Tag: ಕಲಬುರಗಿ ಮೇಯರ್ ಚುನಾವಣೆ

  • ಕಲಬುರಗಿ ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆ ಮುಂದೂಡಿಕೆ

    ಕಲಬುರಗಿ ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆ ಮುಂದೂಡಿಕೆ

    ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಗೆ ಇದೇ ತಿಂಗಳು 20ರಂದು ನಡೆಯಬೇಕಾಗಿದ್ದ ಮೇಯರ್ ಚುನಾವಣೆಯನ್ನು ಮುಂದೂಡಿ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.

    ನವೆಂಬರ್ 20ರಂದು ಕಲಬುರಗಿ ಪಾಲಿಕೆಯ 23ನೇ ಮೇಯರ್, ಉಪ ಮೇಯರ್ ಹಾಗೂ ವಿವಿಧ ಸ್ಥಾಯಿ ಸಮಿತಿಗಳಿಗೆ ಚುನಾವಣೆ ನಡೆಯಬೇಕಾಗಿತ್ತು. ಆದರೆ ಭಾರತ ಚುನಾವಣಾ ಆಯೋಗದ ಅಧಿಸೂಚನೆ ಅನ್ವಯ ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡಿರುವ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ವಿಧಾನ ಪರಿಷತ್ ಸದಸ್ಯ ಸ್ಥಾನಗಳಿಗೆ ಚುನಾವಣೆ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಪಾಲಿಕೆಯ ಮೇಯರ್ ಚುನಾವಣೆಯನ್ನು ಮುಂದೂಡಿದೆ. ಇದನ್ನೂ ಓದಿ: ಪುನೀತ್‌ ಅಭಿಮಾನಿಗಳಿಗೆ ಅಶ್ವಿನಿ ಭಾವನಾತ್ಮಕ ಪತ್ರ

    ಒಟ್ಟು 55 ವಾರ್ಡ್‍ಗಳಿಗೆ ಚುನಾವಣೆ ನಡೆದಿತ್ತು. ಬಿಜೆಪಿ 24, ಕಾಂಗ್ರೆಸ್ 27 ಮತ್ತು ಜೆಡಿಎಸ್ 4 ಸದಸ್ಯರನ್ನು ಒಳಗೊಂಡಿದೆ. ಕಲಬುರಗಿ ಮೇಯರ್ ಸ್ಥಾನ ಅಲಂಕರಿಸಲು ಜೆಡಿಎಸ್ ಬೆಂಬಲವೇ ನಿರ್ಣಾಯಕ. ಇದನ್ನೂ ಓದಿ: ʼಅಪ್ಪುʼಗೆ ನನ್ನ ದೃಷ್ಟಿಯೇ ತಾಗಿತೇನೊ ಅನಿಸುತ್ತೆ: ತಮ್ಮನ ನೆನೆದು ಶಿವಣ್ಣ ಕಣ್ಣೀರು

  • ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಮಾತಾಡಲ್ಲ: ರೇಣುಕಾಚಾರ್ಯ

    ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಮಾತಾಡಲ್ಲ: ರೇಣುಕಾಚಾರ್ಯ

    ದಾವಣಗೆರೆ: ಮೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನದಲ್ಲಿ ಬಂದಿದೆ, ಮೈತ್ರಿ ಬಗ್ಗೆ ಹೇಳುವಷ್ಟು ದೊಡ್ಡವನು ನಾನಲ್ಲ, ಪಕ್ಷದ ರಾಜ್ಯಾಧ್ಯಕ್ಷರು, ಸಿಎಂ ಹಾಗೂ ಜಿಲ್ಲಾ ಉಸ್ತುವಾರಿಗಳು ನಿರ್ಣಯ ಮಾಡುತ್ತಾರೆ. ಕಲಬುರಗಿಯ ಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಯಾವುದೇ ಕಾರಣಕ್ಕೂ ಮಾತನಾಡುವುದಿಲ್ಲ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಮುರುಗೇಶ್ ನಿರಾಣಿಯವರು ಬಿಜೆಪಿಯವರೇ ಮೇಯರ್ ಆಗುತ್ತಾರೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಯಾರ ಜೊತೆ ಮೈತ್ರಿ ಮಾಡಿಕೊಂಡರೂ ನಾನು ಮಾತನಾಡುವುದಿಲ್ಲ, ರಾಜ್ಯ, ಕೇಂದ್ರದಲ್ಲಿ ನಮ್ಮದೇ ಸರ್ಕಾರ ಇದೆ. ಮೈತ್ರಿ ಬಗ್ಗೆ ಮಾತನಾಡುವುದಿಲ್ಲ ಎಂದರು.

    ಬಿಜೆಪಿ ಸೇರಲು ಹಣದ ಅಫರ್ ಕೊಟ್ಟಿದ್ದರು ಎಂಬ ಶ್ರೀಮಂತ್ ಪಾಟೀಲ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅದರ ಬಗ್ಗೆ ನನಗೆ ಗೊತ್ತಿಲ್ಲ, ಕಾಂಗ್ರೆಸ್, ಜೆಡಿಎಸ್ ಶಾಸಕರು ಯಡಿಯೂರಪ್ಪನವರ ನಾಯಕತ್ವ ನಂಬಿ ಬಂದಿದ್ದು. ಅಮಿತ್ ಶಾ ಬಂದಾಗ ನಾವೆಲ್ಲರೂ ಸ್ವಾಗತ ಮಾಡಿದ್ದೆವು, ಆ ಸಂದರ್ಭದಲ್ಲಿ ಸಚಿವ ಸ್ಥಾನದ ಬಗ್ಗೆ ಚರ್ಚೆ ಆಗಿಲ್ಲ. ಐದು ಜನ ಶಾಸಕರು ಇದ್ದಾರೆ, ಒಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಮೊದಲಿನಿಂದಲೂ ಕೇಳಿದ್ದೇವೆ ಎಂದರು. ಇದನ್ನೂ ಓದಿ: ಅಭಯ್ ಪಾಟೀಲ್ ಡ್ರೈವಿಂಗಲ್ಲಿ ಗೋವಿಂದ ಕಾರಜೋಳ ಹೋಗಿದ್ದೆಲ್ಲಿಗೆ..?

    ಗಣೇಶ ಹಬ್ಬದ ನಂತರ ಯಡಿಯೂರಪ್ಪನವರ ರಾಜ್ಯ ಪ್ರವಾಸದ ಬಗ್ಗೆ ಮಾತನಾಡಿದ ರೇಣುಕಾಚಾರ್ಯ, ಯಡಿಯೂರಪ್ಪ ಒಬ್ಬ ಮೇರು ನಾಯಕ, ಪಕ್ಷವನ್ನು ಕಟ್ಟಿ ಬೆಳೆಸಿದವರು. ರಾಜ್ಯ ಪ್ರವಾಸ ಮಾಡಿದರೆ ರಾಜ್ಯ, ರಾಷ್ಟ್ರೀಯ ನಾಯಕರು ಸ್ವಾಗತ ಮಾಡುತ್ತಾರೆ. ಯಡಿಯೂರಪ್ಪನವರು ರಾಜ್ಯ ಪ್ರವಾಸ ಮಾಡಿದರೆ ಪಕ್ಷಕ್ಕೆ ಲಾಭ, ಕರ್ನಾಟಕದಲ್ಲಿ 150 ಸ್ಥಾನ ಬರಬೇಕು ಎನ್ನುವುದು ಯಡಿಯೂರಪ್ಪನವರ ಸಂಕಲ್ಪವಾಗಿದೆ. ಹೀಗಾಗಿ ಪಕ್ಷದ ಪರವಾಗಿ ರಾಜ್ಯ ಪ್ರವಾಸ ಮಾಡುತ್ತಾರೆ, ಯಡಿಯೂರಪ್ಪನವರು ರಾಜ್ಯ ಪ್ರವಾಸ ಮಾಡಿದರೆ ಬಿಜೆಪಿಗೇ ಲಾಭ, ಕುಟುಂಬಕ್ಕೆ ಅಲ್ಲ ಎಂದರು.

    ಸಿ.ಪಿ.ಯೋಗೇಶ್ವರ್ ದೆಹಲಿ ಪ್ರವಾಸದ ಬಗ್ಗೆ ರೇಣುಕಾಚಾರ್ಯ ಟಾಂಗ್ ನೀಡಿದ್ದು, ನಾನು ಪಕ್ಷದ ಶಿಸ್ತಿನ ಸಿಪಾಯಿ, ಕ್ಷೇತ್ರ ಹಾಗೂ ಜನರ ಬಗ್ಗೆ ಮಾತ್ರ ಯೋಚಿಸುತ್ತೇನೆ. ಅದನ್ನು ಬಿಟ್ಟು ಬೇರೆಯವರ ಬಗ್ಗೆ ಯೋಚಿಸೋದಿಲ್ಲ. ಯೋಗೇಶ್ವರ್ ಗೆ ಸಚಿವ ಸ್ಥಾನ ಸಿಗೋದು ಬಿಡೋದು ಪಕ್ಷದ ವಿಚಾರ ಎಂದರು.

  • ಕಲಬುರಗಿ ಮೇಯರ್ ಚುನಾವಣೆ- ಜೆಡಿಎಸ್ ಮುಂದೆ ಮಂಡಿಯೂರಲು ಕಾಂಗ್ರೆಸ್ ಸಜ್ಜಾಗಿದ್ಯಾ?

    ಕಲಬುರಗಿ ಮೇಯರ್ ಚುನಾವಣೆ- ಜೆಡಿಎಸ್ ಮುಂದೆ ಮಂಡಿಯೂರಲು ಕಾಂಗ್ರೆಸ್ ಸಜ್ಜಾಗಿದ್ಯಾ?

    ಬೆಂಗಳೂರು: ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಅಧಿಕಾರ ತಪ್ಪಿಸಲು ಕೇವಲ ನಾಲ್ಕು ಸ್ಥಾನ ಹೊಂದಿರುವ ಜೆಡಿಎಸ್ ಮುಂದೆ ಕಾಂಗ್ರೆಸ್ ಮಂಡಿಯೂರಲು ಸಜ್ಜಾಗಿದ್ಯಾ ಎಂಬ ಪ್ರಶ್ನೆ ಇದೀಗ ಎದ್ದಿದೆ.

    ಅಗತ್ಯ ಬಿದ್ದರೆ ನಾಲ್ಕು ಸ್ಥಾನ ಹೊಂದಿರುವ ಜೆಡಿಎಸ್‍ಗೆ ಮೇಯರ್ ಸ್ಥಾನ ಬಿಟ್ಟುಕೊಟ್ಟು, ಉಪ ಮೇಯರ್ ಹುದ್ದೆಗೆ ತೃಪ್ತಿಪಡಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಈ ಸಂಬಂಧ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕ್ ಖರ್ಗೆ ನೂತನ ಕಾರ್ಪೋರೇಟರ್ ಗಳ ಮನವೊಲಿಸಿದ್ದಾರೆ ಎನ್ನಲಾಗಿದೆ.

    ಕೊನೆ ಘಳಿಗೆಯವರೆಗೂ ಮೇಯರ್ ಗಿರಿಗೆ ಪ್ರಯತ್ನಿಸುತ್ತೇವೆ. ಅಕಸ್ಮಾತ್ ಜೆಡಿಎಸ್ ಮೇಯರ್ ಗಿರಿ ಬೇಕೇಬೇಕು ಎಂದು ಪಟ್ಟು ಹಿಡಿದರೆ ಸದ್ಯಕ್ಕೆ ಉಪ ಮೇಯರ್ ಸ್ಥಾನ ಒಪ್ಪಿಕೊಂಡು ಮೈತ್ರಿ ಮಾಡಿಕೊಳ್ಳೋಣ. ಮುಂದಿನ ದಿನಗಳಲ್ಲಿ ಏನು ಬೇಕಾದರೂ ಆಗಬಹುದು. ಸದ್ಯಕ್ಕೆ ಬಿಜೆಪಿಗೆ ಅಧಿಕಾರ ಸಿಗದಂತೆ ನೋಡಿಕೊಳ್ಳುವುದು ನಮ್ಮ ಮೊದಲ ಆದ್ಯತೆ ಆಗಿರಬೇಕು. ಇದಕ್ಕೆ ಸಜ್ಜಾಗಿ ಎಂದು ಕಾರ್ಪೋರೇಟರ್ ಗಳಿಗೆ ತಿಳಿಸಿದ್ದಾರೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆಗೆ ಕಾರ್ಪೋರೇಟರ್‍ಗಳನ್ನು ಕರೆತಂದ ಪ್ರಿಯಾಂಕ್ ಖರ್ಗೆ, ಇದೇ ವಿಚಾರವನ್ನು ಮನದಟ್ಟು ಮಾಡಿಸಿದ್ದಾರೆ. ಇದನ್ನೂ ಓದಿ: ಕಲಬುರಗಿ, ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಸಾಧ್ಯತೆ: ಸಚಿವ ಅಶೋಕ್

    ಈ ಬೆನ್ನಲ್ಲೇ ಅಲರ್ಟ್ ಆದ ಬಿಜೆಪಿ, ಜೆಡಿಎಸ್ ಜೊತೆ ಮೈತ್ರಿ ಕಸರತ್ತನ್ನು ತೀವ್ರಗೊಳಿಸಿದೆ. ಸಿಎಂ ಸೂಚನೆ ಮೇರೆಗೆ ಕಂದಾಯ ಸಚಿವ ಆರ್.ಅಶೋಕ್ ಬಿಡದಿಗೆ ದೌಡಾಯಿಸಿ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ. ಬಿಜೆಪಿಗೆ ನಿಮ್ಮ ಬೆಂಬಲ ಬೇಕು ಎಂದು ಕೇಳಿದ್ದಾರೆ. ನೀವು ಜೆಡಿಎಸ್‍ಗೆ ಮೇಯರ್ ಸ್ಥಾನ ಬಿಟ್ಟುಕೊಡುವುದಾದರೆ ಓಕೆ ಎಂದು ಕುಮಾರಸ್ವಾಮಿ ಬಿಜೆಪಿಗೆ ಷರತ್ತು ಹಾಕಿದ್ದಾರೆ ಎನ್ನಲಾಗಿದೆ.

    ಸೋಮವಾರ ಜೆಡಿಎಸ್ ತನ್ನ ನಿಲುವನ್ನು ಪ್ರಕಟಿಸುವ ಸಂಭವ ಇದೆ. ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಬಿಜೆಪಿ ಬೆಂಬಲಿಸಲು ಕುಮಾರಸ್ವಾಮಿ ಒಪ್ಪಿಗೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.