Tag: ಕಮಲ್ ಆರ್ ಖಾನ್

  • ನನ್ನನ್ನು ಕೊಲ್ಲಲು ನಟ ಅಕ್ಷಯ್ ಕುಮಾರ್ ಸುಪಾರಿ ಕೊಟ್ಟಿದ್ದಾರೆ: ಖಾನ್ ಟ್ವೀಟ್

    ನನ್ನನ್ನು ಕೊಲ್ಲಲು ನಟ ಅಕ್ಷಯ್ ಕುಮಾರ್ ಸುಪಾರಿ ಕೊಟ್ಟಿದ್ದಾರೆ: ಖಾನ್ ಟ್ವೀಟ್

    ಬಾಲಿವುಡ್ (Bollywood)  ನ ಖ್ಯಾತ ನಟ ಅಕ್ಷಯ್ ಕುಮಾರ್ ಮೇಲೆ ಗುರುತರ ಆರೋಪ ಮಾಡಿದ್ದಾರೆ ನಟ, ನಿರ್ಮಾಪಕ ಹಾಗೂ ಸ್ವಯಂ ಘೋಷಿತ ವಿಮರ್ಶಕ ಕಮಲ್ ಆರ್ ಖಾನ್ (Kamal R Khan). ಈ ಕುರಿತು ಟ್ವೀಟ್ ಮಾಡಿರುವ ಅವರು ‘ನನ್ನನ್ನು ಜೈಲಿಗೆ (Jail) ಕಳುಹಿಸಿ ಸಾಯಿಸಲು ಅಕ್ಷಯ್ ಕುಮಾರ್ ಸುಪಾರಿ ಕೊಟ್ಟಿದ್ದಾರೆ’ ಎಂದು ಅವರು ಬರೆದುಕೊಂಡಿದ್ದಾರೆ.

    ಬಾಲಿವುಡ್ ನಲ್ಲಿ ನನಗೆ ತುಂಬಾ ಜನ ಸ್ನೇಹಿತರು ಇದ್ದಾರೆ. ಅಕ್ಷಯ್ ಕುಮಾರ್ (Akshay Kumar) ಅವರನ್ನು ಹೊರತು ಪಡಿಸಿ ಎಲ್ಲರೂ ನನ್ನೊಂದಿಗೆ ಚೆನ್ನಾಗಿದ್ದಾರೆ. ಆದರೆ, ಅಕ್ಷಯ್ ಕುಮಾರ್ ನನ್ನ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ. ನನ್ನ ಸಾವು ಬಯಸುತ್ತಿದ್ದಾರೆ. ಜೈಲಿಗೆ ಕಳುಹಿಸಿ, ಅಲ್ಲಿಯೇ ಸಾಯಿಸಲು (Murder) ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಮುಂಬೈನಿಂದ ಸ್ಯಾಂಡಲ್ ವುಡ್ ಗೆ ಬಂದ ಪ್ರಾಚಿ ಶರ್ಮಾ

    ಅವರನ್ನು ನಾನು ಅಕ್ಷಯ್ ಕುಮಾರ್ ಎಂದು ಕರೆಯಲಾರೆ. ಅವರು ನಮ್ಮ ಭಾರತದವರು ಅಲ್ಲ. ಆತ ಕೆನಡಿಯನ್. ಕೆನಡಾದ ಪೌರತ್ವ ಹೊಂದಿದ್ದಾರೆ. ಹಾಗಾಗಿ ನಾನು ಅವರನ್ನು ಕೆನಡಿಯನ್ ಕುಮಾರ್ ಎಂದು ಕರೆಯುತ್ತಾನೆ. ಹಾಗೆ ಕರೆದರೆ ಅವರಿಗೆ ಸಿಟ್ಟು ಬರುತ್ತದೆ. ಇದೇ ಕಾರಣಕ್ಕಾಗಿ ಅವರು ನನ್ನ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ ಎಂದರು.

     

    ಈ ರೀತಿಯಾಗಿ ಕಮಲ್ ಆರ್ ಖಾನ್ ಆರೋಪ ಮಾಡುತ್ತಿರುವುದು ಮೊದಲೇನೂ ಅಲ್ಲ. ಅನೇಕರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ. ಈ ಕಾರಣಕ್ಕಾಗಿ ಅವರು ಜೈಲಿಗೂ ಹೋಗಿದ್ದಾರೆ. ಆದರೂ, ನಟ-ನಟಿಯರ ಮೇಲೆ, ನಿರ್ದೇಶಕರ ಮೇಲೆ, ನಿರ್ಮಾಪಕರ ಮೇಲೆ ಆರೋಪ ಮಾಡುವುದನ್ನು ಅವರು ಬಿಟ್ಟಿಲ್ಲ.

  • ರಶ್ಮಿಕಾ ಮಂದಣ್ಣ ಕುರಿತು ಕೆಟ್ಟ ಭವಿಷ್ಯ ನುಡಿದ ಕಮಲ್ ಖಾನ್

    ರಶ್ಮಿಕಾ ಮಂದಣ್ಣ ಕುರಿತು ಕೆಟ್ಟ ಭವಿಷ್ಯ ನುಡಿದ ಕಮಲ್ ಖಾನ್

    ಬಾಲಿವುಡ್ ನ ವಿವಾದಾತ್ಮಕ ವಿಮರ್ಶಕ, ನಟ ಕಮಲ್ ಆರ್ ಖಾನ್, ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕುರಿತು ಅಚ್ಚರಿಯ ಭವಿಷ್ಯಯೊಂದನ್ನು ಹೇಳಿದ್ದಾರೆ. ಈ ಭವಿಷ್ಯವು ರಶ್ಮಿಕಾ ಮಂದಣ್ಣರ ಅಭಿಮಾನಿಗಳಿಗೆ ಕಣ್ಣು ಕೆಂಪಾಗಿಸಿದೆ. ಸದಾ ವಿವಾದಗಳ ಮೂಲಕವೇ ಸದ್ದು ಮಾಡುವ ಕಮಲ್, ಬಾಲಿವುಡ್ ನಲ್ಲಿ ರಶ್ಮಿಕಾ ಭವಿಷ್ಯವಿಲ್ಲ ಎಂದು ಹೇಳಿದ್ದಾರೆ. ಅವರು ಭೋಜ್ ಪುರಿ ಸಿನಿಮಾಗೆ ಲಯಕ್ಕು ಎಂದು ನುಡಿದಿದ್ದಾರೆ.

    ರಶ್ಮಿಕಾ ಮಂದಣ್ಣ ಬಾಲಿವುಡ್ ನಲ್ಲಿ ಸಿನಿಮಾಗಳ ಮೇಲೆ ಸಿನಿಮಾ ಮಾಡುತ್ತಿದ್ದಾರೆ. ರಿಲೀಸ್ ಆದ ಸಿನಿಮಾಗಳು ಬಾಕ್ಸ್ ಆಫೀಸಿನಲ್ಲಿ ಅಷ್ಟೇನೂ ಸದ್ದು ಮಾಡಲಿಲ್ಲ. ಗುಡ್ ಬೈ ಸಿನಿಮಾ ಬಾಲಿವುಡ್ ನಲ್ಲಿ ರಶ್ಮಿಕಾ ಭರ್ಜರಿ ಹೆಸರು ತಂದು ಕೊಡುತ್ತದೆ ಎಂದು ಹೇಳಲಾಗಿತ್ತು. ಆದರೆ, ಅದು ಆಗಲಿಲ್ಲ. ಇನ್ನಷ್ಟೇ ಮಿಷನ್ ಮಜ್ನು ಸಿನಿಮಾ ರಿಲೀಸ್ ಆಗಬೇಕಿದೆ. ಅದು ಹೇಗಿದೆಯೋ ಗೊತ್ತಿಲ್ಲ. ಹಾಗಾಗಿ ಇಂಥದ್ದೊಂದು ಭವಿಷ್ಯ ನುಡಿದಿದ್ದಾರೆ ಖಾನ್. ಇದನ್ನೂ ಓದಿ:ಸುಶಾಂತ್ ಶವ ಪರೀಕ್ಷೆ ಸಿಬ್ಬಂದಿ ಬೆನ್ನಿಗೆ ನಿಂತ ನಟನ ಸಹೋದರಿ

    ಕಮಲ್ ಖಾನ್ ಈ ರೀತಿ ಬರೆಯುವುದು ಹೊಸದೇನೂ ಅಲ್ಲ. ಮೊನ್ನೆಯಷ್ಟೇ ರಣ್ವೀರ್ ಸಿಂಗ್ ಬಗ್ಗೆಯೂ ಟ್ವಿಟ್ ಮಾಡಿದ್ದರು. ಸರ್ಕಸ್ ಸೋಲಿನ ಬಗ್ಗೆ ಕಟು ಟೀಕೆ ಮಾಡಿದ್ದರು. ಇಂತಹ ಟೀಕೆಯ ಕಾರಣದಿಂದಾಗಿಯೇ ಅವರು ಜೈಲಿಗೂ ಕೂಡ ಹೋಗಿ ಬಂದಿದ್ದಾರೆ. ಜೈಲಿನಿಂದ ಬಂದ ನಂತರ ಇನ್ಮುಂದೆ ಯಾರ ಬಗ್ಗೆಯೂ ನೆಗೆಟಿವ್ ಆಗಿ ಮಾತನಾಡಲ್ಲ ಎಂದು ಹೇಳಿದ್ದರು. ಆದರೆ, ಮತ್ತೆ ತಮ್ಮ ಹಳೆಯ ಚಾಳಿಯನ್ನೇ ಮುಂದುವರೆಸಿದ್ದಾರೆ ಖಾನ್.

    Live Tv
    [brid partner=56869869 player=32851 video=960834 autoplay=true]

  • ಈ ಬಾರಿ  ಲೈಂಗಿಕ ದೌರ್ಜನ್ಯ ಆರೋಪಕ್ಕಾಗಿ ನಟ, ನಿರ್ಮಾಪಕ ಕಮಲ್ ಆರ್ ಖಾನ್ ಬಂಧನ

    ಈ ಬಾರಿ ಲೈಂಗಿಕ ದೌರ್ಜನ್ಯ ಆರೋಪಕ್ಕಾಗಿ ನಟ, ನಿರ್ಮಾಪಕ ಕಮಲ್ ಆರ್ ಖಾನ್ ಬಂಧನ

    ವಹೇಳನಕಾರಿ ಟ್ವಿಟ್ ಗೆ ಸಂಬಂಧಿಸಿದಂತೆ ಬಂಧನವಾಗಿದ್ದ ನಟ, ನಿರ್ಮಾಪಕ ಕಮಲ್ ಆರ್ ಖಾನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆ ಅನ್ನುವ ಕಾರಣಕ್ಕಾಗಿ ಇವತ್ತು ಮತ್ತೆ ಬಂಧನವಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಬಾಂದ್ರಾ ನ್ಯಾಯಾಲಯ ಆದೇಶ ನೀಡಿದೆ.

    ಶಿವಸೇನೆ ನಾಯಕರೊಬ್ಬರ ಮೇಲೆ ವಿವಾದ್ಮಾತಕ ಕಾಮೆಂಟ್ ಆರೋಪಗಳ ಮೇಲೆ ಕೆ.ಆರ್.ಕೆ ಆಗಸ್ಟ್ 30 ವರೆಗೂ ನ್ಯಾಯಾಂಗ ಬಂಧನದಲ್ಲಿದ್ದರು. ಆದರೆ ಇದೀಗ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವ ಆರೋಪಕ್ಕಾಗಿ ಮತ್ತೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಘಟನೆಯು 2017ರಲ್ಲೇ ನಡೆದಿದ್ದು, ತಾವು ನಿರ್ಮಾಣ ಮಾಡುವ ಚಿತ್ರದಲ್ಲಿ ಅವಕಾಶ ಕೊಡಿಸುವುದಾಗಿ ಆ ನಟಿಗೆ ನಂಬಿಸಿ ಮೋಸ ಮಾಡಿದ್ದಾರೆಂದು ಆ ನಟಿ ದೂರಿದ್ದಾರೆ. ಇದನ್ನೂ ಓದಿ:ವಿಜಯ್ ಸೇತುಪತಿ ಅಭಿಮಾನಿಗಳಿಗೆ ಡಬಲ್ ಧಮಾಕಾ: ‘ವಿಡುದಲೈ’ ಸಿನಿಮಾ ಎರಡು ಭಾಗಗಳಲ್ಲಿ ರಿಲೀಸ್

    ಕಮಲ್ ತಾವೊಬ್ಬ ನಿರ್ಮಾಪಕರು ಎಂದು ಪರಿಚಯ ಮಾಡಿಕೊಂಡು, ಆ ನಂತರ ನಟಿಯ ನಂಬರ್ ಪಡೆದಿದ್ದರಂತೆ. ಮೊದ ಮೊದಲು ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದರಂತೆ. ತನ್ನ ಹುಟ್ಟು ಹಬ್ಬದಲ್ಲಿ ಪಾಲ್ಗೊಳ್ಳಲು ನಟಿಗೆ ಕಮಲ್ ಆಹ್ವಾನ ಮಾಡಿದ್ದರಂತೆ. ಈ ಸಂದರ್ಭದಲ್ಲಿ ಜ್ಯೂಸ್ ಕುಡಿಸಿ, ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದರಂತೆ. ಆ ನಟಿ ಅಲ್ಲಿಂದ ತಪ್ಪಿಸಿಕೊಂಡು ಹೋಗಿದ್ದರು ಎಂದು ದೂರಿನಲ್ಲಿ ಪ್ರಸ್ತಾಪಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]