Tag: ಕರಿಮಣಿ ಸೀರಿಯಲ್‌

  • ಟಿವಿ ಪ್ರೇಕ್ಷಕರಿಗೆ ಗುಡ್ ನ್ಯೂಸ್- ಇನ್ಮುಂದೆ ವಾರದ 7 ದಿನವೂ ಪ್ರಸಾರವಾಗಲಿದೆ ಸೀರಿಯಲ್ಸ್

    ಟಿವಿ ಪ್ರೇಕ್ಷಕರಿಗೆ ಗುಡ್ ನ್ಯೂಸ್- ಇನ್ಮುಂದೆ ವಾರದ 7 ದಿನವೂ ಪ್ರಸಾರವಾಗಲಿದೆ ಸೀರಿಯಲ್ಸ್

    ಲರ್ಸ್ ಕನ್ನಡ ವಾಹಿನಿ ಸದಾ ಹೊಸ ಬಗೆಯ ಕಥೆಗಳನ್ನು ತೆರೆದಿಡೋದ್ರಲ್ಲಿ ಯಾವಾಗಲೂ ಮುಂದು. ಇದೀಗ ಸೀರಿಯಲ್ (Serial) ಪ್ರಿಯರಿಗೆ ವಾಹಿನಿ ಗುಡ್ ನ್ಯೂಸ್ ನೀಡಿದೆ. ಇದನ್ನೂ ಓದಿ:‘ಅಮರನ್‌’ ಚಿತ್ರದ ಅಬ್ಬರ- ಶಿವಕಾರ್ತಿಕೇಯನ್‌, ಸಾಯಿ ಪಲ್ಲವಿ ಸಿನಿಮಾಗೆ ಪ್ರೇಕ್ಷಕ ಜೈಕಾರ

    ಕನ್ನಡದ ಬಿಗ್ ಬಾಸ್ 11ರ ಜೊತೆ ಹಲವು ಸೀರಿಯಲ್‌ಗಳ ಮೂಲಕ ವಾಹಿನಿ ಮನರಂಜನೆ ನೀಡುತ್ತಿದೆ. ಹೊಸ ಕಥೆಗಳನ್ನು ಕೊಡುವ ಮೂಲಕ ಪ್ರೇಕ್ಷಕರ ಮನಗೆಲ್ಲುತ್ತಿದೆ. ಹೀಗಿರುವಾಗ ಪ್ರೇಕ್ಷಕರಿಗಾಗಿ ವಾಹಿನಿ ಸಿಹಿಸುದ್ದಿ ನೀಡಿದೆ.

    ಇಷ್ಟು ದಿನ ವಾಹಿನಿಯ ಸೀರಿಯಲ್‌ಗಳು 7 ದಿನಗಳು ಪ್ರಸಾರ ಕಾಣುತ್ತಿರಲಿಲ್ಲ. ಆದರೆ ಇನ್ಮೇಲೆ ವೀಕ್ಷಕರ ನೆಚ್ಚಿನ ಶೋಗಳು ವಾರದ ಏಳು ದಿನಗಳು ಪ್ರಸಾರವಾಗಲಿದೆ. ಈ ಗುಡ್ ನ್ಯೂಸ್ ಅನ್ನು ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತವಾಗಿ ತಿಳಿಸಿದೆ.

    ಕಾರ್ತಿಕ್ ಅತ್ತಾವರ್, ಅಮೂಲ್ಯ ಗೌಡ ನಟನೆಯ ‘ಶ್ರೀಗೌರಿ’ (Shree Gowri), ಶಮಂತ್ ಮತ್ತು ಭೂಮಿಕಾ ನಟನೆಯ ‘ಲಕ್ಷ್ಮಿ ಬಾರಮ್ಮ’, ದಿವ್ಯಾ ಉರುಡುಗ ನಟನೆಯ ‘ನಿನಗಾಗಿ’, ‘ಕರಿಮಣಿ’, ‘ದೃಷ್ಟಿ ಬೊಟ್ಟು’ ಹೀಗೆ ಪ್ರೇಕ್ಷಕರ ಇಷ್ಟದ ಸೀರಿಯಲ್‌ಗಳನ್ನು ವಾರ ಪೂರ್ತಿ ನೋಡುವ ಅವಕಾಶ ಸಿಗುತ್ತಿದೆ. ಈ ಮೂಲಕ ವಾಹಿನಿ ಗುಡ್ ನ್ಯೂಸ್ ಕೊಟ್ಟಿದೆ.

  • ಮರಾಠ ಸಂಪ್ರದಾಯದಂತೆ ನೆರವೇರಿದ ನಿರ್ದೇಶಕ ವಿನೋದ್ ಅಂತ್ಯಕ್ರಿಯೆ

    ಮರಾಠ ಸಂಪ್ರದಾಯದಂತೆ ನೆರವೇರಿದ ನಿರ್ದೇಶಕ ವಿನೋದ್ ಅಂತ್ಯಕ್ರಿಯೆ

    ನ್ನರಸಿ ರಾಧೆ, ಕರಿಮಣಿ (Karimani) ಸೀರಿಯಲ್ ನಿರ್ದೇಶಕ ವಿನೋದ್ ದೊಂಡಾಲೆ  (Vinod Dondale) ಅವರ ಅಂತ್ಯಕ್ರಿಯೆ ಇಂದು (ಜು.21) ಮರಾಠ ಸಂಪ್ರದಾಯದಂತೆ ನೆರವೇರಿದೆ. ಇದನ್ನೂ ಓದಿ:ಅದೆಷ್ಟೋ ಜನರಿಗೆ ವಿನೋದ್ ಬದುಕಿನ ದಾರಿ ಹೇಳಿ ಕೊಟ್ಟಿದ್ದಾರೆ: ನಟಿ ಲಕ್ಷ್ಮಿ ಸಿದ್ದಯ್ಯ

    ನಾಗರಭಾವಿ ನಿವಾಸದಲ್ಲಿ ಆಪ್ತರಿಗೆ ಇಂಡಸ್ಟ್ರಿಯವರಿಗೆ ವಿನೋದ್ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇಂದು (ಜು.21) ಮಧ್ಯಾಹ್ನ ನಗರದ ಚಾಮರಾಜೇಟೆಯ ಟಿ.ಆರ್ ಮಿಲ್‌ನಲ್ಲಿ ಹಿಂದೂ ಮರಾಠ ಸಂಪ್ರದಾಯದಂತೆ ವಿನೋದ್ ಅಂತ್ಯಕ್ರಿಯೆ ಜರುಗಿದೆ.

    ಅಂದಹಾಗೆ, ಸಾಲದ ಸುಳಿಯಲ್ಲಿ ಸಿಲುಕಿದ್ದ ವಿನೋದ್ ಜು.20ರಂದು ತಮ್ಮ ನಿವಾಸದಲ್ಲಿ  ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿರ್ದೇಶಕ ವಿನೋದ್ ಅವರ ಸಿನಿಮಾ ಮಾಡುವ ಕನಸು ಮಾತ್ರ ಅರ್ಧದಲ್ಲೇ ಕಮರಿ ಹೋಗಿರೋದು ದುರಂತವೇ ಸರಿ. ವಿನೋದ್ ಇನ್ನು ಕೇವಲ ನೆನಪು ಮಾತ್ರ.

  • 5 ವರ್ಷಗಳ ಬಳಿಕ ನಟನೆಗೆ ಮರಳಿದ ‘ಅಮೆರಿಕಾ ಅಮೆರಿಕಾ’ ಚಿತ್ರದ ನಟಿ

    5 ವರ್ಷಗಳ ಬಳಿಕ ನಟನೆಗೆ ಮರಳಿದ ‘ಅಮೆರಿಕಾ ಅಮೆರಿಕಾ’ ಚಿತ್ರದ ನಟಿ

    ದೊರೆ, ಬಂಗಾರದ ಮನೆ, ‘ಅಮೆರಿಕಾ ಅಮೆರಿಕಾ’ (America America) ಚಿತ್ರಗಳ ಮೂಲಕ ಮೋಡಿ ಮಾಡಿದ್ದ ನಟಿ ಹೇಮಾ ಪ್ರಭಾತ್ (Hema Prabath) ಮತ್ತೆ ನಟನೆಗೆ ಮರಳಿದ್ದಾರೆ. ಆದರೆ ಈ ಸಿನಿಮಾ ಬದಲು ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಜನಪ್ರಿಯ ಸೀರಿಯಲ್‌ವೊಂದಕ್ಕೆ ಹೇಮಾ ಸಾಥ್ ನೀಡಿದ್ದಾರೆ.

    90ರ ದಶಕದಲ್ಲಿ ಪಡ್ಡೆಹುಡುಗರ ನಿದ್ದೆಗೆಡಿಸಿದ ಚೆಲುವೆಯಾಗಿ ಹೇಮಾ ಕನ್ನಡಿಗರ ಮನಗೆದ್ದಿದ್ದರು. ಬಳಿಕ ಮದುವೆ, ಸಂಸಾರ ಅಂತ ನಟಿ ವೈಯಕ್ತಿಕ ಬದುಕಿನಲ್ಲಿ ಬ್ಯುಸಿಯಾದರು. ಆದರೆ ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಮನರಂಜನೆ ನೀಡುತ್ತಿದ್ದರು.

    ಮೈಸೂರಿನ ಬೆಡಗಿ ಸ್ಪಂದನಾ ಸೋಮಣ್ಣ, ಅಶ್ವೀನ್ ನಟನೆಯ ‘ಕರಿಮಣಿ’ (Karimani) ಎಂಬ ಸೀರಿಯಲ್‌ಗೆ ಅಭಿಮಾನಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ತಿದೆ. ಕರಿಮಣಿ ಧಾರಾವಾಹಿಯಲ್ಲಿ ಹೇಮಾ ನಟಿಸುತ್ತಿದ್ದಾರೆ. ಅವರ ಪಾತ್ರಕ್ಕೆ ಪ್ರಾಮುಖ್ಯತೆ ಇದೆ.

    ಅಂದಹಾಗೆ, 5 ವರ್ಷಗಳ ಹಿಂದೆ ರಕ್ಷಾ ಬಂಧನ (Raksha Bandhana) ಎಂಬ ಸೀರಿಯಲ್ ಕಡೆಯದಾಗಿ ನಟಿ ಕಾಣಿಸಿಕೊಂಡಿದ್ದರು. ಈಗ ಮತ್ತೆ ‘ಕರಿಮಣಿ’ (Karimani) ಸೀರಿಯಲ್‌ಗೆ ಹೇಮಾ ಬಂದಿರೋದು ವಿಶೇಷ. ಇದನ್ನೂ ಓದಿ:ಡ್ರೋನ್ ಬಗ್ಗೆ ಕೆಟ್ಟದಾಗಿ ಮಾತನಾಡಿಲ್ಲ- ಫೇಕ್ ಪ್ರಮೋಟರ್ ವಿರುದ್ಧ ವಿನಯ್ ಕಿಡಿ

    ಹೇಮಾ ಪ್ರಭಾತ್ ಅವರು ಅದೆಷ್ಟೇ ಸಿನಿಮಾ ಮಾಡಿದ್ರು ಕೂಡ ಇಂದಿಗೂ ಅವರನ್ನು ಕರೆಯೋದು ರಮೇಶ್ ಅರವಿಂದ್ (Ramesh Aravind) ನಾಯಕಿ ಎಂದೇ ಹೈಲೆಟ್ ಆಗಿದ್ದಾರೆ. ‘ಅಮೆರಿಕಾ ಅಮೆರಿಕಾ’ ಚಿತ್ರದಲ್ಲಿ ಭೂಮಿಕಾ ಎಂಬ ಪಾತ್ರದಲ್ಲಿ ನಟಿಸಿದ್ದರು. ಈಗ ಮತ್ತೆ ಹೇಮಾ ಕಿರುತೆರೆ ಬಂದಿರೋದು ಫ್ಯಾನ್ಸ್‌ ಖುಷಿ ಕೊಟ್ಟಿದೆ.

  • ‘ಕರಿಮಣಿ’ ಕಥೆ ಹೇಳಲು ಸಜ್ಜಾದ ಸ್ಪಂದನಾ ಸೋಮಣ್ಣ

    ‘ಕರಿಮಣಿ’ ಕಥೆ ಹೇಳಲು ಸಜ್ಜಾದ ಸ್ಪಂದನಾ ಸೋಮಣ್ಣ

    ಟಿ ಸ್ಪಂದನಾ ಸೋಮಣ್ಣ (Spandana Somanna) ಅವರು ‘ಗೃಹಪ್ರವೇಶ’ ಸೀರಿಯಲ್ ಬಳಿಕ ‘ಕರಿಮಣಿ’ (Karimani) ಕಥೆ ಹೇಳಲು ಇದೀಗ ರೆಡಿಯಾಗಿದ್ದಾರೆ. ಸಿನಿಮಾ ಜೊತೆಗೆ ಕಿರುತೆರೆಯತ್ತ ನಟಿ ಮುಖ ಮಾಡಿದ್ದಾರೆ. ಇದನ್ನೂ ಓದಿ: ದರ್ಶನ್ ಜೊತೆಗಿನ ಸಮಸ್ಯೆ ಬೇಗ ಹುಡುಕಿಕೊಳ್ಳಿ ಅಂತಿದ್ದಾರೆ ಸುದೀಪ್ ಫ್ಯಾನ್ಸ್

    ಈ ಧಾರಾವಾಹಿಯಲ್ಲಿ ಎರಡು ಮನಸ್ಸುಗಳನ್ನು ಒಂದು ಮಾಡುವ ಈ ‘ಕರಿಮಣಿ’ ಧಾರಾವಾಹಿಯಲ್ಲಿ ನಾಯಕಿ ಹಾಗೂ ನಾಯಕ ಇಬ್ಬರ ಆಲೋಚನೆಗಳು ಡಿಫರೆಂಟ್ ಆಗಿದ್ದು,‌ ಮುಂದೆ ಇಬ್ಬರು ಹೇಗೆ ಒಂದಾಗುತ್ತಾರೆ ಎಂಬ ಕುತೂಹಲವಿದೆ. ಯಾಕೆಂದರೆ ಪ್ರೊಮೋದಲ್ಲೇ ನಾಯಕಿ ಸಾಹಿತ್ಯಳ ಮದುವೆ ನಡೆಯುತ್ತಿದ್ದು, ನಾಯಕ ಕರ್ಣ ಈ ಮದುವೆಯನ್ನು ತಡೆಯಬೇಕು ಎಂದು ಹೊರಟಿದ್ದಾನೆ.

    ಮನೆಗೆ ಹೆಣ್ಣು ಮಗಳ ಪ್ರಾಮುಖ್ಯತೆ ಎಷ್ಟಿರುತ್ತದೆ ಎಂಬುದು ತಿಳಿದಿರುವ ಕರ್ಣ, ಸಾಹಿತ್ಯ ಬಗ್ಗೆ ತಪ್ಪಾಗಿ ತಿಳಿದುಕೊಂಡಿದ್ದು, ಆಕೆ ಕೆಟ್ಟವಳು ಅವಳು ಮದುವೆಯಾಗಿ ಯಾರ ಮನೆಗೂ ಅನ್ಯಾಯವಾಗಬಾರದು ಎಂದಿದ್ದಾನೆ. ಸಾಹಿತ್ಯ ಮತ್ತು ಕರ್ಣ ಇಬ್ಬರ ಸಂಬಂಧವೇನು? ಇವರಿಬ್ಬರು ಕಥೆ ಏನು ಎಂಬುದು ಧಾರಾವಾಹಿ ಪ್ರಾರಂಭವಾದ ನಂತರವೇ ತಿಳಿಯಬೇಕಿದೆ. ಅಂದಹಾಗೆ, ವಾಹಿನಿಯಲ್ಲಿ ಪ್ರಸಾರ ಸಮಯ ಇನ್ನೂ ರಿವೀಲ್ ಮಾಡಿಲ್ಲ.

    ಮೈಸೂರಿನ ಬೆಡಗಿ ಸ್ಪಂದನಾಗೆ ನಾಯಕನಾಗಿ ಅಶ್ವಿನ್ ಕಾಣಿಸಿಕೊಂಡಿದ್ದಾರೆ. ಸದ್ಯ ‘ಕರಿಮಣಿ’ ಸೀರಿಯಲ್ ತುಣುಕು ಎಲ್ಲರ ಗಮನ ಸೆಳೆಯುತ್ತಿದೆ. ಇದನ್ನೂ ಓದಿ:ನಶೆಯ ನಾಕಾಶೆಯಲ್ಲಿ ‘ಸಾರಾಂಶ’ದ ನಿನಾದ

    ಸದ್ಯ ‘ಸ್ಪಂದನಾ’ ಕನ್ನಡ ಸಿನಿಮಾಗಳ ಜೊತೆ ಪರಭಾಷೆಯ ಸೀರಿಯಲ್‌ನಲ್ಲಿಯೂ ನಟಿಸಿ ಬಂದಿದ್ದಾರೆ. ಇದೀಗ ಒಂದಿಷ್ಟು ಸಿನಿಮಾ ಕಥೆಗಳು ಮಾತುಕತೆ ಹಂತದಲ್ಲಿದೆ. ಇದರ ನಡುವೆ ‘ಕರಿಮಣಿ’ ಸೀರಿಯಲ್ ಮೂಲಕ ಬರುತ್ತಿರೋ ಸ್ಪಂದನಾ ಪ್ರೇಕ್ಷಕರ ಮನಗೆಲ್ಲುತ್ತಾರಾ ಕಾಯಬೇಕಿದೆ.