Tag: ಕಮಲ್ ಖಾನ್

  • ಬಾಲಿವುಡ್ ಮಾಫಿಯಾಗೆ ಕಮಲ್ ಖಾನ್ ವಿಮರ್ಶೆ ಬಲಿ: ಜೈಲಿನಿಂದ ಬಂದು ಘೋಷಣೆ

    ಬಾಲಿವುಡ್ ಮಾಫಿಯಾಗೆ ಕಮಲ್ ಖಾನ್ ವಿಮರ್ಶೆ ಬಲಿ: ಜೈಲಿನಿಂದ ಬಂದು ಘೋಷಣೆ

    ಟ, ನಿರ್ಮಾಪಕ ಕಮಲ್ ಖಾನ್ (Kamal Khan) ಜೈಲಿನಿಂದ ಬಂದ ನಂತರ ಮೌನಕ್ಕೆ ಜಾರಿದ್ದಾರೆ. ಬಾಲಿವುಡ್ ಅಷ್ಟೇ ಅಲ್ಲ, ಭಾರತೀಯ ಸಿನಿಮಾಗಳನ್ನು ತನ್ನದೇ ಆದ ರೀತಿಯಲ್ಲಿ ವಿಮರ್ಶಿಸುತ್ತಿದ್ದ ಕಮಲ್, ಇನ್ಮುಂದೆ ಯಾವುದೇ ರೀತಿಯಲ್ಲೂ ಸಿನಿಮಾಗಳ (Cinema) ಬಗ್ಗೆ ರಿವ್ಯು ಮಾಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ತಾವು ಇಂಥದ್ದೊಂದು ನಿರ್ಧಾರ ತಗೆದುಕೊಳ್ಳದೇ ಇರುವುದಕ್ಕೆ ಕಾರಣ ಬಾಲಿವುಡ್ ಮಾಫಿಯಾ (Mafia) ಎಂದೂ ಅವರು ಹೇಳಿಕೊಂಡಿದ್ದಾರೆ.

    ಬಾಲಿವುಡ್ ನ (Bollywood) ಸಾಕಷ್ಟು ಸಿನಿಮಾಗಳಿಗೆ ನೆಗೆಟಿವ್ ರಿವ್ಯು ಕೊಟ್ಟಿದ್ದರು ಕಮಲ್ ಖಾನ್. ಅದಲ್ಲೇ, ಅನೇಕ ನಟರ ಬಗ್ಗೆ ಕಾಮೆಂಟ್ ಮಾಡಿದ್ದರು. ಈ ಕಾರಣಕ್ಕಾಗಿಯೇ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಜೈಲಿನಲ್ಲಿ(Jail) ಇರುವಾಗಲೇ ಅವರ ಮೇಲೆ ಲೈಂಗಿಕ ಕಿರುಕುಳದ ಆರೋಪ ಹೊರಿಸಿ, ಮತ್ತೆ ಜೈಲಿಗೆ ಕಳುಹಿಸುವ ಪ್ರಯತ್ನ ಕೂಡ ನಡೆಯಿತು. ಇದೆಲ್ಲವೂ ಬಾಲಿವುಡ್ ಮಾಫಿಯಾದ ಒಂದು ಭಾಗ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ:`ಕಮಲಿ’ ಖ್ಯಾತಿಯ ಅಮೂಲ್ಯಗೌಡರ ಹಾಟ್ ಫೋಟೋ ವೈರಲ್

    ಜೈಲಿನಲ್ಲಿ ಇರುವಾಗಲೇ ಕಮಲ್ ಖಾನ್ ಅವರನ್ನು ಕೊಲ್ಲುವ ಪ್ರಯತ್ನ ಕೂಡ ಮಾಡಲಾಗಿತ್ತಂತೆ. ಹಾಗಂತ ಕಮಲ್ ಪುತ್ರ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ನನ್ನ ತಂದೆಗೆ ರಕ್ಷಣೆ ಕೊಡಿ ಎಂದು ಅವರು ಕೇಳಿದ್ದರು. ಜಾಮೀನು ಸಿಕ್ಕು ಕಮಲ್ ಇದೀಗ ಹೊರಗೆ ಬಂದಿದ್ದಾರೆ. ಆದರೆ, ಇನ್ಮುಂದೆ ತಾವು ಸಿನಿಮಾಗಳನ್ನು ವಿಮರ್ಶೆ (Review) ಮಾಡುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ಬಾಲಿವುಡ್ ಮಾಫಿಯಾ ತಮಗೆ ಏನು ಬೇಕಾದರೂ ಮಾಡಬಹುದು ಎಂದು ಅವರು ಆತಂಕ ವ್ಯಕ್ತ ಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಿನ್ನೆಯಷ್ಟೇ ಬಂಧನವಾಗಿದ್ದ ನಟ ಕಮಾಲ್ ಖಾನ್ ಆಸ್ಪತ್ರೆಗೆ ದಾಖಲು

    ನಿನ್ನೆಯಷ್ಟೇ ಬಂಧನವಾಗಿದ್ದ ನಟ ಕಮಾಲ್ ಖಾನ್ ಆಸ್ಪತ್ರೆಗೆ ದಾಖಲು

    ಶಿವಸೇನ ಮುಖಂಡ ರಾಹುಲ್ ಕನ್ವಾಲ್ ಅವರನ್ನು ಸೋಷಿಯಲ್ ಮೀಡಿಯಾದಲ್ಲಿ ಅವಹೇಳನ ಮಾಡಿದ್ದರು ಎನ್ನುವ ಕಾರಣಕ್ಕಾಗಿ ನಟ, ಸ್ವಯಂ ಸಿನಿಮಾ ವಿಮರ್ಶಕ ಕಮಾಲ್ ಆರ್ ಖಾನ್ ಅವರನ್ನು ನಿನ್ನೆ ಪೊಲೀಸರು ಬಂಧಿಸಿ, ಕೋರ್ಟಿಗೆ ಹಾಜರು ಪಡಿಸಿದ್ದರು. ನ್ಯಾಯಾಲಯವು 14 ದಿನಗಳ ಕಾಲ ಖಾನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಜೈಲಿಗೆ ಹೋದ ಕೆಲವೇ ಗಂಟೆಗಳಲ್ಲಿ ಎದೆನೋವಿನ ಕಾರಣಕ್ಕಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತ್ತಿದೆ. ಸದ್ಯ ಅವರು ಮುಂಬೈನ ಶತಾಬ್ದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರಂತೆ.

    ವಿವಾದಗಳ ಮೂಲಕವೇ ಫೇಮಸ್ ಆಗಿರುವ ಬಾಲಿವುಡ್ ನಟ, ಸ್ವಯಂ ವಿಮರ್ಶಕ ಕಮಾಲ್ ಆರ್ ಖಾನ್ ಅವರನ್ನು ನಿನ್ನೆ ಮುಂಬೈ ಪೊಲೀಸರು ಬಂಧಿಸಿ, ನ್ಯಾಯಾಲಕ್ಕೆ ಹಾಜರು ಪಡಿಸಿದ್ದರು. ಬೊರಿವಲಿ ನ್ಯಾಯಾಲಯವು ಕಮಾಲ್ ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. 2020ರಲ್ಲಿ ರಾಹುಲ್ ಕನ್ವಾಲ್ ಎನ್ನುವವರ ವಿರುದ್ಧ ದ್ವೆಷಪೂರ್ಣ ಟ್ವಿಟ್ ಮಾಡಿದ್ದರು ಎನ್ನುವ ಕಾರಣಕ್ಕಾಗಿ ಕಮಾಲ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ:ಬಿಗ್ ಬಾಸ್: ಹೋಟೆಲ್ ಊಟದತ್ತ ವಾಲಿದ ಜಶ್ವಂತ್- ನಂದು ಕಣ್ಣೀರು

    ಶಿವಸೇನಾ ಪಕ್ಷದ ಸದಸ್ಯರಾಗಿರುವ ರಾಹುಲ್ ಕನ್ವಾಲ್ ವಿರುದ್ಧ 2020ರಲ್ಲಿ ಕಮಾಲ್, ಮಾನಹಾನಿ ಆಗುವಂತಹ ಬರಹವನ್ನು ಟ್ವಿಟ್ ಮಾಡಿದ್ದರಂತೆ. ಆಗ ರಾಹುಲ್, ಮುಂಬೈನ ಮಲಾಡ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ಆಗ ಕಮಾಲ್ ದೇಶದಲ್ಲಿ ಇರದೇ ಇರುವ ಕಾರಣಕ್ಕಾಗಿ ಬಂಧನ ಸಾಧ್ಯವಾಗಿರಲಿಲ್ಲ. ಇದೀಗ ಕಮಾಲ್, ಮುಂಬೈ ಏರ್ ಪೋರ್ಟಿಗೆ ಬರುತ್ತಿದ್ದಂತೆಯೇ ಪೊಲೀಸರು ಬಂಧಿಸಿದ್ದರು.

    ಕನ್ನಡದ ಕೆಜಿಎಫ್ 2, ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾವನ್ನು ಜಗತ್ತೇ ಹೊಗಳುತ್ತಿದ್ದಾಗ ಇವು ಕಳಪೆ ಸಿನಿಮಾಗಳು, ಇಂತಹ ಸಿನಿಮಾಗಳನ್ನು ಹೊಗಳುತ್ತಿರುವವರಿಗೆ ತಲೆ ಸರಿ ಇಲ್ಲ ಎನ್ನುವಂತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು ಕಮಾಲ್. ಅಲ್ಲದೇ, ತಮ್ಮ ಜೀವನದ ಅನೇಕ ಖಾಸಗಿ ಸಂಗತಿಗಳನ್ನು ಕಮಾಲ್ ಬರೆದುಕೊಂಡು ಸುದ್ದಿ ಆಗುತ್ತಿದ್ದರು. ಇದೀಗ ಬಂಧನವಾಗಿ ಸುದ್ದಿಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಟ ಕಮಾಲ್ ಖಾನ್ ಗೆ 14 ದಿನಗಳ ನ್ಯಾಯಾಂಗ ಬಂಧನ: ಕಣ್ಣೀರಿಟ್ಟ ಖಾನ್

    ನಟ ಕಮಾಲ್ ಖಾನ್ ಗೆ 14 ದಿನಗಳ ನ್ಯಾಯಾಂಗ ಬಂಧನ: ಕಣ್ಣೀರಿಟ್ಟ ಖಾನ್

    ವಿವಾದಗಳ ಮೂಲಕವೇ ಫೇಮಸ್ ಆಗಿರುವ ಬಾಲಿವುಡ್ ನಟ, ಸ್ವಯಂ ವಿಮರ್ಶಕ ಕಮಾಲ್ ಆರ್ ಖಾನ್ ಅವರನ್ನು ಇಂದು ಮುಂಬೈ ಪೊಲೀಸರು ಬಂಧಿಸಿ, ನ್ಯಾಯಾಲಕ್ಕೆ ಹಾಜರು ಪಡಿಸಿದ್ದರು. ಬೊರಿವಲಿ ನ್ಯಾಯಾಲಯವು ಕಮಾಲ್ ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. 2020ರಲ್ಲಿ ರಾಹುಲ್ ಕನ್ವಾಲ್ ಎನ್ನುವವರ ವಿರುದ್ಧ ದ್ವೆಷಪೂರ್ಣ ಟ್ವಿಟ್ ಮಾಡಿದ್ದರು ಎನ್ನುವ ಕಾರಣಕ್ಕಾಗಿ ಕಮಾಲ್ ಅವರನ್ನು ಮುಂಬೈ ಪೊಲೀಸರು ಇಂದು ಬಂಧಿಸಿದ್ದರು.

    ಶಿವಸೇನಾ ಪಕ್ಷದ ಸದಸ್ಯರಾಗಿರುವ ರಾಹುಲ್ ಕನ್ವಾಲ್ ವಿರುದ್ಧ 2020ರಲ್ಲಿ ಕಮಾಲ್, ಮಾನಹಾನಿ ಆಗುವಂತಹ ಬರಹವನ್ನು ಟ್ವಿಟ್ ಮಾಡಿದ್ದರಂತೆ. ಆಗ ರಾಹುಲ್, ಮುಂಬೈನ ಮಲಾಡ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ಆಗ ಕಮಾಲ್ ದೇಶದಲ್ಲಿ ಇರದೇ ಇರುವ ಕಾರಣಕ್ಕಾಗಿ ಬಂಧನ ಸಾಧ್ಯವಾಗಿರಲಿಲ್ಲ. ಇದೀಗ ಕಮಾಲ್, ಮುಂಬೈ ಏರ್ ಪೋರ್ಟಿಗೆ ಬರುತ್ತಿದ್ದಂತೆಯೇ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ:ದುಬಾರಿ ಸಂಭಾವನೆ ಕೇಳಿ, ಅವಕಾಶ ಕಳೆದುಕೊಂಡ `ವಜ್ರಕಾಯ’ ನಟಿ ನಭಾ ನಟೇಶ್

    ಕನ್ನಡದ ಕೆಜಿಎಫ್ 2, ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾವನ್ನು ಜಗತ್ತೇ ಹೊಗಳುತ್ತಿದ್ದಾಗ ಇವು ಕಳಪೆ ಸಿನಿಮಾಗಳು, ಇಂತಹ ಸಿನಿಮಾಗಳನ್ನು ಹೊಗಳುತ್ತಿರುವವರಿಗೆ ತಲೆ ಸರಿ ಇಲ್ಲ ಎನ್ನುವಂತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು ಕಮಾಲ್. ಅಲ್ಲದೇ, ತಮ್ಮ ಜೀವನದ ಅನೇಕ ಖಾಸಗಿ ಸಂಗತಿಗಳನ್ನು ಕಮಾಲ್ ಬರೆದುಕೊಂಡು ಸುದ್ದಿ ಆಗುತ್ತಿದ್ದರು. ಇದೀಗ ಬಂಧನವಾಗಿ ಸುದ್ದಿಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಕೆಜಿಎಫ್ 2’ ಕಳಪೆ ಸಿನಿಮಾ ಎಂದಿದ್ದ ನಟ, ವಿಮರ್ಶಕ ಕಮಲ್ ಖಾನ್ ಅರೆಸ್ಟ್

    ‘ಕೆಜಿಎಫ್ 2’ ಕಳಪೆ ಸಿನಿಮಾ ಎಂದಿದ್ದ ನಟ, ವಿಮರ್ಶಕ ಕಮಲ್ ಖಾನ್ ಅರೆಸ್ಟ್

    ದಾ ವಿವಾದಗಳ ಮೂಲಕವೇ ಫೇಮಸ್ ಆಗುತ್ತಿರುವ ಬಾಲಿವುಡ್ ನಟ, ಸ್ವಯಂ ವಿಮರ್ಶಕ ಕಮಾಲ್ ಆರ್ ಖಾನ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. 2020ರಲ್ಲಿ ರಾಹುಲ್ ಕನ್ವಾಲ್ ಎನ್ನುವವರ ವಿರುದ್ಧ ದ್ವೆಷಪೂರ್ಣ ಟ್ವಿಟ್ ಮಾಡಿದ್ದರು ಎನ್ನುವ ಕಾರಣಕ್ಕಾಗಿ ಕಮಾಲ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

    ಶಿವಸೇನಾ ಪಕ್ಷದ ಸದಸ್ಯರಾಗಿರುವ ರಾಹುಲ್ ಕನ್ವಾಲ್ ವಿರುದ್ಧ 2020ರಲ್ಲಿ ಕಮಾಲ್, ಮಾನಹಾನಿ ಆಗುವಂತಹ ಬರಹವನ್ನು ಟ್ವಿಟ್ ಮಾಡಿದ್ದರಂತೆ. ಆಗ ರಾಹುಲ್, ಮುಂಬೈನ ಮಲಾಡ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ಆಗ ಕಮಾಲ್ ದೇಶದಲ್ಲಿ ಇರದೇ ಇರುವ ಕಾರಣಕ್ಕಾಗಿ ಬಂಧನ ಸಾಧ್ಯವಾಗಿರಲಿಲ್ಲ. ಇದೀಗ ಕಮಾಲ್, ಮುಂಬೈ ಏರ್ ಪೋರ್ಟಿಗೆ ಬರುತ್ತಿದ್ದಂತೆಯೇ ಪೊಲೀಸರು ಬಂಧಿಸಿದ್ದಾರೆ.  ಇದನ್ನೂ ಓದಿ: ಆರ್ಯವರ್ಧನ್ ಗುರೂಜಿಯವರಲ್ಲಿ ಅಪ್ಪನ ಪ್ರೀತಿ ಕಂಡೆ: ರೂಪೇಶ್ ಭಾವುಕ

    ಕನ್ನಡದ ಕೆಜಿಎಫ್ 2, ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾವನ್ನು ಜಗತ್ತೇ ಹೊಗಳುತ್ತಿದ್ದಾಗ ಇವು ಕಳಪೆ ಸಿನಿಮಾಗಳು, ಇಂತಹ ಸಿನಿಮಾಗಳನ್ನು ಹೊಗಳುತ್ತಿರುವವರಿಗೆ ತಲೆ ಸರಿ ಇಲ್ಲ ಎನ್ನುವಂತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು ಕಮಾಲ್. ಅಲ್ಲದೇ, ತಮ್ಮ ಜೀವನದ ಅನೇಕ ಖಾಸಗಿ ಸಂಗತಿಗಳನ್ನು ಕಮಾಲ್ ಬರೆದುಕೊಂಡು ಸುದ್ದಿ ಆಗುತ್ತಿದ್ದರು. ಇದೀಗ ಬಂಧನವಾಗಿ ಸುದ್ದಿಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೆಜಿಎಫ್ 2 : ನಾಲ್ಕೇ ದಿನಕ್ಕೆ 550 ಕೋಟಿ ಬಾಚಿದ ರಾಕಿಭಾಯ್

    ಕೆಜಿಎಫ್ 2 : ನಾಲ್ಕೇ ದಿನಕ್ಕೆ 550 ಕೋಟಿ ಬಾಚಿದ ರಾಕಿಭಾಯ್

    ಪ್ರಶಾಂತ್ ನೀಲ್ ಮತ್ತು ಯಶ್ ಕಾಂಬಿನೇಷನ್ ನ ಕೆಜಿಎಫ್ 2 ಗಳಿಕೆ ರಾಕೆಟ್ ಸ್ಪೀಡ್ ನಲ್ಲಿ ಮುನ್ನುಗ್ಗುತ್ತಿದೆ. ಬಿಡುಗಡೆಯಾದ ಅಷ್ಟೂ ಭಾಷೆಗಳಲ್ಲೂ ಕೋಟಿ ಕೋಟಿ ಸಂಪಾದನೆ ಮಾಡುತ್ತಿದೆ. ಈವರೆಗೂ ಎಲ್ಲಾ ರೆಕಾರ್ಡ್ ಗಳನ್ನು ಮುರಿದಿರುವ ಕೆಜಿಎಫ್ 2, ಮುಂದೆ ಯಾರೂ ಮುರಿಯದಂತಹ ದಾಖಲೆಯನ್ನೂ ಮಾಡುತ್ತಿದೆ. ಇದನ್ನೂ ಓದಿ : ಕ್ಷಮಿಸಿ ಬಿಡು ಬಸವಣ್ಣ : ವಿಡಿಯೋ ರಿಲೀಸ್ ಮಾಡಿದ ಹಂಸಲೇಖ

    ಏ.14ರ ಗುರುವಾರ ಬಿಡುಗಡೆಯಾದ ಕೆಜಿಎಫ್ 2 ದಿನದಿಂದ ದಿನಕ್ಕೆ ಬಾಕ್ಸ್ ಆಫೀಸಿನ ಕ್ರೇಜ್ ಏರಿಸುತ್ತಲೇ ಇದೆ. ನಾಲ್ಕು ದಿನಗಳ ಕಾಲ ರಜೆ ಸಿಕ್ಕ ಕಾರಣಕ್ಕಾಗಿ ರಾಕಿಭಾಯ್ ಮತ್ತಷ್ಟು ಜೇಬು ತುಂಬಿಸಿಕೊಳ್ಳುತ್ತಿದ್ದಾನೆ. ಕನ್ನಡ ಸಿನಿಮಾವೊಂದು ವಿಶ್ವಮಟ್ಟದಲ್ಲಿ ಈ ರೀತಿ ದುಡ್ಡು ಮಾಡುತ್ತಿರುವುದು ಅನೇಕ ಸಿನಿಮಾ ರಂಗದ ನಿರ್ಮಾಪಕರಿಗೆ ಹೊಸದೊಂದು ಮಾರ್ಗ ಕಾಣಿಸಿದಂತಾಗಿದೆ. ಇದನ್ನೂ ಓದಿ: ಬಾಲಿವುಡ್‌ 3ನೇ ದಿನದ ಕಲೆಕ್ಷನ್‌ನಲ್ಲೂ ಹವಾ ಕ್ರಿಯೇಟ್‌ ಮಾಡಿದ ʻಕೆಜಿಎಫ್‌ 2ʼ

    ಕೆಜಿಎಫ್ 2 ಮೂರು ದಿನಗಳ ಗಳಿಕೆ ಅಂದಾಜು 400 ಕೋಟಿ ಎನ್ನಲಾಗಿತ್ತು. ನಾಲ್ಕನೇ ದಿನದ ಗಳಿಕೆ ಒಟ್ಟು ಅಂದಾಜು 550 ಕೋಟಿ ಎನ್ನಲಾಗುತ್ತಿದೆ. ಈ ಮೂಲಕ ಆರ್.ಆರ್.ಆರ್, ಬಾಹುಬಲಿ, ಕೆಜಿಎಫ್ ಚಾಪ್ಟರ್ 1 ಹೀಗೆ ದಾಖಲಾಗಿದ್ದ ಎಲ್ಲ ರೇಕಾರ್ಡ್ ಉಢೀಸ್ ಆಗಿವೆ. ಅಲ್ಲದೇ ವಿದೇಶದಿಂದಲೇ ಅಂದಾಜು ಮೂರು ದಿನಗಳಲ್ಲಿ 80 ಕೋಟಿಗೂ ಅಧಿಕ ಹಣ ಹರಿದು ಬಂದಿದೆ ಎನ್ನುತ್ತಾರೆ ವಿತರಕರು.  ಇದನ್ನೂ ಓದಿ: `ಚಂದ್ರಲೇಖ ರಿಟರ್ನ್ಸ್’ ಅಂತಿದ್ದಾರೆ ನಿರ್ದೇಶಕ ಓಂಪ್ರಕಾಶ್ ರಾವ್

    ಯಾವ ದಿನ, ಎಷ್ಟು ಲೆಕ್ಕ ?

    ಮೊದಲ ದಿನದ ಗಳಿಕೆ : 165.37 ಕೋಟಿ

    ಎರಡನೇ ದಿನದ ಗಳಿಕೆ : 139.25 ಕೋಟಿ

    ಮೂರನೇ ದಿನದ ಗಳಿಕೆ : 115.08 ಕೋಟಿ

    ನಾಲ್ಕನೇ ದಿನದ ಗಳಿಕೆ 132.12 ಕೋಟಿ

    ಒಟ್ಟು : 551. 83 ಕೋಟಿ ಎಷ್ಟು ಕೆಜಿಎಫ್ 2 ಈವರೆಗೂ ಬಾಕ್ಸ್ ಆಫೀಸ್ ಅನ್ನು ತುಂಬಿಸಿದೆ ಎಂದು ಕಾಮ್ ಸ್ಕೋರ್ ವರದಿ ಮಾಡಿದೆ. ಕನ್ನಡಕ್ಕಿಂತಲೂ ಹಿಂದಿ ಸಿನಿಮಾ ರಂಗದಿಂದಲೇ ನಿರ್ಮಾಪಕರಿಗೆ ಹೆಚ್ಚು ಹಣ ಸಂದಾಯವಾಗಿದೆ. ಮೊದಲ ದಿನ 53 ಕೋಟಿ, ಎರಡನೇ ದಿನ 45.7 ಕೋಟಿ, ಮೂರನೇ ದಿನ 42.50 ಕೋಟಿ, ನಾಲ್ಕನೇ ದಿನವೂ ಅಂದಾಜು 50 ಕೋಟಿ ಹಣ ಬಂದಿದೆ ಎನ್ನಲಾಗುತ್ತಿದೆ. ಐದೇ ದಿನದಲ್ಲಿ ಬಹುಶಃ ಹಿಂದಿಯಲ್ಲಿ 200 ಕೋಟಿ ಕ್ಲಬ್ ಗೆ ಕೆಜಿಎಫ್ 2 ಸೇರಲಿದೆ.

  • ಕೆಜಿಎಫ್-2 : ಎರಡನೇ ದಿನಕ್ಕೆ 240 ಕೋಟಿ ಬಾಚಿದ ರಾಕಿ ಭಾಯ್ : ಗ್ರೌಂಡ್ ರಿಪೋರ್ಟ್

    ಕೆಜಿಎಫ್-2 : ಎರಡನೇ ದಿನಕ್ಕೆ 240 ಕೋಟಿ ಬಾಚಿದ ರಾಕಿ ಭಾಯ್ : ಗ್ರೌಂಡ್ ರಿಪೋರ್ಟ್

    ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ 2’ ಸಿನಿಮಾ ಈವರೆಗೂ ಬಾಕ್ಸ್ ಆಫೀಸಿನಲ್ಲಿದ್ದ ಎಲ್ಲ ದಾಖಲೆಗಳನ್ನು ಮುರಿದು ಮುನ್ನುಗ್ಗುತ್ತಿದೆ. ಭಾರತೀಯ ಸಿನಿಮಾ ರಂಗದಲ್ಲೇ ಈವರೆಗೂ ಯಾವ ಚಿತ್ರಗಳು ಮಾಡದೇ ಇರುವಂತಹ ಸಾಧನೆಯನ್ನು ಕನ್ನಡದ ಹೆಮ್ಮೆಯ ಚಿತ್ರ ಕೆಜಿಎಫ್ 2 ಮಾಡಿದೆ. ಹಾಗಾಗಿ ಭಾರತೀಯ ಚಲನಚಿತ್ರ ರಂಗವೇ ಬೆರಗಿನಿಂದ ಕನ್ನಡದತ್ತ ನೋಡುತ್ತಿದೆ. ಇದನ್ನೂ ಓದಿ : ಹನುಮ ಜಯಂತಿ : ದೂರದ ಬೆಟ್ಟ ಸಿನಿಮಾದಲ್ಲಿಯ ಡಾ.ರಾಜ್ ಅವರ ಹನುಮನ ಪಾತ್ರ ಏನಾಯಿತು?

    ಮೊದಲನೇ ದಿನ ಬಾಕ್ಸ್ ಆಫೀಸ್ ಕಲೆಕ್ಷನ್ ಭಾರತದಲ್ಲಿ 134.5 ಕೋಟಿ ಗಳಿಸಿತ್ತು. ಇದನ್ನು ಸ್ವತಃ ಸಿನಿಮಾ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಹೇಳಿಕೊಂಡಿತ್ತು. ಎರಡನೇ ದಿನದ ಕಲೆಕ್ಷನ್ ನಲ್ಲೂ ಕೆಜಿಎಫ್ 2 ಹಿಂದೆ ಬಿದ್ದಿಲ್ಲ. ಶುಕ್ರವಾರ ಕೂಡ 105.5  ಕೋಟಿ ಗಳಿಸಿದೆ. ಅಲ್ಲಿಗೆ ಎರಡು ದಿನದ ಒಟ್ಟು ಬಾಕ್ಸ್ ಆಫೀಸ್ ರಿಪೋರ್ಟ್ 240 ಕೋಟಿ ಆಗಿದೆ. ಇದನ್ನೂ ಓದಿ : ಹಸೆಮಣೆ ಏರಿದ ಆಲಿಯಾ-ರಣಬೀರ್‌ಗೆ ಜೋಡಿ ಕುದುರೆ ಉಡುಗೊರೆ

    ಕನ್ನಡದ ಸಿನಿಮಾವೊಂದು ಇದೇ ಮೊದಲ ಬಾರಿಗೆ ಭಾರತೀಯ ಸಿನಿಮಾ ರಂಗದಲ್ಲಿ ಹಲವು ದಾಖಲೆಗಳನ್ನು ಬರೆದಿದೆ. ಭಾರತದಲ್ಲೇ ಎರಡು ದಿನಕ್ಕೆ ಅತೀ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹಿಂದಿಯಲ್ಲಿ ಎರಡೇ ದಿನಕ್ಕೆ ನೂರು ಕೋಟಿ ಕ್ಲಬ್ ಗೆ ಸೇರಿದ ಮೊದಲ ಸಿನಿಮಾ ಎಂಬ ಗರಿಮೆ ಕೆಜಿಎಫ್ ಚಿತ್ರದ್ದು. ಹಿಂದಿಯಲ್ಲಿ ಮೊದಲ ದಿನ 46.79 ಕೋಟಿ, ಎರಡನೇ ದಿನ 55.21 ಕೋಟಿ ಗಳಿಗೆ ಮಾಡಿ, ಬಾಲಿವುಡ್ ನಲ್ಲಿ ಕಡಿಮೆ ಅವಧಿಯಲ್ಲೇ ನೂರು ಕೋಟಿ ಕ್ಲಬ್ ಸೇರಿದ ಚಿತ್ರ ಎನಿಸಿಕೊಂಡಿದೆ. ಒಬ್ಬನೇ ಸ್ಟಾರ್ ನಟಿಸಿದ ಸಿನಿಮಾಗಳು ಈವರೆಗೂ ಇಷ್ಟೊಂದು ಕಲೆಕ್ಷನ್ ಮಾಡಿಲ್ಲ ಹಾಗಾಗಿ ಆ ಗರಿಮೆ ಯಶ್‍ ಗೆ ಸೇರಿದೆ. ಭಾರತೀಯ ಸಿನಿಮಾ ರಂಗದಲ್ಲೇ ಇದೇ ಮೊದಲ ಬಾರಿಗೆ ಕೇರಳದಲ್ಲಿ ಅತೀ ಹೆಚ್ಚು ದುಡ್ಡು ಮಾಡಿದ ಸಿನಿಮಾ ಎಂಬ ಹೆಗ್ಗಳಿಕೆ ಕನ್ನಡ ಚಿತ್ರಕ್ಕೆ ಸಿಕ್ಕಿದೆ. ಕರ್ನಾಟಕದಲ್ಲಿ ಇದುವರೆಗೆ ಈ ಪ್ರಮಾಣದ ದುಡ್ಡನ್ನು ಯಾವ ಚಿತ್ರಗಳು ತಂದುಕೊಟ್ಟಿಲ್ಲ ಎನ್ನುವುದು ಖುಷಿ ಪಡಬೇಕಾದ ಸಂಗತಿ.  ಇದನ್ನೂ ಓದಿ : ಕೆಜಿಎಫ್-2 ಬಾಲಿವುಡ್ ಮೇಲೆ ಹಾಕಿದ ಅಣುಬಾಂಬ್ : ರಾಮ್ ಗೋಪಾಲ್ ವರ್ಮಾ

    ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ 2’ ಸಿನಿಮಾ ವಿಶ್ವದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಬಾಕ್ಸ್ ಆಫೀಸಿನ ಎಲ್ಲಾ ದಾಖಲೆಗಳನ್ನು ಉಢೀಸ್ ಮಾಡಿದೆ. ಬಿಡುಗಡೆಯಾದ ಒಂದೇ ದಿನಕ್ಕೆ ನೂರು ಕೋಟಿ ಕ್ಲಬ್ ಸೇರಿ ಶರವೇಗದಲ್ಲಿ ಮುನ್ನುಗ್ಗುತ್ತಿದೆ. ಕೇವಲ ಗಲ್ಲಾಪೆಟ್ಟಿಗೆ ಮಾತ್ರವಲ್ಲ, ವಿಮರ್ಶಕರು ಕೂಡ ಸಿನಿಮಾವನ್ನು ಕೊಂಡಾಡಿದ್ದಾರೆ.

  • ಕೆಜಿಎಫ್-2 ಬಾಲಿವುಡ್ ಮೇಲೆ ಹಾಕಿದ ಅಣುಬಾಂಬ್ : ರಾಮ್ ಗೋಪಾಲ್ ವರ್ಮಾ

    ಕೆಜಿಎಫ್-2 ಬಾಲಿವುಡ್ ಮೇಲೆ ಹಾಕಿದ ಅಣುಬಾಂಬ್ : ರಾಮ್ ಗೋಪಾಲ್ ವರ್ಮಾ

    ನೇಕ ಹಿಟ್ ಚಿತ್ರಗಳನ್ನು ಕೊಟ್ಟಿರುವ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿನ್ನೆಯಿಂದ ಕೆಜಿಎಫ್ 2 ಚಿತ್ರದ ಬಗ್ಗೆ ಸಾಲು ಸಾಲು ಟ್ವಿಟ್ ಗಳನ್ನು ಮಾಡುತ್ತಿದ್ದಾರೆ. ಸಿನಿಮಾ, ಕಲಾವಿದರು, ತಂತ್ರಜ್ಞರು ಮತ್ತು ನಿರ್ದೇಶಕರ ಬಗ್ಗೆ ಹಾಡಿ ಹೊಗಳುತ್ತಿದ್ದಾರೆ. ಆರ್.ಆರ್.ಆರ್ ಸಿನಿಮಾ ರಿಲೀಸ್ ಆದಾಗ ತಮ್ಮ ಡೇಂಜರ್ಸ್ ಸಿನಿಮಾ ಹೋಲಿಸಿ ಲೇವಡಿ ಮಾಡಿದ್ದ ರಾಮ್ ಗೋಪಾಲ್ ವರ್ಮಾ, ಕೆಜಿಎಫ್ 2 ಸಿನಿಮಾದ ಮೇಲೆ ಎಲ್ಲಿಲ್ಲದ ಪ್ರೀತಿ ತೋರಿದ್ದಾರೆ. ಇದನ್ನೂ ಓದಿ : ಕೆಜಿಎಫ್ 2 ಡಿಜಾಸ್ಟರ್ ಸಿನಿಮಾ ಎಂದು ‘ಥೂ… ಥೂ..’ ಉಗಿಸಿಕೊಂಡ ಬಾಲಿವುಡ್ ನಟ

    ಕೆಜಿಎಫ್ 2 ವಿಶ್ವದಾದ್ಯಂತ ಗೆದ್ದಿದೆ. ಬಾಕ್ಸ್ ಆಫೀಸ್ ತುಂಬಿಸಿದೆ. ಸಿನಿಮಾ ನೋಡಿದ ಪ್ರತಿಯೊಬ್ಬರೂ ಚಿತ್ರದ ಬಗ್ಗೆ ಹಾಡಿ ಹೊಗಳುತ್ತಿದ್ದಾರೆ. ಕನ್ನಡಿಗರಂತೂ ಚಿತ್ರವನ್ನು ಎದೆ ಮೇಲೆ ಇಟ್ಟುಕೊಂಡು ಆರಾಧಿಸುತ್ತಿದ್ದಾರೆ. ಹಾಗೆಯೇ ವರ್ಮಾ ಒಬ್ಬ ಸಾಮಾನ್ಯ ನೋಡುಗನಾಗಿ ಸಿನಿಮಾ ವೀಕ್ಷಿಸಿ, ಚಿತ್ರದ ಬಗ್ಗೆ ಸರಣಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ : ಕನ್ನಡದಲ್ಲೇ ಕೆಜಿಎಫ್ ನೋಡಿ ಫಿದಾ ಆದ ತಲೈವಾ

    ಸ್ಟಾರ್ ನಟರ ಮೇಲೆ ದುಡ್ಡು ಸುರಿಯುವುದಕ್ಕಿಂತ ಸಿನಿಮಾದ ಮೇಲೆ ದುಡ್ಡು ಸುರಿದರೆ ‘ಕೆಜಿಎಫ್ 2’ನಂತಹ ಚಿತ್ರವಾಗುತ್ತದೆ ಎಂದು ಪರೋಕ್ಷವಾಗಿ ಸ್ಟಾರ್ ನಟರ ಮೇಲೆ ದುಡ್ಡು ಹಾಕುವವರಿಗೆ ಟಾಂಗ್ ಕೊಟ್ಟಿದ್ದಾರೆ ವರ್ಮಾ. ಕೆಜಿಎಫ್ ಸಿನಿಮಾದ ಮೂಲಕ ನಿರ್ದೇಶಕ ಪ್ರಶಾಂತ್ ನೀಲ್, ಕನ್ನಡದ ಬಾವುಟವನ್ನು ಜಗತ್ತಿನ ತುತ್ತತುದಿಯವರೆಗೂ ತಗೆದುಕೊಂಡು ಹೋಗಿದ್ದಾರೆ ಎಂದೂ ಟ್ವೀಟ್ ಮಾಡಿದ್ದಾರೆ. ಜಗತ್ತಿನ ನಕಾಶೆಯನ್ನು ಬದಲಿಸಿದ ನಿರ್ದೇಶಕ ಎಂದು ಕೊಂಡಾಡಿದ್ದಾರೆ. ಇದನ್ನೂ ಓದಿ: ಕೆಜಿಎಫ್ 2 : ಯಾವ ರಾಜ್ಯದಲ್ಲಿ ಎಷ್ಟು ಕಲೆಕ್ಷನ್? ಪಕ್ಕಾ ಲೆಕ್ಕ

    ಸಿನಿಮಾದ ಒಂದೊಂದು ದೃಶ್ಯವನ್ನೂ ಹೋಲಿಸಿ ಕಾಮೆಂಟ್ ಮಾಡಿರುವ ರಾಮ್ ಗೋಪಾಲ್ ವರ್ಮಾ, ವಿಲನ್ ಗಳನ್ನು ಹುಡುಕಿಕೊಂಡು‌ ಮಷಿನ್ ಗನ್ ನೊಂದಿಗೆ ಮುಂಬೈಗೆ ಹೊರಡುವ ರಾಕಿಭಾಯ್ ರೀತಿಯಲ್ಲಿ ನಿರ್ದೇಶಕ ಪ್ರಶಾಂತ್ ನೀಲ್, ಬಾಲಿವುಡ್ ಮೇಲೆ ಅಣುಬಾಂಬ್ ಸಿಡಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಕೆಜಿಎಫ್-2 ಡಿಜಾಸ್ಟರ್ ಸಿನಿಮಾ ಎಂದು ‘ಥೂ… ಥೂ..’ ಉಗಿಸಿಕೊಂಡ ಬಾಲಿವುಡ್ ನಟ

    ಕೆಜಿಎಫ್-2 ಡಿಜಾಸ್ಟರ್ ಸಿನಿಮಾ ಎಂದು ‘ಥೂ… ಥೂ..’ ಉಗಿಸಿಕೊಂಡ ಬಾಲಿವುಡ್ ನಟ

    ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ 2’ ಸಿನಿಮಾ ವಿಶ್ವದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಬಾಕ್ಸ್ ಆಫೀಸಿನ ಎಲ್ಲಾ ದಾಖಲೆಗಳನ್ನು ಉಡೀಸ್ ಮಾಡಿದೆ. ಬಿಡುಗಡೆಯಾದ ಒಂದೇ ದಿನಕ್ಕೆ ನೂರು ಕೋಟಿ ಕ್ಲಬ್ ಸೇರಿ ಶರವೇಗದಲ್ಲಿ ಮುನ್ನುಗ್ಗುತ್ತಿದೆ. ಕೇವಲ ಗಲ್ಲಾಪೆಟ್ಟಿಗೆ ಮಾತ್ರವಲ್ಲ, ವಿಮರ್ಶಕರು ಕೂಡ ಸಿನಿಮಾವನ್ನು ಕೊಂಡಾಡಿದ್ದಾರೆ. ಆದರೆ, ಬಾಲಿವುಡ್ ನಟ ಮಾತ್ರ ಈ ಚಿತ್ರಕ್ಕೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾನೆ. ಇದನ್ನೂ ಓದಿ : ಕನ್ನಡದಲ್ಲೇ ಕೆಜಿಎಫ್ ನೋಡಿ ಫಿದಾ ಆದ ತಲೈವಾ

    ಕನ್ನಡದ ಸಿನಿಮಾವೊಂದು ವಿಶ್ವ ಮಟ್ಟದಲ್ಲಿ ಎದೆಸೆಟೆದು ನಿಂತಾಗ, ಕೆಲವರಿಗೆ ಅದನ್ನು ತಡೆಯುವುದಕ್ಕೆ ಆಗುತ್ತಿಲ್ಲ. ಬಿಟೌನ್‍ನ ಅದೆಷ್ಟೋ ಕಲಾವಿದರು ಮತ್ತು ತಂತ್ರಜ್ಞರು ಕೆಜಿಎಫ್ ಸಿನಿಮಾದ ಮುಂದೆ ಮಂಡಿಯೂರಿ ಕೂತಿದ್ದಾರೆ. ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಒಂದರ ಮೇಲೊಂದು ಟ್ವಿಟ್ ಮಾಡಿ ಚಿತ್ರವನ್ನು ಹಾಡಿ ಹೊಗಳುತ್ತಿದ್ದಾರೆ. ಆದರೆ ಬಾಲಿವುಡ್ ನಟ ಮಾತ್ರ ‘ಕೆಜಿಎಫ್ 2 ಡಿಜಾಸ್ಟರ್ ಸಿನಿಮಾ’ ಎಂದು ಟ್ವೀಟ್ ಮಾಡಿದ್ದಾನೆ. ಇದನ್ನೂ ಓದಿ: ಕೆಜಿಎಫ್ 2 : ಯಾವ ರಾಜ್ಯದಲ್ಲಿ ಎಷ್ಟು ಕಲೆಕ್ಷನ್? ಪಕ್ಕಾ ಲೆಕ್ಕ

    ಈ ನಟ ಹೀಗೆ ಬರೆಯುವುದು ಮೊದಲೇನೂ ಅಲ್ಲ. ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಚಿತ್ರಕ್ಕೂ ಕೂಡ ನೆಗೆಟಿವ್ ಕಾಮೆಂಟ್ ಮಾಡಿದ್ದ. ಇದೊಂದು ಕಳಪೆ ಚಿತ್ರ ಎಂದು ಹೇಳಿದ್ದು, ನಟರ ಬಗ್ಗೆಯೂ ಲೇವಡಿ ಮಾಡಿದ್ದ. ಈಗ ಕೆಜಿಎಫ್ ಸಿನಿಮಾದ ಬಗ್ಗೆಯೂ ಹಾಗೆಯೇ ಕಳಪೆಯಾಗಿಯೇ ಬರೆದಿದ್ದಾನೆ. ‘ಕೆಜಿಎಫ್ 2 ಸಿನಿಮಾ ಮೂರು ಗಂಟೆಯ ಟಾರ್ಚರ್’ ಎಂದು ಕಾಮೆಂಟ್ ಬರೆದಿದ್ದಾನೆ. ಈ ನಡೆಗೆ ಸಿನಿಮಾ ನೋಡಿದ ಪ್ರೇಕ್ಷಕರಿಗೆ ಆ ನಟನಿಗೆ ‘ಥುಪಕ್’ ಅಂತ ಉಗಿದಿದ್ದಾರೆ. ಇದನ್ನೂ ಓದಿ: `ಕೆಜಿಎಫ್ 2’ಗಾಗಿ ಲಂಡನ್‌ನಿಂದ ಬೆಂಗಳೂರಿಗೆ ಬಂದ ಅಭಿಮಾನಿ!

    ಅಷ್ಟಕ್ಕೂ ಕಾಮೆಂಟ್ ಮಾಡಿದ ನಟ ಬೇರೆ ಯಾರೂ ಇಲ್ಲ. ಈ ಹಿಂದೆ ‘ದೇಶದ್ರೋಹಿ’ ಎಂಬ ಸಿನಿಮಾವನ್ನು ನಿರ್ಮಾಣ ಮಾಡಿ, ನಟಿಸಿದ ಮಹಾನುಭಾವ ಕಮಲ್ ಆರ್.ಖಾನ್. ಇವನೊಬ್ಬ ಸ್ವಯಂ ಘೋಷಿತ ವಿಮರ್ಶಕ. ಬಾಯಿಗೆ ಬಂದಂತೆ ಬರೆದು, ಕೊನೆಗೆ ಜನರ ಕಡೆಯಿಂದ ಉಗಿಸಿಕೊಳ್ಳುವ ಮಹಾನ್ ನಟ. ನೆಗೆಟಿವ್ ಆಗಿ ಪೋಸ್ಟ್ ಮಾಡುವುದು, ಆ ಮೂಲಕ ಪ್ರಚಾರ ಗಿಟ್ಟಿಸಿಕೊಳ್ಳುವುದೇ ಇವನ ಉದ್ಯೋಗವಾಗಿದೆ. ಯಾರೂ ಸೀರಿಯಸ್ ಆಗಿ ತಗೆದುಕೊಳ್ಳದೇ ಇರುವ ಕಾರಣಕ್ಕಾಗಿ ಸಿನಿಮಾಗಳ ಬಗ್ಗೆ, ವ್ಯಕ್ತಿಗಳ ಬಗ್ಗೆ ಹೀಗೆ ತಲೆಕೆಟ್ಟವರಂತೆ ಬರೆಯುತ್ತಲೇ ಇರುತ್ತಾನೆ. ಇದನ್ನೂ ಓದಿ : ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಮದುವೆ ಆದ್ರಾ? ಹುಡುಗ ಯಾರು?

    ಕಮಲ್ ಈವರೆಗೂ ಏನೆಲ್ಲ ಬರೆದಿದ್ದಾನೋ ಅದನ್ನು ಓದಿಕೊಂಡು ಜನರು ಸುಮ್ಮನಿದ್ದರು. ಕೆಜಿಎಫ್ 2 ತಂಟೆಗೆ ಬರುತ್ತಿದ್ದಂತೆಯೇ ಹಿಗ್ಗಾಮುಗ್ಗ ಜಾಡಿಸಿದ್ದಾರೆ ಸಿನಿ ಪ್ರಿಯರು. ಕಮಲ್‍ ಮತ್ತೆ ಕಾಮೆಂಟ್ ಮಾಡದಂತೆ ಅವನನ್ನು ತರಾಟೆಗೆ ತಗೆದುಕೊಂಡಿದ್ದಾರೆ.