Tag: ಕಲಾಗ್ರಾಮ

  • ಕೊಡಗಿನ ನಿರಾಶ್ರಿತ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಚಲನಚಿತ್ರ ಪ್ರದರ್ಶನ

    ಕೊಡಗಿನ ನಿರಾಶ್ರಿತ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಚಲನಚಿತ್ರ ಪ್ರದರ್ಶನ

    ಬೆಂಗಳೂರು: ಕೊಡಗಿನ ನೊಂದ ಹೆಣ್ಣು ಮಕ್ಕಳ ವಿದ್ಯಾಭ್ಯಾಸದ ಸಹಾಯಾರ್ಥ `ಪೀಪಲ್ ಫಾರ್ ಪೀಪಲ್’ ತಂಡ ಕನ್ನಡದ `ಸಾವಿತ್ರಿಬಾಯಿ ಫುಲೆ’ ಚಿತ್ರದ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಈ ಕಾರ್ಯಕ್ರಮವು ಇಂದು ಸಂಜೆ 6 ಘಂಟೆಗೆ, ನಗರದ ಕರ್ನಾಟಕ ಚಲನಚಿತ್ರ ಕಲಾವಿದರ ಒಕ್ಕೂಟದ ಅಡಿಟೋರಿಯಂ, ಚಾಮರಾಜಪೇಟೆಯಲ್ಲಿ ನಡೆಯಲಿದೆ.

    ಈಗಾಗಲೇ `ಪೀಪಲ್ ಫಾರ್ ಪೀಪಲ್’ ತಂಡದವರು ಮಲ್ಲತ್ ಹಳ್ಳಿಯ ಕಲಾಗ್ರಾಮದಲ್ಲಿ ಕೊಡಗಿನ ಸಂತ್ರಸ್ತರ ಮಕ್ಕಳ ವಿದ್ಯಾಭ್ಯಾಸದ ಸಲುವಾಗಿ `ಕೊಡಗಿಗಾಗಿ ರಂಗಸಪ್ತಾಹ’ ಹಾಗೂ `ಕೊಡಗಿಗಾಗಿ ರಂಗೋತ್ಸವ’ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ.

    ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದ್ದು, ಈ ಪ್ರದರ್ಶನಕ್ಕೆ ಕೊಡಗಿನ ನೊಂದ ಹೆಣ್ಣುಮಕ್ಕಳು, ರಾಜಕೀಯ ನಾಯಕರು ನಾಡಿನ ವಿಚಾರವಾದಿಗಳು, ಪ್ರಗತಿಪರ ಹೋರಾಟಗಾರರು, ದಲಿತಪರ ಚಿಂತಕರು ಸೇರಿದಂತೆ ಎಲ್ಲಾ ಬಗೆಯ ನಾಯಕರು ಆಗಮಿಸಲಿದ್ದಾರೆ.

    ಬ್ರಿಟಿಷರಿಂದ “ಭಾರತದ ಮೊದಲ ಮಹಿಳಾ ಶಿಕ್ಷಕಿ” ಎಂಬ ಬಿರುದನ್ನು ಪಡೆದಿರುವ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಜೀವನಾಧಾರಿತ ಚಿತ್ರವಾಗಿದೆ. ಈ `ಸಾವಿತ್ರಿಬಾಯಿ ಫುಲೆ-ಪ್ರೈಡ್ ಆಫ್ ನೇಶನ್’. ಈ ಚಿತ್ರದಲ್ಲಿ ತಾರಾ `ಸಾವಿತ್ರಿಬಾಯಿ’ ಪಾತ್ರದಲ್ಲಿ ಮತ್ತು ಮಹಾತ್ಮ ಜ್ಯೋತಿಬಾ ಫುಲೆ ಪಾತ್ರದಲ್ಲಿ ಸುಚೇಂದ್ರ ಪ್ರಸಾದ್ ಅಭಿನಯಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೊಡಗಿಗಾಗಿ ರಂಗ ಸಪ್ತಾಹ ಕಾರ್ಯಕ್ರಮ ಕಲಾಗ್ರಾಮದಲ್ಲಿ ಉದ್ಘಾಟನೆ

    ಕೊಡಗಿಗಾಗಿ ರಂಗ ಸಪ್ತಾಹ ಕಾರ್ಯಕ್ರಮ ಕಲಾಗ್ರಾಮದಲ್ಲಿ ಉದ್ಘಾಟನೆ

    ಬೆಂಗಳೂರು: ಸಂಕಷ್ಟಕ್ಕೊಳಗಾದ ಕೊಡಗಿನ ಜನರಿಗೆ ಸಹಾಯ ಮಾಡುವ ಉದ್ದೇಶದಿಂದ ಪೀಪಲ್ ಫಾರ್ ಪೀಪಲ್ ತಂಡ ಆಯೋಜಿಸಿರುವ ಕೊಡಗಿಗಾಗಿ ರಂಗ ಸಪ್ತಾಹ ಕಾರ್ಯಕ್ರಮ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಉದ್ಘಾಟನೆ ಆಯಿತು.

    ಖ್ಯಾತ ಪರಿಸರತಜ್ಞ ಡಾ.ಯಲ್ಲಪ್ಪರೆಡ್ಡಿ ಮಾತನಾಡಿ, ದೇಶದ ಸಮಸ್ಯೆಗಳ ಬಗ್ಗೆ ಯುವಕರು ಚಿಂತನೆ ಮಾಡಿ ಪರಿಹಾರ ಕೈಗೊಳ್ಳಬೇಕೆಂಬ ಗಾಂಧೀಜಿಯವರ ಚಿಂತನೆ ಈಗಲೂ ಪ್ರಸ್ತುತ. ಈ ನಿಟ್ಟಿನಲ್ಲಿ ಪೀಪಲ್ ಫಾರ್ ಪೀಪಲ್ ತಂಡದ ಕಾರ್ಯ ಶ್ಲಾಘನೀಯ. ಪರಿಸರ ಸಂರಕ್ಷಣೆಯತ್ತ ನಾವು ಹೆಚ್ಚಿನ ಗಮನವಹಿಸಬೇಕಿದೆ. ಪರಿಸರ ಸಂರಕ್ಷಣೆಯಿಂದ ಮಾತ್ರ ಮನುಷ್ಯನ ಉಳಿವು ಸಾಧ್ಯ ಎಂದರು.

    ಡಾಲಿ ಧನಂಜಯ್ ಮಾತನಾಡಿ, ಸಮಸ್ಯೆಗಳಿಗೆ ಆ ಕ್ಷಣಕ್ಕೆ ಸ್ಪಂದಿಸೋದು ಮಾತ್ರವಲ್ಲ, ಸಮಸ್ಯೆಯನ್ನು ಸಂಪೂರ್ಣ ಪರಿಹರಿಸುವತ್ತಲೂ ಗಮನಹರಿಸಬೇಕು. ಈ ನಿಟ್ಟಿನಲ್ಲಿ ಪೀಪಲ್ ಫಾರ್ ಪೀಪಲ್ ತಂಡ ಸಕ್ರಿಯವಾಗಿ ಕಾರ್ಯನಿರತವಾಗಿದೆ ಎಂದರು.

    ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ಕೊಡಗು ತಲ್ಲಣಗೊಂಡಿದೆ, ನೊಂದಿದೆ. ನಮಗೆಲ್ಲವನ್ನೂ ಕೊಟ್ಟ ಕೊಡಗಿನ ದುಃಸ್ಥಿತಿಯನ್ನು ಮರೆಯಬಾರದು. ಅದಕ್ಕಾಗಿಯೇ ಈ ಕಾರ್ಯಕ್ರಮ. ಇದೊಂದು ಜಾಗೃತಿ ಕಾರ್ಯಕ್ರಮ. ಪರಿಸರ ಕಲುಷಿತಗೊಂಡಿರುವುದಕ್ಕೆ ಮನುಷ್ಯನ ಮನಸ್ಸು ಕಲುಷಿತಗೊಂಡಿರುವುದೇ ಕಾರಣ. ಪರಿಸರ ನಮ್ಮ ತಾಯಿ. ತಾಯಿಯಂಥಾ ಪರಿಸರವನ್ನು ಇನ್ನಾದರೂ ರಕ್ಷಿಸಬೇಕು. ಸದ್ಯಕ್ಕೆ ಕೊಡಗಿನ ಪ್ರಾಕೃತಿಕ ಹಾನಿಯಿಂದ ಸಂತ್ರಸ್ತರಾಗಿರುವ ಕೊಡಗಿನ ಜನಕ್ಕೆ ಅಗತ್ಯವಾದ ಕೆಲಸವನ್ನು ನಾವೆಲ್ಲರೂ ಮಾಡೋಣ. ಪೀಪಲ್ ಫಾರ್ ಪೀಪಲ್ ತಂಡಕ್ಕೆ ಆದಿಚುಂಚನಗಿರಿ ಮಠದ ಬೆಂಬಲ ಸದಾ ಇರುತ್ತದೆ ಎಂದು ಹೇಳಿದರು.

    ಕೊಡಗಿನ ಸಂತ್ರಸ್ತ ಕುಟುಂಬದವರೂ ಸಹ ಕಾರ್ಯಕ್ರಮದಲ್ಲಿ ಹಾಜರಿದ್ದರು. ಖ್ಯಾತ ಪರಿಸರ ತಜ್ಞ ಡಾ. ಯಲ್ಲಪ್ಪರೆಡ್ಡಿ, ರೈತ ಮುಖಂಡ ಪಚ್ಚೆ ನಂಜುಂಡಸ್ವಾಮಿ, ಸಂಚಾರಿ ವಿಜಯ್, ಒರಟ ಪ್ರಶಾಂತ್ , ಕೊಡಗು ನಿವೃತ್ತ ಜಿಲ್ಲಾಧಿಕಾರಿ, ಕೆಎಂಎಫ್ ಮಾಜಿ ಅಧ್ಯಕ್ಷ ಪ್ರೇಮನಾಥ್, ಡಾ.ಸಿ.ಅಶ್ವತ್ಥ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

    ರಂಗಸಪ್ತಾಹದ ಮೊದಲ ದಿನಕ್ಕೆ ಅನನ್ಯ ಭಟ್ ಮತ್ತು ತಂಡದವರ ಜನಪದಗೀತಜಾತ್ರೆ ಮೆರುಗು ತಂದಿತ್ತು. ನಟನ ತಂಡದವರು ಅಭಿನಯಿಸಿದ ಚೋರಚರಣದಾಸ ಪ್ರೇಕ್ಷಕರ ಮನಸೂರೆಗೊಂಡಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews