Tag: ಕಮಲ್

  • ಆರ್.ಆರ್.ಆರ್ : ಬಾಕ್ಸ್ ಆಫೀಸ್ ಗಳಿಕೆ ಸುಳ್ಳು ಸುಳ್ಳು ಎಂದ ಬಾಲಿವುಡ್ ಖಾನ್

    ಆರ್.ಆರ್.ಆರ್ : ಬಾಕ್ಸ್ ಆಫೀಸ್ ಗಳಿಕೆ ಸುಳ್ಳು ಸುಳ್ಳು ಎಂದ ಬಾಲಿವುಡ್ ಖಾನ್

    ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಧೂಳ್ ಎಬ್ಬಿಸಿದೆ. ಈವರೆಗಿನ ಎಲ್ಲಾ ದಾಖಲೆಗಳನ್ನು ಅದು ಮುರಿದು ಮುನ್ನುಗ್ಗುತ್ತಿದೆ. ಹತ್ತಿರ ಹತ್ತಿರ ಸಾವಿರ ಕೋಟಿ ಸಮೀಪಕ್ಕೆ ಸಿನಿಮಾ ಬರುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ, ಬಾಲಿವುಡ್ ನ ಸ್ವಯಂ ವಿಮರ್ಶಕ ಕಮಲ್ ಆರ್ ಖಾನ್ ಹೇಳುವುದೇ ಬೇರೆ. ಇದನ್ನೂ ಓದಿ: ಲಹರಿ ಸಂಸ್ಥೆ ಹೊರ ತಂದ ರಿಕ್ಕಿ ಕೇಜ್‌ ಆಲ್ಬಂ ಗ್ರ್ಯಾಮಿ ಪ್ರಶಸ್ತಿಗೆ ನಾಮ ನಿರ್ದೇಶನ

    ಭಾರತೀಯ ಬಹುತೇಕ ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗಿದ್ದು, ಇತರ ದೇಶಗಳ ಭಾಷೆಗಳಿಗೂ ಅದು ಡಬ್ ಆಗಿ ಬಿಡುಗಡೆ ಆಗಿದೆ. ಮೊದಲ ಮೂರು ದಿನಗಳ ಗಳಿಕೆಯಲ್ಲೇ ಅದು ದಾಖಲೆ ನಿರ್ಮಿಸಿತ್ತು. ರಿಲೀಸ್ ಆದ ವಾರದೊಳಗೆ ಹಿಂದಿಯೊಂದರಲ್ಲೇ ಅದು ನೂರು ಕೋಟಿ ಕ್ಲಬ್ ಸೇರಿ ಆಗಿದೆ. ಆದರೆ, ಅದೆಲ್ಲ ಸುಳ್ಳು ಪ್ರಚಾರ ಎಂದು ಕಮಲ್ ಟ್ವೀಟ್ ಮಾಡಿದ್ದಾರೆ. ಓದಿ: ನನ್ನಮ್ಮ ಸೂಪರ್ ಸ್ಟಾರ್’ ಯಶಸ್ಸಿನ ಗರಿಯನ್ನ ಮುಡಿಗೇರಿಸಿಕೊಂಡ ಬಿಜ್ಲಿ ಪಟಾಕಿ ವಂಶಿಕಾ – ಯಶಸ್ವಿನಿ

    ಬಾಲಿವುಡ್ ನ ಸ್ವಯಂ ವಿಮರ್ಶಕ ಖ್ಯಾತಿಯ ಈ ಕಮಲ್ ಆರ್ ಖಾನ್ ಇಂತಹ ಅಚ್ಚರಿಯ ಹೇಳಿಕೆಯನ್ನು  ಕೊಡುವುದು ಇದೇ ಮೊದಲೇನೂ ಅಲ್ಲ. ಬಾಲಿವುಡ್ ನ ಬಹುತೇಕ ಸ್ಟಾರ್ ನಟ ನಟಿಯರನ್ನು ಕಾಲೆಳೆದು ಕಂಗೆಣ್ಣಿಗೆ ಗುರಿಯಾದವರು ಇವರು. ನಿರ್ದೇಶಕರನ್ನೂ, ನಿರ್ಮಾಪಕರನ್ನೂ ಬಿಡದೇ ತಮ್ಮದೇ ಆದ ರೀತಿಯಲ್ಲಿ ಕಟುವಾಗಿ ಟೀಕಿಸುತ್ತಲೇ ಇರುತ್ತಾರೆ ಕಮಲ್. ಇದೀಗ ಆರ್.ಆರ್.ಆರ್ ವಿಷಯದಲ್ಲೂ ಅದನ್ನೇ ಮಾಡಿದ್ದಾರೆ.

     

    ‘ನನ್ನ ಪ್ರಕಾರ ಆರ್.ಆರ್.ಆರ್ ಸಿನಿಮಾವನ್ನು ಜನರು ತಿರಸ್ಕರಿಸಿದ್ದಾರೆ. ಅಷ್ಟೊಂದು ಪ್ರಮಾಣದಲ್ಲಿ ಬಾಕ್ಸ್ ಆಫೀಸ್ ತುಂಬುವುದಕ್ಕೆ ಹೇಗೆ ಸಾಧ್ಯ? ನಿರ್ಮಾಪಕರು ಮತ್ತು ನಿರ್ದೇಶಕರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಅಲ್ಲದೇ, ಈ ಸಿನಿಮಾ 680 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದೆ ಎಂದು ಹೇಳಲಾಗುತ್ತಿದೆ. ಅದು ಕೂಡ ಸುಳ್ಳು. ಜನರಿಗೆ ಬಜೆಟ್ ಅರ್ಥವಾಗಲ್ಲ. ಆ ಪ್ರಮಾಣದಲ್ಲಿ ಈ ಚಿತ್ರಕ್ಕೆ ಹಣ ಹೂಡಿಲ್ಲ ಎಂದು ಮುಂದಿನ ದಿನಗಳಲ್ಲಿ ಸಾಬೀತು ಮಾಡುವುದಾಗಿ’ ನಮ್ಮ ಟ್ವಿಟರ್ ಖಾತೆಯಲ್ಲಿ ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: 20ಕ್ಕೂ ಹೆಚ್ಚು ಕೆಜಿ ತೂಕದ ಕಾಸ್ಟ್ಯೂಮ್‌ ಹಾಕಿಕೊಂಡು ಶೂಟ್ ಮಾಡಿದ್ದು ಕಷ್ಟವಾಗಿತ್ತು ಎಂದ ಮುನ್ನಾಭಾಯಿ

    ಕಮಲ್ ಈ ರೀತಿ ಟ್ವಿಟ್ ಮಾಡುತ್ತಿದ್ದಂತೆಯೇ ರಾಜಮೌಳಿ, ರಾಮ್ ಚರಣ್ ತೇಜ, ಜೂನಿಯರ್ ಎನ್.ಟಿ.ಆರ್ ಮತ್ತು ಆಲಿಯಾ ಭಟ್ ಅಭಿಮಾನಿಗಳು ಒಟ್ಟಾಗಿ ಕಮಲ್ ಮೇಲೆ ಮುಗಿಬಿದ್ದಿದ್ದಾರೆ. ಕಮಲ್ ಕುರಿತಾಗಿ ನಿಂದಿಸಿದ್ದಾರೆ. ಕಮಲ್ ಯಾರು ಎನ್ನುವುದನ್ನೂ ಕೆಲವರು ಬಿಚ್ಚಿಟ್ಟಿದ್ದಾರೆ. ಈಗಾಗಲೇ ಸಾವಿರ ಕೋಟಿ ಕ್ಲಬ್ ಸೇರುವತ್ತ ದಾಪುಗಾಲು ಇಡುತ್ತಿರುವ ಆರ್.ಆರ್.ಆರ್ ತನ್ನದೇ ದಾಖಲೆ ಮುರಿದು ಮುನ್ನುಗ್ಗುತ್ತಿದೆ. ಅತೀ ಶೀಘ್ರದಲ್ಲೇ ಅದು ಮೈಲುಗಲ್ಲು ಸ್ಥಾಪಿಸಲಿದೆ ಎಂದಿದ್ದಾರೆ ಅಭಿಮಾನಿಗಳು.

  • 20 ಸಾವಿರ ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಬಿಡುವಂತೆ ಸಿಎಂ ಕುಮಾರಸ್ವಾಮಿ ಆದೇಶ

    20 ಸಾವಿರ ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಬಿಡುವಂತೆ ಸಿಎಂ ಕುಮಾರಸ್ವಾಮಿ ಆದೇಶ

    ಚೆನ್ನೈ: ತಮಿಳುನಾಡಿಗೆ ಕಬಿನಿ ಜಲಾಶಯದಿಂದ 20 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಆದೇಶಿಸಿದ್ದೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

    ಶುಕ್ರವಾರ ತಮಿಳುನಾಡಿನ ಮಧುರೈ ಮೀನಾಕ್ಷಿ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಅವರು, ದೇವರ ದಯೆಯಿಂದ ರಾಜ್ಯದಲ್ಲಿ ತುಂಬಾ ಚೆನ್ನಾಗಿ ಮಳೆಯಾಗುತ್ತಿದೆ. ಮುಂದೆಯೂ ರಾಜ್ಯದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಹಾಗಾಗಿ ಕಾವೇರಿ ನೀರಿನಲ್ಲಿ ತಮಿಳು ನಾಡಿಗೆ ನೀಡಬೇಕಾದ ಪಾಲನ್ನು ಜೂನ್ ನಲ್ಲಿ ನೀಡಲು ಸಾಧ್ಯವಿದೆ ಎಂದಿದ್ದಾರೆ. ಇದನ್ನೂ ಓದಿ: ನಾನು ಪ್ರಮಾಣ ವಚನ ಸ್ವೀಕರಿಸಿದಾಗಿಂದ್ಲೂ ಉತ್ತಮ ಮಳೆಯಾಗುತ್ತಿದೆ- ಎಚ್‍ಡಿಕೆ

    ಈ ಕುರಿತಂತೆ ಈಗಾಗಲೇ ನಾನು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಕಬಿನಿ ಜಾಲಾಶಯದಿಂದ 20 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಸೂಚನೆ ನೀಡಿದ್ದೇನೆ. ರಾಜ್ಯದಲ್ಲಿ ಮುಂಗಾರು ಚೆನ್ನಾಗಿ ಪ್ರಾರಂಭವಾಗಿದೆ. ಹೀಗೆಯೇ ಮುಂಗಾರು ಮುಂದುವರಿದರೆ ಕಾವೇರಿ ನೀರು ಹಂಚಿಕೆ ಆದೇಶದಂತೆ ಈ ಜೂನ್ ನಲ್ಲಿ ತಮಿಳುನಾಡಿನ ಪಾಲು 10 ಟಿಎಂಸಿ(ಥೌಸಂಡ್ ಮಿಲಿಯನ್ ಕ್ಯೂಬಿಕ್ ಫೀಟ್) ನೀರನ್ನು ನೀಡಲಾಗುವುದು. ಈಗ ಕಬಿನಿಯಿಂದ ನೀರು ಹರಿಸುತ್ತಿರುವುದು ಎರಡೂ ರಾಜ್ಯಗಳ ರೈತರಲ್ಲಿ ಸಂತಸ ತರಲಿದೆ ಎಂದು ಹೇಳಿದ್ದಾರೆ.

    ಈ ಕುರಿತಂತೆ ಟ್ವೀಟ್ ಮಾಡಿರುವ ನಟ ಕಮಲ್ ಹಾಸನ್, ಕಬಿನಿ ಜಲಾಶಯದಿಂದ ನೀರು ಬಿಡುವ ನಿರ್ಧಾರ ತೆಗೆದುಕೊಂಡಿರುವುದನ್ನು ಸ್ವಾಗತಿಸಿರುವುದಾಗಿ ಹೇಳಿ, ಕುಮಾರಸ್ವಾಮಿಯವರಿಗೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ ಈ ಮೂಲಕ ಎರಡೂ ರಾಜ್ಯಗಳ ಮಧ್ಯೆ ಮುಚ್ಚಿದ್ದ ಸಂಬಂಧಗಳ ಬಾಗಿಲುಗಳು ತೆರೆದುಕೊಳ್ಳುತ್ತವೆ ಎಂದು ಟ್ವೀಟ್ ಮಾಡಿದ್ದಾರೆ.

  • ರಾಜಕೀಯದಲ್ಲಿ ಯಶಸ್ವಿಯಾಗಲು ಕೇವಲ ಸಿನಿಮಾ ಖ್ಯಾತಿ, ಹಣ ಸಾಕಾಗುವುದಿಲ್ಲ: ನಟ ರಜನಿಕಾಂತ್

    ರಾಜಕೀಯದಲ್ಲಿ ಯಶಸ್ವಿಯಾಗಲು ಕೇವಲ ಸಿನಿಮಾ ಖ್ಯಾತಿ, ಹಣ ಸಾಕಾಗುವುದಿಲ್ಲ: ನಟ ರಜನಿಕಾಂತ್

    ಚೆನ್ನೈ: ರಾಜಕೀಯ ಪ್ರವೇಶಕ್ಕೆ ತುದಿ ಕಾಲಿನಲ್ಲಿ ನಿಂತಿರುವ ನಟ ಕಮಲ್ ಹಾಸನ್ ಅವರಿಗೆ ರಜನಿಕಾಂತ್ ಸಲಹೆಯೊಂದನ್ನು ನೀಡಿದ್ದು, ರಾಜಕೀಯದಲ್ಲಿ ಯಶಸ್ವಿಯಾಗಲು ಕೇವಲ ಸಿನಿಮಾ ಖ್ಯಾತಿ ಹಾಗೂ ಹಣ ಎರಡೇ ಸಾಕಾಗುವುದಿಲ್ಲ ಎಂದು ತಿಳಿಸಿದ್ದಾರೆ.

    ಯಾವುದೇ ಒಬ್ಬ ನಟ ರಾಜಕೀಯದಲ್ಲಿ ಯಶಸ್ವಿಯಾಗಲು ಕೇವಲ ಅವರ ಖ್ಯಾತಿ ಹಾಗೂ ಹಣ ಸಾಕಾಗುವುದಿಲ್ಲ, ಅದಕ್ಕಿಂತ ಹೆಚ್ಚಿನ ಅವಶ್ಯಕತೆಗಳಿವೆ. ಇದನ್ನು ನಟ ಕಮಲ್ ಹಾಸನ್ ಚೆನ್ನಾಗಿ ತಿಳಿದಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ನಾನು ಕೇಳಿದ ಮಾತನ್ನು ಇಂದು ಕಮಲ್ ನನ್ನನ್ನೇ ಕೇಳುತ್ತಿದ್ದಾರೆ ಎಂದು ರಜನಿ ಹೇಳಿದ್ದಾರೆ.

    ತಮಿಳು ಚಿತ್ರ ರಂಗದ ದಂತಕತೆ ಶಿವಾಜಿ ಗಣೇಶನ್ ಅವರ ಸ್ಮಾರಕ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ರಜನಿ ಅದೇ ಸಮಾರಂಭದಲ್ಲಿ ವೇದಿಕೆ ಹಂಚಿಕೊಂಡಿದ್ದ ಸಹನಟ ಕಮಲ್ ಅವರಿಗೆ ಸಲಹೆಯನ್ನು ನೀಡಿದರು.

    ಕಮಲ್ ಹಾಸನ್ ಮಾತನಾಡಿ, ಶಿವಾಜಿ ಗಣೇಶನ್ ಅವರು ಸಿನಿಮಾ ಮತ್ತು ರಾಜಕೀಯಕ್ಕೂ ಮೀರಿದ ಪ್ರಸಿದ್ಧ ವ್ಯಕ್ತಿಯಾಗಿದ್ದಾರೆ. ಈ ಕಾರಣಕ್ಕೆ ನಾನು ಭಾಗವಹಿಸುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದರೂ ಈ ಕಾರ್ಯಕ್ರಮದಲ್ಲಿ ನಾನು ಭಾಗವಹಿಸಿದ್ದೇನೆ ಎಂದರು.

    ತಮಿಳುನಾಡು ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಸ್ಮಾರಕ ಭವನವನ್ನು ಉದ್ಘಾಟಿಸಿದರು. 2015ರಲ್ಲಿ ಸಿಎಂ ಆಗಿದ್ದ ಜಯಲಲಿತಾ ಅವರು ಸ್ಮಾರಕ ನಿರ್ಮಾಣ ಘೋಷಣೆಯನ್ನು ಮಾಡಿದ್ದರು. ತಮಿಳು ಚಿತ್ರರಂಗದಲ್ಲಿ ಸುಮಾರು 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ, ದಾದಾ ಫಾಲ್ಕೆ ಸಾಹೇಬ್ ಪ್ರಶಸ್ತಿ ವಿಜೇತರಾದ ಗಣೇಶನ್ 1950ರ ದಶಕದ ನಂತರ ಅಪಾರ ಖ್ಯಾತಿಯನ್ನು ಗಳಿಸಿದ್ದರು.

    ಗಣೇಶನ್ ಪುತ್ರ ಪ್ರಭು ಮಾತನಾಡಿ ಸ್ಮಾರಕ ನಿರ್ಮಾಣ ಅಮ್ಮ(ಜಯಲಲಿತಾ) ಕನಸಗಿತ್ತು, ಇಂದು ನಾನು ಹೆಚ್ಚು ಸಂತೋಷದಿಂದ ಇದ್ದು, ಅಪ್ಪ(ಗಣೇಶನ್) ತಮ್ಮ ಸಿನಿಮಾಗಳ ಮೂಲಕ ಜನರಿಗೆ ಹತ್ತಿರವಾಗಿದ್ದು, ಇದು ಅವರಿಗೆ ನೀಡುವ ಅತ್ಯುತ್ತಮ ಗೌರವ ಎಂದು ತಿಳಿಸಿದರು.

  • ಈ ನಟ ರಾಜಕೀಯ ಬಂದರೆ ಕೈ ಜೋಡಿಸಲು ಸಿದ್ಧ: ನಟ ಕಮಲ್ ಹಾಸನ್

    ಈ ನಟ ರಾಜಕೀಯ ಬಂದರೆ ಕೈ ಜೋಡಿಸಲು ಸಿದ್ಧ: ನಟ ಕಮಲ್ ಹಾಸನ್

    ಚೆನ್ನೈ: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಬಂದರೆ ನಾನು ಅವರೊಂದಿಗೆ ಕೈ ಜೋಡಿಸಲು ಸಿದ್ಧ ಎಂದು ನಟ ಕಮಲ್ ಹಾಸನ್ ಹೇಳಿದ್ದಾರೆ.

    ರಜನಿ ಮತ್ತು ನಾನು ಚಿತ್ರರಂಗದಲ್ಲಿ ಎದುರಾಳಿಗಾಗಿ ಕಂಡರೂ, ಪ್ರಮುಖ ವಿಚಾರಗಳ ಬಗ್ಗೆ ನಾವಿಬ್ಬರು ಚರ್ಚಿಸುತ್ತಿರುತ್ತೇವೆ. ಒಂದು ವೇಳೆ ರಜನಿ ರಾಜಕೀಯಕ್ಕೆ ಬರುವುದಾದರೆ ಅವರೊಂದಿಗೆ ರಾಜಕೀಯ ಕುರಿತು ಚರ್ಚೆ ನಡೆಸುವುದು ಕಷ್ಟವಾಗುವುದಿಲ್ಲ ಎಂದು ಮಾಧ್ಯಮವೊಂದಕ್ಕೆ ಹೇಳಿದ್ದಾರೆ.

    ತಮ್ಮ ಸ್ವಂತ ಪಕ್ಷ ಪ್ರಾರಂಭಕ್ಕೆ ದಿನಾಂಕ ನಿಗದಿಯಾಗಿದೆಯೇ ಎಂಬ ಪ್ರಶ್ನೆಗೆ ಇದೇ ಸಂದರ್ಭದಲ್ಲಿ ಉತ್ತರಿಸಿದ ಕಮಲ್ ಹಾಸನ್, ಅದಕ್ಕಾಗಿ ಆತುರಪಡದೆ ನಿರ್ಧಾರ ತೆಗೆದುಕೊಳ್ಳಬೇಕು ಅಂದ್ರು. ಅಲ್ಲದೆ ತಮ್ಮ ಪಕ್ಷವನ್ನು ಘೋಷಣೆ ಮಾಡಲು ನಿರ್ಧರಿಸಿದ ದಿನ ಕಾಕತಾಳೀಯವಾಗಿ ಒಂದು ಕ್ರಾಂತಿಯೂ ಆಗಬಹುದು ಎಂದು ಹೇಳಿದ್ರು.

    ಕೆಲವು ತಿಂಗಳಿನಿಂದೀಚೆಗೆ ಕಮಲ್ ಹಾಸನ್ ತಮಿಳುನಾಡಿನ ರಾಜಕೀಯ ಸ್ಥಿತಿಗತಿಯ ಬಗ್ಗೆ ಮುಕ್ತವಾಗಿ ಮಾತನಾಡುತ್ತಿದ್ದಾರೆ. ರಾಜಕೀಯಕ್ಕೆ ಧುಮುಕುವ ಬಗ್ಗೆ ಸಾಕಷ್ಟು ಸುಳಿವು ನೀಡ್ತಿದ್ದಾರೆ. ಇದೇ ತಿಂಗಳ ಆರಂಭದಲ್ಲಿ ಕಮಲ್ ಹಾಸನ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆ ಮಾತುಕತೆ ನಡೆಸಿದ್ದರು. ತಮಿಳುನಾಡಿನ ರಾಜಕೀಯದ ಬಗ್ಗೆ ಅವರೊಂದಿಗೆ ಚರ್ಚೆ ನಡೆಸಿದ್ದಾಗಿ ವರದಿಗಾರರಿಗೆ ತಿಳಿಸಿದ್ದರು.

    ಯಾವುದಾದರೂ ಪಕ್ಷಕ್ಕೆ ಸೇರ್ಪಡೆಯಾಗ್ತೀರಾ ಎಂಬ ಪ್ರಶ್ನೆಗೆ, ಖಂಡಿತವಾಗಿಯೂ ನನ್ನ ಬಣ್ಣ ಕೇಸರಿಯಲ್ಲ ಎಂದು ಸ್ಪಷ್ಟಪಡಿಸಿದ್ದರು.