Tag: ಕರಾಟೆ

  • ಲೈಂಗಿಕ ಕಿರುಕುಳ ನೀಡಿದ ಟ್ರಾಫಿಕ್ ಪೊಲೀಸ್ ಕೆನ್ನೆಗೆ ಭಾರಿಸಿದ ಯುವತಿ

    ಲೈಂಗಿಕ ಕಿರುಕುಳ ನೀಡಿದ ಟ್ರಾಫಿಕ್ ಪೊಲೀಸ್ ಕೆನ್ನೆಗೆ ಭಾರಿಸಿದ ಯುವತಿ

    ರೋಹ್ಟಕ್: ಟ್ರಾಫಿಕ್ ಪೊಲೀಸ್ ಒಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾರಣ ಆಕೆಯಿಂದ ಹೊಡೆತ ತಿಂದಿರುವ ಘಟನೆ ಹರಿಯಾಣದ ರೋಹ್ಟಕ್ ಪ್ರದೇಶದಲ್ಲಿ ನಡೆದಿದೆ.

    ಕರಾಟೆ ತರಬೇತಿ ತರಗತಿಯಿಂದ ಆಟೋದಲ್ಲಿ ಮನೆಗೆ ಹಿಂದಿರುವ ವೇಳೆ ಘಟನೆ ನಡೆದಿದ್ದು, ಪೊಲೀಸ್ ಆಕೆಯ ಫೋನ್ ನಂಬರ್ ಕೇಳಿ ಲೈಂಗಿಕ ಕಿರುಕುಳ ನೀಡಿದ್ದ ಎಂದು ಮಾಧ್ಯಮಮೊಂದು ವರದಿ ಮಾಡಿದೆ. ಅಂದಹಾಗೇ ಯುವತಿ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಆಗಿದ್ದು, ಹಲವು ಟೂರ್ನಿಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದಿದ್ದಾರೆ.

    ಘಟನೆ ಬಳಿಕ ಆರೋಪಿ ಅಧಿಕಾರಿಯ ವಿರುದ್ಧ ದೂರು ದಾಖಲಿಸಲಾಗಿದೆ. ಅಲ್ಲದೇ ಆತನನ್ನು ಸೇವೆಯಿಂದ ಅಮಾನತುಗೊಳಿಸಿ ಅದೇಶ ನೀಡಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    2017 ರಲ್ಲಿ ದೆಹಲಿ ಹೈಕೋರ್ಟ್ ಶಾಲೆಗಳಲ್ಲಿ ಯುವತಿಯರಿಗೆ ಹಾಗೂ ಹೆಣ್ಣು ಮಕ್ಕಳಿಗೆ ಸ್ವಯಂ ರಕ್ಷಣಾ ಕಲೆ ತರಬೇತಿ ನೀಡುವ ಕುರಿತು ಅಭಿಪ್ರಾಯ ವ್ಯಕ್ತಪಡಿಸಿತ್ತು. ಈ ಕುರಿತು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೂ ನ್ಯಾಯಾಲಯ ಸೂಚಿಸಿತ್ತು.

  • ಕರಾಟೆಯಲ್ಲಿ ಚಿನ್ನದ ಪದಕ ಗೆದ್ದ ಚಾಲೆಂಜಿಂಗ್ ಸ್ಟಾರ್ ಪುತ್ರ

    ಕರಾಟೆಯಲ್ಲಿ ಚಿನ್ನದ ಪದಕ ಗೆದ್ದ ಚಾಲೆಂಜಿಂಗ್ ಸ್ಟಾರ್ ಪುತ್ರ

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪುತ್ರ ತಂದೆಯ ಸಾಗಿದ ರೀತಿಯಲ್ಲೇ ಬೆಳೆಯಲು ಆರಂಭಿಸಿದ್ದು, ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದಾನೆ.

    ದರ್ಶನ್ ಹಾಗೂ ವಿಜಯಲಕ್ಷ್ಮೀ ರವರ ಏಕೈಕ ಪುತ್ರ ವಿನೀಶ್ ಕರಾಟೆಯಲ್ಲಿ ಚಿನ್ನದ ಪದಕವನ್ನು ಪಡೆದಿದ್ದಾನೆ. ರಾಜರಾಜೇಶ್ವರಿ ನಗರದ ಹಿಲ್ ವ್ಯೂವ್ ಸ್ಕೂಲ್ ನಲ್ಲಿ ವಿನೀಶ್ ದರ್ಶನ್ ವ್ಯಾಸಂಗ ಮಾಡುತ್ತಿದ್ದು, ಓದುವುದರಲ್ಲೂ ಮುಂಚೂಣಿಯಲ್ಲಿದ್ದಾನೆ.

    ಚಿನ್ನದ ಪದಕ ಗೆದ್ದ ಹಿನ್ನೆಲೆಯಲ್ಲಿ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ವಿನೀಶ್ ಫೋಟೋವನ್ನು ಹಾಕಿ ಅಭಿನಂದಿಸಿದ್ದಾರೆ. ತಂದೆಯಂತೆ ಮಗ ವಿನೀಶ್ ಇದೇ ರೀತಿ ಮತ್ತಷ್ಟು ಸಾಧನೆ ಮಾಡುವಂತೆ ಶುಭ ಹಾರೈಸುತ್ತಿದ್ದಾರೆ.

    ದರ್ಶನ್ ಪುತ್ರನನ್ನು ಸಿನಿ ರಂಗಕ್ಕೆ ಈಗಾಗಲೇ ಪರಿಚಯಿಸಿದ್ದಾರೆ. ಐರಾವತ ಚಿತ್ರದಲ್ಲಿ ಮಗ ವಿನೀಶ್ ಬಣ್ಣ ಹಚ್ಚಿದ್ದ. ಈ ಮೂಲಕ ತೂಗುದೀಪ ಶ್ರೀನಿವಾಸ್ ಕುಟುಂಬದ ಮೂರನೇ ಕುಡಿಯಾಗಿ ವಿನೀಶ್ ಸಿನಿ ಲೋಕಕ್ಕೆ ಕಾಲಿಟ್ಟಿದ್ದ.

     

     

     

     

  • ವಿಡಿಯೋ: ಮಂಗ್ಳೂರು ಮೇಯರ್ ಗೆ ಪಂಚ್ ಕೊಟ್ರು ಸಿಎಂ!

    ವಿಡಿಯೋ: ಮಂಗ್ಳೂರು ಮೇಯರ್ ಗೆ ಪಂಚ್ ಕೊಟ್ರು ಸಿಎಂ!

    ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಗಳೂರಿಗೆ ಭೇಟಿ ನೀಡಿದ್ದು, ಮೇಯರ್ ಕವಿತಾ ಸನಿಲ್ ಗೆ ಸಖತ್ ಪಂಚ್ ನೀಡಿದ್ದಾರೆ.

    ಮಂಗಳೂರಿನ ಮೇಯರ್, ಕರಾಟೆ ಚಾಂಪಿಯನ್ ಕವಿತಾ ಸನಿಲ್ ನೇತೃತ್ವದಲ್ಲಿ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲು ಆಗಮಿಸಿದ್ದ ಸಿಎಂ ಸಿದ್ರಾಮಯ್ಯ, ಮಕ್ಕಳು ಕರಾಟೆ ಆಡುವುದನ್ನು ನೋಡಿ ಉತ್ತೇಜಿತರಾದ್ರು. ಹೀಗಾಗಿ ನ್ಯಾಷನಲ್ ಚಾಂಪಿಯನ್ ಮೇಯರ್ ಕವಿತಾ ಸನಿಲ್ ಮೊದಲು ಸಿಎಂಗೆ ಕರಾಟೆ ಪಂಚ್ ನೀಡಿ ಗಮನ ಸೆಳೆದರು. ಮೇಯರ್ ನೀಡಿದ ಪಂಚ್ ಗೆ ತಿರುಗೇಟಾಗಿ ಸಿಎಂ ಕೂಡ ಪಂಚ್ ಮಾಡಿ ನೆರೆದಿದ್ದವರಲ್ಲಿ ನಗೆಯ ಬುಗ್ಗೆ ಉಕ್ಕಿಸಿದ್ರು.

    ಇತ್ತೀಚೆಗಷ್ಟೇ ತಮ್ಮ ಅಪಾರ್ಟ್ ಮೆಂಟ್ ಕಾವಲುಗಾರರಾದ ಮೂಲತಃ ಬಾಗಲಕೋಟೆ ಜಿಲ್ಲೆಯ ನಿವಾಸಿಗಳಾದ ಕಮಲ ಮತ್ತು ಪುಂಡಲೀಕ ದಂಪತಿ ಮೇಲೆ ಹಲ್ಲೆಗೈದು ಗೂಂಡಾಗಿರಿ ತೋರಿದ್ದಾರೆ ಎಂದು ಮೇಯರ್ ಕವಿತಾ ಸನಿಲ್ ವಿರುದ್ಧ ಆರೋಪ ಕೇಳಿಬಂದಿತ್ತು. ಅಪಾರ್ಟ್ ಮೆಂಟ್ ಕಾವಲುಗಾರನ ಮನೆಗೆ ಮೇಯರ್ ಏಕಾಏಕಿ ನುಗ್ಗಿ, ಕಾವಲುಗಾರನ ಪತ್ನಿಯ ಜುಟ್ಟು ಹಿಡಿದು ಕಿವಿ ಹಾಗೂ ಮುಖಕ್ಕೆ ಹೊಡೆದಿದ್ದಾರೆ. ಅಲ್ಲದೇ ಅಶ್ಲೀಲ ಭಾಷೆಯಲ್ಲಿ ನಿಂದಿಸಿದ್ದಾರೆಂದು ಮೇಯರ್ ವಾಸವಿರುವ ಮಂಗಳೂರಿನ ಬಿಜೈನ ಅಪಾರ್ಟ್ ಮೆಂಟ್ ಕಾವಲುಗಾರ ದಂಪತಿ ಆರೋಪಿಸಿದ್ದರು.

    ಈ ಕುರಿತು ಸಾಮಾನ್ಯ ಸಭೆಯ ವೇಳೆ ಬಿಜೆಪಿ ಕಾರ್ಯಕರ್ತರು ಮೇಯರ್ ರಾಜೀನಾಮೆ ನೀಡುವಂತೆ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ಮೇಯರ್ ತಮ್ಮ ಮೇಲಿನ ಆರೋಪವನ್ನು ಅಲ್ಲಗೆಳೆದಿದ್ದು, ನಾನು ಬೇಕಿದ್ರೆ ಕಟೀಲಿನಲ್ಲಿ ಪ್ರಮಾಣ ಮಾಡ್ತೀನಿ. ಬಿಜೆಪಿಯವರೂ ಅಲ್ಲಿ ಬನ್ನಿ ಅಂತ ಸವಾಲೆಸೆದಿದ್ದರು.

    https://www.youtube.com/watch?v=QZy7hqE1yGI