Tag: ಕಮಲ್ ಪಂಥ್

  • ಪೊಲೀಸ್ ಕಮಿಷನರ್ ಹುದ್ದೆಗೆ ಸುಳ್ಳುಗಾರ ಎಂದು ಹೇಳುವ ನಡೆ ಸರಿಯಲ್ಲ: ಭಾಸ್ಕರ್ ರಾವ್

    ಪೊಲೀಸ್ ಕಮಿಷನರ್ ಹುದ್ದೆಗೆ ಸುಳ್ಳುಗಾರ ಎಂದು ಹೇಳುವ ನಡೆ ಸರಿಯಲ್ಲ: ಭಾಸ್ಕರ್ ರಾವ್

    ಬೆಂಗಳೂರು: ಪೊಲೀಸ್ ಕಮಿಷನರ್ ಹುದ್ದೆಗೆ ಸುಳ್ಳುಗಾರ ಎಂದು ಹೇಳುವ ನಡೆ ಸರಿಯಲ್ಲ ಎಂದ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದು, ಬಿಜೆಪಿ ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ.

    ಪೊಲೀಸ್ ಕಮಿಷನರ್ ಕಮಲ್ ಪಂಥ್ ಸುಳ್ಳು ಹೇಳಿದ್ದಾರೆ. ಚಂದ್ರು ಸ್ನೇಹಿತ ಸೈಮನ್ ರಾಜನ್ ಹೇಳಿರುವುದೇ ಸತ್ಯ. ಚಂದ್ರು ಮನೆಯವರು ಹೇಳಿರುವಂತೆ ಉರ್ದು ಕಾರಣಕ್ಕಾಗಿಯೇ ಚಂದ್ರು ಕೊಲೆ ಆಗಿರುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಎಂದು ಆರೋಪಿಸಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ಪೊಲೀಸ್ ಆಯುಕ್ತರು ಎಂದರೆ ಬೆಂಗಳೂರು 15 ಮಿಲಿಯನ್ ನಾಗರಿಕರನ್ನು ರಕ್ಷಿಸುವ ಸಂಸ್ಥೆಯಾಗಿದೆ. ಆಡಳಿತಾರೂಢ ರಾಜ್ಯ ಸರ್ಕಾರ ಮತ್ತು ಅಧಿಕಾರದಲ್ಲಿರುವ ಪಕ್ಷದ ರಾಜಕಾರಣಿಯೊಬ್ಬರು ಮಾಧ್ಯಮಗಳಲ್ಲಿ ಆಯುಕ್ತರನ್ನು ಸುಳ್ಳುಗಾರ ಎಂದು ಕರೆಯುವುದು ಮುಖ್ಯಮಂತ್ರಿ ಮತ್ತು ಸರ್ಕಾರವನ್ನು ಅವಮಾನಿಸುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಪ್ರಧಾನಿ ತವರಲ್ಲೇ ಭೀಕರ ದುರಂತ – ಕೆಮಿಕಲ್ ಫ್ಯಾಕ್ಟರಿ ಸ್ಫೋಟಗೊಂಡು 6 ಮಂದಿ ಸಾವು

    ಇತ್ತೀಚೆಗಷ್ಟೇ ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ರಾಜೀನಾಮೆ ನೀಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷವನ್ನು ಸೇರಿದ್ದಾರೆ. ನವದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಎಎಪಿ ಕಚೇರಿಯಲ್ಲಿ ಆಪ್ ಪಕ್ಷದ ಧ್ವಜ ಹಿಡಿದರು. ಇದನ್ನೂ ಓದಿ: ಮುಸ್ಕಾನ್‍ರನ್ನು ತನಿಖೆ ನಡೆಸುವಂತೆ ಸಿಎಂಗೆ ಅನಂತ್‍ಕುಮಾರ್ ಹೆಗ್ಡೆ ಪತ್ರ

  • ಬಿಜೆಪಿಯವರು ಸೈಮನ್‌ಗೆ ದುಡ್ಡು ಕೊಟ್ಟು ಸುಳ್ಳು ಹೇಳಿಸುತ್ತಿದ್ದಾರೆ: ಜಮೀರ್ ಅಹ್ಮದ್

    ಬಿಜೆಪಿಯವರು ಸೈಮನ್‌ಗೆ ದುಡ್ಡು ಕೊಟ್ಟು ಸುಳ್ಳು ಹೇಳಿಸುತ್ತಿದ್ದಾರೆ: ಜಮೀರ್ ಅಹ್ಮದ್

    ಬೆಂಗಳೂರು: ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರನ್ನು ಪ್ರಜ್ಞಾವಂತರು, ಅನುಭವಿಗಳು ಎಂದು ಭಾವಿಸಿದ್ದೆ. ಆದರೆ ಅವರು ಛಲವಾದಿಪಾಳ್ಯದ ಯುವಕ ಚಂದ್ರುವಿನ ಕೊಲೆ ಪ್ರಕರಣಕ್ಕೆ ಇಲ್ಲದ ಕಥೆಗಳನ್ನು ತಳುಕು ಹಾಕಿ ಇಷ್ಟು ಕೀಳುಮಟ್ಟದ ಹೇಳಿಕೆ ನೀಡುತ್ತಾರೆ ಎಂದು ಭಾವಿಸಿರಲಿಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಅಸಮಾಧಾನ ವ್ಯಕ್ತಪಡಿಸಿದರು.

    ಶನಿವಾರ ವಿಧಾನಪರಿಷತ್ ಸದಸ್ಯ ರವಿಕುಮಾರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಜಮೀರ್, ಯಾವುದೇ ಪ್ರಕರಣದ ತನಿಖೆ ಮಾಡುವವರು ಪೊಲೀಸರು. ಬಿಜೆಪಿ ಅಥವಾ ಆರ್‌ಎಸ್‌ಎಸ್ ಅಲ್ಲ. ಇಂದು ಮನಬಂದಂತೆ ಕೀಳುಮಟ್ಟದ ಹೇಳಿಕೆ ನೀಡಿರುವ ಎಂಎಲ್‌ಸಿ ರವಿಕುಮಾರ್ ಅವರೂ ಅಲ್ಲ. ಏಪ್ರಿಲ್ 5 ರ ರಾತ್ರಿ ನಡೆದ ಘಟನೆ ಕುರಿತು ಸ್ವತಃ ಸೈಮನ್ ನೀಡಿರುವ ಹೇಳಿಕೆಯ ಎಫ್‌ಐಆರ್ ಪ್ರತಿಯನ್ನು ಹಿಡಿದು ಪೊಲೀಸ್ ಆಯುಕ್ತ ಕಮಲ್ ಪಂಥ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ ಎಂದರು. ಇದನ್ನೂ ಓದಿ: ಚಂದ್ರು ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್- ಘಟನೆಯ ಇಂಚಿಂಚು ಮಾಹಿತಿ ನೀಡಿದ ಸ್ನೇಹಿತ ಸೈಮನ್ ರಾಜ್

    ಎಫ್‌ಐಆರ್ ಪ್ರತಿಯಲ್ಲೇನಿದೆ?
    ಅಂದು ರಾತ್ರಿ ಛಲವಾದಿಪಾಳ್ಯದ ಮನೆಯಲ್ಲಿ ಹುಟ್ಟುಹಬ್ಬದ ಪ್ರಯುಕ್ತ ಕೇಕ್ ಕಟ್ ಮಾಡಿದ್ದೆವು. ಊಟಕ್ಕಾಗಿ ಚಾಮರಾಜಪೇಟೆ, ಸಿಟಿ ಮಾರ್ಕೆಟ್ ಎಲ್ಲಾ ಕಡೆ ಸುತ್ತಾಡಿದೆವು. ಎಲ್ಲೂ ಊಟ ಸಿಗಲಿಲ್ಲ. ಹಾಗಾಗಿ ಚಿಕನ್ ರೋಲ್ ತಿನ್ನಲು ಗುರದಹಳ್ಳಿ ಬಸ್ ನಿಲ್ದಾಣಕ್ಕೆ ಬಂದಾಗ ನಮ್ಮ ವಾಹನ ಶಾಹೀದ್ ವಾಹನಕ್ಕೆ ಡಿಕ್ಕಿ ಹೊಡೆಯಿತು.

    ಡಿಕ್ಕಿಯ ಪರಿಣಾಮ ಶಾಹೀದ್ ಮತ್ತು ಚಂದ್ರುವಿನ ನಡುವೆ ಮಾತಿಗೆ ಮಾತು ಬೆಳೆದು ಶಾಹೀದ್ ಚಂದ್ರುವಿನ ತೊಡೆಗೆ ಚುಚ್ಚಿದ. ನನಗೆ ಭಯವಾಗಿ ತಕ್ಷಣ ಅಲ್ಲಿಂದ ಓಡಿ ಹೋದೆ. ಪುನಃ ಬೆಳಗಿನ ಜಾವ 4 ಗಂಟೆಗೆ ವಾಪಸ್ ಬಂದು ನೋಡಿದಾಗ ಚಂದ್ರು ರಕ್ತಸ್ರಾವದಿಂದ ಒದ್ದಾಡುತ್ತಿದ್ದ. ತಕ್ಷಣ ಅವನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಿದೆ. ಆದರೂ ಆತ ಬದುಕುಳಿಯಲಿಲ್ಲ ಎಂದು ಚಂದ್ರುವಿನ ಗೆಳೆಯ ಸೈಮನ್ ಪೊಲೀಸರಿಗೆ ಮಾಹಿತಿ ನೀಡಿದ್ದ. ಈ ಬಗ್ಗೆ ಪೊಲೀಸ್ ಆಯುಕ್ತ ಕಮಲ್ ಪಂಥ್ ಟ್ವೀಟ್ ಕೂಡಾ ಮಾಡಿದ್ದಾರೆ. ಇದನ್ನೂ ಓದಿ: ನಾನು ಯಾವುದೇ ಸುಳ್ಳು ಹೇಳಿಲ್ಲ: ಕಮಲ್ ಪಂಥ್ ಸ್ಪಷ್ಟನೆ

    ಪೊಲೀಸ್ ಆಯುಕ್ತ ಕಮಲ್ ಪಂತ್ ಅವರ ಕಾರ್ಯವೈಖರಿ ಬಗ್ಗೆ ಜನರಲ್ಲಿ ಒಳ್ಳೆಯ ಅಭಿಪ್ರಾಯವಿದೆ. ಅಷ್ಟಕ್ಕೂ ಅವರನ್ನು ನೇಮಿಸಿರುವುದು ನಿಮ್ಮ ಬಿಜೆಪಿ ಸರ್ಕಾರವೇ. ಇದೀಗ ನೀವೇ ಅವರ ಮೇಲೆ ಬೆರಳು ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿರುವುದು ಖಂಡನೀಯ ಎಂದರು.

    ನೀವು ಸೈಮನ್‌ಗೆ ದುಡ್ಡು ಕೊಟ್ಟು ಸುಳ್ಳು ಹೇಳಿಸಿರುವುದು ನಮಗೇನೂ ಗೊತ್ತಿಲ್ಲ ಎಂದು ಕೊಂಡಿದ್ದೀರಾ ಮಾನ್ಯ ರವಿಕುಮಾರ್ ಅವರೇ? ನೀವು ಬಾಯಿಗೆ ಬಂದಂತೆ ಬಣ್ಣ ಹಚ್ಚಿ ಕಥೆ ಹೇಳಿದರೆ ಸತ್ಯ ಎಂದಿಗೂ ಸುಳ್ಳಾಗದು ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಆಕ್ರೋಶ ವ್ಯಕ್ತಪಡಿಸಿದರು.

  • ಚಂದ್ರು ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್- ಘಟನೆಯ ಇಂಚಿಂಚು ಮಾಹಿತಿ ನೀಡಿದ ಸ್ನೇಹಿತ ಸೈಮನ್ ರಾಜ್

    ಚಂದ್ರು ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್- ಘಟನೆಯ ಇಂಚಿಂಚು ಮಾಹಿತಿ ನೀಡಿದ ಸ್ನೇಹಿತ ಸೈಮನ್ ರಾಜ್

    ಬೆಂಗಳೂರು: ಕನ್ನಡ ಗೊತ್ತಿಲ್ಲ ಉರ್ದುನಲ್ಲಿ ಮಾತನಾಡಿ ಎಂದಿದ್ದರು. ಬಳಿಕ ಚಾಕುವಿನಿಂದ ಇರಿದು ಚಂದ್ರುವನ್ನು ಕೊಲೆ ಮಾಡಿದ್ದಾರೆ ಎಂದು ಇದೀಗ ಸ್ನೇಹಿತ ಸೈಮನ್ ರಾಜ್ ತಿಳಿಸಿದ್ದಾರೆ.

    ಚಂದ್ರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನನ್ನ ಹುಟ್ಟಹಬ್ಬ ಇತ್ತು. ನಾನು ಮತ್ತು ಚಂದ್ರು ಚಿಕನ್ ರೋಲ್ ತಿನ್ನಲು ಹಳೆಗುಡ್ಡದಹಳ್ಳಿಗೆ ಹೋಗಿದ್ದೆವು. ಆದರೆ ಚಿಕನ್ ರೋಲ್ ಅಂಗಡಿ ಕ್ಲೋಸ್ ಆಗಿತ್ತು. ಬಳಿಕ ಅಲ್ಲಿದ್ದ ಬೇಕರಿಗೆ ಹೋಗುವ ವೇಳೆ ಬೈಕ್ ಟಚ್ ಆದ ವಿಚಾರವಾಗಿ ಸ್ಥಳೀಯ ಯುವಕರ ನಡುವೆ ಮಾತಿನ ಚಕಮಕಿ ನಡೆಯಿತು. ಆ ಬಳಿಕ ಮೂರು ಜನ ಬಂದು ಚಾಕು ತೆಗೆದಾಗ ನಾನು ಅವರನ್ನು ತಳ್ಳಿ ಓಡಿ ಹೋಗಿದ್ದೆ. ಚಂದ್ರುವನ್ನು ಓಡಲು ಹೇಳಿದ್ದೆ ಬಳಿಕ ಚಂದ್ರುಗೆ ಫೋನ್ ಮಾಡಿದಾಗ ಫೋನ್ ತೆಗೆದಿರಲಿಲ್ಲ. ನಂತರ ಘಟನಾ ಸ್ಥಳಕ್ಕೆ ವಾಪಸ್ ಬಂದಾಗ ಆತ ರಕ್ತದ ಮಡುವಿನಲ್ಲಿ ಬಿದ್ದಿದ್ದ ನಂತರ ಆಟೋದಲ್ಲಿ ಹಾಕಿಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿದ್ದೆ ಅಷ್ಟೋತ್ತಿಗೆ ಆತ ಮೃತಪಟ್ಟಿದ್ದ ಎಂದು ದುಃಖಿತರಾದರು. ಇದನ್ನೂ ಓದಿ: ನಾನು ಯಾವುದೇ ಸುಳ್ಳು ಹೇಳಿಲ್ಲ: ಕಮಲ್ ಪಂಥ್ ಸ್ಪಷ್ಟನೆ


    ಈ ಮೊದಲು ಕಮಿಷನರ್ ಕಮಲ್ ಪಂಥ್ ಪ್ರಕರಣ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸುಳ್ಳು ಹೇಳಿಲ್ಲ. ನಮ್ಮ ತನಿಖೆ ಪ್ರಕಾರ ಬೈಕ್ ಟಚ್ ಆಗಿದ್ದಕ್ಕೆ ಚಂದ್ರು ಕೊಲೆ ನಡೆದಿದೆ. ಚಂದ್ರು ಕೊಲೆ ಪ್ರಕರಣದ ತನಿಖೆಯಲ್ಲಿ ಕಂಡುಕೊಂಡ ವಿಚಾರವನ್ನಷ್ಟೇ ಹೇಳಿದ್ದೇನೆ. ನಮ್ಮ ತನಿಖೆಯಲ್ಲಿ ಮೃತ ಚಂದ್ರು ಜೊತೆಗೆ ಘಟನೆ ವೇಳೆ ಇದ್ದ ಸೈಮನ್ ಹೇಳಿಕೆ ನೀಡಿದ್ದಾನೆ. ನಮ್ಮ ತನಿಖೆ ವೇಳೆ ಬೈಕ್ ಟಚ್ ಆಗಿದ್ದರಿಂದಲೇ ಚಾಕುವಿನಿಂದ ಇರಿದಿದ್ದಾಗಿ ಸೈಮನ್ ಹೇಳಿಕೆ ನೀಡಿದ್ದಾನೆ. ಈ ಹಿನ್ನೆಲೆ ತನಿಖೆ ಮಾಡಿದ್ದ ಬಳಿಕ ಕಂಡುಕೊಂಡ ವಿಚಾರದ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಇದನ್ನೂ ಓದಿ: ಪೊಲೀಸ್ ಕಮಿಷನರ್ ಸುಳ್ಳು ಹೇಳಿದ್ದಾರೆ, ಚಂದ್ರು ಕೊಲೆಗೆ ಉರ್ದು ಕಾರಣ: ರವಿಕುಮಾರ್

    ಪೊಲೀಸ್ ಕಮಿಷನರ್ ಕಮಲ್ ಪಂಥ್ ಸುಳ್ಳು ಹೇಳಿದ್ದಾರೆ. ಚಂದ್ರು ಸ್ನೇಹಿತ ಸೈಮನ್ ರಾಜ್ ಹೇಳಿರುವುದೇ ಸತ್ಯ. ಚಂದ್ರು ಮನೆಯವರು ಹೇಳಿರುವಂತೆ ಉರ್ದು ಕಾರಣಕ್ಕಾಗಿಯೇ ಚಂದ್ರು ಕೊಲೆ ಆಗಿರುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಆರೋಪಿಸಿದ್ದರು. ಇದಕ್ಕೆ ಪೂರಕ ಎಂಬಂತೆ ಸೈಮನ್ ರಾಜ್ ಉರ್ದು ಮಾತನಾಡದ್ದಕ್ಕೆ ಕೊಲೆ ಆಗಿದೆ ಎಂದು ಹೇಳಿಕೆ ನೀಡಿರುವುದು ಮತ್ತು ಕೊಲೆಯಾದ ದಿನವೇ ಪೋಷಕರಿಂದಲೂ ಇದೇ ಆರೋಪ ಕೇಳಿಬಂದಿರುವುದು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಅನುಮಾನಗಳು ಮೂಡಲಾರಂಭಿಸಿದೆ. ಇದೀಗ ಚಂದ್ರು ಕೊಲೆ ಪ್ರಕರಣದಲ್ಲಿ ಟ್ವಿಸ್ಟ್ ಹಿನ್ನೆಲೆ ಪೊಲೀಸರಿಂದ ಮತ್ತೊಮ್ಮೆ ಸೈಮನ್ ರಾಜ್ ವಿಚಾರಣೆಗಾಗಿ ಜೆಜೆನಗರ ಪೊಲೀಸರು ಕರೆಸಿಕೊಂಡಿದ್ದಾರೆ.

  • ಪೊಲೀಸ್ ಕಮಿಷನರ್ ಸುಳ್ಳು ಹೇಳಿದ್ದಾರೆ, ಚಂದ್ರು ಕೊಲೆಗೆ ಉರ್ದು ಕಾರಣ: ರವಿಕುಮಾರ್

    ಪೊಲೀಸ್ ಕಮಿಷನರ್ ಸುಳ್ಳು ಹೇಳಿದ್ದಾರೆ, ಚಂದ್ರು ಕೊಲೆಗೆ ಉರ್ದು ಕಾರಣ: ರವಿಕುಮಾರ್

    ಬೆಂಗಳೂರು: ಪೊಲೀಸ್ ಕಮಿಷನರ್ ಕಮಲ್ ಪಂಥ್ ಸುಳ್ಳು ಹೇಳಿದ್ದಾರೆ. ಚಂದ್ರು ಸ್ನೇಹಿತ ಸೈಮನ್ ರಾಜನ್ ಹೇಳಿರುವುದೇ ಸತ್ಯ. ಚಂದ್ರು ಮನೆಯವರು ಹೇಳಿರುವಂತೆ ಉರ್ದು ಕಾರಣಕ್ಕಾಗಿಯೇ ಚಂದ್ರು ಕೊಲೆ ಆಗಿರುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹೇಳಿದರು.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ರವಿಕುಮಾರ್, ಬಿಜೆಪಿ ಈಗಲೂ ಸತ್ಯವನ್ನೇ ಹೇಳುತ್ತಿದೆ. ಗೃಹ ಸಚಿವರಿಗೆ ಮಾಹಿತಿ ಕೊರತೆ ಇತ್ತು. ಪ್ರಕರಣ ಗಂಭೀರವಾಗುತ್ತದೆ ಎಂಬ ಕಾರಣಕ್ಕೆ ಗೃಹ ಸಚಿವರಿಗೆ ತಪ್ಪು ಮಾಹಿತಿ ನೀಡಲಾಗಿದೆ. ಈ ಬಗ್ಗೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ತನಿಖೆ ನಡೆಸಿ ಸತ್ಯಾಸತ್ಯತೆ ಹೊರಗೆ ಬರಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಬ್ರಿಟಿಷರಿಗೂ, ಬಿಜೆಪಿಗೂ ಯಾವುದೇ ವ್ಯತ್ಯಾಸವಿಲ್ಲ: ಹೆಚ್‍ಡಿಕೆ

    ಪೊಲೀಸ್ ಆಯುಕ್ತರು ಹೇಳಿದ್ದೇನು..?
    ಬೈಕ್ ತಾಗಿದ ವಿಚಾರದಲ್ಲಿ ಚಂದ್ರು ಹಾಗೂ ಶಾಹಿದ್ ಎಂಬಾತನೊಂದಿಗೆ ಜಗಳ ಏರ್ಪಟ್ಟಿತ್ತು. ಜಗಳ ವಿಕೋಪಕ್ಕೆ ತೆರಳಿ, ಚಂದ್ರುವಿನ ಬಲ ತೊಡೆಗೆ ಶಾಹಿದ್ ಚೂರಿಯಿಂದ ಇರಿದು ಪರಾರಿಯಾಗಿದ್ದ ಎಂದು ಪೊಲೀಸ್ ಆಯುಕ್ತ ಕಮಲ್ ಪಂಥ್ ಪ್ರತಿಕ್ರಿಯಿಸಿದ್ದರು. ಇದನ್ನೂ ಓದಿ: ಟಿಪ್ಪು ಜಯಂತಿ ಮಾಡಿ ಹತ್ತಾರು ಕೊಲೆಗಳಿಗೆ ದಾರಿ ಮಾಡ್ಕೊಟ್ಟಿದ್ದು ಸಿದ್ದರಾಮಯ್ಯ: ಪ್ರತಾಪ್ ಸಿಂಹ

    ಗೃಹಸಚಿವರ ಹೇಳಿಕೆ:
    ಚಂದ್ರು ಕೊಲೆ ವಿಚಾರವಾಗಿ ಗೃಹಸಚಿವ ಆರಗ ಜ್ಞಾನೇಂದ್ರ ಉರ್ದು ಭಾಷೆ ಬಾರದ ಕಾರಣ ಆತನ ಕೊಲೆ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಆದರೆ ಬಳಿಕ ತಮ್ಮ ಮಾತನ್ನು ತಪ್ಪಾಗಿ ಹೇಳಿದ್ದಾಗಿ ತಿಳಿಸಿ, ಚಂದ್ರು ಕೊಲೆಗೆ ಬೈಕ್ ಗಲಾಟೆಯೇ ಕಾರಣ ಎಂದಿದ್ದರು.

  • ಬೈಕ್‍ಗೆ ಡಿಕ್ಕಿ ಹೊಡೆದಿದ್ದಕ್ಕೆ ಚಂದ್ರು ಕೊಲೆ: ಕಮಲ್ ಪಂಥ್

    ಬೈಕ್‍ಗೆ ಡಿಕ್ಕಿ ಹೊಡೆದಿದ್ದಕ್ಕೆ ಚಂದ್ರು ಕೊಲೆ: ಕಮಲ್ ಪಂಥ್

    ಬೆಂಗಳೂರು: ಉರ್ದು ಭಾಷೆ ಬಾರದಕ್ಕೆ ಚಂದ್ರುವನ್ನು ಕೊಲೆ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಕ್ಕೆ ಬೈಕ್ ಡಿಕ್ಕಿ ಹೊಡೆದ ವಿಚಾರಕ್ಕೆ ಜಗಳ ನಡೆದು ಕೊಲೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ.

    ಜೆಜೆ ನಗರ ಪಿಎಸ್ ಕೊಲೆ ಪ್ರಕರಣ ಕುರಿತು ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿರುವ ಕಮಲ್ ಪಂತ್ ಅವರು, ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಪ್ರಿಲ್ 5ರ ಮಧ್ಯರಾತ್ರಿ ಸೈಮನ್ ರಾಜ್ ಮತ್ತು ಕಾಟನ್‍ಪೇಟೆಯ ಕ್ರಿಶ್ಚಿಯನ್ ಸಮುದಾಯದ ಚಂದ್ರು(22) ಮೈಸೂರು ರಸ್ತೆಯಲ್ಲಿ ಊಟಕ್ಕೆ ತೆರಳಿ ಹಿಂದಿರುಗುತ್ತಿದ್ದರು. ಈ ವೇಳೆ ಇವರ ಮತ್ತು ಶಾಹಿದ್ ಓಡಿಸುತ್ತಿದ್ದ ಬೈಕ್‍ಗೆ ಪರಸ್ಪರ ತಗುಲಿದೆ. ಈ ವಿಷಯಕ್ಕೆ ಮೊದಲು ಗಲಾಟೆಗೆ ಪ್ರಾರಂಭವಾಗಿದೆ. ಇದನ್ನೂ ಓದಿ:  ಚಿಕನ್ ಖರೀದಿ ಮಾಡುವಾಗ ಗಲಾಟೆ – ಯುವಕ ಬರ್ಬರ ಹತ್ಯೆ

    ಈ ಗಲಾಟೆಗೆ ಇತರರು ಸೇರಿಕೊಂಡಿರುತ್ತಾರೆ. ಗಲಾಟೆಯ ಸಂದರ್ಭದಲ್ಲಿ ಶಾಹಿದ್ ಚಂದ್ರುವಿನ ಬಲ ತೊಡೆಗೆ ಇರಿದು ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ. ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ತನಿಖೆ ಮುಂದುವರೆದಿದೆ ಎಂದು ಟ್ವೀಟ್ ಮಾಡಿದ್ದಾರೆ.

    ಆರಗ ಹೇಳಿದ್ದೇನು?
    ಚಂದ್ರು ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಆರಗ ಜ್ಞಾನೇಂದ್ರ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯಿಸಿದ್ದು, ಚಂದ್ರು ಹತ್ಯೆ ಬಗ್ಗೆ ಮಾಹಿತಿ ಪಡೆದಿದ್ದೇನೆ. ಚಂದ್ರುವಿಗೆ ಉರ್ದು ಮಾತಾಡಲು ಬರುತ್ತಿರಲಿಲ್ಲ. ಚಂದ್ರುವಿಗೆ ಕನ್ನಡ ಬಿಟ್ಟು ಬೇರೆ ಭಾಷೆ ಬರಲ್ಲ ಅಂತ ಹೇಳಿ ಅಮಾನುಷವಾಗಿ ಕೊಲೆ ಮಾಡಿದ್ದಾರೆ. ಚಂದ್ರು ಒಬ್ಬ ದಲಿತ ಯುವಕ. ಕೆಲವರ ಬಂಧನ ಆಗಿದೆ. ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉರ್ದು ಮಾತನಾಡಲು ಬರದಕ್ಕೆ ಚಂದ್ರು ಕೊಲೆ: ಆರಗ

  • ನಾಳೆಯಿಂದ ಜ.4ರ ವರೆಗೆ ರಾತ್ರಿ 10 ಗಂಟೆಯಿಂದ ಎಲ್ಲಾ ಫ್ಲೈಓವರ್ ಕ್ಲೋಸ್: ಕಮಲ್ ಪಂಥ್

    ನಾಳೆಯಿಂದ ಜ.4ರ ವರೆಗೆ ರಾತ್ರಿ 10 ಗಂಟೆಯಿಂದ ಎಲ್ಲಾ ಫ್ಲೈಓವರ್ ಕ್ಲೋಸ್: ಕಮಲ್ ಪಂಥ್

    ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿಯಾಗುತ್ತಿರುವ ಹಿನ್ನೆಲೆ ಡಿಸೆಂಬರ್ 29 ರಿಂದ ಜನವರಿ 4ರ ವರೆಗೆ ಎಲ್ಲಾ ಫ್ಲೈಓವರ್‌ಗಳನ್ನು ಬಂದ್ ಮಾಡಲಾಗುತ್ತದೆ. ಅನಗತ್ಯ ಓಡಾಡಿದರೆ ಕೇಸ್ ಹಾಕಲಾಗುತ್ತದೆ ಎಂದು ಪೊಲೀಸ್ ಕಮಿಷನರ್ ಕಮಲ್ ಪಂಥ್ ಖಡಕ್ ವಾರ್ನಿಂಗ್ ನೀಡಿದ್ದಾರೆ.

    ಇಂದಿನಿಂದ ನೈಟ್ ಕರ್ಫ್ಯೂ ಜಾರಿ ಹಿನ್ನೆಲೆ ಪೊಲೀಸ್ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕಮಿಷನರ್, ನೈಟ್ ಕರ್ಫ್ಯೂ ಹಿನ್ನೆಲೆ ಎಲ್ಲಾ ಕಡೆ ವಾಹನ ತಪಾಸಣೆ ನಡೆಯುತ್ತದೆ. ರಾತ್ರಿ ಪಾಳಿ ಕೆಲಸ ಮಾಡುವವರಿಗೆ ಮತ್ತು ತುರ್ತು ಸೇವೆಗೆ ಅವಕಾಶ ನೀಡಲಾಗಿದೆ. ಇವತ್ತು ಪ್ಲೈಓವರ್ ಕ್ಲೋಸ್ ಇರೋಲ್ಲ. ಮೊದಲ ದಿನ ಆದ್ದರಿಂದ ಇವತ್ತು ಮಾಡ್ತಾ ಇಲ್ಲ. ನಾಳೆಯಿಂದ ಎಲ್ಲಾ ಪ್ಲೈ ಓವರ್ ಕ್ಲೋಸ್ ಆಗುತ್ತೆ. ಬೇಕಾಬಿಟ್ಟಿ ಓಡಾಟ ನಡೆಸಿದರೆ ಗಾಡಿ ಸೀಜ್ ಮಾಡುಲಾಗುತ್ತದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ನೈಟ್ ಕರ್ಫ್ಯೂ ನಿಯಮ ಉಲ್ಲಂಘಿಸಿದ್ರೆ ಎಫ್‌ಐಆರ್ – ಬಳ್ಳಾರಿ ಎಸ್‌ಪಿ ಎಚ್ಚರಿಕೆ

    ಜನರಿಗೆ ಅಗತ್ಯ ವಸ್ತುಗಳನ್ನು ತರಿಸಿಕೊಳ್ಳಲು ಆನ್‍ಲೈನ್ ಬುಕ್ಕಿಂಗ್ ಮಾಡಲು ಸೂಚನೆ ಕೊಡಲಾಗಿದೆ. ಆನ್‍ಲೈನ್ ಬುಕ್ಕಿಂಗ್ ಬಿಟ್ಟು ಬೇರೆ ಯಾರಿಗೂ ಓಡಾಡೋದಕ್ಕೆ ಅವಕಾಶ ಇಲ್ಲ. ಯಾವ್ಯಾವ ಬಿಗಿ ಕ್ರಮಕೈಗೊಳ್ಳಬೇಕು ಅದನ್ನು ತೆಗೆದುಕೊಳ್ಳಲಾಗ್ತಾ ಇದೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಬಂದೋಬಸ್ತು ಮಾಡಿಕೊಳ್ಳಲಾಗುತ್ತದೆ. ಬಾರ್, ಪಬ್, ರೆಸ್ಟೋರೆಂಟ್‍ಗಳ ಮೇಲೆ ತೀವ್ರ ನಿಗಾ ಇಡಬೇಕು. ಯಾವುದೇ ಕಾರಣಕ್ಕೂ ರಾತ್ರಿ 10 ಗಂಟೆ ಬಳಿಕ ಪಬ್, ಬಾರ್, ರೆಸ್ಟೋರೆಂಟ್ ಓಪನ್ ಇರದಂತೆ ನೋಡಬೇಕು. 9 ಗಂಟೆಯಿಂದಲೇ ಮೈಕ್ ಮೂಲಕ ಅನೌನ್ಸ್ ಮಾಡಬೇಕು. ಜೊತೆಗೆ ಹೊಯ್ಸಳಗಳು ಸದಾ ಗಸ್ತಿನಲ್ಲಿ ಇರುವಂತೆ ಕಮಿಷನರ್ ಸೂಚನೆ ನೀಡಿದ್ದಾರೆ. ಇದನ್ನೂ ಓದಿ:  ಬೇಡಿಕೆ ಈಡೇರಿಸುವಂತೆ ಪ್ರತಿಭಟಸಿದ 100ಕ್ಕೂ ಹೆಚ್ಚು ಆದಿವಾಸಿಗಳು ಪೊಲೀಸರ ವಶಕ್ಕೆ

    ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಎಲ್ಲಾ ವಿಭಾಗದ ಡಿಸಿಪಿಗಳು ಹಾಜರಿದ್ದರು.

    ಯಾವ್ಯಾವ ಫೈಓವರ್‌ಗಳು ಬಂದ್?
    ಸದ್ಯದ ಮಾಹಿತಿ ಪ್ರಕಾರ ಡಿ.29 ರಿಂದ ಜ.4ರ ವರೆಗೆ ಮಾತ್ರ ಫ್ಲೈಓವರ್ ಬಂದ್‍ಗೆ ಸೂಚನೆ ಇದೆ. ಕೆಆರ್ ಮಾರ್ಕೆಟ್, ಬಸವನಗುಡಿ, ಹೆಣ್ಣೂರು, ತುಮಕೂರು ರೋಡ್, ಆನಂದ್ ಸರ್ಕಲ್, ಡಬ್ಬಲ್ ರೋಡ್, ನಾಯಂಡಹಳ್ಳಿ, ಡೈರಿ ಸರ್ಕಲ್, ಆಗರ, ಸರ್ಜಾಪುರ, ಇಬ್ಬಲೂರು, ದೊಮ್ಮಲೂರು, ಇಂದಿರಾನಗರ 100 ರಸ್ತೆ, ಬೆಳ್ಳಂದೂರು, ಮೈಸೂರು ರಸ್ತೆ, ಯಶವಂತಪುರ ಮೇಲ್ಸೇತುವೆ, ತುಮಕೂರು ರಸ್ತೆ, ಹೆಣ್ಣೂರು ರಸ್ತೆ, ಕಾರ್ಡ್ ರಸ್ತೆ, ಸುಮನಹಳ್ಳಿ ಜಂಕ್ಷನ್, ನಾಯಂಡಹಳ್ಳಿ ಮೇಲ್ಸೇತುವೆ, ರಿಚ್ಮಂಡ್ ರಸ್ತೆ, ಡೈರಿ ಸರ್ಕಲ್, ಬನ್ನೇರುಘಟ್ಟ ರಸ್ತೆ ಸೇರಿದಂತೆ ಪ್ರಮುಖ ಫೈಓವರ್ ಗಳು ಬಂದ್ ಮಾಡುವ ಸಾಧ್ಯತೆ ಇದೆ.

  • ಬೆಂಗಳೂರಿಗರೇ ಎಚ್ಚರ – ರಾತ್ರಿ ಅನಗತ್ಯ ಓಡಾಡಿದ್ರೆ ಬೀಳುತ್ತೆ ಕೇಸ್

    ಬೆಂಗಳೂರಿಗರೇ ಎಚ್ಚರ – ರಾತ್ರಿ ಅನಗತ್ಯ ಓಡಾಡಿದ್ರೆ ಬೀಳುತ್ತೆ ಕೇಸ್

    – ಎಂಜಿ ರೋಡ್, ಬ್ರಿಗೇಡ್ ರೋಡ್‌ಗಳಲ್ಲಿ ಸಿಸಿಟಿವಿ ಅಳವಡಿಕೆ
    – ನೈಟ್ ಕರ್ಫ್ಯೂ ವೇಳೆ ಯಾರಿಗೂ ಪಾಸ್ ನೀಡಲ್ಲ
    – ಅಬಕಾರಿ ಇಲಾಖೆಯಿಂದ ಸ್ಪೆಷಲ್ ಸ್ಕ್ವ್ಯಾಡ್‌ಗಳ ರಚನೆ

    ಬೆಂಗಳೂರು: ನೈಟ್ ಕರ್ಫ್ಯೂ ವೇಳೆ ಸರ್ಕಾರದ ಗೈಡ್‌ಲೈನ್‌ಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲನೆ ಮಾಡಬೇಕು. ಇಲ್ಲವಾದರೆ ಅವರ ಮೇಲೆ ದೂರು ದಾಖಲಿಸಲಾಗುವುದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ತಡೆಗಟ್ಟುವ ಹಿನ್ನೆಲೆಯಲ್ಲಿ ಹತ್ತು ಗಂಟೆಯಿಂದ ಐದು ಗಂಟೆ ತನಕ ನೈಟ್ ಕರ್ಫ್ಯೂ ಜಾರಿಯಾಗಿದ್ದು, ಆ ಸಮಯದಲ್ಲಿ ಅನಾವಶ್ಯಕವಾಗಿ ಯಾರು ಹೊರಗಡೆ ಬರುವಂತಿಲ್ಲ. ಜೊತೆಗೆ ಯಾರಿಗೂ ಯಾವುದೇ ಪಾಸ್ ನೀಡಲಾಗುವುದಿಲ್ಲ. ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ. ಒಂದು ವೇಳೆ ತುರ್ತಾಗಿ ಆಸ್ಪತ್ರೆ, ರೈಲ್ವೆಗೆ ಹೋಗುವವರು ಕಡ್ಡಾಯವಾಗಿ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ತೋರಿಸಬೇಕು. ಎಂದು ಖಡಕ್ ಸೂಚನೆ ನೀಡಿದರು.

    ಈಗಿರುವ ನಿಯಮಗಳಲ್ಲಿ ಯಾವುದೇ ರೀತಿಯ ಬದಲಾವಣೆಗಳಿಲ್ಲ. ಈಗಾಗಲೇ ಸಂಬಂಧಪಟ್ಟ ಪಬ್, ರೆಸ್ಟೋರೆಂಟ್ ಮಾಲೀಕರಿಗೆ ಮಾಹಿತಿ ನೀಡಿದ್ದೇವೆ. ಇವತ್ತು ಮತ್ತೊಮ್ಮೆ ಸಭೆ ಸೇರಿ ಪರಿಣಾಮಕಾರಿಯಾಗಿ ಜಾರಿ ಮಾಡಲು ತಿರ್ಮಾನ ಮಾಡುತ್ತೇವೆ. ಸರ್ಕಾರದ ಆದೇಶವನ್ನು ಅನುಸರಿಸುವುದು ನಮ್ಮ ಕರ್ತವ್ಯವಾಗಿದೆ ಎಂದ ಅವರು ಜನರು ಗುಂಪು ಸೇರದೆ, ಮಾರ್ಗಸೂಚಿಯನ್ನು ಅನುಸರಿಸಿ ಎಂದು ಮನವಿ ಮಾಡಿದರು.

    ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಎಂಜಿ ರೋಡ್, ಬ್ರಿಗೇಡ್ ರೋಡ್, ಇಂದಿರಾನಗರದಲ್ಲಿ ಪೊಲೀಸ್ ಸಿಬ್ಬಂದಿ ಹೆಚ್ಚಿಸುವುದರ ಜೊತೆಗೆ ಸಿಸಿಟಿವಿ ಅವಳಡಿಕೆ ಸಿದ್ಧತೆ ನಡೆಸಲಾಗುತ್ತಿದೆ. ಬಂದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ(ಎನ್‌ಡಿಎಂಎ) ಅಡಿ ಕೇಸ್ ದಾಖಲು ಮಾಡಿ ಕ್ರಮ ಕೈಗೊಳ್ಳುತ್ತೇವೆ. ಎಂಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್‌ನಲ್ಲಿ ಹೆಚ್ಚುವರಿಯಾಗಿ 150 ಸಿಸಿಟಿವಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ ಜೊತೆಗೆ ನಾಕಾಬಂದಿ ಹಾಕಿ ಪರಿಶೀಲನೆ ನಡೆಸಲಾಗುತ್ತದೆ ಎಂದರು. ಇದನ್ನೂ ಓದಿ: ಕೊರೊನಾದೊಂದಿಗೆ ಪ್ರತಿಪಕ್ಷಗಳು ಸ್ನೇಹ ಬೆಳೆಸುತ್ತಿದೆ: ಯೋಗಿ ಆದಿತ್ಯನಾಥ್

    ಹೊಸವರ್ಷ ಆಚರಣೆಯ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಯಿಂದ ಸ್ಪೆಷಲ್ ಸ್ಕ್ವ್ಯಾಡ್‌ಗಳ ರಚನೆ ಮಾಡಲಾಗಿದೆ. ಈ ಸಂಬಂಧ ಇದೇ ತಿಂಗಳ 29ರಿಂದ ಸ್ಪೆಷಲ್ ಸ್ಕ್ವ್ಯಾಡ್‌ಗಳು ಕಾರ್ಯಾಚರಣೆ ಕೈಗೊಳ್ಳುತ್ತಾರೆ. ಅಕ್ರಮವಾಗಿ ಮದ್ಯ ಸಂಗ್ರಹಣೆ ಮಾಡುವುದು, ಔಟ್ ಲೆಟ್‌ಗಳಲ್ಲಿ ಹೆಚ್ಚಿನ ಮದ್ಯ ಖರೀದಿಸುವುದರ ವಿರುದ್ಧ ಅಬಕಾರಿ ಇಲಾಖೆಯಿಂದ ವಿಚಕ್ಷಣ ದಳ ಕಾರ್ಯಾಚರಣೆ ಮಾಡಲಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ:  ನ್ಯೂ ಇಯರ್ ಎಲ್ಲಾದ್ರೂ ಮಾಡ್ಲಿ, ಕೊರೊನಾ ನಿಯಮ ಪಾಲಿಸಲಿ: ಬೊಮ್ಮಾಯಿ

  • ಪ್ರತಿಭಟನೆ ವೇಳೆ ಡಿಸಿಪಿ ಮೇಲೆ ಕಾರು ಹತ್ತಿಸಲು ಯತ್ನ

    ಪ್ರತಿಭಟನೆ ವೇಳೆ ಡಿಸಿಪಿ ಮೇಲೆ ಕಾರು ಹತ್ತಿಸಲು ಯತ್ನ

    ಬೆಂಗಳೂರು: ಕೃಷಿ ಮಸೂದೆ ವಿರುದ್ಧ ಭಾರತ್ ಬಂದ್‍ಗೆ ಕರೆಕೊಟ್ಟಿರುವ ರೈತರು ಪ್ರತಿಭಟನೆ ವೇಳೆ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಮೇಲೆ ಕಾರು ಹತ್ನಿಸಲು ಯತ್ನಿಸಿರುವ ಘಟನೆ ಗೊರಗುಂಟೆಪಾಳ್ಯದಲ್ಲಿ ನಡೆದಿದೆ.

    ಗೊರಗುಂಟೆ ಪಾಳ್ಯ ಜಂಕ್ಷನ್‍ನ ರಸ್ತೆಯಲ್ಲಿ ರೈತ ಸಂಘದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸುತ್ತಿದ್ದರು. ಆ ಸಂದರ್ಭದಲ್ಲಿ ಟ್ರ್ಯಾಕ್ಟರ್ ನಲ್ಲಿ ರ್‍ಯಾಲಿ ಕೂಡ ನಡೆಯಿತು. ರ್‍ಯಾಲಿಯಲ್ಲಿ ಬರುತ್ತಿದ್ದ ರಾಜ್ಯ ರೈತ ಸಂಘದ ಬೋರ್ಡ್ ಇದ್ದ ಕಾರೊಂದು ಏಕಾಏಕಿ ಕರ್ತವ್ಯ ನಿರ್ವಹಿಸುತ್ತಿದ್ದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಅವರ ಕಾಲಿನ ಮೇಲೆ ಚಲಿಸಿದೆ. ಪರಿಣಾಮ ಕಾಲಿಗೆ ಗಾಯವಾಗಿದ್ದು, ಡಿಸಿಪಿ ಕುಂಟುತ್ತ ಸಾಗಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ ಹಾಕಿ ರೈತರಿಂದ ವಿನೂತನ ಪ್ರತಿಭಟನೆ

    ಗೊರಗುಂಟೆ ಪಾಳ್ಯದಲ್ಲಿ ಭದ್ರತೆಗಾಗಿ 150 ಕ್ಕೂ ಹೆಚ್ಚು ಪೋಲಿಸರು, ಒಂದು ಕೆಎಸ್‌ಆರ್‌ಪಿಸಿ ತುಕಡಿ, ಬಿಎಂಟಿಸಿ ಬಸ್ ನ ನಿಯೋಜನೆ ಮಾಡಲಾಗಿತ್ತು. ಈ ವೇಳೆ ಸ್ಥಳದಲ್ಲಿದ್ದ ಡಿಸಿಪಿ ಕಾಲಿನ ಮೇಲೆ ಕಾರ್ ಚಲಿಸಿದೆ. ಕೂಡಲೇ ಪೊಲೀಸರು ಕಾರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ಆಗಿದ್ದು, ಕಣ್ಣಿಗೆ ಕಸ ಬಿತ್ತು ಎಂದು ಕಾರ್ ಚಾಲಕ ತಪ್ಪೊಪ್ಪಿಕೊಂಡಿದ್ದಾನೆ. ಬಳಿಕ ರಸ್ತೆ ತಡೆಗೆ ಬಂದಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಸಿಎಂ ಜಿಲ್ಲೆಯಲ್ಲಿ ಮರಳು ಸಾಗಾಣಿಕೆಗೆ ಮಕ್ಕಳ ಬಳಕೆ – ಕಣ್ಣುಮುಚ್ಚಿ ಕುಳಿತ ಪೊಲೀಸ್ ಇಲಾಖೆ

  • ನಾನು ಸಿಎಂ ಆಪ್ತ, ಫೈನ್ ಕಟ್ಟಲ್ಲ- ಕಮಿಷನರ್ ಮುಂದೆ ಯುವಕ ಹೈಡ್ರಾಮಾ

    ನಾನು ಸಿಎಂ ಆಪ್ತ, ಫೈನ್ ಕಟ್ಟಲ್ಲ- ಕಮಿಷನರ್ ಮುಂದೆ ಯುವಕ ಹೈಡ್ರಾಮಾ

    ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಚೈನ್ ಲಿಂಕ್ ಕತ್ತರಿಸಲು ಲಾಕ್ ಡೌನ್ ಘೋಷಿಸಿದ್ದು, ಆದರೂ ಜನ ಅಡ್ಡಾಡುತ್ತಿದ್ದಾರೆ. ಅಂತೆಯೇ ಯುವಕನೊಬ್ಬನನ್ನು ತಡೆದಾಗ ಆತ ಪೊಲೀಸ್ ಕಮಿಷನರ್ ಗೆ ಅವಾಜ್ ಹಾಕಿರುವ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ಈ ಘಟನೆ ಹೆಬ್ಬಾಳದ ಸಿಬಿಐ ಬಳಿ ನಡೆದಿದ್ದು, ಇಲ್ಲಿ ಪೊಲಿಸರು ಯುವಕನನ್ನು ತಡೆದಿದ್ದಾರೆ. ಈ ವೇಳೆ ಆತ, ಇದು ಪೊಲೀಸರ ಕ್ರಮ ಸರಿ ಅಲ್ಲ, ನಾನು ಸಿಎಂ ಆಪ್ತ. ನಾನು ಫೈನ್ ಕಟ್ಟಲ್ಲ. ನಾನು ಮನೆಗೆ ಹೋಗ್ಬೇಕು ಬಿಡಿ. ನಾನು ಮನಸ್ಸು ಮಾಡಿದ್ರೆ ಏನಾಗುತ್ತೆ ಗೊತ್ತಾ ..? ಎಂದು ಪೊಲೀಸ್ ಕಮೀಷನರ್ ಕಮಲ್ ಪಂಥ್ ಮುಂದೆ ಹೈಡ್ರಾಮ ಮಾಡಿದ್ದಾನೆ.

    ಯುವಕನ ಮಾತಿನಿಂದ ಸಿಟ್ಟಿಗೆದ್ದ ಕಮಿಷನರ್ ಮುಲಾಜಿಲ್ಲದೇ ಆತನ ವಾಹನ ಸೀಜ್ ಮಾಡುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

    ಒಟ್ಟಿನಲ್ಲಿ ಕೊರೊನಾ ಚೈನ್ ಲಿಂಕ್ ಕತ್ತರಿಸಲು ಲಾಕ್ ಡೌನ್ ಹೇರಿದ್ರೆ ಜನ ಸುಳ್ಳು ಕಥೆಗಳನ್ನು ಹೇಳಿ ರಸ್ತೆಗೆ ಇಳಿಯುತ್ತಿದ್ದಾರೆ. ಇವರನ್ನು ನಿಯಂತ್ರಿಸಲು ಪೊಲಿಸರು ಹರಸಾಹಸ ಪಡುವಂತಾಗಿದೆ.

  • ಅನಾವಶ್ಯಕ ಓಡಾಟ, ಕಡ್ಡಾಯವಾಗಿ ವಾಹನ ಪರಿಶೀಲಿಸಿ- ಕಮಲ್ ಪಂಥ್ ಸೂಚನೆ

    ಅನಾವಶ್ಯಕ ಓಡಾಟ, ಕಡ್ಡಾಯವಾಗಿ ವಾಹನ ಪರಿಶೀಲಿಸಿ- ಕಮಲ್ ಪಂಥ್ ಸೂಚನೆ

    ಬೆಂಗಳೂರು: ಲಾಕ್‍ಡೌನ್ ವೇಳೆಯೂ ಅನಾವಶ್ಯಕ ವಾಹನಗಳ ಓಡಾಡ ಹೆಚ್ಚಳವಾಗಿದ್ದು, ಕಡ್ಡಾಯವಾಗಿ ಎಲ್ಲ ವಾಹನಗಳ ಪರಿಶೀಲನೆ ನಡೆಸಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ.

    ಈ ಸಂಬಂಧ ಹಿರಿಯ ಅಧಿಕಾರಿಗಳ ಜೊತೆಗೆ ನಗರದ ಪೊಲೀಸ್ ಆಯುಕ್ತ ಕಮಲ್ ಪಂಥ್ ಸಭೆ ನಡೆಸಿದ್ದು, ವಾಹನಗಳ ಅನಾವಶ್ಯಕ ಓಡಾಟಕ್ಕೆ ಬ್ರೇಕ್ ಹಾಕುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಬೆಳಗ್ಗೆ 10 ಗಂಟೆ ನಂತರವೂ ವಾಹನಗಳ ಓಡಾಡ ಹೆಚ್ಚಾಗುತ್ತಿದೆ. ಪೊಲೀಸರು ಪರಿಶೀಲನೆ ಮಾಡುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿವೆ. ಹೀಗಾಗಿ ಕಡ್ಡಾಯವಾಗಿ ವಾಹನಗಳನ್ನು ತಡೆದು ಪರಿಶೀಲನೆ ಮಾಡಬೇಕು. ಅನಾವಶ್ಯಕವಾಗಿ ರಸ್ತೆಗಿಳಿದರೆ ವಾಹನಗಳನ್ನು ಸೀಜ್ ಮಾಡಬೇಕು ಎಂದು ಆದೇಶಿಸಿದ್ದಾರೆ.

    ಕೊರೊನಾ ಮಾರ್ಗಸೂಚಿಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು, ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮೌಖಿಕವಾಗಿ ಸೂಚಿಸಿದ್ದಾರೆ. ಲಾಕ್‍ಡೌನ್ ಜಾರಿಯಲ್ಲಿದ್ದರೂ ಕಳೆದ ಕೆಲ ದಿನಗಳಿಂದ ಬೆಳಗ್ಗೆ 10 ಗಂಟೆ ನಂತರವೂ ಹೆಚ್ಚು ವಾಹನಗಳು ಸಂಚರಿಸುತ್ತಿವೆ. ಪೊಲೀಸರು ತಪಾಸಣೆ ನಡೆಸುತ್ತಿಲ್ಲ ಎಂಬ ದೂರು ಸಹ ಕೇಳಿ ಬಂದಿವೆ. ಹೀಗಾಗಿ ಕಮಲ್ ಪಂತ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.