Tag: ಕರಿ ಚಿರತೆ

  • ಜೋಗಕ್ಕೆ ಹೋಗುವ ಪ್ರವಾಸಿಗರೇ ಎಚ್ಚರವಾಗಿರಿ – ರಸ್ತೆಯಲ್ಲೇ ಹಸುವನ್ನು ಬೇಟೆಯಾಡಿದ ಕರಿ ಚಿರತೆ

    ಜೋಗಕ್ಕೆ ಹೋಗುವ ಪ್ರವಾಸಿಗರೇ ಎಚ್ಚರವಾಗಿರಿ – ರಸ್ತೆಯಲ್ಲೇ ಹಸುವನ್ನು ಬೇಟೆಯಾಡಿದ ಕರಿ ಚಿರತೆ

    ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರೇ ಎಚ್ಚರವಾಗಿರಿ. ಜೋಗ ಜಲಪಾತಕ್ಕೆ (Jog Falls) ಹೋಗುವ ರಸ್ತೆಯಲ್ಲೇ ಕರಿ ಚಿರತೆಯೊಂದು (Black Leopard)  ಹಸುವನ್ನು ಬೇಟೆಯಾಡಿದೆ.

    ಸಾಗರ ತಾಲೂಕಿನ ವಡನಬೈಲಿನಲ್ಲಿ ಕರಿ ಚಿರತೆ ಪ್ರತ್ಯಕ್ಷವಾಗಿದ್ದು, ಹಸುವನ್ನು ಬೇಟೆಯಾಡಿ ಪೊದೆಯೊಳಗೆ ಎಳೆದೊಯ್ದಿದೆ. ಇದನ್ನೂ ಓದಿ: US Presidential Debate| ಮೊದಲ ಬಾರಿಗೆ ಟ್ರಂಪ್‌, ಕಮಲಾ ಮುಖಾಮುಖಿ: ಆರ್ಥಿಕತೆ, ವಲಸೆ ಬಗ್ಗೆ ಚರ್ಚೆ

    ಕರಿಚಿರತೆ ಹಸುವನ್ನು ಬೇಟೆಯಾಡುತ್ತಿರುವ ದೃಶ್ಯ ಪ್ರವಾಸಿಗರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಪಿತೃಪಕ್ಷದಂದು ಧರ್ಮ ಸಂಕಟ – ಗಾಂಧಿ ಜಯಂತಿಯಂದು ಮಾಂಸ ಮಾರಾಟಕ್ಕೆ ಅನುಮತಿ ನೀಡುವಂತೆ ಮನವಿ

  • ಡಿ ಬಾಸ್ ಕ್ಯಾಮೆರಾ ಕಣ್ಣಲ್ಲಿ ಕರಿ ಚಿರತೆ ಸೆರೆ

    ಡಿ ಬಾಸ್ ಕ್ಯಾಮೆರಾ ಕಣ್ಣಲ್ಲಿ ಕರಿ ಚಿರತೆ ಸೆರೆ

    ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಗರಹೊಳೆಯಲ್ಲಿ ಮೂರು ದಿನ ಸಫಾರಿ ನಡೆಸಿದ್ದು, ವೈಲ್ಡ್ ಲೈಫ್ ಫೋಟೋಗ್ರಫಿ ನಡೆಸಿದ್ದಾರೆ. ಈ ವೇಳೆ ಕರಿ ಚಿರತೆ ಸೇರಿದಂತೆ ಅಪರೂಪದ ಚಿತ್ರಗಳನ್ನು ಸೆರೆ ಹಿಡಿದ್ದಾರೆ.

    ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ನಾಗರಹೊಳೆಯ ಕಬಿನಿ ವ್ಯಾಪ್ತಿಯಲ್ಲಿ ಡಿ ಬಾಸ್ ಸಫಾರಿ ನಡೆಸಿದ್ದು, ಈ ವೇಳೆ ಕರಿ ಚಿರತೆಯನ್ನು ಕ್ಯಾಮೆರಾ ಕಣ್ಣಲ್ಲಿ ಸೆರೆ ಹಿಡಿದಿದ್ದಾರೆ. ಕಳೆದ ಮೂರು ವರ್ಷಗಳಿಂದ ಕರಿ ಚಿರತೆ ದಾಸನ ಕ್ಯಾಮೆರಾ ಕಣ್ಣಿಗೆ ಬಿದ್ದಿರಲಿಲ್ಲ. ಇದೀಗ ಸೆರೆ ಹಿಡಿದಿದ್ದು, ಇದರಿಂದಾಗಿ ಡಿ ಬಾಸ್ ಫುಲ್ ಖುಷಿಯಾಗಿದ್ದಾರೆ. ಅಲ್ಲದೆ ಮೂರು ದಿನಗಳ ಕಾಲ ದರ್ಶನ್ ತಮ್ಮ ಸ್ನೇಹಿತರ ಜೊತೆ ನಾಗರಹೊಳೆಯಲ್ಲಿ ಭರ್ಜರಿ ಸಫಾರಿ ನಡೆಸಿದ್ದಾರೆ.

    ಸಫಾರಿ ವೇಳೆ ಮೂರು ಹುಲಿ, ಕರಿ ಚಿರತೆ, ಕಾಡು ನಾಯಿ, ಆನೆಗಳು ಕ್ಯಾಮರಾಕ್ಕೆ ಸೆರೆ ಸಿಕ್ಕಿವೆ. ಅದ್ಭುತ ಚಿತ್ರಗಳನ್ನು ತಮ್ಮ ಕ್ಯಾಮೆರಾ ಕಣ್ಣಿನಲ್ಲಿ ದರ್ಶನ್ ಸೆರೆ ಹಿಡಿದಿದ್ದಾರೆ. ಅದರಲ್ಲೂ ಕರಿ ಚಿರತೆ ಸಿಕ್ಕಿದ್ದಕ್ಕೆ ಫುಲ್ ಖುಷಿಯಾಗಿದ್ದಾರೆ. ಡಿ ಬಾಸ್ ತಮ್ಮ ಸ್ನೇಹಿತರ ಜೊತೆ ನಾಗರಹೊಳೆಯಲ್ಲಿ ಆಗಾಗ ಸಫಾರಿ ಮಾಡುತ್ತಲೇ ಇರುತ್ತಾರೆ. ಮೊನ್ನೆಯಷ್ಟೇ ಹುಲಿಯ ಚಿತ್ರಗಳನ್ನು ಸೆರೆ ಹಿಡಿಯುತ್ತಿದ್ದ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು.

    ಕಾಡಿನ ದಾರಿಯಲ್ಲಿ ಹುಲಿ ಭರ್ಜರಿಯಾಗಿ ಘರ್ಜಿಸುತ್ತಿದ್ದ ವೇಳೆ ದರ್ಶನ್ ಚಿತ್ರಗಳನ್ನು ಸೆರೆ ಹಿಡಿದಿದ್ದರು. ವೈನ್ಯ ಜೀವಿಗಳ ಬಗ್ಗೆ ಅಪಾರ ಕಾಳಜಿ ಹೊಂದಿರುವ ದರ್ಶನ್, ತುಂಬಾ ಪ್ರೀತಿಸುತ್ತಾರೆ. ಹೀಗಾಗಿ ಆಗಾಗ ಸಫಾರಿ ಹೋಗುತ್ತಲೇ ಇರುತ್ತಾರೆ. ಅಲ್ಲದೆ ವೈಲ್ಡ್ ಲೈಫ್ ಫೋಟೋಗ್ರಫಿ ಸಹ ಅವರಿಗೆ ಎಲ್ಲಿಲ್ಲದ ಪ್ರೀತಿ ಎಂಬುದು ತಿಳಿದಿರುವ ವಿಚಾರವಾಗಿದೆ.

    ಶೂಟಿಂಗ್‍ನಿಂದ ಬಿಡುವು ಸಿಕ್ಕಾಗಲೆಲ್ಲ ದರ್ಶನ್ ಮೈಸೂರಿನ ತಮ್ಮ ಫಾರ್ಮ್ ಹೌಸ್‍ನಲ್ಲೇ ಕಾಲ ಕಳೆಯುತ್ತಾರೆ. ಸಾಕು ಪ್ರಾಣಿಗಳು ಹಾಗೂ ಹಸುಗಳ ಜೊತೆಯೇ ಇರುತ್ತಾರೆ. ಅಲ್ಲದೆ ಸಮಯ ಸಿಕ್ಕಾಗಲೆಲ್ಲ ಅರಣ್ಯಕ್ಕೆ ತೆರಳಿ ವೈಲ್ಡ್ ಲೈಫ್ ಫೋಟೋಗ್ರಫಿ ಮಾಡುತ್ತಿರುತ್ತಾರೆ. ಇತ್ತೀಚೆಗಷ್ಟೇ ತಮ್ಮ ಸ್ನೇಹಿತರ ಬಳಗದೊಂದಿಗೆ ಬೈಕ್‍ನಲ್ಲಿ ಲಾಂಗ್ ರೈಡ್ ಹೋಗಿದ್ದರು. ಇದೀಗ ನಾಗರಹೊಳೆಗೆ ತೆರಳಿದ್ದಾರೆ.

    ಕೆಲವು ದಿನಗಳ ಹಿಂದೆ ಕಿನ್ಯಾಡಿ ಕಾಡಿಗೆ ಹೋಗಿದ್ದ ದರ್ಶನ್, ಪ್ರಾಣಿ, ಪಕ್ಷಿಗಳ ಫೋಟೋವನ್ನು ಕ್ಯಾಮೆರಾ ಕಣ್ಣಲ್ಲಿ ಸೆರೆಹಿಡಿದಿದ್ದರು. ಇದೀಗ ನಾಗರಹೊಳೆ ಅಭಯಾರಣ್ಯದಲ್ಲಿ ಬೀಡು ಬಿಟ್ಟು ವಿವಿಧ ರೀತಿಯ ಕಾಡು ಪ್ರಾಣಿಗಳ ಚಿತ್ರಗಳನ್ನು ಕ್ಲಿಕ್ಕಿಸಿದ್ದಾರೆ. ಕ್ಯಾಮೆರಾ ಹೆಗಲಿಗೆ ಹಾಕಿಕೊಂಡು ಫೋಟೋ ತೆಗೆಯುತ್ತಾ ಸಫಾರಿಯನ್ನು ಎಂಜಾಯ್ ಮಾಡಿದ್ದಾರೆ. ದರ್ಶನ್ ಸಧ್ಯ ಬಹುನಿರೀಕ್ಷಿತ ರಾಬರ್ಟ್ ಸಿನಿಮಾದ ಚಿತ್ರೀಕರಣ ಮುಗಿಸಿದ್ದು, ಬಿಡುಗಡೆಗಾಗಿ ಎದುರು ನೋಡುತ್ತಿದ್ದಾರೆ.

  • ಬಲು ಅಪರೂಪದ ಕರಿ ಚಿರತೆ ಪತ್ತೆ

    ಬಲು ಅಪರೂಪದ ಕರಿ ಚಿರತೆ ಪತ್ತೆ

    ಕಾರವಾರ: ಬಲು ಅಪರೂಪದ ಕರಿ ಚಿರತೆಯೊಂದು ಉತ್ತರ ಕನ್ನಡ ಜಿಲ್ಲೆ ಜೋಯಿಡಾದ ಡಿಗ್ಗಿಯ ರಸ್ತೆ ಬಳಿ ಪ್ರತ್ಯಕ್ಷವಾಗಿದೆ.

    ಜೋಯಿಡಾದ ಕಾಳಿ ರಕ್ಷಿತ ಪ್ರದೇಶದಲ್ಲಿ ಕರಿ ಚಿರತೆ ಹೆಚ್ಚಾಗಿದ್ದು, ಈವರೆಗೂ ಸಾರ್ವಜನಿಕರಿಗೆ ಪ್ರತ್ಯಕ್ಷವಾಗಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ರಸ್ತೆ ಬಳಿ ರಾತ್ರಿ ವೇಳೆ ಪ್ರತ್ಷಕ್ಷವಾಗಿದ್ದು, ಅಲ್ಲಿನ ಜನರನ್ನು ನಿಬ್ಬೆರಗುಗೊಳಿಸಿದೆ.

    ಪ್ರಯಾಣಿಕರು ರಕ್ಷಿತ ಪ್ರದೇಶದ ದಾರಿಯಲ್ಲಿ ಹೋಗುತ್ತಿದ್ದಾಗ ಚಿರತೆ ಕಾಡಿನಿಂದ ಬಂದು ರಸ್ತೆ ಬದಿ ಕುಳಿತಿದೆ. ಇದನ್ನು ನೋಡಿದ ತಕ್ಷಣ ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಪ್ರಯಾಣಿಕರು ದೂರದಿಂದಲೇ ಕರಿ ಚಿರತೆಯ ವಿಡಿಯೋ ಮಾಡಿದ್ದಾರೆ.

    ಅದು ಕೂಡ ಕ್ಯಾಮೆರಾಗೆ ಪೋಸ್ ಕೊಡುವ ರೀತಿ ಏನು ತೊಂದರೆ ಮಾಡದೆ ಸುಮ್ಮನೆ ಕುಳಿತ್ತಿತ್ತು. ಬಳಿಕ ಸ್ವಲ್ಪ ಹತ್ತಿರ ಹೋಗುತ್ತಿದ್ದಂತೆ ಭಯಗೊಂಡು ಕರಿ ಚಿರತೆ ಕಾಡಿನೊಳಗೆ ಓಡಿ ಹೋಗಿ ಅವಿತು ಕುಳಿತುಕೊಂಡಿದೆ. ಇದೆಲ್ಲವನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಸದ್ಯಕ್ಕೆ ಚಿರತೆ ಪ್ರಯಾಣಿಕರಿಗೆ ಯಾವುದೇ ತೊಂದರೆಯನ್ನು ಮಾಡಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 22 ಆಡು, ಹತ್ತಾರು ಹಸುಗಳನ್ನು ಭಕ್ಷಿಸಿದ್ದ ಕರಿ ಚಿರತೆ ಸೆರೆ

    22 ಆಡು, ಹತ್ತಾರು ಹಸುಗಳನ್ನು ಭಕ್ಷಿಸಿದ್ದ ಕರಿ ಚಿರತೆ ಸೆರೆ

    ಉಡುಪಿ: 22 ಆಡು, ಹತ್ತಾರು ಹಸುಗಳನ್ನು ಭಕ್ಷಿಸಿ, ಜಿಲ್ಲೆಯ ಬೈಂದೂರು ತಾಲೂಕಿನ ಮುದೂರು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಕರಿ ಚಿರತೆಯನ್ನು ಮಂಗಳವಾರ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.

    ಸುಮಾರು ದಿನಗಳಿಂದ ಮುದೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಕರಿ ಚಿರತೆ ಬೀಡು ಬಿಟ್ಟಿತ್ತು. ಇದೇ ಗ್ರಾಮದ ಮರ್ಕಡಿ ಜೋಸ್ ಎಂಬವರು ಸಾಕಿದ್ದ ಸುಮಾರು 22 ಮೇಕೆಗಳನ್ನು ಹಿಡಿದು ತಿಂದಿತ್ತು. ಅಲ್ಲದೇ ಹಸುಗಳನ್ನು ಬೇಟೆಯಾಡಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು.

    ಮರ್ಕಡಿ ಜೋಸ್ ಅವರು ಸಾಕಿದ್ದ ಮೇಕೆಗಳನ್ನು ಕೆಲವು ದಿನಗಳಿಂದ ಒಂದರಂತೆ ಎಳೆದುಕೊಂಡು ಹೋಗುತ್ತಿತ್ತು. ಈ ಕುರಿತು ಮರ್ಕಡಿ ಜೋಸ್ ಅವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಅದರಂತೆಯೇ ಕುಂದಾಪುರ ವಲಯಾರಣ್ಯಾಧಿಕಾರಿ ಶರತ್ ಶೆಟ್ಟಿ ನೇತೃತ್ವದಲ್ಲಿ ಜೋಸ್ ಅವರ ಮನೆಯ ಹತ್ತಿರದ ತೋಟದಲ್ಲಿ ಬೋನು ಇಟ್ಟುದ್ದರು. ಹೀಗಾಗಿ ಮಂಗಳವಾರ ಚಿರತೆ ಬೋನ್‍ಗೆ ಬಿದ್ದಿದೆ.

    ಈ ಭಾಗದ ಜನರು ಹಿಂದೆಂದು ಕರಿ ಚಿರತೆ ನೋಡಿರಲಿಲ್ಲ. ಹೀಗಾಗಿ ಅದನ್ನು ನೋಡಲು ಮುಗಿಬಿದ್ದಿದ್ದರು. ಅರಣ್ಯ ಇಲಾಖೆ ಸಿಬ್ಬಂದಿ, ಮುದೂರು ವನಪಾಲಕರಾದ ಸಂತೋಷ ಹಾಗೂ ಗ್ರಾಮಸ್ಥರು ಚಿರತೆಯನ್ನು ವಾಹನಕ್ಕೆ ಸಾಗಿಸಿದರು. ಸೆರೆ ಸಿಕ್ಕ ಕರಿ ಚಿರತೆಯನ್ನು ಸುರಕ್ಷಿತ ತಾಣಕ್ಕೆ ಕೊಂಡೊಯ್ದು ಬಿಡುವುದಾಗಿ ಕುಂದಾಪುರ ವಲಯಾರಣ್ಯಾಧಿಕಾರಿ ಶರತ್ ಶೆಟ್ಟಿ ಹೇಳಿದರು.

    ಮುದೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಹಾಗೂ ಹುಲಿಗಳ ಕಾಟ ಹೆಚ್ಚಾಗಿದೆ. ಪ್ರತಿ ದಿನ ಒಬ್ಬೊಬ್ಬರ ಮನೆಯಿಂದ ಹಸು ಮೇಕೆ ಕಾಣೆಯಾಗುತ್ತಿವೆ. ಅಲ್ಲದೇ ಗ್ರಾಮಸ್ಥರಲ್ಲಿ ಭಯದ ವಾತಾವರಣ ಉಂಟಾಗಿದ್ದು, ಹಸು ಮೇಕೆಗಳನ್ನು ಸಾಕಿಕೊಂಡು ಹೈನುಗಾರಿಕೆ ಮಾಡುತ್ತಿರುವವರ ಜೀವನ ಕಷ್ಟವಾಗುತ್ತಿದೆ. ಇದಕ್ಕೆ ಅಗತ್ಯ ಕ್ರಮವಹಿಸಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.