Tag: ಕರಣ್ ಜೋಹರ್

  • ಕರಣ್ ಜೋಹರ್ ಮಾಸ್ಕ್ ಮೇಲೆ ಸಂದೇಶ

    ಕರಣ್ ಜೋಹರ್ ಮಾಸ್ಕ್ ಮೇಲೆ ಸಂದೇಶ

    ಮುಂಬೈ: ಬಾಲಿವುಡ್ ಸಿನಿಮಾ ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್ ಮುಂಬೈನಿಂದ ಗೋವಾಗೆ ತೆರಳಿದ್ದಾರೆ. ಕೊರೊನಾ ವೈರಸ್ ಹಿನ್ನೆಲೆ ಕರಣ್ ಜೋಹರ್ ವಿಶೇಷ ಮಾಸ್ಕ್ ಧರಿಸಿದ್ರು. ಮಾಸ್ಕ್ ಮೇಲಿನ ಸಾಲುಗಳು ಬಗ್ಗೆ ಚರ್ಚೆಗಳು ಆರಂಭಗೊಂಡಿವೆ.

    ಇಂದು ಮಕ್ಕಳಾದ ಯಶ್ ಮತ್ತು ರೂಹಿ ಹಾಗೂ ತಾಯಿ ಜೊತೆ ವಿಮಾನ ನಿಲ್ದಾಣಕ್ಕೆ ಬಂದ ಕರಣ್ ಜೋಹರ್ ಗೋವಾಗೆ ತೆರಳಿದ್ದಾರೆ. ಕುಟುಂಬದ ಸದಸ್ಯರು ಧರಿಸಿದ ಮಾಸ್ಕ್ ಕ್ಕಿಂತ ಕರಣ್ ಹಾಕಿಕೊಂಡಿದ್ದ ಮಾಸ್ಕ್ ಮೇಲಿನ ಸಾಲುಗಳು ನೋಡುಗರ ಕೇಂದ್ರ ಬಿಂದುವಾಗಿತ್ತು. ಈ ಸಾಲುಗಳು ಮೂಲಕ ಟ್ರೋಲ್ ಗಳಿಗೆ ಕರಣ್ ಉತ್ತರ ನೀಡಿದ್ರಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ಇದನ್ನೂ ಓದಿ: ಸುಶಾಂತ್ ಸಾವಿನ ಬಳಿಕ ವೈರಲ್ ಆಯ್ತು ಕಂಗನಾ ವಿಡಿಯೋ-ಕರಣ್ ಜೋಹರ್ ಪ್ರಶ್ನೆಗೆ ಕ್ವೀನ್ ಗರಂ ಆಗಿದ್ಯಾಕೆ?

    https://www.instagram.com/p/CFKDLAJjcdg/?utm_source=ig_embed

    ”ಒಂದು ವೇಳೆ ಈ ಸಾಲುಗಳನ್ನ ಓದಿದ್ರೆ, ನೀವು ನಮಗೆ ತುಂಬಾ ಹತ್ತಿರವಾದ್ರು” ಎಂದು ಆಂಗ್ಲ ಭಾಷೆಯಲ್ಲಿ ಮಾಸ್ಕ್ ಮೇಲೆ ಬರೆಯಲಾಗಿದೆ. ಸದ್ಯ ಕರಣ್ ಮಾಸ್ಕ್ ಫೋಟೋಗಳು ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಸುಶಾಂತ್ ನಿಧನದ ಬಳಿಕ ಕರಣ್ ಜೋಹರ್ ಅವರನ್ನ ಹೆಚ್ಚು ಟ್ರೋಲ್ ಮಾಡಲಾಗಿತ್ತು. ನಟಿ ಕಂಗನಾ ರಣಾವತ್ ಸಮಯ ಸಿಕ್ಕಾಗೆಲ್ಲ ಕರಣ್ ಜೋಹರ್ ವಿರುದ್ಧ ವಾಗ್ದಾಳಿ ನಡೆಸುತ್ತಿರುತ್ತಾರೆ.

    https://www.instagram.com/p/CFKEkAhj6SQ/

    ಕರಣ್ ಜೋಹರ್ ಜೊತೆಯಲ್ಲಿ ಸ್ಟಾರ್ ಕುಟುಂಬದ ಕಲಾವಿದರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಟ್ರೋಲ್ ಬೆನ್ನಲ್ಲೇ ನಟಿ ಸೋನಾಕ್ಷಿ ಸಿನ್ಹಾ ಟ್ವಿಟ್ಟರ್ ಗೆ ವಿದಾಯ ಹೇಳಿದ್ರೆ, ಅನಿಲ್ ಕಪೂರ್ ಪುತ್ರಿ ಸೋನಂ ಕಪೂರ್, ತಾನು ತಂದೆಯ ಕಠಿಣ ಪರಿಶ್ರಮದ ಪರಿಣಾಮ ತಾನಿಂದು ಈ ಸ್ಥಾನದಲ್ಲಿದ್ದೇನೆ ಎಂದು ಟ್ರೋಲ್ ಗಳಿಗೆ ತಿರುಗೇಟು ನೀಡಿದ್ದರು. ಇದನ್ನೂ ಓದಿ: ಕರಣ್‌ಗೆ ನೀಡಿದ್ದ ಪದ್ಮಶ್ರೀಯನ್ನು ಹಿಂಪಡೆಯಬೇಕು – ಸಿಡಿದ ಕಂಗನಾ

    https://www.instagram.com/p/CFKDl92j0yN/

    ಕರಣ್ ಜೋಹರ್ ನಿರೂಪಣೆಯ ಕಾರ್ಯಕ್ರಮದಲ್ಲಿಯೇ ಕಂಗನಾ ನೇರವಾಗಿ ವಾಗ್ದಾಳಿ ನಡೆಸಿದ್ದರು. ಕಾಫಿ ವಿಥ್ ಕರಣ್ ಕಾರ್ಯಕ್ರಮದಲ್ಲಿ ಕಂಗನಾ ಮತ್ತು ಸೈಫ್ ಅಲಿ ಖಾನ್ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ನಿರೂಪಕರಾಗಿದ್ದ ಕರಣ್ ಪ್ರಶ್ನೆಯೊಂದಕ್ಕೆ ಕಂಗನಾ ಗರಂ ಆಗಿಯೇ ಉತ್ತರ ನೀಡಿದ್ದರು. ನಿಮ್ಮ ಮುಂದೆ ಅನಗತ್ಯವಾಗಿ ಆಟಿಟ್ಯೂಡ್ ತೋರಿಸಿದ ನಟ/ನಟಿ ಯಾರು ಎಂದು ಕೇಳಲಾಗಿತ್ತು. ಕಂಗನಾ ಮಾತ್ರ ಸ್ವಲ್ಪವೂ ಯೋಚಿಸದೇ ಕರಣ್ ನೀವು ಎಂದು ಉತ್ತರ ನೀಡಿದ್ದರು. ಈ ವೇಳೆ ಕರಣ್, ಹೌದಾ ಎಂದು ಹೇಳಿ ಕ್ಷಮೆ ಕೇಳಿದ್ದರು. ಇದನ್ನೂ ಓದಿ: ಸುಶಾಂತ್ ಆತ್ಮಹತ್ಯೆ ಅಲ್ಲ, ಯೋಜಿತ ಕೊಲೆ: ಕಂಗನಾ ಆರೋಪ

    https://www.instagram.com/p/CFE5tGyDeWV/

    ಇಷ್ಟು ಮಾತ್ರವಲ್ಲದೇ ಒಂದು ವೇಳೆ ನೀವು ಜೀವನ ಕಥೆಯನ್ನು ಸಿನಿಮಾ ಮಾಡಿದ್ರೆ, ನೀವು ಸಂಕುಚಿತ ಮನಸ್ಸಿನ ಪಾತ್ರ ಮಾಡ್ತೀರಿ. ಸರ್ವಾಧಿಕಾರಿತ್ವ, ಬೇರೆಯವರ ಬಗೆಗಿನ ಕೆಳಮಟ್ಟದ ಯೋಚನೆಗಳು, ಮೂವಿ ಮಾಫಿಯಾದ ಲೀಡರ್ ಆಗಿರುತ್ತೀರಿ ಎಂದು ನೆಪ್ಟೋಯಿಸಂ ಬಗ್ಗೆ ಕಂಗನಾ ತೀಕ್ಷ್ಣವಾಗಿ ಮಾತನಾಡಿದ್ದರು. ಕಪಿಲ್ ಶರ್ಮಾ ಶೋದಲ್ಲಿಯೂ ಭಾಗಿಯಾಗಿದ್ದ ವೇಳೆ ಕರಣ್ ಜೋಹರ್ ಕಾರ್ಯಕ್ರಮದ ಬಗ್ಗೆ ಕಂಗನಾ ವ್ಯಂಗ್ಯವಾಡಿದ್ದರು.

  • ಕರಣ್‌ಗೆ ನೀಡಿದ್ದ ಪದ್ಮಶ್ರೀಯನ್ನು ಹಿಂಪಡೆಯಬೇಕು – ಸಿಡಿದ ಕಂಗನಾ

    ಕರಣ್‌ಗೆ ನೀಡಿದ್ದ ಪದ್ಮಶ್ರೀಯನ್ನು ಹಿಂಪಡೆಯಬೇಕು – ಸಿಡಿದ ಕಂಗನಾ

    ನವದೆಹಲಿ: ನಿರ್ಮಾಪಕ ಕರಣ್‌ ಜೋಹರ್‌ಗೆ ನೀಡಲಾಗಿರುವ ಪದ್ಮಶ್ರೀ ಪ್ರಶಸ್ತಿಯನ್ನು ಭಾರತ ಸರ್ಕಾರ ವಾಪಸ್‌ ಪಡೆಯಬೇಕೆಂದು ನಟಿ ಕಂಗನಾ ರಣಾವತ್‌ ಮನವಿ ಮಾಡಿದ್ದಾರೆ.

    ನಟ ಸುಶಾಂತ್‌ ಸಿಂಗ್‌ ಆತ್ಮಹತ್ಯೆ ಪ್ರಕರಣದಲ್ಲಿ ಬಾಲಿವುಡ್‌ ಸ್ವಜನಪಕ್ಷಪಾತದ ಬಗ್ಗೆ ಧ್ವನಿ ಎತ್ತುತ್ತಿರುವ ಕಂಗನಾ ಈಗ ನೇರವಾಗಿಯೇ ಕರಣ್‌ ಜೋಹರ್‌ ವಿರುದ್ಧ ಸಿಡಿದೆದ್ದಿದ್ದಾರೆ.

    ಟ್ವೀಟ್‌ ಮಾಡಿರುವ ಕಂಗನಾ, ಕರಣ್‌ ಜೋಹರ್‌ ಅವರಿಗೆ ನೀಡಿದ ಪದ್ಮಶ್ರೀ ಪ್ರಶಸ್ತಿಯನ್ನು ಭಾರತ ಸರ್ಕಾರ ವಾಪಸ್‌ ಪಡೆದುಕೊಳ್ಳಬೇಕು. ಅಂತರಾಷ್ಟ್ರೀಯ ವೇದಿಕೆಯಲ್ಲೇ ಸಿನಿಮಾ ರಂಗವನ್ನು ತೊರೆಯುವಂತೆ ನನಗೆ ಬೆದರಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ವಿರುದ್ಧ ಪಿತೂರಿ ನಡೆಸಿ ಅವರ ವೃತ್ತಿಜೀವನವನ್ನು ನಾಶಮಾಡಲು ಪ್ರಯತ್ನಿಸಿದ್ದಾರೆ. ಉರಿ ಹೋರಾಟದ ಸಮಯದಲ್ಲಿ ಪಾಕಿಸ್ತಾನ ಪರವಾಗಿದ್ದ ಕರಣ್‌ ಈಗ ರಾಷ್ಟ್ರ ವಿರೋಧಿ ಸಿನಿಮಾ ಮಾಡಿದ್ದಾರೆ ಎಂದು ಹರಿಹಾಯ್ದಿದ್ದಾರೆ.

    ನೆಟ್‌ ಫ್ಲಿಕ್ಸ್‌ನಲ್ಲಿ ತೆರೆ ಕಂಡಿರುವ ಗುಂಜನ್‌ ಸಕ್ಸೆನಾ ಸಿನಿಮಾವನ್ನು ಕರಣ್‌ ಜೋಹರ್‌ ಅವರ ಧರ್ಮ ಪ್ರೊಡಕ್ಷನ್‌ ನಿರ್ಮಿಸಿದೆ. ಈ ಚಿತ್ರದ ಬಗ್ಗೆ ಭಾರೀ ಟೀಕೆ ವ್ಯಕ್ತವಾಗಿದೆ.

    ಚಿತ್ರದ ಬಗ್ಗೆ ಸೌಮ್ಯದೀಪ್ತ ಎಂಬವರು, ಫ್ಲೈಟ್‌ ಲೆಫ್ಟಿನೆಂಟ್‌ ಶ್ರೀ ವಿದ್ಯಾ ರಾಜನ್‌ ಗುಂಜನ್‌ ಸಕ್ಸೆನಾ ಅವರ ಜೊತೆ ಸಹಪಾಠಿ ಆಗಿದ್ದರು. ಕಾರ್ಗಿಲ್‌ ಮೇಲೆ ವಿಮಾನ ಹಾರಿಸಿದ ಮೊದಲ ಮಹಿಳೆ ಶ್ರೀವಿದ್ಯಾ ಆಗಿದ್ದ ಗುಂಜನ್‌ ಸಕ್ಸೆನಾ ಅಲ್ಲ. ಗುಂಜನ್‌ ಸಕ್ಸೆನಾ ಸಿನಿಮಾದಲ್ಲಿ ವಿಷಯಗಳನ್ನು ತಿರುಚಲಾಗಿದೆ ಎಂದು ಟ್ವೀಟ್‌ ಮಾಡಿದ್ದರು. ಈ ಟ್ವೀಟ್‌ ಅನ್ನು ರಿಟ್ವೀಟ್‌ ಮಾಡಿ ಕರಣ್‌ ಜೋಹರ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕರಾವಳಿಯ ಪತ್ರೋಡೆ ಸವಿದ ನಟಿ ಕಂಗನಾ ಫಿದಾ

    ಕರಣ್‌ ಜೋಹರ್‌ ಮತ್ತು ಕಂಗನಾ ರಣಾವತ್‌ ಅವರಿಗೆ ಈ ವರ್ಷ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ರಾಷ್ಟ್ರಪತಿ ರಮಾನಾಥ್‌ ಕೋವಿಂದ್‌ ಪುರಸ್ಕರಿಸಿದ್ದರು.

  • ಸುಶಾಂತ್ ಪ್ರಕರಣ – ಮಹೇಶ್ ಭಟ್, ಕರಣ್ ಜೋಹರ್‌ ಮ್ಯಾನೇಜರ್‌ಗೆ ಸಮನ್ಸ್

    ಸುಶಾಂತ್ ಪ್ರಕರಣ – ಮಹೇಶ್ ಭಟ್, ಕರಣ್ ಜೋಹರ್‌ ಮ್ಯಾನೇಜರ್‌ಗೆ ಸಮನ್ಸ್

    ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಅವರ ಅತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಮಹೇಶ್ ಭಟ್ ಮತ್ತು ಕರಣ್ ಜೋಹರ್‌ ಅವರಿಗೆ ಮುಂಬೈ ಪೊಲೀಸರು ಸಮನ್ಸ್ ನೀಡಿದ್ದಾರೆ.

    ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆಯಲ್ಲಿ ಬಾಲಿವುಡ್ ನಿರ್ದೇಶಕ ಮಹೇಶ್ ಭಟ್ ಮತ್ತು ಚಲನಚಿತ್ರ ನಿರ್ಮಾಪಕ ಕರಣ್ ಜೋಹರ್ ಅವರನ್ನು ವಿಚಾರಣೆಗೆ ಕರೆಯಲಾಗುವುದು ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಹೇಳಿದ್ದಾರೆ. ಇತ್ತೀಚೆಗೆ ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ ಮತ್ತು ನಟಿ ಕಂಗನಾ ರಣಾವತ್‍ಗೂ ಕೂಡ ಮುಂಬೈ ಪೊಲೀಸರು ಸಮನ್ಸ್ ನೀಡಿದ್ದರು.

    ಈ ವಿಚಾರವಾಗಿ ಮಾತನಾಡಿರುವ ಅನಿಲ್ ದೇಶ್ಮುಖ್, ನಾಳೆ ಮಹೇಶ್ ಭಟ್ ಅವರನ್ನು ವಿಚಾರಣೆಗೆ ಕರೆಯಲಾಗುವುದು ಮತ್ತು ನಂತರ ನಾವು ಕರಣ್ ಜೋಹರ್ ಅವರ ವ್ಯವಸ್ಥಾಪಕರನ್ನು ಸಹ ಕರೆಯುತ್ತೇವೆ. ಅಗತ್ಯವಿದ್ದರೆ ಕರಣ್ ಜೋಹರ್ ಅವರನ್ನು ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ವಿಚಾರಣೆಗೆ ಕರೆಯಬಹುದು. ಜೊತೆಗೆ ಧರ್ಮ ಪ್ರೊಡಕ್ಷನ್ಸ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವಾ ಮೆಹ್ತಾ ಅವರನ್ನು ವಿಚಾರಣೆ ಮಾಡಬಹುದು ಎಂದು ಹೇಳಿದ್ದಾರೆ.

    ಇತ್ತೀಚೆಗೆ ಸುಶಾಂತ್ ಸಿಂಗ್ ಅವರ ಪ್ರೇಯಸಿ ರಿಯಾ ಚಕ್ರವರ್ತಿ, ಸುಶಾಂತ್ ಅವರ ಆಹ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆ ನೀಡಬೇಕು. ಈ ಪ್ರಕರಣ ಯಾವುದೇ ಲೋಪದೋಷವಿಲ್ಲದೇ ತನಿಖೆ ಆಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಳಿ ಬೇಡಿಕೆ ಇಟ್ಟಿದ್ದರು. ಇದಾದ ಬಳಿಕ ಈ ವಿಚಾರವಾಗಿ ಮಾತನಾಡಿದ್ದ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್, ಸುಶಾಂತ್ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನಮ್ಮ ಮುಂಬೈ ಪೊಲೀಸರೇ ತನಿಖೆ ಮಾಡುತ್ತಾರೆ ಎಂದು ಹೇಳಿದ್ದರು.

    ಸುಶಾಂತ್ ಸಿಂಗ್ ಅವರ ಆತ್ಮಹತ್ಯೆ ನಂತರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗಿತ್ತು. ಸುಶಾಂತ್ ಬಾಲಿವುಡ್‍ನಲ್ಲಿರುವ ಸ್ವಜನಪಕ್ಷಪಾತಕ್ಕೆ ಬಲಿಯಾಗಿದ್ದರೆ ಎಂದು ನೆಟ್ಟಿಗರು ಕೆಲ ಸ್ಟಾರ್ ಗಳನ್ನು ಮತ್ತು ಸ್ಟಾರ್ ಮಕ್ಕಳನ್ನು ಟ್ರೋಲ್ ಮಾಡಿದ್ದರು. ಇದರ ಜೊತೆಗೆ ನಟಿ ಕಂಗನಾ ರಣಾವತ್ ಕೂಡ ಬಾಲಿವುಡ್‍ನಲ್ಲಿರುವ ಮೂವಿ ಮಾಫಿಯಾಗೆ ಸುಶಾಂತ್ ಸಿಂಗ್ ಬಲಿಯಾಗಿದ್ದಾರೆ. ಬಾಲಿವುಡ್ ಸುಶಾಂತ್ ಅವರನ್ನು ಪ್ಲಾನ್ ಮಾಡಿ ಮರ್ಡರ್ ಮಾಡಿದೆ ಎಂದು ಆರೋಪಿಸಿದ್ದರು. ಇದಾದ ನಂತರ ಮುಂಬೈ ಪೊಲೀಸರು ಕಂಗನಾಗೂ ಸಮನ್ಸ್ ನೀಡಿದ್ದರು.

    ಜೂನ್ 14ರಂದು ನಟ ಸುಶಾಂತ್ ಸಿಂಗ್ ರಜಪೂತ್ ಅವರು ತಮ್ಮ ಮುಂಬೈ ನಿವಾಸದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸುಶಾಂತ್ ಆತ್ಮಹತ್ಯೆ ನಂತರ ಅವರ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿದ್ದವು. ಈ ನಡುವೆ ನಟಿ ಕಂಗನಾ ರಣಾವತ್ ಅವರು ಸುಶಾಂತ್ ಅವರದ್ದು ಆತ್ಮಹತ್ಯೆಯಲ್ಲ, ಅದೊಂದು ಯೋಜಿತ ಕೊಲೆ ಎಂದು ಆರೋಪ ಮಾಡಿದ್ದರು.

  • ಟ್ರೋಲ್‍ಗಳಿಂದ ಬೇಸತ್ತು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ ಕರಣ್ ಜೋಹರ್

    ಟ್ರೋಲ್‍ಗಳಿಂದ ಬೇಸತ್ತು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ ಕರಣ್ ಜೋಹರ್

    ನವದೆಹಲಿ: ಬಾಲಿವುಡ್‍ನ ಹೆಸರಾಂತ ನಿರ್ಮಾಪಕ ಕರಣ್ ಜೋಹರ್ ಟ್ರೋಲ್‍ಗೆ ಒಳಗಾಗಿರುವುದು, ಅವರ ವಿರುದ್ಧ ಟೀಕಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಅನೇಕ ಬಾರಿ ಈ ರೀತಿಯ ಘಟನೆಗಳು ನಡೆದಿದೆ. ಇದಾವುದಕ್ಕೂ ಕರಣ್ ಜೋಹರ್ ತಲೆ ಕೆಡಿಸಿಕೊಂಡವರಲ್ಲ. ಯಾವುದೇ ಟ್ರೋಲ್‍ಗಳಿಗೆ ಕಿವಿಗೊಡದೆ ತಮ್ಮ ಕೆಲಸದ ಕಡೆ ಚಿತ್ತ ಹರಿಸುತ್ತಿದ್ದರು. ಆದರೆ ಇದೀಗ ಅವರು ತುಂಬಾ ನೊಂದು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರಂತೆ.

    ಹೌದು ಇತ್ತೀಚೆಗೆ ಅವರ ವಿರುದ್ಧ ವಿಪರೀತ ದಾಳಿ ನಡೆಯುತ್ತಿದ್ದು, ಇದರಿಂದಾಗಿ ಕರಣ್ ಜೋಹರ್ ಮಾನಸಿಕವಾಗಿ ಕುಗ್ಗಿದ್ದಾರಂತೆ. ಬಿಕ್ಕಿ ಬಿಕ್ಕಿ ಅಳುತ್ತಿದ್ದಾರಂತೆ. ಹೀಗೆಂದು ಅವರ ಆತ್ಮೀಯ ಸ್ನೇಹಿತರು ತಿಳಿಸಿರುವ ಕುರಿತು ವರದಿಯಾಗಿದೆ. ಕರಣ್ ಜೋಹರ್ ಧೋನಿ ಸಿನಿಮಾ ಖ್ಯಾತಿಯ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಟ್ರೋಲ್‍ಗೆ ಒಳಗಾಗಿದ್ದಾರೆ.

    ಈ ಎಲ್ಲ ಬೆಳವಣಿಗೆಗಳಿಂದಾಗಿ ಇತ್ತೀಚೆಗೆ ಅವರು ಕೆಲ ಪ್ರಮುಖ ವ್ಯಕ್ತಿಗಳನ್ನು ಹೊರತುಪಡಿಸಿ ಉಳಿದೆಲ್ಲರನ್ನೂ ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯಿಂದ ಅನ್‍ಫಾಲೋ ಮಾಡಿದ್ದರು. ಕೆಲವರನ್ನು ಮಾತ್ರ ಫಾಲೋ ಮಾಡುತ್ತಿದ್ದರು. ಇದಾದ ಬಳಿಕ ಅವರು ಇನ್ನೂ ಕುಗ್ಗಿದ್ದಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ. ಅಲ್ಲದೆ ಈ ವರೆಗೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಪೋಸ್ಟ್ ಹಾಕಿಲ್ಲ.

    ಕರಣ್ ಜೋಹರ್ ಅವರು ಮಾತನಾಡಿದ ಮಾತುಗಳು, ಅವರ ವಿಡಿಯೋಗಳು ಇದೀಗ ಮುನ್ನೆಲೆಗೆ ಬರುತ್ತಿದ್ದು, ಸಾಕಷ್ಟು ಟ್ರೋಲ್ ಆಗುತ್ತಿವೆ. ಬಾಲಿವುಡ್‍ನಲ್ಲಿ ಸ್ವಜನ ಪಕ್ಷಪಾತವಿದೆ. ಇದಕ್ಕೆ ಸಾಕ್ಷಿಯೇ ಕೆಲವು ನಿರ್ಮಾಪಕರು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಳ್ಳಲಾಗಿತ್ತು. ಸ್ಟಾರ್‍ಗಳ ಮಕ್ಕಳಿಗೆ ಬೆಂಬಲ ನೀಡುತ್ತಾರೆ, ಹೊರಗಿನಿಂದ ಬಂದವರನ್ನು ಲೇವಡಿ ಮಾಡುತ್ತಾರೆ, ಉದ್ದೇಶಪೂರ್ವಕವಾಗಿ ಅವರನ್ನು ಮಾನಸಿಕವಾಗಿ ಕುಗ್ಗುವಂತೆ ಮಾಡುತ್ತಾರೆ ಎಂಬ ಆರೋಪ ಕರಣ್ ಜೋಹರ್ ಮೇಲಿದೆ. ಅಲ್ಲದೆ ಸ್ವಜನಪಕ್ಷಪಾತದ ಕೇಂದ್ರ ಬಿಂದು ಕರಣ್ ಜೋಹರ್, ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಕರಣ್ ಅವರ ಈ ವರ್ತನೆಯೂ ಒಂದು ಕಾರಣ ಎಂದು ಆರೋಪಿಸಲಾಗುತ್ತಿದೆ. ಇದರಿಂದ ಕರಣ್ ತೀವ್ರ ನೊಂದಿದ್ದಾರಂತೆ.

    ಆರೋಗ್ಯವೂ ಹದಗೆಟ್ಟಿದೆ
    ಕರಣ್ ಮಾನಸಿಕವಾಗಿ ಘಾಸಿಗೊಂಡಿರುವುದರಿಂದ ಆರೋಗ್ಯದ ಮೇಲೂ ಪರಿಣಾಮ ಬೀರಿದ್ದು, ಅವರ ಮಾನಸಿಕ ಹಾಗೂ ಆರೋಗ್ಯದ ಸ್ಥಿತಿ ಈಗ ಹದಗೆಟ್ಟಿದೆ ಎಂದು ಅವರ ಸ್ನೇಹಿತರು ಹೇಳಿದ್ದಾರೆ. ಈ ಹಿಂದೆ ಅವರನ್ನು ಮಾತ್ರ ಟ್ರೋಲ್ ಮಾಡಲಾಗುತ್ತಿತ್ತು. ಈಗ ಅವರಿಗೆ ಆಪ್ತರಾಗಿರುವವರ ವಿರುದ್ಧವೂ ದಾಳಿ ನಡೆಯುತ್ತಿದೆ. ಅವರ ಮೂವರು ಮಕ್ಕಳಿಗೆ ಜೀವ ಬೆದರಿಕೆ ಕರೆ ಬರುತ್ತಿವೆ. ಅಲ್ಲದೆ ಸುಶಾಂತ್ ಘಟನೆಗೆ ಸಂಬಂಧವೇ ಇಲ್ಲದ ಅನನ್ಯಾ ಪಾಂಡೆಯಂತಹ ನಟಿಯರನ್ನು ಟೀಕಿಸಲಾಗುತ್ತಿದೆ. ಸುಶಾಂತ್ ಸಾವಿಗೆ ಪರಿಹಾರ ನೀಡಲು ಆತ್ಮಹತ್ಯೆ ಮಾಡಿಕೊಳ್ಳಿ ಎಂದು ಆಕೆಗೆ ಬೆದರಿಸಲಾಗುತ್ತಿದೆಯಂತೆ.

    ಬಾಲಿವುಡ್‍ನಲ್ಲಿ ಯಾರೂ ಬೆಂಬಲ ನೀಡುತ್ತಿಲ್ಲ
    ಕರಣ್ ಜೋಹರ್ ಸದ್ಯ ಮಾತನಾಡುವ ಸ್ಥಿತಿಯಲ್ಲಿಲ್ಲ. ಅವರು ಸುಧಾರಿಸಿಕೊಳ್ಳಲು ಸಮಯ ಬೇಕಾಗುತ್ತದೆ. ಫೋನ್‍ನಲ್ಲಿ ನನ್ನ ಜೊತೆ ಮಾತನಾಡುವಾಗ ಬಿಕ್ಕಿ ಬಿಕ್ಕಿ ಅಳುತ್ತಾರೆ. ಈ ರೀತಿ ಆಗಲು ನಾನು ಮಾಡಿರುವ ತಪ್ಪಾದರೂ ಏನೆಂದು ಪ್ರಶ್ನಿಸುತ್ತಿದ್ದಾರೆ ಎಂದು ಅವರ ಆತ್ಮೀಯ ಸ್ನೇಹಿತರು ತಿಳಿಸಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ಬಾಲಿವುಡ್‍ನಲ್ಲಿ ಯಾರೂ ಅವರ ಬೆಂಬಲಕ್ಕೆ ಬರುತ್ತಿಲ್ಲ ಎಂಬ ಬೇಸರ ಸಹ ಅವರಲ್ಲಿ ಕಾಡುತ್ತಿದೆ ಎನ್ನಲಾಗಿದೆ. ಹೀಗಾಗಿ ಇತ್ತೀಚೆಗೆ ಮುಂಬೈ ಚಿತ್ರೋತ್ಸವದ ಮಂಡಳಿಗೂ ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

  • 8 ಮಂದಿ ಸೆಲಿಬ್ರಿಟಿಗಳನ್ನ ಬಿಟ್ಟು ಎಲ್ಲರನ್ನ ಅನ್ ಫಾಲೋ ಮಾಡಿದ ಕರಣ್ ಜೋಹರ್

    8 ಮಂದಿ ಸೆಲಿಬ್ರಿಟಿಗಳನ್ನ ಬಿಟ್ಟು ಎಲ್ಲರನ್ನ ಅನ್ ಫಾಲೋ ಮಾಡಿದ ಕರಣ್ ಜೋಹರ್

    ಮುಂಬೈ: ಯುವ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಬಳಿಕ ಬಾಲಿವುಡ್‍ನಲ್ಲಿ ಸಂಚಲನವೇ ಸೃಷ್ಟಿಯಾಗಿದೆ. ಸುಶಾಂತ್ ಸಿಂಗ್ ಸಾವಿಗೆ ಬಾಲಿವುಡ್‍ನ ಕೆಲವು ನಿರ್ಮಾಣ ಸಂಸ್ಥೆಗಳು ಹಾಗೂ ಸ್ಟಾರ್ ನಟರು ಎಂಬ ಆರೋಪ ನೆಟ್ಟಿಗರಿಂದ ಕೇಳಿ ಬಂದಿದೆ.

    ಇದೇ ವಿಚಾರವಾಗಿ ಗಾಯಕ ಸೋನು ನಿಗಮ್ ಕೂಡ ಮಾತನಾಡಿ ಮೂಸಿಕ್ ಇಂಡಸ್ಟ್ರಿಯಲ್ಲಿ ಇಂತಹ ಸಾವು ಸಂಭವಿಸದಿರಲಿ ಎಂದು ಕೇಳಿಕೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹೊಸ ಬಾಲಿವುಡ್ ಖ್ಯಾತ ನಿರ್ಮಾಣಕ ಕರಣ್ ಜೋಹರ್ ಹೆಜ್ಜೆ ಇಟ್ಟಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನೂ ಓದಿ: ಸುಶಾಂತ್‍ನಂತೆ ಮ್ಯೂಸಿಕ್ ಇಂಡಸ್ಟ್ರಿಯಲ್ಲೂ ಆತ್ಮಹತ್ಯೆಯ ಸುದ್ದಿ ಬರಬಹುದು: ಸೋನು ನಿಗಮ್

    ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಹಿನ್ನೆಲೆ ಬಾಲಿವುಡ್‍ನ ಖ್ಯಾತ ನಿರ್ಮಾಪಕ ಕರಣ್ ಜೋಹರ್, ನಟ ಸಲ್ಮಾನ್ ಖಾನ್, ನಟಿ ಅಲಿಯಾ ಭಟ್, ಸೋನಂ ಕಪೂರ್, ಏಕ್ತ ಕಪೂರ್ ಸೇರಿದ್ದಂತೆ ಅನೇಕರ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡುತ್ತಿದ್ದರೆ ಅನ್ ಫಾಲೋ ಮಾಡುವಂತೆ ಕೆಲ ನೆಟ್ಟಿಗರು ಒತ್ತಾಯಿಸುತ್ತಿದ್ದಾರೆ

    ಕರಣ್ ಜೋಹರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸಾಕಷ್ಟು ನಾಯಕರು, ಕಲಾವಿದರನ್ನು ಫಾಲೋ ಮಾಡುತ್ತಿದ್ದರು. ಆದರೆ ಈಗ 8 ಮಂದಿ ಸೆಲೆಬ್ರಿಟಿಗಳನ್ನು ಹೊರತುಪಡೆಸಿ ಉಳಿದೆಲ್ಲರನ್ನು ಅನ್ ಫಾಲೋ ಮಾಡಿದ್ದಾರೆ. ಸದ್ಯ ಅವರು ಹಿರಿಯ ನಟ ಅಮಿತಾಬ್ ಬಚ್ಚನ್, ಶಾರುಖ್ ಖಾನ್, ಅಕ್ಷಯ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಧರ್ಮ ಪ್ರೊಡಕ್ಷನ್ ಸೇರಿದಂತೆ ಕೇವಲ 8 ಮಂದಿಯನ್ನು ಮಾತ್ರ ಫಾಲೋ ಮಾಡುತ್ತಿದ್ದಾರೆ.

    ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ನಟಿ ಅಲಿಯಾ ಭಟ್ ಮತ್ತು ಕರಣ್ ಜೋಹರ್ ಇಬ್ಬರು ಸೇರಿ ಸುಶಾಂತ್ ಸಿಂಗ್ ಅವರನ್ನು ಅಪಹಾಸ್ಯ ಮಾಡಿದ್ದರು. ಆ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಅಸಮಾಧಾನ ಹೊರ ಹಾಕಿದ್ದಾರೆ.

  • ಸುಶಾಂತ್ ಆತ್ಮಹತ್ಯೆ- ಎಂಟು ಸೆಲೆಬ್ರಿಟಿಗಳ ವಿರುದ್ಧ ದೂರು ದಾಖಲು

    ಸುಶಾಂತ್ ಆತ್ಮಹತ್ಯೆ- ಎಂಟು ಸೆಲೆಬ್ರಿಟಿಗಳ ವಿರುದ್ಧ ದೂರು ದಾಖಲು

    ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಸೆಲೆಬ್ರಿಟಿಗಳ ವಿರುದ್ಧ ವಕೀಲ ಸುಧಿರ್ ಕುಮಾರ್ ಓಜಾ ಮುಜಾಫರ್ಪುರ್ ನ್ಯಾಯಾಲಯದಲ್ಲಿ ದೂರು ದಾಖಲಸಿದ್ದಾರೆ.

    ಏಳು ಸಿನಿಮಾಗಳಿಂದ ಸುಶಾಂತ್ ಅವರನ್ನು ಕೈ ಬಿಡಲಾಗಿತ್ತು. ಜೊತೆಗೆ ಕೆಲ ಸಿನಿಮಾಗಳು ಬಿಡುಗಡೆ ಆಗಿಲ್ಲ. ಈ ಎಲ್ಲ ಘಟನೆಗಳು ಸುಶಾಂತ್ ಅವರಿಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರಿಂದ ನಟ ಇಂತಹ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವಕೀಲ ಓಜಾ ಆರೋಪಿಸಿದ್ದಾರೆ.

    ಬಾಲಿವುಡ್ ಸಿನಿಮಾ ನಿರ್ದೇಶಕರಾದ ಕರಣ್ ಜೋಹರ್, ಸಂಜಯ್ ಲೀಲಾ ಬನ್ಸಾಲಿ, ನಿರ್ಮಾಪಕಿ ಏಕ್ತಾ ಕಪೂರ್ ಮತ್ತು ನಟ ಸಲ್ಮಾನ್ ಖಾನ್ ಸೇರಿದಂತೆ ಎಂಟು ಜನರ ವಿರುದ್ಧ ಐಪಿಸಿ ಸೆಕ್ಸನ್ 306, 109, 504 ಮತ್ತು 506 ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

    ಭಾನುವಾರ ಬೆಳಗ್ಗೆ 9.30ಕ್ಕೆ ಜ್ಯೂಸ್ ಕುಡಿದು ತನ್ನ ಕೋಣೆ ಸೇರಿದ್ದ ಸುಶಾಂತ್ ಸಿಂಗ್ ರಜಪೂತ್, ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಈ ವೇಳೆ ಮನೆಯಲ್ಲಿ ಅಡುಗೆ ಕೆಲಸದವ, ಮ್ಯಾನೇಜರ್ ಮತ್ತು ಓರ್ವ ಗೆಳೆಯನಿದ್ದ. ಸೋಮವಾರ ಸಂಜೆ ಸುಶಾಂತ್ ಅಂತ್ಯಕ್ರಿಯೆ ಮುಂಬೈನ ವಿಲೆ ಪಾರ್ಲೆಯ ಸೇವಾ ಸಮಾಜದಲ್ಲಿ ನಡೆಯಿತು. ಕೊರೊನಾ ಹಿನ್ನೆಲೆಯಲ್ಲಿ ಕುಟುಂಬ ಮತ್ತು ಆಪ್ತರಿಗೆ ಅಂತಿಮ ವಿಧಿ ವಿಧಾನಗಳಲ್ಲಿ ಅನುಮತಿ ನೀಡಲಾಗಿತ್ತು. ಮಾನಸಿಕ ಖಿನ್ನತೆಗೊಳಗಾಗಿದ್ದರಿಂದ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಕೈ ಪೋ ಚೆ ಸಿನಿಮಾ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದ ಸುಶಾಂತ್‍ಗೆ ಧೋನಿ ಸಿನಿಮಾ ದೊಡ್ಡ ಬ್ರೇಕ್ ನೀಡಿತ್ತು. 10ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಸುಶಾಂತ್ ಅವರನ್ನು ಬಾಲಿವುಡ್ ತಾರತಮ್ಯದಿಂದ ನೋಡಲಾಗುತ್ತಿತ್ತು ಎಂಬ ಸುದ್ದಿ ಹರಿದಾಡಿತ್ತು. ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಬಾಲಿವುಡ್‍ನಲ್ಲಿ ತಾರತಮ್ಯದ ಜನರು ಪ್ರಶ್ನೆ ಎತ್ತುತ್ತಿದ್ದಾರೆ. ಸುಶಾಂತ್‍ನನ್ನು ಮಾನಸಿಕವಾಗು ಕುಗ್ಗಿಸಿ ಆತ ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರಚೋದಿಸಲಾಯ್ತು. ಇದು ಸೂಸೈಡ್ ಅಲ್ಲ, ಪೂರ್ವ ನಿಯೋಜಿತ ಕೊಲೆ ಎಂದು ನಟ ಕಂಗನಾ ರಣಾವತ್ ಆರೋಪಿಸಿದ್ದರು.

  • ಸುಶಾಂತ್ ಸಾವಿನ ಬಳಿಕ ವೈರಲ್ ಆಯ್ತು ಕಂಗನಾ ವಿಡಿಯೋ

    ಸುಶಾಂತ್ ಸಾವಿನ ಬಳಿಕ ವೈರಲ್ ಆಯ್ತು ಕಂಗನಾ ವಿಡಿಯೋ

    -ಕರಣ್ ಜೋಹರ್ ಪ್ರಶ್ನೆಗೆ ಕ್ವೀನ್ ಗರಂ ಆಗಿದ್ಯಾಕೆ?

    ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಹಳೆಯ ವಿಡಿಯೋವೊಂದು ಮುನ್ನಲೆಗೆ ಬಂದಿದೆ. ಸುಶಾಂತ್ ಅಭಿಮಾನಿಗಳು ವಿಡಿಯೋವನ್ನು ಶೇರ್ ಮಾಡಿಕೊಳ್ಳುವ ಮೂಲಕ ಬಾಲಿವುಡ್‍ನಲ್ಲಿ ನೆಪಟೋಯಿಸಂ ಮತ್ತು ನಿರ್ದೇಶಕ ಕರಣ್ ಜೋಹರ್ ವಿರುದ್ಧ ಕಿಡಿಕಾರಿದ್ದಾರೆ.

    ಬಾಲಿವುಡ್‍ನಲ್ಲಿ ಸ್ಟಾರ್ ಕುಡಿಗಳಿಗೆ ಮಾತ್ರ ಸಿನಿ ಅಂಗಳದಲ್ಲಿ ಬೆಳೆಯಲು ಬಿಡುತ್ತಾರೆ. ಹೊಸ ಕಲಾವಿದರನ್ನು ತುಳಿದು ಹಾಕೋ ಪ್ರಯತ್ನ ನಡೆಯುತ್ತಿರುತ್ತೆ ಅನ್ನೋ ಮಾತುಗಳು ಬಾಲಿವುಡ್ ನಲ್ಲಿ ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಈ ಬಗ್ಗೆ ಕೆಲ ಯುವ ಕಲಾವಿದರು ಧ್ವನಿ ಎತ್ತಿರುತ್ತಾರೆ. ಇನ್ನು ಯಾರ ಸಹಾಯವಿಲ್ಲದೇ ಬೆಳೆಯುತ್ತಿದ್ದ ಸುಶಾಂತ್ ಸಿಂಗ್ ರಜಪೂತ್ ಅವರನ್ನ ಮಾನಸಿಕವಾಗಿ ಕುಗ್ಗಿಸೋ ಪ್ರಯತ್ನಗಳು ನಡೆಯುತ್ತಿದ್ದ ಎಂಬ ಮಾತುಗಳು ಕೇಳಿ ಬರುತ್ತಿವೆ.

    ಬಾಲಿವುಡ್ ನಿರ್ದೇಶಕರಾಗಿರುವ ಕರಣ್ ಜೋಹರ್ ಸಂತಾಪ ಸೂಚಿಸಿರುವುದಕ್ಕೆ ಸುಶಾಂತ್ ಅಭಿಮಾನಿಗಳು ನಿಗಿ ನಿಗಿ ಕೆಂಡ ಕಾರುತ್ತಿದ್ದಾರೆ. ನೀವು ಕೇವಲ ಸ್ಟಾರ್ ಕಲಾವಿದರ ಜೊತೆ ಮಾತ್ರ ಕೆಲಸ ಮಾಡುವ ವ್ಯಕ್ತಿ ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ. ಕಾಫಿ ವಿಥ್ ಕರಣ್ ಶೋನಲ್ಲಿ ಭಾಗಿಯಾಗಿದ್ದ ಕಂಗನಾ ನೆಪ್ಟೋಯಿಸಂ ಬಗ್ಗೆ ಕರಣ್ ಜೋಹರ್ ಮುಂದೆಯೇ ಆಕ್ರೋಶ ಹೊರ ಹಾಕಿರುವ ವಿಡಿಯೋ ವೈರಲ್ ಆಗುತ್ತಿದೆ.

    ವೈರಲ್ ವಿಡಿಯೋದಲ್ಲಿ ಏನಿದೆ?: ಕಾಫಿ ವಿಥ್ ಕರಣ್ ಕಾರ್ಯಕ್ರಮದಲ್ಲಿ ಕಂಗನಾ ಮತ್ತು ಸೈಫ್ ಅಲಿ ಖಾನ್ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ನಿರೂಪಕರಾಗಿದ್ದ ಕರಣ್ ಪ್ರಶ್ನೆಯೊಂದಕ್ಕೆ ಕಂಗನಾ ಗರಂ ಆಗಿಯೇ ಉತ್ತರ ನೀಡಿದ್ದರು. ನಿಮ್ಮ ಮುಂದೆ ಅನಗತ್ಯವಾಗಿ ಆಟಿಟ್ಯೂಡ್ ತೋರಿಸಿದ ನಟ/ನಟಿ ಯಾರು ಎಂದು ಕೇಳಲಾಗಿತ್ತು. ಕಂಗನಾ ಮಾತ್ರ ಸ್ವಲ್ಪವೂ ಯೋಚಿಸದೇ ಕರಣ್ ನೀವು ಎಂದು ಉತ್ತರ ನೀಡಿದ್ದರು. ಈ ವೇಳೆ ಕರಣ್, ಹೌದಾ ಎಂದು ಹೇಳಿ ಕ್ಷಮೆ ಕೇಳಿದ್ದರು.

    https://twitter.com/Iamdahdude/status/1272475219546931200

    ಇಷ್ಟು ಮಾತ್ರವಲ್ಲದೇ ಒಂದು ವೇಳೆ ನೀವು ಜೀವನ ಕಥೆಯನ್ನು ಸಿನಿಮಾ ಮಾಡಿದ್ರೆ, ನೀವು ಸಂಕುಚಿತ ಮನಸ್ಸಿನ ಪಾತ್ರ ಮಾಡ್ತೀರಿ. ಸರ್ವಾಧಿಕಾರಿತ್ವ, ಬೇರೆಯವರ ಬಗೆಗಿನ ಕೆಳಮಟ್ಟದ ಯೋಚನೆಗಳು, ಮೂವಿ ಮಾಫಿಯಾದ ಲೀಡರ್ ಆಗಿರುತ್ತೀರಿ ಎಂದು ನೆಪ್ಟೋಯಿಸಂ ತೀಕ್ಷ್ಣವಾಗಿ ಮಾತನಾಡಿದ್ದರು.

    https://twitter.com/ravipatel1108/status/1272375610824777728

    ಕಂಗನಾ ಸಹ ಯಾವುದೇ ಗಾಡ್ ಫಾದರ್ ಇಲ್ಲದೇ ಬೆಳೆದ ನಟಿ. ಸಿನಿಮಾ ನಿರ್ಮಾಣದಲ್ಲಿಯೂ ಕೈ ಯಶಸ್ವಿಯಾಗಿದ್ದಾರೆ. ಅದರ ಜೊತೆಗೆ ಆಗಾಗ ಸ್ಟಾರ್ ಕುಡಿಗಳ ಬಗ್ಗೆ ಮಾತನಾಡಿ ಸುದ್ದಿ ಆಗುತ್ತಿರುತ್ತಾರೆ.

  • ಸುಶಾಂತ್ ಆತ್ಮಹತ್ಯೆ ಬಳಿಕ ಕರಣ್ ಜೋಹರ್, ಆಲಿಯಾ ಹೆಸ್ರು ಟ್ರೆಂಡ್ ಆಗ್ತಿರೋದ್ಯಾಕೆ?

    ಸುಶಾಂತ್ ಆತ್ಮಹತ್ಯೆ ಬಳಿಕ ಕರಣ್ ಜೋಹರ್, ಆಲಿಯಾ ಹೆಸ್ರು ಟ್ರೆಂಡ್ ಆಗ್ತಿರೋದ್ಯಾಕೆ?

    ಮುಂಬೈ: ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಸಂತಾಪ ಸೂಚಿಸಿದ ಬಳಿಕ ನಿರ್ದೇಶಕ ಕರಣ್ ಜೋಹರ್ ಮತ್ತು ನಟಿ ಆಲಿಯಾ ಭಟ್ ಹೆಸರು ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿವೆ. ಒಂದು ರೀತಿ ಸುಶಾಂತ್ ಅಭಿಮಾನಿಗಳು ಕರಣ್ ಮತ್ತು ಆಲಿಯಾ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.

    ಸುಶಾಂತ್ ಸಿಂಗ್ ರಜಪೂತ್ ಕುಟುಂಬಕ್ಕೆ ಯಾವುದೇ ಸಿನಿಮಾ ಹಿನ್ನೆಲೆ ಇರಲಿಲ್ಲ. ಹಾಗಾಗಿ ಆರಂಭದ ದಿನಗಳಲ್ಲಿ ಸ್ಟಾರ್ ನಟರ ಹಿಂದೆ ಡ್ಯಾನ್ಸರ್ ಆಗಿದ್ದ ಸುಶಾಂತ್ ತಮ್ಮ ಪರಿಶ್ರಮ ಪರಿಣಾಮ ಸ್ಟಾರ್ ಪಟ್ಟಕ್ಕೇರಿದ ನಾಯಕ ನಟ. ಬಾಲಿವುಡ್ ನಲ್ಲಿ ಆಗಾಗ್ಗೆ ನೆಪ್ಟೋಯಿಸಂ ಪದ ಕೇಳಿ ಬರುತ್ತಲೇ ಇರುತ್ತೆ. ಇಲ್ಲಿ ಕೇವಲ ಸ್ಟಾರ್ ಕುಡಿಗಳಿಗೆ ಮಾತ್ರ ಪ್ರಾಶಸ್ತ್ಯ ನೀಡಲಾಗುತ್ತೆ. ಪ್ರತಿಭೆಗಳನ್ನು ತುಳಿಯುವ ಪ್ರಯತ್ನ ನಡೆಯುತ್ತೆ ಎಂದು ಹಲವು ಕಲಾವಿದರು ತಮ್ಮ ಅಸಮಾಧಾನ ಹೊರ ಹಾಕಿರುವ ಉದಾಹರಣೆಗಳಿವೆ.

    ಕರಣ್ ಟ್ವೀಟ್: ಸುಶಾಂತ್ ಸಾವಿಗೆ ಸಂತಾಪ ಸೂಚಿಸಿ ಕರಣ್ ಜೋಹರ್ ಟ್ವಿಟ್ಟರ್ ಮತ್ತು ಇನ್‍ಸ್ಟಾಗ್ರಾಂನಲ್ಲಿ ಬರೆದುಕೊಂಡಿರುವ ಕೆಲ ಸಾಲುಗಳು ಚರ್ಚೆಗೆ ಗ್ರಾಸವಾಗಿವೆ. ನಿಮ್ಮೊಂದಿಗೆ ದೂರವಿದಿದ್ದು ನನ್ನ ತಪ್ಪು. ನಿಮಗೆ ನಿಮ್ಮ ಭಾವನೆಗಳನ್ನು ಹಂಚಿಕೊಳ್ಳಲು ಗೆಳೆಯನ ಅವಶ್ಯಕತೆ ಇತ್ತು. ಆದ್ರೆ ಇದನ್ನು ನಾನು ಅರ್ಥ ಮಾಡಿಕೊಳ್ಳಲಿಲ್ಲ. ಮುಂದೆ ಈ ರೀತಿಯ ತಪ್ಪು ಮರುಕಳಿಸದಂತೆ ಎಚ್ಚರವಾಗಿರುತ್ತೇನೆ. ವೈಭವೋಪೇತ ಜೀವನಕ್ಕೆ ಒಗ್ಗಿಕೊಂಡಿದ್ದೇವೆ. ಈ ಅದ್ಧೂರಿ, ಆಡಂಬರದಲ್ಲಿ ಕೆಲವರು ಕಳೆದು ಹೋಗುತ್ತಾರೆ. ಕೇವಲ ಸಂಬಂಧಗಳನ್ನು ಬೆಳಸಿಕೊಂಡರೆ ಸಾಲದು, ಅವುಗಳನ್ನು ಕಾಪಾಡಿಕೊಳ್ಳುವುದು ಸಹ ಅತ್ಯಗತ್ಯ. ನಿಮ್ಮ ಸಿಹಿಯಾದ ನಗು ಮತ್ತು ಅಪ್ಪುಗೆ ಸದಾ ನೆನಪಿನಲ್ಲಿರುತ್ತದೆ ಎಂದು ಕರಣ್ ಜೋಹರ್ ಇನ್‍ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

    https://www.instagram.com/p/CBacnPSJRtT/

    ಆಲಿಯಾ ಭಟ್ ಟ್ವೀಟ್: ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿರುವ ಆಲಿಯಾ ಭಟ್, ವಿಷಯ ಕೇಳಿ ಶಾಕ್ ಆಯ್ತು. ಸುಶಾಂತ್ ಸಾವು ಕಲ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನೀವು ನಮ್ಮನ್ನೆಲ್ಲ ಬಿಟ್ಟು ಹೋದ್ರಿ. ನಾವು ನಿಮ್ಮನ್ನು ತುಂಬಾನೇ ಮಿಸ್ ಮಾಡಿಕೊಳ್ಳುತ್ತೇವೆ. ನಿಮ್ಮ ಕುಟುಂಬ ಮತ್ತು ಮಿತ್ರರ ದುಃಖದಲ್ಲಿ ನಾವಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

    ಆಕ್ರೋಶ ಯಾಕೆ?: ಕರಣ್ ಜೋಹರ್ ನಡೆಸಿಕೊಡುವ ‘ಕಾಫಿ ವಿತ್ ಕರಣ್’ ಶೋನಲ್ಲಿ ಸುಶಾಂತ್ ಅವರನ್ನ ತುಂಬಾ ಉದ್ದೇಶಪೂರ್ವಕವಾಗಿ ಕೆಳಮಟ್ಟದಲ್ಲಿ ತೋರಿಸಲಾಗುತ್ತಿತ್ತು ಅನ್ನೋದು ಅಭಿಮಾನಿಗಳ ಆರೋಪ. ಶೋನ ರ‍್ಯಾಪಿಡ್ ಫೈರ್ ಸುತ್ತಿನಲ್ಲಿ ಸೆಲೆಬ್ರಿಟಿಗಳು ಟಾಪ್ ನಟರ ಪಟ್ಟಿಯಲ್ಲಿ ಸುಶಾಂತ್ ಹೆಸರು ಕೊನೆಯಲ್ಲಿರುತ್ತಿತ್ತು ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದರು.

    ಇದೇ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಆಲಿಯಾ ಭಟ್, ನಟನೆಯಲ್ಲಿ ಈ ಮೂವರನ್ನು ಕ್ರಮಾಂಕದಲ್ಲಿ ಹೇಳಿ ಎಂದು ಸುಶಾಂತ್, ರಣ್‍ವೀರ್ ಸಿಂಗ್ ಮತ್ತು ವರುಣ್ ಧವನ್ ಹೆಸರನ್ನು ಪ್ರಶ್ನೆ ಕೇಳಲಾಗುತ್ತು. ಈ ಸುಶಾಂತ್ ಸಿಂಗ್ ರಜಪೂರ್ ಯಾರು ಎಂದು ಆಲಿಯಾ ಪ್ರಶ್ನೆ ಮಾಡಿದ್ದರು. ಇದೀಗ ಇಬ್ಬರ ಸಂತಾಪಕ್ಕೆ ಅಭಿಮಾನಿಗಳು ತೋರಿಕೆಗಾಗಿ ಟ್ವೀಟ್ ಮಾಡುವ ಅವಶ್ಯಕತೆ ಇಲ್ಲ ಎಂದು ಹಳೆಯ ಹೇಳಿಕೆ, ವಿಡಿಯೋಗಳನ್ನು ಹಂಚಿಕೊಳ್ಳುವ ಮೂಲಕ ಟ್ರೋಲ್ ಮಾಡುತ್ತಿದ್ದಾರೆ.

  • ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ರಾಕಿಂಗ್ ಸ್ಟಾರ್ ಯಶ್

    ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ರಾಕಿಂಗ್ ಸ್ಟಾರ್ ಯಶ್

    ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ದಿ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.

    ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 Most Influential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ.

    ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ, ಯೋಜನೆಯನ್ನು ಪರಿಗಣಿಸಿ, ಭಾರತದ 50 ಶ್ರೇಷ್ಠ ಯುವ ಪ್ರಭಾವಶಾಲಿಗಳಿಗೆ ಜಿಕ್ಯೂ ಇಂಡಿಯಾ ಪ್ರಶಸ್ತಿ ನೀಡಿ ಗೌರವಿಸಿದೆ.

    ದಿ ಜಿಕ್ಯೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಈ 50 ಯುವ ಭಾರತೀಯರು ಒಂದೇ ವೇದಿಕೆಯಲ್ಲಿ ಸೇರಿಸುವ ಮೂಲಕ ಈ ಕಾರ್ಯಕ್ರಮವನ್ನು ಮಾಡಿದೆ. 50 ಬೇರೆ ಬೇರೆ ಕ್ಷೇತ್ರಗಳಲ್ಲಿ ಆಯ್ಕೆಯಾದ ಯುವ ವ್ಯಕ್ತಿಗಳ ಸಾಲಲ್ಲಿ ಇಡೀ ಭಾರತೀಯ ಚಿತ್ರರಂಗದಿಂದ ಯಶ್ ಆಯ್ಕೆಯಾಗಿದ್ದರು.

    ಈ ಕಾರ್ಯಕ್ರಮಕ್ಕೆ ಬಾಲಿವುಡ್‍ನ ಖ್ಯಾತ ನಿರ್ದೇಶಕ ಕರಣ್ ಜೋಹರ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕರಣ್ ಜೋಹರ್ ನಟ ಯಶ್ ಅವರಿಗೆ 2019ರ ಭಾರತೀಯ ಚಿತ್ರರಂಗದ ಅತ್ಯಂತ ಪ್ರಭಾವ ಶಾಲಿ ಯುವ ಭಾರತೀಯ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದ್ದಾರೆ.

    ಈ ಬಗ್ಗೆ ಯಶ್ ಟ್ವೀಟ್ ಮಾಡುವ ಮೂಲಕ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ. ಟ್ವಿಟ್ಟರಿನಲ್ಲಿ ಯಶ್, “GQ ಇಂಡಿಯಾ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಗೌರವದಾಯಕವಾಗಿದೆ. ಚಿತ್ರರಂಗದಲ್ಲಿ ನಮ್ಮ ಸಾಧನೆಯನ್ನು ಗುರುತಿಸಿರುವುದಕ್ಕೆ ಧನ್ಯವಾದಗಳು. ನನಗೆ ನಿರಂತರವಾಗಿ ಪ್ರೋತ್ಸಾಹಿಸಿದ ಅಭಿಮಾನಿಗಳಿಗೆ ಹಾಗೂ ನಮಗೆ ಆಶೀರ್ವಾದಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಟ್ವೀಟ್ ಮಾಡಿದ್ದಾರೆ.

  • ಟ್ರೋಲ್ ಮಾಡಿದ್ದವನ ಬೆವರಿಳಿಸಿದ ಕರಣ್ ಜೋಹರ್-ಟ್ವೀಟ್ ಡಿಲೀಟ್

    ಟ್ರೋಲ್ ಮಾಡಿದ್ದವನ ಬೆವರಿಳಿಸಿದ ಕರಣ್ ಜೋಹರ್-ಟ್ವೀಟ್ ಡಿಲೀಟ್

    ಮುಂಬೈ: ಬಾಲಿವುಡ್ ನ ಪ್ರಸಿದ್ಧ ನಿರ್ಮಾಪಕ, ನಿರ್ದೇಶಕ ಕರಣ್ ಜೋಹರ್ ತಮ್ಮನ್ನು ಟ್ರೋಲ್ ಮಾಡಿದ ಯುವಕನ ಬೆವರು ಇಳಿಸಿದ್ದಾರೆ. ಕರಣ್ ಜೋಹರ್ ಪ್ರತಿಕ್ರಿಯೆ ನೀಡುತ್ತಿದ್ದಂತೆ ಯುವಕ ತನ್ನ ಟ್ವೀಟ್ ಡಿಲೀಟ್ ಮಾಡಿಕೊಂಡಿದ್ದಾನೆ.

    ಕರಣ್ ಜೋಹರ್ ಅವರ ಖಾಸಗಿ ಜೀವನದ ವಿಷಯ ಬಹುದಿನಗಳಿಂದಲೂ ಚರ್ಚೆಯಲ್ಲಿದೆ. ಆದ್ರೆ ಇದೂವರೆಗೂ ಕರಣ್ ಜೋಹರ್ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಈ ಸಂಬಂಧ ಅಂತೆ-ಕಂತೆಗಳು ಬಾಲಿವುಡ್ ನಲ್ಲಿ ಮೊದಲಿನಿಂದಲೂ ಹರಿದಾಡುತ್ತಿವೆ. ಮದುವೆ ಆಗದಿದ್ದರೂ ಸರಗೋಸಿ ಮೂಲಕ ಎರಡು ಮಕ್ಕಳನ್ನು ಕರಣ್ ಜೋಹರ್ ಪಡೆದುಕೊಂಡಿದ್ದಾರೆ. ಇದೀಗ ಕರಣ್ ಜೋಹರ್ ಅವರ ವೈಯಕ್ತಿಕ ಜೀವನ ಕುರಿತು ಟೀಕಿಸಿದ್ದ ಯುವಕನ ಟ್ವೀಟ್ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

    ಏನದು ಟ್ವೀಟ್?
    ಕರಣ್ ಜೋಹರ್ ಅವರ ಜೀವನಾಧರಿಸಿದ ಸಿನಿಮಾ ಮಾಡಬೇಕು. ಚಿತ್ರಕ್ಕೆ ‘ಕರಣ್ ಜೋಹರ್: ದಿ ಗೇ’ ಎಂದು ಹೆಸರಿಡಬೇಕೆಂದು ಬರೆದು ಟ್ವೀಟ್ ಮಾಡಿದ್ದನು. ಸದಾ ನಗುತ್ತಲೇ ಮಾತನಾಡುವ ಕರಣ್ ಜೋಹರ್ ತಮ್ಮದೇ ಶೈಲಿಯಲ್ಲಿ ನೆಟ್ಟಿಗನ ಚಳಿ ಬಿಡಿಸಿದ್ದಾರೆ. ನೀವು ವಾಸ್ತವದ ಜೀವನದಲ್ಲಿ ಒರಿಜಿನಲ್ ಜೀನಿಯಸ್ ಆಗಿದ್ದೀರಿ. ಇಷ್ಟು ದಿನ ಎಲ್ಲಿ ಅಡಗಿಕೊಂಡಿದ್ದೀರಿ? ಇಂದು ಟ್ವಿಟ್ಟರ್ ನಲ್ಲಿ ಅತ್ಯಂತ ಅನುಕೂಲಕರವಾದ ವಿಷಯವನ್ನು ಚರ್ಚೆಗೆ ತಂದಿರೋದಕ್ಕೆ ನಿಮಗೆ ಧನ್ಯವಾದಗಳೆಂದು ಮೃದು ಮಾತಿನಲ್ಲಿ ಚಾಟಿ ಬೀಸಿದ್ದಾರೆ.

    ಕರಣ್ ಜೋಹರ್ ಪ್ರತಿಕ್ರಿಯೆ ನೀಡುತ್ತಿದ್ದಂತೆ ಯುವಕ ಟ್ವೀಟ್ ಡಿಲೀಟ್ ಮಾಡಿದ್ದಾನೆ. ಈ ಸಂಬಂಧ ಹಲವರು ಯುವಕನ ಟ್ವೀಟ್‍ಗೆ ಕಿಡಿಕಾರಿದ್ದು, ಬೇರೋಬ್ಬರ ಖಾಸಗಿ ಜೀವನದ ಬಗ್ಗೆ ಪ್ರಶ್ನೆ ಮಾಡೋದು ತಪ್ಪು. ಈ ರೀತಿಯ ಟ್ವೀಟ್ ಗಳಿಗೆ ಕರಣ್ ಜೋಹರ್ ಪ್ರತಿಕ್ರಿಯಿಸಬಾರದು. ಮತ್ತೆ ಹಲವರು ನಿಮ್ಮ ಉತ್ತರ ಟ್ರೋಲ್ ಮಾಡುವವರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ ಎಂದು ಕಮೆಂಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.