Tag: ಕರ್ಫ್ಯೂ

  • ಸೋಂಕು ಕಡಿಮೆ ಇದ್ದಾಗ ಕರ್ಫ್ಯೂ ವಿಧಿಸಿ, ಹೆಚ್ಚಾದಾಗ ಕರ್ಫ್ಯೂ ಹಿಂಪಡೆದಿದ್ದಾರೆ: ಡಿಕೆಶಿ

    ಸೋಂಕು ಕಡಿಮೆ ಇದ್ದಾಗ ಕರ್ಫ್ಯೂ ವಿಧಿಸಿ, ಹೆಚ್ಚಾದಾಗ ಕರ್ಫ್ಯೂ ಹಿಂಪಡೆದಿದ್ದಾರೆ: ಡಿಕೆಶಿ

    ಬೆಂಗಳೂರು: ಇದು ಬಿಜೆಪಿ ಕರ್ಫ್ಯೂ. ಅವರಿಗೆ ಬೇಕಾದಾಗ ವಿಧಿಸುತ್ತಾರೆ, ಬೇಡವಾದಾಗ ತೆರವುಗೊಳಿಸುತ್ತಾರೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ನಾವು ಪಾದಯಾತ್ರೆ ಮಾಡುತ್ತೇವೆ ಎಂಬ ಕಾರಣಕ್ಕೆ ಜನರಿಗೆ ಕೊಡಬಾರದ ಕಷ್ಟ ಕೊಟ್ಟರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ.

    ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಸೋಂಕು ಪ್ರಮಾಣ ಕಡಿಮೆ ಇದ್ದಾಗ ಕರ್ಫ್ಯೂ ವಿಧಿಸಿದ್ದವರು, ಸೋಂಕು ಪ್ರಮಾಣ ಹೆಚ್ಚಾದಾಗ ಕರ್ಫ್ಯೂ ಹಿಂಪಡೆದಿದ್ದಾರೆ. ರಾಜಕೀಯ ಕಾರಣಕ್ಕೆ ಅವರು ಈ ರೀತಿ ಮಾಡುತ್ತಿದ್ದಾರೆ ಎಂದರು. ಕರ್ಫ್ಯೂ ವಿಧಿಸಿದ್ದರಿಂದ ಜನರಿಗೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದೆ. ಹಣ್ಣು, ತರಕಾರಿ ಬೆಳೆಯುವವರ, ಮಾರುವವರ ಪರಿಸ್ಥಿತಿ ಏನಾಗಿದೆ ಎಂದು ನೋಡಿದ್ದೀರಿ. ಕೆಎಸ್ಆರ್‌ಟಿಸಿ, ಮೆಟ್ರೋದಲ್ಲಿ ಪೂರ್ಣ ಪ್ರಮಾಣದಲ್ಲಿ ಪ್ರಯಾಣ ಮಾಡಬಹುದು, ವಿಮಾನಗಳಲ್ಲಿಯೂ ಪೂರ್ಣ ಪ್ರಮಾಣದಲ್ಲಿ ಪ್ರಯಾಣ ಮಾಡಬಹುದು. ಬಡವರು, ಹೊಟೇಲ್ ನವರು, ಚಿತ್ರಮಂದಿರಗಳವರು ಹಾಗೂ ಇತರರು ಶೇ.50 ರಷ್ಟು ಮಾತ್ರ ವ್ಯಾಪಾರ ಮಾಡಬೇಕಂತೆ. ಕುಟುಂಬ ಸದಸ್ಯರು ವಾಹನಗಳಲ್ಲಿ ಸಂಚಾರ ಮಾಡುವಾಗ ಶೇ.50ರಷ್ಟು ನಿಯಮ ಪಾಲನೆ ಮಾಡಲು ಸಾಧ್ಯವೇ? ಸರ್ಕಾರ ಪ್ರಾಯೋಗಿಕವಾಗಿ ಯೋಚಿಸಬೇಕು. ಈ ಸರ್ಕಾರ ಆ ರೀತಿ ಯೋಚಿಸುತ್ತಿಲ್ಲ ಎಂದು ಆರೋಪಿಸಿದರು. ಇದನ್ನೂ ಓದಿ: ಪ್ರಿಯತಮೆ ಕೈಕೊಟ್ಟಿದ್ದಕ್ಕೆ ಆಕೆಯ ಸಹೋದರನನ್ನೇ ಕಿಡ್ನಾಪ್ ಮಾಡಿದ ಭೂಪ

    ಬೇರೆಲ್ಲೂ ಇಲ್ಲದ ನಿಯಮ ಇಲ್ಲಿ ಯಾಕೆ?: ಔಷಧಿ ನೀಡಿ, ಸಹಾಯ ಮಾಡಿ, ಆರೋಗ್ಯ ಕಾಪಾಡಿ ಸರ್ಕಾರ ಜನರಿಗೆ ಮಾನಸಿಕವಾಗಿ ಧೈರ್ಯ ತುಂಬಬೇಕು. ಆದರೆ ಈ ಸರ್ಕಾರ ಅವೈಜ್ಞಾನಿಕವಾಗಿ ನಿಯಮಗಳನ್ನು ಜಾರಿ ಮಾಡುತ್ತಿದೆ. ಸರ್ಕಾರಗಳು ರಾಜ್ಯ ಹಾಗೂ ದೇಶದ ಆರ್ಥಿಕತೆ ನೋಡಬೇಕು. ಆಂಧ್ರ, ತೆಲಂಗಾಣ ಹಾಗೂ ಬೇರೆ ರಾಜ್ಯಗಳಲ್ಲಿ ಇಲ್ಲದ ನಿಯಮ ಇಲ್ಲಿ ಯಾಕೆ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದರು. ಇದನ್ನೂ ಓದಿ: ಮೊದ್ಲು ಜನ್ರಿಗೆ ಆದಾಯ ಬರುವಂತೆ ಮಾಡಿ, ಆಮೇಲೆ ದರ ಏರಿಕೆ ಮಾಡಿ: ಡಿಕೆಶಿ

    ವಿದ್ಯುತ್ ದರ ಏರಿಕೆ ಪ್ರಸ್ತಾಪದ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಅವರು, ಜನಸಾಮಾನ್ಯರ ಆದಾಯ ಖಾತರಿ ಮತ್ತು ಹೆಚ್ಚಳಕ್ಕೆ ಸರ್ಕಾರ ಮೊದಲು ಕ್ರಮ ಕೈಗೊಳ್ಳಲಿ. ಅವರಿಗೆ ಆದಾಯ ಬಂದ ಮೇಲೆ ವಿದ್ಯುತ್ ದರ ಏರಿಕೆ ಮಾಡಲಿ. ಹಾಲಿನ ದರ, ವಿದ್ಯುತ್ ದರ ಹೆಚ್ಚಿಸುತ್ತಿದ್ದಾರೆ. ರೈತನಿಗೆ ತೊಂದರೆ ಆದಾಗ ಅವನ ರಕ್ಷಣೆಗೆ ಸರ್ಕಾರ ಯಾಕೆ ನಿಲ್ಲಲಿಲ್ಲ? ಬೆಳೆ ದರ ಏಕೆ ಹೆಚ್ಚಿಸಲಿಲ್ಲ? ಬೆಂಬಲ ಬೆಲೆ ಯಾಕೆ ನೀಡಲಿಲ್ಲ. ಏರಿಕೆಯಾಗಿರುವ ಕಬ್ಬಿಣ, ಸಿಮೆಂಟ್ ದರ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಿಲ್ಲ. ಈಗ ವಿದ್ಯುತ್ ದರ ಬಾಕಿ ಕೊಡಬೇಕು ಎನ್ನುತ್ತಿದ್ದಾರೆ. ವಿದ್ಯುತ್ ಕಂಪನಿಗಳ ಪರಿಸ್ಥಿತಿ ಹೇಗಿದೆ ಎಂದು ನಮಗೆ ಗೊತ್ತಿದೆ. ಸರ್ಕಾರ ಸಾರ್ವಜನಿಕರಿಗೆ ಅನುಕೂಲವಾಗುವ ಕ್ರಮ ಕೈಗೊಳ್ಳಬೇಕು ಎಂದರು. ಇದನ್ನೂ ಓದಿ: ಕೋವಿಡ್‌ ಯಾರನ್ನೂ ಬಿಟ್ಟಿಲ್ಲ, ದೇವೇಗೌಡರಿಗೆ ಕೊರೊನಾ ತೀವ್ರತೆ ಇಲ್ಲ: ಬೊಮ್ಮಾಯಿ

    ತಮಿಳುನಾಡು ಆರಂಭಿಸಲಿರುವ ಹೊಗೇನಕಲ್ ಯೋಜನೆ ಬಗ್ಗೆ ಮಾತನಾಡಿದ ಅವರು, ಈ ವಿಚಾರವಾಗಿ ಈಗ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಸರ್ಕಾರ ಏನೆಲ್ಲಾ ಹೇಳಿಕೆ ನೀಡುತ್ತದೆಯೋ ನೀಡಲಿ. ನಂತರ ಮಾತನಾಡುತ್ತೇನೆ ಎಂದರು.

    ಕಾಂಗ್ರೆಸ್‌ ಸದಸ್ಯತ್ವಕ್ಕೆ ಆನ್‌ಲೈನ್‌ ನೋಂದಣಿ!: ನಾವು ಆನ್‌ಲೈನ್ ಹಾಗೂ ಆಫ್‌ಲೈನ್‌ ಸದಸ್ಯತ್ವ ನೋಂದಣಿ ಮಾಡುತ್ತಿದ್ದೇವೆ. ಪ್ರತಿಯೊಬ್ಬರಿಗೂ ಆನ್‌ಲೈನ್ ಸದಸ್ಯತ್ವ ಅವಕಾಶ ನೀಡಲಾಗಿದೆ. ಮಾರ್ಚ್‌ವರೆಗೂ ಸದಸ್ಯತ್ವ ನೋಂದಣಿ ಅಭಿಯಾನ ನಡೆಯಲಿದೆ. ನಂತರವೂ ಸದಸ್ಯತ್ವ ನೀಡುತ್ತೇವೆ. ಆದರೆ ಪಕ್ಷದ ಆಂತರಿಕ ಚುನಾವಣೆಗಳಲ್ಲಿ ಮತದಾನದ ಹಕ್ಕು ಪಡೆಯಬೇಕಾದರೆ ಈ ಅಭಿಯಾನದ ಕಾಲಾವಧಿಯಲ್ಲಿಯೇ ಸದಸ್ಯತ್ವ ನೋಂದಣಿ ಮಾಡಿಸಿಕೊಳ್ಳಬೇಕು. ಪ್ರತಿ ಬೂತ್‌ಗೆ ಇಬ್ಬರು ಕಾರ್ಯಕರ್ತರ ನೇಮಕಕ್ಕೆ ಸೂಚನೆ ನೀಡಲಾಗಿದೆ. ಆನ್‌ಲೈನ್ ಸದಸ್ಯತ್ವ ಹೇಗೆ ಮಾಡಬೇಕು ಎಂಬುದಕ್ಕೆ ಈಗ ತರಬೇತಿ ನೀಡಲಾಗುತ್ತಿದೆ ಎಂದರು.

  • ಕರ್ಫ್ಯೂ ಬಗ್ಗೆ ರಾಜಕಾರಣಿಗಳು, ತಜ್ಞರ ಅಭಿಪ್ರಾಯದಲ್ಲಿ ವ್ಯತ್ಯಾಸ ಇರುತ್ತೆ: ಸಚಿವ ಸುಧಾಕರ್

    ಕರ್ಫ್ಯೂ ಬಗ್ಗೆ ರಾಜಕಾರಣಿಗಳು, ತಜ್ಞರ ಅಭಿಪ್ರಾಯದಲ್ಲಿ ವ್ಯತ್ಯಾಸ ಇರುತ್ತೆ: ಸಚಿವ ಸುಧಾಕರ್

    ಚಿಕ್ಕಬಳ್ಳಾಪುರ: ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ರದ್ದು ಮಾಡಬೇಕಾ ಅಥವಾ ಬೇಡವೇ ಎಂಬ ವಿಚಾರವಾಗಿ ರಾಜಕಾರಣಿಗಳು ಹಾಗೂ ತಜ್ಞರ ಅಭಿಪ್ರಾಯದಲ್ಲಿ ವ್ಯತ್ಯಾಸ ಇರುತ್ತದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ತಿಳಿಸಿದ್ದಾರೆ.

    ರಾಜಕಾರಣಿಗಳು ಹಾಗೂ ತಜ್ಞರ ಹೇಳಿಕೆಗೆ ವ್ಯತ್ಯಾಸ ಇರುತ್ತದೆ. ಸರ್ಕಾರ ಎಲ್ಲಾ ದೃಷ್ಟಿಕೋನದಿಂದಲೂ ನೋಡಿ ಜವಾಬ್ದಾರಿಯಿಂದ ನಿರ್ಧಾರ ತೆಗೆದುಕೊಳ್ಳಲಿದೆ. ಕರ್ಫ್ಯೂ ಸಂಬಂಧ ಸಿಎಂ ನಾಳಿನ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಈ ವಾರ ವೀಕೆಂಡ್‌ ಕರ್ಫ್ಯೂ ಡೌಟ್‌ – ಸರ್ಕಾರದ ಮುಂದಿರುವ ಆಯ್ಕೆಗಳೇನು?

    ಕೊರೊನಾ ಮೂರನೇ ಅಲೆ ಬಹಳ ವೇಗವಾಗಿ ಹರಡುತ್ತದೆ. ಬಹುಶಃ ಮುಂದಿನ 20 ದಿನ ಅಥವಾ 4 ವಾರ ಹೀಗೆಯೇ ಮುಂದುವರಿಯಲಿದೆ. ತಜ್ಞರ ಅಭಿಪ್ರಾಯ ಕೂಡ ಇದೇ ಆಗಿದೆ. ಪ್ರತಿ ದಿನ 60,000ದಿಂದ 1.20 ಲಕ್ಷ ಪ್ರಕರಣ ವರದಿಯಾಗುವ ಸಾಧ್ಯತೆ ಇದೆ. ಹಾಗೆಯೇ ಬಹಳ‌ ಬೇಗನೆ ಕಡಿಮೆಯೂ ಆಗಲಿದೆ. ಈ ಬಗ್ಗೆ ಜನರಿಗೆ ಮನವರಿಕೆ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

    ಆಸ್ಪತ್ರೆಗಳಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿಗೆ ಸೋಂಕು ತಗುಲುತ್ತಿದೆ. ಈ ಬಗ್ಗೆಯೂ ಹೆಚ್ಚು ಗಮನ ಹರಿಸಿದ್ದೇವೆ. ಜನರು ಕೊರೊನಾ ನಿಯಮಗಳನ್ನು ಪಾಲನೆ ಮಾಡಬೇಕು. ಲಸಿಕೆ ಹಾಕಿಸಿಕೊಳ್ಳಬೇಕು, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಈ ಎರಡನ್ನೂ ಪಾಲನೆ ಮಾಡಿದರೆ ಸೋಂಕು ನಿಯಂತ್ರಣ ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಮೂರನೇ ಅಲೆ ಅಧಿಕೃತ – ವಿಶ್ವದಲ್ಲಿ ಕೊರೊನಾ ನಾಲ್ಕನೇ ಅಲೆ ಆರಂಭ

  • ಬಿಜೆಪಿಯವರಿಂದಲೇ ಹೆಚ್ಚು ಕೊರೊನಾ ನಿಯಮ ಉಲ್ಲಂಘನೆ : ಸಿದ್ದು

    ಬಿಜೆಪಿಯವರಿಂದಲೇ ಹೆಚ್ಚು ಕೊರೊನಾ ನಿಯಮ ಉಲ್ಲಂಘನೆ : ಸಿದ್ದು

    – ಪದೇ ಪದೇ ವೀಕೆಂಡ್ ಲಾಕ್‍ಡೌನ್ ಮಾಡುವುದು ಸರಿಯಲ್ಲ

    ಮಂಡ್ಯ: ರಾಜ್ಯದಲ್ಲಿ ಹಾಗೂ ದೇಶದಲ್ಲಿ ಕೊರೊನಾ ನಿಯಮಗಳು ಅತೀ ಹೆಚ್ಚು ಉಲ್ಲಂಘನೆ ಆಗಿದ್ದರೆ ಅದು ಬಿಜೆಪಿ ಅವರಿಂದನೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

    ಮಂಡ್ಯದ ಗೌಡಹಳ್ಳಿ ಗೇಟ್ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಮಗಳನ್ನು ಅತೀ ಹೆಚ್ಚು ಉಲ್ಲಂಘನೆ ಮಾಡುತ್ತಿರುವುದು ಬಿಜೆಪಿ ಅವರು. ಬಿಜೆಪಿ ಅವರದ್ದು, ಡಬಲ್ ಸ್ಟ್ಯಾಂಡ್.  ಹೇಳುವುದೇ ಒಂದು ಮಾಡುವುದು ಇನ್ನೊಂದು ಎಂದು ಹೇಳಿದರು. ಇದನ್ನೂ ಓದಿ:  ಮಹಿಳಾ ಉದ್ದೇಶಿತ ಆಯವ್ಯಯದಡಿ ಮುದ್ರಣ, ವಿದ್ಯುನ್ಮಾನ ಮಾಧ್ಯಮ ವೃತ್ತಿಪರ ತರಬೇತಿಗಾಗಿ ಅರ್ಜಿ ಆಹ್ವಾನ

    ಉಮೇಶ್ ಕತ್ತಿ ವಿಚಾರವಾಗಿ ಮಾತನಾಡಿದ ಅವರು, ಅವನ್ಯಾರೋ ಕತ್ತಿ ಇದಾನಲ್ಲಾ ಅವನು ಮಾಸ್ಕ್ ಹಾಕೋದೇ ಇಲ್ಲ. ಕೇಳಿದ್ರೆ ಅದು ಅವರವರ ಇಷ್ಟ ಅಂತಾನೇ. ಮಂತ್ರಿಯಾದವನು ಹೀಗೆ ಹೇಳ್ತಾನೆ ಅಂದ್ರೆ, ಆತ ಮಂತ್ರಿ ಆಗಲು ಲಾಯಕ್ಕಾ? ಬೇರೆಯವರು ಮಾಸ್ಕ್ ಹಾಕದೇ ಇದ್ದರೆ ಫೈನ್ ಹಾಕ್ತಾರೆ, ಮಂತ್ರಿಗೆ ಯಾಕ್ ಫೈನ್ ಹಾಕಿಲ್ಲ ಎಂದು ಕಿಡಿಕಾರಿದರು.

    ವೀಕೆಂಡ್ ಲಾಕ್‍ಡೌನ್ ಕುರಿತು ಮಾತನಾಡಿದ ಅವರು, ವೀಕೆಂಡ್ ಕರ್ಫ್ಯೂನಿಂದ ಕೊರೊನಾ ತಡೆಯಲು ಅಸಾಧ್ಯ. ರಾಜ್ಯ ಸರ್ಕಾರ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಕ್ಸಿನ್ ಮಾಡಲಿ. ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಅವುಗಳು ಸರಿಯಾಗಿ ಪಾಲನೆಯಾಗುವಂತೆ ಕ್ರಮವಹಿಸಬೇಕು. ಅದನ್ನು ಬಿಟ್ಟು ಹೀಗೆ ವೀಕೆಂಡ್ ಲಾಕ್‍ಡೌನ್ ಎಂದು ಪದೇ ಪದೇ ಹೇಳುವುದು ಸರಿಯಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಾಂಶುಪಾಲರಿಗೆ ಕಪಾಳಮೋಕ್ಷ ಮಾಡಿದ ಪ್ರಾಧ್ಯಾಪಕರು!

  • ಬಾಣಂತಿ ದೇವಿ ಜಾತ್ರೆ- ಕೋವಿಡ್ ನಿಯಮ ಗಾಳಿಗೆ ತೂರಿದ ಭಕ್ತರು

    ಬಾಣಂತಿ ದೇವಿ ಜಾತ್ರೆ- ಕೋವಿಡ್ ನಿಯಮ ಗಾಳಿಗೆ ತೂರಿದ ಭಕ್ತರು

    ಕಾರವಾರ: ಕೋವಿಡ್ ನಿಯಮ ಗಾಳಿಗೆ ತೂರಿ, ವಿಕೇಂಡ್ ಕರ್ಫ್ಯೂನಲ್ಲೆ ವಿಜೃಂಭಣೆಯಿಂದ ಬಾಣಂತಿ ದೇವಿ ಜಾತ್ರೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಸಾಲಗಾಂವ ಗ್ರಾಮದಲ್ಲಿ ಇಂದು ನಡೆದಿದೆ.

    ಮಕ್ಕಳಿಲ್ಲದ ಎಷ್ಟೋ ದಂಪತಿ ಹರಕೆ ಕಟ್ಟಿಕೊಳ್ಳುವುದು ಈ ಜಾತ್ರೆಯ ವಿಶೇಷ. ಮಕ್ಕಳಾದ ನಂತರದಲ್ಲಿ ಹರಕೆ ತೀರಿಸಲು ಕೆರೆ ನೀರಲ್ಲಿ ಮಗುವನ್ನುಅರ್ಧ ಮುಳುಗಿಸುವ ಪದ್ದತಿ ಈ ಜಾತ್ರೆಯ ವಿಶೇಷವಾಗಿದೆ. ತಾಲೂಕು ಆಡಳಿತ ಹಾಗೂ ಪೊಲೀಸ್‌ ಸಿಬ್ಬಂದಿ ಸೋಂಕಿನ ಕುರಿತಾಗಿ ಎಚ್ಚರಿಕೆ ನೀಡಿದರೂ ದೇವಸ್ಥಾನ ಆಡಳಿತ ಮಂಡಳಿ ಜಾತ್ರೆ ನಡೆಸಿದೆ. ಸಾಲಗಾಂವ ಗ್ರಾಮದ ಅಕ್ಕಪಕ್ಕದ ಹಳ್ಳಿ ಹಾಗೂ ಧಾರವಾಡ ,ಹುಬ್ಬಳ್ಳಿಯಿಂದ ಸಾವಿರಾರು ಜನರು ಜಾತ್ರೆಯಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ:  ಮೇಕೆದಾಟು ಪಾದಯಾತ್ರೆ ಬಿಸಿ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೂ ಕೊರೊನಾ ದೃಢ

    ಜಿಲ್ಲಾಧಿಕಾರಿ ಆದೇಶಕ್ಕೆ ಕಿಮ್ಮತ್ತು ನೀಡದ ದೇವಸ್ಥಾನ ಆಡಳಿತ ಮಂಡಳಿ: ಈಗಾಗಲೇ ಜಿಲ್ಲಾಡಳಿತ ಜಾತ್ರೆ ನಡೆಸಲು ನಿರ್ಬಂಧ ಹೇರಿದೆ. ಆದರೇ ಸಾಲಗಾಂವನಲ್ಲಿ ಆಡಳಿತ ಮಂಡಳಿ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೇ ಜಾತ್ರೆ ನಡೆಸುವ ಜೊತೆ ವಾಣಿಜ್ಯ ಮಳಿಗೆಗಳನ್ನು ಸಹ ತೆರೆದು ಸಾವಿರಾರು ಜನರು ಸೇರುವಂತೆ ಮಾಡಿದ್ದು, ಜನರು ಸಹ ವೀಕೆಂಡ್ ಕರ್ಫ್ಯೂ ಇದ್ದರೂ ಸಾವಿರಾರು ಜನ ಜಾತ್ರೆಗೆ ಜಮಾಯಿಸಿದ್ದಾರೆ. ಇದನ್ನೂ ಓದಿ:  ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಪ್ರಿಯಾಂಕ್ ಖರ್ಗೆಗೂ ಕೊರೊನಾ ಪಾಸಿಟಿವ್

    ಪೊಲೀಸ್ ಇಲಾಖೆ, ಸ್ಥಳೀಯ ಆಡಳಿತ ವಿಫಲ: ವೀಕೆಂಡ್ ಕರ್ಫ್ಯೂ ಇದ್ದಿದ್ದರಿಂದ ಪೊಲೀಸರು ಆಯಾ ಕಟ್ಟಿನಲ್ಲಿ ಬ್ಯಾರಿಕೇಟ್ ಆಳವಡಿಸಿ ಬಂದೋಬಸ್ತ್ ಮಾಡಿದ್ದರು. ಆದರೆ ಕಠಿಣ ನಿಯಮ ಜಾರಿಗೆ ತರದ ಹಿನ್ನಲೆಯಲ್ಲಿ ಜನರು ಬೇಕಾಬಿಟ್ಟಿಯಾಗಿ ಜಾತ್ರೆಗೆ ಆಗಮಿಸಿದ್ದರು. ಸದ್ಯ ಇಲಾಖೆ ಎಚ್ಚರಿಕೆ ನೀಡಿದ್ದನ್ನು ಹೊರತುಪಡಿಸಿದ್ರೆ ಈವರೆಗೂ ಪ್ರಕರಣ ದಾಖಲಿಸಿಲ್ಲ.

  • ಜನಸಾಮಾನ್ಯರಿಗೊಂದು, ಕಾಂಗ್ರೆಸ್‍ಗೆ ಒಂದು ಕಾನೂನು ಇಲ್ಲ: ಆರಗ ಜ್ಞಾನೇಂದ್ರ

    ಜನಸಾಮಾನ್ಯರಿಗೊಂದು, ಕಾಂಗ್ರೆಸ್‍ಗೆ ಒಂದು ಕಾನೂನು ಇಲ್ಲ: ಆರಗ ಜ್ಞಾನೇಂದ್ರ

    ಬೆಂಗಳೂರು: ಇಡೀ ರಾಜ್ಯಕ್ಕೆ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ. ಜನಸಾಮಾನ್ಯರಿಗೊಂದು ಕಾನೂನು, ಕಾಂಗ್ರೆಸ್‍ಗೆ ಒಂದು ಕಾನೂನು ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿರುವ ಕುರಿತಾಗಿ ಕಿಡಿಕಾರಿದ್ದಾರೆ.

    ಕಾಂಗ್ರೆಸ್ ಪಾದಯಾತ್ರೆ ಕುರಿತಾಗಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಇಡೀ ರಾಜ್ಯಕ್ಕೆ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ. ಜನಸಾಮಾನ್ಯರಿಗೆ ಒಂದು, ಕಾಂಗ್ರೆಸ್‌ಗೆ ಒಂದು  ಕಾನೂನು ಇಲ್ಲ. ಎಲ್ಲರಿಗೂ ಒಂದೇ ಕಾನೂನು ಇದೆ. ಆದರೆ ಕಾಂಗ್ರೆಸ್ ಕಾನೂನು ಮೀರಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

    ಕಾಂಗ್ರೆಸ್‍ನವರನ್ನು ಜನ ಗಮನಿಸುತ್ತಿದ್ದಾರೆ. ಐದು ವರ್ಷ ಆಡಳಿತ ನಡೆಸಿದಾಗ ಕಾಂಗ್ರೆಸ್‍ಗೆ ಮೇಕೆದಾಟು ನೆನಪಾಗಲಿಲ್ಲ. ಅಧಿಕಾರದಲ್ಲಿದ್ದಾಗ ಮೇಕೆದಾಟು ಮರೆತಿದ್ದ ಕಾಂಗ್ರೆಸ್ ಜನರಲ್ಲಿ ಕ್ಷಮೆ ಕೇಳಬೇಕು. ಕಾಂಗ್ರೆಸ್ ವಿರುದ್ಧ ಕ್ರಮ ಕೈಗೊಳ್ಳುವ ಸಂಪೂರ್ಣ ಅಧಿಕಾರ ಜಿಲ್ಲಾಡಳಿತಕ್ಕೆ ನೀಡಿದ್ದೇವೆ.  ಯಾವ ಕ್ರಮ ಅಂತ ಆಮೇಲೆ ಗೊತ್ತಾಗುತ್ತದೆ ಎಂದು ವಿರೋಧ ಪಕ್ಷಕ್ಕೆ ಎಚ್ಚರಿಕೆ ನೀಡಿದ್ದಾರೆ.

  • ರೈತ ಗೀತೆ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್‌ ಚಾಲನೆ

    ರೈತ ಗೀತೆ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್‌ ಚಾಲನೆ

    ಬೆಂಗಳೂರು: ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಗೆ ರೈತ ಗೀತೆ ಮೂಲಕವಾಗಿ ಚಾಲನೆ ನೀಡಲಾಗಿದೆ.

    ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದೆ. ಕೈ ನಾಯಕರು ಮೊದಲ ದಿನ 15 ಕಿಲೋ ಮೀಟರ್ ಪಾದಯಾತ್ರೆ ಮಾಡಲಿದ್ದಾರೆ. ಸಂಗಮದಿಂದ ದೊಡ್ಡ ಆಲಹಳ್ಳಿಯವರೆಗೂ ಈ ಪಾದಯಾತ್ರೆ ನಡೆಯಲಿದೆ. ಇದನ್ನೂ ಓದಿ:  ಯಾರನ್ನಾದರೂ ಮುಟ್ಟಲಿ ನೋಡೋಣ, ನಾವು ಪಾದಯಾತ್ರೆ ಮಾಡಿಯೇ ಮಾಡುತ್ತೇವೆ: ಡಿಕೆಶಿ


    ಇಂದಿನಿಂದ ಜನವರಿ 18ರವರೆಗೆ ಪಾದಯಾತ್ರೆ ನಡೆಯಲಿದೆ. ನಮ್ಮ ನೀರು ನಮ್ಮ ಹಕ್ಕು ಘೋಷ ವಾಕ್ಯದೊಂದಿಗೆ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಆರಂಭಿಸಿದೆ. ಸಂಜೆಯ ವೇಳೆಗೆ ಕನಕಪುರವನ್ನು ತಲುಪಲಿದ್ದಾರೆ.

    ಮೇಕೆದಾಟು ಪಾದಯಾತ್ರೆ ಸಂಗಮದಲ್ಲಿ ಕೊರೊನಾ ರೂಲ್ಸ್ ದೊಡ್ಡ ಮಟ್ಟದಲ್ಲಿ ಉಲ್ಲಂಘನೆಯಾಗಿದೆ. ಕರ್ಫ್ಯೂ ನಿಯಮ ಮೀರಿ ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಇಲ್ಲದೆ ಸಾವಿರಾರು ಜನ ಸೇರಿದ್ದಾರೆ. ಕೊರೊನಾ ರೂಲ್ಸ್ ಪಾಲನೆ ಮಾಡುತ್ತೇವೆ ಅಂತ ಕಾಂಗ್ರೆಸ್ ಹೇಳಿತ್ತು. ನಿಯಮ ಮೀರಿ ಸಾವಿರಾರು ಜನ ಸಂಗಮದಲ್ಲಿ  ಜಮಾಯಿಸಿದ್ದಾರೆ

    ರಾಜ್ಯ, ಬೆಂಗಳೂರಿನ ಜನ ಹಿತಕ್ಕಾಗಿ ಈ ಪಾದಯಾತ್ರೆ ಮಾಡ್ತಿದ್ದೇವೆ. ನಾವು 2 ತಿಂಗಳ ಹಿಂದೆಯೇ ಪಾದಯಾತ್ರೆ ಘೋಷಣೆ ಮಾಡಿದ್ದೆವು. ಪಾದಯಾತ್ರೆ ಮಾಡಬಾರದು ಅಂತ ಕರ್ಫ್ಯೂ ಹಾಕಿದ್ದಾರೆ. ಕಾನೂನು ಭಂಗ ಮಾಡದೇ ಪಾದಯಾತ್ರೆ ಮಾಡುತ್ತೇವೆ ಎಂದು ಕನಕಪುರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

    ಮೇಕೆದಾಟು ಪಾದಯಾತ್ರೆ ಯೋಜನೆಯ ವಿವರ ಇಲ್ಲಿದೆ: 
    ಜನವರಿ 9 ರಂದು ಬೆಳಿಗ್ಗೆ 8-30ಕ್ಕೆ ಸಂಗಮದಲ್ಲಿ ಪಾದಯಾತ್ರೆ ಉದ್ಘಾಟನೆಯಾಗಿದೆ. ಮಧ್ಯಾಹ್ನ 1ಕ್ಕೆ ಹೆಗ್ಗನೂರು ತಲುಪಲಿದೆ. ಹೆಗ್ಗನೂರಿನಲ್ಲಿ ಭೋಜನ ನಂತರ ವಿಶ್ರಾಂತಿ ಪಡೆಯಲಿದ್ದಾರೆ. ಸಂಜೆ ವೇಳೆಗೆ ದೊಡ್ಡಆಲಹಳ್ಳಿ ತಲುಪಲಿರುವ ನಾಯಕರು, ಅಂದು ದೊಡ್ಡಆಲಹಳ್ಳಿಯಲ್ಲೇ ಸಭೆ ಸೇರಿ ವಾಸ್ತವ್ಯ ಮಾಡಲಿದ್ದಾರೆ.

    ಜನವರಿ 10ಕ್ಕೆ ದೊಡ್ಡಆಲಹಳ್ಳಿಯಿಂದ ಬೆಳಿಗ್ಗೆ 8:30ಕ್ಕೆ ಉಪಹಾರದ ನಂತರ ಪಾದಯಾತ್ರೆ ಆರಂಭ ಆಗಲಿದೆ. ಮಾದಪ್ಪನದೊಡ್ಡಿ ತಲುಪಲಿದೆ. ಪಾದಯಾತ್ರೆ, ಮಧ್ಯಾಹ್ನ 1ಕ್ಕೆ ಮಾದಪ್ಪನದೊಡ್ಡಿ ,ಕರಿಯಣ್ಣನದೊಡ್ಡಿ ತಲುಪಲಿದೆ. ಇಲ್ಲಿಯೇ  ಭೋಜನ ನಂತರ ವಿಶ್ರಾಂತಿ ಪಡೆಯಲಿದ್ದಾರೆ. ಸಂಜೆ ವೇಳೆಗೆ ಕನಕಪುರಟೌನ್ ತಲುಪಲಿರುವ ನಾಯಕರು ಅಂದು ಕನಕಪುರಟೌನಲ್ಲೇ ಸಭೆ, ವಾಸ್ತವ್ಯ ಮಾಡಲಿದ್ದಾರೆ.

    ಜನವರಿ 11ಕ್ಕೆ ಕನಕಪುರದಿಂದ ಬೆಳಿಗ್ಗೆ 8:30ಕ್ಕೆ ಉಪಹಾರದ ನಂತರ ಪಾದಯಾತ್ರೆ ಆರಂಭ ಆಗಲಿದೆ. ಗಾಣಾಳು ವೀರಭದ್ರಸ್ವಾಮಿ ದೇವಸ್ಥಾನ ಪಾದಯಾತ್ರೆ ತಲುಪಲಿದೆ. ಮಧ್ಯಾಹ್ನ 1ಕ್ಕೆ ಗಾಣಾಳು ವೀರಭದ್ರಸ್ವಾಮಿ ದೇವಸ್ಥಾನ ತಲುಪಲಿರುವ ಪಾದಯಾತ್ರೆ, ವೀರಭದ್ರಸ್ವಾಮಿ ದೇವಸ್ಥಾನದಲ್ಲಿ ಭೋಜನ ನಂತರ ವಿಶ್ರಾಂತಿ ಪಡೆಯಲಿದ್ದಾರೆ. ಸಂಜೆ ವೇಳೆಗೆ ಚಿಕ್ಕೇನಹಳ್ಳಿ ತಲುಪಲಿರುವ ಪಾದಯಾತ್ರೆ ಬಳಿಕ ಅಂದು ಚಿಕ್ಕೇನಹಳ್ಳಿ ಸಭೆ, ವಾಸ್ತವ್ಯ ಮಾಡಲಿದ್ದಾರೆ.

    ಜನವರಿ 12ಕ್ಕೆ ಚಿಕ್ಕೇನಹಳ್ಳಿಯಲ್ಲಿ ಬೆಳಿಗ್ಗೆ 8:30ಕ್ಕೆ ಉಪಹಾರದ ನಂತರ ಪಾದಯಾತ್ರೆ ಆರಂಭ ಆಗಲಿದೆ. ಮಧ್ಯಾಹ್ನ 1ಕ್ಕೆ ಕೃಷ್ಣಾಪುರದೊಡ್ಡಿ ಬಳಿ ಪಾದಯಾತ್ರೆ ತಲುಪಲಿದೆ.  ಕೃಷ್ಣಾಪುರದೊಡ್ಡಿಯಲ್ಲಿ ಭೋಜನ ನಂತರ ವಿಶ್ರಾಂತಿ ಪಡೆಯಲಿದ್ದಾರೆ. ಸಂಜೆ ವೇಳೆಗೆ ರಾಮನಗರ ಟೌನ್ ತಲುಪಲಿರುವ ಪಾದಯಾತ್ರೆ, ಅಂದು ರಾಮನಗರ ಟೌನ್‌ನಲ್ಲಿ ಸಭೆ,ವಾಸ್ತವ್ಯ ಮಾಡಲಿದ್ದಾರೆ.

    ಜನವರಿ 13ಕ್ಕೆ ರಾಮನಗರ ಟೌನ್ ಬಳಿ ಬೆಳಿಗ್ಗೆ 8:30ಕ್ಕೆ ಉಪಹಾರದ ನಂತರ ಪಾದಯಾತ್ರೆ ಆರಂಭ ಆಗಲಿದೆ. ಮಧ್ಯಾಹ್ನ 1ಕ್ಕೆ ಮಾಯಾಗಾನಹಳ್ಳಿ ರಾಷ್ಟ್ರೀಯ ಹೆದ್ದಾರಿ ಬಳಿ ಪಾದಯಾತ್ರೆ ತಲುಪಲಿದೆ. ಮಾಯಾಗಾನಹಳ್ಳಿಯಲ್ಲಿ ಭೋಜನ ನಂತರ ವಿಶ್ರಾಂತಿ ಪಡೆಯಲಿದ್ದಾರೆ. ಸಂಜೆ ವೇಳೆಗೆ ಬಿಡದಿ ತಲುಪಲಿರುವ ಪಾದಯಾತ್ರೆ, ಅಂದು ಬಿಡದಿಯಲ್ಲಿ ಸಭೆ, ವಾಸ್ತವ್ಯ ಮಾಡಲಿದ್ದಾರೆ.

    ಜನವರಿ 14ಕ್ಕೆ ಬಿಡದಿಯಲ್ಲಿ ಬೆಳಿಗ್ಗೆ 8:30ಕ್ಕೆ ಉಪಹಾರದ ನಂತರ ಪಾದಯಾತ್ರೆ ಆರಂಭ ಆಗಲಿದೆ. ಮಧ್ಯಾಹ್ನ 1ಕ್ಕೆ ರಾಜ್‍ಕುಮಾರ್ ಫಾರ್‍ಂ-ಮಂಚನಾಯಕನಹಳ್ಳಿಯನ್ನು ಪಾದಯಾತ್ರೆ ತಲುಪಲಿದೆ. ಮಂಚನಾಯಕನಹಳ್ಳಿಯಲ್ಲಿ ಭೋಜನ ನಂತರ ವಿಶ್ರಾಂತಿ ಪಡೆಯಲಿದ್ದಾರೆ. ಸಂಜೆ ವೇಳೆಗೆ ಕೆಂಗೇರಿ (ಪೂರ್ಣಿಮಾ ಕನ್ವೆಷನ್ ಹಾಲ್) ಬಳಿ ತಲುಪಲಿರುವ ಪಾದಯಾತ್ರೆ ಅಂದು ಕೆಂಗೇರಿ (ಪೂರ್ಣಿಮಾ ಕನ್ವೆಷನ್ ಹಾಲ್) ಯಲ್ಲಿ ಸಭೆ, ವಾಸ್ತವ್ಯ ಮಾಡಲಿದ್ದಾರೆ.

    ಜನವರಿ 15ಕ್ಕೆ ಕೆಂಗೇರಿ (ಪೂರ್ಣಿಮಾ ಕನ್ವೆಷನ್ ಹಾಲ್) ಬೆಳಿಗ್ಗೆ 8:30ಕ್ಕೆ ಉಪಹಾರದ ನಂತರ ಪಾದಯಾತ್ರೆ ಆರಂಭ ಆಗಲಿದೆ. ಮಧ್ಯಾಹ್ನ 1ಕ್ಕೆ ವೆಂಕಟಾದ್ರಿ ಚೌಟ್ರಿ ಬನಶಂಕರಿ ತಲುಪಲಿರುವ ಪಾದಯಾತ್ರೆ ವೆಂಕಟಾದ್ರಿ ಚೌಟ್ರಿ ಯಲ್ಲಿ ಭೋಜನ ನಂತರ ವಿಶ್ರಾಂತಿ ಪಡೆಯಲಿದ್ದಾರೆ. ಸಂಜೆ ವೇಳೆಗೆ ಸಾರಕ್ಕಿ ಸಿಗ್ನಲ್ (ಸಿಂಧೂರ ಕನ್ವೆಷನ್ ಹಾಲ್) ತಲುಪಲಿರುವ ಪಾದಯಾತ್ರೆ ಅಂದು ಸಾರಕ್ಕಿ ಸಿಗ್ನಲ್ (ಸಿಂಧೂರ ಕನ್ವೆಷನ್ ಹಾಲ್) ನಲ್ಲಿ ಸಭೆ, ವಾಸ್ತವ್ಯ ಮಾಡಲಿದ್ದಾರೆ.

    ಜನವರಿ 16ಕ್ಕೆ ಸಾರಕ್ಕಿ ಸಿಗ್ನಲ್ (ಸಿಂಧೂರ ಕನ್ವೆಷನ್ ಹಾಲ್) ನಿಂದ ಬೆಳಿಗ್ಗೆ 8:30ಕ್ಕೆ ಉಪಹಾರದ ನಂತರ ಪಾದಯಾತ್ರೆ ಆರಂಭ ಆಗಲಿದೆ. ಮಧ್ಯಾಹ್ನ 1ಕ್ಕೆ ಕೋರಮಂಗಲ (ಮಂಗಳ ಕಲ್ಯಾಣ ಮಂಟಪ) ತಲುಪಲಿರುವ ಪಾದಯಾತ್ರೆ ಅಲ್ಲಿ ಭೋಜನ ನಂತರ ವಿಶ್ರಾಂತಿ ಪಡೆಯಲಿದ್ದಾರೆ. ಸಂಜೆ ವೇಳೆ ಸುಬ್ರಮಣ್ಯಸ್ವಾಮಿ ಚೌಲ್ಟ್ರಿ ಲಕ್ಷ್ಮೀಪುರ ತಲುಪಲಿರುವ ಪಾದಯಾತ್ರೆ ಅಂದು ಸುಬ್ರಮಣ್ಯಸ್ವಾಮಿ ಚೌಲ್ಟ್ರಿ ಲಕ್ಷ್ಮೀಪುರದಲ್ಲಿ ಸಭೆ, ವಾಸ್ತವ್ಯ ಮಾಡಲಿದ್ದಾರೆ.

    ಜನವರಿ 17ಕ್ಕೆ ಸುಬ್ರಮಣ್ಯ ಚೌಟ್ರಿ ಲಕ್ಷ್ಮೀಪುರದಲ್ಲಿ ಬೆಳಿಗ್ಗೆ 8:30ಕ್ಕೆ ಉಪಹಾರದ ನಂತರ ಪಾದಯಾತ್ರೆ ಆರಂಭ ಆಗಲಿದೆ. ಮಧ್ಯಾಹ್ನ 1ಕ್ಕೆ ಎಎಸ್ ಕಲ್ಯಾಣ ಮಂಟಪ ತಲುಪಲಿರುವ ಪಾದಯಾತ್ರೆ ಸಂಜೆ ಮತ್ತೆ ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣ ಮಂಟಪ ತಲುಪಲಿದೆ. ಅಂದು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣ ಮಂಟಪ ಸಭೆ, ವಾಸ್ತವ್ಯ ಮಾಡಲಿದ್ದಾರೆ.

    ಜನವರಿ 18ಕ್ಕೆ ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣ ಮಂಟಪದಿಂದ ಬೆಳಿಗ್ಗೆ 8:30ಕ್ಕೆ ಉಪಹಾರದ ನಂತರ ಪಾದಯಾತ್ರೆ ಆರಂಭ ಆಗಲಿದೆ. ಮಧ್ಯಾಹ್ನ 1ಕ್ಕೆ ಮೇಕ್ರಿ ಸರ್ಕಲ್ ಹತ್ತಿರದ ಗಾಯತ್ರಿ ವಿಹಾರದಲ್ಲಿ ಭೋಜನ ಬಳಿಕ ವಿಶ್ರಾಂತಿ ಪಡೆಯಲಿದ್ದಾರೆ. ಅರಮನೆ ಆವರಣದ ಗಾಯತ್ರಿ ವಿಹಾರದಲ್ಲೇ ನಾಯಕರು ವಾಸ್ತವ್ಯ ಮಾಡಲಿದ್ದಾರೆ.

    ಜನವರಿ 19ಕ್ಕೆ ರೇಸ್ ಕೋರ್ಸ್ ರಸ್ತೆಯಿಂದ ಬೆಳಿಗ್ಗೆ 8:30ಕ್ಕೆ ಉಪಹಾರದ ನಂತರ ಪಾದಯಾತ್ರೆ ಆರಂಭ ಆಗಲಿದೆ. ಮಧ್ಯಾಹ್ನ 1.30ಕ್ಕೆ ಬಸವನಗುಡಿಯ ನ್ಯಾಷನಲ್ ಕಾಲೇಜ್ ತಲುಪಲಿರುವ ನಾಯಕರು, ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಸಲಿದ್ದಾರೆ.

  • ರಾಜಕೀಯಕ್ಕಾಗಿ ಪಾದಯಾತ್ರೆ ಮಾಡ್ತಿಲ್ಲ: ಸಿದ್ದರಾಮಯ್ಯ

    ರಾಜಕೀಯಕ್ಕಾಗಿ ಪಾದಯಾತ್ರೆ ಮಾಡ್ತಿಲ್ಲ: ಸಿದ್ದರಾಮಯ್ಯ

    ರಾಮನಗರ: ಮೇಕೆದಾಟು ಪಾದಯಾತ್ರೆಯನ್ನು ರಾಜಕೀಯಕ್ಕಾಗಿ ಮಾಡುತ್ತಿಲ್ಲ. ಬದಲಾಗಿ ರಾಜ್ಯದ ಹಿತಕ್ಕಾಗಿ ಮಾಡುತ್ತಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.

    ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯಾವುದೇ ಕಾನೂನು ಉಲ್ಲಂಘನೆ ಮಾಡುವುದಿಲ್ಲ. ಕೋವಿಡ್ ನಿಯಮ ಪಾಲನೆ ಮಾಡಿಯೇ ಪಾದಯಾತ್ರೆ ಮಾಡುತ್ತೇವೆ. ನಮ್ಮ ನೀರು ಬಳಸಿಕೊಳ್ಳಲು ನಾವು ಯಾಕೆ ತಮಿಳುನಾಡಿನವರನ್ನು ಕೇಳಬೇಕು ಎಂದು ವಾಗ್ದಾಳಿ ನಡೆಸಿದರು.

    ಕರ್ಫ್ಯೂ ವಿಚಾರವಾಗಿ ಮಾತನಾಡಿ, ನಾವು ಪಾದಯಾತ್ರೆ ಮಾಡುತ್ತಿರುವುದಕ್ಕೆ ಸರ್ಕಾರ ಕರ್ಫ್ಯೂ ವಿಧಿಸಿದೆ. ನಾವು ಎರಡು ತಿಂಗಳ ಹಿಂದೆಯೇ ಪಾದಯಾತ್ರೆ ಘೋಷಣೆ ಮಾಡಿದ್ದೆವು. ಆದರೆ ಇದನ್ನು ಮಾಡಬಾರದೆಂದು ಕರ್ಫ್ಯೂ ಹಾಕಿದ್ದಾರೆ. ರಾಜ್ಯದ ಹಿತ, ಬೆಂಗಳೂರಿನ ಜನರ ಹಿತಕ್ಕಾಗಿ ಈ ಪಾದಯಾತ್ರೆ ಮಾಡ್ತಿದ್ದೇವೆ. ನಮ್ಮ ನೀರು ನಾವು ಬಳಸಿಕೊಳ್ಳುತ್ತೇವೆ ಅಷ್ಟೆ. ಇದರಿಂದ ತಮಿಳುನಾಡಿಗೂ ಅನುಕೂಲ ಆಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಅಂಡರ್‌ಗ್ರೌಂಡ್‌ನಲ್ಲಿ ಕಂತೆ ಕಂತೆ ನೋಟು ಬಚ್ಚಿಟ್ಟಿದ್ದ ಉದ್ಯಮಿ – ಇವನ ಆಸ್ತಿ ಬಗ್ಗೆ ಮಾಹಿತಿ ನೀಡಿದ್ರೆ 10,000 ಬಹುಮಾನ

    ಹೆಚ್ಚು ಪೊಲೀಸರ ನಿಯೋಜನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮನ್ನು ಚೆನ್ನಾಗಿ ನೋಡಿಕೊಳ್ಳುವುದಕ್ಕೆ ಹೆಚ್ಚು ಪೊಲೀಸ್‍ರನ್ನು ನಿಯೋಜಿಸಿದ್ದಾರೆ. ನಾವು ಯಾವುದೇ ಕಾನೂನು ಭಂಗ ಮಾಡುವುದಿಲ್ಲ. ಕಾನೂನು ಭಂಗ ಮಾಡದೇ ಪಾದಯಾತ್ರೆ ಮಾಡುತ್ತೇವೆ ಎಂದರು.  ಇದನ್ನೂ ಓದಿ: ಹಿಮದಲ್ಲಿ ದೃಢವಾಗಿ ನಿಂತ ಯೋಧನಿಗೆ ಒಂದು ಸೆಲ್ಯೂಟ್ – ವೀಡಿಯೋ ವೈರಲ್

  • ಕರ್ಫ್ಯೂ ವೇಳೆ ಕ್ರಿಕೆಟ್ ಆಡಬಹುದೇ – ಯುವಕನ ಪ್ರಶ್ನೆಗೆ ಪೊಲೀಸರ ‘ಸಿಲ್ಲಿ ಪಾಯಿಂಟ್’ ಉತ್ತರ

    ಕರ್ಫ್ಯೂ ವೇಳೆ ಕ್ರಿಕೆಟ್ ಆಡಬಹುದೇ – ಯುವಕನ ಪ್ರಶ್ನೆಗೆ ಪೊಲೀಸರ ‘ಸಿಲ್ಲಿ ಪಾಯಿಂಟ್’ ಉತ್ತರ

    ನವದೆಹಲಿ: ಕರ್ಫ್ಯೂ ಸಮಯದಲ್ಲಿ ಕ್ರಿಕೆಟ್ ಆಡಬಹುದಾ ಎಂದು ಒಬ್ಬ ಯುವಕ ದೆಹಲಿ ಪೊಲೀಸರನ್ನು ಟ್ವೀಟ್ ನಲ್ಲಿ ಕೇಳಿದ್ದಾನೆ. ಇದಕ್ಕೆ ಪೊಲೀಸರು ಲಘಯವಾಗಿಯೇ ಉತ್ತರಿಸಿದ್ದಾರೆ. ಪ್ರಸ್ತುತ ಈ ಸಂಭಾಷಣೆ ಟ್ವಿಟ್ಟರ್ ನಲ್ಲಿ ಫುಲ್ ವೈರಲ್ ಆಗಿದೆ.

    ಕೋವಿಡ್-19 ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಭಾರತದ ಹಲವು ಕಡೆ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ. ದೆಹಲಿ ಸರ್ಕಾರ ಸಹ ಇಂದಿನಿಂದ ವಾರಾಂತ್ಯದ ಕರ್ಫ್ಯೂವನ್ನು ವಿಧಿಸಿದೆ. ಪರಿಣಾಮ ಜನರಿಗೆ ಕರ್ಫ್ಯೂ ಬಗ್ಗೆ ಯಾವುದೇ ಅನುಮಾನವಿದ್ದರೂ ಟ್ವೀಟ್ ನಲ್ಲಿ ಕೇಳುವ ಅವಕಾಶವಿತ್ತು. ಅದಕ್ಕೆ ಯುವಕ ಪುನಿತ್ ಶರ್ಮಾ ಕರ್ಫ್ಯೂ ಸಮಯದಲ್ಲಿ ಕ್ರಿಕೆಟ್ ಆಡಬಹುದಾ? ಎಂದು ಪ್ರಶ್ನೆ ಕೇಳಿ ಸುದ್ದಿಯಾಗಿದ್ದಾನೆ. ಇದನ್ನೂ ಓದಿ: ಸಶಸ್ತ್ರಪಡೆಗಳಲ್ಲಿ ಮಹಿಳೆಯರಿಗೆ ಅವಕಾಶ ಹೆಚ್ಚಿಸಲು ನೂರು ಸೈನಿಕ ಶಾಲೆಗಳ ಸ್ಥಾಪನೆ: ರಾಜನಾಥ್ ಸಿಂಗ್

    ಟ್ವೀಟ್‍ನಲ್ಲಿ ಏನಿದೆ?
    ಪುನೀತ್ ವಾರಾಂತ್ಯದಲ್ಲಿ ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡಲು ಪ್ಲಾನ್ ಮಾಡಿಕೊಂಡಿದ್ದಾನೆ. ಆದರೆ ಈ ಕರ್ಫ್ಯೂನಿಂದ ಬೇಸರಗೊಂಡ ಆತ ನೇರವಾಗಿ ಪೊಲೀಸರಿಗೆ ಪ್ರಶ್ನೆಯನ್ನು ಟ್ವೀಟ್ ಮಾಡುವ ಮೂಲಕ ಕೇಳಿದ್ದಾನೆ. ಪುನೀತ್ ಈ ವಾರಾಂತ್ಯದ ಕರ್ಫ್ಯೂ ಸಮಯದಲ್ಲಿ ದೆಹಲಿಯಲ್ಲಿ ಕ್ರಿಕೆಟ್ ಆಡಬಹುದೇ? ಈ ವೇಳೆ ನಾವು ಕೋವಿಡ್ ಪ್ರೋಟೋಕಾಲ್‌ಗಳಾದ ಫೇಸ್ ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಅನುಸರಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾನೆ.

    ಈ ಪ್ರಶ್ನೆ ನೋಡಿದ ದೆಹಲಿ ಪೊಲೀಸರು ತಮಾಷೆಯಾಗಿ ಉತ್ತರಿಸಿದ್ದು, ಇದೊಂದು ‘ಸಿಲ್ಲಿ ಪಾಯಿಂಟ್’ ಸರ್. ಈ ಸಮಯದಲ್ಲಿ ನಾವು ಇನ್ನು ಎಚ್ಚರದಿಂದ ಇರಬೇಕು. ಅಲ್ಲದೆ, ದೆಹಲಿ ಪೊಲೀಸರು ಈ ರೀತಿ ಸಿಲ್ಲಿಯಾಗಿ ಆಡುವವರನ್ನು ಹಿಡಿಯಲು ಯಾವಾಗಲೂ ಸಿದ್ಧವಾಗಿರುತ್ತಾರೆ ಎಂದು ಟ್ವೀಟ್ ಗೆ ರಿಪ್ಲೈ ಮಾಡಿದ್ದಾರೆ. ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ ಅಮಾನವೀಯ, ಇದೊಂದು ಅವೈಜ್ಞಾನಿಕ ಕ್ರಮ: ಎ.ಎಸ್.ಪೊನ್ನಣ್ಣ

    ಒಂದು ವೇಳೆ ಜನರು ಕರ್ಫ್ಯೂ ನಿಯಮಗಳನ್ನು ಉಲ್ಲಂಘಿಸಿದರೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂಬುದನ್ನು ಬಹಳ ಸೂಕ್ಷ್ಮವಾಗಿ ಟ್ವೀಟ್ ಮೂಲಕ ಪೊಲೀಸರು ಯುವಕನ ಜೊತೆಗೆ ಸಾಮಾನ್ಯರಿಗೂ ತಿಳಿಸಿದ್ದಾರೆ.

  • ಕೋವಿಡ್-19 ಹೊಸ ಮಾರ್ಗಸೂಚಿಗೆ ಬಿಜೆಪಿಯ ಸಚಿವ, ಶಾಸಕರಿಂದಲೇ ವಿರೋಧ

    ಕೋವಿಡ್-19 ಹೊಸ ಮಾರ್ಗಸೂಚಿಗೆ ಬಿಜೆಪಿಯ ಸಚಿವ, ಶಾಸಕರಿಂದಲೇ ವಿರೋಧ

    ಬೆಂಗಳೂರು: ಕೋವಿಡ್ ಹೊಸ ಮಾರ್ಗಸೂಚಿ ಬಗ್ಗೆ ಸರ್ಕಾರದಲ್ಲಿ ಗೊಂದಲ ಎದ್ದುಕಾಣುತ್ತಿದೆ. ಬಿಜೆಪಿಯ ಹಲವು ಸಚಿವರು, ಶಾಸಕರ ಕ್ಷೇತ್ರಗಳಲ್ಲಿ ವ್ಯಾಪಾರಿ ವರ್ಗದವರಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ವೀಕೆಂಡ್ ಕರ್ಫ್ಯೂ, 50% ರೂಲ್ಸ್ ಏಕಪಕ್ಷೀಯ ನಿರ್ಧಾರ ಎಂದು ಅಸಮಧಾನ ಕೇಳಿಬರುತ್ತಿದೆ.

    ಬೆಂಗಳೂರಿನಲ್ಲಿ ಕೇಸ್ ಪ್ರಮಾಣ ಹೆಚ್ಚಾಗುತ್ತಿದೆ ನಿಜ. ಆದರೆ ಜಿಲ್ಲೆಗಳಲ್ಲಿ ಕೋವಿಡ್ ಕಮ್ಮಿ ಇದೆ. ಜಿಲ್ಲೆಗಳಲ್ಲಿ ಆತಂಕ, ಭಯದ ವಾತಾವರಣ ಇಲ್ಲ. ಕೋವಿಡ್ ಕಮ್ಮಿ ಇರುವ ಕಡೆಯೂ ವೀಕೆಂಡ್ ಕರ್ಫ್ಯೂ ಬೇಕಾಗಿರಲಿಲ್ಲ. ವೀಕೆಂಡ್ ಕರ್ಫ್ಯೂನಿಂದಾಗಿ ಜನಜೀವನ, ವ್ಯಾಪಾರ ವಹಿವಾಟಿಗೆ ತೊಡಕು ಉಂಟಾಗಿದೆ. ಮೊದಲೇ ಆರ್ಥಿಕ ಸಮಸ್ಯೆ, ಇಂತಹ ಸಂದರ್ಭದಲ್ಲಿ ಬರಸಿಡಿಲಿನಂತೆ ವೀಕೆಂಡ್ ಕರ್ಫ್ಯೂ ಮಾಡಿರುವ ಬಗ್ಗೆ ಜನಸಾಮಾನ್ಯರು, ವ್ಯಾಪಾರಿ ವರ್ಗದವರಿಂದ ತಮ್ಮ, ತಮ್ಮ ಕ್ಷೇತ್ರದ ಸಚಿವರು, ಶಾಸಕರಿಗೆ ಪ್ರಶ್ನೆ ಮಾಡುತ್ತಿದ್ದಾರೆ. ಇತ್ತ ಸಚಿವ, ಶಾಸಕರಿಗೆ ಈ ಬಗ್ಗೆ ತಳಮಳ ಉಂಟಾಗಿದೆ. ಇದನ್ನೂ ಓದಿ: ರಾಜ್ಯದೆಲ್ಲೆಡೆ ವೀಕೆಂಡ್ ಕರ್ಫ್ಯೂ ಈಶ್ವರಪ್ಪ ಅಸಮಾಧಾನ

    ಸಚಿವರು ಮತ್ತು ಶಾಸಕರು ಹೊಸ ಮಾರ್ಗಸೂಚಿಯಲ್ಲಿ ವಿನಾಯಿತಿ ಕೊಡಿ ಎಂದು ಮುಖ್ಯಮಂತ್ರಿಗಳಲ್ಲಿ ಒತ್ತಾಯಿಸುತ್ತಿದ್ದು, ಸಚಿವರ ಜತೆ ಕ್ಯಾಬಿನೆಟ್‍ನಲ್ಲಿ ಚರ್ಚಿಸಿ ಟಫ್ ರೂಲ್ಸ್ ತರ್ತೀವಿ ಅಂದಿದ್ದ ಸಿಎಂ, ಕ್ಯಾಬಿನೆಟ್ ಸಭೆಗೂ ಮುನ್ನವೇ ಹೊಸ ಮಾರ್ಗಸೂಚಿ ಜಾರಿ ಮಾಡಿರುವುದರಿಂದ ಕೆಳ ಸಚಿವರು ಗರಂ ಆಗಿದ್ದಾರೆ. ಸಚಿವರ ಗಮನಕ್ಕೂ ತರದೇ ಹೊಸ ಮಾರ್ಗಸೂಚಿ ಜಾರಿ ಮಾಡಿರುವ ಬಗ್ಗೆ ಇಂದು ನಡೆಯಲಿರುವ ಸಂಪುಟ ಸಭೆಯಲ್ಲಿ ಹಲವು ಸಚಿವರು ಪ್ರಶ್ನೆ ಮಾಡುವ ಸಾಧ್ಯತೆ ಹೆಚ್ಚಿದೆ. ಇಂದು ನಡೆಯಲಿರುವ ಸಭೆಯಲ್ಲಿ ರೂಲ್ಸ್‌ಗಳಲ್ಲಿ ಸಚಿವರು ಕೇಳೋ ವಿನಾಯಿತಿಗೆ ಸಿಎಂ ಒಕೆ ಅಂತಾರಾ ಎಂಬ ಪ್ರಶ್ನೆ ಉದ್ಭವಿಸಿದೆ. ಇದನ್ನೂ ಓದಿ: ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ: ಸಿಎಂ ಮನವಿ

    ಈ ನಡುವೆ ನಿನ್ನೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಬೆಂಗಳೂರಿನಲ್ಲಿ ಕೊರೊನಾ ಜಾಸ್ತಿ ಇರೋದು ಹೌದು, ನಾನು ಇಲ್ಲ ಅಂತಾ ಹೇಳಿಲ್ಲ. ರಾಜ್ಯದ ಎಲ್ಲಾ ಕಡೆಯೂ ಇದು ಇಲ್ಲ. ಕೆಲವೆಡೆ 2-3-4-5 ಈ ರೀತಿ ಇದೆ. ಜಾಸ್ತಿ ಅಂದರೆ 10 ರವರೆಗೆ ಈ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣ ಮಾಡುವುದು ಎಲ್ಲರ ಕರ್ತವ್ಯವಾಗಿದೆ. ಆದರೆ ರಾಜಧಾನಿಯಲ್ಲಿ ತುಂಬಾ ಜಾಸ್ತಿ ಇದೆ ಅಂದುಕೊಂಡು ಇಡೀ ರಾಜ್ಯಕ್ಕೆ ರೂಲ್ಸ್ ತರುವುದು ಸರಿನಾ ಅಂತಾ ಅನೇಕರು ನನಗೆ ಪ್ರಶ್ನೆ ಮಾಡ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

    ಆಟೋ ರಿಕ್ಷಾ ಡ್ರೈವರ್, ಕೂಲಿ ಕಾರ್ಮಿಕರು, ಟೈಲರ್, ವ್ಯಾಪಿರಿಗಳು ಅವರ ಜೀವನಕ್ಕೆ ಎಲ್ಲಿ ಹೋಗಬೇಕು. ಎಲ್ಲರಿಗೂ ತೊಂದರೆ ಆಗುತ್ತದೆ. ಇಡೀ ರಾಜ್ಯದ ಜನರ ಅಭಿಪ್ರಾಯವನ್ನು ಸಚಿವ ಸಂಪುಟದ ಮುಂದೆ, ಮುಖ್ಯಮಂತ್ರಿ ಅವರ ಮುಂದೆ ಇಡುತ್ತೇನೆ ಎಂದು ಅಭಿಪ್ರಾಯಪಟ್ಟಿದ್ದರು. ಇದನ್ನೂ ಓದಿ: ಕೋವ್ಯಾಕ್ಸಿನ್‌ ಲಸಿಕೆ ಪಡೆದ ಮಕ್ಕಳಿಗೆ ನೋವು ನಿವಾರಕ, ಪ್ಯಾರಸಿಟಮಲ್‌ ಮಾತ್ರೆ ನೀಡಲ್ಲ: ಭಾರತ್‌ ಬಯೋಟೆಕ್‌

  • ಕೋವಿಡ್ ಬಗ್ಗೆ ಏನಾದ್ರೂ ಮಾತನಾಡಿದ್ರೆ ತಪ್ಪಾಗುತ್ತದೆ: ಖರ್ಗೆ

    ಕೋವಿಡ್ ಬಗ್ಗೆ ಏನಾದ್ರೂ ಮಾತನಾಡಿದ್ರೆ ತಪ್ಪಾಗುತ್ತದೆ: ಖರ್ಗೆ

    ಕಲಬುರಗಿ: ಕೋವಿಡ್ ಇದೀಗ ಕಾಂಟ್ರವರ್ಸಿ ವಿಚಾರವಾಗಿದೆ. ಏನಾದರೂ ಮಾತಾಡಿದರೆ ತಪ್ಪಾಗುತ್ತದೆ. ಸಡನ್ ಆಗಿ ಲಾಕ್‌ಡೌನ್ ಮಾಡಿದರೆ ದೇಶದ ಆರ್ಥಿಕತೆಗೆ ದೊಡ್ಡ ಹೊಡೆತ ಬಿಳಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಸೆಮಿ ಲಾಕ್‌ಡೌನ್ ಹಾಗೂ ವಿಕೆಂಡ್ ಕರ್ಫ್ಯೂಗೆ ಪರೋಕ್ಷವಾಗಿ ವಿರೋಧವನ್ನು ವ್ಯಕ್ತಪಡಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಹಿಂದಿನ ಬಾರಿ ಸಡನ್ ಆಗಿ ಲಾಕ್‌ಡೌನ್ ಮಾಡಿದಾಗ ಸಾಕಷ್ಟು ತೊಂದರೆಯಾಗಿತ್ತು. ಜೊತೆಗೆ ಲಾಕ್‌ಡೌನ್‌ನಿಂದ ಬೀದಿಗೆ ಬಿದ್ದಿದ್ದ ಜನರಿಗೆ ಕೇಂದ್ರ ಸರ್ಕಾರ ಯಾವ ನೆರವನ್ನು ನೀಡಿರಲಿಲ್ಲ. ಕಾರ್ಮಿಕರ ನಿಧಿ ಹಣ ಕಾರ್ಮಿಕರಿಗೂ ಸಹ ನೀಡದೇ ಇರುವುದು ದುರಂತವಾಗಿದೆ. ಈಗಲೂ ಹೀಗೆ ಮಾಡಿದರೆ ದೇಶದ ರಾಜ್ಯದ ಆರ್ಥಿಕತೆಗೆ ದೊಡ್ಡ ಹೊಡೆತ ಬಿಳಲಿದೆ ಎಂದು ಹೇಳಿದರು.

    ಈ ಹಿಂದೆ ಕೇಂದ್ರದ ಎಡಬಿಡಂಗಿ ನಿರ್ಧಾರಗಳಿಂದ ವಿಶ್ವದಲ್ಲಿ ದೇಶದ ಆರ್ಥಿಕ ಗುಣಮಟ್ಟ ಪಾತಾಳಕ್ಕೆ ಕುಸಿದಿತ್ತು. ಮತ್ತೊಮ್ಮೆ ಇದೇ ರೀತಿ ಆದರೆ ಬಡ, ಮಧ್ಯಮ ವರ್ಗದ ಜನರು ಎಲ್ಲವನ್ನು ಕಳೆದುಕೊಂಡು ಬೀದಿಗೆ ಬೀಳಲಿದ್ದಾರೆ. ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದೇ ಲಾಕ್‌ಡೌನ್ ಮಾಡೋದು ಸರಿಯಲ್ಲ. ಎಲ್ಲದರ ಬಗ್ಗೆ ಚಿಂತನೆ ನಡೆಸಿ ಲಾಕ್‌ಡೌನ್ ಜಾರಿ ಮಾಡಬೇಕು. ಯಾವ ಯಾವ ವಲಯಗಳಿಗೆ ರಿಯಾಯಿತಿ ಕೊಡಬೇಕು ಎನ್ನುವುದನ್ನು ನಿರ್ಧರಿಸಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ಕೋವಿಡ್-19 ಮುಂದಿನ ಎರಡು ವಾರ ನಿರ್ಣಾಯಕ – ಭಾರತಕ್ಕೆ WHO ತಜ್ಞರ ಎಚ್ಚರಿಕೆ

    ಕೋವಿಡ್‌ನಿಂದ ಮೃತಪಟ್ಟವರ ಕುರಿತು ಕೇಂದ್ರ ಸರ್ಕಾರ ಬೋಗಸ್ ರಿಪೋರ್ಟ್ ನೀಡಿದೆ. ಕೋವಿಡ್ ವಿಚಾರವಾಗಿ ಕೇಂದ್ರ ಸರ್ಕಾರ ಸಿಂಪತಿ ಕ್ರಿಯೆಟ್ ಮಾಡಿ ಭರ್ಜರಿ ಪ್ರಚಾರ ಪಡೆಯುತ್ತಿದೆ. ಉತ್ತರ ಪ್ರದೇಶದಲ್ಲಿ ಕೋವಿಡ್‌ನಿಂದ ಮೃತರಾದರೆ ಅವರನ್ನು ಸುಡಲು ಕಟ್ಟಿಗೆ ಸಿಗುತ್ತಿಲ್ಲ. ಹುಳೋಕೆ ಜಮೀನು ಸಿಗುತ್ತಿಲ್ಲ. ರಾಶಿ ರಾಶಿ ಹೆಣಗಳನ್ನು ಗಂಗಾ ನದಿಯಲ್ಲಿ ಬಿಸಾಕಿದ್ದು ಇದಕ್ಕೆ ಸಾಕ್ಷಿ ಎಂದ ಅವರು, ಕಾರ್ಮಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು. ವಿಶೇಷ ಪ್ಯಾಕೇಜ್ ಘೋಷಿಸಿದ ನಂತರ ಲಾಕ್‌ಡೌನ್ ಮಾಡಿ ಏನಾದರು ಮಾಡಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ – ಕಾರ್ಯಕ್ರಮ ರದ್ದು

    ಸಭೆ ಸಮಾರಂಭ ಹೋರಾಟಗಳಿಗೆ ಬ್ರೇಕ್ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಪಾದಯಾತ್ರೆಯ ನೇತೃತ್ವವನ್ನು ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ವಹಿಸಿದ್ದಾರೆ. ಸೆಮಿಲಾಕ್‌ಡೌನ್ ಹಾಗೂ ವೀಕೆಂಡ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಪಾದಯಾತ್ರೆ ಮಾಡೋದು ಬಿಡುವುದು ರಾಜ್ಯ ಮುಖಂಡರು ನಿರ್ಧರಿಸುತ್ತಾರೆ. ಪಾದಯಾತ್ರೆಯಲ್ಲಿ ಮಾರ್ಪಾಡು ಮಾಡುವ ಬಗ್ಗೆ ಅವರನ್ನ ಕೇಳಿ ಎಂದರು.