Tag: ಕಮೀಷನರ್

  • ಕರ್ನಾಟಕ ನೆಲದಲ್ಲಿ ತಮಿಳುನಾಡು ಖಾಕಿ ಚೆಕ್‍ಪೋಸ್ಟ್ – ಬಸವರಾಜ್ ಬೊಮ್ಮಾಯಿ ಫುಲ್ ಗರಂ

    ಕರ್ನಾಟಕ ನೆಲದಲ್ಲಿ ತಮಿಳುನಾಡು ಖಾಕಿ ಚೆಕ್‍ಪೋಸ್ಟ್ – ಬಸವರಾಜ್ ಬೊಮ್ಮಾಯಿ ಫುಲ್ ಗರಂ

    – ಸ್ವತಃ ವಾಹನಗಳ ಪಾಸ್‍ಚೆಕ್ ಮಾಡಿದ ಕಮೀಷನರ್

    ಬೆಂಗಳೂರು: ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಕೂಡ ಲಾಕ್‍ಡೌನ್ ಅನ್ನು ಸರಿಯಾಗಿ ಪಾಲನೆ ಮಾಡುತ್ತಿಲ್ಲ ಎನ್ನುವ ಬಗ್ಗೆ ಸ್ವತಃ ಗೃಹಮಂತ್ರಿಗಳು ಹಾಗೂ ಬೆಂಗಳೂರು ಕಮಿಷನರ್ ಖುದ್ದು ಚೆಕ್ ಪೋಸ್ಟ್ ಹಾಗೂ ಬಾರ್ಡರ್‌ಗಳಿಗೆ ಭೇಟಿ ನೀಡಿ ರಿಯಾಲಿಟಿ ಚೆಕ್ ನಡೆಸಿದ್ದಾರೆ. ನಕಲಿ ಪಾಸ್‍ಗಳನ್ನು ಬಳಸಿ ಹಾಗೂ ಅನವಶ್ಯಕವಾಗಿ ಓಡಾಟ ಮಾಡುತ್ತಿದ್ದವರ ಪಾಸ್‍ಗಳನ್ನು ವಶಕ್ಕೆ ಪಡೆದು ವಾಹನಗಳನ್ನು ಸೀಜ್ ಮಾಡಿದ್ದಾರೆ.

    ದೇಶಾದ್ಯಂತ ಲಾಕ್‍ಡೌನ್ ಹೇರಿದರೂ ಮಹಾಮಾರಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ಇದಕ್ಕೆ ತಮಿಳುನಾಡು ಕೂಡ ಹೊರತಲ್ಲ. ಈ ಹಿನ್ನೆಲೆಯಲ್ಲಿ ಖುದ್ದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಕಮಿಷನರ್ ಭಾಸ್ಕರ್ ರಾವ್ ಸೇರಿದಂತೆ ಪೊಲೀಸ್ ಅಧಿಕಾರಿಗಳ ತಂಡ ಕರ್ನಾಟಕ-ತಮಿಳುನಾಡು ಗಡಿ ಅತ್ತಿಬೆಲೆಗೆ ದಿಢೀರ್ ಭೇಟಿ ನೀಡಿದ್ದಾರೆ. ಖುದ್ದು ಕಮೀಷನರ್ ವಾಹನಗಳ ತಪಾಸಣೆ ಮಾಡಿದ್ದಾರೆ.

    ಕರ್ನಾಟಕದ ಅತ್ತಿಬೆಲೆ ಗಡಿ ಭಾಗದಲ್ಲಿ ತಮಿಳುನಾಡಿನ ಪೊಲೀಸರು ಚೆಕ್ ಪೋಸ್ಟ್ ಹಾಕಿಕೊಂಡಿದ್ದರು. ಇದನ್ನು ಗಮನಿಸಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಫುಲ್ ಗರಂ ಆಗಿದ್ದರು. ತಕ್ಷಣ ತಮಿಳುನಾಡು ಪೊಲೀಸರನ್ನು ಅವರ ಗಡಿಯಲ್ಲಿ ಚೆಕ್‍ಪೋಸ್ಟ್ ಹಾಕಿಕೊಳ್ಳುವಂತೆ ಸೂಚಿಸಿ ಎತ್ತಂಗಡಿ ಮಾಡಿಸಿದ್ದಾರೆ.

    ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಎಲೆಕ್ಟ್ರಾನಿಕ್ ಸಿಟಿ, ಹೊಸೂರು ಮುಖ್ಯ ರಸ್ತೆಯ ಚೆಕ್ ಪೋಸ್ಟ್ ಗಳನ್ನು ತಪಾಸಣೆ ಮಾಡಿದರು. ಬಳಿಕ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು, ಸಾಕಷ್ಟು ನಕಲಿ ಪಾಸ್‍ಗಳಿರುವ ವಾಹನ ಸವಾರರು ಓಡಾಟ ನಡೆಸಿ, ಸಿಕ್ಕಿಬಿದ್ದಿದ್ದಾರೆ. ಅಂತಹ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದಿದ್ದಾರೆ.

    ಲಾಕ್‍ಡೌನ್ ಪಾಲನೆ ಮಾಡದೇ ಬೀದಿಗಿಳಿಯುತ್ತಿರುವ ವಾಹನ ಸವಾರರಿಗೆ ಖುದ್ದು ಗೃಹ ಸಚಿವರು ಮತ್ತು ಬೆಂಗಳೂರು ಕಮೀಷನರ್ ರಿಯಾಲಿಟಿ ಚೆಕ್ ನಡೆಸುವ ಮೂಲಕ ಬಿಸಿ ಮುಟ್ಟಿಸಿದ್ದಾರೆ.

  • ವಿಶ್ವದ ಸಂಚಾರ ದಟ್ಟಣೆಯಲ್ಲಿ ಬೆಂಗಳೂರಿಗೆ ಮೊದಲನೇ ಸ್ಥಾನ – ಒಪ್ಪಿಕೊಂಡ ಭಾಸ್ಕರ್ ರಾವ್

    ವಿಶ್ವದ ಸಂಚಾರ ದಟ್ಟಣೆಯಲ್ಲಿ ಬೆಂಗಳೂರಿಗೆ ಮೊದಲನೇ ಸ್ಥಾನ – ಒಪ್ಪಿಕೊಂಡ ಭಾಸ್ಕರ್ ರಾವ್

    -ತಜ್ಞರು, ಟಾಮ್ ಟಾಮ್ ಸಿಬ್ಬಂದಿಯ ಜೊತೆ ಕಮೀಷನರ್ ಸಭೆ

    ಬೆಂಗಳೂರು: ಸಿಲಿಕಾನ್ ಸಿಟಿ ವಿಶ್ವದ 57 ರಾಷ್ಟ್ರಗಳ 416 ನಗರಗಳಲ್ಲಿ ಸಂಚಾರ ದಟ್ಟಣೆಯಲ್ಲಿ ಮೊದಲ ಸ್ಥಾನ ಪಡೆದಿದೆ. ತೀವ್ರ ಸಂಚಾರ ದಟ್ಟಣೆ ಹಾಗೂ ಜನರ ಸಮಯವನ್ನು ಹಾಳು ಮಾಡುವ ವಿಶ್ವದ 10 ನಗರಗಳಲ್ಲಿ ಬೆಂಗಳೂರಿಗೆ ಮೊದಲ ಸ್ಥಾನ.

    ಟಾಮ್ ಟಾಮ್ ಸಂಸ್ಥೆಯ ವರದಿಯಲ್ಲಿ ಬೆಂಗಳೂರು ಟ್ರಾಫಿಕ್ ಸಮಸ್ಯೆಯ ಬೆಳಕು ಚೆಲ್ಲಲಾಗಿದೆ. ಈ ಬಗ್ಗೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸಹ ಒಪ್ಪಿಕೊಂಡಿದ್ದಾರೆ. ಗುರುವಾರ ಈ ಬಗ್ಗೆ ತಜ್ಞರು ಮತ್ತು ಟಾಮ್ ಟಾಮ್ ಸಿಬ್ಬಂದಿಯ ಜೊತೆ ಕಮೀಷನರ್ ಸಭೆ ನಡೆಸಿದ್ದಾರೆ.

    ನಗರದಲ್ಲಿ ಬಹುತೇಕ ಕಡೆ ಮೆಟ್ರೊ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಸಂಚಾರ ದಟ್ಟಣೆ ಅಧಿಕವಾಗಿದೆ. ಶೇ. 65ಕ್ಕಿಂತ ಹೆಚ್ಚು ಟೂ ವೀಲರ್ ಗಳು ರಸ್ತೆಗಿಳಿಯುತ್ತಿವೆ. ಸಾರ್ವಜನಿಕ ಸಾರಿಗೆಯನ್ನು ಸಹ ಪರಿಣಾಮಕಾರಿಯಾಗಿ ಬಳಸಿಕೊಳ್ಳದಿರುವುದು ಸಮಸ್ಯೆಗೆ ಕಾರಣ.

    ಒಂದು ಮನೆಯಲ್ಲಿ ಮೂರು ನಾಲ್ಕು ಕಾರುಗಳು ಇರುವುದು. ಒಬ್ಬರಿಗೇ ಕಾರು ಎತ್ತುವುದು ಸಹ ಟ್ರಾಫಿಕ್ ಕಿರಿಕಿರಿಗೆ ಕಾರಣವಾಗಿದೆ ಎಂದು ಕಮೀಷನರ್ ಹೇಳಿದ್ದಾರೆ. ವಿಶ್ವದಲ್ಲಿ ಅತೀ ಸಂಚಾರ ದಟ್ಟಣೆಯ ನಗರ ಎನ್ನುವ ಕುಖ್ಯಾತಿಗೆ ಬೆಂಗಳೂರಿಗೆ ಅಂಟಿಕೊಂಡಿದೆ.

  • ಅವರೆಕಾಯಿ ಮೇಳಕ್ಕೆ ಅನುಮತಿ ನಿರಾಕರಿಸಿದ ಪಾಲಿಕೆ ಆಯುಕ್ತ

    ಅವರೆಕಾಯಿ ಮೇಳಕ್ಕೆ ಅನುಮತಿ ನಿರಾಕರಿಸಿದ ಪಾಲಿಕೆ ಆಯುಕ್ತ

    ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನ ಸಜ್ಜನ್ ರಾವ್ ಸರ್ಕಲ್‍ನಲ್ಲಿ ನಡೆಯಲಿರುವ ಅವರೆಕಾಯಿ ಮೇಳ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಈ ವರ್ಷ ಅವರೆಕಾಯಿ ಮೇಳ ನಡೆಯುವುದು ಅನುಮಾನ. ಕಾರಣ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅನಿಲ್ ಕುಮಾರ್ ಮೇಳ ನಡೆಸಲು ಅನುಮತಿ ನಿರಾಕರಿಸಿದ್ದಾರೆ.

    ಅವರೆಕಾಳು ಮೇಳ ಕಳೆದ ಹಲವು ವರ್ಷಗಳಿಂದ ನಡೆಯುತ್ತಲೇ ಇದೆ. ಆದರೆ ಈ ಬಾರಿ ಸ್ಥಳೀಯ ವೆಲ್‍ಫೇರ್ ಅಸೋಸಿಯೇಷನ್ ಹಾಗೂ ಪಾಲಿಕೆ ಸದಸ್ಯ ಕಮೀಷನರ್ ಗೆ ಮನವಿ ಮಾಡಿದ್ದು, ಮೇಳ ನಡೆಯಲು ಅವಕಾಶ ನೀಡಬಾರದೆಂದು ಮನವಿ ಮಾಡಿದ್ದಾರೆ ಎಂದು ಖುದ್ದು ಕಮೀಷನರ್ ಅನಿಲ್ ಕುಮಾರ್ ಹೇಳಿದರು.

    ಮೇಳದಿಂದ ಒಂದು ಕುಟುಂಬಕ್ಕೆ ಮಾತ್ರ ಸಹಾಯವಾಗುತ್ತಿದೆ. ಅವರೆ ಮಿಕ್ಸಚರ್, ಅವರೆ ದೋಸೆ, ಹಲ್ವಾ, ಪೇಡಾ ಎಲ್ಲ ತಯಾರಾಗುತ್ತಿತ್ತು. ಹಾಗೇ ಅದು ಒಂದು ಕುಟುಂಬದ ಲಾಭವಾಗಿತ್ತು. ಜೊತೆಗೆ ಸ್ವಚ್ಛತೆಯನ್ನು ಕಾಪಾಡುತ್ತಿರಲಿಲ್ಲ. ಹೀಗಾಗಿ ಅವರೆ ಮೇಳಕ್ಕೆ ಅನುಮತಿ ನೀಡಿಲ್ಲ ಎಂದು ಕಮೀಷನರ್ ತಿಳಿಸಿದರು.

    ಬಿಬಿಎಂಪಿ ಮೂಲಗಳ ಮಾಹಿತಿಯಂತೆ ಅವರೆ ಮೇಳದಿಂದ ರೈತರಿಗೆ ಸಹಾಯವಾಗುತ್ತದೆ ಅನುಮತಿ ನೀಡಿ ಎಂದು ಶಿಫಾರಸ್ಸುಗಳ ಸುರಿಮಳೆಯಾಗಿದೆ. ಉಪಮುಖ್ಯಮಂತ್ರಿ, ಮೇಯರ್, ಶಾಸಕರು, ವಿಧಾನ ಪರಿಷತ್ ಸದಸ್ಯರೆಲ್ಲ ಆಯುಕ್ತರಿಗೆ ಕರೆ ಮಾಡಿದ್ದಾರೆ.

  • ಬೆಂಗಳೂರಿಗರೇ ಸೆಪ್ಟೆಂಬರ್‌ನಿಂದ ಹುಷಾರ್: ಸಿಕ್ಕ ಸಿಕ್ಕಲ್ಲಿ ಕಸ ಹಾಕಿದ್ರ ಕಠಿಣ ಕ್ರಮ

    ಬೆಂಗಳೂರಿಗರೇ ಸೆಪ್ಟೆಂಬರ್‌ನಿಂದ ಹುಷಾರ್: ಸಿಕ್ಕ ಸಿಕ್ಕಲ್ಲಿ ಕಸ ಹಾಕಿದ್ರ ಕಠಿಣ ಕ್ರಮ

    ಬೆಂಗಳೂರು: ಮಾರ್ಷಲ್‍ಗಳು ಮತ್ತಷ್ಟು ಕಾರ್ಯೊನ್ಮುಖವಾಗಲಿದ್ದು, ಸಿಕ್ಕ ಸಿಕ್ಕಲ್ಲಿ ಕಸ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಈ ನಿಟ್ಟಿನಲ್ಲಿ ದಂಡದ ಪ್ರಮಾಣವನ್ನು ಸೆಪ್ಟಂಬರ್ ನಿಂದ 100 ರೂ. ರಿಂದ 500 ರೂ.ಗೆ ಏರಿಕೆ ಮಾಡಲು ಮುಂದಾಗಿದೆ.

    ಘನತ್ಯಾಜ್ಯ ನಿರ್ವಹಣೆ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಬಿಎಂಪಿ ಕಮೀಷನರ್ ಮಂಜುನಾಥ್ ಪ್ರಸಾದ್ ಅವರು, ಕಸದ ಹೊಸ ಟೆಂಡರ್ ಗುತ್ತಿಗೆದಾರರು ಮಿಕ್ಸ್ ಕಸ ಪಡೆಯುವುದಿಲ್ಲ. ಹಸಿ ಕಸ, ಒಣ ಕಸ ಗುತ್ತಿಗೆದಾರರು ಬೇರೆ ಬೇರೆ ಎಂದು ಗುರುತಿಸಲಾಗುತ್ತದೆ. ಪೌರ ಕಾರ್ಮಿಕರಿಗೆ ಕಸ ಕೊಡದಿದ್ದರೆ ಆ ಮನೆಗಳಿಗೆ ಅಧಿಕಾರಿಗಳೇ ಭೇಟಿ ಮಾಡುತ್ತಾರೆ. ಎಲ್ಲಂದರಲ್ಲಿ ಕಸ ಹಾಕಿದರೆ, ರೋಡ್ – ಅಂಡರ್ ಪಾಸ್, ಬ್ಲಾಕ್ ಸ್ಪಾರ್ಟ್ ಗಳಲ್ಲಿ ಕಸ ಕಂಡರೆ ಭಾರೀ ಪ್ರಮಾಣದಲ್ಲಿ ದಂಡ ಹಾಕಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

    ಕಡ್ಡಾಯವಾದ ತ್ಯಾಜ್ಯ ವಿಂಗಡನೆಗೆ ಡೆಡ್ ಲೈನ್ ನಿಗದಿಯಾಗಿದೆ. ಡಿಸೆಂಬರ್ ತಿಂಗಳ ಕಡೆಯ ವಾರದೊಳಗೆ ನಗರವು ಸಂಪೂರ್ಣವಾಗಿ ಸ್ವಚ್ಛವಾಗಬೇಕು. ಮನೆ ಮನೆಯಲ್ಲೇ ತ್ಯಾಜ್ಯ ವಿಂಗಡಣೆ ಪಕ್ಕಾ ಆಗಬೇಕು. ಸೆಪ್ಟೆಂಬರ್ ತಿಂಗಳಿಗೆ ಶೇ.90ರಷ್ಟು ತ್ಯಾಜ್ಯ ವಿಂಗಡನೆ ಮಾಡಲಾಗುತ್ತದೆ. ಲ್ಯಾಂಡ್ ಫೀಲ್ ಶೇ.13 ರಿಂದ 15 ರಷ್ಟು ಇಳಿಸಲು ತೀಮಾನಿಸಲಾಗಿದೆ. ಪ್ಲಾಸ್ಟಿಕ್ ಬಳಕೆಯ ಸಂಪೂರ್ಣ ನಿಷೇಧಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

    ಕಸದ ಸೆಸ್ ಏರಿಕೆಗೂ ಚಿಂತನೆ ನಡೆದಿದೆ. ಶೇ.15ರಷ್ಟು ಹೆಚ್ಚಳ ಮಾಡುವ ಕುರಿತು ಚರ್ಚೆಯಾಗಿದೆ. ಅಪಾಟ್ರ್ಮೆಂಟ್‍ಗಳ ಬಲ್ಕ್ ತ್ಯಾಜ್ಯ ಸಂಸ್ಕರಣೆ ಮಾಡಿಕೊಳ್ಳಬೇಕು. ಪೌರಕಾರ್ಮಿಕರಿಗೆ ಪ್ರತಿ ತಿಂಗಳು 27 ಕೋಟಿ ರೂ. ವೇತನ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

    ಬ್ಲಾಕ್ ಸ್ಪಾರ್ಟ್ ಗಳಿಗೆ ಸಿಸಿಟಿವಿ ಅಳವಡಿಕೆ ಮಾಡಲಾಗುತ್ತದೆ. ರಾತ್ರೋ ರಾತ್ರಿ ಕಸ ಹಾಕುವವರ ಮೇಲೆ ಕಣ್ಣು ಇಡಲಾಗುತ್ತದೆ. ಮಾರ್ಷಲ್‍ಗಳು ಕಸ ಹಾಕುವವರ ಪತ್ತೆ ಹಚ್ಚಲಿದ್ದಾರೆ. ಈ ನಿಟ್ಟಿನಲ್ಲಿ ರಾತ್ರಿ 8 ಗಂಟೆಯಿಂದ 1 ಗಂಟೆರಯವರೆಗೂ ಮಾರ್ಷಲ್ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.

    ಈ ವೇಳೆ ಬಿಬಿಎಂಪಿ ಮೇಯರ್ ಗಂಗಾಂಬಿಕೆ, ಆಡಳಿತ ಪಕ್ಷ ನಾಯಕ ಅಬ್ದುಲ್ ವಾಜೀದ್, ಜೆಡಿಎಸ್ ನಾಯಕಿ ನೇತ್ರಾ ನಾರಾಯಣ್ ಹಾಗೂ ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ ಉಪಸ್ಥಿತರಿದ್ದರು.