Tag: ಕರಸೇವಕ

  • ರಾಮಲಲ್ಲಾ ಪ್ರಾಣಪ್ರತಿಷ್ಠೆ – 96 ವರ್ಷದ ಕರಸೇವಕಿಗೆ ವಿಶೇಷ ಆಹ್ವಾನ – ಈಕೆ ಯಾರು ಗೊತ್ತಾ?

    ರಾಮಲಲ್ಲಾ ಪ್ರಾಣಪ್ರತಿಷ್ಠೆ – 96 ವರ್ಷದ ಕರಸೇವಕಿಗೆ ವಿಶೇಷ ಆಹ್ವಾನ – ಈಕೆ ಯಾರು ಗೊತ್ತಾ?

    ಮುಂಬೈ/ಅಯೋಧ್ಯೆ: 1990ರ ದಶಕದಲ್ಲಿ ಶ್ರೀರಾಮಮಂದಿರ ಚಳವಳಿಯಲ್ಲಿ (Ram Mandir Movement) ಸಕ್ರಿಯವಾಗಿ ಪಾಲ್ಗೊಂಡಿದ್ದ 96ರ ಹರೆಯದ ಕರಸೇವಕಿಗೆ (Karsevak) ಜ.22ರಂದು ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಮಂತ್ರಣ ನೀಡಲಾಗಿದೆ.

    ಮಹಾರಾಷ್ಟ್ರದ ನಿವಾಸಿಯಾಗಿರುವ ಶಾಲಿನಿ ದಬೀರ್‌ (96) ಅವರಿಗೆ ಮಂತ್ರಾಕ್ಷತೆ ನೀಡಿ ಭಗವಾನ್ ರಾಮನ ಪ್ರಾಣಪತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ವಿಶೇಷವಾಗಿ ಆಹ್ವಾನಿಸಲಾಗಿದೆ. ಈ ಸಂದರ್ಭದಲ್ಲಿ ರಾಮಮಂದಿರ (Ram Mandir) ಹೋರಾಟದಲ್ಲಿ ಪಾಲ್ಗೊಂಡಿದ್ದ ದಿನಗಳ ಬಗ್ಗೆ ಮೆಲುಕು ಹಾಕಿದ್ದಾರೆ. ಇದನ್ನೂ ಓದಿ: ಏಳು ಸುತ್ತಿನ ಕೋಟೆಯಾದ ಅಯೋಧ್ಯೆ – 30,000 ಯೋಧರು, AI ಕಣ್ಗಾವಲು – ಭದ್ರತೆಗೆ ವಿಶೇಷ ತಂಡಗಳ‌ ನಿಯೋಜನೆ

    1990ರ ದಶಕದಲ್ಲಿ ಏನಾಗಿತ್ತು?
    ನಾನು 63 ವರ್ಷದವಳಿದ್ದಾಗ ಈ ಹೋರಾಟಕ್ಕೆ ಧುಮುಕಿದ್ದೆ. 1990 ಅಕ್ಟೋಬರ್‌ 30ರಂದು ಮಹರಾಷ್ಟ್ರದಿಂದ ಸುಮಾರು 60 ಕಿಮೀ ದೂರ ನಡೆದುಕೊಂಡೇ ಹೋಗಿ ಅಯೋಧ್ಯೆ ತಲುಪಿದ್ದೆ. ಆಗ ಅಲ್ಲಿ ಬಾಬ್ರಿ ಮಸೀದಿಯ ಮೇಲೆ ಕೇಸರಿ ಧ್ವಜ ಬೀಸುವುದನ್ನೂ ಕಂಡಿದ್ದೆ. ಇದನ್ನು ಕಂಡು ನಾನೂ ಕರಸೇವೆಗೆ ಹೊರಟಿದ್ದೆ. ಈ ಸಂದರ್ಭದಲ್ಲಿ ಪೊಲೀಸರು ಚಿತ್ರಹಿಂಸೆ ನೀಡುತ್ತಿದ್ದರು, ಕರಸೇವಕರ ಮೇಲೆ ಗುಂಡು ಹಾರಿಸಿದ್ದರು, ಉತ್ತರ ಪ್ರದೇಶದ ಪೊಲೀಸರು ದಾದರ್‌ನಿಂದ ಮಹಿಳಾ ಕರಸೇವರ ಗುಂಪನ್ನು ಬಂಧಿಸಿತು. ಜೈಲಿನಲ್ಲಿ ಜಾಗ ಸಾಕಾಗದೇ ಶಾಲೆಯೊಂದರಲ್ಲಿ ಬಂಧಿಸಿ ಬೀಗ ಜಡಿದಿದ್ದರು ಎಂದು ಕಹಿ ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ.

    ಪೊಲೀಸರು ಲಾಠಿಚಾರ್ಜ್‌ ಮಾಡುವ ಜೊತೆಗೆ ಅಶ್ರುವಾಯು ಸಿಡಿಸಿದ್ದರು, ಗುಂಡಿನ ದಾಳಿ ನಡೆಸುತ್ತಿದ್ದಾಗ ನಾನೂ ಸಾಯಬೇಕಿತ್ತು. ಒಂದು ಬುಲೆಟ್‌ ನನ್ನ ಹಿಂದೆ ಹಾದುಹೋಗಿತ್ತು, ಆದ್ರೆ ನನ್ನ ಪಕ್ಕದಲ್ಲಿದ್ದ ವ್ಯಕ್ತಿಗೆ ತಗುಲಿ ಸತ್ತುಹೋದರು. ಕೊನೆಗೆ ಸತತ ಹೋರಾಟದ ಫಲವಾಗಿ ಬಾಬ್ರಿ ಮಸೀದಿ ಕಟ್ಟದ ಧ್ವಂಸವಾಯಿತು. ಅಂತಹ ಸಂದರ್ಭದಲ್ಲಿ ನನಗೆ ವಿಶೇಷ ಮತ್ತು ಅಚ್ಚರಿ ಅನ್ನಿಸಿದ್ದು, ಮುಸ್ಲಿಂ ವ್ಯಕ್ತಿಯ ವರ್ತನೆ. ಮಸೀದಿ ಧ್ವಂಸವಾಗುತ್ತಿದ್ದಂತೆ ಓರ್ವ ಮುಸ್ಲಿಂ ವ್ಯಕ್ತಿ ನನಗೆ ಸಿಹಿ ತಂದುಕೊಟ್ಟಿದ್ದ ಈಗ ನಿಮಗೆ ಬೇಕಾದುದ್ದನ್ನು ನೀವು ಪಡೆದುಕೊಂಡಿದ್ದೀರಿ ಎಂದು ಸಿಹಿ ನೀಡಿದ್ದ. ನಾನು ಸಹ ಅವನಿಗೆ ಸಿಹಿ ನೀಡಬೇಕು ಅಂದುಕೊಂಡಿದ್ದೆ. ಆದ್ರೆ ಮತ್ತೆ ಅವನು ನನಗೆ ಕಾಣಿಸಲೇ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೊಪ್ಪಳಕ್ಕುಂಟು ಶ್ರೀರಾಮನ ನಂಟು – ರಾಮ, ಆಂಜನೇಯ, ಸುಗ್ರೀವರು ಭೇಟಿಯಾಗಿದ್ದ ಚಂಚಲಕೋಟೆ ಬಗ್ಗೆ ನಿಮ್ಗೆ ಗೊತ್ತಾ?

    ಇಂದು ಶ್ರೀರಾಮ ಅಯೋಧ್ಯೆಗೆ ಬರಳಿ ಬರುತ್ತಿದ್ದಾನೆ, ನನಗೆ ತುಂಬಾ ಸಂತೋಷವಾಗಿದೆ. ರಾಮಮಂದಿರದಿಂದ ಎಲ್ಲವೂ ಒಳ್ಳೆಯದಾಗುತ್ತದೆ, ಎಲ್ಲರಿಗೂ ಪ್ರಯೋಜನವಾಗುತ್ತದೆ. ಇದಕ್ಕೆ ನರೇಂದ್ರ ಮೋದಿ ಸರ್ಕಾರದ ದೊಡ್ಡ ಕೊಡುಗೆ ಇದೆ ಎಂದ ಅವರು, ದುಃಖದ ಸಂಗತಿ ಅಂದರೆ ನನಗೆ ಕೈಕಾಲುಗಳ ಸ್ವಾದೀನ ಮೊದಲಿನಂತಿಲ್ಲ ಎಂದು ಬೇಸರವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 51 ಇಂಚು ಎತ್ತರ, 1.5 ಟನ್ ತೂಕ ಇರಲಿದೆ ಅಯೋಧ್ಯೆ ರಾಮನ ವಿಗ್ರಹ

  • ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣಕ್ಕೆ ಟ್ವಿಸ್ಟ್- ಕರಸೇವಕನ ಮೇಲಿನ ಕ್ರಿಮಿನಲ್ ಕೇಸ್‍ಗಳೆಷ್ಟು?

    ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣಕ್ಕೆ ಟ್ವಿಸ್ಟ್- ಕರಸೇವಕನ ಮೇಲಿನ ಕ್ರಿಮಿನಲ್ ಕೇಸ್‍ಗಳೆಷ್ಟು?

    ಬೆಂಗಳೂರು: ಹುಬ್ಬಳ್ಳಿ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಸರ್ಕಾರ ಬಿಡುಗಡೆ ಮಾಡಿದ ಅಪರಾಧ ಪಟ್ಟಿ ನೋಡಿದರೆ ಪೊಲೀಸರ ನಡೆಯ ಮೇಲೆಯೇ ಸಂಶಯ ಮೂಡತೊಡಗಿದೆ.

    ಪೊಲೀಸರ ಕಾರ್ಯವೈಖರಿ ಹತ್ತು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಶ್ರೀಕಾಂತ್ ಪೂಜಾರಿ ಮೇಲೆ 16 ಕ್ರಿಮಿನಲ್ ಕೇಸ್‍ಗಳಿವೆ ಅಂತ ರಾಜ್ಯ ಸರ್ಕಾರ ಹೇಳಿತ್ತು. ಈ ಸಂಬಂಧ ಕೇಸ್ ಫೈಲ್‍ಗಳ ಪಟ್ಟಿಯನ್ನೂ ಬಿಡುಗಡೆ ಮಾಡಿತ್ತು. ಆದರೆ ಪಬ್ಲಿಕ್ ಟಿವಿಗೆ ಸಿಕ್ಕಿರುವ ದಾಖಲೆಗಳ ಪ್ರಕಾರ, ಶ್ರೀಕಾಂತ್ ಪೂಜಾರಿ ಮೇಲೆ ಒಂದು ಸಕ್ರಿಯ ಪ್ರಕರಣ ಮಾತ್ರ ಇದೆ. ಉಳಿದ 15 ಪ್ರಕರಣಗಳಲ್ಲಿ ಶ್ರೀಕಾಂತ್ ಪೂಜಾರಿ ಖುಲಾಸೆಗೊಂಡಿರುವ ವಿವರ ಲಭ್ಯವಾಗಿದೆ.

    ದೊಂಬಿ ಕೇಸ್‍ಗೆ ಸಂಬಂಧಿಸಿ 31 ವರ್ಷಗಳ ಬಳಿಕ ಹುಬ್ಬಳ್ಳಿ ಶಹರ ಠಾಣೆ ಪೊಲೀಸರು ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ರು. ಇದು ದೀರ್ಘ ಕಾಲದಿಂದ ಬಾಕಿ ಉಳಿಸಿಕೊಂಡಿದ್ದ ಪ್ರಕರಣ ಅಂತ ಪೊಲೀಸರು ಸಮರ್ಥನೆ ನೀಡಿದ್ದರು. ಅಲ್ಲದೇ ಆರೋಪಿಯು ತಲೆಮರೆಸಿಕೊಂಡಿದ್ದ ಅಂತಲೂ ಹೇಳಿದ್ದರು. ಆದರೆ 2004, 2009 ಹಾಗೂ 2018ರಲ್ಲಿ ಶ್ರೀಕಾಂತ್ ಪೂಜಾರಿಯನ್ನು ಠಾಣೆಗೆ ಕರೆಸಿಕೊಂಡು ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ ಇನ್ಸ್‌ಪೆಕ್ಟರ್‌ನನ್ನು ಅಮಾನತು ಮಾಡಲ್ಲ, ಕಡ್ಡಾಯ ರಜೆ ಮೇಲೆ ಹೋಗಿಲ್ಲ: ಪರಮೇಶ್ವರ್

    ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಸಿಆರ್‍ಪಿಸಿ ಕಲಂ 107ರ ಅನ್ವಯ ಮುಚ್ಚಳಿಕೆ ಬರೆಸಿಕೊಂಡು ಕಳಿಸಲಾಗಿದೆ. ಹಾಗಾದರೆ ಆ ಸಮಯದಲ್ಲಿ ಠಾಣೆಗೆ ಹಾಜರಾದರೂ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಿಲ್ಲವೇಕೆ..? ಪೊಲೀಸರ ಈ ನಡೆ ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಹಾಗಾದರೆ ಯಾರು ಯಾರಿಗೆ ಯಾಮಾರಿಸಿದರು ಎಂಬ ಪ್ರಶ್ನೆ ಉದ್ಭವವಾಗುತ್ತದೆ. ಪೊಲೀಸರು ಸರ್ಕಾರವನ್ನು ಯಾಮಾರಿಸಿದರಾ..? ಅಥವಾ ಸರ್ಕಾರ ರಾಜ್ಯದ ಜನರನ್ನು ಯಾಮಾರಿಸಿತಾ ಅನ್ನೋ ಪ್ರಶ್ನೆ ಮೂಡುತ್ತದೆ.

  • ನಾನೂ ಕರಸೇವಕ, ನನ್ನನ್ನೂ ಬಂಧಿಸಿ – ಅಭಿಯಾನ ಆರಂಭಿಸಿದ್ದ ಸುನಿಲ್‌ ಕುಮಾರ್‌ ವಶಕ್ಕೆ

    ನಾನೂ ಕರಸೇವಕ, ನನ್ನನ್ನೂ ಬಂಧಿಸಿ – ಅಭಿಯಾನ ಆರಂಭಿಸಿದ್ದ ಸುನಿಲ್‌ ಕುಮಾರ್‌ ವಶಕ್ಕೆ

    ಬೆಂಗಳೂರು: ಹುಬ್ಬಳ್ಳಿ ಕರಸೇವಕರ ಬಿಡುಗಡೆಗೆ ಆಗ್ರಹಿಸಿ ಬಿಜೆಪಿಯಿಂದ (BJP) ನಿತ್ಯ ಪ್ರತಿಭಟನೆ (Protest) ನಡೆಸಲು ಮುಂದಾಗಿದ್ದು ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಎದುರು ಧರಣಿ ಕುಳಿತ ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ (Sunil Kumar) ಅವರನ್ನು ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಮಸೀದಿಯವರು ನೀಡಿದ್ದೆಲ್ಲವನ್ನೂ ಮೈ ಮೇಲೆ ಹಾಕಿಕೊಳ್ಳುತ್ತಾರೆ, ದೇವಿ ದರ್ಶನಕ್ಕೆ ಸಮಯವಿಲ್ಲ: ಸಿದ್ದು ವಿರುದ್ಧ ಬಿಜೆಪಿ ಕಿಡಿ

     

    ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಅರೆಸ್ಟ್ ಖಂಡಿಸಿ ಬಿಜೆಪಿ ನಾಯಕರು ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂಬ ವಿಭಿನ್ನ ಅಭಿಯಾನ ಆರಂಭಿಸಿದ್ದಾರೆ. ಇದರ ಭಾಗವಾಗಿ ಇಂದು ಬೆಳಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಅವರು, ನಾನೂ ಕರಸೇವಕ. ನನ್ನನ್ನೂ ಬಂಧಿಸಿ ಎಂಬ ಪ್ಲೇ ಕಾರ್ಡ್‌ ಹಿಡಿದು ಏಕಾಂಗಿ ಪ್ರತಿಭಟನೆ ನಡೆಸುವ ಮೂಲಕ ಚಾಲನೆ ನೀಡಿದರು.

    1992ರ ಡಿಸೆಂಬರ್ 6ರ ಅಯೋಧ್ಯೆ ರಾಮ ಮಂದಿರದ ಕರಸೇವಕ ನಾನು. ನನ್ನನ್ನು ಬಂಧಿಸಿ ಎಂದು ಧರಣಿ ನಡೆಸಿದರು. ಠಾಣೆಯ ಮುಂದೆ ಪ್ರತಿಭಟನೆಗೆ ಅವಕಾಶ ಇಲ್ಲದ ಕಾರಣ ಸುನಿಲ್‌ ಕುಮಾರ್‌ ಅವರನ್ನು ಪೊಲೀಸರು ವಶಕ್ಕೆ ಪಡೆದರು.  ಇದನ್ನೂ ಓದಿ: ಕರಸೇವಕರ ಅರೆಸ್ಟ್‌ ಮಾಡಿದ್ದ ಇನ್ಸ್‌ಪೆಕ್ಟರ್‌ಗೆ ಕಡ್ಡಾಯ ರಜೆ – ಪ್ರಶ್ನೆಗೆ ಕಾರಣವಾಯ್ತು ಸರ್ಕಾರದ ನಡೆ