Tag: ಕಳ್ಳತನ ಕೇಸ್‌

  • ಅಪರಿಚಿತ ವಾಹನ ಹಿಟ್ ಅಂಡ್ ರನ್ – ತಾಯಿ ಸಾವು, ಮಗು ಸ್ಥಿತಿ ಗಂಭೀರ

    ಅಪರಿಚಿತ ವಾಹನ ಹಿಟ್ ಅಂಡ್ ರನ್ – ತಾಯಿ ಸಾವು, ಮಗು ಸ್ಥಿತಿ ಗಂಭೀರ

    – ರಕ್ತಚಂದನ ಕಳವು ಮಾಡೋಕೆ ಟಿಟಿ ಕಳ್ಳತನ ಮಾಡಿದ್ದ ಸ್ಮಗ್ಲರ್ ಅಂದರ್

    ಚಿಕ್ಕಬಳ್ಳಾಪುರ: ಶಾಲೆಯಿಂದ ಮಗುವನ್ನು ಕರೆದುಕೊಂಡುಬರಲು ಮತ್ತೊಬ್ಬ ಮಗುವಿನೊಂದಿಗೆ ಹೊರಟಿದ್ದ ಮಹಿಳೆ ರಸ್ತೆ ಬದಿ ನಿಂತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapur) ನಗರದ ನಂದಿ ಮೋರಿ ಬಳಿ ಸಂಭವಿಸಿದೆ. ಚಾಲಕ ಕಾರಿನ ಸಮೇತ ಎಸ್ಕೇಪ್‌ ಆಗಿದ್ದಾನೆ.

    ಘಟನೆಯಲ್ಲಿ ತಾಯಿ (25 ವರ್ಷದ ಭಾನುಪ್ರಿಯಾ) ಸಾವನ್ನಪ್ಪಿದ್ದು, 4 ವರ್ಷದ ಮಗು ಮನೋಜ್ ಸ್ಥಿತಿ ಗಂಭೀರವಾಗಿದೆ. ಮಗುವಿನ ತಲೆಗೆ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೃತಳ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಸಚಿವರ ಕಾರ್ಯವೈಖರಿ ಬಗ್ಗೆ ಹೈಕಮಾಂಡ್ ರಿಪೋರ್ಟ್ ಕೇಳಿದೆ: ಡಾ. ಎಂ.ಸಿ.ಸುಧಾಕರ್

    ಸ್ಮಗ್ಲರ್ ಅಂದರ್:
    ಮತ್ತೊಂದು ಪ್ರಕರಣದಲ್ಲಿ ರಕ್ತಚಂದನ ಕಳ್ಳತನ ಮಾಡೋಕೆ ಚಿಕ್ಕಬಳ್ಳಾಪುರದಲ್ಲಿ (Chikkaballapura) ಟಿಟಿ ವಾಹನ ಕಳವು ಮಾಡಿದ್ದ ಖತರ್ನಾಕ್ ಕಳ್ಳನನ್ನ ಚಿಕ್ಕಬಳ್ಳಾಪುರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆಂಧ್ರ ಮೂಲದ ಫ್ರಕ್ಕುದೀನ್ ಆಲಿಯಾಸ್ ತಿರುಪತಿ ಫಕ್ರುದ್ದೀನ್ ಬಂಧಿತ ಕಳ್ಳ. ಇದನ್ನೂ ಓದಿ: ಪವರ್ ಶೇರಿಂಗ್: ಡಿಕೆಶಿ, ನಮ್ಮ ನಡುವೆ ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸ್ಪಷ್ಟನೆ

    ಅಂದಹಾಗೆ ಈತ ವೃತ್ತಿಯಲ್ಲಿ ರಕ್ತಚಂದನದ ಸ್ಮಗ್ಲರ್ ಆಗಿದ್ದು, ಈತನ ಮೇಲೆ ಆಂಧ್ರ, ತೆಲಂಗಾಣ, ಕರ್ನಾಟಕದಲ್ಲಿ 77ಕ್ಕೂ ಹೆಚ್ಚು ಪ್ರಕರಣಗಳಿವೆ. ಈತ ಚಿಕ್ಕಬಳ್ಳಾಪುರದಲ್ಲಿ ಮೇ 1 ರಂದು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಮಂಜುನಾಥ್ ಎಂಬುವವರಿಗೆ ಸೇರಿದ್ದ ಟಿಟಿ ವಾಹನ ಕಳವು ಮಾಡಿಕೊಂಡು ಪರಾರಿಯಾಗಿದ್ದ. ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಈತನನ್ನ ರಕ್ತಚಂದನ ಕಳವು ಪ್ರಕರಣದಲ್ಲಿ ಆಂಧ್ರ ಪೊಲೀಸರು ಬಂಧಿಸಿ, ಟಿಟಿ ವಾಹನ ವಶಕ್ಕೆ ಪಡೆದುಕೊಂಡಿದ್ರು. ಈಗ ಆಂಧ್ರ ಪೊಲೀಸರ ಮಾಹಿತಿ ಮೇರೆಗೆ ಕಳ್ಳನನ್ನ ಬಾಡಿ ವಾರೆಂಟ್ ಮೇರೆಗೆ ವಶಕ್ಕೆ ಪಡೆದು ಆತ ಕಳವು ಮಾಡಿದ್ದ ಟಿಟಿ ಜಾಗದಲ್ಲಿ ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಇದನ್ನೂ ಓದಿ: 7.99 ಲಕ್ಷಕ್ಕೆ ಅತ್ಯಾಕರ್ಷಕ ಹೊಸ ಅಮೇಜ್ ಕಾರು ಬಿಡುಗಡೆ

  • ಅಂತರರಾಜ್ಯ ಮನೆಗಳ್ಳರ ಬಂಧನ – ಅರ್ಧ ಕೆಜಿ ಚಿನ್ನ, 2 ಕೆಜಿ ಬೆಳ್ಳಿ ಸೀಜ್‌

    ಅಂತರರಾಜ್ಯ ಮನೆಗಳ್ಳರ ಬಂಧನ – ಅರ್ಧ ಕೆಜಿ ಚಿನ್ನ, 2 ಕೆಜಿ ಬೆಳ್ಳಿ ಸೀಜ್‌

    ಚಿಕ್ಕಬಳ್ಳಾಪುರ: ಅಂತರರಾಜ್ಯ ಖತರ್ನಾಕ್ ಮನೆಗಳ್ಳರನ್ನ ಬಂಧಿಸಿರುವ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು (Chikkaballapur District Police), ಬಂಧಿತರಿಂದ ಬರೋಬ್ಬರಿ ಅರ್ಧ ಕೆಜಿಗೂ ಅಧಿಕ ಚಿನ್ನಾಭರಣ ಹಾಗೂ 2 ಕೆಜಿಗೂ ಅಧಿಕ ಬೆಳ್ಳಿ ಅಭರಣಗಳನ್ನ (Jewellery) ವಶಪಡಿಸಿಕೊಂಡಿದ್ದಾರೆ.

    ಅಂದಹಾಗೆ ಆಂಧ್ರಪ್ರದೇಶದ ಹಿಂದೂಪುರದ ಮಹೇಶ್, ಬೆಂಗಳೂರು (Bengaluru) ಮೂಲದ ಮುದಾಸೀರ್, ಚಿಂತಾಮಣಿ ನಗರದ ಸುಲ್ತಾನ್ ಭಾಷಾ ಬಂಧಿತರು. ಇದನ್ನೂ ಓದಿ: ಬೈಕ್‌ಗೆ ಬೊಲೆರೋ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ಮಹಿಳೆ ಸಾವು

    ಈ ಮೂವರು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಾಯನಹಳ್ಳಿ ಗ್ರಾಮದ ಕೃಷ್ಣಾರೆಡ್ಡಿ ಎಂಬುವವರ ಮನೆಯ ಬೀಗ ಒಡೆದು ಸರಿಸುಮಾರು ಏಳೂವರೆ ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳು, ಹಾಗೂ ಕಾಗತಿ ಗ್ರಾಮದ ಲಕ್ಷಣ್ ಎಂಬುವವರ ಮನೆಯ ಬೀಗ ಒಡೆದು 98,000 ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ರು.

    ಈ ಎರಡೂ ಪ್ರಕರಣಗಳ ಬೆನ್ನತ್ತಿದ ಪೊಲೀಸರು ಮೂವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬಂಧಿತರು ಈ ಎರಡು ಪ್ರಕರಣ ಅಷ್ಟೇ ಅಲ್ಲದೇ ಬೆಂಗಳೂರಿನ ಕೆ.ಆರ್ ಪುರಂ, ಬೈಯಪ್ಪನಹಳ್ಳಿ, ರಾಯಲ್ಪಾಡು ಹಾಗೂ ಅಂಕೋಲಾ, ಮುರಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮನೆಗಳ್ಳತನ ಮಾಡಿರೋದನ್ನ ಬಾಯ್ಬಿಟ್ಟಿದ್ದಾರೆ.

    ಬಂಧಿತರು ಕಳವು ಮಾಡಿದ್ದ 512 ಗ್ರಾಂ ಚಿನ್ನಾಭರಣಗಳು, 2 ಕೆಜಿ 353 ಗ್ರಾಂ ಬೆಳ್ಳಿ ಅಭರಣಗಳು, ಕೃತ್ಯಕ್ಕೆ ಬಳಿಸಿದ ಕಾರು ಸೇರಿ ಬರೋಬ್ಬರಿ 50 ಲಕ್ಷ ರೂ. ಮೌಲ್ಯದ ವಸ್ತುಗಳನ್ನ ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ ಕ್ಷೇತ್ರದ ವಿದ್ಯಾರ್ಥಿಗಳಿಗೆ ವೈಯಕ್ತಿಕ ಸ್ಕಾಲರ್ಶಿಪ್ ಸ್ಕೀಂ ಘೋಷಿಸಿದ ಶಾಸಕ ಪ್ರದೀಪ್ ಈಶ್ವರ್ 

  • ರಾಜಾರೋಷವಾಗಿ ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟಿ ಕದ್ದೊಯ್ದ ಕಳ್ಳರು

    ರಾಜಾರೋಷವಾಗಿ ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟಿ ಕದ್ದೊಯ್ದ ಕಳ್ಳರು

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳ್ಳರಿಗೆ ಪೊಲೀಸರ ಭಯ ಇದ್ದಂಗೆ ಕಾಣ್ತಿಲ್ಲ. ಸಿಸಿಟಿವಿಯಲ್ಲಿ ಸೆರೆಯಾಗ್ತೀವಿ ಅನ್ನುವ ಭಯ ಕೂಡ ಇಲ್ಲ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಇತ್ತೀಚೆಗೆ ಸರ್ಜಾಪುರದಲ್ಲಿ ಮನೆ ಮುಂದೆ ನಿಲ್ಲಿಸಿದ ಸ್ಕೂಟಿ ಕದ್ದ (Theft) ಮೂವರು ಖದೀಮರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ:ಕರ್ನಾಟಕದಲ್ಲಿ ವಿರೋಧ ಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ: ಡಿವಿಎಸ್‌

    ಸರ್ಜಾಪುರದ (Sarjapura) ಸಂಪುರ ಗೇಟ್ ಬಳಿ ಮನೆ ಮಂದೆ ನಿಲ್ಲಿಸಿದ ಸ್ಕೂಟಿಯನ್ನ ಮೂವರು ಕಳ್ಳರು ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡಿದ್ದಾರೆ. ಬಳಿಕ ಆರಾಮಾಗಿ ಸ್ಕೂಟರ್ ಅನ್ನು ಸಂಪುರ ಗೇಟ್‌ನಿಂದ ದೊಮ್ಮಸಂದ್ರದ ಕಡೆಗೆ ತಳ್ಳಿಕೊಂಡೆ ಹೋಗಿರುವ ಕೃತ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.

    ಕಳ್ಳತನದ ಎರಡು ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೊಮ್ಮಸಂದ್ರದ ಕಡೆ ತಳ್ಳಿಕೊಂಡು ಹೋಗುವ ದೃಶ್ಯ ಮತ್ತು ಇನ್ನೊಂದು ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡಿದ ದೃಶ್ಯವನ್ನು ಪೊಲೀಸರಿಗೆ ಟ್ಯಾಗ್ ಮಾಡಿ ಎಕ್ಸ್ ಖಾತೆಯಲ್ಲಿ ವಿಡಿಯೋ ಶೇರ್ ಮಾಡಲಾಗಿದೆ. ಈ ಹಿನ್ನೆಲೆ ಕಳ್ಳತನ ಬಗ್ಗೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಖದೀಮರಿಗಾಗಿ ಹುಡುಕಾಟ ಮುಂದುವರೆದಿದೆ.