Tag: ಕರ್ನಾಟಕ ವಿಧಾನಸಭೆ

  • ಮುನಿಯಪ್ಪ ಅಳಿಯನಿಗೆ ವಿಧಾನಸಭೆ ಕಾರ್ಯದರ್ಶಿ-2 ಹುದ್ದೆ ಸೃಷ್ಟಿಗೆ ಮುಂದಾದ ಸರ್ಕಾರ: ಸಚಿವಾಲಯದ ಅಧಿಕಾರಿ ವರ್ಗ ವಿರೋಧ

    ಮುನಿಯಪ್ಪ ಅಳಿಯನಿಗೆ ವಿಧಾನಸಭೆ ಕಾರ್ಯದರ್ಶಿ-2 ಹುದ್ದೆ ಸೃಷ್ಟಿಗೆ ಮುಂದಾದ ಸರ್ಕಾರ: ಸಚಿವಾಲಯದ ಅಧಿಕಾರಿ ವರ್ಗ ವಿರೋಧ

    ಬೆಂಗಳೂರು: ಮಂತ್ರಿ ಅಳಿಯನಿಗೆ ಹುದ್ದೆ ಸೃಷ್ಟಿ ಮಾಡಲು ಸರ್ಕಾರ ಮುಂದಾಗಿದ್ದು, ಸರ್ಕಾರದ ತೀರ್ಮಾನದ ವಿರುದ್ಧ ವಿಧಾನಸಭಾ ಸಚಿವಾಲಯದ ಅಧಿಕಾರಿ ವರ್ಗ, ಸಿಬ್ಬಂದಿ ಹೋರಾಟಕ್ಕಿಳಿದಿದ್ದಾರೆ.

    ಸರ್ಕಾರದ ಮೇಲೆ ಒತ್ತಡ ಹೇರಿ ಅಳಿಯನಿಗೆ ಕಾಯದರ್ಶಿ-2 ಹುದ್ದೆ ಸೃಷ್ಟಿ ಯತ್ನ ಆರೋಪ ಕೇಳಿಬಂದಿದೆ. ಸಚಿವ ಮುನಿಯಪ್ಪ ಅಳಿಯ ಕೆ.ಸಿ.ಶಶಿಧರ್ ಹಾಲಿ ವಿಧಾನಸಭಾ ಸಚಿವಾಲಯದಲ್ಲಿ ಗಣಕ ವಿಭಾಗದ ನಿರ್ದೇಶಕರಾಗಿದ್ದು, ನಿರ್ದೇಶಕ ಹುದ್ದೆಯಿಂದ ಕಾರ್ಯದರ್ಶಿ-2 ಹುದ್ದೆಗೆ ನಿಯೋಜನೆ ಮಾಡಲು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ – ಕ್ಯಾಬಿನೆಟ್‌ನಲ್ಲಿ ಇಂದು ಮತ್ತೆ ಚರ್ಚೆ?

    ಶಶಿಧರ್ ಮನವಿಗೆ ಮಾವ ಆಗಿರುವ ಸಚಿವ ಮುನಿಯಪ್ಪ ಅವರಿಂದಲೂ ಶಿಫಾರಸು ಮಾಡಿದ್ದಾರೆ ಎನ್ನಲಾಗಿದೆ. ಶಶಿಧರ್ ಪರವಾಗಿ ಪತ್ನಿಯಾಗಿರುವ ಶಾಸಕಿ ರೂಪಾಕಲಾ ಅವರಿಂದಲೂ ಲಾಭಿ ಆರೋಪ ಕೇಳಿಬಂದಿದ್ದು, ನಿರ್ದೇಶಕ ಹುದ್ದೆಯಿಂದ ಕಾರ್ಯದರ್ಶಿ-2 ಹುದ್ದೆಗೆ ಮೇಲ್ದರ್ಜೆಗೆ ಏರಿಸಲು ಕಡತ ಸಿದ್ಧಗೊಳಿಸಿದ್ದಾರೆ ಎನ್ನಲಾಗಿದೆ.

    ಡಿಪಿಎಆರ್ ಸಿದ್ಧಗೊಳಿಸಿರುವ ಕಡತಕ್ಕೆ ವಿಧಾನಸಭಾ ಸಚಿವಾಲಯದಿಂದಲೂ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಸಚಿವಾಲಯದ ನಿರ್ಧಾರದಿಂದ ಕಂಗೆಟ್ಟ ವಿಧಾನಸಭೆಯ ಅಧಿಕಾರಿ ವರ್ಗ ಮತ್ತು ಸಿಬ್ಬಂದಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ನಾಗೇಂದ್ರಗೆ ಮತ್ತೆ ಜೈಲೇ ಗತಿ – ಆ.3 ರವರೆಗೆ ನ್ಯಾಯಾಂಗ ಬಂಧನ

    ಗಣಕ ವಿಭಾಗದ ಅಧಿಕಾರಿಯನ್ನು ಸಚಿವಾಲಯದಲ್ಲಿ ಪರಿಗಣಿಸಬಾರದು. ಸಚಿವಾಲಯದ ವಿಭಾಗದ ವೃಂದಗಳಲ್ಲೇ ಹುದ್ದೆ ಸೃಷ್ಟಿಸಿ ನೀಡಬೇಕು ಅಂತಾ ಒತ್ತಾಯಿಸಿದ್ದಾರೆ. ಸಚಿವನ ಅಳಿಯನಿಗಾಗಿ ಹುದ್ದೆ ಸೃಷ್ಟಿ ಮಾಡುವ ಪ್ರಯತ್ನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಸಿಎಂ ಸಿದ್ದರಾಮಯ್ಯ ಬಳಿ ಕಡತ ಇದೆ. ಅವರು ಸಹಿ ಹಾಕ್ತಾರಾ? ಕಾದುನೋಡಬೇಕಿದೆ.

  • ಈಶ್ವರಪ್ಪ vs ಡಿಕೆಶಿ ವಾಕ್ಸಮರ: ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಸದನದ ಕದನ

    ಈಶ್ವರಪ್ಪ vs ಡಿಕೆಶಿ ವಾಕ್ಸಮರ: ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಸದನದ ಕದನ

    ಬೆಂಗಳೂರು: ವಿಧಾನಸಭೆಯಲ್ಲಿ ಇವತ್ತು ಅಕ್ಷರಶಃ ರಣರಂಗವಾಗಿತ್ತು. ಕೆಂಪು ಕೋಟೆಯಲ್ಲೂ ಕೇಸರಿ ಧ್ವಜವನ್ನು ಹಾರಿಸುತ್ತೇವೆ ಎಂದು ಈಶ್ವರಪ್ಪ ಹೇಳಿದ್ದಾರೆ. ಇದು ರಾಷ್ಟ್ರದ್ರೋಹ ಎಂದು ಕಾಂಗ್ರೆಸ್ ಮಾಡಿದ ನಿಲುವಳಿ ಮಂಡನೆ ಪ್ರಸ್ತಾಪದ ವೇಳೆ ಈಶ್ವರಪ್ಪ ವರ್ಸಸ್ ಡಿ.ಕೆ.ಶಿಕುಮಾರ್ ನಡುವೆ ಏಕವಚನದಲ್ಲಿ ವೈಯುಕ್ತಿಕ ವಾಕ್ಸಮರವೂ ನಡೆಯಿತು.

    ಸಿದ್ದರಾಮಯ್ಯ ಮಾತಾನಾಡುವಾಗ ಅವರ ಬಳಿ ಹೋದ ಡಿಕೆಶಿ ಈಶ್ವರಪ್ಪಗೆ ಮಾತನಾಡಲು ಬಿಡಬೇಡಿ ಎಂದು ಹೇಳಿದ್ರು. ಆಗ ಸಿಟ್ಟಿಗೆದ್ದ ಈಶ್ವರಪ್ಪ ಸದನ ನಿಮ್ಮ ಅಪ್ಪನದ್ದಾ ಎಂದು ಪ್ರಶ್ನಿಸಿದ್ರು. ಆಗ ಸದನದಲ್ಲಿ ಗದ್ದಲ ಹೆಚ್ಚಾದಾಗ ಕಲಾಪವನ್ನು ಮುಂದೂಡಿದ್ದರೂ ಈಶ್ವರಪ್ಪ-ಡಿಕೆಶಿ ನಡುವೆ ಒಂದು ಹಂತಕ್ಕೆ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿತ್ತು. ಬಳಿಕ ಯಡಿಯೂರಪ್ಪ ಮಧ್ಯಪ್ರವೇಶದ ಬಳಿಕ ವಾತಾವರಣ ತಿಳಿಯಾಯ್ತು. ದನ್ನೂ ಓದಿ:  ಸಚಿವ ಈಶ್ವರಪ್ಪ ನಿವಾಸಕ್ಕೆ ಯೂತ್ ಕಾಂಗ್ರೆಸ್ ಮುತ್ತಿಗೆ

    ಶೇಮ್‌ ಶೇಮ್‌ ಈಶ್ವರಪ್ಪ ಘೋಷಣೆ!: ಇವತ್ತು ಈಶ್ವರಪ್ಪ ಹೇಳಿಕೆ ವಿರುದ್ಧ ನಿಲುವಳಿ ಸೂಚನೆ ಮಂಡನೆಯ ಪ್ರಾಥಮಿಕ ಪ್ರಸ್ತಾಪ ಮಾಡಿದ ಸಿದ್ದರಾಮಯ್ಯ ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ರು. ಈಶ್ವರಪ್ಪ 2006ರಿಂದಲೂ ಸಚಿವರಾಗಿದ್ದರು, ಅವರು ಜವಾಬ್ದಾರಿಯಿಂದ ಹೇಳಿಕೆ ಕೊಡ್ತಾರೆ ಅಂದ್ಕೊಂಡಿದ್ದೆ. ರಾಷ್ಟ್ರಧ್ವಜದ ಬಗ್ಗೆ ಬಹಳ ಅಗೌರವವಾಗಿ ಹೇಳಿಕೆ ಕೊಟ್ಟಿದ್ದಾರೆ. ಸಂವಿಧಾನದ ಆರ್ಟಿಕಲ್ 51(1) ಪ್ರಕಾರ ಪ್ರತಿಯೊಬ್ಬರು ರಾಷ್ಟ್ರಧ್ವಜಕ್ಕೆ ಗೌರವ ಕೊಡಬೇಕು. ಆದ್ರೆ ಕೆಂಪು ಕೋಟೆಯಲ್ಲೂ ಕೇಸರಿ ಧ್ವಜವನ್ನು ಹಾರಿಸುತ್ತೇವೆ ಎಂದು ಈಶ್ವರಪ್ಪ ಹೇಳಿಕೆ ಕೊಟ್ಟಿದ್ದಾರೆ. ಐಪಿಸಿ ಪ್ರಕಾರ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ರೆ, ಸಂವಿಧಾನಕ್ಕೆ ಅಗೌರವ ಮಾಡಿದ್ರೆ, ರಾಷ್ಟ್ರಗೀತೆಗೆ ಅಗೌರವ ಮಾಡಿದ್ರೆ ಅದು ದೇಶ ದ್ರೋಹ. 3 ರಿಂದ 5 ವರ್ಷ ಜೈಲು ಶಿಕ್ಷೆ ಇದೆ. ಆದ್ರೆ ಈಶ್ವರಪ್ಪ ವಿರುದ್ಧ ಸರ್ಕಾರ ಏನೂ ಕ್ರಮ ತೆಗೆದುಕೊಂಡಿಲ್ಲ. ನನ್ನ ಪ್ರಕಾರ ಈಶ್ವರಪ್ಪ ಅವರನ್ನು ಮಂತ್ರಿಮಂಡಲದಿಂದ ಸಿಎಂ ಅಮಾನತು ಮಾಡಬೇಕಿತ್ತು. ಮಂತ್ರಿಯಾಗಿರಲು ಈಶ್ವರಪ್ಪ ಅರ್ಹರಲ್ಲ. ಮುಖ್ಯಮಂತ್ರಿಗಳೇ ಸ್ವಯಂಪ್ರೇರಿತರಾಗಿ ಅವರನ್ನ ಅಮಾನತು ಮಾಡಿ, ಮೊಕದ್ದಮೆ ದಾಖಲು ಮಾಡಿ ಎಂದು ಆಗ್ರಹಿಸಿದ್ರು. ಆಗ ಕಾಂಗ್ರೆಸ್ ಶಾಸಕರು ಶೇಮ್ ಶೇಮ್ ಈಶ್ವರಪ್ಪ ಎಂದು ಛೇಡಿಸಿದ್ರು.

    ನೀನು ಜೈಲಿಗೆ ಹೋಗಿ ಬಂದವನು!: ಆದ್ರೆ ಸಿದ್ದರಾಮಯ್ಯ ನಿಲುವಳಿ ಮಂಡನೆ ಪ್ರಸ್ತಾಪಕ್ಕೆ ಕಾನೂನು ಸಚಿವ ಮಾಧುಸ್ವಾಮಿ ತಿರುಗೇಟು ನೀಡಿದ್ರು. ಭಗವದ್ ಧ್ವಜ ಹಾರಿಸಬಹುದು ಅಂತಾ ಹೇಳಿದ್ದಾರೆ, ನಾನೇ ಹಾರಿಸುತ್ತೇನೆ ಅಂತಾ ಹೇಳಿಲ್ಲ. ಕೆಂಪು ಕೋಟೆ ಮೇಲೆ ಧ್ವಜ ಹಾರಿಸುತ್ತೇನೆ ಅಂದಿಲ್ಲ. ಈಶ್ವರಪ್ಪ ಎಲ್ಲಿ ಅಪಮಾನ ಮಾಡಿದ್ದಾರೆ..? ಬಂದೂಕು ಕೈಯಲ್ಲಿ ಕೊಟ್ಟು ಬಾವುಟ ಹಾರಿಸಬೇಡಿ ಅಂದಾಗ ಬಾವುಟ ಹಾರಿಸಿದ ಪಕ್ಷ ಬಿಜೆಪಿ. ಹುಬ್ಬಳ್ಳಿಯಿಂದ ಕಾಶ್ಮೀರದವರೆಗೆ ಬಾವುಟ ಹಾರಿಸಿದ ಪಕ್ಷ ಬಿಜೆಪಿ. ಈಶ್ವರಪ್ಪ ಹೇಗೆ ದೇಶ ದ್ರೋಹಿ ಆಗ್ತಾರೆ..? ಇದು ನಿಲುವಳಿ ಸೂಚನೆ ವ್ಯಾಪ್ತಿಗೆ ಬರಲ್ಲ, ತಿರಸ್ಕಾರ ಮಾಡಿ ಎಂದು ಮಾಧುಸ್ವಾಮಿ ಮನವಿ ಮಾಡಿದ್ರು. ಆಗ ಈಶ್ವರಪ್ಪ ದೇಶದ್ರೋಹಿ ಅಂತಾ ಡಿಕೆಶಿ ಕೂಗಿದ್ದೇ ತಡ ಎದ್ದು ನಿಂತ ಈಶ್ವರಪ್ಪ ಆಕ್ರೋಶ ಹೊರ ಹಾಕಿದ್ರು. ನಾನಲ್ಲ ರಾಷ್ಟ್ರದ್ರೋಹಿ. ನೀನು. ನೀನು ಜೈಲಿಗೆ ಹೋಗಿ ಬಂದವನು, ಬೇಲ್‌ನಲ್ಲಿ ಇದ್ದೀಯಾ, ನೀನು ರಾಷ್ಟ್ರ ದ್ರೋಹಿ. ನೀನು ನನಗೆ ಹೇಳಬೇಡ ಅಂತಾ ಡಿ.ಕೆ.ಶಿ ವಿರುದ್ಧ ಏಕವಚನದಲ್ಲಿ ವಾಕ್ಸಮರ ನಡೆಸಿದ್ರು.

    BSY ಸಮಾಧಾನ: ಆ ವೇಳೆ ಈಶ್ವರಪ್ಪ ಮಾತನಾಡುವ ಮೊದಲು ಚರ್ಚೆಗೆ ಅವಕಾಶ ಕೊಡಿ ಅಂತಾ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದರು. ಆ ವೇಳೆ ಡಿಕೆ ಶಿವಕುಮಾರ್‌, ಸಿದ್ದರಾಮಯ್ಯ ಬಳಿಗೆ ಹೋಗಿ ಈಶ್ವರಪ್ಪಗೆ ಅವಕಾಶ ಕೊಡಬೇಡಿ ಅಂದ್ರು. ತಕ್ಷಣವೇ ಸಿಟ್ಟಿಗೆದ್ದ ಈಶ್ವರಪ್ಪ ನಿಮ್ಮಪ್ಪನದಾ ಸದನ ಅಂತಾ ಡಿಕೆಶಿ ವಿರುದ್ಧ ಗರಂ ಆದ್ರು. ಹಾಗೆ ಹೇಳಿದ್ದೇ ತಡ ಡಿಕೆಶಿ ಸದನದ ಬಾವಿಗಿಳಿದು ಈಶ್ವರಪ್ಪ ಬಳಿ ಹೋಗಿ ಮಾತಿನ ಚಕಮಕಿ ನಡೆಸಿದ್ರು. ಆಗ ಸ್ಪೀಕರ್ ಕಲಾಪವನ್ನ ನಾಳೆ ಬೆಳಗ್ಗೆ 11 ಗಂಟೆಗೆ ಮುಂದೂಡಿದ್ರು. ಆದರೂ ಸದನದ ಬಾವಿಯಿಂದಲೇ ಈಶ್ವರಪ್ಪ ಜೊತೆ ಡಿಕೆಶಿ, ಕಾಂಗ್ರೆಸ್ ಶಾಸಕರು ವಾಗ್ವಾದಕ್ಕಿಳಿದಿದ್ದರು. ಕಡೆಗೆ ಯಡಿಯೂರಪ್ಪ ಬಂದು ಎರಡು ಕಡೆಯ ಶಾಸಕರನ್ನು ಸಮಾಧಾನಪಡಿಸಿದ್ರು.

  • ಚುನಾವಣೆಗೆ ಬರೋಬ್ಬರಿ 320 ಕೋಟಿ ರೂ. ವೆಚ್ಚ- ಶೀಘ್ರವೇ ಹಣ ಬಿಡುಗಡೆ ಮಾಡುವಂತೆ ಚುನಾವಣಾ ಆಯೋಗ ಪತ್ರ

    ಚುನಾವಣೆಗೆ ಬರೋಬ್ಬರಿ 320 ಕೋಟಿ ರೂ. ವೆಚ್ಚ- ಶೀಘ್ರವೇ ಹಣ ಬಿಡುಗಡೆ ಮಾಡುವಂತೆ ಚುನಾವಣಾ ಆಯೋಗ ಪತ್ರ

    ಬೆಂಗಳೂರು: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚುನಾವಣೆ ನಡೆದಿದ್ದು, ಈಗ ಕರ್ನಾಟಕದಲ್ಲಿ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ.

    2018ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬರೋಬ್ಬರಿ 320 ಕೋಟಿ ರೂಪಾಯಿ ವೆಚ್ಚವಾಗಲಿದೆ. ಹೀಗಾಗಿ ಆದಷ್ಟು ಶೀಘ್ರವಾಗಿ ಹಣ ಬಿಡುಗಡೆ ಮಾಡುವಂತೆ ರಾಜ್ಯ ಚುನಾವಣಾ ಆಯುಕ್ತರು ಹಣಕಾಸು ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

    ಈ ಬಾರಿ ಮತಗಟ್ಟೆಗಳಲ್ಲಿ ವಿವಿಪಿಎಟಿ ಅಳವಡಿಸಿದ ಇವಿಎಂ ಬಳಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಮತಗಟ್ಟೆಗಳ ಸಂಖ್ಯೆಯೂ ಹೆಚ್ಚಾಗಲಿದ್ದು, ಹಣದುಬ್ಬರ, ಬೆಲೆ ಏರಿಕೆಯಿಂದ ಖರ್ಚು ಹೆಚ್ಚಾಗಲಿದೆ ಎಂದು ಚುನಾವಣಾ ಆಯೋಗದ ಮೂಲಗಳು ಹೇಳಿವೆ.

    ಹಿಂದಿನ ಬಾರಿ ಚುನಾವಣೆಗೆ ಸುಮಾರು 54,261 ಮತಗಟ್ಟೆಗಳು ಇದ್ದವು. ಆದರೆ ಈ ಬಾರಿಯ ಚುನಾವಣೆಯಲ್ಲಿ ಸುಮಾರು 57,000 ಮತಗಟ್ಟೆಗಳು ಇರಲಿವೆ. ಇನ್ನು ಮತದಾರರ ಸಂಖ್ಯೆಯೂ 4.9 ಕೋಟಿಗೆ ಏರಿಕೆಯಾಗಿದೆ ಎಂದು ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ.