Tag: ಕಲಾವಿದರು

  • 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಾಡು ಸಿದ್ಧ – ʻನುಡಿ ಜಾತ್ರೆಯ ಸ್ವರ ಯಾತ್ರೆʼ

    87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಾಡು ಸಿದ್ಧ – ʻನುಡಿ ಜಾತ್ರೆಯ ಸ್ವರ ಯಾತ್ರೆʼ

    ಮಂಡ್ಯ: 3ನೇ ಬಾರಿಗೆ ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (87th Kannada Sahitya Sammelana) ಇತಿಹಾಸ ಸೃಷ್ಟಿಸಲಿದೆ. ಹಲವು ಹೊಸತನಗಳಿಗೆ ಸಾಕ್ಷಿಯಾಗುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಕಲ ರೀತಿಯಲ್ಲಿ ಸಜ್ಜಾಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ (Chaluvaraya Swamy) ಅವರು ಹೇಳಿದ್ದಾರೆ

    ಮಂಡ್ಯ (Mandya) ನಗರದ ಹೊರವಲಯದಲ್ಲಿರುವ ಸ್ಯಾಂಜೋ ಆಸ್ಪತ್ರೆ ಹಿಂಭಾಗದಲ್ಲಿ ನಿರ್ಮಿಸುತ್ತಿರುವ ವೇದಿಕೆಗಳ ಸಿದ್ಧತಾ ಕಾರ್ಯಗಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವರು ಮಾತನಾಡಿದರು. ಇದನ್ನೂ ಓದಿ: ವಕ್ಫ್ ವಿಚಾರದಲ್ಲಿ ರಕ್ಷಿಸಲು ಕಾಂಗ್ರೆಸ್ ನಾಯಕರು ವಿಜಯೇಂದ್ರ ಸಂಬಂಧಿಗಳೇ?: ಎಂಪಿ ರೇಣುಕಾಚಾರ್ಯ

    70-80 ಎಕರೆ ಪ್ರದೇಶದಲ್ಲಿ ಪ್ರಧಾನ ವೇದಿಕೆ, ಎರಡು ಸಮಾನಾಂತರ ವೇದಿಕೆ, 60 ಎಕರೆ ಪ್ರದೇಶದಲ್ಲಿ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ. 55 ವಸ್ತುಪ್ರದರ್ಶನ ಮಳಿಗೆಗಳು, 350 ವಾಣಿಜ್ಯ ಮಳಿಗೆಗಳು, 450 ಪುಸ್ತಕ ಮಳಿಗೆಗಳು ಕೂಡ ತಲೆ ಎತ್ತಿವೆ. ಊಟಕ್ಕೆ 100 ಕೌಂಟರ್, ನೋಂದಾಯಿತ ಪ್ರತಿನಿಧಿಗಳಿಗೆ 40 ಕೌಂಟರ್‌ಗಳನ್ನ ತೆರೆಯಲಾಗಿದ್ದು ಎಲ್ಲರಿಗೂ ಒಂದೇ ಊಟದ ಮೆನು ಇರಲಿದೆ ಎಂದು ಮಾಹಿತಿ ನೀಡಿದರು.

    ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಆಹಾರದ ಗುಣಮಟ್ಟ ಪರೀಕ್ಷೆ ಮಾಡಿ ವರದಿ ಪಡೆಯಲಾಗುತ್ತದೆ. ನೀರನ್ನು ಸಹ ಪರೀಕ್ಷಿಸಲಾಗುತ್ತದೆ. ಸ್ವಚ್ಛತೆಗೆ 250 ಸಿಬ್ಬಂದಿಯನ್ನ ನೇಮಿಸಲಾಗಿದೆ. 150ಕ್ಕೂ ಹೆಚ್ಚು ವಿವಿಧ ಸ್ಥಳಗಳಲ್ಲಿ ಶೌಚಾಲಯ ನಿರ್ಮಿಸಲಾಗಿದೆ. 6,000 ನೋಂದಾಯಿತ ಪ್ರತಿನಿಧಿಗಳಿಗೆ ಅರ್ಧ ಕೆಜಿ ಬೆಲ್ಲ, ಅರ್ಧ ಕೆಜಿ ಸಕ್ಕರೆ, ಬ್ರೆಶ್, ಪೇಸ್ಟ್, ಸೋಪು, ಬೆಡ್ ಶಿಟ್ ಒಳಗೊಂಡ ಲೇದರ್ ಬ್ಯಾಗ್‌ನಲ್ಲಿ ವಸತಿ ಮತ್ತು ಸಮ್ಮೇಳನದ ಕಿಟ್ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

    7 ತಾಲೂಕು ಕೇಂದ್ರಗಳಿಂದ ಉಚಿತ ಬಸ್‌ ವ್ಯವಸ್ಥೆ:
    ಸಮ್ಮೇಳನಕ್ಕೆ ಆಗಮಿಸುವ 7 ತಾಲೂಕು ಕೇಂದ್ರಗಳಿಂದ 15 ಉಚಿತ ಬಸ್ (Free Bus) ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ಮಂಡ್ಯ ನಗರದಿಂದ ಕೂಡ ಬಸ್‌ಗಳು ಸಮ್ಮೇಳನದ ಸ್ಥಳಕ್ಕೆ ಉಚಿತವಾಗಿ ಕರೆತರಲಿವೆ. ಮೂರು ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಪಾರ್ಕಿಂಗ್ ಸ್ಥಳದಿಂದ ಕೂಡ ಉಚಿತ ಸಾರಿಗೆ ವಾಹನದ ವ್ಯವಸ್ಥೆ ಮಾಡಲಾಗಿದೆ. ಮೈಸೂರು ಬೆಂಗಳೂರಿನಿಂದ 30 ನಿಮಿಷಕ್ಕೆ ಒಂದು ವಿಶೇಷ ಬಸ್ ಸಂಚರಿಸಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಚಿಕಿತ್ಸೆಗಾಗಿ ಅಮೆರಿಕಗೆ ಹೊರಡುವ ಮುನ್ನ ಶಿವಣ್ಣರನ್ನು ನೋಡಲು ಬಂದ ಪೂರ್ಣಿಮಾ ಕುಟುಂಬ

    ಸಮ್ಮೇಳನಾಧ್ಯಕ್ಷರಾದ ಗೊ.ರು ಚನ್ನಬಸಪ್ಪ ಅವರು ಗುರುವಾರ ಸಂಜೆ ಮಂಡ್ಯಕ್ಕೆ ಆಗಮಿಸಲಿದ್ದು ಅವರನ್ನು ಬರಮಾಡಿಕೊಳ್ಳಲಾಗುವುದು. ಡಿ.20ರ ಶುಕ್ರವಾರ ಬೆಳಗ್ಗೆ 6ಕ್ಕೆ ಧ್ವಜಾರೋಹಣ ನೆರವೇರಲಿದೆ. 7 ಗಂಟೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭವಾಗಲಿದೆ. ಮೆರವಣಿಗೆಯಲ್ಲಿ ಹಗಲುವೇಷ, ಮಹಿಳಾ ವೀರಗಾಸೆ, ಗೊರವರ ಕುಣಿತ, ಕಂಸಾಳೆ, ಕರಗ, ಸುಗ್ಗಿ ಕುಣಿತ, ಕೋಲಾಟ ಒಳಗೊಂಡಂತೆ ಪೂರ್ಣಕುಂಭ ಹೊತ್ತ 300 ಮಹಿಳೆಯರು ಹಾಗೂ 50ಕ್ಕೂ ಹೆಚ್ಚು ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ. ಮೆರವಣಿಗೆಗೆ ಮೈಸೂರು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್‌ ಚಾಲನೆ ನೀಡಲಿದ್ದಾರೆ ಎಂದರು.

    ಕಾರ್ಯಕ್ರಮಗಳಿಗೆ ಮೂರು ವೇದಿಕೆಗಳನ್ನು ನಿರ್ಮಿಸಲಾಗುತ್ತಿದೆ. ಪ್ರಧಾನ ವೇದಿಕೆಯಲ್ಲಿ ಸಮ್ಮೇಳನಾಧ್ಯಕ್ಷರ ಜೊತೆಗಿನ ಸಂವಾದವೂ ಸೇರಿದಂತೆ ‌11 ಗೋಷ್ಠಿಗಳು, 2 ಸಮಾನಾಂತರ ವೇದಿಕೆಗಳಲ್ಲಿ 20 ಗೋಷ್ಠಿಗಳು ಆಯೋಜನೆಗೊಂಡಿವೆ. ಸಮ್ಮೇಳನದ ಅಂಗವಾಗಿ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಸಿಎಂ ವಿರುದ್ಧ ಮುಡಾ ಹಗರಣಕ್ಕೆ ಟ್ವಿಸ್ಟ್‌ – ದೂರು ಹಿಂಪಡೆಯಲು ಸ್ನೇಹಮಯಿ ಕೃಷ್ಣಗೆ ಆಮಿಷ ಆರೋಪ

    ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರ, ಅಂಬೇಡ್ಕರ್ ಭವನ, ಸಮಾನಾಂತರ ವೇದಿಕೆ ಮತ್ತು ಪ್ರಧಾನ ವೇದಿಕೆಗಳಲ್ಲಿ ಸ್ಥಳೀಯ ಕಲಾವಿದರ ಕಾರ್ಯಕ್ರಮಗಳು ನಡೆಯಲಿವೆ. ʻನುಡಿ ಜಾತ್ರೆಯ ಸ್ವರ ಯಾತ್ರೆʼ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಡಿ.20ರ ಮೊದಲ ದಿನ ಸಾಧುಕೋಕಿಲ (Sadhu kokila) ಮತ್ತು ರಾಜೇಶ್ ಕೃಷ್ಣನ್ (Rajesh Krishnan) ತಂಡದಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ. ಡಿ.21ರಂದು ಅರ್ಜುನ್ ಜನ್ಯ (Arjun Janya) ಮತ್ತು ತಂಡದಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ. ಡಿ.22ರಂದು ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಪೊಲೀಸ್ ಬ್ಯಾಂಡ್ ಇರಲಿದೆ ಎಂದು ವಿವರಿಸಿದರು.

    ಚೆಸ್ಕಾಂ ವತಿಯಿಂದ ನಗರದಲ್ಲಿ ವಿದ್ಯುತ್ ಅಲಂಕಾರ ಮಾಡಲಾಗುತ್ತಿದೆ. ನಾಡುನುಡಿಗೆ ಸೇವೆ ಸಲ್ಲಿಸಿದ 170 ಮಂದಿ ಸಾಧಕರನ್ನು ಸನ್ಮಾನಿಸಲಾಗುತ್ತಿದೆ. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣಾರ್ಥ 87 ಪುಸ್ತಕಗಳನ್ನು ಬಿಡುಗಡೆ ಮಾಡಲಾಗುತ್ತದೆ. ಜೊತೆಗೆ ʻಬೆಲ್ಲದಾರತಿʼ ಹೆಸರಿನ ಸ್ಮರಣ ಸಂಚಿಕೆ ಕೂಡ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗೆ ಹೋಗಬಾರದವ್ವ ಅಂತ ಮಹಿಳೆಯರು ಮಾತಾಡ್ಕೊಳ್ತಿದ್ದಾರೆ – ಆರ್‌. ಅಶೋಕ್‌

  • ‘ಕಾಂತಾರ 1’ರಲ್ಲಿ ನಟಿಸೋಕೆ ಅರ್ಜಿ ಹಾಕಿಕೊಂಡವರು 25 ಸಾವಿರ

    ‘ಕಾಂತಾರ 1’ರಲ್ಲಿ ನಟಿಸೋಕೆ ಅರ್ಜಿ ಹಾಕಿಕೊಂಡವರು 25 ಸಾವಿರ

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಲಿರುವ ಕಾಂತಾರ ಚಾಪ್ಟರ್ 1 (Kantara 1) ಸಿನಿಮಾಗೆ ಕಲಾವಿದರು (Artists) ಬೇಕಾಗಿದ್ದಾರೆ ಎಂದು ಚಿತ್ರತಂಡ ಪೋಸ್ಟರ್ ರಿಲೀಸ್ ಮಾಡಿತ್ತು. ಹಲವಾರು ಪಾತ್ರಗಳು ಇರುವುದರಿಂದ ಕಲಾವಿದರ ವಯಸ್ಸನ್ನೂ ನಿಗದಿ ಪಡಿಸಿ, ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಅದಕ್ಕೆ ಸಾಕಷ್ಟು ರೆಸ್ಪಾನ್ಸ್ ಬಂದಿದೆ. ಚಿತ್ರತಂಡವೇ ಹೇಳಿಕೊಂಡಂತೆ 25 ಸಾವಿರಕ್ಕೂ ಹೆಚ್ಚು ಜನರು ಅರ್ಜಿ ಸಲ್ಲಿಸಿದ್ದಾರೆ.

    ಕಿರಿಕ್ ಪಾರ್ಟಿ ಮಾಡಿದಾಗಲೂ ಆಡಿಷನ್ ಗೆ ಚಿತ್ರತಂಡ ಕಾಲ್ ಮಾಡಿತ್ತು. ಆಗ ಎರಡು ಸಾವಿರಕ್ಕೂ ಹೆಚ್ಚು ಕಲಾವಿದರು ಅರ್ಜಿ ಸಲ್ಲಿಸಿದ್ದರು. ಕಾಂತಾರ 1 ಚಿತ್ರಕ್ಕೆ ನಿರೀಕ್ಷೆಗೂ ಮೀರಿ ಜನರು ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಚಿತ್ರತಂಡವು ಅದನ್ನು ಪರಿಶೀಲಿಸುವ ಕೆಲಸವನ್ನು ನಡೆಸಿದೆ. ಸಾಮಾನ್ಯ ಕಲಾವಿದರು ಮಾತ್ರವಲ್ಲ, ಈಗಾಗಲೇ ಸಾಕಷ್ಟು ಚಿತ್ರಗಳಲ್ಲಿ ನಟಿಸಿರುವ ನಾಯಕಿಯರು ಅವಕಾಶ ಕೇಳಿದ್ದಾರೆ ಎನ್ನವುದು ವಿಶೇಷ.

    ಕಾಂತಾರ ಸಿನಿಮಾದಲ್ಲಿ ನಟಿಸೋಕೆ ಆಸೆ ಇರುವುದಾಗಿ ಪಾಯಲ್ ರಜಪೂತ್ (Payal Rajput) ಮತ್ತು ಕನ್ನಡದ ನಟಿ ಕಾರುಣ್ಯ ರಾಮ್ (Karunya Ram) ಕೂಡ ತಿಳಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಆಸೆಯನ್ನು ವ್ಯಕ್ತಪಡಿಸಿರುವ ಕಾರುಣ್ಯ ರಾಮ್, ನನಗೂ ಕಾಂತಾರ ಸಿನಿಮಾದಲ್ಲಿ ನಟಿಸಲು ಅವಕಾಶ ಕೊಡಿ ಎಂದು ಅವರು ಕೇಳಿಕೊಂಡಿದ್ದರು.

     

    ಕಾಂತಾರ್ ಚಾಪ್ಟರ್ 1ರ ಚಿತ್ರೀಕರಣದ ಸಿದ್ಧತೆ ಭರ್ಜರಿಯಾಗಿಯೇ ನಡೆಯುತ್ತಿದೆ. ಮೊನ್ನೆಯಷ್ಟೇ ಟೀಸರ್ ವೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ರಿಷಬ್ ಕೈಯಲ್ಲಿ ಒಂದು ಕಡೆ ತ್ರಿಶೂಲ ಮತ್ತೊಂದು ಕಡೆ ಪರಶುರಾಮನ ಕೊಡಲಿ (Kodali) ಇತ್ತು. ಈ ಕೊಡಲಿ ಕುತೂಹಲಕ್ಕೂ ಕಾರಣವಾಗಿತ್ತು.

  • 1 ವರ್ಷದ ಬಳಿಕ ಆಫ್ಘನ್‌ನಲ್ಲಿ ಚಿತ್ರಮಂದಿರಗಳು ಓಪನ್ – ಸಿನಿಮಾದಲ್ಲಿ ಮಹಿಳಾ ಪಾತ್ರಗಳಿಗೆ ತಾಲಿಬಾನ್ ನಿರ್ಬಂಧ

    1 ವರ್ಷದ ಬಳಿಕ ಆಫ್ಘನ್‌ನಲ್ಲಿ ಚಿತ್ರಮಂದಿರಗಳು ಓಪನ್ – ಸಿನಿಮಾದಲ್ಲಿ ಮಹಿಳಾ ಪಾತ್ರಗಳಿಗೆ ತಾಲಿಬಾನ್ ನಿರ್ಬಂಧ

    ಕಾಬೂಲ್: ತಾಲಿಬಾನ್ ಅಫ್ಘಾನಿಸ್ತಾನದ ಆಡಳಿತವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡ ಒಂದು ವರ್ಷದ ನಂತರ ಚಿತ್ರಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನಕ್ಕೆ ಗ್ರೀನ್‌ಸಿಗ್ನಲ್ ಕೊಟ್ಟಿದೆ. ಆದರೆ ಚಲನಚಿತ್ರಗಳಲ್ಲಿ ಮಹಿಳಾ ಕಲಾವಿದರ ಪಾತ್ರಗಳಿಗೆ ನಿರ್ಬಂಧ ವಿಧಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ಒಂದು ವರ್ಷದ ನಂತರ ಆಫ್ಘನ್‌ನಲ್ಲಿ ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ಸಿಕ್ಕಿರುವುದು ಸಿನಿಪ್ರಿಯರು, ಚಲನಚಿತ್ರ ನಿರ್ಮಾಪಕರು ಹಾಗೂ ನಿರ್ದೇಶಕರಲ್ಲಿ ಮಂದಹಾಸ ಮೂಡಿಸಿದೆ. ಇದೇ ವೇಳೆ ಮಹಿಳಾ ಹಕ್ಕುಗಳ ಉಲ್ಲಂಘನೆಯ ಬಗ್ಗೆ ತೀವ್ರ ಕಳವಳವೂ ವ್ಯಕ್ತವಾಗಿದೆ. ಈಗಾಗಲೇ 37 ಚಲನಚಿತ್ರಗಳು ಹಾಗೂ ಸಾಕ್ಷ್ಯಾಚಿತ್ರಗಳು ಪ್ರದರ್ಶನಕ್ಕೆ ಸಜ್ಜಾಗಿವೆ. ಆದರೆ ಇತ್ತೀಚಿಗೆ ನಿರ್ಮಿಸಲಾದ ಚಿತ್ರಗಳಲ್ಲಿ ಮಹಿಳಾ ನಟಿ ಅತಿಫಾ ಮೊಹಮ್ಮದಿ ಮಾತ್ರವೇ ಏಕೈಕ ಮಹಿಳಾ ಪಾತ್ರ ನಿರ್ವಹಿಸಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಭಾರತ-ಪಾಕ್ ಕ್ರಿಕೆಟ್ ಪಂದ್ಯ ವೀಕ್ಷಿಸಿದವರಿಗೆ 5 ಸಾವಿರ ರೂ. ದಂಡ – ಶ್ರೀನಗರ ಕಾಲೇಜು ಆದೇಶ

    ಚಿತ್ರ ನಿರ್ಮಾಣಕ್ಕೆ ಹಣ ನೀಡುವಂತೆ ಮನವಿ: ಚಿತ್ರಮಂದಿರ ತೆರೆಯಲು ಅನುಮತಿ ಸಿಕ್ಕಿರುವುದು ಚಲನಚಿತ್ರ ನಿರ್ಮಾಪಕರಲ್ಲಿ ಉತ್ಸಾಹ ತರಿಸಿದ್ದು, ನಿರ್ಮಿಸುವ ಚಲನಚಿತ್ರಗಳಿಗೆ ಹಣ ನೀಡುವಂತೆ ಮನವಿ ಮಾಡಿದ್ದಾರೆ. ನಮ್ಮ ಕೆಲಸವನ್ನು ಸಂತೋಷದಿಂದ ಮಾಡುತ್ತಿದ್ದೇವೆ. ನಮ್ಮ ಪಾಕೆಟ್ ಮನಿಯಿಂದ ಸಿನಿಮಾಕ್ಕೆ ಖರ್ಚು ಮಾಡಿದ್ದೇವೆ. ಹಾಗಾಗಿ ಚಿತ್ರ ನಿರ್ಮಾಣಕ್ಕೆ ಹಣ ನೀಡುವಂತೆ ಮನವಿ ಮಾಡಿರುವುದಾಗಿ ಕಲಾವಿದ ಫಯಾಜ್ ಇಫ್ತಿಕರ್ ಹೇಳಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಮುಖಂಡ ಝಹ್ರಾ ಮುರ್ತಝಾವಿ, ಸಿನಿಮಾ ಕ್ಷೇತ್ರದಲ್ಲಿ ಮಹಿಳೆಯರನ್ನು ನಿಷೇಧಿಸಬಾರದು. ಏಕೆಂದರೆ ಇದು ಮಹಿಳೆಯರ ಹಕ್ಕು. ಮಹಿಳೆಯರ ಉಪಸ್ಥಿತಿಯಿಲ್ಲದೇ ಚಲನಚಿತ್ರವು ಉತ್ತಮವಾಗಿ ಮೂಡಿಬರುತ್ತದೆ ಎಂದು ನನಗೆ ಅನ್ನಿಸುವುದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಮೆರಿಕಾದ ಸಿಯಾಟಲ್‍ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮ

    ತಾಲಿಬಾನ್ ಕಳೆದ ತಿಂಗಳು ಮಹಿಳೆಯರು ಹಾಗೂ ಹುಡುಗಿಯರು ಅಗತ್ಯವಿಲ್ಲದೇ ಮನೆಯಿಂದ ಹೊರಗೆ ಬಾರದಂತೆ ಹಾಗೂ ಮುಖ ತೋರಿಸದಂತೆ ಆದೇಶಿಸಿತ್ತು. ಇದಕ್ಕೂ ಮುನ್ನ ಹೆಣ್ಣುಮಕ್ಕಳಿಗೆ ಮಾಧ್ಯಮಿಕ ಶಿಕ್ಷಣವನ್ನು ನಿಷೇಧಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಮೂರು ದಿನಗಳ ಕಾಲ ಕಿರುತೆರೆ ಕಲಾವಿದರ ಟೆಲಿವಿಷನ್ ಪ್ರೀಮಿಯರ್ ಲೀಗ್

    ಮೂರು ದಿನಗಳ ಕಾಲ ಕಿರುತೆರೆ ಕಲಾವಿದರ ಟೆಲಿವಿಷನ್ ಪ್ರೀಮಿಯರ್ ಲೀಗ್

    ಎನ್ 1 ಕ್ರಿಕೆಟ್ ಅಕಾಡೆಮಿ ವತಿಯಿಂದ ಟೆಲಿವಿಷನ್ ಪ್ರೀಮಿಯರ್ ಲೀಗ್-ಟಿಪಿಎಲ್ ಶುರುವಾಗ್ತಿದ್ದು, ಇದೇ ತಿಂಗಳ 18, 19 ಹಾಗೂ 20 ಈ ಮೂರು ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ ಕಿರುತೆರೆ ಕಲಾವಿದರು ಭಾಗಿಯಾಗಲಿದ್ದಾರೆ. ಹಿರಿಯ ಕಲಾವಿದರ ಸಹಾಯ ಮಾಡುವುದು ಈ ಟಿಪಿಎಲ್ ನ ಮುಖ್ಯ ಧ್ಯೇಯವಾಗಿದೆ ಎನ್ನುತ್ತಾರೆ ಟಿಪಿಎಲ್ ಆಯೋಜಕರಾದ ಸುನಿಲ್ ಕುಮಾರ್ ಬಿ ಆರ್. ಈ ಬಗ್ಗೆ  ಟಿಪಿಎಲ್ ಬಳಗ ಮಾಧ್ಯಮದರೊಟ್ಟಿಗೆ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.

    ಕ್ರಿಕೆಟ್ ಪಂದ್ಯಾವಳಿಯ ಆಯೋಜಕರಾದ ಸುನಿಲ್ ಕುಮಾರ್ ಬಿ ಆರ್ ಮಾತನಾಡಿ, ಒಳ್ಳೆ ಉದ್ದೇಶ ಇಟ್ಕೊಂಡು ಈ ಪಂದ್ಯಾವಳಿ ಏರ್ಪಡಿಸಲಾಗಿದ್ದು. ಆರು ಜನ ಓನರ್ಸ್ ಗೆ ಧನ್ಯವಾದ ತಿಳಿಸುತ್ತೇನೆ. 16ರಂದು ಜರ್ಸಿ ಲಾಂಚ್ ಹಾಗೂ ಟ್ರೋಫಿ ಲಾಂಚ್ ಮಾಡಲಾಗುತ್ತದೆ. 18, 19 ಹಾಗೂ 20 ಈ ಮೂರು ದಿನಗಳ ಕಾಲ ಕ್ರಿಕೆಟ್ ನಡೆಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ನಾಪತ್ತೆಯಾದ ಲೋಕೇಶ್

    ಅಶ್ವ ಸೂರ್ಯ ರೈಡರರ್ಸ್ ತಂಡದ ನಾಯಕ ಮಂಜು ಪಾವಗಡ ಮಾತನಾಡಿ, ಒಂದೊಳ್ಳೆ ತಂಡಗಳು ಸೇರಿಕೊಂಡು ಕ್ರಿಕೆಟ್ ಆಡ್ತಿದ್ದು, ಪ್ರತಿ ತಂಡಕ್ಕೂ ಓನರ್ ಗಳು ಬೆಂಬಲವಾಗಿ ನಿಂತಿದ್ದಾರೆ ಎಂದರು.  ದಿ ಬುಲ್ ಸ್ಕ್ವಾಡ್, ಭಜರಂಗಿ ಬುಲ್ಸ್, ಎಂಜೆಲ್ ಎಸ್ಐ, ವಿನ್ ಟೈಮ್ ರಾಕರ್ಸ್, ಅಶ್ವ ಸೂರ್ಯ ರೈಡರ್ಸ್, ಸ್ಯಾಂಡಲ್ ವುಡ್ ಕಿಂಗ್ಸ್ ಎಂಬ ಆರು ತಂಡಗಳು ಭಾಗಿಯಾಗಲಿದ್ದು, ಒಟ್ಟು 102 ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಸಾಥ್ ಕೊಡಲಿದ್ದಾರೆ. ಈ ಆರು ತಂಡಗಳಿಗೂ ಅಂಬಾಸಿಡರ್ ಹಾಗೂ ಓನರ್ ಗಳಿರಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗಣೇಶ ಮೂರ್ತಿಗಳಿಗೆ ಬೇಡಿಕೆ ಕುಸಿತ- ಸಂಕಷ್ಟದಲ್ಲಿ ಕಲಾಕಾರರು

    ಗಣೇಶ ಮೂರ್ತಿಗಳಿಗೆ ಬೇಡಿಕೆ ಕುಸಿತ- ಸಂಕಷ್ಟದಲ್ಲಿ ಕಲಾಕಾರರು

    – ಆರ್ಥಿಕ ನೆರವು ನೀಡುವಂತೆ ಮನವಿ

    ಕಾರವಾರ: ಗಣೇಶ ಹಬ್ಬ ಹತ್ತಿರ ಬರುತ್ತಿದ್ದು, ಕೊರೊನಾ ಕಾರಣದಿಂದ ಗಣೇಶನ ಮೂರ್ತಿಯನ್ನು ಖರೀದಿಸುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಇದರಿಂದ ಮೂರ್ತಿಯನ್ನು ತಯಾರು ಮಾಡುವವರು ಸಂಕಷ್ಟದಲ್ಲಿ ಸಿಲುಕಿದ್ದಾರೆ.

    ಕೊರೊನಾ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರಿಂದ ಎಲ್ಲಾ ಉದ್ಯಮಗಳ ಮೇಲೆ ಆರ್ಥಿಕ ಬಿಕ್ಕಟ್ಟನ್ನು ತಂದೊಡ್ಡಿದೆ. ಇದೀಗ ವಿಘ್ನ ನಿವಾರಕ ಗಣಪತಿ ಮೂರ್ತಿ ಕೆಲಸಗಾರರಿಗೂ ಸಂಕಷ್ಟ ಎದುರಾಗಿದ್ದು, ಈ ಬಾರಿ ಗಣಪತಿ ಮೂರ್ತಿಗಳಿಗೆ ಬೇಡಿಕೆ ಕುಸಿದಿದೆ. ಇದನ್ನೂ ಓದಿ:ತಂದೆ ಸಮಾಧಿ ಬಳಿ ಬಾಲಕಿ ಹುಟ್ಟುಹಬ್ಬ ಆಚರಣೆ

    ಗೊಂದಲದಲ್ಲಿ ಸರ್ಕಾರ: ಕೊರೊನಾ ಮೂರನೇ ಅಲೆಯಿಂದಾಗಿ ರಾಜ್ಯ ಸರ್ಕಾರ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಯಾವ ರೀತಿ ಅನುಮತಿ ನೀಡಬೇಕು ಎಂಬ ಗೊಂದಲದಲ್ಲಿದೆ. ಸೆ.5ರಂದು ಈ ಕುರಿತು ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ತೀರ್ಮಾನ ಸಹ ಕೈಗೊಳ್ಳಲಿದೆ. ಆದರೆ ಹಲವು ಜಿಲ್ಲೆಗಳಲ್ಲಿ ಕೊರೊನಾ ಹೆಚ್ಚಾಗಿದ್ದು, ಸಾರ್ವಜನಿಕ ಉತ್ಸವ ನಡೆಸಲು ಅನುಮತಿ ನಿರಾಕರಿಸಲಾಗುತ್ತಿದೆ.

    ಈ ಬಾರಿ ಬೇಡಿಕೆಯಲ್ಲಿ ಇಳಿಮುಖ: 

    ಮಣ್ಣಿನಿಂದ ಗಣಪತಿ ಮೂರ್ತಿ ತಯಾರಿಕೆಯ ಬೇಡಿಕೆ ಇಳಿಯುತ್ತಿದ್ದು, ಇದರ ಪರಿಣಾಮ ಮೂರ್ತಿ ತಯಾರಕರ ಮೇಲೆ ಆಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೀಗ ಚತುರ್ಥಿಗೆ ಇರುತಿದ್ದ ಮೂರ್ತಿಗಳ ಬೇಡಿಕೆ ದೊಡ್ಡ ಮಟ್ಟದಲ್ಲಿ ಇಳಿದಿದೆ. ಕಾರವಾರ ತಾಲೂಕಿನಲ್ಲೇ 50ಕ್ಕೂ ಹೆಚ್ಚು ಗಣಪತಿ ಮೂರ್ತಿ ತಯಾರಕರಿದ್ದಾರೆ. ಜಿಲ್ಲೆಯಲ್ಲಿ ಇದರ ಸಂಖ್ಯೆ ಸಾವಿರ ದಾಟುತ್ತದೆ. ಇದನ್ನೂ ಓದಿ:ತಂದಿಟ್ಟು ತಮಾಷೆ ನೋಡೋದಕ್ಕೆ ಹೇಳಿರ್ತಾರೆ – ಉಮಾಪತಿ ಬಳಿ ಕ್ಷಮೆ ಕೇಳಿದ್ದ ಭೂಗತ ಪಾತಕಿ ರವಿ

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮೂರು ತಲೆಮಾರಿನಿಂದ ಗಣಪತಿ ತಯಾರಿಸುತ್ತಿರುವ ವಿನಾಯಕ್ ಬಾಂದೇಕರ್, ಈ ಬಾರಿಯ ಕೊರೊನಾದಿಂದ ಸಂಘ ಸಂಸ್ಥೆಗಳು ಮೂರ್ತಿ ತಯಾರು ಮಾಡಲು ಆರ್ಡರ್ ನೀಡುತ್ತಿದ್ದರು. ಇನ್ನೂ ಅಂಗಡಿಯಲ್ಲಿ ಮಾರಾಟ ಮಾಡುವವರು ಸಹ ಮೂರ್ತಿ ತಯಾರಿಕೆಗೆ ಈ ಬಾರಿ ಕಡಿಮೆ ಸಂಖ್ಯೆಯ ಆರ್ಡರ್ ನೀಡಿದ್ದಾರೆ. ಜನರಿಂದಲೂ ಕೂಡ ಆರ್ಡರ್ ಬರುವುದು ಕಡಿಮೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಪ್ಲಾಸ್ಟರ್ ಆಫ್ ಪ್ಯಾರಿಸ್ ಮೂರ್ತಿಗೆ ನಿರ್ಬಂಧವಾಗಿದ್ದು, ಈ ಮಳೆಯ ಹಾನಿಯಿಂದ ಕುಂಬಾರಮಣ್ಣಿನ ಬೇಡಿಕೆ ಇದ್ದರೂ ತಯಾರಿಕೆಗೆ ಬೇಕಾದ ಮಣ್ಣು ಸಿಗುತ್ತಿಲ್ಲ. ಹೀಗಾಗಿ ದುಪ್ಪಟ್ಟು ಹಣ ನೀಡಿ ಮಣ್ಣನ್ನು ಖರೀದಿಸಬೇಕಿದ್ದು, ನಾವು ಮಾಡಿದ ಕೆಲಸಕ್ಕೆ ಸೂಕ್ತ ಹಣ ದೊರಕದೇ ಇತ್ತ ಕೆಲಸವನ್ನು ಸಹ ಬಿಡಲಾಗದ ಸ್ಥಿತಿಗೆ ಕಲಾವಿದರು ಸಿಲುಕಿದ್ದಾರೆ. ಇದನ್ನೂ ಓದಿ:ಬೆಳಗಾವಿ ಮೂವರು ನಾಯಕರನ್ನ ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ

    ಈ ಹಿಂದೆ ಒಂದು ಚಿಕ್ಕ ಗಣಪತಿಗೆ ಮೂರ್ತಿಗೆ 1,000 ರೂ. ದಿಂದ ಆಕೃತಿಗೆ ಅನುಸಾರವಾಗಿ 5,000 ರೂ ಇರುತಿತ್ತು. ಇನ್ನು ದೊಡ್ಡ ಗಣಪತಿಗೆ ಐವತ್ತು ಸಾವಿರದಿಂದ ಎರಡು ಲಕ್ಷ ರೂ. ವರೆಗೆ ಆಕಾರದ ಮೇಲೆ ದರ ನಿಗದಿಯಾಗುತಿತ್ತು. ಆದರೇ ಇದೀಗ ದರವು ಅರ್ಧದಷ್ಟು ಇಳಿದಿದೆ. ಜೊತೆಗೆ ಬೇಡಿಕೆಯು ಸಹ ಇಳಿದಿದೆ.

    ಆರ್ಥಿಕ ಬೆಂಬಲ ನೀಡಬೇಕು: ಜಿಲ್ಲೆಯಲ್ಲಿ ವಾಯುಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ಸ್ನೇಹಿ ಗಣಪತಿ ಪ್ರತಿಷ್ಟಾಪನೆ ಅಭಿಯಾನ ಸಹ ನಡೆಯುತ್ತಿದೆ. ಹೀಗಾಗಿ ಜನರು ಖರ್ಚು ರಹಿತ ಹಾಗೂ ಪರಿಸರ ಸ್ನೇಹಿ ಗಣಪತಿಯತ್ತ ಮುಖ ಮಾಡಿದ್ದಾರೆ. ಕೇವಲ ಮೂರು ತಿಂಗಳುಗಳ ವ್ಯವಹಾರ ನಡೆಸುವ ಕಲಾವಿದರಿಗೆ ಇದೇ ಆರ್ಥಿಕ ಮೂಲ ಕೂಡ. ಹೀಗಾಗಿ ಕಾರ್ಮಿಕರಿಗೆ ನೀಡಿದಂತೆ ರಾಜ್ಯ ಸರ್ಕಾರ ಈ ವೃತ್ತಿಯವರಿಗೆ ಆರ್ಥಿಕ ಬೆಂಬಲ ನೀಡಬೇಕು ಎಂಬುದು ಕಲಾಕಾರರ ಬೇಡಿಕೆಯಾಗಿದೆ. ಇದನ್ನೂ ಓದಿ:ತಾಲಿಬಾನ್ ಸರ್ಕಾರ ರಚನೆಗೆ ಸಂತೋಷ ವ್ಯಕ್ತಪಡಿಸೋದು ಅನಾಗರೀಕತೆ: ನಾಸಿರುದ್ದೀನ್ ಶಾ

    ಕೊರೊನಾ ಮೂರನೇ ಅಲೆಯಿಂದಾಗಿ ಸರ್ಕಾರ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ಕಲ್ಪಿಸುವ ಕುರಿತು ಸೂಕ್ತ ನಿರ್ಧಾರಕ್ಕೆ ಬಾರದೇ ವಿಘ್ನ ನಿವಾರಕ ಗಣಪತಿಗೂ ವಿಘ್ನ ತಂದೊಡ್ಡಿದೆ. ಇದರ ಜೊತೆಗೆ ಕುಂಬಾರು ಮಣ್ಣಿನ ಗಣಪತಿ ತಯಾರಿಕೆಯನ್ನು ನಂಬಿದ ಕಲಾವಿದರಿಗೂ ಸಹ ಆರ್ಥಿಕವಾಗಿ ತೊಂದರೆಗೆ ಸಿಲುಕಿದ್ದಾರೆ.

  • ನಿನ್ನ ಬಳಿ ದುಡ್ಡಿಲ್ಲ ಎಂದು ಮಜಾ ಭಾರತದ ಕಲಾವಿದನಿಗೆ ಕೈ ಕೊಟ್ಟ ಪತ್ನಿ

    ನಿನ್ನ ಬಳಿ ದುಡ್ಡಿಲ್ಲ ಎಂದು ಮಜಾ ಭಾರತದ ಕಲಾವಿದನಿಗೆ ಕೈ ಕೊಟ್ಟ ಪತ್ನಿ

    ಮಂಡ್ಯ: ನಿನ್ನ ಬಳಿ ದುಡ್ಡಿಲ್ಲ ಎಂದು ಹಾಸ್ಯ ಕಲಾವಿದನಿಗೆ ಪತ್ನಿ ಕೈ ಕೊಟ್ಟು ಬೇರೊಬ್ಬನೊಂದಿಗೆ ಮದುವೆಯಾಗಿರುವ ಪ್ರಸಂಗವೊಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾಳಸಿದ್ದನಹುಂಡಿಯಲ್ಲಿ ನಡೆದಿದೆ.

    ಕೊರೊನಾ ಕಾರಣದಿಂದ ಹಲವಾರು ಜನ ದುಡ್ಡಿಲ್ಲದೆ ಕಷ್ಟವನ್ನು ಅನುಭವಿಸುತ್ತಿದ್ದಾರೆ. ಅದರಲ್ಲೂ ನಟನೆಯೇ ಜೀವನವೆಂದು ಬದುಕುತ್ತಿರುವ ಕಲಾವಿದರು ತಮ್ಮ ದಿನನಿತ್ಯದ ಜೀವನ ಸಾಗಿಸಲು ತುಂಬಾ ಕಷ್ಟ ಪಡುತ್ತಿದ್ದಾರೆ. ಮಜಾಭಾರತ ಕಾಮಿಡಿ ಶೋ ಹಾಸ್ಯ ಕಲಾವಿದ ಕಾಳಸಿದ್ದನಹುಂಡಿಯ ರವಿ ಅವರು, ಸಣ್ಣ-ಪುಟ್ಟ ಸೀರಿಯಲ್‍ಗಳಲ್ಲಿ ನಟಿಸುತ್ತಿದ್ದರು. ಅವರು 4 ವರ್ಷದ ಹಿಂದೆ ಮೈಸೂರು ಮೂಲದ ಬೇಬಿ ಎಂಬಾಕೆಯನ್ನು ಪ್ರೀತಿಸಿ, ಮನೆಯವರ ವಿರೋಧವಿದ್ದರೂ ಮದುವೆಯಾಗಿದ್ದರು. ಆ ಬಳಿಕ ಕೊರೊನಾ ಕಷ್ಟಕಾಲದಲ್ಲಿ ರವಿ ಅವರಿಗೆ ಎಲ್ಲಿಯೂ ಸಹ ಅವಕಾಶಗಳು ಸಿಗದೆ ಕಷ್ಟದ ಜೀವನ ನಡೆಸುತ್ತಿದ್ದರು. ಇದನ್ನೂ ಓದಿ: ಕಿಚ್ಚನ ಹೊಸ ಹೇರ್ ಸ್ಟೈಲ್‍ಗೆ ಫ್ಯಾನ್ಸ್ ಫಿದಾ

    ಈ ಹಿನ್ನೆಲೆ ಪತ್ನಿ ಬೇಬಿ ಮತ್ತೊಬ್ಬನ ಜೊತೆ ಅಕ್ರಮ ಸಂಬಂಧವನ್ನು ಇಟ್ಟುಕೊಂಡಿದ್ದರು. ಇದು ರವಿ ಅವರಿಗೆ ತಿಳಿದು ಪ್ರಶ್ನಿಸಿದ್ದಾರೆ. ಬಳಿಕ ನಿನ್ನ ಬಳಿ ದುಡ್ಡಿಲ್ಲ ಎಂದು ಬೇಬಿ ಕಾರಣ ಕೊಟ್ಟು ರವಿ ಅವರನ್ನು ಬಿಟ್ಟು ಹೋಗಿದ್ದಾರೆ. ಅಲ್ಲದೇ ದೂರವಾದ ಬಳಿಕ ಮತ್ತೊಂದು ಮದುವೆಯನ್ನು ಮಾಡಿಕೊಂಡಿದ್ದಾರೆ. ಇದನ್ನು ತಡೆಯಲು ಹೋಗಿದ್ದ ರವಿ ಮೇಲೆ ಬೇಬಿ ಅವರ ಎರಡನೇ ಗಂಡ ಹಾಗೂ ಆಕೆ ತಮ್ಮನಿಂದ ಹಲ್ಲೆ ನಡೆದಿದ್ದು, ಈ ಕುರಿತು ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ವಿಭಿನ್ನವಾಗಿ ರಕ್ಷಾ ಬಂಧನ ಆಚರಿಸಿದ ಸೆಲೆಬ್ರಿಟಿಗಳು

    ರವಿ ಮತ್ತು ಬೇಬಿ 4 ವರ್ಷದ ಹಿಂದೆ ಪರಸ್ಪರ ಪ್ರೀತಿಸಿ ಮನೆಯವರ ವಿರೋಧದ ನಡುವೆಯೂ ರಿಜಿಸ್ಟರ್ ಮ್ಯಾರೇಜ್ ಆಗಿದ್ರು. ಇವರು ಮೈಸೂರಿನಲ್ಲಿ 4 ವರ್ಷ ಬಾಡಿಗೆ ಮನೆಯಲ್ಲಿ ಸಂಸಾರ ಮಾಡಿದ್ದರು. ಅದು ಅಲ್ಲದೇ ಖಾಸಗಿ ವಾಹಿನಿಯ ಆದರ್ಶ ದಂಪತಿ ಶೋನಲ್ಲೂ ಸಹ ಭಾಗವಹಿಸಿದ್ದರು. ಈ ಶೋನಲ್ಲಿ ನಿರೂಪಕರು ಅವರ ಮದುವೆಗೆ ಗೈರಾಗಿದ್ದ ತಾಯಿ ಮುಂದೆ ಮತ್ತೊಮ್ಮೆ ಇಬ್ಬರಿಗೂ ತಾಳಿಕಟ್ಟಿಸಿದ್ದರು. ಈ ನಡುವೆ ಕೊರೊನಾ ಮೊದಲನೇ ಅಲೆಯಲ್ಲಿ ಅವರಿಗೆ ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದರು. ಅದಕ್ಕೆ ಅವರ ಪತ್ನಿ ಬೇಬಿ ಅವರನ್ನು ತೊರೆದು ಹೋಗಿದ್ದಾರೆ. ಇದನ್ನೂ ಓದಿ: ಕೆಜಿಎಫ್ ಬಿಡುಗಡೆಗೆ ದಿನಾಂಕ ನಿಗದಿ – ಏಪ್ರಿಲ್‍ನಲ್ಲಿ ರಾಖಿಬಾಯ್ ಆರ್ಭಟ

    ತನಗಾದ ಮೋಸದಂತೆ ಮತ್ಯಾರಿಗೂ ಆಗಬಾರದು, ಆಕೆಗೆ ಶಿಕ್ಷೆ ಆಗಬೇಕು ಎಂದು ಕಲಾವಿದ ರವಿ ಪಟ್ಟು ಹಿಡಿದಿದ್ದು, ನ್ಯಾಯಕ್ಕಾಗಿ ಕೋರ್ಟ್ ಮೊರೆ ಹೋಗಿದ್ದಾರೆ.

  • ಸೋಮಣ್ಣ ಪ್ರತಿಷ್ಠಾನದಿಂದ ಕಲಾವಿದರಿಗೆ ದಿನಸಿ ಕಿಟ್ ವಿತರಣೆ

    ಸೋಮಣ್ಣ ಪ್ರತಿಷ್ಠಾನದಿಂದ ಕಲಾವಿದರಿಗೆ ದಿನಸಿ ಕಿಟ್ ವಿತರಣೆ

    ಬೆಂಗಳೂರು: ನಾಡಪ್ರಭು ಕೆಂಪೇಗೌಡ 512ನೇ ಜಯಂತಿ ಪ್ರಯುಕ್ತ, ಚಲನಚಿತ್ರ ಕಲಾವಿದರು ಮತ್ತು ರಂಗಭೂಮಿ ಕಲಾವಿದರುಗಳಿಗೆ ಸೋಮಣ್ಣ ಪ್ರತಿಷ್ಠಾನ ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ ಮಾಡಲಾಯಿತು.

    ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ, ಗೋವಿಂದರಾಜನಗರ ವಾರ್ಡ್ ಪಾಲಿಕೆ ಸೌಧ ಅವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸೋಮಣ್ಣ, ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಚಿಂತನೆಯಿಂದ ಬೆಂಗಳೂರು ನಗರ ನಿರ್ಮಾಣ ಮಾಡಿದರು. ಜಾತ್ಯಾತೀತ ನಿಲುವು ಹೊಂದಿದ್ದು, ಎಲ್ಲ ಕಾಯಕ ಸಮಾಜಗಳಾದ ನೇಕಾರ, ಮಂಡಿ ವ್ಯಾಪಾರಿ, ಕುಂಬಾರಿಕೆ ವಿವಿಧ ಕುಶಲಕರ್ಮಿ ಕೆಲಸಗಾರರಿಗೆ ಪೇಟೆಗಳ ನಿರ್ಮಾಣ ಮಾಡಿ, ಉದ್ಯಮಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಿದರು. ಕಾಯಕಯೋಗಿ ಬಸವೇಶ್ವರ ಮತ್ತು ನಾಡಪ್ರಭು ಕೆಂಪೇಗೌಡರು ಜಾತ್ಯಾತೀತ ನಿಲುವಿನ ಪ್ರತಿಪಾದಕರು ಎಂದರು.

    ನಿವೇಶನ ಇಲ್ಲದಿರುವ ಚಲನಚಿತ್ರ ಕಲಾವಿದರು ಮತ್ತು ರಂಗಭೂಮಿ ಕಲಾವಿದರುಗಳು ಪಟ್ಟಿ ಮಾಡಿ ಅರ್ಜಿ ಕೊಟ್ಟರೆ ಕೂಡಲೇ ಮುಖ್ಯಮಂತ್ರಿಗಳ ಹತ್ತಿರ ಚರ್ಚಿಸಿ ಒಂದೂವರೆ ತಿಂಗಳಲ್ಲಿ ವಸತಿ ಅಥವಾ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

    ನಂತರ ಬಿಡಿಎ ಅಧ್ಯಕ್ಷ ಎಸ್ ಆರ್ ವಿಶ್ವನಾಥ್ ಮಾತನಾಡಿ, ಬೆಂಗಳೂರು ನಗರ ವಿಶ್ವವಿಖ್ಯಾತಿ ಪಡೆಯಲು ಮೂಲ ಕಾರಣ ನಾಡಪ್ರಭು ಕೆಂಪೇಗೌಡರು. ಅವರ ಅಭಿವೃದ್ಧಿ ಪರ ಚಿಂತನೆ, ಯೋಜನೆಗಳು ಜಾರಿಗೆ ಬಂದರೆ ಬೆಂಗಳೂರು ನಗರ ಇನ್ನಷ್ಟು ಅಭಿವೃದ್ಧಿಯತ್ತ ಸಾಗುತ್ತದೆ ಎಂದು ನುಡಿದರು. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಕೇಸ್‍ನಿಂದ ಮುಕ್ತರಾದ್ರೆ ಸಚಿವರಾಗ್ತಾರೆ: ಜೆ.ಸಿ.ಮಾಧುಸ್ವಾಮಿ

  • ಕೋವಿಡ್ 2ನೇ ಅಲೆ ಪ್ಯಾಕೇಜ್ – 20,713 ಕಲಾವಿದರಿಗೆ ತಲಾ ಮೂರು ಸಾವಿರ ರೂ. ನೆರವು

    ಕೋವಿಡ್ 2ನೇ ಅಲೆ ಪ್ಯಾಕೇಜ್ – 20,713 ಕಲಾವಿದರಿಗೆ ತಲಾ ಮೂರು ಸಾವಿರ ರೂ. ನೆರವು

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ‘ಕೋವಿಡ್-19ರ 2ನೇ ಅಲೆಯಿಂದ ಸಂಕಷ್ಟದಲ್ಲಿರುವ ಕಲಾವಿದರುಗಳಿಗೆ ಸರ್ಕಾರದಿಂದ ಆರ್ಥಿಕ ನೆರವು ನೀಡಿಕೆಗೆ ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಕೋವಿಡ್ 2ನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿದ ಕಲಾವಿದರಿಗೆ 3,000 ರೂ.ಗಳ ಆರ್ಥಿಕ ನೆರವು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಇಪ್ಪತ್ತು ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ಡಿ.ಬಿ.ಟಿ. ಮೂಲಕ ಒಟ್ಟು 6.23 ಕೋಟಿ ರೂ. ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು.

    ಕೋವಿಡ್-19ರ 2ನೇ ಅಲೆಯಿಂದ ಸಂಕಷ್ಟಕ್ಕೀಡಾದ ದುರ್ಬಲ ವರ್ಗದವರಿಗೆ ಒಟ್ಟು 2,050 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಿದ್ದು, ಈಗಾಗಲೇ ಹೂವು, ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ, ಕಟ್ಟಡ ನಿರ್ಮಾಣ ಕಾರ್ಮಿಕರಿಗೆ, ಬೀದಿಬದಿ ವ್ಯಾಪಾರಿಗಳು ಮೊದಲಾದವರಿಗೆ ಡಿ.ಬಿ.ಟಿ. ಮೂಲಕ ಆರ್ಥಿಕ ನೆರವನ್ನು ನೇರವಾಗಿ ಅವರ ಖಾತೆಗೆ ವರ್ಗಾಯಿಸಲಾಗಿದೆ. ಉಳಿದ ವರ್ಗಗಳಿಗೂ ಶೀಘ್ರವೇ ನೆರವು ನೀಡಲು ಕ್ರಮ ವಹಿಸಲಾಗುತ್ತಿದೆ. ಇದನ್ನೂ ಓದಿ: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ವ್ಯಾಕ್ಸಿನ್ ನೀಡುವ ಮೊದಲು ಶಾಲೆ ಆರಂಭ ಬೇಡ: ಪ್ರತಾಪ್ ಸಿಂಹ

    ಮೊದಲ ಅಲೆಯ ಸಂದರ್ಭದಲ್ಲಿಯೂ ಕಲಾವಿದರಿಗೆ ನೆರವು ನೀಡಲಾಗಿತ್ತು. ಈ ಬಾರಿಯೂ ಸರ್ಕಾರ ಅವರ ನೆರವಿಗೆ ಧಾವಿಸಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಿ, ಕಲಾವಿದರ ದಾಖಲೆಗಳನ್ನು ಪರಿಶೀಲಿಸಿ, ಅತ್ಯಂತ ಪಾರದರ್ಶಕವಾಗಿ ನೆರವು ನೀಡಲು ಮಂಜೂರಾತಿ ನೀಡಲಾಗಿದೆ. ಫಲಾನುಭವಿಗಳು ಡಿ.ಬಿ.ಟಿ. ಆಪ್ ಮುಖಾಂತರ ತಮ್ಮ ಆಧಾರ್ ಸಂಯೋಜಿತ ಬ್ಯಾಂಕ್ ಖಾತೆಗೆ ನೆರವು ವರ್ಗಾವಣೆ ಆಗಿರುವುದನ್ನು ಖಾತರಿ ಪಡಿಸಿಕೊಳ್ಳಬಹುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

    ಇದೀಗ ವಿವಿಧ ಜಿಲ್ಲೆಗಳಲ್ಲಿ ನಿರ್ಬಂದಗಳನ್ನು ತೆರವು ಗೊಳಿಸಲಾಗಿದೆ. ಆದರೆ ಕಲಾವಿದರು ಮುನ್ನೆಚ್ಚರಿಕೆಯ ಕ್ರಮಗಳನ್ನು ತಪ್ಪದೆ ಪಾಲಿಸಬೇಕು. ಜೊತೆಗೆ ಲಸಿಕೆಯನ್ನು ಸಹ ಸರ್ಕಾರ ಉಚಿತವಾಗಿ ನೀಡುತ್ತಿದ್ದು, ತಪ್ಪದೆ ಹಾಕಿಸಿಕೊಳ್ಳುವ ಮೂಲಕ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಮನವಿ ಮಾಡಿದರು.

    ಸಮಾರಂಭದಲ್ಲಿ ಮಾತನಾಡಿದ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರಣ್ಯ ಸಚಿವ ಅರವಿಂದ ಲಿಂಬಾವಳಿ, ಮೊದಲ ಅಲೆಯ ಸಂದರ್ಭದಲ್ಲಿಯೂ 17 ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ನೆರವು ನೀಡಲಾಗಿತ್ತು. ಈಗ ಮತ್ತೆ ಕಲಾವಿದರಿಗೆ ತಲಾ 3 ಸಾವಿರ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು.

    ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಜೆ.ರವಿಶಂಕರ್, ನಿರ್ದೇಶಕ ಎಸ್. ರಂಗಪ್ಪ, ಮೊದಲಾದವರು ಸಮಾರಂಭದಲ್ಲಿ ಭಾಗವಹಿಸಿದ್ದರು.

  • ಕಲಾವಿದರು, ಹವ್ಯಾಸಿ ರಂಗಕರ್ಮಿಗಳಿಗೆ ಆಹಾರ ಕಿಟ್ ವಿತರಿಸಿದ ಎಸ್‍ಟಿಎಸ್

    ಕಲಾವಿದರು, ಹವ್ಯಾಸಿ ರಂಗಕರ್ಮಿಗಳಿಗೆ ಆಹಾರ ಕಿಟ್ ವಿತರಿಸಿದ ಎಸ್‍ಟಿಎಸ್

    ಮೈಸೂರು: ಕೊರೊನಾದಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ನೂರಾರು ಚಲನಚಿತ್ರ ಕಲಾವಿದರು, ಸಹ ಕಲಾವಿದರು ಮತ್ತು ಹವ್ಯಾಸಿ ರಂಗಕರ್ಮಿಗಳಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಆಹಾರ ಕಿಟ್ ವಿತರಿಸಿದ್ದಾರೆ.

    ಮೈಸೂರಿನಲ್ಲಿ ನೂರಾರು ಕಲಾವಿದರು ಕೊರೊನಾದಿಂದಾಗಿ ಯಾವುದೇ ಶೂಟಿಂಗ್ ಹಾಗೂ ಕಾರ್ಯಕ್ರಮವಿಲ್ಲದೆ ಕಷ್ಟಪಡುತ್ತಿರುವುದನ್ನು ಮನಗಂಡು ಸೋಮಶೇಖರ್ ಅವರು ಕೃಷಿ ಸಚಿವ ಬಿ.ಸಿ ಪಾಟೀಲ್ ಉಪಸ್ಥಿತಿಯಲ್ಲಿ ಆಹಾರ ಕಿಟ್ ವಿತರಣೆ ಮಾಡಿ ಲಸಿಕಾಕರಣಕ್ಕೆ ಚಾಲನೆ ನೀಡಿದರು. ಇದನ್ನೂ ಓದಿ: ರಸಗೊಬ್ಬರ, ಬಿತ್ತನೆ ಬೀಜದ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್

    ಕಲಾವಿದರಿಗೆ 520ಕ್ಕೂ ಹೆಚ್ಚು ಆಹಾರ ಕಿಟ್‍ಗಳನ್ನು ನೀಡಿದ್ದು, ಈ ಪೈಕಿ 120 ಚಲನಚಿತ್ರ ಸಹ ಕಲಾವಿದರಿಗೆ ಹಾಗೂ 400 ರಂಗಕರ್ಮಿಗಳಿಗೆ ವಿತರಿಸಲಾಗುತ್ತಿದೆ. ಇನ್ನೂ ಹೆಚ್ಚಿನ ಕಿಟ್ ಅಗತ್ಯವಿದ್ದರೆ ಒದಗಿಸಲಾಗುವುದು ಎಂದು ಉಸ್ತುವಾರಿ ಸಚಿವರು ತಿಳಿಸಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್. ಚೆನ್ನಪ್ಪ ಅವರು ಮಾಹಿತಿ ನೀಡಿದ್ದಾರೆ.

  • ಚಿತ್ರೋದ್ಯಮದ ಕಲಾವಿದರು, ಕಾರ್ಮಿಕರಿಗೆ ಲಸಿಕೆ ಕಾರ್ಯಕ್ರಮಕ್ಕೆ ಸುಧಾಕರ್ ಚಾಲನೆ

    ಚಿತ್ರೋದ್ಯಮದ ಕಲಾವಿದರು, ಕಾರ್ಮಿಕರಿಗೆ ಲಸಿಕೆ ಕಾರ್ಯಕ್ರಮಕ್ಕೆ ಸುಧಾಕರ್ ಚಾಲನೆ

    ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಛೇರಿಯಲ್ಲಿ ಇಂದು ಚಿತ್ರೋದ್ಯಮದ ಕಲಾವಿದರು, ಕಾರ್ಮಿಕರಿಗೆ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಡಾ. ಕೆ.ಸುಧಾಕರ್, ಸಚಿವ ಸಿಸಿ ಪಾಟೀಲ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮತ್ತು ಮಂಡಳಿಯ ಅಧ್ಯಕ್ಷ ಜೈರಾಜ್, ಹಿರಿಯ ನಿರ್ಮಾಪಕ ಸಾರಾ ಗೋವಿಂದು, ಹಿರಿಯ ನಟಿ ತಾರಾ ಅನೂರಾಧ ಉಪಸ್ಥಿತರಿದ್ದರು.

    ಚಿತ್ರೋದ್ಯಮದ ಕಲಾವಿದರು ಮತ್ತು ಕಾರ್ಮಿಕರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ಡಾ.ಸುಧಾಕರ್ ಮಾತನಾಡಿ, ಕೊವಿಡ್ ನಷ್ಟ ಎಲ್ಲಾ ಉದ್ಯಮಕ್ಕೂ ಆಗಿದೆ. ಚಲನಚಿತ್ರಕ್ಕೆ ಬಹಳಷ್ಟು ನಷ್ಟ ಆಗಿದೆ ಅಂತಾ ಅಭಿಪ್ರಾಯ ಪಡೆದಿದ್ದೇನೆ. ಕೊರೊನಾ ಯೋಧರು ಅಂತಾ ನಮ್ಮನ್ನು ಆ ಸಾಲಿನಲ್ಲಿ ಸೇರಿಸಬೇಕು ಅಂತಾ ಹೇಳಿದ್ರು. ಹಾಗಾಗಿ ಚಲನಚಿತ್ರದ ಕಾರ್ಮಿರನ್ನ ಕೊರೊನಾ ಯೋಧರು ಅಂತಾ ಈಗಾಗಲೇ ಆದೇಶ ಮಾಡಿದ್ದೇವೆ ಎಂದರು.

    ನನಗೆ ಪೂರ್ಣ ವಿಶ್ವಾಸ ಇದೆ. ಈ ವರ್ಷದ ಕೊನೆಯಲ್ಲಿ ಎಲ್ಲರಿಗೂ ಲಸಿಕೆ ಕೊಡ್ತೆವೆ ಅಂತಾ ಸುಮಾರು 10 ಕೋಟಿ ಲಸಿಕೆ ಕೊಡಬೇಕಾಗುತ್ತೆ. ಜುಲೈನಲ್ಲಿ ಬರುತ್ತೆ ಆಕ್ಟೋಬರ್ ನಿಂದ ಡಿಸೆಂಬರ್ ಒಳಗಡೆ ಲಸಿಕೆ ಕೊಡುವ ಗುರಿ ಇಟ್ಟಿಕೊಂಡಿದೆ. ಪ್ರಧಾನಿಗಳು ಲಸಿಕೆ ಕೊಡೋದಾಗಿ ಹೇಳಿದ್ದಾರೆ. ಅದರ ಪ್ರಯೋಜನ ಪಡೆದುಕೊಳ್ಳೋಣ ಅಂದರು.

    ಇನ್ನೂ ಲಸಿಕೆ ಬಗ್ಗೆ ತಪ್ಪು ಗ್ರಹಿಕೆ ಜನರಲ್ಲಿ ಇದ್ದರೆ ಜನರಿಗೆ ತಿಳಿ ಹೇಳುವುದುರ ಮೂಲಕ ತಪ್ಪು ಗ್ರಹಿಕೆಯನ್ನ ದೂರ ಮಾಡುವುದರಲ್ಲಿ ಚಲನಚಿತ್ರ ನಟರು ಭಾಗಿಯಾಗಬೇಕು ಅಂತಾ ಮನವಿ ಮಾಡಿಕೊಂಡರು.