Tag: ಕರ್ಜಗಿ

  • ತಂಬಾಕು ಸೇವನೆ ಬಿಡುವಂತೆ ಬುದ್ಧಿವಾದ – ಯುವತಿ ನೇಣಿಗೆ ಶರಣು

    ತಂಬಾಕು ಸೇವನೆ ಬಿಡುವಂತೆ ಬುದ್ಧಿವಾದ – ಯುವತಿ ನೇಣಿಗೆ ಶರಣು

    ಹಾವೇರಿ: ತಂಬಾಕು (Tobacco) ಸೇವನೆ ಬಿಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ನೇಣಿಗೆ ಶರಣಾದ ಘಟನೆ ಹಾವೇರಿ (Haveri) ತಾಲೂಕಿನ ಕರ್ಜಗಿ (Karjagi) ಗ್ರಾಮದ ರೈಲ್ವೆ ಸ್ಟೇಷನ್ ಬಳಿ ನಡೆದಿದೆ.

    ಮೃತ ಯುವತಿಯನ್ನು ಬೀಬಿಜಾನ್ ಸೊಂಡಿ (18) ಎಂದು ಗುರುತಿಸಲಾಗಿದೆ. ಮನೆಗೆಲಸ ಮಾಡುತ್ತಿದ್ದ ಯುವತಿ ಕಳೆದ ಕೆಲವು ದಿನಗಳಿಂದ ತಂಬಾಕು ಸೇವನೆ ಚಟಕ್ಕೆ ಅಂಟಿಕೊಂಡಿದ್ದಳು. ತಂಬಾಕು ಸೇವನೆ ಮಾಡುವುದನ್ನು ಬಿಡುವಂತೆ ಬೀಬಿಜಾನ್‌ಗೆ ತಂದೆ ತಾಯಿ ಬುದ್ಧಿವಾದ ಹೇಳಿದ್ದರು. ತಂದೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಯುವತಿ ನೇಣಿಗೆ ಶರಣಾಗಿದ್ದಾಳೆ. ಇದನ್ನೂ ಓದಿ: ಜನರ ನಂಬಿಕೆಯನ್ನು ಉಳಿಸಿದರೆ ಚಾನೆಲ್‌ ಗಟ್ಟಿಯಾಗಿ ನಿಲ್ಲುತ್ತದೆ: ಡಿಕೆ ಶಿವಕುಮಾರ್‌

    ಮನೆಯಲ್ಲೇ ಯುವತಿ ನೇಣಿಗೆ ಶರಣಾಗಿದ್ದಾಳೆ. ಘಟನೆ ಸಂಬಂಧ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಭಾರತೀಯ ಸೇನೆಯ ಅವಹೇಳನ ಆರೋಪ – ರಾಹುಲ್ ಗಾಂಧಿಗೆ ಲಕ್ನೋ ಕೋರ್ಟ್‌ ಸಮನ್ಸ್

  • Haveri | ವರದಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು

    Haveri | ವರದಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು

    ಹಾವೇರಿ: ನದಿಗೆ ಈಜಲು ತೆರಳಿದ್ದ ಯುವಕನೋರ್ವ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಹಾವೇರಿ (Haveri) ತಾಲೂಕಿನ ಕರ್ಜಗಿ (Karjagi) ಗ್ರಾಮದ ಬಳಿಯ ವರದಾ ನದಿಯಲ್ಲಿ  (Varada River) ನಡೆದಿದೆ.

    ಮೃತ ಯುವಕನನ್ನು ಕಾರ್ತಿಕ್ (18) ಎಂದು ಗುರುತಿಸಲಾಗಿದೆ. ವರದಾ ನದಿಗೆ ಈಜಲು ತೆರಳಿದ್ದ ವೇಳೆ ನದಿಯಲ್ಲಿದ್ದ ಮುಳ್ಳುಕಂಟೆಗೆ ಸಿಲುಕಿ ಯುವಕ ಮೃತಪಟ್ಟಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ನುರಿತ ಈಜು ತಜ್ಞ ಸಿದ್ದು ಚರಂತಿಮಠ ನಿರಂತರವಾಗಿ ಹನ್ನೆರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಯುವಕನ ಮೃತದೇಹವನ್ನು ಹೊರತೆಗೆದಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ನೀಡಿ ಇತಿಹಾಸ ಸೃಷ್ಟಿಸಿದ ಕರ್ನಾಟಕ ಹೈಕೋರ್ಟ್

    ಬುಧವಾರ ಮಧ್ಯಾಹ್ನ ನದಿಗೆ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ. ನಿರಂತರ ಕಾರ್ಯಾಚರಣೆ ನಡೆಸಿ ಗುರುವಾರ ಸಂಜೆ ಯುವಕನ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಾವೇರಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ದಾಖಲಿಸಲಾಗಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡು, ಕೇರಳ, ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ

  • ರೈಲ್ವೇ ಸ್ಟೇಷನಲ್ಲಿ ಪರಿಚಯವಾಗಿ ಲಾಡ್ಜ್ ನಲ್ಲಿ ರೇಪ್ ಮಾಡ್ದ – ಬೆಂಗಳೂರು ಮಹಿಳೆಗೆ ಮೋಸ ಮಾಡಿದ ಕಾಮುಕ

    ರೈಲ್ವೇ ಸ್ಟೇಷನಲ್ಲಿ ಪರಿಚಯವಾಗಿ ಲಾಡ್ಜ್ ನಲ್ಲಿ ರೇಪ್ ಮಾಡ್ದ – ಬೆಂಗಳೂರು ಮಹಿಳೆಗೆ ಮೋಸ ಮಾಡಿದ ಕಾಮುಕ

    ಬೆಂಗಳೂರು: ರೈಲು ನಿಲ್ದಾಣದಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು 25 ವರ್ಷದ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಈ ದೂರಿನ ಆಧಾರದಲ್ಲಿ ನಗರದ ಕಾಟನ್ ಪೇಟೆ ಪೊಲೀಸರು ಹಾವೇರಿಯ ವ್ಯಾಪಾರಿಯೊಬ್ಬನನ್ನು ಬಂಧಿಸಿದ್ದಾರೆ. ಅತ್ಯಾಚಾರ ಬೆಂಗಳೂರಿನಲ್ಲಿ ನಡೆದ ಕಾರಣ ಪ್ರಕರಣ ಈಗ ಬೆಂಗಳೂರಿನ ಕಾಟನ್ ಪೇಟೆ ಠಾಣೆಗೆ ವರ್ಗಾವಣೆಯಾಗಿದ್ದು ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.

    ಘಟನೆ ವಿವರ: ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ವಾಸವಾಗಿರುವ ಈ ಮಹಿಳೆ ಕೆಲ ತಿಂಗಳ ಹಿಂದೆ ಹಾವೇರಿಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ರೈಲಿನಲ್ಲಿ ಹೊರಟಿದ್ದಾಳೆ. ಹಾವೇರಿಯ ಕರಜಗಿಯ ರೈಲು ನಿಲ್ದಾಣದಲ್ಲಿ ಈ ಮಹಿಳೆಗೆ ಮರಿಕುಮಾರ್ ಎಂಬಾತನ ಪರಿಚಯವಾಗಿದೆ. ಮಾತುಕತೆ ವೇಳೆ ಈತ ನಾನು ದಿನಸಿ ಅಂಗಡಿಗಳಿಗೆ ವಸ್ತುಗಳನ್ನು ಪೂರೈಸುವ ಬ್ಯುಸಿನೆಸ್‍ಮ್ಯಾನ್ ಎಂದು ಪರಿಚಯಿಸಿಕೊಂಡಿದ್ದಾನೆ. ಇದಾದ ಬಳಿಕ ಇಬ್ಬರೂ ಫೋನಲ್ಲಿ ಮಾತುಕತೆ ಮುಂದುವರೆಸಿದ್ದಾರೆ.

    ಅಕ್ಟೋಬರ್ 4ರಂದು ಆರೋಪಿ ಮರಿಕುಮಾರ್ ಶಂಕರ್ ಕರಡಗಿ ಮಹಿಳೆಗೆ ಫೋನ್ ಮಾಡಿ ಯಶವಂತಪುರ ರೈಲು ನಿಲ್ದಾಣದಲ್ಲಿ ಭೇಟಿಯಾಗುವಂತೆ ಹೇಳುತ್ತಾನೆ. ಈ ಮಹಿಳೆಗೆ ಈಗಾಗಲೇ ಮದುವೆಯಾಗಿ ಇಬ್ಬರು ಮಕ್ಕಳು ಇದ್ದಾರೆ. ಯಶವಂತಪುರ ರೈಲು ನಿಲ್ದಾಣಕ್ಕೆ ಬಂದ ಮಹಿಳೆಯನ್ನು ಆತ ನಿನ್ನ ಬಳಿ ನನಗೆ ಕೆಲವು ವಿಚಾರ ಮಾತನಾಡುವುದು ಇದೆ ಎಂದು ಹೇಳಿ ಆಕೆಯನ್ನು ಕಾಟನ್ ಪೇಟೆಯಲ್ಲಿರುವ ಲಾಡ್ಜ್ ಗೆ ಕರೆದೊಯ್ದಿದ್ದಾನೆ. ಲಾಡ್ಜ್ ನಲ್ಲಿ ಆತ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಕಾಟನ್ ಪೇಟೆ ಪೊಲೀಸರು ಹೇಳಿದ್ದಾರೆ.

    ಇದಾದ ಬಳಿಕ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿರುವ ತನ್ನ ಸಂಬಂಧಿಕರ ಮನೆಗೂ ಬರಬೇಕೆಂದು ಬೆದರಿಕೆ ಹಾಕಿದ್ದಾನೆ. ಚಿಕ್ಕನಾಯಕನಹಳ್ಳಿಯಲ್ಲಿಯೂ ನನ್ನ ಮೇಲೆ ಅತ್ಯಾಚಾರ ನಡೆಸಿ ಬಳಿಕ ಆತ ನನ್ನನ್ನು ಹಾವೇರಿಗೆ ಕರೆತಂದಿದ್ದಾನೆ. ಅಲ್ಲಿ ಮರಿಕುಮಾರ್ ಸಹೋದರ ಹಾಗೂ ಸಂಬಂಧಿಕರು ಮರಿಕುಮಾರ್ ಮನೆಯಲ್ಲಿಯೇ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅತ್ಯಾಚಾರಕ್ಕೀಡಾದ ಮಹಿಳೆ ಹಾವೇರಿ ಗ್ರಾಮಾಂತರ ಪೊಲೀಸರಿಗೆ ಅಕ್ಟೋಬರ್ 30ರಂದು ನೀಡಿದ ದೂರಿನಲ್ಲಿ ಹೇಳಿಕೊಂಡಿದ್ದಾಳೆ.

    ಹಾವೇರಿಯಲ್ಲಿ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ನಾವು ಮರಿಕುಮಾರನನ್ನು ಹಾವೇರಿಯ ಮನೆಯಲ್ಲಿ ಬಂಧಿಸಿದ್ದೇವೆ. ಆತ ಈಗ ನ್ಯಾಯಾಂಗ ವಶದಲ್ಲಿದ್ದಾನೆ. ಬೆಂಗಳೂರಿನ ಕಾಟನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿರುವುದರಿಂದ ನಾವು ಪ್ರಕರಣವನ್ನು ಕಾಟನ್ ಪೇಟೆ ಠಾಣೆಗೆ ವರ್ಗಾಯಿಸಿದ್ದೇವೆ ಎಂದು ಹಾವೇರಿ ಪೊಲೀಸರು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳು ನಮ್ಮ ಕೈಸೇರಿದ್ದು ನಾವು ಪ್ರಕರಣದ ತನಿಖೆಯನ್ನು ಮುಂದುವರಿಸುತ್ತೇವೆ ಎಂದು ಕಾಟನ್ ಪೇಟೆ ಪೊಲೀಸರು ಹೇಳಿದ್ದಾರೆ.