Tag: ಕರ್ನಾಟಕ ಕಾಂಗ್ರೆಸ್

  • ರಾಜ್ಯದ ಜನತೆಯ ಭಾವನೆ ಹೇಗಿದೆ ಅನ್ನೋದಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಸಾಕ್ಷಿ: ಡಿಕೆಶಿ

    ರಾಜ್ಯದ ಜನತೆಯ ಭಾವನೆ ಹೇಗಿದೆ ಅನ್ನೋದಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಸಾಕ್ಷಿ: ಡಿಕೆಶಿ

    ಬೆಂಗಳೂರು: ಇದು ಕಾಂಗ್ರೆಸ್ ಗೆಲುವಿನ ಜೊತೆಗೆ ಜನರ ಗೆಲುವು. ಹಳ್ಳಿಜನ ಅಷ್ಟೇ ಅಲ್ಲ. ಪಟ್ಟಣದ ಜನರ ಒಲವು ಕಾಂಗ್ರೆಸ್ ಕಡೆಗೆ ವಾಲುತ್ತಿದೆ. ರಾಜ್ಯದ ಜನತೆಯ ಭಾವನೆ ಹೇಗಿದೆ ಅನ್ನೋದಕ್ಕೆ ಇದು ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

    ಈ ಕುರಿತಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರ ಇದ್ದಾಗ ಶಾಸಕರಿಗೆ ಸಹಜವಾಗಿ  ಹೆಚ್ಚಿನ ಅವಕಾಶ ಇರುತ್ತದೆ. ಆದರೆ ಅದನ್ನು ಮೀರಿ ಜನ ನಮ್ಮ ಕಡೆ ಒಲವು ತೋರಿದ್ದಾರೆ. ಜನ ನಮ್ಮ ಮೇಲೆ ವಿಶ್ವಾಸ ಇಡುತ್ತಿದ್ದಾರೆ. ಅವರ ವಿಶ್ವಾಸ ಉಳಿಸುವಂತ ಆಡಳಿತ ಮುಂದಿನ ದಿನಗಳಲ್ಲಿ ಕೊಡುತ್ತೇವೆ ಎಂದು ಹೇಳಿದರು.

    ಐಟಿ, ಇಡಿ, ಬೇನಾಮಿ ಆಸ್ತಿ ವಿಚಾರದಲ್ಲಿ ಏನೇನು ಆಗುತ್ತಿದೆ. ದೆಹಲಿ ಮಟ್ಟದಲ್ಲಿ ಏನೇನು ಆಗುತ್ತಿದೆ ಎಲ್ಲಾ ಗೊತ್ತಿದೆ. ಯಾರ್ಯಾರು ದೆಹಲಿಗೆ ಹೋಗಿ ಏನು ಮಾಡುತ್ತಿದಾರೆ ಎಲ್ಲಾ ಗೊತ್ತಿದೆ. ಸಿಎಂ, ಸಚಿವರು, ಶಾಸಕರು ಅವರ ಕ್ಷೇತ್ರದಲ್ಲೆಲ್ಲಾ ಏನೇನಾಗಿದೆ ಎಲ್ಲಾ ಗೊತ್ತಿದೆಯಲ್ಲ ಎಂದರು.  ಇದನ್ನೂ ಓದಿ: ಸರ್ಕಾರಿ ನಿಯಂತ್ರಣದಿಂದ ದೇಗುಲಗಳಿಗೆ ಸ್ವಾತಂತ್ರ್ಯ: ಸಿಎಂ ನಿಲುವು ಸ್ವಾಗತಿಸಿದ ಮಂತ್ರಾಲಯ ಶ್ರೀ

    Koo App

    ರಾಜ್ಯದಲ್ಲಿ ಕಾಂಗ್ರೆಸ್‌ ಅಲೆ ಇದೆ ಎಂಬುದು ಈಚಿನ ಚುನಾವಣೆಗಳ ಫಲಿತಾಂಶವೇ ಸಾಕ್ಷಿ. ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಇದಕ್ಕೆ ಪೂರಕ ಎನ್ನುವಂತಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸುವುದರಲ್ಲಿ ಸಂಶಯವಿಲ್ಲ. ಅಪಾರ ಜನಪರ ಬೆಂಬಲ ನಮ್ಮ ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ರಾಜ್ಯದ ಮತದಾರರಿಗೆ ಧನ್ಯವಾದಗಳು. 1/2

    D K Shivakumar (@dkshivakumar_official) 30 Dec 2021

    ಕುಮಾರಸ್ವಾಮಿ ಮಕ್ಮಲ್ ಟೋಪಿ ಎಂಬ ಹೇಳಿಕೆ ಕುರಿತಂತೆ ಮಾತನಾಡಿದ ಅವರು, ಟೋಪಿ ಹಾಕಲಿ. ನಾನು ಡೈಲಿ ಪಾದಯಾತ್ರೆಗೆ ಪ್ರಾಕ್ಟೀಸ್ ಮಾಡುತ್ತಿದ್ದೇನೆ. ಹೊಸ ಶೂ ತಗೆದುಕೊಂಡಿದ್ದೇನೆ ಎಂದು ತಮ್ಮ ಶೂ ಕಡೆ ನೋಡಿಕೊಂಡು ಹೆಚ್‍ಡಿಕೆ ಬಗ್ಗೆ ವ್ಯಂಗ್ಯವಾಡಿದರು.

    ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಡಿ.27ರಂದು ಚುನಾವಣೆ ನಡೆದಿತ್ತು. 58 ಪುರಸಭೆ, 57 ಗ್ರಾಮ ಪಂಚಾಯಿತಿಗಳಿಗೆ ನಡೆದ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಹೆಚ್ಚಿನ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ. ಹಲವು ಕಡೆ ಇನ್ನೂ ಮತ ಎಣಿಕೆ ನಡೆಯುತ್ತಿದೆ. ಇದನ್ನೂ ಓದಿ:  ಪಾದಯಾತ್ರೆಗೆ ಭಾಗವಹಿಸಿ ಏನು ಮಾಡಲಿ ಹೇಳಿ: ಡಿಕೆಶಿಗೆ ಟಾಂಗ್ ಕೊಟ್ಟ HDK

  • ಧರ್ಮಜೋಡನೆ ಮಾಡಿದ್ದೆ ಪರಿಷತ್ ಟಿಕೆಟ್ ಪಡೆಯಲು ಮುಳುವಾಯಿತಾ: ಎಸ್.ಆರ್. ಪಾಟೀಲ್

    ಧರ್ಮಜೋಡನೆ ಮಾಡಿದ್ದೆ ಪರಿಷತ್ ಟಿಕೆಟ್ ಪಡೆಯಲು ಮುಳುವಾಯಿತಾ: ಎಸ್.ಆರ್. ಪಾಟೀಲ್

    ಬಾಗಲಕೋಟೆ: ಧರ್ಮಜೋಡಣೆ ಮಾಡಿದ್ದು ಟಿಕೆಟ್ ಕೈತಪ್ಪಲು ಕಾರಣವಾಯಿತಾ ಅಥವಾ ಧರ್ಮ ವಿಭಜನೆ ಮಾಡಿದವರಿಗೆ ಟಿಕೆಟ್ ಸಿಕ್ಕಿದೆಯಾ ಎಂಬ ಕಾರಣ ಗೊತ್ತಿಲ್ಲ ಎಂದು ಎಸ್.ಆರ್. ಪಾಟೀಲ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಆದೇಶದಂತೆ ಅಂದಾಜು 200 ಮಠಾಧೀಶರನ್ನು ಭೇಟಿಯಾಗಿ, ಆಶಿರ್ವಾದ ಪಡೆದು ಪಕ್ಷ ಹೇಳಿದಂತೆ ನಡೆದುಕೊಂಡಿದ್ದೆ. ಆದರೂ ಪರಿಷತ್ ಟಿಕೆಟ್ ಏಕೆ ಕೈತಪ್ಪಿದೆ ಎಂಬುದೆ ನನಗೆ ಯಕ್ಷಪ್ರಶ್ನೆಯಾಗಿ ಉಳಿದಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ಪಕ್ಷದ ಆದೇಶದಂತೆ ಧರ್ಮ ಒಗ್ಗೂಡಿಸಲು, ಮಠ ಮಾನ್ಯಗಳಿಗೆ ಭೇಟಿ ನೀಡಿದ್ದೇನೆ. ಆದರೆ ಧರ್ಮ ವಿಭಜನೆ ಮಾಡಿದವರಿಗೆ ಟಿಕೆಟ್ ನೀಡಿದಂತೆ ಮೇಲ್ನೋಟಕ್ಕೆ ಕಾಣುತ್ತಿರಬಹುದು ಎನ್ನುವ ಮೂಲಕ ಎಂ.ಬಿ ಪಾಟೀಲ್ ಸಹೋದರ ಸುನೀಲ್ ಪಾಟೀಲ್ ಅವರಿಗೆ ಟಿಕೆಟ್ ನೀಡಿರುವ ಕುರಿತು ಪರೋಕ್ಷ ಅಸಮಾಧಾನ ಹೊರ ಹಾಕಿದರು. ಇದನ್ನೂ ಓದಿ: ಯಾರೂ ತಿರುಕನ ಕನಸು ಕಾಣೋದು ಬೇಡ: ಆರ್. ಅಶೋಕ್

    ಮುಂದಿನ ದಿನಗಳಲ್ಲಿ ಯಾರು, ಯಾವ ಕಾರಣಕ್ಕೆ ನನಗೆ ಪರಿಷತ್ ಟಿಕೆಟ್ ತಪ್ಪಿಸಿದ್ದಾರೆಂಬುದು ತಿಳಿಯುತ್ತದೆ. ಟಿಕೆಟ್ ಕೈತಪ್ಪಿದ ನಂತರ ಈ ಕುರಿತಾಗಿ ಸಿದ್ದರಾಮಯ್ಯ ನನ್ನ ಜೊತೆ ಮಾತಾಡಿಲ್ಲ. ಅವರು ಯಾವುದೋ ಕೆಲಸದಲ್ಲಿರಬಹುದು. ಮುಂದಿನ ದಿನಗಳಲ್ಲಿ ಮಾತನಾಡಬಹುದು ಎಂದು ತಿಳಿಸಿದರು.

    ಕಾಂಗ್ರೆಸ್ ಮುಖಂಡ ಎಸ್.ಆರ್ ಪಾಟೀಲ್ ಅವರಿಗೆ ಪರಿಷತ್ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೆ ಬಾಗಲಕೋಟೆ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಎಸ್‍ಆರ್‍ಪಿ ಅಭಿಮಾನಿಗಳು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿಗೆ ಪತ್ರ ಬರೆದು ಪತ್ರ ಚಳುವಳಿ ನಡೆಸಿದ್ದರು. ಇದನ್ನೂ ಓದಿ: ಶುಭಾ ಪೂಂಜಾ ನ್ಯೂ ಹೇರ್ ಸ್ಟೈಲ್‍ಗೆ ದಿವ್ಯಾ ಕಾಮೆಂಟ್

  • “ಸರ್, ವಿ ಅರ್ ಹೆಲ್ಪ್ ಲೆಸ್ ಬಿಟ್ಟು ಬಿಡಿ”

    “ಸರ್, ವಿ ಅರ್ ಹೆಲ್ಪ್ ಲೆಸ್ ಬಿಟ್ಟು ಬಿಡಿ”

    ಬೆಂಗಳೂರು: ಕಣ್ಣೆದುರೆ ಎಲ್ಲಾ ನಡೆಯುತ್ತಿದ್ದರೂ ಏನು ಗೊತ್ತೆ ಇಲ್ಲ ಎಂಬಂತೆ ಸೈಲೆಂಟಾಗಿರುವ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈ ಕಮಾಂಡ್ ಕಿವಿ ಹಿಂಡಿದೆ. ಸ್ವತಃ ಹೈಕಮಾಂಡ್ ನಾಯಕರು ಕರೆ ಮಾಡಿ ಹೇಳಿದರು ಮುನ್ನುಗ್ಗಲು ದಂಡ ನಾಯಕರಿಲ್ಲದೆ ಒಬ್ಬರಿಗೊಬ್ಬರು ಮುಖ ಮುಖ ನೋಡಿಕೊಂಡು ಕೈ ನಾಯಕರುಗಳು ಸೈಲೆಂಟಾಗಿ ಅಚ್ಚರಿ ಮೂಡಿಸಿದ್ದಾರೆ.

    ಆಪರೇಷನ್ ಕಮಲಕ್ಕೆ ಒಳಗಾದ ಮಧ್ಯಪ್ರದೇಶ ಕಾಂಗ್ರೆಸ್ ನ 19ಕ್ಕೂ ಹೆಚ್ಚು ಶಾಸಕರು ಕರ್ನಾಟಕಕ್ಕೆ ಬಂದಿದ್ದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದಾರೆ. ಕೇಂದ್ರ ಕಾಂಗ್ರೆಸ್ ನಾಯಕರುಗಳು ಸೇರಿದಂತೆ ಮಧ್ಯಪ್ರದೇಶ ಸಿಎಂ ಕಮಲನಾಥ್ ಸಹ ರಾಜ್ಯ ಕಾಂಗ್ರೆಸ್ ನಾಯಕರುಗಳಿಗೆ ಕರೆ ಮಾಡಿ ಸಹಾಯ ಮಾಡುವಂತೆ ಕೇಳಿಕೊಂಡಿದ್ದಾರೆ. ಸಿದ್ದರಾಮಯ್ಯ, ಪರಮೇಶ್ವರ್, ದಿನೇಶ್ ಗುಂಡೂರಾವ್ ಮತ್ತು ಡಿ.ಕೆ.ಶಿವಕುಮಾರ್ ಗೆ ಕರೆ ಮಾಡಿ ಕೆ.ಸಿ.ವೇಣುಗೋಪಾಲ್ ಹಾಗೂ ಕಮಲನಾಥ್ ಮಾತನಾಡಿದ್ದಾರೆ. ಏನಾದರು ಮಾಡಿ ಬೆಂಗಳೂರಿನಲ್ಲಿ ಉಳಿದುಕೊಂಡಿರುವ ಮಧ್ಯಪ್ರದೇಶ ಕಾಂಗ್ರೆಸ್ ಶಾಸಕರನ್ನ ಸಂಪರ್ಕಿಸುವಂತೆ ಅವರನ್ನ ಮನವೊಲಿಸುವಂತೆ ಕೇಳಿಕೊಂಡಿದ್ದಾರೆ ಎನ್ನಲಾಗಿದೆ.

    ಆದರೆ ಸಿದ್ದರಾಮಯ್ಯ, ಪರಮೇಶ್ವರ್ ಹಾಗೂ ದಿನೇಶ್ ಗುಂಡೂರಾವ್ ಎಲ್ಲರೂ ತಮ್ಮ ಅಸಹಾಯಕತೆಯನ್ನ ವ್ಯಕ್ತಪಡಿಸಿದ್ದಾರೆ. ಇಲ್ಲಿ ಬಿಜೆಪಿ ಸರ್ಕಾರವಿದೆ ಅವರ ಅಧಿಕಾರದ ವ್ಯಾಪ್ತಿಯಲ್ಲಿ ಅವರ ರಕ್ಷಣೆಯಲ್ಲಿರುವ ಶಾಸಕರನ್ನ ಸಂಪರ್ಕ ಮಾಡೋದು ಕಷ್ಟ ಎಂದು ಅಸಹಾಯಕತೆಯನ್ನ ವ್ಯಕ್ತಪಡಿಸಿದ್ದಾರೆ. ಇಂತಹ ಸಂದರ್ಭದಲ್ಲೆ ಮುನ್ನುಗ್ಗುವ ಸ್ಪೆಷಲಿಸ್ಟ್ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಸ್ವತಃ ಐ ಆಮ್ ಹೆಲ್ಪ್ ಲೆಸ್ ಅಂತ ಹೇಳಿ ಕೈ ಚೆಲ್ಲಿದ್ದಾರಂತೆ. ಅಲ್ಲಿಗೆ ಮಧ್ಯಪ್ರದೇಶ ಸಿಎಂ, ಹೈ ಕಮಾಂಡ್ ನಾಯಕರುಗಳು ಕರೆ ಮಾಡಿದರು. ರಾಜ್ಯ ಕಾಂಗ್ರೆಸ್ ನಾಯಕರು ಅಸಹಾಯಕತೆಯಿಂದ ಕೈ ಚೆಲ್ಲಿ ಕುಳಿತಿದ್ದಾರೆ ಎಂದು ತಿಳಿದು ಬಂದಿದೆ.

  • ಪಟ್ಟಕ್ಕೆ ತಂದವರು ಅವರೇ – ಪಟ್ಟದಿಂದ ಇಳಿಸೋದು ಅವರೇ

    ಪಟ್ಟಕ್ಕೆ ತಂದವರು ಅವರೇ – ಪಟ್ಟದಿಂದ ಇಳಿಸೋದು ಅವರೇ

    ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯರ ತಲೆದಂಡ ಸನ್ನಿಹಿತವಾಗಿದ್ದರೂ ಅದರ ನೇತೃತ್ವ ವಹಿಸಿದ ಮಿಸ್ತ್ರಿ ಮಾತ್ರ ಸಿದ್ದರಾಮಯಯ್ಯ ಪಾಲಿಗೆ ಆಪತ್ಭಾಂದವ ಜೊತೆಗೆ ಕಂಟಕವಾಗಿದ್ದಾರೆ.

    ಸಮ್ಮಿಶ್ರ ಸರ್ಕಾರದ ಪತನದ ನಂತರ ಸಿದ್ದರಾಮಯ್ಯರನ್ನು ವಿಪಕ್ಷ ನಾಯಕನ ಸ್ಥಾನಕ್ಕೆ ತರಲು ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಆದರೆ ಸೋನಿಯ ಗಾಂಧಿಯವರ ನಂಬಿಕೆಯ ಬಂಟ ಮಧುಸೂದನ್ ಮಿಸ್ತ್ರಿ ರಾಜ್ಯಕ್ಕೆ ಬಂದು ರಾಜ್ಯ ನಾಯಕರ ಅಭಿಪ್ರಾಯ ಸಂಗ್ರಹಿಸಿ ಯಥಾವತ್ ವರದಿ ಹೈಕಮಾಂಡಿಗೆ ನೀಡಿದ್ದರು. ಅದರಂತೆ ಎಐಸಿಸಿ ನಾಯಕಿ ಸೋನಿಯಗಾಂಧಿ ಸಿದ್ದರಾಮಯ್ಯರನ್ನು ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಿದ್ದರು. ಸಿದ್ದರಾಮಯ್ಯರಿಗೆ ವಿಪಕ್ಷ ಹಾಗೂ ಸಿಎಲ್‍ಪಿ ಎರಡು ನಾಯಕತ್ವ ಸಿಗಲು ಮಧುಸೂದನ್ ಮಿಸ್ತ್ರಿಯೇ ಕಾರಣ.

    ಇಂದು ಪರ್ಯಾಯ ನಾಯಕತ್ವದ ಆಯ್ಕೆಗೂ ಅದೇ ಮಧುಸೂದನ್ ಮಿಸ್ತ್ರಿ ರಾಜ್ಯಕ್ಕೆ ಬರುತ್ತಿದ್ದಾರೆ. ಅವರು ಕೊಡುವ ವರದಿಯ ಮೇಲೆಯೇ ಸಿದ್ದರಾಮಯ್ಯ ತಲೆದಂಡ ನಿರ್ಧಾರವಾಗಲಿದೆ.

    ಸಿದ್ದರಾಮಯ್ಯರನ್ನ ಪಟ್ಟಕ್ಕೆ ತಂದ ಕೀರ್ತಿಯು ಮಧುಸೂದನ್ ಮಿಸ್ತ್ರಿಯಾದರೆ ಅವರನ್ನ ಪಟ್ಟದಿಂದ ಇಳಿಸಿ ಬೇರೆಯವರಿಗೆ ನಾಯಕತ್ವ ವಹಿಸಿಕೊಟ್ಟ ಕೀರ್ತಿಯು ಮಧುಸೂದನ್ ಮಿಸ್ತ್ರಿಗೆ ಸಲ್ಲಲಿದೆ.

  • ರಾಜ್ಯ ಉಸ್ತುವಾರಿ ನಾಯಕನ ಸ್ಥಾನಕ್ಕೆ ಕೆ.ಸಿ.ವೇಣುಗೋಪಾಲ್ ರಾಜೀನಾಮೆ?

    ರಾಜ್ಯ ಉಸ್ತುವಾರಿ ನಾಯಕನ ಸ್ಥಾನಕ್ಕೆ ಕೆ.ಸಿ.ವೇಣುಗೋಪಾಲ್ ರಾಜೀನಾಮೆ?

    ಬೆಂಗಳೂರು: ಉಪಚುನಾವಣೆಯ ಸೋಲಿನ ನೈತಿಕ ಹೊಣೆಹೊತ್ತು ರಾಜ್ಯ ಉಸ್ತುವಾರಿ ನಾಯಕನ ಸ್ಥಾನಕ್ಕೆ ಕೆ.ಸಿ.ವೇಣುಗೋಪಾಲ್ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಹುಣಸೂರು ಮತ್ತು ಶಿವಾಜಿನಗರದಲ್ಲಿ ಮಾತ್ರ ಗೆಲುವು ದಾಖಲಿಸಿದೆ. ಈ ಹಿನ್ನೆಲೆಯಲ್ಲಿ ಸೋಮವಾರವೇ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಸಿಎಲ್‍ಪಿ ಮತ್ತು ವಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಿದ್ದರಾಮಯ್ಯರ ಬೆನ್ನಲ್ಲೇ ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ ಗಾದಿ ತೊರೆದಿದ್ದರು. ಇಬ್ಬರ ನಡೆಯನ್ನ ಅನುಸರಿಸಿರುವ ವೇಣುಗೋಪಾಲ್ ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ರವಾನಿಸಿ, ತಮ್ಮನ್ನು ಜವಾಬ್ದಾರಿಯಿಂದ ಮುಕ್ತಿಗೊಳಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ:   ಸಿಎಲ್‍ಪಿ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    ಎಐಸಿಸಿ ಡಿಸೆಂಬರ್ 14ರ ನಂತರ ರಾಜ್ಯ ಕಾಂಗ್ರೆಸ್ ಗೆ ನೂತನ ಸಾರಥಿಯನ್ನು ನೇಮಿಸುವ ಲೆಕ್ಕಾಚಾರದಲ್ಲಿದೆ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಹೆಸರು ಬಲವಾಗಿ ಕೇಳಿ ಬಂದಿದೆ. ವಿಪಕ್ಷ ನಾಯಕನ ಸ್ಥಾನಕ್ಕಾಗಿ ಮಾಜಿ ಡಿಸಿಎಂ ಜಿ.ಪರಮೇಶ್ವರ್, ಮಾಜಿ ಸಚಿವ ಹೆಚ್.ಕೆ.ಪಾಟೀಲ್ ರೇಸ್ ನಲ್ಲಿದ್ದಾರೆ. ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಗಳಿಗೆ ಮೂಲ ಕಾಂಗ್ರೆಸ್ ಗರಲ್ಲಿ ಪೈಪೋಟಿ ಏರ್ಪಟ್ಟಿದ್ದು, ದೆಹಲಿ ತಲುಪಿ ಲಾಬಿಗೆ ಮುಂದಾಗುತ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ