Tag: ಕಲ್ಲಡ್ಕ ಪ್ರಭಾಕರ ಭಟ್

  • ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ

    ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ

    ಮಂಗಳೂರು: ಪ್ರಚೋದನಕಾರಿ ಭಾಷಣ ಆರೋಪದಡಿ ಎಫ್‌ಐಆರ್ ದಾಖಲಾಗಿದ್ದ ಕಲ್ಲಡ್ಕ ಪ್ರಭಾಕರ ಭಟ್ (Kalladka Prabhakar Bhat) ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ ನೀಡಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು (Puttur) ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆದೇಶ ನೀಡಿದೆ. ನ್ಯಾಯಾಲಯದ ಮುಂದಿನ ವಿಚಾರಣೆಯವರೆಗೆ ಬಂಧನ ಸಹಿತ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿ, ಅಕ್ಟೋಬರ್ 29ಕ್ಕೆ ವಿಚಾರಣೆಯನ್ನು ಮುಂದೂಡಿದೆ.

    ಏನಿದು ಪ್ರಕರಣ?
    ಪ್ರಚೋದನಕಾರಿ ಭಾಷಣ ಆರೋಪದಡಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಅ.20ರಂದು ಪುತ್ತೂರು ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಭಾಷಣ ಮಾಡಿದ್ದರು. ಭಾಷಣದ ವೇಳೆ ಧಾರ್ಮಿಕ ದ್ವೇಷ ಹಾಗೂ ಮಹಿಳೆಯರ ಘನತೆಗೆ ಧಕ್ಕೆ ಮಾಡಿದ್ದಾರೆ ಎಂದು ಈಶ್ವರಿ ಪದ್ಮುಂಜ ಎಂಬವವರು ನೀಡಿದ ದೂರಿನ ಅನ್ವಯ ಎಫ್‌ಐಆರ್ ದಾಖಲಾಗಿತ್ತು. ಭಾರತೀಯ ನ್ಯಾಯ ಸಂಹಿತೆ 2023ರ 79, 196, 299, 302 ಹಾಗೂ 3(5) ಕಲಂಗಳ ಅಡಿಯಲ್ಲಿ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸರು ಅ.30ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು.

    ಹೀಗಾಗಿ ಕಲ್ಲಡ್ಕ ಪ್ರಭಾಕರ ಭಟ್ ಪೊಲೀಸರ ಎಫ್‌ಐಆರ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಸದ್ಯ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮುಂದಿನ ವಿಚಾರಣೆವರೆಗೆ ಬಂಧನ ಸಹಿತ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

  • ಪ್ರಚೋದನಕಾರಿ ಭಾಷಣ – ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಕೇಸ್‌ ದಾಖಲು

    ಪ್ರಚೋದನಕಾರಿ ಭಾಷಣ – ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಕೇಸ್‌ ದಾಖಲು

    ಮಂಗಳೂರು: ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ (Kalladka Prabhakar Bhat) ವಿರುದ್ಧ ಪ್ರಕರಣ ದಾಖಲಾಗಿದೆ.  

    ಬಜ್ಪೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ (Suhas Shetty) ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ 353(2) ಅಡಿಯಲ್ಲಿ ಕೇಸ್‌ ದಾಖಲಾಗಿದೆ. ಇದನ್ನೂ ಓದಿ: ಕೊಹ್ಲಿ ಮಾಲೀಕತ್ವದ ಬೆಂಗ್ಳೂರು ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್

    ಮೇ 12 ರಂದು ಬಂಟ್ವಾಳದ ಕಾವಳಪಡೂರು ಮದ್ವ ಪ್ಯಾಲೇಸ್ ಹಾಲ್‌ನಲ್ಲಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಸಮಾಜದ ಸ್ವಾಸ್ತ್ಯ ಕೆಡುವಂತೆ, ಮತೀಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಚಪ್ಪಲಿಯಿಂದ ಹೊಡೆದ ಪ್ರಕರಣ – ಆಟೋ ಚಾಲಕನ ಕಾಲಿಗೆ ಬಿದ್ದು ಕ್ಷಮೆ ಕೇಳಿದ ದಂಪತಿ

     

  • ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು ಮಂಜೂರು

    ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು ಮಂಜೂರು

    ಮಂಡ್ಯ: ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ (Kalladka Prabhakar Bhat) ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಶ್ರೀರಂಗಪಟ್ಟಣ ನ್ಯಾಯಾಲಯ (Srirangapatna Court) ಜಮೀನು ಮಂಜೂರು ಮಾಡಿದೆ.

    ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಝೀರ್ (Najma Nazer) ನೀಡಿದ ದೂರಿನ ಅನ್ವಯ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಜಾಮೀನು ರಹಿತ ಸೆಕ್ಷನ್‌ ಅಡಿ ಪ್ರಕರಣ ದಾಖಲಾಗಿತ್ತು.

    ಡಿಸೆಂಬರ್ 24 ರಂದು ಶ್ರೀರಂಗಪಟ್ಟಣ ಸಂಕೀರ್ತನಾ ಯಾತ್ರೆಯಲ್ಲಿ ಹನುಮ ಮಾಲಾಧಿಕಾರಿಗಳನ್ನು ಉದ್ದೇಶಿಸಿ ಮುಸ್ಲಿಮರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಮಹಿಳೆಯರನ್ನು ಚುಡಾಯಿಸಿ, ಲೈಂಗಿಕವಾಗಿ ಅವಮಾನಿಸಿ, ಲೈಂಗಿಕ ದೌರ್ಜನ್ಯಕ್ಕೆ ಪ್ರಚೋದಿಸಿ, ಸಾರ್ವಜನಿಕವಾಗಿ ಬೆದರಿಕೆಯೊಡ್ಡಿ, ಧರ್ಮವನ್ನ ಅವಮಾನಿಸಿ, ಧರ್ಮಗಳ ಮಧ್ಯೆ ಎತ್ತಿಕಟ್ಟಿ ಗಲಭೆ ನಡೆಸಿರುವ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿ ರೌಡಿಶೀಟರ್ ತೆರೆದು ಕಾನೂನು ಕ್ರಮ ತೆಗೆದುಕೊಳ್ಳುವಂತೆ ನಜ್ಮಾ ನಝೀರ್ ದೂರು ನೀಡಿದ್ದರು. ಇದನ್ನೂ ಓದಿ: ಗಲ್ಲು ಶಿಕ್ಷೆ ರದ್ದು – ಕತಾರ್‌ ಜೈಲಿನಲ್ಲಿರುವ 8 ಭಾರತೀಯರಿಗೆ ಬಿಗ್‌ ರಿಲೀಫ್‌

     

    ಪ್ರಭಾಕರ ಭಟ್‌ ಹೇಳಿದ್ದೇನು?
    ಹಿಂದೆ ತಲಾಖ್‌ ತಲಾಖ್‌ ಎಂದು ಹೇಳಿ ಮುಸ್ಲಿಂ ಗಂಡಂದಿರು ಕೈತೊಳೆದುಕೊಳ್ಳುತ್ತಿದ್ದರು. ದಿನಕ್ಕೊಬ್ಬ ಗಂಡ ಬದಲಾಗುತ್ತಿದ್ದ. ಮುಸ್ಲಿಂ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ತಲಾಕ್ ರದ್ದು ಮಾಡಿ ನಿಮಗೆ ಗೌರವ ಕೊಟ್ಟಿದ್ದು ಇದೇ ಹಿಂದೂ ಧರ್ಮ.

    ಹಿಜಬ್ ಧರಿಸಲು ಅನುಮತಿ ಕೊಟ್ಟರೆ ನಾವು ಕೇಸರಿ ಶಾಲು, ಟೋಪಿ ಧರಿಸುತ್ತೇವೆ. ನಾವು ಶಾಲೆಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗ್ತೀವಿ. ನೀವು ತಾಕತ್ತಿದ್ದರೆ ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿ ಎಂದು ಸವಾಲು ಹಾಕಿದ್ದರು.

     

  • ಕನ್ನಡ ಪರ ಹೋರಾಟಗಾರರ ಮೇಲಿನ ಕೇಸು ವಾಪಸ್ ಪಡೆಯಿರಿ: ಬಿ.ಕೆ.ಹರಿಪ್ರಸಾದ್

    ಕನ್ನಡ ಪರ ಹೋರಾಟಗಾರರ ಮೇಲಿನ ಕೇಸು ವಾಪಸ್ ಪಡೆಯಿರಿ: ಬಿ.ಕೆ.ಹರಿಪ್ರಸಾದ್

    ಬೆಂಗಳೂರು: ಕನ್ನಡ ಪರ ಹೋರಾಟಗಾರರ (Pro-Kannada Activist) ಮೇಲಿನ ಕೇಸನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ (BK Hariprasad) ಸರ್ಕಾರವನ್ನು ಒತ್ತಾಯಿಸಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಕನ್ನಡದಲ್ಲಿ ಫಲಕ (Nameboard) ಇರಬೇಕು ಎಂಬುದು ಸತ್ಯವೇ. ಕಾನೂನು ಕೈಗೆತ್ತಿಕೊಳ್ಳದೇ ಫಲಕಗಳನ್ನು ಬದಲಾಯಿಸಿ. ನಿಧಾನವಾಗಿ ಎಲ್ಲವೂ ಸರಿ ಹೋಗುತ್ತದೆ. ಕನ್ನಡ ಹೋರಾಟಗಾರರ ಮೇಲೆ, ನಮ್ಮ ಮೇಲೂ ಬಹಳಷ್ಟು ಕೇಸ್‌ಗಳೂ ಬಾಕಿ ಇವೆ. ನೆಲ, ಜಲ ಭಾಷೆಯ ವಿಚಾರದಲ್ಲಿ ಹೋರಾಟ ಮಾಡಿದವರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು. ನಾನೂ ಕೂಡ ಗೃಹ ಸಚಿವರಲ್ಲಿ ಮನವಿ ಮಾಡುತ್ತೇನೆ ಎಂದರು. ಇದನ್ನೂ ಓದಿ: ಕಾಂತರಾಜು ವರದಿ ಜಾರಿಗೆ ಒತ್ತಾಯಿಸಿ ಬೃಹತ್ ಮಟ್ಟದ ಅಹಿಂದಾ ಸಮಾವೇಶಕ್ಕೆ ಮುಹೂರ್ತ ಫಿಕ್ಸ್

    ಕಲ್ಲಡ್ಕ ಪ್ರಭಾಕರ ಭಟ್ (Kalladka Prabhakar Bhat) ಈ ರೀತಿಯ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ. ಸಂಸ್ಕೃತದಲ್ಲಿ ಬಹಳ ದೊಡ್ಡ ಭಾಷಣ ಬಿಗಿತಾರೆ. ಕೋಮುದ್ವೇಷ ಹರಡುವುದಕ್ಕೆ ಕಲ್ಲಡ್ಕ ಪ್ರಭಾಕರ ಭಟ್ ಪ್ರಯತ್ನ ಮಾಡುತ್ತಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟವನ್ನು ಕದಡುವ ಕೆಲಸ ಮಾಡುತ್ತಿದೆ. ಬಿಜೆಪಿ ಸೂತ್ರಧಾರರ ಮನಸ್ಥಿತಿ ಈ ದೇಶದ ಮಹಿಳೆಯರ ವಿರುದ್ಧವಾಗಿದೆ. ತಕ್ಷಣವೇ ಸ್ವಯಂಪ್ರೇರಿತ ದೂರು ದಾಖಲಾಗಬೇಕಿತ್ತು. ಸಮುದಾಯದವರೆಲ್ಲ ದೂರು ಕೊಟ್ಟಮೇಲೆ ಎಫ್‌ಐಆರ್ ಆಗಿದೆ. ತಕ್ಷಣವೇ ಸರ್ಕಾರ ಕಲ್ಲಡ್ಕರನ್ನು ಬಂಧಿಸಬೇಕು. ಬಹಳ ಪ್ರಚೋದನಕಾರಿ ಎರಡು ಕೋಮಿನ ನಡುವೆ ದ್ವೇಷ ಬೆಳೆಸುವಂತಹ ಹೇಳಿಕೆ ಇದು ಎಂದು ಹರಿಹಾಯ್ದರು. ಇದನ್ನೂ ಓದಿ: ಸೋಮಾರಿ ಸಿದ್ದ ಪದ ಬಳಸಿದ್ದು ಸಿದ್ದರಾಮಯ್ಯರಿಗೆ ಅಲ್ಲ: ಪ್ರತಾಪ್ ಸಿಂಹ ಸ್ಪಷ್ಟನೆ

    ಒದ್ದು ಒಳಗೆ ಹಾಕಿ ಎಂಬ ಭಾಷೆ ನಾವು ಉಪಯೋಗಿಸಲು ಆಗುವುದಿಲ್ಲ. ಆದರೆ ಕಾನೂನು ತಮಗೆ ಲೆಕ್ಕವೇ ಇಲ್ಲ ಎಂಬಂತೆ ಮಾತನಾಡಿದ್ದಾರೆ. ಅವರ ಮೇಲೆ ಕಾನೂನು ಪ್ರಕಾರ ಕ್ರಮ ಆಗಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಇಂಗ್ಲಿಷ್ ಬೋರ್ಡ್‍ಗಳು ಉಡೀಸ್- ಕನ್ನಡ ನಾಮಫಲಕ ಕಡ್ಡಾಯಕ್ಕೆ ಕರವೇ ಒತ್ತಾಯ

  • ಕಲ್ಕಡ್ಕ ಪ್ರಭಾಕರ ಭಟ್‌ ವಿರುದ್ಧ ಎಫ್‌ಐಆರ್‌ ದಾಖಲು

    ಕಲ್ಕಡ್ಕ ಪ್ರಭಾಕರ ಭಟ್‌ ವಿರುದ್ಧ ಎಫ್‌ಐಆರ್‌ ದಾಖಲು

    ಮಂಡ್ಯ: ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ (Kalladka Prabhakar Bhat) ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.

    ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಝೀರ್ (Najma Nazer) ನೀಡಿದ ದೂರಿನ ಅನ್ವಯ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಜಾಮೀನು ರಹಿತ ಸೆಕ್ಷನ್‌ ಅಡಿ ಪ್ರಕರಣ ದಾಖಲಾಗಿದೆ.

    ದೂರಿನಲ್ಲಿ ಏನಿತ್ತು?
    ಡಿಸೆಂಬರ್ 24 ರಂದು ಶ್ರೀರಂಗಪಟ್ಟಣ ಸಂಕೀರ್ತನಾ ಯಾತ್ರೆಯಲ್ಲಿ ಹನುಮ ಮಾಲಾಧಿಕಾರಿಗಳನ್ನು ಉದ್ದೇಶಿಸಿ ಮುಸ್ಲಿಮರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.

    ಮಹಿಳೆಯರನ್ನು ಚುಡಾಯಿಸಿ, ಲೈಂಗಿಕವಾಗಿ ಅವಮಾನಿಸಿ, ಲೈಂಗಿಕ ದೌರ್ಜನ್ಯಕ್ಕೆ ಪ್ರಚೋದಿಸಿ, ಸಾರ್ವಜನಿಕವಾಗಿ ಬೆದರಿಕೆಯೊಡ್ಡಿ, ಧರ್ಮವನ್ನ ಅವಮಾನಿಸಿ, ಧರ್ಮಗಳ ಮಧ್ಯೆ ಎತ್ತಿಕಟ್ಟಿ ಗಲಭೆ ನಡೆಸಿರುವ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿ. ರೌಡಿಶೀಟರ್ ತೆರೆದು ಕಾನೂನು ಕ್ರಮ ತೆಗೆದುಕೊಳ್ಳುವಂತೆ ನಜ್ಮಾ ನಝೀರ್ ದೂರು ನೀಡಿದ್ದರು. ಇದನ್ನೂ ಓದಿ: ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮವನ್ನು ಬಹಿಷ್ಕರಿಸಿದ ಸಿಪಿಎಂ

     

    ಪ್ರಭಾಕರ ಭಟ್‌ ಹೇಳಿದ್ದೇನು?
    ಹಿಂದೆ ತಲಾಖ್‌ ತಲಾಖ್‌ ಎಂದು ಹೇಳಿ ಮುಸ್ಲಿಂ ಗಂಡಂದಿರು ಕೈತೊಳೆದುಕೊಳ್ಳುತ್ತಿದ್ದರು. ದಿನಕ್ಕೊಬ್ಬ ಗಂಡ ಬದಲಾಗುತ್ತಿದ್ದ. ಮುಸ್ಲಿಂ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ತಲಾಕ್ ರದ್ದು ಮಾಡಿ ನಿಮಗೆ ಗೌರವ ಕೊಟ್ಟಿದ್ದು ಇದೇ ಹಿಂದೂ ಧರ್ಮ.

    ಹಿಜಬ್ ಧರಿಸಲು ಅನುಮತಿ ಕೊಟ್ಟರೆ ನಾವು ಕೇಸರಿ ಶಾಲು, ಟೋಪಿ ಧರಿಸುತ್ತೇವೆ. ನಾವು ಶಾಲೆಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗ್ತೀವಿ. ನೀವು ತಾಕತ್ತಿದ್ದರೆ ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿ ಎಂದು ಸವಾಲು ಹಾಕಿದ್ದರು. ಇದನ್ನೂ ಓದಿ: Ayodhya Ram Mandir – ಕಾರ್ಯಕ್ರಮಕ್ಕೆ ಆಹ್ವಾನಿತ ಗಣ್ಯರ ಕಂಪ್ಲೀಟ್‌ ಲಿಸ್ಟ್‌

     

  • ಇಂದು ನನ್ನ ಕಣ್ಣು ತೆರೆಯಿತು: ಕಲ್ಲಡ್ಕ ಪ್ರಭಾಕರ ಭಟ್‌ರನ್ನು ಹಾಡಿ ಹೊಗಳಿದ ಹೆಚ್‌ಡಿಕೆ

    ಇಂದು ನನ್ನ ಕಣ್ಣು ತೆರೆಯಿತು: ಕಲ್ಲಡ್ಕ ಪ್ರಭಾಕರ ಭಟ್‌ರನ್ನು ಹಾಡಿ ಹೊಗಳಿದ ಹೆಚ್‌ಡಿಕೆ

    ಮಂಗಳೂರು: ಹಿಂದೆ ಕಲ್ಲಡ್ಕ ಪ್ರಭಾಕರ ಭಟ್ (Kalladka Prabhakar Bhat) ಅವರ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ. ಕೆಲವರು ದಾರಿ ತಪ್ಪಿಸುವ ಮಾಹಿತಿ ನೀಡಿದ್ದರು. ಇಂದು ನನ್ನ ಕಣ್ಣು ತೆರೆದಿದೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

    ಬಂಟ್ವಾಳದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ(Shri Rama Vidy Kendra) ಶನಿವಾರ ನಡೆದ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ಅತಿಥಿಯಾಗಿ ಭಾಗವಹಿಸಿದ ಹೆಚ್‌ಡಿಕೆ ಅವರು ಪ್ರಭಾಕರ ಭಟ್‌ ಅವರನ್ನು ಹಾಡಿ ಹೊಗಳಿದ್ದಾರೆ.

    ಹಿಂದೆ ಒಂದು ರೀತಿಯಾಗಿ ಮಾತನಾಡುತ್ತಿದ್ದ ಕುಮಾರಸ್ವಾಮಿ ಈ ಕಾರ್ಯಕ್ರಮ ಭಾಗವಹಿಸಿದ್ದು ಹೇಗೆ ಎಂದು ಕೆಲವರು ಯೋಚಿಸಬಹುದು. ಅಂದು ನನ್ನನ್ನು ಕೆಲವರು ದಾರಿ ತಪ್ಪಿಸಿದ್ದರು. ನಾನು ತಪ್ಪು ಮಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದರು.  ಇದನ್ನೂ ಓದಿ: ಬಿಜೆಪಿಗೆ ಮತ ಹಾಕಿದ್ದಕ್ಕೆ ಹಲ್ಲೆ – ಮುಸ್ಲಿಂ ಮಹಿಳೆಯನ್ನು ಭೇಟಿಯಾಗಿ ಧೈರ್ಯ ತುಂಬಿದ ಚೌಹಾಣ್‌

    ಈ ಕಾರ್ಯಕ್ರಮ ಜೀವನದ ಅವಿಸ್ಮರಣೀಯ ಕ್ಷಣ. ಇಲ್ಲಿ ಅತ್ಯುತ್ತಮ ಶಿಕ್ಷಣ ಕೊಡಲಾಗುತ್ತಿದೆ. ದೇಶದ ಕೀರ್ತಿ ಎತ್ತಿ ಹಿಡಿದ ವಿಜ್ಞಾನಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಗುರುಕುಲ ಪರಂಪರೆಯನ್ನು ಸಂಸ್ಕೃತಿಗಳನ್ನು ನೀಡಲಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಉತ್ತಮ ಶಿಸ್ತಿನ ಬದುಕನ್ನು ಇಲ್ಲಿ ಕಲಿಸಿ ಕೊಡಲಾಗುತ್ತದೆ. ಮಾನವೀಯತೆ ವಿಕಸನವನ್ನು ಇಲ್ಲಿ ನೀಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಬಾರದೇ ಇದ್ದರೆ ಜೀವನದ ದೊಡ್ಡ ನಷ್ಟವಾಗುತ್ತಿತ್ತು. ಗ್ರಾಮೀಣ ಪ್ರದೇಶದ ಕಲೆಗಳನ್ನು ಮಕ್ಕಳಲ್ಲಿ ಮಾಡಿಸಿದ್ದಾರೆ ಎಂದರು.

    ಚಂದ್ರಯಾನ ಉಡಾವಣೆಯನ್ನು ಕಣ್ಣಿಗೆ ಕಟ್ಟುವ ಹಾಗೆ ತೋರಿಸಿದ್ದೀರಿ. ಮಕ್ಕಳಿದ್ದಾಗ ರಾಮನ ಭಜನೆ ಮಾಡಿದನ್ನು ಇವತ್ತು ಮತ್ತೆ ನೆನಪಿಸಿದ್ದೀರಿ. ಪ್ರಭಾಕರ ಭಟ್ ಬದುಕಿನ ಒಳ್ಳೆಯ ನಡವಳಿಕೆ ಕಲಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಕಣ್ಣು ತೆರೆಸುತ್ತಿದ್ದೀರಿ ಎಂದು ಹೇಳಿದರು.

    ಕೊನೆಯಲ್ಲಿ ಕುಮಾರಸ್ವಾಮಿ ಅವರು “ಜೈ ಶ್ರೀರಾಮ್” ಎಂದು ಘೋಷಣೆ ಕೂಗಿ ತಮ್ಮ ಭಾಷಣವನ್ನು ಮುಗಿಸಿದ್ದು ವಿಶೇಷವಾಗಿತ್ತು.

     

  • ಸಾಮರಸ್ಯದ ಜೀವನಕ್ಕೆ ಇಲ್ಲಿ ಬದುಕಿ, ಇಲ್ಲವೆಂದರೆ ಎಲ್ಲಿಗೆ ಬೇಕಾದರೂ ಹೋಗಿ: ಕಲ್ಲಡ್ಕ ಪ್ರಭಾಕರ ಭಟ್

    ಸಾಮರಸ್ಯದ ಜೀವನಕ್ಕೆ ಇಲ್ಲಿ ಬದುಕಿ, ಇಲ್ಲವೆಂದರೆ ಎಲ್ಲಿಗೆ ಬೇಕಾದರೂ ಹೋಗಿ: ಕಲ್ಲಡ್ಕ ಪ್ರಭಾಕರ ಭಟ್

    ಮಂಗಳೂರು: ಸಾಮರಸ್ಯದ ಜೀವನ ಮಾಡಬೇಕೆಂದರೆ ಈ ದೇಶದಲ್ಲಿ ಬದುಕಿ. ಆಗುದಿಲ್ಲ ಎಂದಾದರೆ ಎಲ್ಲಿ ಬೇಕಾದರೂ ಹೋಗಿ ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.

    ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಕಾರ್ಯಕ್ರಮ ಬುಧವಾರ ನಡೆಯಿತು. ಆದರೆ ಕಾರ್ಯಕ್ರಮದ ಉದ್ಘಾಟನೆಗೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ(ಸಿಎಫ್‌ಐ) ಪ್ರತಿಭಟನೆ ನಡೆಸಿತು. ಇದನ್ನೂ ಓದಿ: ನವಾಬರು ಕೊಡುವುದಕ್ಕಿಂತ ಮೊದಲೇ ಮಂತ್ರಾಲಯ ಮಠಕ್ಕೆ ಸೇರಿದ್ದು: ಮಂತ್ರಾಲಯ ಶ್ರೀ

    ಯುನಿವರ್ಸಿಟಿ ಮಾರ್ಚ್ ಹೆಸರಿನಲ್ಲಿ ಪ್ರತಿಭಟನೆ ನಡೆಸಿದ ಸಿಎಫ್‌ಐ ಕಾರ್ಯಕರ್ತರನ್ನು ಪೊಲೀಸರು ವಿಶ್ವವಿದ್ಯಾನಿಲಯದ ಪ್ರವೇಶ ದ್ವಾರದಲ್ಲಿಯೇ ತಡೆದರು. ಈ ಸಂದರ್ಭ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ನೂಕಾಟ-ತಳ್ಳಾಟ ನಡೆಯಿತು. ಕಲ್ಲಡ್ಕ ಪ್ರಭಾಕರ್ ಭಟ್ ಕ್ರಿಮಿನಲ್ ಬ್ಯಾಕ್‌ಗ್ರಾಂಡ್ ಹೊಂದಿದ್ದಾರೆ ಎಂದು ಸಿಎಫ್‌ಐ ಕಾರ್ಯಕರ್ತರು ಆರೋಪಿಸಿ ಗೋ ಬ್ಯಾಕ್ ಘೋಷಣೆ ಕೂಗಿದರು. ಇದನ್ನೂ ಓದಿ: ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಅಲ್ಲವೆಂದರೆ, ಚೆನ್ನಮ್ಮ, ರಾಯಣ್ಣನೂ ಅಲ್ಲ: ನಟ ಚೇತನ್

    ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಅವರು, ಕೇಸ್ ಯಾರಿಗೆ ಯಾರು ಬೇಕಾದರೂ ಹಾಕಬಹುದು. ಮೋದಿ, ಅಮಿತ್ ಶಾ ಮೇಲೂ ಕೇಸ್ ಇದೆ. ಅದಕ್ಕಾಗಿ ಅವರನ್ನು ಅಪರಾಧಿ ಎಂದು ಕರೆಯುವುದಕ್ಕೆ ಆಗುತ್ತಾ? ನನಗೆ ಕ್ರಿಮಿನಲ್ ಬ್ಯಾಕ್‌ಗ್ರೌಂಡ್ ಇಲ್ಲ ಎಂದು ಸ್ಪಷ್ಟಪಡಿಸಿ ತಿರುಗೇಟು ನೀಡಿದರು.

  • ಮಂಗಳೂರು ವಿವಿ ಕಾರ್ಯಕ್ರಮಕ್ಕೆ ಕಲ್ಲಡ್ಕ ಭಟ್‌ಗೆ ಆಹ್ವಾನ – ಎಸ್‌ಎಫ್‌ಐ ವಿರೋಧ

    ಮಂಗಳೂರು ವಿವಿ ಕಾರ್ಯಕ್ರಮಕ್ಕೆ ಕಲ್ಲಡ್ಕ ಭಟ್‌ಗೆ ಆಹ್ವಾನ – ಎಸ್‌ಎಫ್‌ಐ ವಿರೋಧ

    ಮಂಗಳೂರು: ಮಂಗಳೂರು ವಿವಿ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದಕ್ಕೆ ಎಸ್‌ಎಫ್‌ಐ ವಿರೋಧ ವ್ಯಕ್ತಪಡಿಸಿದೆ.

    ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ 2021-22ರ ಸಾಲಿನ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಕಾರ್ಯಕ್ರಮಕ್ಕೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ರನ್ನು ಆಹ್ವಾನಿಸಲಾಗಿದೆ. ಬುಧವಾರ ಈ ಕಾರ್ಯಕ್ರಮ ಆಯೋಜನೆಗೊಂಡಿದ್ದು ಕೋಮು ದ್ವೇಷಕ್ಕೆ ಕುಖ್ಯಾತರಾಗಿರುವ ಪ್ರಭಾಕರ್ ಭಟ್‌ರಂತವರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಬಾರದು ಎಂದು ಸಿಎಫ್‌ಐ ಹೇಳಿದೆ.

    ಕೋಮು ಮತಾಂಧತೆಗೆ ವಿದ್ಯಾರ್ಥಿಗಳು ಬಲಿಯಾಗದಂತೆ ಎಚ್ಚರವಹಿಸುವ ಜವಾಬ್ದಾರಿ ಜಿಲ್ಲಾಡಳಿತಕ್ಕೆ ಇದೆ. ಧರ್ಮಾಧಾರಿತ ತಾರತಮ್ಯ, ಜನಾಂಗ ದ್ವೇಷಕ್ಕೆ ಕುಖ್ಯಾತರಾಗಿರುವ ಪ್ರಭಾಕರ್ ಭಟ್‌ರಂತವರನ್ನು ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು ಎಂದು ಎಸ್‌ಎಫ್‌ಐ ಒತ್ತಾಯಿಸಿದೆ. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕನ ಬ್ರಿಟನ್ ಸಂಸತ್ ಆಹ್ವಾನ

    ಎಸ್‌ಎಫ್‌ಐ ಹೇಳಿಕೆಯಲ್ಲಿ ಏನಿದೆ?
    ಕರಾವಳಿ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಕೋಮುವಾದಿ ಸಂಘಟನೆಗಳು ತಮ್ಮ ಮತೀಯ ದ್ರುವೀಕರಣದ ಅಜೆಂಡಾಗಳನ್ನು ವ್ಯವಸ್ಥಿತವಾಗಿ ಜಾರಿಗೊಳಿಸಲು ಸರ್ಕಾರಿ ಶಾಲಾ ವಠಾರಗಳನ್ನು ದುರ್ಬಳಕೆ ಮಾಡುತ್ತಿರುವ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಈಗಾಗಲೇ ಉಡುಪಿಯ ಕಾಲೇಜಿನಲ್ಲಿ ಹಿಜಬ್‌ನಿಂದ ಪ್ರಾರಂಭಗೊಂಡ ವಿಷಯಗಳು ಮತೀಯ ರೂಪ ಪಡೆದು ಕೇಸರಿ ಶಾಲು ಸೇರಿದಂತೆ ವಿದ್ಯಾರ್ಥಿಗಳ ನಡುವೆ ಪರಸ್ಪರ ಅಪನಂಬಿಕೆಗಳಿಗೆ, ಗುಂಪು ಘರ್ಷಣೆಗಳಿಗೆ ಎಡೆಮಾಡಿ ಕೊಟ್ಟಿರುವ ಘಟನೆಗಳು ನಮ್ಮ ಕಣ್ಣ ಮುಂದಿವೆ.

    ಇಂತಹ ವಿವಿಧ ಕಾರಣಕ್ಕೆ ಬಹಳಷ್ಟು ಶಾಲಾ ವಿದ್ಯಾರ್ಥಿಗಳು ತಮ್ಮ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಬಹಳಷ್ಟು ವಿದ್ಯಾರ್ಥಿಗಳ ಮೇಲೆ ಪೊಲೀಸ್ ಪ್ರಕರಣ ದಾಖಲಾಗಿ ಪರಿತಪಿಸುತ್ತಿದ್ದಾರೆ. ಇನ್ನೊಂದೆಡೆ ಶಿಕ್ಷಣವನ್ನು ಪಡೆಯಲು ಬರುವ ಪ್ರತಿಭಾನ್ವಿತ ವಿದ್ಯಾರ್ಥಿಗಳು ಮತ್ತವರ ಪೋಷಕರು ಇಂತಹ ಘಟನೆಗಳಿಂದ ಭೀತಿಗೊಳಗಾಗಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಪ್ರಯತ್ನಿಸಬೇಕಾಗಿದ್ದ ಕರ್ನಾಟಕ ರಾಜ್ಯದ ಬಿಜೆಪಿ ಸರ್ಕಾರ ತನ್ನ ಆಡಳಿತ ವೈಫಲ್ಯ ಮರೆಮಾಚಲು ಇಂತಹ ಘಟನೆಗಳಿಗೆ ಕುಮ್ಮಕ್ಕನ್ನು ನೀಡುತ್ತಿದೆ.

    ಈ ಕಾರಣಕ್ಕಾಗಿಯೇ ಸಂಘಪರಿವಾರ ಅಲ್ಪ ಸಂಖ್ಯಾತರನ್ನು ಗುರಿಯನ್ನಾಗಿಸಿ ಕೋಮು ಧ್ರುವೀಕರಣ ರಾಜಕಾರಣ ನಡೆಸಲು ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಿ ಇದೀಗ ಕಾಲೇಜು ಕ್ಯಾಂಪಸ್‌ಗಳನ್ನು ಮುಂದಿನ ಗುರಿಯನ್ನಾಗಿಸಿವೆ. ಇಂತಹ ಉದ್ದೇಶದಿಂದಲೇ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ರನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ಕಾರ್ಯಕ್ರಮವೊಂದಕ್ಕೆ ಉದ್ಘಾಟಕರಾಗಿ ಆಹ್ವಾನಿಸಲಾಗಿದೆ. ಇದು ಮಂಗಳೂರು ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿಗಳ ನಡುವೆ ಪರಸ್ಪರ ಅಪನಂಭಿಕೆಗಳನ್ನು, ಕಂದಕಗಳನ್ನು ಸೃಷ್ಟಿ ಮಾಡುವ ಸಾಧ್ಯತೆ ಇದೆ. ಇದನ್ನೂ ಓದಿ: ಎಂಟು ಬಾರಿ ಬಿಜೆಪಿ ಶಾಸಕ ಸತೀಶ್ ಮಹಾನಾ ಈಗ ಯುಪಿ ಸ್ಪೀಕರ್

    ಈ ರೀತಿ ಕಾಲೇಜು ಕ್ಯಾಂಪಸ್‌ಗಳಿಗೆ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ವರ್ತಿಸುವ, ಕೋಮು ಪ್ರಚೋದಿತ ದ್ವೇಷಗಳನ್ನು ಹರಡುವ ಮತ್ತು ಅವೈಜ್ಞಾನಿಕ ಮನೋಭಾನೆಗಳನ್ನು ಬಿತ್ತುವ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ರನ್ನು ವಿಶ್ವವಿದ್ಯಾನಿಲಯದ ಕಾರ್ಯಕ್ರಮದ ಉದ್ಘಾಟನೆಗೆ ಆಹ್ವಾನಿಸುವುದನ್ನು ಭಾರತ ವಿದ್ಯಾರ್ಥಿ ಫೆಡರೇಶನ್ ಎಸ್‌ಎಫ್‌ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವಿರೋಧಿಸುತ್ತದೆ. ಇಂತಹ ಕಾರ್ಯಕ್ರಮಕ್ಕೆ ಆಹ್ವಾನಿಸಲು ಅವಕಾಶ ಮಾಡಿಕೊಟ್ಟ ವಿಶ್ವವಿದ್ಯಾನಿಲಯದ ಕುಲಪತಿ ಪ್ರೋ. ಪಿ. ಸುಬ್ರಮಣ್ಯ ಯಡಪಡಿತ್ತಾಯ ಅವರ ನಡೆಯನ್ನು ಖಂಡಿಸುತ್ತದೆ. ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆ ರಕ್ಷಣೆಗಾಗಿ, ಕಾಲೇಜು ಕ್ಯಾಂಪಸ್‌ಗಳಲ್ಲಿ ಶಾಂತಿ ಕದಡದಂತೆ ಮುಂಜಾಗ್ರತೆಯ ಭಾಗವಾಗಿ ಈ ಕಾರ್ಯಕ್ರಮದಲ್ಲಿ ಯಾವುದೇ ಕಾರಣಕ್ಕೂ ಕಲ್ಲಡ್ಕ ಪ್ರಭಾಕರ ಭಟ್ ಭಾಗವಹಿಸಲು ಅವಕಾಶ ನೀಡದಂತೆ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಎಫ್‌ಐ ಜಿಲ್ಲಾ ಮುಖಂಡ ವಿನಿತ್ ದೇವಾಡಿಗ, ವಿನುಶ ರಮಣ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

  • ಕುರಾನ್, ಬೈಬಲ್ ಎಲ್ಲರನ್ನು ಕೊಲ್ಲು ಎಂದು ಹೇಳುತ್ತದೆ:  ಕಲ್ಲಡ್ಕ ಪ್ರಭಾಕರ ಭಟ್

    ಕುರಾನ್, ಬೈಬಲ್ ಎಲ್ಲರನ್ನು ಕೊಲ್ಲು ಎಂದು ಹೇಳುತ್ತದೆ:  ಕಲ್ಲಡ್ಕ ಪ್ರಭಾಕರ ಭಟ್

    ಮಂಗಳೂರು: ಒಂದಲ್ಲ ಒಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟಧ್ವಜ ಆಗಬಹುದು ಎಂದು ಆರ್‌ಎಸ್‌ಎಸ್‌ನ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಮಂಗಳೂರಿನ ಕುತ್ತಾರು ಕೊರಗಜ್ಜ ಕ್ಷೇತ್ರದ ಆವರಣದಲ್ಲಿ ನಡೆದ ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ತುಷ್ಟೀಕರಣ ನೀತಿಯಿಂದ ಭಾರತದ ಧ್ವಜ ತುಂಡಾಯಿತು. ಇದು ಯಾಕೆ ಅಂತ ನಾನು ಈ ಬಗ್ಗೆ ಸ್ಪಷ್ಟೀಕರಣ ಕೊಡುತ್ತೇನೆ. ಈ ಮೂರು ಬಣ್ಣದ ಧ್ವಜ ಯಾರು ನಿರ್ಮಾಣ ಮಾಡಿದ್ದು, ಇದಕ್ಕೆ ಮೊದಲು ಯಾವ ಧ್ವಜ ಇತ್ತು ಅನ್ನೋದು ಹೆಚ್ಚಿನವರಿಗೆ ಗೊತ್ತಿಲ್ಲ. ಮೊದಲು ಬ್ರಿಟಿಷರ ಧ್ವಜ ಇತ್ತು. ಅದಕ್ಕೂ ಮೊದಲು ಹಸಿರು ನಕ್ಷತ್ರ, ಚಂದ್ರನ ಧ್ವಜ ಇತ್ತು, ಅಕಸ್ಮಾತ್ ರಾಜ್ಯಸಭೆ, ಪಾರ್ಲಿಮೆಂಟ್‌ನಲ್ಲಿ ಮೂರನೆಯವರ ಬಹುಮತ ಪಡೆದರೆ ಧ್ವಜ ಬದಲು ಮಾಡಬಹುದು. ಧ್ವಜ ಬದಲು ಮಾಡೋಕೆ ಆಗಲ್ಲ ಅಂತ ಏನೂ ಇಲ್ಲ, ಹೀಗೆಯೇ ಮುಂದುವರೆದರೆ ಹಿಂದೂ ಸಮಾಜ ಒಟ್ಟಾಗುತ್ತದೆ ಎಂದಿದ್ದಾರೆ.

    ಇವತ್ತು ಕಾಶ್ಮೀರ್‌ ಫೈಲ್ಸ್‌ನಲ್ಲಿ ನೀವು ನೋಡೋದು ಸಣ್ಣ ತುಂಡಷ್ಟೇ, ದೇಶದಲ್ಲಿ ಧರ್ಮದ ಹತ್ಯೆ ಆದಾಗಲೂ ಷಂಡ ಕಾಂಗ್ರೆಸ್ ಒಪ್ಪಿಕೊಂಡಿತ್ತು. ಇವತ್ತು‌ ಅದೇ ರೀತಿ ಹಿಜಬ್ ಬಂದಿದೆ. ಎಲ್ಲಾ ವ್ಯವಸ್ಥೆ ಕೊಟ್ಟರೂ ನಾವು ಪ್ರತ್ಯೇಕವಾದಿ ಎನ್ನೋ ಮನೋಭಾವ ಇದೆ. ಇದು ಈ ದೇಶವನ್ನು ತುಂಡು ಮಾಡುವ ಪ್ರಯತ್ನ ಎಂದು ಅವರು ಕಿಡಿಕಾರಿದರು.

    ಬೈಬಲ್, ಕುರಾನ್ ನಿಮ್ಮ ಮನೆಯಲ್ಲಿರಲಿ. ಭಗವದ್ಗೀತೆ ಇಡೀ ಶಾಲೆಗಳಲ್ಲಿ, ಮನೆ ಮನೆಗಳಲ್ಲಿ ನೀಡಬೇಕು. ಭಗವದ್ಗೀತೆ ಈ ದೇಶದ ಅಂತಃ ಸತ್ವವಾಗಿದೆ. ಜಗತ್ತಿನಲ್ಲಿ ಸರಿಯಾಗಿ ಬದುಕಬೇಕು ಎಂದಿದ್ದರೆ ಅದಕ್ಕೆ ಭಗವದ್ಗೀತೆ ಓದಬೇಕು. ಗುಜರಾತ್‍ನಂತೆ ನಮ್ಮ ರಾಜ್ಯ ಸರ್ಕಾರವು ಭಗವದ್ಗೀತೆ ಕಲಿಸುವ ಧೈರ್ಯ ಮಾಡಿದೆ. ಇದನ್ನು ಜಾರಿಗೊಳಿಸುವುದಕ್ಕೆ ನಮ್ಮೆಲ್ಲರ ಬೆಂಬಲ ಇದೆ ಎಂದಿದ್ದಾರೆ. ಇದನ್ನೂ ಓದಿ: ‘ದಿ ಕಾಶ್ಮೀರ್‌ ಫೈಲ್ಸ್’ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸಹಾಯ ಮಾಡುವುದಿಲ್ಲ: ಸಂಜಯ್ ರಾವತ್

    ಕುರಾನ್, ಬೈಬಲ್ ಎಲ್ಲರನ್ನು ಕೊಲ್ಲು ಎಂದು ಹೇಳುತ್ತಿದೆ. ದಿ ಕಾಶ್ಮೀರ್‌ ಫೈಲ್ಸ್ ಚಲನಚಿತ್ರದಲ್ಲಿ ಇದೆಲ್ಲವನ್ನು ಚಿತ್ರಿಸಲಾಗಿದೆ. ಅಮಾಯಕರ ಕೊಲೆ, ಅತ್ಯಾಚಾರ ಮಾಡುವುದಕ್ಕೆ ಕುರಾನ್, ಬೈಬಲ್ ಹೇಳಿಕೊಟ್ಟಿದೆಯಾ..? ಬೈಬಲ್, ಕುರಾನ್‍ನಲ್ಲಿ ಆ ರೀತಿ ಇದ್ರೆ ಇವಾಗ ಬದಲು ಮಾಡಿಕೊಳ್ಳಬೇಕು. ಮನುಸ್ಮೃತಿಯ ಬಗ್ಗೆ ಭಾರಿ ಮಾತನಾಡುತ್ತಾರೆ. ಅದರಲ್ಲಿ ತಪ್ಪು ಕಂಡು ಬಂದರೆ ಅದಕ್ಕೊಂದು ಭಾಷ್ಯ ಬರೆಯಿರಿ. ನಮ್ಮಲ್ಲಿ ಆ ಸ್ವಾತಂತ್ರ್ಯ ಇದೆ. ನೀವು ಆ ಸ್ವಾತಂತ್ರ್ಯಗಳಿಸಿಕೊಡಬೇಕು. ಕಾಲಕ್ಕೆ ಸರಿಯಾಗಿ ನಮಸ್ಕಾರ ಮಾಡಿಕೊಳ್ಳಬೇಕು. ಹಳೆ ಕಾಲದ ಹಿಜಬ್ ಕಡೆಗೆ ಹೋಗುವುದು ಬೇಡ ಕಿತಾಬ್ ಕಡೆಗೆ ಹೋಗಿ. ಎಲ್ಲರೂ ಒಂದಾಗಿ ಓದುವ ದೃಷ್ಟಿಕೋನ ಬೆಳೆಸಬೇಕು ಎಂದಿದ್ದಾರೆ.  ಇದನ್ನೂ ಓದಿ:  ಉಪ್ಪಿ ಕಂಠಸಿರಿಯಲ್ಲಿ ‘ಹುಷಾರ್’ ಹಾಡು

  • ನುಸುಳುಕೋರರು ಪಾಕಿಸ್ತಾನ, ಬಾಂಗ್ಲಾಕ್ಕೆ ತೊಲಗಿ- ಕಲ್ಲಡ್ಕ ಪ್ರಭಾಕರ ಭಟ್

    ನುಸುಳುಕೋರರು ಪಾಕಿಸ್ತಾನ, ಬಾಂಗ್ಲಾಕ್ಕೆ ತೊಲಗಿ- ಕಲ್ಲಡ್ಕ ಪ್ರಭಾಕರ ಭಟ್

    – ಭಾರತೀಯರಿಗೆ ಸಿಎಎಯಿಂದ ಸಮಸ್ಯೆಯಿಲ್ಲ

    ಉಡುಪಿ: ಪೌರತ್ವ ಕಾನೂನು ಬಂದಿರುವುದು ಪಾಕಿಸ್ತಾನದ ನುಸುಳುಕೋರರ ವಿರುದ್ಧ. ಭಾರತೀಯ ಮುಸಲ್ಮಾನರಿಗೆ ಪೌರತ್ವ ಕಾನೂನಿನಿಂದ ಸಮಸ್ಯೆಯಾಗಲ್ಲ ಎಂದು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.

    ಉಡುಪಿಯ ಕಟಪಾಡಿಯಲ್ಲಿ ಪೌರತ್ವ ಕಾಯ್ದೆ ಕುರಿತು ಸಮರ್ಥನಾ ಸಮಾವೇಶದಲ್ಲಿ ಸಾವಿರಾರು ಜನರನ್ನು ಉದ್ದೇಶಿಸಿ ಮಾತಾಡಿದ ಅವರು, ನುಸುಳುಕೋರರಾಗಿ ಬಾಂಗ್ಲಾ, ಅಫ್ಘಾನ್, ಪಾಕ್‍ನಿಂದ ಕೆಲ ಪಾಪಿ ಮುಸಲ್ಮಾನರು ಬಂದಿದ್ದಾರೆ. ದೇಶದ ಅರಾಜಕತೆಗೆ ಅವರೇ ಕಾರಣವಾಗಿದ್ದಾರೆ. ನಾವು ಈಗಾಗಲೇ ದೇಶದ್ರೋಹಿಗಳಿಗೆ ಎಲ್ಲಾ ದಾಖಲೆ ಕೊಟ್ಟಿದ್ದೇವೆ. ಅದನ್ನು ಹಿಂಪಡೆದು ನಮ್ಮಲ್ಲಿ ಹುಟ್ಟಿ, ಸಂಕಷ್ಟದಲ್ಲಿದ್ದವರಿಗೆ ನಾವು ಪೌರತ್ವ ಕೊಡುತ್ತೇವೆ ಹೊರತು, ಇಲ್ಲಿನವರ ಪೌರತ್ವ ಹಿಂಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    ಸಿಎಎ, ಎನ್.ಆರ್.ಸಿ, ಎನ್.ಪಿ.ಆರ್ ನಿಂದ ಭಾರತೀಯ ಮುಸಲ್ಮಾನರಿಗೆ ಯಾವುದೇ ಸಮಸ್ಯೆ ಇಲ್ಲ. ದಾಖಲೆ ಇಲ್ಲದವರು ಪಾಕ್‍ನಲ್ಲಿ ಜಮೀನು ಖರೀದಿಸಿ ಎಂದು ಸಲಹೆ ನೀಡಿದರು. ಎಲ್ಲರ ಜೊತೆ ಎಲ್ಲರಂತೆ ಬದುಕುವುದಾದರೆ ಬದುಕಿ. ಆಗದಿದ್ದರೆ ನಿಮ್ಮ ನೆಲ ನಿಮಗಿದೆ. ದಾಖಲೆ ಕೇಳುವಾಗ ಹೆಸರು ಹೇಳುವುದಿಲ್ವಾ? ಅಪ್ಪ ಯಾರೆಂದು ನಿಮಗೆ ಗೊತ್ತಿಲ್ವಾ? ಭಾರತ ಅಂದ್ರೆ ಛತ್ರ ಅಲ್ಲ. ಭಾರತ ಪವಿತ್ರ ನೆಲ ಇಲ್ಲಿ ನೆಲೆಸಲು ಪೌರತ್ವ ಬೇಕು ಎಂದು ಗುಡುಗಿದರು.

    ಮಂಗಳೂರು ಗೋಲಿಬಾರ್ ಪ್ರಕರಣದಲ್ಲಿ ಇಬ್ಬರು ಭಯೋತ್ಪಾದಕರು ಪ್ರಾಣ ಕಳೆದುಕೊಂಡರು. ಕಮಿಷನರ್ ಡಾ. ಹರ್ಷಗೆ ಅಭಿನಂದನೆ. ಪರಿಸ್ಥಿತಿ ಕೈಮೀರಿತ್ತು. ಗೋಲಿಬಾರ್ ಮಾಡದಿದ್ದರೆ ದೇಶದಲ್ಲಿ ಮುಸ್ಲಿಂ ಅಟ್ಟಹಾಸ ನಡೆಯುತ್ತಿತ್ತು. ಪೌರತ್ವ ಕಾಯ್ದೆಗೆ ಎಲ್ಲರೂ ಒಳಗಾಗಬೇಕು. ದಾಖಲೆ ಇಲ್ಲದವರು ಹೊರಗೆ ನಡೆಯಿರಿ. ಪಾಕಿಸ್ತಾನ, ಬಾಂಗ್ಲಾ ಮತ್ತಿತರ ದೇಶದಲ್ಲಿ ಐದು ಸೈಟ್ ತೆಗೆದುಕೊಳ್ಳಿ ಎಂದರು.

    ಭಾರತ ಮೃತ್ಯುಂಜಯ ದೇಶ. ಮೋದಿ, ಅಮಿತ್ ಶಾ ರಂತಹ ಜನ ಹುಟ್ಟಿ ಬರುತ್ತಲೇ ಇರುತ್ತಾರೆ. ಭಾರತ ಸೂಪರ್ ಪವರ್ ಆಗೋದು ಬೇಡ. ಭಾರತ ವಿಶ್ವ ಗುರು ಆದರೆ ಸಾಕು. ನಮ್ಮ ಸಂಸ್ಕೃತಿ, ವಿಚಾರ, ಆಚರಣೆಗಳ ಪಾಲನೆಯಿಂದ ತನ್ನಿಂದ ತಾನೇ ಭಾರತ ವಿಶ್ವಗುರು ಆಗುತ್ತದೆ ಎಂದರು. ಹಿಂದೂ, ಮುಸಲ್ಮಾನ, ಕ್ರೈಸ್ತ, ಜೈನ, ಪಾರಸಿ, ಸಿಖ್ ಹೀಗೆ ದೇಶದ ಪ್ರತಿಯೊಬ್ಬ ನೋಂದಣಿ ಮಾಡಲೇಬೇಕು. ದೇಶದ ನುಸುಳುಕೋರರು ಭಾರತದೊಳಗೆ ಉಳಿಯಲು ಸಾಧ್ಯವಿಲ್ಲ ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.