Tag: ಕಲಬುರ್ಗಿ

  • ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಕಂದಕಕ್ಕೆ ಉರುಳಿದ ಬಸ್ – ಓರ್ವ ಸಾವು, 25 ಮಂದಿ ಗಂಭೀರ

    ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಕಂದಕಕ್ಕೆ ಉರುಳಿದ ಬಸ್ – ಓರ್ವ ಸಾವು, 25 ಮಂದಿ ಗಂಭೀರ

    ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು (Bus) 30 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿ, 25 ಜನ ಗಂಭೀರ ಗಾಯಗೊಂಡ ಘಟನೆ ಸುರಪುರದ (Surapura) ದೇವಾಪುರದ ಬಳಿ ನಡೆದಿದೆ.

    ಘಟನೆಯಲ್ಲಿ ಹುಮನಬಾದ್‍ನ ಹಳ್ಳಿಖೇಡ ನಿವಾಸಿ ಬಾಲು ಕುಮಾರ್ (36) ಮೃತ ಪ್ರಯಾಣಿಕ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ (Accident) ಗಂಭೀರ ಗಾಯಗೊಂಡಿರುವ ಎಲ್ಲಾ ಗಾಯಾಳುಗಳನ್ನ ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಬೀದರ್‌ನಿಂದ ಬೆಂಗಳೂರಿಗೆ (Bengaluru) 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ತೆರಳುತ್ತಿತ್ತು, ಈ ವೇಳೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಬೆನಾಪೋಲ್ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ – ಐವರು ಸಜೀವ ದಹನ

    ಮಿತಿ ಮೀರಿದ ವೇಗದಲ್ಲಿ ಚಲಾಯಿಸಿದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿದೆ. ಇದರಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ಬಳಿಕ ಪೊಲೀಸರು ಹಾಗೂ ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈ ಸಂಬಂಧ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗೃಹಲಕ್ಷ್ಮಿ ಹಣ, ಸರ್ಕಾರದಿಂದ ಚಿಟ್‌ ಫಂಡ್‌ – ಏನಿದು ಹೊಸ ಪ್ಲ್ಯಾನ್‌?

  • ಕಲಬುರ್ಗಿ ಹತ್ಯೆ ಪ್ರಕರಣ – ಸಾಕ್ಷಿ ನುಡಿದ ಮಗಳು, ಪತ್ನಿ

    ಕಲಬುರ್ಗಿ ಹತ್ಯೆ ಪ್ರಕರಣ – ಸಾಕ್ಷಿ ನುಡಿದ ಮಗಳು, ಪತ್ನಿ

    ಧಾರವಾಡ: ಹಿರಿಯ ಸಾಹಿತಿ ಡಾ. ಎಂಎಂ ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ 6 ಆರೋಪಿಗಳ ಪೈಕಿ ಐವರನ್ನು ಗುರುವಾರ ಧಾರವಾಡ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಸಾಕ್ಷಿ ವಿಚಾರಣೆ ನಡೆಸಲಾಯಿತು.

    2015ರ ಆಗಸ್ಟ್ 30ರಂದು ಬೆಳಗಿನ ಜಾವ ಕಲಬುರ್ಗಿ ಧಾರವಾಡದ ಕಲ್ಯಾಣನಗರದಲ್ಲಿರುವ ತಮ್ಮ ಮನೆಯಲ್ಲಿ ಕುಳಿತಿದ್ದಾಗ, ಮನೆಗೆ ಬಂದ ಹಂತಕರು ಬಾಗಿಲು ಬಡಿದಿದ್ದರು. ಈ ವೇಳೆ ಹೊರಗೆ ಬಂದು ಬಾಗಿಲು ತೆಗೆಯುತ್ತಿದ್ದಂತೆಯೇ ಕಲಬುರ್ಗಿ ತಲೆಗೆ ಗುಂಡು ಹೊಡೆದು ಆರೋಪಿಗಳು ಬೈಕ್ ಹತ್ತಿ ಪರಾರಿಯಾಗಿದ್ದರು.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ಆರೋಪಿಗಳಾದ ಹುಬ್ಬಳ್ಳಿಯ ಅಮಿತ್ ಬದ್ದಿ, ಗಣೇಶ ಮಿಸ್ಕಿನ್, ಬೆಳಗಾವಿಯ ಪ್ರವೀಣ್ ಚತುರ್ ಹಾಗೂ ವಾಸುದೇವ್ ಸೂರ್ಯವಂಶಿ ಸೇರಿದಂತೆ ಇನ್ನೊರ್ವನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದನ್ನೂ ಓದಿ: ಜೇಮ್ಸ್ ರಿಲೀಸ್ ಬಳಿಕ ಅಪ್ಪು ನೆನೆದು ಕಣ್ಣೀರಿಟ್ಟ ಶಿವಣ್ಣ

    ಕಣ್ಣೀರು ಹಾಕುತ್ತಾ ಸಾಕ್ಷ್ಯ ನುಡಿದ ಕಲಬುರ್ಗಿ ಪುತ್ರಿ: 
    ಈ ವೇಳೆ ಪ್ರಕರಣದಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಯಾಗಿರುವ ಹಾಗೂ ಹತ್ಯೆ ನಡೆದ ದಿನ ಅಂದು ಮನೆಯಲ್ಲಿದ್ದ ಕಲಬುರ್ಗಿ ಪುತ್ರಿ ರೂಪದರ್ಶಿಗೆ ಆರೋಪಿಗಳನ್ನು ಗುರುತಿಸುವಂತೆ ಸೂಚಿಸಲಾಯಿತು. ಇದಕ್ಕೂ ಮೊದಲು ಅಂದು ನಡೆದ ಘಟನೆಯನ್ನು ನ್ಯಾಯಾಧೀಶರ ಮುಂದೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕಲಬುರ್ಗಿ ಪುತ್ರಿ ತಂದೆಯನ್ನು ನೆನೆದು ನ್ಯಾಯಾಧೀಶರ ಎದುರು ಕಣ್ಣೀರು ಹಾಕಿದರು.

    ಅಂದು ಗುಂಡು ಹೊಡೆದು ಪರಾರಿಯಾಗಿದ್ದ ಗಣೇಶ ಮಿಸ್ಕಿನ್‌ನನ್ನು ಗುರುತಿಸುವ ವೇಳೆ ರೂಪದರ್ಶಿ ಕಣ್ಣೀರು ಹಾಕಿ ಬಳಿಕ ಆಕ್ರೋಶದಿಂದ ಇವನೇ ಗುಂಡು ಹೊಡೆದಿದ್ದು ಎಂದು ಹೇಳಿದರು. ಹೊರಗಡೆ ರಸ್ತೆಯಲ್ಲಿ ಬೈಕ್ ಮೇಲೆ ನಿಂತಿದ್ದ ಮತ್ತೋರ್ವ ಆರೋಪಿ ಪ್ರವೀಣ್ ಚತುರ್‌ನನ್ನು ಕೂಡಾ ರೂಪದರ್ಶಿ ಗುರುತಿಸಿದರು.

    ಈ ವಿಚಾರದ ಕುರಿತು ಸಮಗ್ರವಾದ ವಾದ-ವಿವಾದ ನಡೆದ ಬಳಿಕ ಕಲಬುರ್ಗಿ ಪತ್ನಿ ಉಮಾದೇವಿಯ ಸಾಕ್ಷ್ಯದ ವಿಚಾರಣೆಯನ್ನೂ ನಡೆಸಲಾಯಿತು. ಈ ವೇಳೆ ಸಾಕ್ಷಿಗಳನ್ನು ಏಕಕಾಲಕ್ಕೆ ಕ್ರಾಸ್ ಮಾಡಲು ತಮಗೆ ಸಿಆರ್‌ಪಿಸಿ 231 ಸೆಕ್ಷನ್ ಅಡಿಯಲ್ಲಿ ಅನುವು ಮಾಡಿಕೊಡುವಂತೆ ಆರೋಪಿಗಳ ಪರ ವಕೀಲ ಅರ್ಜಿ ಸಲ್ಲಿಸಿದರು. ಇದನ್ನೂ ಓದಿ: ಕಾಶ್ಮೀರಿ ಪಂಡಿತರಿಗೆ ಅನ್ಯಾಯವಾಗಿದೆ ಅದನ್ನು ಸರಿಪಡಿಸಿ ಪರಿಹಾರ ನೀಡಿ ಅದು ಬಿಟ್ಟು ಪ್ರಚೋದನೆ ಮಾಡಬೇಡಿ: ಖರ್ಗೆ

    ವಿಚಾರಣೆಯಲ್ಲಿ ಕಲಬುರ್ಗಿ ಕೊಲೆ ನಡೆದ ಸಮಯದಲ್ಲಿ ಅವರು ಧರಿಸಿದ್ದ ಶರ್ಟ್, ಬನಿಯನ್, ಪ್ಯಾಂಟ್, ಗುಂಡುಗಡಿಗೆ ಸೇರಿದಂತೆ ಅಂದಿನ ಕೆಲವೊಂದು ವಸ್ತುಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಬಳಿಕ ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಟ್ಟ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು, ವಿಚಾರಣೆಯನ್ನು ಏಪ್ರಿಲ್ 5ಕ್ಕೆ ಮುಂದೂಡಿದರು.

  • ಕಲಬುರಗಿ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರ ಕಳ್ಳಾಟ – ರಾತ್ರಿ ಒಂದು ರೇಟ್, ಹಗಲು ಒಂದು ರೇಟ್

    ಕಲಬುರಗಿ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರ ಕಳ್ಳಾಟ – ರಾತ್ರಿ ಒಂದು ರೇಟ್, ಹಗಲು ಒಂದು ರೇಟ್

    ಕಲಬುರಗಿ: ಮಹಾರಾಷ್ಟ್ರದಿಂದ ಕಲಬುರಗಿ ಬರುವ ಪ್ರಯಾಣಿಕರ ಲಸಿಕೆಗಳ ವಿವರಗಳನ್ನು ಪರಿಶೀಲಿಸದೇ ಅಧಿಕಾರಿಗಳು ಗಡಿ ದಾಟಲು ಬಿಟ್ಟಿರುವ ಪ್ರಕರಣ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ಮಹಾರಾಷ್ಟ್ರ ರಾಜ್ಯದ ಗಡಿಗೆ ಹೊಂದಿಕೊಂಡಿರುವ ಅಫಜಲಪುರ ತಾಲೂಕಿನ ಮಾಶ್ಯಾಳ ಗ್ರಾಮದಲ್ಲಿ ನಡೆದಿದೆ.

    ಅಧಿಕಾರಿಗಳು ಸಾರ್ವಜನಿಕರಿಂದ ಹಣ ವಸೂಲಿ ಮಾಡಲು ಖಾಸಗಿ ವ್ಯಕ್ತಿಗಳ ನೇಮಕ ಮಾಡಿರುವುದು ತಿಳಿದು ಬಂದಿದೆ. ಆರ್‌ಟಿಪಿಸಿಆರ್ ಟೆಸ್ಟ್ ನೆಗೆಟಿವ್ ರಿಪೋರ್ಟ್ ಮತ್ತು ಲಸಿಕಾ ವರದಿ ಇಲ್ಲದಿದ್ದರೂ ಹಣ ಕೊಟ್ಟು ಗಡಿಯೊಳಗೆ ಬರಲು ಸಹಾಯ ಮಾಡಿದ್ದಾರೆ. ಜೊತೆಗೆ ಹಗಲಲ್ಲಿ ಬರುವ ಪ್ರಯಾಣಿಕರಿಗೆ ಒಂದು ರೇಟ್, ರಾತ್ರಿ ಹೊತ್ತಲ್ಲಿ ಬರುವ ಪ್ರಯಾಣಿಕರಿಗೆ ಮತ್ತೊಂದು ರೇಟ್ ಇಟ್ಟಿರುವುದು ತಿಳಿದುಬಂದಿದೆ. ಇದನ್ನೂ ಓದಿ: ರೇಷನ್‌ ಕಾರ್ಡ್‌ ಇದೆಯಾ: ಸ್ನಾನ ಮಾಡ್ತಿದ್ದ ವ್ಯಕ್ತಿ ಬಳಿ ಹೋಗಿ ಬಿಜೆಪಿ ಶಾಸಕನ ಪ್ರಶ್ನೆ

    ಗುರುವಾರ ಒಂದೇ ದಿನ ಜಿಲ್ಲೆಯಲ್ಲಿ 346 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು. ಕೊರೊನಾ ಹಾವಳಿಯ ಮಧ್ಯೆಯೂ ಪೊಲೀಸರು ಹಣ ವಸೂಲಿ ಮಾಡಿ ಗಡಿಯೊಳಗೆ ಬಿಟ್ಟಿರುವುದು ಆಘಾತಕಾರಿ ವಿಷಯ. ಇದನ್ನೂ ಓದಿ: ವಿಶೇಷ ವಿಕಲಚೇತನ ಅಪ್ಪು ಅಭಿಮಾನಿಯಿಂದ ಬೆಂಗಳೂರಿಗೆ ಪಾದಯಾತ್ರೆ

  • ಬಿಜೆಪಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರಗೆ ಕೋವಿಡ್ ಪಾಸಿಟಿವ್

    ಬಿಜೆಪಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರಗೆ ಕೋವಿಡ್ ಪಾಸಿಟಿವ್

    ಕಲಬುರ್ಗಿ: ಬಿಜೆಪಿ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ನನಗೆ ಯಾವುದೇ ಗಂಭೀರ ಲಕ್ಷಣಗಳು ಇಲ್ಲ ಎಂದು ತಿಳಿಸಿದ್ದಾರೆ.

    ಕೋವಿಡ್ ಸೋಂಕು ದೃಢಪಟ್ಟ ಹಿನ್ನಲೆ ಬೆಂಗಳೂರಿನಲ್ಲಿ ಹೋಮ್ ಐಸೋಲೆಷನ್‍ನಲ್ಲಿರುವ ಶಾಸಕ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿ, ನನಗೆ ಯಾವುದೇ ಗಂಭೀರ ಲಕ್ಷಣಗಳು ಇಲ್ಲ. ಅದಾಗ್ಯೂ ವೈದ್ಯರ ಸಲಹೆ ಪಡೆದು ಆಸ್ಪತ್ರೆಗೆ ದಾಖಲಾಗುವ ಚಿಂತನೆಯಲ್ಲಿದ್ದೇನೆ. ನನ್ನೊಂದಿಗೆ ಸಂಪರ್ಕ ಹೊಂದಿರುವ ಹಾಗೂ ಕೊರೊನಾ ಲಕ್ಷಣಗಳುಳ್ಳವರು ತಪಾಸಣೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಖಾಸಗಿ ಲ್ಯಾಬ್‍ಗಳಲ್ಲೂ ಉಚಿತ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಎಎಪಿ ಆಗ್ರಹ

    ಈಚೆಗಷ್ಟೇ ಜಿಲ್ಲೆಯ ಶಾಸಕ ಅಜಯಸಿಂಗ್ ಅವರಿಗೂ ಕೋವಿಡ್ ದೃಢಪಟ್ಟಿದೆ. ಅಲ್ಲದೇ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಕೋವಿಡ್ ಸೋಂಕು ತಗುಲಿದೆ.

  • ಪಿಡಿಓ ಹೆದರಿಸಿ ಉಮೇಶ್ ಜಾಧವ್ ಬಿಲ್ ಮಾಡಿಸಿಕೊಂಡಿದ್ದಾರೆ: ಪ್ರಿಯಾಂಕ್ ಖರ್ಗೆ ಆರೋಪ

    ಪಿಡಿಓ ಹೆದರಿಸಿ ಉಮೇಶ್ ಜಾಧವ್ ಬಿಲ್ ಮಾಡಿಸಿಕೊಂಡಿದ್ದಾರೆ: ಪ್ರಿಯಾಂಕ್ ಖರ್ಗೆ ಆರೋಪ

    ಕಲಬುರಗಿ: ಸಂಸದ ಉಮೇಶ್ ಜಾಧವ್ ಅವರು ಪಿಡಿಓರನ್ನು ಹೆದರಿಸಿ ಬಿಲ್ ಮಾಡಿಸಿಕೊಂಡಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಆರೋಪಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರ ಸಂಘ 40% ಸರ್ಕಾರದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ನಮ್ಮ ಕಲಬುರಗಿ ಜಿಲ್ಲೆಯಲ್ಲಿ ವಸೂಲಿ 40% ಅನ್ನೂ ದಾಟಿ ಹೋಗಿದೆ. ಗ್ರಾಪಂ ಸದಸ್ಯರು ಉದ್ಯೋಗ ಖಾತ್ರಿಯಲ್ಲಿ ಆಗದ ಕೆಲಸಕ್ಕೆ ಸಂಸದರ ಮುಖಾಂತರ ಬಿಲ್ ಮಾಡಿಸಿಕೊಂಡಿದ್ದಾರೆ. ಬಿಲ್ ಹಾಕಿಸಿಕೊಳ್ಳುವುದಕ್ಕಾಗಿ ಚಿತ್ತಾಪುರ ತಾಲೂಕಿನ ಬಿಳಗೆರೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಬೆದರಿಕೆ ಹಾಕಿರುವ ವೀಡಿಯೋ ಇದೆ. ಆದರೆ ಅದು ನನ್ನ ಕ್ಷೇತ್ರದ್ದು ಎನ್ನುವ ಕಾರಣಕ್ಕೆ ವೀಡಿಯೋವನ್ನು ಬಿಡುಗಡೆ ಮಾಡುತ್ತಿಲ್ಲ ಎಂದರು.

    ಸಂಸದ ಉಮೇಶ್ ಜಾಧವ್ ಅವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪ್ರಿಯಾಂಕ್ ಖರ್ಗೆ ಹಿಂದೆ ದೊಡ್ಡ ಬ್ಯಾನರ್ ಇದೆ. ಮಲ್ಲಿಕಾರ್ಜುನ್ ಖರ್ಗೆಯವರ ಮಗ ಎನ್ನುತ್ತಾರೆ. ಖರ್ಗೆಯವರ ಮನೆಯಲ್ಲಿ ಹುಟ್ಟಬೇಕು ಎಂದು ನಾನು ಅರ್ಜಿ ಹಾಕಿದ್ದೇನಾ ಎಂದು ಪ್ರಶ್ನಿಸಿದ ಅವರು, ಹಾಗಾದರೆ ಅವಿನಾಶ್ ಜಾಧವ್ ಅವರು ಉಮೇಶ್ ಜಾಧವ್ ಮನೆಯಲ್ಲಿ ಅರ್ಜಿ ಹಾಕಿ ಹುಟ್ಟಿದ್ದಾರೆ ಎಂದಾಯ್ತು. ಅವಿನಾಶ್ ಜಾಧವ್ ಕೂಡ ಜಾಧವ್ ಬ್ಯಾನರ್‌ನಲ್ಲೆ ಬಂದಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ:  ಬೇಡಿಕೆ ಈಡೇರಿಸುವಂತೆ ಪ್ರತಿಭಟಸಿದ 100ಕ್ಕೂ ಹೆಚ್ಚು ಆದಿವಾಸಿಗಳು ಪೊಲೀಸರ ವಶಕ್ಕೆ

    ನಾನು ಖರ್ಗೆ ಬ್ಯಾನರ್‌ನಲ್ಲಿ ಬರುವುದಕ್ಕೂ ಮುಂಚೆ ಸಂಘಟನೆಯಿಂದ ಬಂದಿದ್ದೇನೆ. ಅದಾದ ಮೇಲೆ ಖರ್ಗೆಯವರ ಬ್ಯಾನರ್‌ನಲ್ಲಿ ಬಂದ ಮೇಲೂ ಉಪ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದೆ. ಉಮೇಶ್ ಜಾಧವ್ ಅವರು ಯಾರ ಬ್ಯಾನರ್‌ನಲ್ಲಿ ಬಂದಿದ್ದಾರೆ ಎಂದು ನೆನಪಿಸಿಕೊಳ್ಳಿ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಭಾರತದ ಭದ್ರ ಬುನಾದಿ ದುರ್ಬಲಗೊಳಿಸಲಾಗುತ್ತಿದೆ, ದೇಶದ ಪರಂಪರೆಯನ್ನು ನಾಶ ಮಾಡಲು ಬಿಡುವುದಿಲ್ಲ: ಸೋನಿಯಾಗಾಂಧಿ

  • ಮದ್ಯ ಕುಡಿಸಿ ಭಿಕ್ಷುಕಿ ಮೇಲೆ ಎರಗಿದ ಪಾಪಿ ಕಾಮುಕ ಅರೆಸ್ಟ್

    ಮದ್ಯ ಕುಡಿಸಿ ಭಿಕ್ಷುಕಿ ಮೇಲೆ ಎರಗಿದ ಪಾಪಿ ಕಾಮುಕ ಅರೆಸ್ಟ್

    ಯಾದಗಿರಿ: ಭಿಕ್ಷುಕಿಯ ಮೇಲೆ ಅತ್ಯಾಚಾರ ಮಾಡಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.

    ಯಾದಗಿರಿ ನಗರದ ಹಳೆ ಬಸ್ ನಿಲ್ದಾಣದಲ್ಲಿ ನವೆಂಬರ್ 23ರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾಮುಕ ಹನುಮಂತ್(40) ರಾತ್ರಿ ಭಿಕ್ಷುಕಿಗೆ ಕಂಠ ಪೂರ್ತಿ ಮದ್ಯ ಕುಡಿಸಿ ತಾನು ಕುಡಿದು ರೇಪ್ ಮಾಡಿದ್ದಾನೆ. ಭಿಕ್ಷುಕಿ ನಿರಾಕರಿಸಿದ್ದರೂ, ಆಕೆಯ ಮೇಲೆ ಹಲ್ಲೆ ಮಾಡಿ ಅತ್ಯಾಚಾರ ಮಾಡಿದ್ದಾನೆ.

    ಹನುಮಂತ್ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಂಕನೂರ ಗ್ರಾಮದ ನಿವಾಸಿಯಾಗಿದ್ದು, ಸ್ಥಳೀಯರು ಪ್ರಶ್ನಿಸಿದ್ದಾಗ ಭಿಕ್ಷುಕಿಯನ್ನು ನನ್ನ ಹೆಂಡ್ತಿ ಆಗಬೇಕೆಂದು ನಾಟಕ ಮಾಡಿದ್ದ. ಆದರೆ ಅನುಮಾನ ಬಂದ ಸ್ಥಳೀಯರು ಪೊಲೀಸರನ್ನ ಸ್ಥಳಕ್ಕೆ ಕರೆಸಿ ಕಾಮುಕನನ್ನು ಒಪ್ಪಿಸಿದ್ದಾರೆ. ಇದನ್ನೂ ಓದಿ:  ಜಾರಕಿಹೊಳಿ ಸಹೋದರರಿಗೆ ಪ್ರತಿಷ್ಠೆಯ ಕಣವಾದ ವಿಧಾನ ಪರಿಷತ್ ಚುನಾವಣೆ


    ನವೆಂಬರ್ 24 ರಂದು ಘಟನೆ ನಡೆದಿದ್ದು, ಮಾರನೇ ದಿನ ಬೆಳಗ್ಗೆ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಬಳಿಕ ಕಾಮುಕನನ್ನ ಪೊಲೀಸರು ಬಂಧಿಸಿದ್ದಾರೆ.

  • 40 ಅಲ್ಲ, 4 ಜನ ಶಾಸಕರನ್ನ ಕಾಂಗ್ರೆಸ್ ಸೆಳೆಯಲಿ ನೋಡೋಣ, ಸಾಯೋ ಪಾರ್ಟಿಗೆ ಯಾರು ಹೋಗ್ತಾರೆ?:ಈಶ್ವರಪ್ಪ

    40 ಅಲ್ಲ, 4 ಜನ ಶಾಸಕರನ್ನ ಕಾಂಗ್ರೆಸ್ ಸೆಳೆಯಲಿ ನೋಡೋಣ, ಸಾಯೋ ಪಾರ್ಟಿಗೆ ಯಾರು ಹೋಗ್ತಾರೆ?:ಈಶ್ವರಪ್ಪ

    ಕಲಬುರಗಿ: ಬಿಜೆಪಿ ಎಂಎಲ್‍ಎಗಳು ಸಿಂಹ ಇದ್ದ ಹಾಗೇ, ನಮ್ಮ ಶಾಸಕರು ಮಾರಾಟದ ವಸ್ತುಗಳಲ್ಲ. ಬಿಜೆಪಿಯ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಮಾತೇ ಇಲ್ಲ. 40 ಅಲ್ಲ, 4 ಜನ ಶಾಸಕರನ್ನು ಕಾಂಗ್ರೆಸ್ ಪಕ್ಷ ಸೆಳೆಯಲಿ ನೋಡೋಣ. ಸಾಯುವ ಪಕ್ಷಕ್ಕೆ ಯಾರಾದರೂ ಹೋಗ್ತಾರಾ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

    ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಜಾಬ್‍ನಲ್ಲಿ ಕಾಂಗ್ರೆಸ್ ಪಕ್ಷ ಒಡೆದು ಹೋದರೆ, ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಪೀಸ್, ಪೀಸ್ ಆಗುತ್ತದೆ. ಕಾಂಗ್ರೆಸ್ ಪಕ್ಷ ಮೊದಲು ತನ್ನ ಅಸ್ತಿತ್ವ ಉಳಿಸಿಕೊಳ್ಳುವ ಕೆಲಸ ಮಾಡಲಿ. ಕಾಂಗ್ರೆಸ್ ಈ ಹಿಂದೆ ಮಾಡಿದ ಕೆಲಸಗಳ ಬಗ್ಗೆ ಪಟ್ಟಿ ಕೊಡಲಿ, ನಂತರ ನಾವು ಕೊಡುತ್ತೇವೆ. ಅನೇಕ ರಾಷ್ಟ್ರಗಳ ಮುಸ್ಲಿಂರು ಬಿಜೆಪಿ ಪಕ್ಷಕ್ಕೆ ಬೆಂಬಲ ಘೋಷಿಸಿದ್ದಾರೆ. ಜೆಡಿಎಸ್ ಪಕ್ಷ ಮುಸ್ಲಿಂರನ್ನು ಚುನಾವಣೆಗೆ ನಿಲ್ಲಿಸಿದರೆ ಕಾಂಗ್ರೆಸ್‍ಗೆ ಭಯವಾಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: ವೀಡಿಯೋ- ಕೈ ನಾಯಕಿ ಪ್ರಿಯಾಂಕಾ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು

    ಈಶ್ವರಪ್ಪ ತಂಟೆಗೆ ನಾನು ಹೋಗುವುದಿಲ್ಲ ಎನ್ನುವ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನು ಏನು ಮಾತನಾಡುತ್ತೇನೆ ಅಂತ ಅವರಿಗೆ ಗೊತ್ತಿದೆ. ಅದಕ್ಕಾಗಿ ಅವರು ನನ್ನ ತಂಟೆಗೆ ಬರಲ್ಲ. ಇನ್ನಾದರೂ ಏಕ ವಚನದಲ್ಲಿ ಮಾತನಾಡುವುದನ್ನು ನಿಲ್ಲಿಸಲಿ. ಡಿ.ಕೆ.ಶಿವಕುಮಾರ್ ಅವರನ್ನು ಯಾವ ಹುಚ್ಚ ಆಸ್ಪತ್ರೆಗೆ ಸೇರಿಸಬೇಕು. ನಲವತ್ತು ಜನ ಶಾಸಕರು ಬಿಜೆಪಿಯಿಂದ ಕಾಂಗ್ರೆಸ್ ಗೆ ಬರುತ್ತಾರೆ ಅಂತ ಹೇಳುತ್ತಾರೆ. ನಾಲ್ಕು ಜನ ಶಾಸಕರು ಕೂಡಾ ಹೋಗುವುದಿಲ್ಲ. ಸಾಯುವ ಪಾರ್ಟಿಗೆ ಯಾರು ಹೋಗುತ್ತಾರೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರನ ವಿರುದ್ಧ ಕೊಲೆ ಪ್ರಕರಣ ದಾಖಲು

    ಬಹುತೇಕ ಕಡೆ ಕಾಂಗ್ರೆಸ್ ಅಭ್ಯರ್ಥಿಗಳು ಡಿಪಾಜಿಟ್ ಕಳೆದುಕೊಳ್ಳುತ್ತಾರೆ. ಚುನಾವಣೆ ಬಂದರೆ ಕಾಂಗ್ರೆಸ್‍ನವರು ನಡುಗಿ ಹೋಗುತ್ತಾರೆ. ಬೇರೆ ಮನೆಯವರನ್ನು ಹುಡುಕಿಕೊಂಡು ಬಂದು ಟಿಕೆಟ್ ನೀಡುತ್ತಾರೆ. ಕಾಂಗ್ರೆಸ್ ನಲ್ಲಿ ಕಾರ್ಯಕರ್ತರೇ ಇಲ್ವಾ? ಎರಡು ಉಪ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಿಮ್ಮ ಧೈರ್ಯಕ್ಕೆ ಅವರು ಹೆದರುತ್ತಾರೆ – ಪ್ರಿಯಾಂಕಾಗೆ ಧೈರ್ಯ ತುಂಬಿದ ಸಹೋದರ ರಾಹುಲ್

    ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ತುಂಬಾ ಗೌರವ ಇದೆ. ಖರ್ಗೆ ಅವರು  ಸುಮ್ಮನೆ ಏನೂ ಮಾತಾನಾಡುವುದಿಲ್ಲ. ಆದರೆ ವಿಶ್ವವೇ ಮೆಚ್ಚಿದ ನಾಯಕ ಮೋದಿ ಬಗ್ಗೆ ಚಿಲ್ಲರೆ ವ್ಯಕ್ತಿ ಅಂತಾ ಮಾತಾಡಿದ್ದಾರೆ.ವಿಶ್ವನಾಯಕನ ಬಗ್ಗೆ ಚಿಲ್ಲರೆ ಎಂದರೆ ವಿಶ್ವದ ಜನ ಏನಂತಾರೆ? ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಖಾಯಂ ಭದ್ರತಾ ಸದಸ್ಯತ್ವ ಸಿಕ್ಕಿದೆ. ಕೇಂದ್ರ ಸಂಪುಟದಲ್ಲಿ 27 ಜನ ದಲಿತರಿಗೆ ಸಚಿವ ಸ್ಥಾನ ಮೋದಿ ನೀಡಿದ್ದಾರೆ. ಈ ಹಿಂದಿನ ಪ್ರಧಾನಿಗಳು ವಿದೇಶಕ್ಕೆ ಹೋದಾಗ ಸಾಲ ಕೇಳಲು ಭಾರತ ಪ್ರಧಾನಿ ಬಂದಿದ್ದಾರೆ ಅಂತಿದ್ದರು. ಪ್ರಧಾನಿ ಮೋದಿ ಚಿಲ್ಲರೆ ಮನುಷ್ಯ ಅಲ್ಲ, ಮೋದಿ ಚಿನ್ನದ ಗಟ್ಟಿ. ರಾಜ್ಯದಲ್ಲಿ 27 ಸಂಸದರನ್ನು ಆಯ್ಕೆ ಮಾಡಿದ ಜನರು ಚಿಲ್ಲರೆನಾ? ಎಂದು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಹರಿಹಾಯಿದ್ದಾರೆ.

  • ಕಳೆದುಕೊಂಡ ಮೊಬೈಲ್, ಹಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಸೆಕ್ಯೂರಿಟಿ ಗಾರ್ಡ್!

    ಕಳೆದುಕೊಂಡ ಮೊಬೈಲ್, ಹಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಸೆಕ್ಯೂರಿಟಿ ಗಾರ್ಡ್!

    ವಿಜಯಪುರ: ಕುಡುಕನೋರ್ವ ಕುಡಿದ ಮತ್ತಿನಲ್ಲಿ ಕಳೆದುಕೊಂಡಿದ್ದ ಮೊಬೈಲ್ ಹಾಗೂ ಹಣವನ್ನು ಹಿಂದಿರುಗಿಸುವ ಮೂಲಕ ಸೆಕ್ಯೂರಿಟಿ ಗಾರ್ಡ್ ಪ್ರಾಮಾಣಿಕತೆ ಮೆರೆದಿದ್ದಾರೆ.

    ಜಿಲ್ಲೆಯ ಸಿಂದಗಿ ಬಸ್ ನಿಲ್ದಾಣದಲ್ಲಿ ಕುಡಿದ ನಶೆಯಲ್ಲಿ ರಮೇಶ್ ನಾಯಕ್ ಎಂಬವರು ತಮ್ಮ ಹಣ ಹಾಗೂ ಮೊಬೈಲ್ ಕಳೆದುಕೊಂಡಿದ್ದರು. ಸಿಂಧಗಿ ಬಸ್ ನಿಲ್ದಾಣದ ಪಾರ್ಕಿಂಗ್ ಬಾಯ್ ಆಗಿ ಕೆಲಸ ಮಾಡುತ್ತಿರುವ ಮೆಹಬೂಬ್ ಅವರು, ಈ ನಗದು ಹಾಗೂ ಮೊಬೈಲ್ ನ್ನು ರಮೇಶ್ ಗೆ ಹಿಂದಿರುಗಿಸಿದ್ದಾರೆ.

    ಕಲಬುರಗಿ ಜಿಲ್ಲೆ ಜೇವರ್ಗಿ ನಿವಾಸಿಯಾಗಿರುವ ರಮೇಶ್ 21,500 ರೂಪಾಯಿ ಹಣ ಮತ್ತು 2 ಮೊಬೈಲ್ ಗಳನ್ನು ಬಸ್ ನಿಲ್ದಾಣದಲ್ಲೇ ಬಿಟ್ಟುಹೋಗಿದ್ದರು. ಅದನ್ನ ಮೆಹಬೂಬ್ ಅವರು ಇಂದು ಪೊಲೀಸರ ಸಮ್ಮುಖದಲ್ಲಿ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ.

    ಮೆಹಬೂಬ್ ರ ಈ ಪ್ರಾಮಾಣಿಕತೆಗೆ ರಮೇಶ್ ಹಾಗೂ ಸಾರ್ವಜನಿಕರು ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಅನೈತಿಕ ಸಂಬಂಧ ಶಂಕೆ: ಪೋಷಕರೊಂದಿಗೆ ಸೇರಿ ಪತ್ನಿಗೆ ಬೆಂಕಿ ಇಟ್ಟ ಪತಿ!

    ಅನೈತಿಕ ಸಂಬಂಧ ಶಂಕೆ: ಪೋಷಕರೊಂದಿಗೆ ಸೇರಿ ಪತ್ನಿಗೆ ಬೆಂಕಿ ಇಟ್ಟ ಪತಿ!

    ಕಲಬುರಗಿ: ಅನೈತಿಕ ಸಂಬಂಧ ಶಂಕೆ ವ್ಯಕ್ತವಾಗಿದಕ್ಕೆ ಪೋಷಕರ ಜೊತೆ ಸೇರಿ ಪತಿಯೇ ಪತ್ನಿಗೆ ಬೆಂಕಿ ಹಚ್ಚಿದ ಅಮಾನವೀಯ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಕೂಡಲಹಂಗರಗಾ ಗ್ರಾಮದಲ್ಲಿ ನಡೆದಿದೆ.

    ಶಾರದಾಬಾಯಿ (20) ಸಾವು ಬದುಕಿನ ಹೋರಾಡುತ್ತಿರುವ ಪತ್ನಿ. ಶಾರದಾರ ಮುಖ ಸೇರಿದಂತೆ ದೇಹದ ಬಹುತೇಕ ಭಾಗ ಬೆಂಕಿಯಿಂದ ಸುಟ್ಟಿದೆ. ವೀರಣ್ಣ ಬೆಂಕಿ ಹಚ್ಚಿದ ಪತಿ.

    ಒಂದು ವರ್ಷದ ಹಿಂದೆ ಶಾರದಾಬಾಯಿ ಕೊಡಲಹಂಗರಗಾ ಗ್ರಾಮದ ವೀರಣ್ಣ ಜೊತೆ ವಿವಾಹವಾಗಿತ್ತು. ವೀರಣ್ಣ ಕೃಷಿಕನಾಗಿ ಕೆಲಸ ಮಾಡಿಕೊಂಡಿದ್ದನು. ಸಂಶಯ ಸ್ವಭಾವದವನಾಗಿದ್ದ ಪತಿ ವೀರಣ್ಣ, ನಿನ್ನ ನಡೆತೆ ಸರಿಯಾಗಿಲ್ಲ ಅಂತಾ ವಿನಾಕಾರಣ ಜಗಳ ಮಾಡುತ್ತಿದ್ದನು. ಶುಕ್ರವಾರ ಬೆಳಗ್ಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ. ಈ ಕೃತ್ಯ ಎಸಗಲು ವೀರಣ್ಣನ ತಾಯಿ ನೀಲಮ್ಮ ಹಾಗೂ ತಂದೆ ಗುಂಡಪ್ಪ ಸಹಾಯ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಕೃತ್ಯದ ಬಳಿಕ ಶಾರದಾಬಾಯಿ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ವೀರಣ್ಣ ಪರಾರಿಯಾಗಿದ್ದಾನೆ. ಶಾರದಾಬಾಯಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಲು ಹುಚ್ಚು ಹೇಳಿಕೆ: ಪ್ರಕಾಶ್ ರಾಜ್ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ

    ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಲು ಹುಚ್ಚು ಹೇಳಿಕೆ: ಪ್ರಕಾಶ್ ರಾಜ್ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ

    ಬೆಂಗಳೂರು: ಚಪ್ಪಾಳೆ ತಟ್ಟುತ್ತಾರೆ ಎನ್ನುವ ಮನಸ್ಥಿಯಲ್ಲಿ ವೇದಿಕೆ ಮೇಲೆ ಪ್ರಕಾಶ್ ರಾಜ್ ಹುಚ್ಚುಚ್ಚಾಗಿ ಮಾತನಾಡಿದ್ದಾರೆ ಎಂದು ಬಿಜೆಪಿ ಮುಖಂಡ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

    ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಕಾಶ್ ರಾಜ್ ನಟರಾಗಿ ಮುಂದುವರಿದರೆ ಒಳ್ಳೆಯದು. ಇಲ್ಲದೇ ಇದ್ದರೆ ಪಕ್ಷ ಹುಟ್ಟು ಹಾಕಿ ಮುಂದುವರಿಯಲಿ. ರಾಜ್ಯದಲ್ಲಾಗಿರುವ ದುರಂತಕ್ಕೆ ಪ್ರಧಾನಿ ಮೋದಿಯವರು ಏನೂ ಮಾಡಿಲ್ಲ ಎನ್ನುವುದು ಸರಿಯಲ್ಲ. ಇದು ನಟ ಪ್ರಕಾಶ್ ರಾಜ್ ಅವರ ಅಪ್ರಬುದ್ಧತೆಯನ್ನು ತೋರಿಸುತ್ತದೆ ಎಂದು ಹೇಳಿದರು.

    ಕಲಬುರ್ಗಿ ಮತ್ತು ಗೌರಿ ಹತ್ಯೆ ಬಗ್ಗೆ ತನಿಖೆ ನಡೆದು ಹಂತಕರನ್ನು ಶೀಘ್ರವೇ ಬಂಧಿಸಬೇಕೆಂದು ಕೇಂದ್ರವೇ ಹೇಳಿದೆ. ಪ್ರಕಾಶ್ ರೈ ಅವರು ಕಾವೇರಿ ವಿವಾದ ಸಂದರ್ಭದಲ್ಲಿ ತಮ್ಮನ್ನು ಎಳೆಯಬೇಡಿ ಎಂದಿದ್ದರು. ರಾಜ್ಯದಲ್ಲಿ 12 ಬಿಜೆಪಿ ಕಾರ್ಯಕರ್ತರ ಕೊಲೆಯಾಗಿದೆ. ಇದರ ಬಗ್ಗೆ ಪ್ರಕಾಶ್ ರಾಜ್ ಯಾಕೆ ಇದುವರಗೆ ಹೇಳಿಕೆ ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಅವರು ಡಿವೈಎಫ್‍ಐ ಕಾರ್ಯಕ್ರಮದಲ್ಲಿ ವೇದಿಕೆಗೆ ತಕ್ಕಂತೆ ಮಾತಾಡಿದ್ದಾರೆ ಎಂದು ಕಿಡಿಕಾರಿದರು.

    ಇದನ್ನೂ ಓದಿ: ಅವಾರ್ಡ್ ಗಳನ್ನ ವಾಪಸ್ ಕೊಡಲು ನಾನೇನು ಮೂರ್ಖನಾ?- ಪ್ರಕಾಶ್ ರಾಜ್