಿಂದ ಶೆಡ್‍ಗೆ ನುಗ್ಗಿದ ಟಿಪ್ಪರ್ ಲಾರಿ- ಒಂದೇ ಕುಟುಂಬದ ಇಬ್ಬರು ಸಾವು

    ಬ್ರೇಕ್ ವೈಫಲ್ಯದಿಂದ ಶೆಡ್‍ಗೆ ನುಗ್ಗಿದ ಟಿಪ್ಪರ್ ಲಾರಿ- ಒಂದೇ ಕುಟುಂಬದ ಇಬ್ಬರು ಸಾವು

    ಬೆಂಗಳೂರು: ಬ್ರೇಕ್ ವೈಫಲ್ಯದಿಂದ ಟಿಪ್ಪರ್ ಲಾರಿ ಶೆಡ್‍ಗೆ ನುಗ್ಗಿ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿರುವ ಘಟನೆ ಕಮಲಾ ನಗರದ ವೀರಭದ್ರೇಶ್ವರ ಥಿಯೇಟರ್ ಬಳಿ ನಡೆದಿದೆ.

    ಲಾರಿ ಮಾಲೀಕ ನಟರಾಜ್ ಮತ್ತು ಅವರ ಬಾಮೈದ ವಿನಯ್ ಮೃತ ದುರ್ದೈವಿಗಳು. ಇವರು ದೇವನಹಳ್ಳಿಯ ಕೋಡಿಮಂಜೇನಹಳ್ಳಿಯ ಮೂಲದವರಾಗಿದ್ದಾರೆ.

    ಬುಧವಾರ ಮಧ್ಯರಾತ್ರಿ 11.30 ರ ಸಮಯಕ್ಕೆ ಬಸವೇಶ್ವರನಗರದ ಕಟ್ಟಡವೊಂದರ ನಿರ್ಮಾಣಕ್ಕೆ ಮರಳು ಸರಬರಾಜು ಮಾಡಲು ಲಾರಿ ಬಂದಿದ್ದು, ಬ್ರೇಕ್ ವೈಫಲ್ಯದಿಂದಾಗಿ ಲಾರಿ ಶೆಡ್‍ಗೆ ನುಗ್ಗಿದೆ. ಸಿಕ್ಕಿ ಹಾಕಿಕೊಂಡಿದ್ದ ಲಾರಿಯನ್ನು ಕ್ರೈನ್ ಮತ್ತು ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿ ಮೃತ ದೇಹಗಳನ್ನು ಹೊರತೆಗೆಯಲಾಗಿದೆ.

    ಘಟನೆ ಬಗ್ಗೆ ವಿಜಯನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.