Tag: ಕರ್ನಾಟಕ ಸೆಷನ್

  • ವಿಧಾನಸಭೆಯಲ್ಲೂ ಧರ್ಮಸ್ಥಳ ಪ್ರಕರಣ ಸದ್ದು – ಚರ್ಚೆಗೆ ಅವಕಾಶ ಕೊಡುವಂತೆ ಬಿಜೆಪಿ ಸದಸ್ಯರ ಪಟ್ಟು

    ವಿಧಾನಸಭೆಯಲ್ಲೂ ಧರ್ಮಸ್ಥಳ ಪ್ರಕರಣ ಸದ್ದು – ಚರ್ಚೆಗೆ ಅವಕಾಶ ಕೊಡುವಂತೆ ಬಿಜೆಪಿ ಸದಸ್ಯರ ಪಟ್ಟು

    – ಹಿಂದೂ ಧಾರ್ಮಿಕ ಕೇಂದ್ರವನ್ನ ಟಾರ್ಗೆಟ್ ಮಾಡಲಾಗಿದೆ
    – ಇನ್ನೆಷ್ಟು ಗುಂಡಿ ಅಗೆಯುತ್ತೀರಾ? – ಸುನೀಲ್‌ ಕುಮಾರ್‌ ಪ್ರಶ್ನೆ

    ಬೆಂಗಳೂರು: ವಿಧಾನಸಭೆಯಲ್ಲಿಂದು ಧರ್ಮಸ್ಥಳ ಪ್ರಕರಣ (Dharmasthala Burials Case) ಪ್ರತಿಧ್ವನಿಸಿ ಗದ್ದಲಕ್ಕೆ ಕಾರಣವಾಯ್ತು. ಶೂನ್ಯವೇಳೆಯಲ್ಲಿ ಬಿಜೆಪಿ (BJP_ ಶಾಸಕ ಸುನೀಲ್ ಕುಮಾರ್ ಪ್ರಸ್ತಾಪಿಸಿ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡರು.

    ತನಿಖೆಗೆ ನಮ್ಮ ಆಕ್ಷೇಪ ಇಲ್ಲ. ಆದ್ರೆ ಹಿಂದೂ ಧಾರ್ಮಿಕ ಕೇಂದ್ರ ಟಾರ್ಗೆಟ್ ಮಾಡಲಾಗಿದೆ. ಅಪಪ್ರಚಾರ ನಡೆಯುತ್ತಿದೆ. ಅನಾಮಿಕ, ಐದು ಗುಂಡಿ, ಹತ್ತು ಗುಂಡಿ ಅಂತ ಹೇಳ್ತಾ 13 ಗುಂಡಿ ಆಗಿದೆ. ಊಹಾಪೋಹಗಳಿಗೆ ಸರ್ಕಾರ ತೆರೆ ಎಳೆಯಬೇಕು. ಧಾರ್ಮಿಕ ನಂಬಿಕೆ ಮೇಲೆ ಅಪಪ್ರಚಾರ ಮಾಡ್ತಿರುವವರ ಮೇಲೆ ಕ್ರಮ ಆಗಬೇಕು. ತನಿಖೆ ಎಲ್ಲಿವರೆಗೆ ಬಂದಿದೆ? ಇನ್ನೆಷ್ಟು ಗುಂಡಿ ತೆಗಿಯುತ್ತೀರಾ? ಅಂತ ಗೃಹ ಸಚಿವರು ಸ್ಪಷ್ಟನೆ ಕೊಡಬೇಕು ಅಂತಾ ಸುನೀಲ್ ಕುಮಾರ್ (Sunil Kumar) ಆಗ್ರಹಿಸಿದ್ರು. ಇದನ್ನೂ ಓದಿ: ನನ್ನ ಮಾತು ಇಷ್ಟೊಂದು ತೀವ್ರ ಸ್ವರೂಪಕ್ಕೆ ಹೋಗುತ್ತೆ ಅಂತ ಗೊತ್ತಿರಲಿಲ್ಲ: ರಾಜಣ್ಣ ಪಶ್ಚಾತ್ತಾಪದ ಮಾತು

    ಈ ವೇಳೆ ಉತ್ತರ ಕೊಟ್ಟ ಗೃಹ ಸಚಿವ ಪರಮೇಶ್ವರ್ (Parameshwar), ತನಿಖೆ ನಡೆಯುತ್ತಿದೆ, ತನಿಖೆ ಮಧ್ಯೆ ನಾವು ಮಧ್ಯ ಪ್ರವೇಶ ಮಾಡಲ್ಲ. ತನಿಖೆ ಒಂದು ಹಂತಕ್ಕೆ ಬಂದ ನಂತರ ವರದಿ ಕೊಡ್ತಾರೆ. ವರದಿ ಕೊಟ್ಟ ನಂತರ ನಾನು ಪೂರ್ಣ ಉತ್ತರ ಕೊಡ್ತೇನೆ ಅಂದ್ರು. ಆದರೆ ಪರಮೇಶ್ವರ್ ಉತ್ತರಕ್ಕೆ ಬಿಜೆಪಿ ಸದಸ್ಯರು ಒಗ್ಗಟ್ಟಾಗಿ ವಿರೋಧ ವ್ಯಕ್ತಪಡಿಸಿ, ಸ್ಪಷ್ಟೀಕರಣ ಕೊಡಬೇಕು, ಇನ್ನೂ ಎಷ್ಟು ಗುಂಡಿ ಅಗೆಯುತ್ತೀರಾ ಹೇಳಿ? ಅಪಪ್ರಚಾರ ನಿಲ್ಲಿಸಿ, ಸುಳ್ಳುಪ್ರಚಾರ ಇದು, ಪ್ರಕರಣದ ಚರ್ಚೆಗೆ ಅವಕಾಶ ಕೊಡಿ ಅಂತ ಬಿಜೆಪಿ ಸದಸ್ಯರು ಆಗ್ರಹಿಸಿದ್ರು. ಇದನ್ನೂ ಓದಿ: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ವಜಾ ಖಂಡಿಸಿ ಬೆಂಬಲಿಗರ ಆಕ್ರೋಶ – ಮಧುಗಿರಿ ಬಂದ್

    ಆಗ ಸದನದಲ್ಲಿ ಧರ್ಮಸ್ಥಳ ಗದ್ದಲ ಜೋರಾಯ್ತು. ಮಧ್ಯಪ್ರವೇಶ ಮಾಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ನಾವು ಯಾರ ಪರವೂ ಇಲ್ಲ, ನಾವು ಸತ್ಯದ ಪರ ಅಂದ್ರು. ಚರ್ಚೆಗೆ ಈಗ ಅವಕಾಶ ಕೊಡಿ ಅಂತಾ ಆರ್.ಅಶೋಕ್ ಆಗ್ರಹಿಸಿದ್ರೆ, ಮಧ್ಯಂತರ ವರದಿ ಪಡೆದುಕೊಂಡು ಕ್ಲಾರಿಟಿ ಕೊಡಿ. ಇನ್ನೊಬ್ಬ ಬಂದು ಗುಂಡಿ ಅಗೆಯಬೇಕು ಅಂತಾನೆ, ಅಗೆಯುತ್ತೀರಾ? ಅಂತಾ ಸುನೀಲ್ ತಿರುಗೇಟು ನೀಡಿದ್ರು.

    ಮತ್ತೆ ಉತ್ತರ ಕೊಟ್ಟ ಪರಮೇಶ್ವರ್, ಎಸ್‌ಐಟಿ ತನಿಖೆ ಮುಗಿಯುವವರೆಗೂ ನಾವು ಮಧ್ಯಪ್ರವೇಶ ಮಾಡಲ್ಲ, ತನಿಖೆ ನಂತರ ವರದಿ ಪಡೆಯುತ್ತೇವೆ ಅಂತಾ ಸ್ಪಷ್ಟನೆ ಕೊಟ್ಟರು. ನಿಯಮ 69ರಡಿ ಚರ್ಚೆಗೆ ಅವಕಾಶ ನೀಡುವಂತೆ ಬಿಜೆಪಿ ಮನವಿ ಮಾಡಿದ್ದು, ನಾಳೆ, ನಾಡಿದ್ದು ಕಲಾಪದಲ್ಲಿ ಚರ್ಚೆಗೆ ಅವಕಾಶ ಸಿಗುತ್ತಾ ಎಂಬುದನ್ನ ಕಾದುನೋಡಬೇಕಿದೆ. ಇದನ್ನೂ ಓದಿ: ರಾಜಣ್ಣ ಮಾಡಿದ ಘೋರ ಅಪರಾಧವೇನು? ಸಿಎಂ ಸದನದಲ್ಲಿ ಉತ್ತರಿಸಲಿ: ವಿಜಯೇಂದ್ರ ಆಗ್ರಹ

  • ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಬಿಲ್‌ಗೆ ಪರಿಷತ್‌ನಲ್ಲಿ ಸೋಲು; ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗ

    ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಬಿಲ್‌ಗೆ ಪರಿಷತ್‌ನಲ್ಲಿ ಸೋಲು; ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗ

    – ಮೇಲ್ಮನೆಯಲ್ಲಿ ದೋಸ್ತಿಗಳಿಂದ ಜೈಶ್ರೀರಾಮ್ ಘೋಷಣೆ
    – ಕಾಂಗ್ರೆಸ್ ಶಾಸಕರು, ಸಚಿವರಿಂದ ಜೈಭೀಮ್, ಭಾರತ್ ಮಾತಾಕಿ ಜೈ ಘೋಷಣೆ

    ಬೆಂಗಳೂರು: ಬಿಜೆಪಿ-ಕಾಂಗ್ರೆಸ್ (BJP – Congress) ನಡುವೆ ಸಂಘರ್ಷಕ್ಕೆ ಕಾರಣವಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ ಪರಿಷತ್‌ನಲ್ಲಿ (Legislative Council) ತಿರಸ್ಕೃತಗೊಂಡಿದ್ದು, ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ.

    ಸರ್ಕಾರದ ತಿದ್ದುಪಡಿ ಮಸೂದೆ ತಿರಸ್ಕೃತಗೊಳ್ಳುತ್ತಿದ್ದಂತೆ ಬಿಜೆಪಿ ಸದಸ್ಯರು ಜೈಶ್ರೀರಾಮ್ (Jai Sriram) ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಅಲ್ಲಿದ್ದ ಬೆರಳೆಣಿಕೆಯಷ್ಟು ಕಾಂಗ್ರೆಸ್ ಸದಸ್ಯರು ಜೈಭೀಮ್, ಭಾರತ್ ಮಾತಾಕಿ ಜೈ ಎಂಬ ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: ಗೋಧ್ರಾ ಮಾದರಿಯಲ್ಲಿ ರೈಲು ಸುಟ್ಟು ಹಾಕುವುದಾಗಿ ಬೆದರಿಕೆ: ಸಮಗ್ರ ತನಿಖೆಗೆ ಸಿ.ಟಿ.ರವಿ ಆಗ್ರಹ

    ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಈ ಮಸೂದೆಯನ್ನು ಮಂಡಿಸುತ್ತಲೇ ನಿರೀಕ್ಷೆಯಂತೆಯೇ ಬಿಜೆಪಿ-ಜೆಡಿಎಸ್ ಶಾಸಕರು ತೀವ್ರವಾಗಿ ವಿರೋಧಿಸಿದ್ರು. ಒಂದು ಕೋಟಿ ರೂ.ಗಿಂತಲೂ ಅಧಿಕ ಆದಾಯ ಬರುವ ದೇವಾಲಯಗಳಲ್ಲಿ 10% ಹಣ ಪಡೆಯೋ ಸರ್ಕಾರದ ನಿಲುವು ಸರಿಯಲ್ಲ. ಅಸಲಿಗೆ ದೇವಾಲಯದ ಹಣ ಯಾಕೆ ಪಡೆದುಕೊಳ್ತೀರಾ? ಸರ್ಕಾರವೇ 100 ಕೋಟಿ ಹಣ ಬಿಡುಗಡೆ ಮಾಡಲಿ ಎಂದು ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದರು. ಇದನ್ನೂ ಓದಿ: ಅಯೋಧ್ಯೆ ಯಾತ್ರಿಕರ ರೈಲು ಗಲಾಟೆ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣದ ಫಲ: ಪ್ರಹ್ಲಾದ್ ಜೋಶಿ

    ಜೆಡಿಎಸ್ ಸದಸ್ಯ ಶರವಣ, ಈ ಸರ್ಕಾರ ದೇವರ ಹಣದಲ್ಲೂ ಪರ್ಸೆಂಟೇಜ್ ಪಡೆಯೋಕೆ ಹೋಗ್ತಿದೆ ಎಂದು ಆರೋಪಿಸಿದರು. ಇದಕ್ಕೆ ಆಡಳಿತ ಪಕ್ಷದಿಂದ ತೀವ್ರ ಆಕ್ರೋಶ ವ್ಯಕ್ತವಾಯ್ತು. ಆದ್ರೂ ತಗ್ಗದ ವಿಪಕ್ಷಗಳು ಈ ಮಸೂದೆಯನ್ನ ವಾಪಸ್ ಪಡೆಯಬೇಕು, ಇಲ್ಲವೇ ಮತಕ್ಕೆ ಹಾಕಬೇಕು ಎಂದು ಪಟ್ಟು ಹಿಡಿದು ಕುಳಿತವು. ಇದಕ್ಕೆ ಸಚಿವ ರಾಮಲಿಂಗಾರೆಡ್ಡಿ ತಣ್ಣಗಾದರು. ಕೆಲ ತಿದ್ದುಪಡಿಗಳೊಂದಿಗೆ ಸೋಮವಾರ ಮತ್ತೆ ಮಂಡಿಸುತ್ತೇವೆ ಎಂಬ ಸಚಿವರ ಮಾತಿಗೆ ಉಪಸಭಾಪತಿಗಳು ಆಕ್ಷೇಪ ವ್ಯಕ್ತಪಡಿಸಿದರು. ಹಾಗೆ ಮಾಡಲು ಆಗಲ್ಲ ಎಂದು ಸೂಚನೆ ನೀಡಿದರು. ಕೊನೆಗೆ ಉಪಸಭಾಪತಿಗಳು ಮಸೂದೆಯನ್ನು ಮತಕ್ಕೆ ಹಾಕಿದ್ದು, ಸರ್ಕಾರಕ್ಕೆ ಸೋಲಾಯಿತು.

    ಸರ್ಕಾರದ ವಿರುದ್ಧವೇ ಖಂಡನಾ ನಿರ್ಣಯ:
    ಕೇಂದ್ರದ ವಿರುದ್ಧ ಎರಡು ನಿರ್ಣಯಗಳನ್ನು ಮಂಡಿಸುವ ಮೂಲಕ ಸಿದ್ದರಾಮಯ್ಯ ಸರ್ಕಾರ ಗುರುವಾರ ವಿಪಕ್ಷಗಳಿಗೆ ಶಾಕ್ ನೀಡಿತ್ತು. ಶುಕ್ರವಾರ ರಾಜ್ಯ ಸರ್ಕಾರದ ವಿರುದ್ಧ ಖಂಡನಾ ನಿರ್ಣಯ ಮಂಡಿಸುವ ಮೂಲಕ ಬಿಜೆಪಿ ಟಕ್ಕರ್ ನೀಡಿದೆ. ಸರ್ಕಾರದ ಹಣಕಾಸು ನೀತಿ ಸರಿಯಿಲ್ಲ ಮತ್ತು ಕೇಂದ್ರದ ವಿರುದ್ಧ ಸುಳ್ಳು ಆರೋಪ ಮಾಡ್ತಿದ್ದಾರೆ ಎಂದು ಆರೋಪಿಸಿ ವಿಪಕ್ಷ ನಾಯಕ ಅಶೋಕ್ ಖಂಡನಾ ನಿರ್ಣಯ ಮಂಡಿಸಿದರು. ಇದನ್ನೂ ಓದಿ: ಡಾ.ಮಂಜುನಾಥ್ ಏನು ತೀರ್ಮಾನ ಮಾಡ್ತಾರೆ ಎಂದು ಸಮಯ ಬಂದಾಗ ನೋಡೋಣ: ಹೆಚ್‍ಡಿಕೆ