Tag: ಕಲ್ಕತ್ತಾ ಹೈಕೋರ್ಟ್‌

  • ನೀವು ಕಣ್ಣು ಮುಚ್ಚುವುದರಿಂದ ಜಗತ್ತು ಕತ್ತಲೆಯಾಗುವುದಿಲ್ಲ: ಮಮತಾ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

    ನೀವು ಕಣ್ಣು ಮುಚ್ಚುವುದರಿಂದ ಜಗತ್ತು ಕತ್ತಲೆಯಾಗುವುದಿಲ್ಲ: ಮಮತಾ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

    – ಸಂದೇಶ್‍ಖಾಲಿ ಪ್ರಕರಣ ಪಶ್ಚಿಮ ಬಂಗಾಳ ಮಹಿಳೆಯರಿಗೆ ಸುರಕ್ಷಿತ ಎಂದು ಹೇಳುತ್ತದೆಯೇ?

    ಕೋಲ್ಕತ್ತಾ: ಸಂದೇಶ್‍ಖಾಲಿ (Sandeshkhali) ಪ್ರಕರಣದ ವಿಚಾರವಾಗಿ ಮಮತಾ ಬ್ಯಾನರ್ಜಿ (Mamata Banerjee) ಸರ್ಕಾರವನ್ನು ಕಲ್ಕತ್ತಾ ಹೈಕೋರ್ಟ್ (Calcutta High Court) ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಈ ಪ್ರಕರಣದಲ್ಲಿ 100% ಜವಾಬ್ದಾರಿ ಆಡಳಿತ ಪಕ್ಷದ ಮೇಲಿದೆ. 55 ದಿನಗಳು ನೀವು ಕಣ್ಣಾಮುಚ್ಚಾಲೆ ಆಡಿದ್ದೀರಿ. ಅಲ್ಲದೇ ಅಸ್ಪಷ್ಟ ನಿಲುವು ತೆಗೆದುಕೊಂಡಿದ್ದೀರಿ. ನೀವು ಕಣ್ಣು ಮುಚ್ಚುವುದರಿಂದ ಜಗತ್ತು ಕತ್ತಲೆಯಾಗುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ನೇತೃತ್ವದ ಪೀಠ ಸರ್ಕಾರದ ವಿರುದ್ಧ ಚಾಟಿ ಬೀಸಿದೆ.

    ಸಂದೇಶಖಾಲಿಯಲ್ಲಿ ನಡೆದ ಸುಲಿಗೆ, ಭೂಹಗರಣ ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ, ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಪ್ರಕರಣದಲ್ಲಿ ಒಂದು ಅಫಿಡವಿಟ್ ಸರಿಯಾಗಿದ್ದರೂ ಅದು ನಾಚಿಕೆಗೇಡಿನ ಸಂಗತಿ. ಒಂದು ಪರ್ಸೆಂಟ್ ನಿಜವಾಗಿದ್ದರೂ ಅದು ಸಂಪೂರ್ಣ ನಾಚಿಕೆಗೇಡಿನ ಸಂಗತಿ. ಇದು ಪಶ್ಚಿಮ ಬಂಗಾಳ ಮಹಿಳೆಯರಿಗೆ ಸುರಕ್ಷಿತ ಎಂದು ಹೇಳುತ್ತದೆಯೇ? ಇಡೀ ಜಿಲ್ಲಾಡಳಿತ ಮತ್ತು ಆಡಳಿತ ಪಕ್ಷ ಇದರ ನೈತಿಕ ಹೊಣೆಗಾರಿಕೆಯನ್ನು ಹೊಂದಿರುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಧರ್ಮಸ್ಥಳದ ಮಂಜುನಾಥನಂತೆ ಡಾ.ಮಂಜುನಾಥ್ – ಗುಣಗಾನ ಮಾಡಿದ ಮುನಿರತ್ನ

    ಇದೇ ವೇಳೆ ಶೇಖ್ ಷಹಜಹಾನ್‍ನನ್ನು (Shahjahan) ಪ್ರತಿನಿಧಿಸುವ ವಕೀಲರು ಹೈಕೋರ್ಟ್‍ನಿಂದ ಕಠಿಣ ವಾಗ್ದಂಡನೆಗೆ ಗುರಿಯಾದರು.

    ಜ.5 ರಂದು ಪಡಿತರ ಹಗರಣ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಂದೇಶ್‍ಖಾಲಿಯಲ್ಲಿರುವ ಶೇಖ್ ಷಹಜಹಾನ್‍ನ ಮನೆಗೆ ಇಡಿ ಅಧಿಕಾರಿಗಳು ತೆರಳಿದ್ದರು. ಈ ವೇಳೆ ಜನರ ಗುಂಪು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿತ್ತು. ಇದಾದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಬಳಿಕ ಹೈಕೋರ್ಟ್ ಸರ್ಕಾರಕ್ಕೆ ಚಾಟಿ ಬೀಸಿದ ಮೇಲೆ, ತಲೆಮರೆಸಿಕೊಂಡ 55 ದಿನಗಳ ಬಳಿಕ ಫೆ.29 ರಂದು ಆತನನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ನಾನೇನು ತಪ್ಪು ಮಾಡಿಲ್ಲ, 10 ತಿಂಗ್ಳು ಅಜ್ಞಾತವಾಸ ಅನುಭವಿಸಿದ್ದೇನೆ: ಸುಧಾಕರ್ ಕಣ್ಣೀರು

  • ಕಲ್ಕತ್ತಾ ಹೈಕೋರ್ಟ್‌ Vs ಸುಪ್ರೀಂ  – ಸಂಜೆ ತುರ್ತು ವಿಚಾರಣೆ, ನ್ಯಾ. ಅಭಿಜಿತ್ ಗಂಗೋಪಾಧ್ಯಾಯ ಆದೇಶಕ್ಕೆ ತಡೆ

    ಕಲ್ಕತ್ತಾ ಹೈಕೋರ್ಟ್‌ Vs ಸುಪ್ರೀಂ – ಸಂಜೆ ತುರ್ತು ವಿಚಾರಣೆ, ನ್ಯಾ. ಅಭಿಜಿತ್ ಗಂಗೋಪಾಧ್ಯಾಯ ಆದೇಶಕ್ಕೆ ತಡೆ

    ನವದೆಹಲಿ: ಬಹಳ ಅಪರೂಪದ ಬೆಳವಣಿಗೆಯೊಂದರಲ್ಲಿ ಸುಪ್ರೀಂ ಕೋರ್ಟ್‌ (Supreme Court) ಶುಕ್ರವಾರ ಸಂಜೆ ದಿಢೀರ್‌ ವಿಚಾರಣೆ ನಡೆಸಿ ಕಲ್ಕತ್ತಾ ಹೈಕೋರ್ಟ್‌ (Calcutta High Court ) ಆದೇಶಕ್ಕೆ ತಡೆ ನೀಡಿದೆ.

    ತಾನು ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದ ವರದಿ ಮತ್ತು ಸುಪ್ರೀಂ ಆದೇಶದ ಅಧಿಕೃತ ಪ್ರತಿಯನ್ನು ರಾತ್ರಿ 12:15ರ ಒಳಗಡೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೆಕ್ರೆಟರಿ ಜನರಲ್‌ಗೆ ಹೈಕೋರ್ಟ್‌ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ (Justice Abhijit Gangopadhyay) ಆದೇಶಿಸಿದ್ದರು.

    ಈ ಆದೇಶ ಪ್ರಕಟವಾದ ಬೆನ್ನಲ್ಲೇ ಸುಪ್ರೀಂ ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಸಂಜೆ ತುರ್ತು ವಿಚಾರಣೆ ನಡೆಸಿ ಹೈಕೋರ್ಟ್‌ನ ಆದೇಶವು ಅಸಮರ್ಪಕ ಮತ್ತು ನ್ಯಾಯಾಂಗ ಶಿಸ್ತಿಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟು ಆದೇಶಕ್ಕೆ ತಡೆ ನೀಡಿದೆ. ಇದನ್ನೂ ಓದಿ: ದ್ವೇಷ ಭಾಷಣದ ವಿರುದ್ಧ ಸ್ವಯಂಪ್ರೇರಿತ ಕೇಸ್‌ ದಾಖಲಿಸಿ: ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಆದೇಶ

    ಏನಿದು ಪ್ರಕರಣ?
    ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಕರ ನೇಮಕಾತಿ ಹಗರಣದ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ನ್ಯಾ.ಗಂಗೋಪಾಧ್ಯಾಯ ನಡೆಸುತ್ತಿದ್ದರು. ವಿಚಾರಣೆ ನಡೆಸುತ್ತಿರುವಾಗಲೇ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದರು.

    ಟಿವಿ ವಾಹಿನಿಗೆ ಸಂದರ್ಶನ ನೀಡಿದ್ದನ್ನು ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್‌ ಬ್ಯಾನರ್ಜಿ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಮುಖ್ಯ ನ್ಯಾಯಾಧೀಶ ಡಿ.ವೈ ಚಂದ್ರಚೂಡ್‌ ಗರಂ ಆಗಿ ಬಾಕಿ ಉಳಿದಿರುವ ವಿಷಯಗಳ ಕುರಿತು ಸುದ್ದಿ ವಾಹಿನಿಗಳಿಗೆ ಸಂದರ್ಶನ ನೀಡುವುದು ನ್ಯಾಯಾಧೀಶರ ಕೆಲಸವಲ್ಲ. ಅರ್ಜಿದಾರರ ಬಗ್ಗೆ ನ್ಯಾಯಾಧೀಶರು ಅಭಿಪ್ರಾಯವನ್ನು ನೀಡಿದರೆ, ಅವರು ಆ ಪ್ರಕರಣದ ವಿಚಾರಣೆ ನಡೆಸಲು ಸಾಧ್ಯವಿಲ್ಲ.ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಹೊಸ ಪೀಠವನ್ನು ರಚಿಸಬೇಕು ಎಂದು ಸಿಜೆಐ ಸೂಚಿಸಿದ್ದರು.

    ಶಿಕ್ಷಕರ ನೇಮಕಾತಿ ಹಗರಣದ ವಿಚಾರಣೆಯನ್ನು ನ್ಯಾ. ಗಂಗೋಪಾಧ್ಯಾಯ ಅವರು  ನಡೆಸಬಾರದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿತ್ತು. ಈ ಆದೇಶದ ಬೆನ್ನಲ್ಲೇ ನ್ಯಾ. ಅಭಿಜಿತ್ ಗಂಗೋಪಾಧ್ಯಾಯ ಅವರು ರಾತ್ರಿ 12 ಗಂಟೆಯ ಒಳಗಡೆ ತಾನು ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದ ವರದಿಯನ್ನು ನೀಡಬೇಕು. ನಾನು 12:15ರವರೆಗೆ ನನ್ನ ಚೇಂಬರ್‌ನಲ್ಲಿ ಕಾಯುತ್ತೇನೆ. ಇದರೊಂದಿಗೆ ಶಿಕ್ಷಕರ ನೇಮಕಾತಿ ಪ್ರಕರಣದ ವಿಚಾರಣೆಯಿಂದ ನನ್ನನ್ನು ತೆಗೆದುಹಾಕಲು ಕಾರಣವಾದ ದಾಖಲೆಗಳನ್ನು ತನ್ನ ಮುಂದೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್‌ನ ಸೆಕ್ರೆಟರಿ ಜನರಲ್‌ಗೆ ತಕ್ಷಣವೇ ತಿಳಿಸುವಂತೆ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಸೂಚಿಸಿದ್ದರು. ಈ ಆದೇಶಕ್ಕೆ ಸುಪ್ರೀಂ ಈಗ ತಡೆ ನೀಡಿದೆ.