Tag: ಕರ್ನಾಟಕ ಚುನಾವಣೇ 2018

  • ಗನ್ ಮ್ಯಾನ್, ಚಾಲಕನನ್ನು ಬಿಟ್ಟು ಪತ್ನಿ ಜೊತೆ ಕಾರಿನಲ್ಲಿ ಆನಂದ್ ಸಿಂಗ್ ಹೋಗಿದ್ದು ಎಲ್ಲಿಗೆ?

    ಗನ್ ಮ್ಯಾನ್, ಚಾಲಕನನ್ನು ಬಿಟ್ಟು ಪತ್ನಿ ಜೊತೆ ಕಾರಿನಲ್ಲಿ ಆನಂದ್ ಸಿಂಗ್ ಹೋಗಿದ್ದು ಎಲ್ಲಿಗೆ?

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡುತ್ತಿದ್ದು, ಈ ಮಧ್ಯೆ ಇತ್ತೀಚೆಗಷ್ಟೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಬಳ್ಳಾರಿ ಶಾಸಕ ಆನಂದ್ ಸಿಂಗ್ ನಡೆ ಭಾರೀ ಕುತೂಹಲ ಕೆರಳಿಸಿದೆ.

    ರೆಸಾರ್ಟ್ ರಾಜಕಾರಣಕ್ಕೆಂದು ಬುಧವಾರ ಬಳ್ಳಾರಿಯಿಂದ ಹೊರಟವರು ಇದೂವರೆಗೂ ಬೆಂಗಳೂರು ತಲುಪಿಲ್ಲ. ಇಷ್ಟು ಮಾತ್ರವಲ್ಲದೇ ಚಾಲಕ, ಗನ್ ಮ್ಯಾನ್ ಗಳನ್ನು ಬಿಟ್ಟು ಸ್ವತಃ ತಾವೇ ಡ್ರೈವ್ ಮಾಡಿಕೊಂಡು ಬಳ್ಳಾರಿಯಿಂದ ಹೊರಟಿದ್ದವರು ಇನ್ನೂ ಬೆಂಗಳೂರು ತಲುಪಿಲ್ಲದ್ದು ಅಚ್ಚರಿ ಮೂಡಿಸುತ್ತಿದೆ.

    ಕಾಂಗ್ರೆಸ್ ಮುಖಂಡರಿಗೆ ಖುದ್ದು ಕರೆ ಮಾಡಿ ಬೆಂಗಳೂರಿಗೆ ಬರ್ತಿದ್ದೀನಿ ಡೋಂಟ್ ವರಿ ಅಂತ ಹೇಳಿದ್ದರು. ಆದ್ರೆ ಇದೂವರೆಗೂ ಶಾಸಕರು ಕಾಂಗ್ರೆಸ್ ಮುಖಂಡರ ಕೈಗೆ ಸಿಕ್ಕಿಲ್ಲ. ಹೀಗಾಗಿ ಸದ್ಯ ಕಾಂಗ್ರೆಸ್ಸಿನ 78 ಶಾಸಕರಲ್ಲಿ 77 ಜನ ಮಾತ್ರ ಇದ್ದಾರೆ. ಇದನ್ನೂ ಓದಿ: ಶಾಸಕ ಆನಂದ್ ಸಿಂಗ್ ಎಲ್ಲಿದ್ದಾರೆ ಅನ್ನೋದಕ್ಕೆ ಉತ್ತರಿಸಿದ್ರು ಹೆಚ್‍ಡಿಕೆ

    ಚುನಾವಣಾ ಫಲಿತಾಂಶದ ಬಳಿಕ ಕಾರ್ಯಕರ್ತರ ಸಂಭ್ರಮ ಕಾರ್ಯಕ್ರಮವಿದ್ದುದರಿಂದ ಮೊನ್ನೆ ರಾತ್ರಿ ಹೊರಡಬೇಕಾಗಿದ್ದ ಆನಂದ್ ಸಿಂಗ್ ನಿನ್ನೆ ಬೆಳಗ್ಗೆ ಹೊರಟಿದ್ದರು ಎನ್ನಲಾಗಿದೆ. ಒಟ್ಟಿನಲ್ಲಿ ಬಳ್ಳಾರಿ ಗಡಿಯಲ್ಲಿ ರೆಡ್ಡಿ ಬ್ರದರ್ಸ್ ಅವರ ಸಂಪರ್ಕದಲ್ಲಿದ್ದು, ಅವರನ್ನು ಹೈಜಾಕ್ ಮಾಡಿದ್ದಾರೆ ಅನ್ನೋ ಮಾಹಿತಿಯನ್ನು ಅವರ ಆಪ್ತವಲಯದಿಂದ ಕೇಳಿಬಂದಿದೆ. ಆದ್ರೆ ಈ ವಿಚಾರವನ್ನು ಸ್ಪಷ್ಟಪಡಿಸುವುದಾಗಿ ಅಥವಾ ನಿರಾಕರಿಸುವುದಾಗಿ ಆಪ್ತ ವಲಯಗಳು ಬಿಟ್ಟು ಕೊಡುತ್ತಿಲ್ಲ.

    ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ಮಾತನಾಡಿದ್ದ ವೇಳೆ ಆನಂದ್ ಸಿಂಗ್ ಅವರು ಮಾಜಿ ಸಚಿವ ಗಣಿಧಣಿ ಜನಾರ್ದನ ರೆಡ್ಡಿ ಅವರು ಈಗಲೂ ನನ್ನ ಜೊತೆ ಸಂಪರ್ಕದಲ್ಲಿದ್ದಾರೆ ಎಂಬ ಹೇಳಿಕೆಯೊಂದನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಆಪರೇಷನ್ ಕಮಲ ಮಾಡೋದಿಕ್ಕೆ ಜನಾರ್ದನ ರೆಡ್ಡಿಯವರು ಫೀಲ್ಡ್ ಗೆ ಇಳಿದಿದ್ದಾರಾ ಎಂಬ ಅನುಮಾನವೊಂದ ಪ್ರಶ್ನೆ ಈಗ ಎದ್ದಿದೆ. ಇದನ್ನೂ ಓದಿ: ಗುಜರಾತ್‍ಗೆ ತೆರಳಿದ್ದಾರಾ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್?

    ಬಿಜೆಪಿಯನ್ನು ತೊರೆದು ಬಿಜೆಪಿ ವಿರುದ್ಧವೇ ತೊಡೆತಟ್ಟಿ ಕಾಂಗ್ರೆಸ್ ಸೇರಿ ಗೆದ್ದಿರುವ ಶಾಸಕರು ಇದೀಗ ಮತ್ತೆ ಬಿಜೆಪಿ ಪರ ಯಾಕೆ ಬೆಂಬಲ ಸೂಚಿಸುತ್ತಾರೆ ಎಂಬ ಯಕ್ಷಪ್ರಶ್ನೆ ಕಾಂಗ್ರೆಸ್ಸಿಗರನ್ನು ಕಾಡುತ್ತದೆ. ಆದ್ರೆ ಅವರು ಇಂತಹ ನಿರ್ಧಾರ ಕೈಗೊಳ್ಳಲಾರರು ಎಂಬ ನಂಬಿಕೆಯಲ್ಲಿ ಕೈ ನಾಯಕರಿದ್ದಾರೆ.

    ಒಟ್ಟಿನಲ್ಲಿ ಬಳ್ಳಾರಿಯಿಂದ 3 ಶಾಸಕರು ಒಟ್ಟಾಗಿದ್ದು, ಆನಂದ್ ಸಿಂಗ್ ಅವರು ಸಚಿವ ಸ್ಥಾನದ ಬೇಡಿಕೆಯಿಟ್ಟಿದ್ದರು. ಅವರ ಬೇಡಿಕೆ ಈಡೇರಿಸುತ್ತೇವೆ ಅಂತ ಹೇಳಿದ್ರೂ ಕೂಡ ಖಚಿತ ಸ್ಪಷ್ಟತೆ ಇಲ್ಲದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಅವರು ದೂರ ಉಳಿದಿರಬಹುದೆಂಬ ಮಾತುಗಳು ಕಾಂಗ್ರೆಸ್ ವಲಯದಿಂದ ಕೇಳಿಬರುತ್ತಿದೆ.

  • ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ವಧು!

    ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ವಧು!

    ಕೊಡಗು: ರಾಜ್ಯಾದ್ಯಂತ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಬಿರುಸಿನಿಂದ ನಡೆಯುತ್ತಿದ್ದು, ಮಡಕೇರಿಯಲ್ಲಿ ಮದುವೆಗೂ ಮುನ್ನ ಮದುಮಗಳು ತಮ್ಮ ಮತವನ್ನು ಚಲಾಯಿಸಿದ್ದಾರೆ.

    ಸ್ಮಿತಾ ಮಡಿಕೇರಿ ತಾಲೂಕಿನ ಕಾಂಡನಕೊಲ್ಲಿ ಮತಗಟ್ಟಿ ಸಂಖ್ಯೆ 131 ಯಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮದುಮಗಳಂತೆ ಅಲಂಕರಿಸಿ ಮತಗಟ್ಟೆಗೆ ಆಗಮಿಸಿದ ಸ್ಮಿತಾ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.

    ಸ್ಮಿತಾ ಇಂದು ಗೌಡ ಸಮಾಜದಲ್ಲಿ ಮದುವೆ ಆಗುತ್ತಿದ್ದು, ಮಡಿಕೇರಿಯ ಮೂವತೊಕ್ಕಲಿನ ಬಿಎಂಟಿಸಿ ಸಿಬ್ಬಂದಿ ಆದ ಪ್ರವೀಣ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

    ಮಂಗಳೂರಿನಲ್ಲೂ ಕೂಡ ವಧುವೊಬ್ಬರು ತಮ್ಮ ಮತ ಚಲಾಯಿಸಿದ್ದಾರೆ. ನಗರದ ಬೋಂದೆಲ್ ಸೇಂಟ್ ಲಾರೆನ್ಸ್ ಮೀಡಿಯಂ ಶಾಲೆಯಲ್ಲಿ ಮತದಾನ ನಡೆಯುತ್ತಿದ್ದು, ಪಚ್ಚನಾಡಿಯ ಮದುಮಗಳು ವಿಯೋಲಾ ಮಾರಿಯಾ ಫೆರ್ನಾಂಡೀಸ್ ಮತದಾನ ಮಾಡಿದ್ದಾರೆ.

    7 ಗಂಟೆಗೆ ಮತದಾನ ಮಾಡಿ ಬಳಿಕ ಬೆಳ್ತಂಗಡಿಯಲ್ಲಿ ನಡೆಯೋ ಮದುವೆಗೆ ಮದುಮಗಳು ತೆರಳಿದ್ದಾರೆ. ಬೆಳ್ತಂಗಡಿಯ ವರ ಸಿಲ್ವೆಸ್ಟರ್ ರೋಡ್ರಿಗಸ್ ಜೊತೆ ಮಾರಿಯಾ ಮದುವೆ ನಡೆಯಲಿದೆ. ಒಟ್ಟಿನಲ್ಲಿ ವಿಯೋಲಾ ಹಾಗೂ ಸ್ಮಿತಾ ಅವರು ಮದುವೆಗೂ ಮುನ್ನ ಮತದಾನ ಮಾಡಿ ಮಾದರಿಯಾಗಿದ್ದಾರೆ.

  • ಮತ ಚಲಾಯಿಸಿ ಮದುವೆಗೆ ತೆರಳಿದ ಮದುಮಗಳು!

    ಮತ ಚಲಾಯಿಸಿ ಮದುವೆಗೆ ತೆರಳಿದ ಮದುಮಗಳು!

    ಮಂಗಳೂರು: ರಾಜ್ಯಾದ್ಯಂತ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಬಿರುಸಿನಿಂದ ನಡೆಯುತ್ತಿದ್ದು, ಮದುವೆಗೂ ಮುನ್ನ ಮದುಮಗಳು ಮತದಾನ ಮಾಡಿದ ಪ್ರಸಂಗವೊಂದು ಮಂಗಳೂರಿನಲ್ಲಿ ನಡೆದಿದೆ.

    ನಗರದ ಬೋಂದೆಲ್ ಸೇಂಟ್ ಲಾರೆನ್ಸ್ ಮೀಡಿಯಂ ಶಾಲೆಯಲ್ಲಿ ಮತದಾನ ನಡೆಯುತ್ತಿದೆ. ಪಚ್ಚನಾಡಿಯ ಮದುಮಗಳು ವಿಯೋಲಾ ಮಾರಿಯಾ ಫೆರ್ನಾಂಡೀಸ್ ಮತದಾನ ಮಾಡಿದ್ದಾರೆ.

    7 ಗಂಟೆಗೆ ಮತದಾನ ಮಾಡಿ ಬಳಿಕ ಬೆಳ್ತಂಗಡಿಯಲ್ಲಿ ನಡೆಯೋ ಮದುವೆಗೆ ಮದುಮಗಳು ತೆರಳಿದ್ದಾರೆ. ಮಂಗಳೂರಿನ ಬೆಳ್ತಂಗಡಿಯ ವರ ಸಿಲ್ವೆಸ್ಟರ್ ರೋಡ್ರಿಗಸ್ ಜತೆ ಯುವತಿಯ ಮದುವೆ ಇಂದು ನಡೆಯುತ್ತಿದೆ.

    ಒಟ್ಟಿನಲ್ಲಿ ವಿಯೋಲಾ ಅವರು ಮದುವೆಗೂ ಮುನ್ನ ಮತದಾನ ಮಾಡಿ ಮಾದರಿಯಾಗಿದ್ದಾರೆ.

  • ನಾನು ಪ್ರಚಾರ ಮಾಡದೇ ಇದ್ರೂ ಗೆಲ್ತೀನಿ – ಸಿಎಂಗೆ ಯಡಿಯೂರಪ್ಪ ತಿರುಗೇಟು

    ನಾನು ಪ್ರಚಾರ ಮಾಡದೇ ಇದ್ರೂ ಗೆಲ್ತೀನಿ – ಸಿಎಂಗೆ ಯಡಿಯೂರಪ್ಪ ತಿರುಗೇಟು

    ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರನ್ನು ಸೋಲಿಸಲು ನಾನು ಒಂದು ದಿನ ಕ್ಯಾಂಪೇನ್ ಮಾಡಿದ್ರೆ ಸಾಕು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಎಸ್‍ವೈ ತಿರುಗೇಟು ನೀಡಿದ್ದಾರೆ.

    ನಗರದ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕಾರಿಪುರ ಕ್ಷೇತ್ರಕ್ಕೆ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರಿಗೆ ಸ್ವಾಗತ ಕೋರಿದ್ರು. ನಾನು ಶಿಕಾರಿಪುರ ಪ್ರಚಾರ ಮಾಡದೇ ಇದ್ದರೂ ಜನ ಗೆಲ್ಲಿಸ್ತಾರೆ ಎನ್ನುವ ವಿಶ್ವಾಸ ಇದೆ. ಆದ್ರೆ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮೊದಲು ಗೆಲ್ಲಲಿ ಅಂತ ಸಿಎಂ ಗೆ ಪಂಥಾಹ್ವಾನ ನೀಡಿದರು.

    ನಾನು ಶಿಕಾರಿಪುರ ಪ್ರಚಾರ ಮಾಡದೆ ಇದ್ರೂ ಜನ ನನ್ನ ಆಯ್ಕೆ ಮಾಡುತ್ತಾರೆ. ಒಮ್ಮೆ ನಾಮಪತ್ರ ಸಲ್ಲಿಸೋಕೆ ಹೋಗ್ತೇನೆ. ಆನಂತರ ಒಂದು ದಿನ ಮಾತ್ರ ಪ್ರಚಾರ ಮಾಡ್ತೇನೆ. ನನ್ನ ಜಿಲ್ಲೆಯ ಜನ ಈ ಹಿಂದೆ 3 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲ್ಲಿಸಿದ್ರು. ಸಿದ್ದರಾಮಯ್ಯಗೆ ಬೇರೆ ಕ್ಷೇತ್ರ ಇರಲಿ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮೊದಲು ಗೆಲ್ಲಲಿ ಅಂತ ಹೇಳಿದ್ದಾರೆ. ಇದನ್ನೂ ಓದಿ: ಬಿಎಸ್‍ವೈ, ಎಚ್‍ಡಿಕೆಯನ್ನು ಸೋಲಿಸಲು ನಾನು ಒಂದು ದಿನ ಪ್ರಚಾರ ಮಾಡಿದ್ರೆ ಸಾಕು: ಸಿಎಂ

    ಚಾಮುಂಡೇಶ್ವರಿಯಲ್ಲಿ ಸಿಎಂ ಸ್ಪರ್ಧಿಸೋಕೆ ಹಿಂದು-ಮುಂದು ನೋಡ್ತಿದ್ದಾರೆ. ಬೇರೆ ಕ್ಷೇತ್ರವನ್ನ ಹುಡುಕ್ತಿರೋದು ಯಾರು? ಅವರೇ ಆ ಚಿಂತನೆ ಮಾಡ್ತಿದ್ದಾರೆ. ಮೊದಲು ಸಿಎಂ ಚಾಮುಂಡೇಶ್ವರಿಯಲ್ಲಿ, ಅವರ ಪುತ್ರ ಯತೀಂದ್ರ ವರುಣಾದಲ್ಲಿ ಸ್ಪರ್ಧಿಸಿ ಗೆಲ್ಲಲಿ ಎಂದು ಬಿಎಸ್‍ವೈ ಸವಾಲು ಹಾಕಿದರು.

    ಇದೇ ವೇಳೆ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಭೇಟಿ ವಿಚಾರದ ಕುರಿತು ಮಾತನಾಡಿದ ಅವರು, ರಾಜ್ಯಕ್ಕೆ ರಾಮ್ ಮಾಧವ್ ಬಂದಿದ್ದಾರೆ. ಚುನಾವಣೆ ಪ್ರಚಾರ ಕುರಿತು ಮುಖಂಡರ ಜೊತೆ ಚರ್ಚೆ ನಡೆಸಿದ್ದಾರೆ. ಬಿಜೆಪಿ ಪ್ರಮುಖ ನಾಯಕರಿಗೆ ಮಾಹಿತಿ ನೀಡಿಯೇ ರಾಜ್ಯಕ್ಕೆ ಬಂದಿದ್ದಾರೆ. ರಾಜ್ಯ ನಾಯಕರಿಗೆ ಮಾಹಿತಿ ನೀಡದೆ ಬಂದಿದ್ದಾರೆ ಅನ್ನೋದು ಸತ್ಯಕ್ಕೆ ದೂರವಾದುದು. ಮುಂದೆಯೂ ರಾಜ್ಯಕ್ಕೆ ಭೇಟಿ ನೀಡಿ ಚುನಾವಣೆ ಸಿದ್ಧತೆ ಕೈಗೊಳ್ಳಲಿದ್ದಾರೆ. ಅಮಿತ್ ಶಾ ಜೊತೆ ಸೇರಿ ಪಕ್ಷವನ್ನು ಗೆಲ್ಲಿಸುವಲ್ಲಿ ರಾಮ್ ಮಾಧವ್ ನಿಸ್ಸೀಮರು ಅಂತ ಹೇಳಿದ್ರು.