Tag: ಕಳ್ಳಭಟ್ಟಿ

  • Punjab | ಕಳ್ಳಭಟ್ಟಿ ಸೇವಿಸಿ 14 ಮಂದಿ ಸಾವು – 6 ಮಂದಿ ಆಸ್ಪತ್ರೆಗೆ ದಾಖಲು

    Punjab | ಕಳ್ಳಭಟ್ಟಿ ಸೇವಿಸಿ 14 ಮಂದಿ ಸಾವು – 6 ಮಂದಿ ಆಸ್ಪತ್ರೆಗೆ ದಾಖಲು

    ಚಂಡೀಗಢ: ಕಳ್ಳಭಟ್ಟಿ (Spurious Liquor) ಸೇವಿಸಿ ಐದು ಗ್ರಾಮದ 14 ಮಂದಿ ಸಾವನ್ನಪ್ಪಿದ್ದು, 6 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಂಜಾಬ್‌ನ (Punjab) ಅಮೃತಸರದಲ್ಲಿ (Amritsar) ನಡೆದಿದೆ.

    ಭಂಗಲಿ, ಪಾತಾಳಪುರಿ, ಮರಾರಿ ಕಲಾನ್, ಥೆರೆವಾಲ್ ಮತ್ತು ತಲ್ವಾಂಡಿ ಘುಮಾನ್ ಗ್ರಾಮಗಳಲ್ಲಿನ 14 ಮಂದಿ ಕಳ್ಳಭಟ್ಟಿ ಸೇವಿಸಿ ಮೃತಪಟ್ಟಿದ್ದಾರೆ. ಅಮೃತಸರ ಉಪ ಆಯುಕ್ತ ಸಾಕ್ಷಿ ಸಾಹ್ನಿ 14 ಮಂದಿ ಸಾವಿನ ಕುರಿತು ದೃಢಪಡಿಸಿದರು. ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮಣೀಂದರ್ ಸಿಂಗ್ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ʻಆಪರೇಷನ್ ಸಿಂಧೂರ’ ಸಂಭ್ರಮ: 17 ಶಿಶುಗಳಿಗೆ ‘ಸಿಂಧೂರ’ ನಾಮಕರಣ

    ಘಟನೆಯಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಭಜಿತ್ ಸಿಂಗ್, ಕುಲ್ಬೀರ್ ಸಿಂಗ್, ಸಾಹಿಬ್ ಸಿಂಗ್, ಗುರ್ಜಂತ್ ಸಿಂಗ್ ಮತ್ತು ನಿಂದರ್ ಕೌರ್ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಭಾರತೀಯ ನ್ಯಾಯ ಸಂಹಿತಾ ಮತ್ತು ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Photo Gallery: ‘ಆಪರೇಷನ್‌ ಸಿಂಧೂರ’ ವೀರರನ್ನು ಭೇಟಿಯಾದ ಪಿಎಂ ಮೋದಿ

  • Bihar | ಕಳ್ಳಭಟ್ಟಿ ಸೇವಿಸಿ 20 ಮಂದಿ ಸಾವು

    Bihar | ಕಳ್ಳಭಟ್ಟಿ ಸೇವಿಸಿ 20 ಮಂದಿ ಸಾವು

    ಪಾಟ್ನಾ: ಕಳ್ಳಭಟ್ಟಿ ಸೇವಿಸಿ 20 ಮಂದಿ ಸಾವಿಗೀಡಾಗಿರುವ ಘಟನೆ ಬಿಹಾರ (Bihar) ರಾಜ್ಯದ ಸಿವಾನ್ ಮತ್ತು ಸರನ್ ಜಿಲ್ಲೆಯಲ್ಲಿ ನಡೆದಿದೆ.

    ಅಧಿಕಾರಿಗಳ ಮಾಹಿತಿ ಪ್ರಕಾರ ಕಳ್ಳಭಟ್ಟಿ (Liquior) ಸೇವನೆಯಿಂದ 6 ಜನ ಸಾವನ್ನಪ್ಪಿದ್ದರು. 12 ಮಂದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಧಿಕಾರಿಗಳು ಮೃತರ ಹಾಗೂ ಚಿಕಿತ್ಸೆಗೆ ಒಳಪಟ್ಟವರ ಯಾವುದೇ ಗುರುತನ್ನು ಬಹಿರಂಗಪಡಿಸಿಲ್ಲ.ಇದನ್ನೂ ಓದಿ: ಮದುವೆಯಾದ 12 ವರ್ಷಗಳ ಬಳಿಕ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ರಾಧಿಕಾ ಆಪ್ಟೆ

    ಸಿವಾನ್ ಜಿಲ್ಲೆಯ ಮ್ಯಾಜಿಸ್ಟ್ರೇಟ್ ಮುಕುಲ್ ಕುಮಾರ್ ಗುಪ್ತಾ ಮಾತನಾಡಿ, ಮಘಾರ್ ಮತ್ತು ಔರಿಯಾ ಪಂಚಾಯತ್ ವ್ಯಾಪ್ತಿಯಲ್ಲಿ ಮೂವರು ಸಾವನ್ನಪ್ಪಿದ್ದು, ಬೆಳಗ್ಗೆ 7:30 ಸುಮಾರಿಗೆ ಮಾಹಿತಿ ಲಭಿಸಿದೆ. ತಕ್ಷಣವೇ ಸ್ಥಳಕ್ಕೆ ಅಧಿಕಾರಗಳ ತಂಡವನ್ನು ಕಳುಹಿಸಲಾಗಿದ್ದು, 12 ಜನರನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಯಿತು. ಈ ವೇಳೆ ಮಾರ್ಗಮಧ್ಯೆ ಇನ್ನೋರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.

    ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ವರದಿಯ ಬಳಿಕ ಸಾವಿಗೆ ನಿಖರ ಕಾರಣ ಏನು ಎಂಬುವುದನ್ನು ತಿಳಿಸಲಾಗುವುದು ಎಂದರು. ಸದ್ಯ ಎರಡು ಜಿಲ್ಲೆಯಲ್ಲಿ ಆಡಳಿತ ಮಂಡಳಿಯು ತನಿಖೆ ನಡೆಸುತ್ತಿದೆ. ಜೊತೆಗೆ ಮಘಾರ್ ಮತ್ತು ಔರಿಯಾ ಪಂಚಾಯಿತಿ ವ್ಯಾಪ್ತಿಯ ಇಬ್ಬರು ಚೌಕಿದಾರ್‌ರನ್ನು ಇಲಾಖೆಯು ಅಮಾನತುಗೊಳಿಸಿದೆ.

    ಮತ್ತೊಂದು ಪ್ರಕರಣದಲ್ಲಿ, ಅ.16ರಂದು ಕಳ್ಳಭಟ್ಟಿ ಸೇವಿಸಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬಿಹಾರ ರಾಜ್ಯದ ಇಬ್ರಾಹಿಂಪುರ ಪ್ರದೇಶದಲ್ಲಿ ನಡೆದಿದೆ.

    ಸರನ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮನ್ ಸಮೀರ್ ಮಾತನಾಡಿ, ಮೂವರು ಚಿಕಿತ್ಸೆ ಪಡೆಯುತ್ತಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿಯ ನಂತರ ಸಾವಿನ ನಿಖರವಾದ ಕಾರಣ ತಿಳಿಸಲಾಗುವುದು ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂಚ್ ಸೇವಿಸಿರುವ ಮಾಹಿತಿ ಲಭಿಸಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

    2016ರ ಏಪ್ರಿಲ್‌ನಲ್ಲಿ ಬಿಹಾರ ಸರ್ಕಾರವು ಮದ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಿದೆ. ನಿಷೇಧಿಸಿದ ನಂತರ ಅಕ್ರಮ ಮದ್ಯ ಸೇವನೆಯಿಂದ 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಬಿಹಾರ ಸರ್ಕಾರ ತಿಳಿಸಿದೆ.ಇದನ್ನೂ ಓದಿ: ಮಲ್ಲೇಶ್ವರಂ ಸ್ಫೋಟದಲ್ಲಿ ಭಾಗಿಯಾಗಿದ್ದ ಉಗ್ರನಿಂದ ಸೆಂಟ್ರಲ್ ಜೈಲಿನಿಂದಲೇ ಹನಿಟ್ರ್ಯಾಪ್?

  • ಮದ್ಯಪಾನ ಮಾಡಿ ಒಂದೇ ವಾರದಲ್ಲಿ ಐವರ ಸಾವು – ಗ್ರಾಮಸ್ಥರಲ್ಲಿ ಮೂಡಿದ ಆತಂಕ

    ಮದ್ಯಪಾನ ಮಾಡಿ ಒಂದೇ ವಾರದಲ್ಲಿ ಐವರ ಸಾವು – ಗ್ರಾಮಸ್ಥರಲ್ಲಿ ಮೂಡಿದ ಆತಂಕ

    ಮಡಿಕೇರಿ: ಆ ಊರಿನಲ್ಲಿ ಬಹುತೇಕ ಜನರು ಕೂಲಿ ಕಾರ್ಮಿಕರೇ. ದಿನ ನಿತ್ಯ ಕೆಲಸ ಮಾಡಿ ದುಡಿದ ಹಣದಲ್ಲಿ ಮದ್ಯಪಾನ (Drinking Alcohol) ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಆದರೆ ಕಳೆದ 1 ವಾರದಲ್ಲಿ ಮದ್ಯಪಾನ ಮಾಡಿ ಐವರು ಮೃತಪಟ್ಟಿದ್ದು ಊರಿನ ಜನರು ಇದೀಗ ಆತಂಕಕ್ಕೆ ಒಳಗಾಗಿದ್ದಾರೆ.

    ಈ ಘಟನೆ ಕೊಡಗು (Kodagu) ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯದ ಮುಂಭಾಗದ ಗ್ರಾಮದಲ್ಲಿ ನಡೆದಿದೆ. ಈ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಡಿಮೆ ಬೆಲೆಯ ಮದ್ಯವನ್ನು ತಂದು ಇಲ್ಲಿರುವ ಕೂಲಿ ಕಾರ್ಮಿಕರಿಗೆ ದುಪ್ಪಟ್ಟು ಹಣಕ್ಕೆ ಮಾರಾಟ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಹಾಸನ ಜಿಲ್ಲೆಯಿಂದ ಕಡಿಮೆ ಬೆಲೆಗೆ ಮದ್ಯವನ್ನು ತಂದು ಈ ಊರಿನ ಕೆಲವು ಮನೆಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಬಾರ್‌ಗಳಲ್ಲಿ ಮದ್ಯ ಮಾರಾಟ ಮಾಡಲು ಸಮಯ ನಿಗದಿ ಇರುತ್ತದೆ. ಆದರೆ ಈ ಗ್ರಾಮದಲ್ಲಿ ಹಗಲು ರಾತ್ರಿ ಎನ್ನದೇ ಅನಧಿಕೃತವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

    ಇದೀಗ ಒಂದೇ ವಾರದಲ್ಲಿ ಐವರು ಮೃತಪಟ್ಟ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅಲ್ಲಿನ ದೇವಾಲಯ ಮುಂಭಾಗದ ಹಲವು ಮನೆಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಹಾರಂಗಿ ಪೋಲಿಸರಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಮದ್ಯ ಮಾರಾಟ ಮಾಡುವ ಮನೆಗಳ ಮೇಲೆ ದಾಳಿ ನಡೆಸಿ ಮದ್ಯ ಮಾರಾಟ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಅನಧಿಕೃತವಾಗಿ ಮಾರಾಟ ಮಾಡಲು ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಗ್ರಾಮದಲ್ಲಿ ಈಗಲೂ ಅನೇಕ ಮನೆಗಳಲ್ಲಿ ಅನಧಿಕೃತವಾಗಿ ಮದ್ಯ ಮಾರಾಟ ಮಾಡಲು ಕೆಲ ಜನರು ಮುಂದಾಗಿದ್ದಾರೆ. ಕೂಲಿ ಕಾರ್ಮಿಕರು ತಮ್ಮ ಮನೆಗಳ ಸಮೀಪವೇ ಮದ್ಯ ಸಿಗುವುದರಿಂದ ಯಾವ ಬ್ರ್ಯಾಂಡ್ ಎಂಬುವುದನ್ನು ನೋಡದೇ ಕಡಿಮೆ ಬೆಲೆಯ ಮದ್ಯ ಸೇವಿಸಿ ಸಾವನ್ನಪ್ಪುತ್ತಿದ್ದಾರೆ. ಇದನ್ನೂ ಓದಿ: ತಾಯಿಗೆ ದ್ರೋಹ ಮಾಡಿದ ಬಾಬುರಾವ್ ಚಿಂಚನಸೂರು – ಗಿರೀಶ್ ಮಟ್ಟಣ್ಣನವರ್

    ಇದೀಗ ಮದ್ಯ ಸೇವಿಸಿ ಐವರು ಸಾವನ್ನಪ್ಪಿರುವುದಕ್ಕೆ ಸಂಬಂಧಪಟ್ಟ ಇಲಾಖೆಯವರು ಭೇಟಿ ನೀಡಿ ಅನಧಿಕೃತವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ. ಒಟ್ಟಿನಲ್ಲಿ ಒಂದೇ ವಾರದಲ್ಲಿ ಕಡಿಮೆ ಬೆಲೆಯ ಮದ್ಯ ಸೇವಿಸಿ ಕೂಲಿ ಕಾರ್ಮಿಕರು ಬಲಿಯಾಗಿರುವುದಕ್ಕೆ ಇನ್ನಾದರೂ ಇಲಾಖೆಯವರು ಗ್ರಾಮಕ್ಕೆ ತೆರಳಿ ಕಾನೂನು ರೀತಿಯ ಕ್ರಮ ಕೈಗೊಳ್ಳುತ್ತಾರೋ ಎನ್ನುವುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: H3N2 ಇನ್‌ಫ್ಲುಯೆಂಜಾ ಭೀತಿ ಮಧ್ಯೆ ಹೆಚ್ಚುತ್ತಿದೆ ಕೋವಿಡ್ ಸೋಂಕಿತರ ಸಂಖ್ಯೆ

  • ಬಿಹಾರದಲ್ಲಿ ಮತ್ತೆ ಕಳ್ಳಭಟ್ಟಿ ಸೇವಿಸಿ 3 ಸಾವು, 6 ಮಂದಿ ಆಸ್ಪತ್ರೆ ದಾಖಲು

    ಬಿಹಾರದಲ್ಲಿ ಮತ್ತೆ ಕಳ್ಳಭಟ್ಟಿ ಸೇವಿಸಿ 3 ಸಾವು, 6 ಮಂದಿ ಆಸ್ಪತ್ರೆ ದಾಖಲು

    ಪಾಟ್ನಾ: ಕೆಲ ದಿನಗಳ ಹಿಂದೆ ಬಿಹಾರದಲ್ಲಿ (Bihar) ಕಳ್ಳಭಟ್ಟಿ (Spurious Liquor) ಸೇವಿಸಿ 70ಕ್ಕೂ ಅಧಿಕ ಜನರು ಸಾವನ್ನಪ್ಪಿ ದೊಡ್ಡ ದುರಂತವೇ ಎನಿಸಿಕೊಂಡಿತ್ತು. ಇದೀಗ ಮತ್ತೆ ಕಳ್ಳಭಟ್ಟಿ ಸೇವಿಸಿ ಮೂವರು ಸಾವನ್ನಪ್ಪಿರುವ ಘಟನೆ ಬಿಹಾರದ ಸಿವಾನ್ (Siwan) ಜಿಲ್ಲೆಯಲ್ಲಿ ವರದಿಯಾಗಿದೆ.

    ಸಿವಾನ್ ಜಿಲ್ಲೆಯ ಬಾಲಾ ಗ್ರಾಮದಲ್ಲಿ ಭಾನುವಾರ ಕಳ್ಳಭಟ್ಟಿ ಸೇವಿಸಿ 3 ಜನರು ಸಾವನ್ನಪ್ಪಿದ್ದರೆ, 6 ಜನರು ಅಸ್ವಸ್ಥರಾಗಿ ಆಸ್ಪತ್ರೆ ದಾಖಲಾಗಿದ್ದಾರೆ. ಘಟನೆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮಿತ್ ಕುಮಾರ್ ಪಾಂಡೆ ಮಧ್ಯರಾತ್ರಿ ಸದರ್ ಆಸ್ಪತ್ರೆಗೆ ತೆರಳಿ ವಿಷಯದ ಬಗ್ಗೆ ವಿಚಾರಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 3 ಜನರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ 6 ಜನರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಮೇಲ್ನೋಟಕ್ಕೆ ಕಳ್ಳಭಟ್ಟಿ ಸೇವಿಸಿ ಜನರು ಸಾವಿಗೀಡಾಗಿದ್ದಾರೆ. ಅಸ್ವಸ್ಥರು ಸಿವಾನ್‌ನ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ಲೀಸ್ ಮುಕ್ತಿ ಕೊಡಿಸಿ ಸರ್- ಎಮ್ಮೆಗಳ ವಿರುದ್ಧ ಅರವಿಂದ ಲಿಂಬಾವಳಿಗೆ ಟೆಕ್ಕಿಗಳಿಂದ ದೂರು!

    2022ರ ಡಿಸೆಂಬರ್‌ನಲ್ಲಿ ಬಿಹಾರದ ಛಾಪ್ರಾ ಜಿಲ್ಲೆಯಲ್ಲಿ ಕಳ್ಳಭಟ್ಟಿ ಸೇವಿಸಿ 70 ಜನರು ಸಾವನ್ನಪ್ಪಿದ್ದರು. ಛಾಪ್ರಾದಲ್ಲಿ ನಡೆದ ಕಳ್ಳಭಟ್ಟಿ ದುರಂತ (Bihar Hooch Tragedy) ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಮದ್ಯ ಕಳ್ಳಸಾಗಣೆ ಮಾಡುತ್ತಿದ್ದವನನ್ನು ಬಂಧಿಸಿ 2.17 ಲಕ್ಷ ರೂ.ಯನ್ನು ವಶಪಡಿಸಿಕೊಂಡಿದ್ದರು.

    spurious_liquor

    ಇದೀಗ ಸರನ್ ಪೊಲೀಸರು ಅಕ್ರಮ ಮದ್ಯ ವ್ಯಾಪಾರ, ಸಾಗಣೆ, ಕಳ್ಳಸಾಗಣೆ ಹಾಗೂ ಮದ್ಯ ತಯಾರಿಕೆಯಲ್ಲಿ ತೊಡಗಿರುವ ಶಂಕಿತರನ್ನು ಗುರುತಿಸಲು ಹಾಗೂ ಬಂಧಿಸಲು ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿಗಳ ಬಾಳಲ್ಲಿ ಶಿಕ್ಷಣ ಸಂಸ್ಥೆಗಳ ಎಡವಟ್ಟು- ಫಲಿತಾಂಶ ಪ್ರಕಟ ವಿಳಂಬ, ವಿದ್ಯಾರ್ಥಿಗಳಿಗೆ ಆತಂಕ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 73 ಜನರ ಬಲಿ ತೆಗೆದುಕೊಂಡ ಬಿಹಾರ ಕಳ್ಳಭಟ್ಟಿ ಪ್ರಕರಣದ ಮಾಸ್ಟರ್ ಮೈಂಡ್ ಕೊನೆಗೂ ಪೊಲೀಸ್ ಬಲೆಗೆ

    73 ಜನರ ಬಲಿ ತೆಗೆದುಕೊಂಡ ಬಿಹಾರ ಕಳ್ಳಭಟ್ಟಿ ಪ್ರಕರಣದ ಮಾಸ್ಟರ್ ಮೈಂಡ್ ಕೊನೆಗೂ ಪೊಲೀಸ್ ಬಲೆಗೆ

    ಪಾಟ್ನಾ: ಬಿಹಾರದ (Bihar) ಸರನ್ (Saran) ಜಿಲ್ಲೆಯಲ್ಲಿ 73 ಜನರ ಸಾವಿಗೆ ಕಾರಣವಾದ ಕಳ್ಳಭಟ್ಟಿ ದುರಂತ (Bihar Hooch Tragedy) ಪ್ರಕರಣದ ಮಾಸ್ಟರ್ ಮೈಂಡ್ (Mastermind) ಮೋಸ್ಟ್ ವಾಂಟೆಡ್ ವ್ಯಕ್ತಿಯನ್ನು ದೆಹಲಿ ಪೊಲೀಸರ (Delhi Police) ತಂಡ ಕೊನೆಗೂ ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

    ಆರೋಪಿಯನ್ನು ಸರನ್ ಜಿಲ್ಲೆಯ ದೋಯಿಲಾ ಗ್ರಾಮದ ನಿವಾಸಿ ರಾಮ್ ಬಾಬು ಮಹತೋ ಎಂದು ಗುರುತಿಸಲಾಗಿದೆ. ಆತ ದೆಹಲಿಯಲ್ಲಿ ಅಡಗಿರುವ ಶಂಕೆಯ ಮೇರೆಗೆ ಅಪರಾಧ ವಿಭಾಗ ಅಂತರ್ ರಾಜ್ಯ ಸೆಲ್‌ಗೆ ಮಾಹಿತಿ ನೀಡಿತ್ತು ಎಂದು ವಿಶೇಷ ಪೊಲೀಸ್ ಕಮಿಷನರ್ ರವೀಂದ್ರ ಸಿಂಗ್ ಯಾದವ್ ತಿಳಿಸಿದ್ದಾರೆ.

    ತಾಂತ್ರಿಕ ಕಣ್ಗಾವಲು ಮತ್ತು ನಿರ್ದಿಷ್ಟ ಒಳಹರಿವಿನ ಆಧಾರದ ಮೇಲೆ ಬಿಹಾರ ಕಳ್ಳಭಟ್ಟಿ ದುರಂತ ಪ್ರಕರಣದ ಮಾಸ್ಟರ್ ಮೈಂಡ್‌ನನ್ನು ದ್ವಾರಕಾದಲ್ಲಿ ಬಂಧಿಸಲಾಗಿದೆ. ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಆರೋಪಿಯ ಬಂಧನದ ಬಗ್ಗೆ ಮುಂದಿನ ಕ್ರಮಕ್ಕಾಗಿ ಬಿಹಾರ ಪೊಲೀಸರಿಗೆ ಮಾಹಿತಿಯನ್ನು ನೀಡಲಾಗಿದೆ ಎಂದು ಯಾದವ್ ಹೇಳಿದ್ದಾರೆ. ಇದನ್ನೂ ಓದಿ: ಮದುವೆಯಾಗಲು ಹೆಣ್ಣು ಸಿಗಲ್ಲವೆಂದು ಸ್ಮಶಾನದಲ್ಲೇ ಬೆಂಕಿ ಹಚ್ಚಿಕೊಂಡ ಯುವಕ!

    spurious_liquor

    ಬಿಹಾರದಲ್ಲಿ ಮದ್ಯ ನಿಷೇಧವಿರುವ ಕಾರಣ ಆರೋಪಿಗಳು ಬೇಗನೆ ಹಾಗೂ ಸುಲಭವಾಗಿ ಹಣ ಗಳಿಸುವ ಆಸೆಯಿಂದ ಕಳ್ಳಭಟ್ಟಿ ತಯಾರಿಸಿ ಮಾರಾಟ ಮಾಡಲು ಪ್ರಾರಂಭಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಅಮೆರಿಕಗೆ ಹೋಗಬೇಕಿದ್ದ ಕೊರಿಯರ್‌ನಲ್ಲಿತ್ತು 4 ಮಾನವನ ತಲೆಬುರುಡೆ

    Live Tv
    [brid partner=56869869 player=32851 video=960834 autoplay=true]

  • ಕಳ್ಳಭಟ್ಟಿ ಸೇವಿಸಿ 7 ಮಂದಿ ಸಾವು, 30 ಮಂದಿ ಅಸ್ವಸ್ಥ

    ಕಳ್ಳಭಟ್ಟಿ ಸೇವಿಸಿ 7 ಮಂದಿ ಸಾವು, 30 ಮಂದಿ ಅಸ್ವಸ್ಥ

    ಲಕ್ನೋ: ಕಳ್ಳಭಟ್ಟಿ ಸೇವಿಸಿ 7 ಮಂದಿ ಸಾವನ್ನಪ್ಪಿದ್ದು, 30 ಮಂದಿ ಅಸ್ವಸ್ಥರಾಗಿರುವ ಘಟನೆ ಉತ್ತರ ಪ್ರದೇಶದ ರಾಯ್ಬರೇಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಘಟನೆಯ ಬಳಿಕ ಮದ್ಯದಂಗಡಿ ಮಾಲೀಕ ನಾಪತ್ತೆಯಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಾಗಿದೆ.

    ಮಂಗಳವಾರ ತಡರಾತ್ರಿ ಕಾರ್ಯಕ್ರಮವೊಂದರಲ್ಲಿ ಜನರು ಕಳ್ಳಭಟ್ಟಿ ಸೇವಿಸಿದ್ದು, 12 ಮಂದಿಯ ಸ್ಥಿತಿ ಅದೇ ಸಂದರ್ಭ ಹದಗೆಟ್ಟಿತ್ತು. ಸಾವನ್ನಪ್ಪಿದ 7 ಮಂದಿ ಹೊರತುಪಡಿಸಿ 6 ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

    ಕಳ್ಳಭಟ್ಟಿ ಸೇವಿಸಿ ಜನರು ಸಾವನ್ನಪ್ಪುತ್ತಿದ್ದಂತೆ ಮದ್ಯದಂಗಡಿ ಮಾಲೀಕ ನಾಪತ್ತೆಯಾಗಿದ್ದಾನೆ. ಕಳ್ಳಭಟ್ಟಿ ಮಾರಾಟ ಮಾಡುತ್ತಿದ್ದ ಅಂಗಡಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಘಟನೆಯ ಬಳಿಕ ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಗನ್ ತರಿಸಿಕೊಳ್ಳುವುದು ಪಿಜ್ಜಾ ಆರ್ಡರ್ ಮಾಡಿದಷ್ಟೇ ಸುಲಭ!

    ಕಳ್ಳಭಟ್ಟಿ ಸರಬರಾಜು ಮಾಡುವವರ ಪತ್ತೆಗೆ ತನಿಖೆ ನಡೆಯುತ್ತಿದೆ. ಪೂರೈಕೆದಾರರು 2 ನಿರ್ದಿಷ್ಟ ಬ್ರ್ಯಾಂಡ್ ಮದ್ಯವನ್ನು ಮಾರಾಟ ಮಾಡಿದ್ದು, ಅದರಲ್ಲಿ ಒಂದು ಬ್ರ್ಯಾಂಡ್ ಸಾವುಗಳಿಗೆ ಕಾರಣವಾಗುತ್ತಿದೆ. ಮೃತರ ಕುಟುಂಬ ಸದಸ್ಯರ ಹೇಳಿಕೆಯನ್ನು ದಾಖಲಿಸಿಕೊಂಡು ತನಿಖೆ ತೀವ್ರಗೊಳಿಸಲಾಗಿದೆ ಎಂದು ರಾಯ್ಬರೇಲಿ ಎಸ್‍ಪಿ ಶ್ಲೋಕ್ ಕುಮಾರ್ ತಿಳಿಸಿದ್ದಾರೆ.

  • ಅಬಕಾರಿ ಪೊಲೀಸರ ದಾಳಿ – ಲಕ್ಷಾಂತರ ರೂ.ಮೌಲ್ಯದ ಮಾದಕ ವಸ್ತುಗಳು ಜಪ್ತಿ

    ಅಬಕಾರಿ ಪೊಲೀಸರ ದಾಳಿ – ಲಕ್ಷಾಂತರ ರೂ.ಮೌಲ್ಯದ ಮಾದಕ ವಸ್ತುಗಳು ಜಪ್ತಿ

    ರಾಯಚೂರು: ಜಿಲ್ಲೆಯ ವಿವಿಧೆಡೆ ಅಬಕಾರಿ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತು ಜಪ್ತಿಮಾಡಿ, ಇಬ್ಬರು ಆರೋಪಿಗಳನ್ನ ಬಂಧಿಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

    ಮೂರು ಪ್ರತ್ಯೇಕ ಪ್ರಕರಣದಲ್ಲಿ ಕಳ್ಳಭಟ್ಟಿ ಸಾರಾಯಿ, ಅಕ್ರಮ ಮದ್ಯ ಹಾಗು ಗಾಂಜಾ ಜಪ್ತಿ ಮಾಡಲಾಗಿದೆ. ದೇವದುರ್ಗ ತಾಲೂಕಿನ ನಾರಬಂಡಿ ತಾಂಡಾದಲ್ಲಿ ಕಳ್ಳಭಟ್ಟಿ ತಯಾರಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಅಬಕಾರಿ ಪೊಲೀಸರು 15 ಲೀಟರ್ ಕಳ್ಳಭಟ್ಟಿ ಸಾರಾಯಿ ಹಾಗೂ ಮೂರು ಬೈಕ್ ಜಪ್ತಿ ಮಾಡಲಾಗಿದೆ. ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

    ರಾಯಚೂರು ನಗರದ ಅಶೋಕ ನಗರದಲ್ಲಿ ಚಿಕ್ಕ ಪ್ಯಾಕೇಟ್‍ಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಗಾಂಜಾ ಸಹಿತ ಬಂಧಿಸಲಾಗಿದೆ. 150 ಪ್ಯಾಕೇಟ್ ನಲ್ಲಿದ್ದ 1 ಕೆಜಿ ಗಾಂಜಾ ಜಪ್ತಿ ಮಾಡಲಾಗಿದ್ದು, ಆರೋಪಿ ಅಹ್ಮದ್ ಹುಸೇನ್‍ನನ್ನು ಬಂಧಿಸಲಾಗಿದೆ.

    ಸಿಂಧನೂರು ತಾಲೂಕಿನ ತುರ್ವಿಹಾಳ ಪಟ್ಟಣದಲ್ಲಿ ಬೈಕ್‍ನಲ್ಲಿ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಆರೋಪಿ ಗುಂಜಳ್ಳಿ ಕ್ಯಾಂಪ್‍ನ ಹನುಮಂತನನ್ನ ಬಂಧಿಸಲಾಗಿದ್ದು, 13.590 ಲೀಟರ್ ಮದ್ಯ ಜಪ್ತಿಮಾಡಲಾಗಿದೆ. ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

  • ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ- ಇಬ್ಬರ ಬಂಧನ

    ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ- ಇಬ್ಬರ ಬಂಧನ

    ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ವಿವಿಧೆಡೆ ದಾಳಿ ನಡೆಸಿದ ಅಬಕಾರಿ ಪೊಲೀಸರು 12 ಬ್ಯಾರಲ್ ಗಳಲ್ಲಿನ 1,500 ಲೀಟರ್ ಬೆಲ್ಲದ ಕೊಳೆ, 50 ಲೀಟರ್ ಕಳ್ಳಭಟ್ಟಿ ಜಪ್ತಿ ಮಾಡಿದ್ದಾರೆ.

    ತಾಲೂಕಿನ ಗೋರೆಬಾಳ ಹಾಗೂ ಗೋರೆಬಾಳ ತಾಂಡಾದಲ್ಲಿ ದಾಳಿ ಮಾಡಿ ಕಳ್ಳಭಟ್ಟಿ ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ರಾಯಚೂರು ಮತ್ತು ಲಿಂಗಸಗೂರು ಅಬಕಾರಿ ವಲಯದ ಅಧಿಕಾರಿಗಳ ನೇತೃತ್ವದ ತಂಡದಿಂದ ದಾಳಿ ನಡೆದಿದೆ.

    ಕಳ್ಳಭಟ್ಟಿ ತಯಾರಿಸಿ, ಮಾರಾಟಕ್ಕೆ ಯತ್ನಿಸಿದ್ದ ಅರುಣಕುಮಾರ್ ಹಾಗೂ ಖೂಬಣ್ಣ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ. ದಾಳಿ ವೇಳೆ ಕಳ್ಳಭಟ್ಟಿ ತಯಾರಿಕೆಗೆ ಬಳಕೆ ಮಾಡುತಿದ್ದ ಸಲಕರಣೆಗಳು ಹಾಗೂ ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದಾರೆ.

  • ಸೇಂದಿ ಕಾಯಿಸುವ ಅಡ್ಡೆ ಮೇಲೆ ಅಬಕಾರಿ ಇಲಾಖೆ ದಾಳಿ

    ಸೇಂದಿ ಕಾಯಿಸುವ ಅಡ್ಡೆ ಮೇಲೆ ಅಬಕಾರಿ ಇಲಾಖೆ ದಾಳಿ

    ಯಾದಗಿರಿ: ಸೇಂದಿ ಕಾಯಿಸುವ ಅಡ್ಡೆ ಮೇಲೆ ಯಾದಗಿರಿ ಅಬಕಾರಿ ಇಲಾಖೆ ಇಂದು ದಾಳಿ ನಡೆಸಿದೆ. ದಾಳಿಯಲ್ಲಿ ಸಂಗ್ರಹಿಸಿಟ್ಟ 1,030 ಲೀಟರ್ ಕಳ್ಳಭಟ್ಟಿಯನ್ನು ವಶಪಡಿಸಿಕೊಳ್ಳಲಾಗಿದೆ.

    ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಕುರಬಗೇರಾ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದಲೂ ಕಳ್ಳಭಟ್ಟಿ ತಯಾರು ಮತ್ತು ಮಾರಾಟ ಮಾಡುವ ದಂಧೆ ಬಗ್ಗೆ ಖಚಿತ ಮಾಹಿತಿ ಪಡೆದ ಅಬಕಾರಿ ಇಲಾಖೆಯ ಪೊಲೀಸರು, ಯಾದಗಿರಿ ಅಬಕಾರಿ ಉಪ ಅಧೀಕ್ಷಕರ ಸೂಚನೆ ಮೇರೆಗೆ, ಉಪ ವಿಭಾಗ ಶಹಾಪೂರ ಅಧಿಕಾರಿ ಬಸವರಾಜ ಜಾಮಗೊಂಡ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ತಾಯಪ್ಪ ಕಲಾಲ ಅಕ್ರಮವಾಗಿ ಕಳ್ಳಭಟ್ಟಿ ಮಾರುತ್ತಿದ್ದ ಆರೋಪಿಯಾಗಿದ್ದು, ಈತ ಅಬಕಾರಿ ಪೊಲೀಸರ ದಾಳಿ ವೇಳೆ ಪರಾರಿಯಾಗಿದ್ದಾನೆ. ಸದ್ಯ ಸೇಂದಿ ವಶಕ್ಕೆ ಪಡೆದಿರುವ ಅಧಿಕಾರಿಗಳು, ಆರೋಪಿ ತಾಯಪ್ಪನಿಗಾಗಿ ತೀವ್ರ ಶೋಧಕಾರ್ಯ ನಡೆಸಿದ್ದಾರೆ.

    ಗುರುಮಿಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದಾಳಿ ನಡೆಸಲಾಗಿದೆ. ಇನ್ನೂ ಇಷ್ಟು ದೊಡ್ಡ ಮಟ್ಟದಲ್ಲಿ ಕಳ್ಳಭಟ್ಟಿ ಮಾರಾಟ ದಂಧೆ ನಡೆಯುತ್ತಿದ್ದರು, ಗುರುಮಿಠಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಇಷ್ಟು ದಿನ ಜಾಣ ನಿದ್ದೆಗೆ ಜಾರಿದ್ದು, ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಗುರುಮಿಠಕಲ್ ಪೊಲೀಸರ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • ನಿಲ್ಲದ ಕಳ್ಳಭಟ್ಟಿ ವ್ಯಾಪಾರ- ದಾಳಿ ಮಾಡಿದಷ್ಟು ದಂಧೆ ಬಯಲು

    ನಿಲ್ಲದ ಕಳ್ಳಭಟ್ಟಿ ವ್ಯಾಪಾರ- ದಾಳಿ ಮಾಡಿದಷ್ಟು ದಂಧೆ ಬಯಲು

    ರಾಯಚೂರು: ಲಾಕ್‍ಡೌನ್ ಹಿನ್ನೆಲೆ ಜಿಲ್ಲೆಯಲ್ಲಿ ಕಳ್ಳಭಟ್ಟಿ ದಂಧೆ ಹೆಚ್ಚಾಗಿದೆ. ಮಸ್ಕಿ ತಾಲೂಕಿನ ಮಾರಲದಿನ್ನಿ ತಾಂಡಾದಲ್ಲಿ ದಾಳಿ ಮಾಡಿರುವ ಪೊಲೀಸರು ಸುಮಾರು 2,000 ಲೀಟರ್ ಕಳ್ಳಭಟ್ಟಿ ಜಪ್ತಿಮಾಡಿದ್ದಾರೆ. ನಿರಂತರವಾಗಿ ದಾಳಿಗಳು ನಡೆದಿದ್ದರು ಕಳ್ಳಭಟ್ಟಿ ದಂಧೆಗೆ ಮಾತ್ರ ಬ್ರೇಕ್ ಬಿದ್ದಿಲ್ಲ.

    ಮಸ್ಕಿ ಠಾಣೆ ಪಿಎಸ್‍ಐ ಸಣ್ಣ ವೀರೇಶ್ ನೇತೃತ್ವದಲ್ಲಿ ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ ನಡೆದಿದ್ದು, ದಾಳಿ ವೇಳೆ ವಶಪಡಿಸಿಕೊಂಡ ಕಳ್ಳಭಟ್ಟಿಯನ್ನ ಪೊಲೀಸರು ನಾಶ ಪಡಿಸಿದ್ದಾರೆ. ಕಳ್ಳಭಟ್ಟಿ ತಯಾರಿಕೆಯಲ್ಲಿ ತೊಡಗಿದ್ದ ಆರೋಪಿಗಳು ಪರಾರಿಯಾಗಿದ್ದಾರೆ. ದಾಳಿ ಹಿನ್ನೆಲೆ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಲಿಂಗಸುಗೂರು, ಮಸ್ಕಿ ತಾಲೂಕುಗಳಲ್ಲಿ ಹೆಚ್ಚು ಪ್ರಮಾಣದಲ್ಲಿ ಕಳ್ಳಭಟ್ಟಿ ತಯಾರಿಕೆ ಹಾಗೂ ಮಾರಾಟ ನಡೆದಿದ್ದು, ಪೊಲೀಸರು ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳು ನಿರಂತರ ದಾಳಿ ನಡೆಸುತ್ತಿದ್ದರೂ ದಂಧೆ ನಿಂತಿಲ್ಲ. ಅಲ್ಲದೆ ದಾಳಿ ವೇಳೆ ಕಳ್ಳಭಟ್ಟಿ ಸೇಂದಿ ಸಿಕ್ಕರೂ ದಂಧೆಕೋರರು ಮಾತ್ರ ಪೊಲೀಸರ ಕೈಗೆ ಸಿಗದೆ ಪರಾರಿಯಾಗುತ್ತಿದ್ದಾರೆ. ಬಹುತೇಕ ಪ್ರಕರಣಗಳಲ್ಲಿ ಸಾವಿರಾರು ಲೀಟರ್ ಕಳ್ಳಭಟ್ಟಿ ಜಪ್ತಿಯಾಗಿದೆ.