Tag: ಕಮಲ್ ಪಂಥ್

  • ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣ ಸಿಸಿಬಿಗೆ ವರ್ಗಾವಣೆ- ಇಬ್ಬರ ಬಂಧನ

    ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣ ಸಿಸಿಬಿಗೆ ವರ್ಗಾವಣೆ- ಇಬ್ಬರ ಬಂಧನ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಬೆಳಕಿಗೆ ಬಂದ ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಕಮಲ್ ಪಂಥ್ ತಿಳಿಸಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿದ ಅವರು, ಬಿಬಿಎಂಪಿ ಪೋರ್ಟಲ್ ಮೂಲಕ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಬೆಡ್ ಕಾಯ್ದಿರಿಸುವ ವಿಧಾನದಲ್ಲಿ ಅಕ್ರಮ ಎಸಗಿದವರ ವಿರುದ್ಧ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಅಕ್ರಮದಲ್ಲಿ ಭಾಗಿಯಾದವರ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ ಎಂದು ತಿಳಿಸಿದ್ದಾರೆ.

    ಏನಿದು ಪ್ರಕರಣ..?
    ಹೋಂ ಐಸೋಲೇಟ್ ಆಗುವ ವ್ಯಕ್ತಿಗಳಿಗೆ ತಿಳಿಯದಂತೆ ಅವರ ಹೆಸರಿನಲ್ಲಿ ಬೆಡ್ ಮೀಸಲಿರಿಸುವ ಮಹಾದಂಧೆ ಬಯಲಾಗಿತ್ತು. ಸಂಸದ ತೇಜಸ್ವಿ ಸೂರ್ಯ ಬಿಬಿಎಂಪಿಯ ಕಳ್ಳಾಟವನ್ನ ಬಯಲು ಮಾಡಿದ್ದು, ಸೋಂಕಿತರ ಜೊತೆ ಮಾತನಾಡಿ ಸೀಟ್ ಸಿಕ್ಕಿದೆಯಾ ಅಥವಾ ಇಲ್ಲವಾ ಅನ್ನೋದನ್ನ ಖಚಿತಪಡಿಸಿಕೊಂಡಿದ್ದರು. ಸೋಂಕಿತರ ಕುಟುಂಬಸ್ಥರ ಜೊತೆ ತೇಜಸ್ವಿ ಸೂರ್ಯ ಮಾತನಾಡಿರುವ ಆಡಿಯೋಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿತ್ತು. ಇದನ್ನೂ ಓದಿ: ಬೆಡ್ ದಂಧೆ ನಡೆಯೋದು ಹೇಗೆ ಅನ್ನೋದನ್ನ ವಿವರಿಸಿದ ತೇಜಸ್ವಿ ಸೂರ್ಯ

    ಬೆಂಗಳೂರು ದಕ್ಷಿಣ ಭಾಗದಲ್ಲಿ ಬಿಬಿಎಂಪಿಯ ವಾರ್ ರೂಂ ಅಧಿಕಾರಿಗಳೇ ಕೃತಕ ಬೆಡ್ ಅಭಾವ ಸೃಷ್ಟಿಸುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಹೋಂ ಐಸೋಲೇಟ್ ನಲ್ಲಿರುವ ಸೋಂಕಿತನ ಹೆಸರಲ್ಲಿ ಬೆಡ್ ಬುಕ್ ಆದ್ರೆ, ಅದು ಯಾರಿಗೆ ನೀಡಲಾಗುತ್ತೆ ಎಂಬುದರ ಬಗ್ಗೆ ತಿಳಿದು ಬರಬೇಕಿದೆ. ಮಹಾನಗರ ಬೆಂಗಳೂರಿನಲ್ಲಿ ಕೃತಕ ಬೆಡ್ ಅಭಾವದಿಂದಲೇ ಈ ಹೆಲ್ತ್ ಎಮೆರ್ಜೆನ್ಸಿ ಉಂಟಾಗಿದೆಯಾ ಅನ್ನೋ ಅನುಮಾನಗಳು ದಟ್ಟವಾಗಿದೆ. ಇದನ್ನೂ ಓದಿ: ನೀವೂ ಮನೆಯಲ್ಲಿದ್ರೂ ನಿಮ್ಮ ಹೆಸರಲ್ಲಿ ಬುಕ್ ಆಗುತ್ತೆ ಬೆಡ್ – ಬೇಕಾದವರಿಗೆ ಬೆಡ್ ನೀಡುವ ಧನದಾಹಿಗಳು

  • ಯಾರಾದ್ರೂ ಚೇಷ್ಟೆ ಮಾಡಿದ್ರೆ ಯಾವುದೇ ಕಾರಣಕ್ಕೂ ಬಿಡಲ್ಲ: ಕಮಲ್ ಪಂಥ್

    ಯಾರಾದ್ರೂ ಚೇಷ್ಟೆ ಮಾಡಿದ್ರೆ ಯಾವುದೇ ಕಾರಣಕ್ಕೂ ಬಿಡಲ್ಲ: ಕಮಲ್ ಪಂಥ್

    ಬೆಂಗಳೂರು: ಯಾರಾದರೂ ಚೇಷ್ಟೆ ಮಾಡಿದರೆ ಅವರನ್ನು ಯಾವುದೇ ಕಾರಣಕ್ಕೂ ಬಿಡಲ್ಲ ಎಂದು ಪೊಲೀಸ್ ಆಯುಕ್ತ ಕಮಲ್ ಪಂಥ್ ಎಚ್ಚರಿಸಿದ್ದಾರೆ.

    ನಾಳೆಯಿಂದ ಸಾರಿಗೆ ನೌಕರರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಪ್ರೋಟೋಕಾಲ್ ಜಾರಿಯಲ್ಲಿದೆ. ಯಾವ ಪ್ರತಿಭಟನೆ ಮಾಡುವಂತಿಲ್ಲ. ಪ್ರತಿಭಟನೆ ನಡೆಸಿದ್ರೆ ಬಂಧಿಸುತ್ತೇವೆ ಎಂದು ವಾರ್ನ್ ಮಾಡಿದ್ದಾರೆ.

    ಎಲ್ಲ ಬಂದೋಬಸ್ತ್ ಗೂ ನಾವು ತಯಾರಾಗಿದ್ದೀವಿ. ಯಾರಾದ್ರೂ ಚೇಷ್ಟೆ ಮಾಡಿದ್ರೆ ಅವರನ್ನ ಯಾವುದೇ ಕಾರಣಕ್ಕೂ ಬಿಡಲ್ಲ. ಕರ್ತವ್ಯಕ್ಕೆ ಹಾಜರಾಗುವವರಿಗೆ ಆರ್ಮ್ ಎಸ್ಕಾರ್ಟ್ ನಲ್ಲಿ ಭದ್ರತೆ ಕೊಡ್ತೀವಿ. ಡ್ಯೂಟಿಗೆ ಬರೋದು ಬಿಡೊದು ಅವರ ಡಿಪಾರ್ಟ್ಮೆಂಟ್ ಗೆ ಸಂಬಂಧಿಸಿದ್ದು ಎಂದು ಅವರು ತಿಳಿಸಿದ್ದಾರೆ.

    ರಸ್ತೆಗಿಳಿದು ಕಲ್ಲು ತೂರಾಟ ರಸ್ತೆ ತಡೆ ಮಾಡಿದ್ರೆ ಅದಕ್ಕೆ ತಕ್ಕ ಶಾಸ್ತಿ ಮಾಡ್ತೀವಿ. 21 ನೇ ತಾರೀಕಿನವರೆಗೇ ಕೋವಿಡ್ ಪ್ರೋಟೋಕಾಲ್ ಇದೆ. ಈಗಾಗಲೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತುಕತೆ ನಡೆದಿದೆ. ನಾಳೆ ಬಸ್ ಇಲ್ಲದಿದ್ದರೆ ಖಾಸಗಿಯವರು ಸಹಕಾರ ನೀಡಿದ್ರೆ ಅವರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವುದಾಗಿ ಕಮಲ್ ಪಂಥ್ ಭರವಸೆ ನೀಡಿದ್ದಾರೆ.

  • ಬೆಂಗ್ಳೂರು ರಸ್ತೆಯಲ್ಲಿ ಪಾರ್ಟಿ ಇಲ್ಲ – ಪಬ್, ಕ್ಲಬ್, ಬಾರ್ ಎಲ್ಲ ಓಪನ್

    ಬೆಂಗ್ಳೂರು ರಸ್ತೆಯಲ್ಲಿ ಪಾರ್ಟಿ ಇಲ್ಲ – ಪಬ್, ಕ್ಲಬ್, ಬಾರ್ ಎಲ್ಲ ಓಪನ್

    – ಇಡೀ ರಾತ್ರಿ ಡ್ರಿಂಕ್ ಆ್ಯಂಡ್ ಡ್ರೈವ್ ಚೆಕ್ಕಿಂಗ್
    – ಶೇ.50ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ
    – ಡಿ.31ರ ಸಂಜೆಯಿಂದ 144 ಸೆಕ್ಷನ್ ಜಾರಿ

    ಬೆಂಗಳೂರು: ಕೊರೊನಾ ಹಿನ್ನೆಲೆ ಹೊಸ ವರ್ಷದ ಪಾರ್ಟಿಗೆ ನಿರ್ಬಂಧಗಳನ್ನು ಹೇರಲಾಗಿದ್ದು, ರಸ್ತೆ, ಹೊರ ಜಾಗಗಳಲ್ಲಿ ಯಾವುದೇ ರೀತಿಯ ಪಾರ್ಟಿ ಆಯೋಜಿಸುವಂತಿಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ನ್ಯೂ ಇಯರ್ ಪಾರ್ಟಿ ನಡೆಯುತ್ತಿದ್ದ ಪ್ರಮುಖ ರಸ್ತೆಗಳಲ್ಲಿ ಪಾರ್ಟಿಗೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

    ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿಸೆಂಬರ್ 31 ರಂದು ರಾತ್ರಿ 144 ಸೆಕ್ಷನ್ ಜಾರಿಯಲ್ಲಿರುತ್ತದೆ. ರಸ್ತೆ, ಹೊರಜಾಗದಲ್ಲಿ ನ್ಯೂ ಇಯರ್ ಪಾರ್ಟಿ ಮಾಡುವಂತಿಲ್ಲ. ಖಾಸಗಿ ಜಾಗಗಳಲ್ಲಿ ಪಾರ್ಟಿ ಮಾಡಿಕೊಳ್ಳಬಹುದು. ಆದರೆ ಯಾವುದೇ ವಿಶೇಷ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ. ಪಬ್, ಬಾರ್, ಕ್ಲಬ್ ಗಳಲ್ಲಿ ಯಾವುದೇ ಸಂಗೀತ ಕಾರ್ಯಕ್ರಮ, ಡ್ಯಾನ್ಸ್, ಮ್ಯೂಸಿಕ್ ಇರುವುದಿಲ್ಲ. ಸಾಮಾನ್ಯವಾಗಿ ಅಳವಡಿಸುವ ಮ್ಯೂಸಿಕ್ ಹಾಕಿಕೊಳ್ಳಬಹುದು ಎಂದು ವಿವರಿಸಿದರು.

    ಪಬ್, ಬಾರ್, ಕ್ಲಬ್ ಗಳಲ್ಲಿ ಶೇ.50ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಎಂ.ಜಿ.ರಸ್ತೆ, ಕೋರಮಂಗಲ, ಇಂದಿರಾ ನಗರಗಳಲ್ಲಿ ಪ್ರವೇಶಕ್ಕೆ ಸಂಬಂಧಪಟ್ಟ ಹೋಟೆಲ್, ಪಬ್‍ನ ಪಾಸ್ ಅಥವಾ ಕೂಪನ್ ಹೊಂದಿರಬೇಕು. ಇಲ್ಲವಾದಲ್ಲಿ ಈ ಪ್ರದೇಶಗಳಲ್ಲಿ ಅನವಶ್ಯಕವಾಗಿ ಸಂಚರಿಸುವವರಿಗೆ ಅವಕಾಶವಿಲ್ಲ. ಮಾರ್ಗಸೂಚಿ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕೊರೊನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಯಾವುದೇ ರೀತಿಯ ಉಲ್ಲಂಘನೆ ಕಂಡುಬಂದರೆ ಸಾರ್ವಜನಿಕರು ದೂರು ನೀಡಬಹುದು ಎಂದು ಕಮಲ್ ಪಂಥ್ ತಿಳಿಸಿದರು.

    ಡಿಸೆಂಬರ್ 31ರಂದು ಅನವಶ್ಯಕವಾಗಿ ಯಾರೂ ಹೊರಗಡೆ ಓಡಾಡಬಾರದು. ಆ ರೀತಿ ತಿರುಗಾಡೋದು ಕಂಡು ಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ವ್ಹೀಲಿಂಗ್ ಮಾಡಿದರೆ ವಾಹನ ಜಪ್ತಿ ಮಾಡಲಾಗುವುದು. ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1 ಬೆಳಗ್ಗೆ 6 ಗಂಟೆಯವರೆಗೆ 144 ಸೆಕ್ಷನ್ ಜಾರಿಯಲ್ಲಿರುತ್ತದೆ.

    ಮೇಟ್ರೋ ಓಡಾಟದ ಬಗ್ಗೆ ಬಿಎಮ್‍ಆರ್‍ಸಿಎಲ್ ತಿರ್ಮಾನ ತೆಗೆದುಕೊಳ್ಳುತ್ತದೆ. ಆದರೆ ಇಡೀ ರಾತ್ರಿ ಡ್ರಿಂಕ್ ಆ್ಯಂಡ್ ಡ್ರೈವ್ ಚೆಕ್ಕಿಂಗ್ ಇರುತ್ತೆ. ಪಬ್ ಆ್ಯಂಡ್ ಬಾರ್‍ಗಳಿಗೆ ಯಾವುದೇ ಸಮಯ ಇರುವುದಿಲ್ಲ. ಈ ಹಿಂದಿನಂತೆ ಓಪನ್ ಇರುತ್ತವೆ. ಲೈಸೆನ್ಸ್‍ನಲ್ಲಿ ಎಷ್ಟು ಸಮಯದವರೆಗೆ ವ್ಯಾಪಾರ ಮಾಡಬಹುದು ಎಂದು ಅನುಮತಿ ಪಡೆದಿದ್ದಾರೋ ಅಲ್ಲಿಯವರೆಗೆ ಓಪನ್ ಮಾಡಬಹುದಾಗಿದೆ.

  • ಕರ್ನಾಟಕ ಬಂದ್ – ಏನಿರುತ್ತೆ? ಏನಿರಲ್ಲ? ನೈತಿಕ ಬೆಂಬಲ ನೀಡಿದವರು ಯಾರು?

    ಕರ್ನಾಟಕ ಬಂದ್ – ಏನಿರುತ್ತೆ? ಏನಿರಲ್ಲ? ನೈತಿಕ ಬೆಂಬಲ ನೀಡಿದವರು ಯಾರು?

    – ಬಂದ್‍ಗೆ ಯಾರು ಅನುಮತಿ ನೀಡಿಲ್ಲ
    – ಚೇಷ್ಟೆ ಮಾಡಿದ್ರೆ ಕ್ರಮ – ಪಂಥ್
    – ಬಸ್ ಓಡಿಸಿದ್ರೆ ಗಲಾಟೆ – ವಾಟಾಳ್

    ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ನಿರ್ಧಾರದಿಂದ ಹಿಂದೆ ಸರಿಯದ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಕನ್ನಡ ಪರ ಸಂಘಟನೆಗಳು ಶನಿವಾರ ಕರ್ನಾಟಕ ಬಂದ್‍ಗೆ ಕರೆ ನೀಡಿವೆ.

    ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕರ್ನಾಟಕ ಬಂದ್ ಕರೆ ನೀಡಲಾಗಿದ್ದು, ಕೆಲವೊಂದು ಸಂಘಟನೆಗಳು ಬಂದ್ ಬೆಂಬಲಿಸಿದರೆ ಇನ್ನು ಕೆಲವು ಸಂಘಟನೆಗಳು ನೈತಿಕ ಬೆಂಬಲವನ್ನಷ್ಟೇ ಘೋಷಿಸಿವೆ.

    ಬಂದ್ ಹಿನ್ನಲೆಯಲ್ಲಿ ನಾಳೆ ಬೆಂಗಳೂರಿನಾದ್ಯಂತ ಬಿಗಿ ಭದ್ರತೆ ಮಾಡಲಾಗಿದೆ. ಬಸ್ ಸ್ಟ್ಯಾಂಡ್, ಮೆಟ್ರೋ ಸ್ಟೇಷನ್ ಬಳಿ ಹೆಚ್ಚಿನ ನಿಯೋಜನೆ ಮಾಡಲಾಗಿದೆ. ಬಂದ್‍ಗೆ ಯಾರೂ ಅನುಮತಿ ಕೇಳಿಲ್ಲ, ನಾವು ಕೊಟ್ಟಿಲ್ಲ. ಬಿಎಂಟಿಸಿ, ಕೆಎಸ್‍ಆರ್‌ಟಿಸಿ ಬೆಂಬಲ ಕೊಟ್ಟಿಲ್ಲ. ಜನ ನಿರ್ಭಯವಾಗಿ ಓಡಾಡಬಹುದು. ಚೇಷ್ಟೆ ಮಾಡಿದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂಥ್ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

     

    ಕನ್ನಡ ಸಂಘಟನೆಗಳು ಕಿಡಿ:
    ಮರಾಠ ನಿಗಮ ಒಂದ್ಕಡೆಯಾದರೆ ರೋಲ್‍ಕಾಲ್‍ಗಳು, ವಸೂಲಿಕೋರರು ಅಂತ ಟೀಕಿಸಿರುವ ಹಿನ್ನೆಲೆಯಲ್ಲಿ ಕನ್ನಡ ಹೋರಾಟಗಾರರು ಮಾತ್ರ ಜಿದ್ದಿಗೆ ಬಿದ್ದಿದ್ದಾರೆ. ಬಂದ್‍ನ ಮುಂಚೂಣಿ ನಾಯಕ ವಾಟಾಳ್ ನಾಗರಾಜ್ ಅವರು, ನಾವೇನ್ ಚೇಷ್ಟೆ ಮಾಡಲ್ಲ. ಯಡಿಯೂರಪ್ಪ ಪೊಲೀಸರನ್ನು ಮಾರು ವೇಷದಲ್ಲಿ ಕಳಿಸಿ ಏನಾದ್ರೂ ಅನಾಹುತ ಮಾಡಿದರೆ ನಾವು ಜವಾಬ್ದಾರಿ ಅಲ್ಲ ಎಂದಿದ್ದಾರೆ.

    ನಾವ್ ಯಾಕ್ರೀ ಅನುಮತಿ ಕೇಳಬೇಕು. ಇತಿಹಾಸದಲ್ಲಿ ಕರ್ನಾಟಕ ಬಂದ್‍ಗೆ ನಾವು ಪೊಲೀಸರ ಅನುಮತಿ ಕೇಳಿಲ್ಲ ಕೇಳಲ್ಲ. ನಾಳೆ ರ‍್ಯಾಲಿ ಇರುತ್ತದೆ. ನಾವ್ಯಾರಿಗೂ ಜಗ್ಗಲ್ಲ. ಗುಂಡೇಟು ಹೊಡೀತಾರ ಹೊಡಿಲಿ ನೋಡೋಣ ಅಂತ ಪೊಲೀಸ್ ಕಮೀಷನರ್‌ಗೆ ವಾಟಾಳ್ ಸವಾಲ್ ಹಾಕಿದ್ದಾರೆ. ಇವತ್ತು ಸಾಂಕೇತಿಕವಾಗಿ ಮೈಸೂರು ಬ್ಯಾಂಕ್ ಸರ್ಕಲ್‍ನಲ್ಲಿ ಉರುಳು ಸೇವೆ ಮಾಡಿದ್ದಾರೆ. ಅಲ್ಲದೆ, ಮಾರ್ಕೆಟ್, ಮೆಜೆಸ್ಟಿಕ್‍ನಲ್ಲಿ ಬಂದ್‍ಗೆ ಸಹಕರಿಸುವಂತೆ ಪ್ರಚಾರ ಆಂದೋಲನ ನಡೆಸಿದರು.

     

    ಬಸ್ ಓಡಿಸಿದರೆ ಗಲಾಟೆ ಪಕ್ಕಾ ಆಗುತ್ತದೆ. ಮಾಲ್, ಥಿಯೇಟರ್ ಓಪನ್ ಮಾಡ್ಬೇಡಿ. ರಸ್ತೆ ರಸ್ತೆಗಳಲ್ಲಿ ಹೋರಾಟ ಮಾಡುತ್ತೇವೆ. ನಿಗದಿತ ಸ್ಥಳಕ್ಕೆ ಹೋರಾಟ ಸೀಮಿತ ಮಾಡಬೇಡಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

    ಸಾರಾಗೋವಿಂದು ಕೂಡ ಯಡಿಯೂರಪ್ಪರನವೇ ನಿಮ್ಮ ಮನವಿ ಯಾರಿಗೆ ಬೇಕು. ಮರಾಠ ನಿಗಮ ಹಿಂಪಡೀತಿವಿ ಅಂತೇಳಿ. ಆ ಕ್ಷಣವೇ ಬಂದ್ ವಾಪಸ್ ಪಡೀತೀವಿ ಅಂದಿದ್ದಾರೆ. ಬಂದ್‍ಗೆ ಬೆಂಬಲ ಕೊಡದವರಿಗೆ ನಾಚಿಕೆ ಆಗ್ಬೇಕು ಅಂತ ಕಿಡಿಕಾರಿದ್ದಾರೆ.

    ಕರವೇ ನಾರಾಯಣಗೌಡ , ತಾಲೂಕು, ಜಿಲ್ಲಾ ಮಟ್ಟದಲ್ಲಿ ಬಂದ್ ಮಾಡ್ತೀವಿ. ನಿಮ್ಮ ಭಂಡತನ ಬಿಡಿ. ನಾಳೆ ಬೇರೆ ಸಮುದಾಯಗಳು ಕೇಳಿದರೆ ಆಗ ಏನ್ ಮಾಡ್ತೀರಿ? ಮರಾಠಿ ನಿಗಮಕ್ಕೆ ಕೊಟ್ಟಿರೋ ಹಣನಾ ಉತ್ತರ ಕರ್ನಾಟಕದ ಪ್ರವಾಹ ಬಾಧಿತರಿಗೆ ಕೊಡಿ ಅಂತ ಕಿಡಿಕಾರಿದ್ದಾರೆ.

    ನಾಳೆ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ಆಗಲಿದೆ. ಬೆಳಗ್ಗೆ 10.30ರಿಂದ ಟೌನ್‍ಹಾಲ್‍ನಿಂದ ಫ್ರೀಡಂಪಾರ್ಕ್‍ವರೆಗೆ ರ‍್ಯಾಲಿ ನಡೆಯಲಿದೆ.

    ಬಂದ್‍ಗೆ ಯಾರ ಬೆಂಬಲ?
    ಕರವೇ ನಾರಾಯಣಗೌಡರ ಬಣ, ಕರವೇ ಶಿವರಾಮೇಗೌಡರ ಬಣ, ಜಯಕರ್ನಾಟಕ ಸಂಘಟನೆ, ಕರ್ನಾಟಕ ನವ ನಿರ್ಮಾಣ ಸೇನೆ, ಕರ್ನಾಟಕ ಸ್ವಾಭಿಮಾನಿ ಬಳಗ, ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ಕೆಲವು ಆಟೋ ಚಾಲಕರ ಸಂಘ, ಓಲಾ, ಊಬರ್ ಚಾಲಕರ ಸಂಘ, ಟ್ಯಾಕ್ಸಿ ಯೂನಿಯನ್ ಬೆಂಬಲ ನೀಡಿವೆ.

    ನೈತಿಕ ಬೆಂಬಲ ಕೊಟ್ಟವರು
    * ಹೋಟೆಲ್ ಮಾಲೀಕರ ಸಂಘ – ಹೋಟೆಲ್ ಓಪನ್ ಇರುತ್ತೆ
    * ರಸ್ತೆ ಬದಿ ವ್ಯಾಪಾರಿಗಳ ಸಂಘ – ರಸ್ತೆ ಬದಿ ವ್ಯಾಪಾರ ಇರುತ್ತೆ
    * ಪೆಟ್ರೋಲ್ ಬಂಕ್ ಮಾಲೀಕರ ಸಂಘ – ಪೆಟ್ರೋಲ್ ಬಂಕ್ ಓಪನ್ ಇರುತ್ತೆ
    * ಆಟೋ ಚಾಲಕರ ಸಂಘ
    * ಲಾರಿ ಮಾಲೀಕರ ಸಂಘ
    * ಮ್ಯಾಕ್ಸಿಕ್ಯಾಬ್ ಚಾಲಕರ ಸಂಘ
    * ಪೀಣ್ಯ ಕೈಗಾರಿಕಾ ಸಂಘ – ಕಾರ್ಮಿಕರು, ಕೈಗಾರಿಕೋದ್ಯಮಿಗಳ ಹಿತದೃಷ್ಟಿಯಿಂದ 1 ಗಂಟೆ ಹೆಚ್ಚು ಕೆಲಸ ಮಾಡಿ ನೈತಿಕ ಬೆಂಬಲ
    * ರೈತ ಸಂಘ
    * ಕರವೇ ಪ್ರವೀಣ್ ಶೆಟ್ಟಿ ಬಣ
    * ಕರ್ನಾಟಕ ಜ್ಯುವೆಲರಿ ಅಸೋಸಿಯೇಷನ್

     

    ಯಾರ ಬೆಂಬಲ ಇಲ್ಲ?
    * ಬಿಎಂಟಿಸಿ, ಕೆಎಸ್‍ಆರ್‌ಟಿಸಿ – ಓಡಾಡುತ್ತೆ
    * ಖಾಸಗಿ ಸಾರಿಗೆ ಸಂಘ – ಓಡಾಡುತ್ತೆ
    * ಹೋಟೆಲ್, ಬೇಕರಿ, ಅಂಗಡಿಗಳು – ತೆರೆಯುತ್ತದೆ
    * ಸರ್ಕಾರಿ ಕಚೇರಿ, ಬ್ಯಾಂಕ್‍ಗಳು – ಓಪನ್‌ ಇರಲಿದೆ
    * ಎಐಟಿಯುಸಿ ಸಂಘಟನೆ

  • ಕರ್ನಾಟಕ ಬಂದ್‍ಗೆ ಯಾರು ಪರ್ಮಿಷನ್ ಕೊಟ್ಟಿಲ್ಲ: ಕಮಲ್ ಪಂಥ್

    ಕರ್ನಾಟಕ ಬಂದ್‍ಗೆ ಯಾರು ಪರ್ಮಿಷನ್ ಕೊಟ್ಟಿಲ್ಲ: ಕಮಲ್ ಪಂಥ್

    – ಹೋರಾಟಗಾರರಿಗೆ ಪೊಲೀಸ್ ಕಮಿಷನರ್ ಎಚ್ಚರಿಕೆ

    ಬೆಂಗಳೂರು: ನಾಳೆ ಕರ್ನಾಟಕ ಬಂದ್‍ಗೆ ಯಾರು ಪರ್ಮಿಷನ್ ಕೊಟ್ಟಿಲ್ಲ. ಈ ಹಿನ್ನೆಲೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯಬಾರದು ಎಂಬುದನ್ನು ಗಮನದಲ್ಲಿಟ್ಟುಕೊಂಡು ಸಾಕಷ್ಟು ಭದ್ರತೆಯ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ಬಂದ್ ಹಿನ್ನೆಲೆ ನಾಳೆ ಬೆಳಗ್ಗೆಯಿಂದ ಪೊಲೀಸ್ ಇಲಾಖೆ ಭದ್ರತೆಗಾಗಿ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. 15 ಸಾವಿರಕ್ಕಿಂತ ಹೆಚ್ಚು ಪೊಲೀಸರು ನಾಳೆ ಕಾರ್ಯ ನಿರ್ವಹಿಸಲಿದ್ದಾರೆ. 5 ಜನ ಅಡಿಷನ್ ಸಿಪಿಗಳು, ಡಿಸಿಪಿಗಳು, ಎಸಿಪಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಿಯೋಜನೆ ಮಾಡಲಾಗುತ್ತದೆ. 35 ಕೆಎಸ್‍ಆರ್‍ಪಿ, 32 ಸಿಎಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ನಾಳೆ ಬೆಳಗ್ಗೆಯಿಂದನೇ ಪ್ರತಿ ಏರಿಯಾದಲ್ಲಿ ಅಧಿಕಾರಿಗಳು ರೌಂಡನ್‍ನಲ್ಲಿ ಇರುತ್ತಾರೆ ಎಂದರು.

    ಬಂದ್ ಹಿನ್ನಲೆಯಲ್ಲಿ ಯಾರು ಕೂಡ ಕಾನೂನು ಭಂಗ ಮಾಡುವಂತಿಲ್ಲ. ಅದಕ್ಕೆ ನಾವು ಅವಕಾಶ ಮಾಡಿಕೊಡುವುದಿಲ್ಲ. ಬಂದ್‍ಗಾಗಿ ಯಾರು ಪರ್ಮಿಷನ್ ಕೇಳಿಲ್ಲ. ನಾವು ಯಾವುದೇ ಪರ್ಮಿಷನ್‍ನನ್ನು ಕೊಟ್ಟಿಲ್ಲ. ಯಾರಾದರೂ ಚೇಷ್ಟೆ ಮಾಡಿದರೆ ಕಾನೂನು ಕ್ರಮಕೈಗೊಳ್ಳಲಾಗುತ್ತದೆ. ನಾಳೆ ಯಾವುದೇ ರ್ಯಾಲಿಗೂ ಅವಕಾಶ ಇರುವುದಿಲ್ಲ. ಯಾವುದೇ ರೀತಿಯ ಕಾನೂನು ಬಾಹೀರ ಘಟನೆಗೆ ಅವಕಾಶ ಇರುವುದಿಲ್ಲ ಎಂದು ಹೇಳಿದ್ದಾರೆ.

    ಜನಸಾಮಾನ್ಯರು ನಿರ್ಭಯವಾಗಿ ಓಡಾಡ ಬಹುದು. ದಿನದ ಚಟುವಟಿಕೆಗಳಲ್ಲಿ ಎಂದಿನಂತೆ ಮಾಡಿಕೊಳ್ಳಬಹುದು. ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಬೆಂಬಲ ಸೂಚಿಸಿಲ್ಲ ಅದನ್ನು ತಡೆಯುವ ಹಾಗೇ ಇಲ್ಲ. ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡಿದ್ರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಕಮಲ್ ಪಂಥ್ ತಿಳಿಸಿದ್ದಾರೆ.

  • ಸಿಎಂ ಪೊಲೀಸ್ರನ್ನು ಮಾರುವೇಷದಲ್ಲಿ ಕಳಿಸಿ ಅನಾಹುತ ನಡೆದ್ರೆ ನಾವು ಹೊಣೆಯಲ್ಲ: ವಾಟಾಳ್

    ಸಿಎಂ ಪೊಲೀಸ್ರನ್ನು ಮಾರುವೇಷದಲ್ಲಿ ಕಳಿಸಿ ಅನಾಹುತ ನಡೆದ್ರೆ ನಾವು ಹೊಣೆಯಲ್ಲ: ವಾಟಾಳ್

    – ಕಮಿಷನರ್ ಕಮಲ್ ಪಂಥ್‍ಗೂ ತಿರುಗೇಟು

    ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪೊಲೀಸರನ್ನು ಮಾರುವೇಷದಲ್ಲಿ ಕಳುಹಿಸಿ ಏನಾದರೂ ಅನಾಹಿತ ಸಂಭವಿಸಿದರೆ ನಾವು ಹೊಣೆಯಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.

    ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾಳೆ ನಾವೇನು ಚೇಷ್ಟೆ ಮಾಡಲ್ಲ. ಯಡಿಯೂರಪ್ಪ ಪೊಲೀಸರನ್ನು ಮಾರು ವೇಷದಲ್ಲಿ ಕಳಿಸಿ ಏನಾದ್ರೂ ಅನಾಹುತ ಮಾಡಿದ್ರೆ ನಾವು ಜವಾಬ್ದಾರಿಯಲ್ಲ. ನಮ್ಮ ಬಗ್ಗೆ ಹಗುರವಾಗಿ ಮಾತಾನಾಡಬೇಡಿ ಎಂದು ಹೇಳುವ ಮೂಲಕ ಪೊಲೀಸ್ ಕಮೀಷನರ್ ಗೆ ಖಡಕ್ ತಿರುಗೇಟು ಕೊಟ್ಟಿದ್ದಾರೆ.

    ನಾವ್ ಯಾಕೆ ಅನುಮತಿ ಕೇಳಬೇಕು. ಇತಿಹಾಸದಲ್ಲಿ ಕರ್ನಾಟಕ ಬಂದ್ ಗೆ ನಾವು ಪೊಲೀಸರ ಅನುಮತಿ ಕೇಳಿಲ್ಲ ಕೇಳಲ್ಲ. ನಾಳೆ ರ್ಯಾಲಿ ಇರುತ್ತೆ, ನಾವ್ಯಾರಿಗೂ ಜಗ್ಗಲ್ಲ. ಗುಂಡೇಟು ಹೊಡೀತಾರಾ ಹೊಡಿಲಿ ನೋಡೋಣ ಎಂದು ವಾಟಾಳ್ ಸವಾಲೆಸೆದಿದ್ದಾರೆ.

    ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಿಎಂ, ಬಂದ್ ಮಾಡದಂತೆ ಮನವಿ ಮಾಡಿಕೊಂಡರು. ಬಂದ್ ಮಾಡಿ ಜನರಿಗೆ ತೊಂದರೆ ಕೊಡುವ ಕೆಲಸ ಮಾಡಬೇಡಿ. ಬಂದ್ ಮಾಡುವ ಅಗತ್ಯ ಇಲ್ಲ. ಎಲ್ಲ ಸಮಾಜವನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇವೆ. ಕನ್ನಡಕ್ಕೆ ಏನೇನೋ ಆದ್ಯತೆ ಕೊಡಬೇಕೋ, ಇನ್ನೂ ಹೆಚ್ಚಿನದಾಗಿ ಏನೇನೋ ಕೊಡಬೇಕೋ ಅದನ್ನು ಕೊಡಲು ನಾನು ಸಿದ್ಧನಿದ್ದೇನೆ. ಕನ್ನಡದ ಮುಖಂಡರು ಏನು ಹೇಳ್ತಾರೋ ಅದನ್ನು ನಾನು ಮಾಡಲು ಸಿದ್ಧನಿದ್ದೇನೆ. ದಯಮಾಡಿ ಬಂದ್ ಗೆ ಎಲ್ಲಿಯೂ ಕೂಡ ಅವಕಾಶ ಇಲ್ಲ. ಯಾರು ಕೂಡ ಬಂದ್ ಮಾಡಬೇಡಿ. ದಯವಿಟ್ಟು ಇದಕ್ಕೆ ಎಲ್ಲರು ಸಹಕರಿಸಿಬೇಕು ಎಂದು ಸಿಎಂ ಮತ್ತೊಮ್ಮೆ ಮನವಿ ಮಾಡಿಕೊಂಡಿದ್ದಾರೆ. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪೊಲೀಸ್ ಕಮಿಷನರ್ ಕಮಲ್ ಪಂಥ್, ಕನ್ನಡಪರ ಹೋರಾಟಗಾರರಿಗೆ ಎಚ್ಚರಿಕೆ ನಿಡಿದರು.

  • ನಾಳೆ ಕೋವಿಡ್‌ ನಿಯಮ ಉಲ್ಲಂಘಿಸಿದವರ ವಿರುದ್ಧ ಎನ್‌ಡಿಎಂಎ ಕಾಯ್ದೆ ಅಡಿ ಕೇಸ್‌ – ಕಮಲ್‌ ಪಂಥ್‌ ಎಚ್ಚರಿಕೆ

    ನಾಳೆ ಕೋವಿಡ್‌ ನಿಯಮ ಉಲ್ಲಂಘಿಸಿದವರ ವಿರುದ್ಧ ಎನ್‌ಡಿಎಂಎ ಕಾಯ್ದೆ ಅಡಿ ಕೇಸ್‌ – ಕಮಲ್‌ ಪಂಥ್‌ ಎಚ್ಚರಿಕೆ

    ಬೆಂಗಳೂರು: ಬಲವಂತವಾಗಿ ಪ್ರತಿಭಟನೆಗೆ ಇಳಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ(ಎನ್‌ಡಿಎಂಎ) ಅಡಿ ಕೇಸ್ ದಾಖಲಿಸಲಾಗುತ್ತದೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂಥ್‌ ಎಚ್ಚರಿಕೆ ನೀಡಿದ್ದಾರೆ.

    ಬಂದ್ ಸಂಬಂಧ ನಾವು ಯಾರಿಗೂ ಅನುಮತಿಯನ್ನು ನೀಡಿಲ್ಲ. ನಮ್ಮಿಂದ ಯಾರೂ ಅನುಮತಿಯನ್ನು ಪಡೆದಿಲ್ಲ. ನಾವು ಬಂದೋಬಸ್ತ್ ಮಾಡಿಕೊಂಡಿದ್ದೇವೆ. ಬಲವಂತವಾಗಿ ಬಂದ್ ಮಾಡಿಸುವಂತಿಲ್ಲ ಎಂದು ಹೇಳಿದರು.

    ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಲು ಯತ್ನಿಸಿದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಕೆಲವರಿಂದ ಬಾಂಡ್ ಬರೆಸಿಕೊಳ್ಳುತ್ತೇವೆ. ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾದರೆ ಅವರೇ ಹೊಣೆ ಹೊರಬೇಕಾಗುತ್ತದೆ ಎಂದು ಹೇಳಿದರು.

    47 ಕೆಎಸ್‌ಆರ್‌ಪಿ, 26 ಸಿಎಆರ್ ತುಕಡಿ ಸೇರಿದಂತೆ ನಗರದ ಎಲ್ಲಾ ಪೊಲೀಸರನ್ನು ನಾಳಿನ ಬಂದೋಬಸ್ತ್ ಗೆ ನಿಯೋಜನೆ ಮಾಡುತ್ತೇವೆ. ನಗರದ ಬೇರೆ ಬೇರೆ ಕಡೆಗಳಿಂದ ಹೊರಡುವ ಪ್ರತಿಭಟನಾ ಮೆರವಣಿಗೆಗೆ ಅವಕಾಶ ಇಲ್ಲ. ಟ್ರಾಫಿಕ್ ಜಾಮ್ ಆಗುವ ಹಿನ್ನೆಲೆ ಮೆರವಣಿಗೆಗೆ ಅವಕಾಶ ನೀಡಿಲ್ಲ ಎಂದು ತಿಳಿಸಿದರು.

     

    ಮುಂಜಾಗೃತ ಕ್ರಮವಾಗಿ ಕೆಲವರನ್ನು ವಶಕ್ಕೆ ಪಡೆಯಲಾಗುತ್ತದೆ. ಒಂದೊಂದು ಡಿವಿಷನ್ ಗೆ ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ ಬಂದೋಬಸ್ತ್ ಗೆ ಸೂಚನೆ ನೀಡಲಾಗಿದೆ. ಬೆಳಗ್ಗೆ ಈಗಾಗಲೇ ಅಧಿಕಾರಿಗಳ ಜೊತೆ ಮೀಟಿಂಗ್ ಮಾಡಿದ್ದೇವೆ. ಸಂಜೆ ಕೂಡ ಒಂದು ಸುತ್ತಿನ ಅಧಿಕಾರಿಗಳ ಜೊತೆಯಲ್ಲಿ ಸಭೆ ನಡೆಸಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ನಾಳೆ ಬಸ್ಸುಗಳ ಕಾರ್ಯಾಚರಣೆಯಲ್ಲಿ‌ ಯಾವುದೇ ವ್ಯತ್ಯಯ ಇಲ್ಲ – ಕೆಎಸ್ಆರ್‌ಟಿಸಿ

    ಕಾಯ್ದೆ ಏನು ಹೇಳುತ್ತೆ?:
    51ನೇ ವಿಧಿ: ಸರಿಯಾದ ಕಾರಣ ಇಲ್ಲದೇ ಸರ್ಕಾರದ ಆದೇಶ ಪಾಲಿಸಲು ನಿರಾಕರಿಸುವ ವ್ಯಕ್ತಿಗೆ 1 ವರ್ಷದ ಜೈಲು ಶಿಕ್ಷೆ ಅಥವಾ ದಂಡ/ಆದೇಶ ಪಾಲಿಸದೇ ವ್ಯಕ್ತಿಯ ಜೀವಹಾನಿ ಇಲ್ಲವೇ ಅಪಾಯಕ್ಕೆ ದೂಡಿದರೆ 2 ವರ್ಷದವರೆಗೆ ಜೈಲು

    52ನೇ ವಿಧಿ: ಸರ್ಕಾರದಿಂದ ಪರಿಹಾರ, ಸಹಾಯಧನ ಪಡೆಯಲು ತಪ್ಪು ಮಾಹಿತಿ ನೀಡಿದರೆ ಅಂತಹ ದಂಡ, 2 ವರ್ಷ ಜೈಲು

  • ಎನ್‍ಸಿಬಿ ಸಹಕಾರ ಕೇಳಿದ್ರೆ ನಾವು ಪೂರ್ಣ ಪ್ರಮಾಣದಲ್ಲಿ ಸಹಕರಿಸ್ತೇವೆ: ಕಮಲ್ ಪಂತ್

    ಎನ್‍ಸಿಬಿ ಸಹಕಾರ ಕೇಳಿದ್ರೆ ನಾವು ಪೂರ್ಣ ಪ್ರಮಾಣದಲ್ಲಿ ಸಹಕರಿಸ್ತೇವೆ: ಕಮಲ್ ಪಂತ್

    ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಎನ್‍ಸಿಬಿ (Narcotics Control Bureau) ತನಿಖೆ ನಡೆಸುತ್ತಿದೆ. ಅವರು ನಮ್ಮ ಸಹಕಾರ ಕೇಳಿದರೆ ನಾವು ಸಹಾಯ ಮಾಡುತ್ತೇವೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ಇದನ್ನೂ ಓದಿ: ಈ ಹಿಂದೆ ತೀರಿಕೊಂಡ ನಟನ ಪೋಸ್ಟ್ ಮಾರ್ಟಂ ಆಗಿಲ್ಲ ಏಕೆ?: ಇಂದ್ರಜಿತ್

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಎನ್‍ಸಿಬಿ ತನಿಖೆ ನಡೆಸುತ್ತಿದೆ. ಎನ್‍ಸಿಬಿ ಅಧಿಕಾರಿಗಳು ಹೊರಗಡೆಯಿಂದ ಬರುತ್ತಿದ್ದಾರೆ ಎಂದು ನಮಗೆ ಗೊತ್ತಾಗಿದೆ. ಒಂದು ವೇಳೆ ಎನ್‍ಸಿಬಿ ತಂಡ ನಮ್ಮ ಸಹಕಾರ, ಬೆಂಬಲವನ್ನು ಕೇಳಿದರೆ ನಾವು ಪೂರ್ಣ ಪ್ರಮಾಣದಲ್ಲಿ ಅವರಿಗೆ ಸಹಕಾರ ಕೊಡುತ್ತೇವೆ ಎಂದರು.

    ಹೊರಗಡೆಯಿಂದ ಬರುತ್ತಿರುವ ಅಧಿಕಾರಿಗಳು ನಮ್ಮ ಬಳಿ ಬರುವ ನಿರೀಕ್ಷೆ ಇದೆ. ಅವರಿಗೆ ಅನುಕೂಲವಾದಾಗ ಪ್ರಕರಣವನ್ನು ನಮಗೆ ನೀಡಿದರೆ ನಾವು ಖಂಡಿತ ತನಿಖೆಯನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ಸಹಕಾರ ನೀಡಲು ಪೊಲೀಸರು ಬದ್ಧರಾಗಿದ್ದೇವೆ. ಎನ್‍ಸಿಬಿ ಅಧಿಕಾರಿಯಿಂದ ನಮಗೆ ಇಲ್ಲಿವರೆಗೂ ಯಾವುದೇ ಮಾಹಿತಿ ತಿಳಿಸಿಲ್ಲ. ಎನ್‍ಸಿಬಿ ಮಾಹಿತಿ ಶೇರ್ ಮಾಡುತ್ತಾರೆ. ನಂತರ ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

    ಇಂದ್ರಜಿತ್ ಲಂಕೇಶ್ ಹೇಳಿಕೆ ಬಗ್ಗೆ ನಮ್ಮ ಪೊಲೀಸರು ಗಮನಿಸಿದ್ದಾರೆ. ಸುಮೋಟೋ ತೆಗೆದುಕೊಳ್ಳುವ ಬಗ್ಗೆ ಚರ್ಚೆ ನಡೆದಿದೆ. ರಕ್ಷಣೆ ಬೇಕು ಅಂದರೆ ಕೊಡೋಣ. ಬಳಿಕ ಸಮನ್ಸ್ ಕೊಡುವುದರ ಬಗ್ಗೆ ಚಿಂತನೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದರು.

    ಇಂದ್ರಜಿತ್ ಹೇಳಿದ್ದೇನು?
    ಹಲವಾರು ರೇವ್ ಪಾರ್ಟಿಗಳು ನಡೆಯುತ್ತಾ ಇರುತ್ತವೆ. ಯುವ ನಟ ಹಾಗೂ ನಟರು ಇದರಲ್ಲಿ ಸಿಲುಕಿದ್ದಾರೆ. ನನಗೆ ಪರಿಚಯ ಇರುವಂತಹ ಹಾಗೂ ಈಗಾಗಲೇ ಖ್ಯಾತಿಯಲ್ಲಿರುವವವರು ಯಾರೂ ಮಾಡಲ್ಲ ಅಂತ ನಾನು ಖಂಡಿತವಾಗಿ ಹೇಳಬಹುದು. ಆದರೆ ಸಡನ್ ಆಗಿ ಪ್ರಚಾರ ಪಡೆಯುತ್ತಿರುವಂತಹ ಯುವ ನಟ-ನಟಿಯರು ಪಾರ್ಟಿ ಹಾಗೂ ಈ ರೀತಿಗಳಲ್ಲಿ ತಮ್ಮನ್ನು ತಾವು ತೊಡಿಸಿಕೊಳ್ಳುತ್ತಾರೆ ಅಂತ ನಾನು ಕೇಳಿದ್ದೀನಿ. ಹಲವಾರು ಘಟನೆಗಳು ಕೂಡ ನನಗೆ ತಿಳಿದಿದೆ. ಬಾಲಿವುಡ್ ನಟಿ ಕಂಗನಾ ರಣಾವತ್ ಹೇಳಿದಂತೆ ನನಗೂ ರಕ್ಷಣೆ ಕೊಟ್ಟರೆ ನಾನೂ ಕೆಲವೊಂದು ವಿಚಾರಗಳನ್ನು ಬಹಿರಂಗಪಡಿಸಲು ಸಿದ್ಧನಿದ್ದೇನೆ ಎಂದು ತಿಳಿಸಿದ್ದರು.

  • ದಕ್ಷ ಅಧಿಕಾರಿಯನ್ನು ಏಜೆಂಟ್ ಎಂದಿರೋದನ್ನ ಖಂಡಿಸ್ತೀನಿ: ಡಿಕೆಶಿಗೆ ಬೊಮ್ಮಾಯಿ ತಿರುಗೇಟು

    ದಕ್ಷ ಅಧಿಕಾರಿಯನ್ನು ಏಜೆಂಟ್ ಎಂದಿರೋದನ್ನ ಖಂಡಿಸ್ತೀನಿ: ಡಿಕೆಶಿಗೆ ಬೊಮ್ಮಾಯಿ ತಿರುಗೇಟು

    ಬೆಂಗಳೂರು: ದಕ್ಷ ಪೊಲೀಸ್ ಅಧಿಕಾರಿ ಕಮಲ್ ಪಂಥ್ ಅವರನ್ನು ಡಿ.ಕೆ ಶಿವಕುಮಾರ್ ಅವರು ಏಜೆಂಟ್ ಎಂದಿರುವುದನ್ನು ಗೃಹ ಮಂತ್ರಿ ಬಸವರಾಜ್ ಬೊಮ್ಮಾಯಿ ಬಲವಾಗಿ ಖಂಡಿಸುತ್ತೇನೆ.

    ದೇವರಾಜ್ ಅರಸರ ಜನ್ಮದಿನದಂದೇ `ಬಿಜೆಪಿ ವಿರುದ್ಧ ಕಾಂಗ್ರೆಸ್ ಜನಧ್ವನಿ’ ಹೆಸರಲ್ಲಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿದೆ. ಈ ವೇಳೆ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಮಾತನಾಡಿದ ಡಿಕೆಶಿ, ಮಿಸ್ಟರ್ ಪೊಲೀಸ್ ಕಮೀಷನರ್ ಬೆಂಗಳೂರಿನಲ್ಲಿ ನಡೆದ ಗಭೆಯಲ್ಲಿ ನೀವು ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದ್ದೀರಿ ಎಂದು ಆರೋಪ ಮಾಡಿದ್ದರು. ಇದನ್ನೂ ಓದಿ: ಮಿಸ್ಟರ್ ಪೊಲೀಸ್ ಕಮೀಷನರ್ ಬೆಂಗ್ಳೂರು ಗಲಭೆಯಲ್ಲಿ ನೀವು ಬಿಜೆಪಿ ಏಜೆಂಟ್ ರೀತಿ ವರ್ತಿಸ್ತಿದ್ದೀರಿ: ಡಿಕೆಶಿ

    ಈಗ ಈ ವಿಚಾರದ ಬಗ್ಗೆ ಟ್ವೀಟ್ ಮಾಡಿರುವ ಬೊಮ್ಮಾಯಿ, ಡಿಕೆ ಶಿವಕುಮಾರ್ ಅವರು ದಕ್ಷ ಪೊಲೀಸ್ ಅಧಿಕಾರಿಯಾದ ಕಮಲ್ ಪಂಥ್ ಕುರಿತು ಏಜೆಂಟ್ ಎಂದು ನೀಡಿರುವ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಇದು ಗಲಭೆಕೋರರನ್ನು ಪರೋಕ್ಷವಾಗಿ ರಕ್ಷಣೆ ಮಾಡುವ ಮತ್ತೊಂದು ತಂತ್ರವಾಗಿದೆ. ಇದು ಯಾವುದು ನಡೆಯುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಾವು ಯಾವ ಅಮಾಯಕರನ್ನೂ ಅರೆಸ್ಟ್ ಮಾಡಿಲ್ಲ – ಕಾಂಗ್ರೆಸ್ ನಾಯಕರಿಗೆ ಕಮಿಷನರ್ ಕಮಲ್‍ಪಂತ್ ತಿರುಗೇಟು

    ಗಲಭೆಯ ವಿಡಿಯೋಗಳಲ್ಲಿ ಸ್ಪಷ್ಟವಾಗಿದ್ದು, ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಪೊಲೀಸ್ ಕಮಿಷನರ್ ಕೈಗೊಂಡ ಕ್ರಮವನ್ನು ರಾಜ್ಯದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪೊಲೀಸರನ್ನು ಏಜೆಂಟರನ್ನಾಗಿ ನಡೆಸಿಕೊಳ್ಳುವುದು ಅವರ ಸಂಸ್ಕೃತಿ. ಪೋಲಿಸರ ನಿಷ್ಪಕ್ಷಪಾತವಾಗಿ ತನಿಖೆಯನ್ನು ಮಾಡುತ್ತಿದ್ದಾರೆ. ಇದರಲ್ಲಿ ಯಾರದ್ದೇ ಪ್ರಭಾವ ನಡೆಯುವುದಿಲ್ಲ ಎಂದು ಕೈ ನಾಯಕರಿಗೆ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

  • ಕರ್ಫ್ಯೂ ತೆಗೆಯಿರಿ, ಒಂದು ವೇಳೆ ಅಲ್ಲಿ ಮತ್ತೆ ಏನಾದ್ರೂ ಆದರೆ ಅದಕ್ಕೆ ನಾವು ಜವಾಬ್ದಾರರಲ್ಲ

    ಕರ್ಫ್ಯೂ ತೆಗೆಯಿರಿ, ಒಂದು ವೇಳೆ ಅಲ್ಲಿ ಮತ್ತೆ ಏನಾದ್ರೂ ಆದರೆ ಅದಕ್ಕೆ ನಾವು ಜವಾಬ್ದಾರರಲ್ಲ

    – ಪೊಲೀಸ್‌ ಆಯುಕ್ತರನ್ನು ಭೇಟಿ ಮಾಡಿದ್ದ ಮುಸ್ಲಿಮ್‌ ಮುಖಂಡರು
    – ಆಯುಕ್ತರಿಗೆ ನೀಡಿದ್ದು ಮನವಿಯೇ? ಅಥವಾ ಎಚ್ಚರಿಕೆಯೇ?

    ಬೆಂಗಳೂರು: ದೇವರಜೀವನಹಳ್ಳಿ ಮತ್ತು ಕಾಡುಗೊಂಡನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಭೆ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಶಾಂತಿನಗರದ ಕಾಂಗ್ರೆಸ್‌ ಶಾಸಕ ಹ್ಯಾರಿಸ್‌ ಜೊತೆ ಮೌಲ್ವಿಗಳು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂಥ್‌ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. ಈ ವೇಳೆ ಮೌಲ್ವಿಗಳು ಆರೋಪಿಗಳ ಪರವಾಗಿ ಆಯುಕ್ತರ ಬಳಿ ಮನವಿ ಮಾಡಿದ್ದಾರೋ ಎಚ್ಚರಿಕೆ ನೀಡಿದ್ದಾರೋ ಎಂಬ ಪ್ರಶ್ನೆ ಎದ್ದಿದೆ.

    ಹೌದು, ಈ ಪ್ರಶ್ನೆ ಏಳಲು ಕಾರಣ ಪಬ್ಲಿಕ್‌ ಟಿವಿಗೆ ಒಂದು ವಿಡಿಯೋ ಲಭ್ಯವಾಗಿದೆ. ಈ ವಿಡಿಯೋದಲ್ಲಿ ಕರ್ಫ್ಯೂ ಬಗ್ಗೆ ಉಲ್ಲೇಖಿಸಿ, ಅಲ್ಲಿ ವಿಧಿಸಿರುವ ಕರ್ಫ್ಯೂ ತೆಗೆಯಿರಿ. ಒಂದು ವೇಳೆ ಅಲ್ಲಿ ಮತ್ತೆ ಏನಾದ್ರೂ ಆದರೆ ಅದಕ್ಕೆ ನಾವು ಜವಾಬ್ದಾರರಲ್ಲ ಎಂದು ಹೇಳಿದ್ದಾರೆ.

    ವಿಡಿಯೋದಲ್ಲಿ ಏನಿದೆ?
    ಪೊಲೀಸರು ಚೆನ್ನಾಗಿ ಕೆಲಸ ಮಾಡ್ತಾ ಇದ್ದಾರೆ ಅನ್ನೋ ಮೆಸೇಜ್ ನಾವು ಕಳೆದ ಶುಕ್ರವಾರ ಎಲ್ಲರಿಗೂ ಕಳಿಸಿದ್ದೇವೆ. ನಮ್ಮ ಸಂಘಟನೆಗಳು 28 ಜಿಲ್ಲೆಗಳಲ್ಲಿದ್ದು, ನಾವು ಎಲ್ಲಿಯೂ ಪ್ರತಿಭಟನೆ ಮಾಡಿಲ್ಲ. ಇನ್ನೆರಡು ದಿನಗಳಲ್ಲಿ ಶುಕ್ರವಾರ ಬರಲಿದೆ. ಎರಡು ವಾರ ಅಲ್ಲಿ ಹೇಗೆ ಕರ್ಫ್ಯೂ ಮಾಡ್ತಾರೆ ಅಂತ ಜನ ನಮ್ಮನ್ನ ಕೇಳ್ತಾ ಇದ್ದಾರೆ. ಜನ ಭಯಭೀತರಾಗಿದ್ದಾರೆ. ಶುಕ್ರವಾರದ ಪ್ರಾರ್ಥನೆಯಲ್ಲಿ ಗಲಾಟೆಯ ಬಗ್ಗೆ ಯಾವುದೇ ಚರ್ಚೆಗಳು ನಡೆಯಲ್ಲ. ಹಾಕಿರೋ ಕರ್ಫ್ಯೂ ತೆಗೆಯಿರಿ ಅಂತ ನಾವು ಮನವಿ ಮಾಡಿಕೊಳ್ಳುತ್ತೇವೆ.

    ನಾವು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿ ಚೆನ್ನಾಗಿಲ್ಲ. ಅಲ್ಲಿಯ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಲು ನಾವು ಸಂಪೂರ್ಣ ಸಹಕಾರ ನೀಡ್ತೀವಿ. ಸಹಜ ಸ್ಥಿತಿಗೆ ತರಲು ನೀವು ಹೇಳಿದ ಹಾಗೆ ನಾವು ಕೇಳಲು ರೆಡಿ. ಎಲ್ಲರೂ ಒಂದಾಗಿ ಅಲ್ಲಿಯ ಪರಿಸ್ಥಿತಿ ಸಹಜ ಸ್ಥಿತಿಗೆ ಬರುವಂತೆ ಮಾಡೋಣ. ಆದ್ರೆ ಅಲ್ಲಿ ವಿಧಿಸಿರುವ ಕರ್ಫ್ಯೂ ತೆಗೆಯಿರಿ. ಒಂದು ವೇಳೆ ಅಲ್ಲಿ ಮತ್ತೆ ಏನಾದ್ರೂ ಆದ್ರೆ ನಾವು ಜವಾಬ್ದಾರರಲ್ಲ. ನಿನ್ನೆ ಬಾಣಸವಾಡಿಯಲ್ಲಿ 16 ಜನರನ್ನ ಬಂಧಿಸಿದ್ದಾರೆ. ಅವರಿಗೂ ಈ ಪ್ರಕರಣಕ್ಕೆ ಏನು ಸಂಬಂಧ? ಬಂಧಿತರ ಪೋಷಕರು ನಮ್ಮ ಮಕ್ಕಳು ಅಮಾಯಕರು, ಅಪ್ರಾಪ್ತರು ಅಂತಾ ಹೇಳ್ತಾರೆ.

    ಅಮಾಯಕರನ್ನ ಅರೆಸ್ಟ್ ಮಾಡಬಾರದು, ಪೋಷಕರು ಸ್ಟೇಷನ್‍ಗೆ ಹೋದ್ರೆ ಪೊಲೀಸರು ನಾವು ಅರೆಸ್ಟ್ ಮಾಡಿಲ್ಲ ಅಂತಾರೆ, ಬೇರೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಅಂತಾರೆ. ಪೊಲೀಸರು ಹೀಗೆ ಹೇಳಿದ್ರೆ ಏನು ಮಾಡೋದು, ಕಾನೂನಿನಲ್ಲಿ ಹೀಗಿದೆಯಾ? ಯಾರೋ ಬಂದು ಅರೆಸ್ಟ್ ಮಾಡ್ತಾರೆ ಅಂದ್ರೆ ಹೇಗೆ? ಸೋಶಿಯಲ್ ಮೀಡಿಯಾದಲ್ಲಿ ಎಲ್ಲೆಲ್ಲಿ ಅರೆಸ್ಟ್ ಆಯ್ತು ಅನ್ನೋದರ ಬಗ್ಗೆ ಅಪ್ಡೇಟ್ ಮಾಡಲಾಗ್ತಿದೆ.