Tag: ಕವನ

  • ಇಂಡಿಯಾ ಬುಕ್ ಆಫ್ ರೆಕಾರ್ಡ್‍ನಲ್ಲಿ ಕಿರಿಯ ಕವಯಿತ್ರಿ ದಾಖಲೆಗೆ ಅಮನ ಸೇರ್ಪಡೆ

    ಇಂಡಿಯಾ ಬುಕ್ ಆಫ್ ರೆಕಾರ್ಡ್‍ನಲ್ಲಿ ಕಿರಿಯ ಕವಯಿತ್ರಿ ದಾಖಲೆಗೆ ಅಮನ ಸೇರ್ಪಡೆ

    – ಏಷ್ಯಾ ಬುಕ್ ಆಫ್ ರೆಕಾರ್ಡ್‍ನಲ್ಲಿ ಗ್ರ್ಯಾಂಡ್ ಮಾಸ್ಟರ್

    ಬೆಂಗಳೂರು: ಪ್ರತಿಷ್ಠಿತ ಇಂಡಿಯಾ ಬುಕ್ ಆಫ್ ರೆಕಾರ್ಡ್‍ನಲ್ಲಿ  ಕಿರಿಯ ಕವಯಿತ್ರಿ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್‍ನಲ್ಲಿ  ಗ್ರ್ಯಾಂಡ್ ಮಾಸ್ಟರ್  ಆಗಿ ಕುಮಾರಿ ಅಮನ ದಾಖಲೆ ಬರೆದಿದ್ದಾಳೆ. ಈಕೆ ಪ್ರಸ್ತುತ ಬೆಂಗಳೂರಿನ ಬಿಷಪ್ ಕಾಟನ್ ಗರ್ಲ್ಸ್ ಸ್ಕೂಲ್ ನಲ್ಲಿ 8 ನೇ ತರಗತಿಯಲ್ಲಿ ಓದುತ್ತಿದ್ದಾಳೆ.

    2008ರ ಜೂನ್ 20ರಂದು ಜನಿಸಿರುವ ಅಮನಾಳಿಗೆ ಚಿಕ್ಕ ವಯಸ್ಸಿನಿಂದಲೇ ಕವಿತೆಗಳನ್ನು ಬರೆಯುತ್ತಿರುವುದಕ್ಕೆ ಗ್ರ್ಯಾಂಡ್ ಮಾಸ್ಟರ್ ಎಂದು ಹೆಸರಿಸಲಾಗಿದೆ. ಈ ಮೂಲಕ ಅತ್ಯಂತ ಕಿರಿಯ ಕವಯಿತ್ರಿ ಎಂಬ ದಾಖಲೆಯನ್ನು ಅಮನ ಮಾಡಿದ್ದಾಳೆ. ಈಕೆಯ 61 ಕವನಗಳನ್ನು ಪುಸ್ತಕದಲ್ಲಿ ಪ್ರಕಟಿಸಲಾಗಿದೆ ‘ಎಕೋಸ್ ಆಫ್ ಸೋಲ್ಫುಲ್ ಪದ್ಯಗಳು’ (ISBN: 978-93-90490-90-5) ಸಪ್ನಾ ಬುಕ್ ಹೌಸ್ (ಪಿ) ಲಿಮಿಟೆಡ್‍ರವರಿಂದ ನವೆಂಬರ್ 2020ಕ್ಕೆ ಪ್ರಕಟಿಸಿದ್ದು, ಆಗ ಅವಳ ವಯಸ್ಸು 12 ವರ್ಷ. 2021ರ ಜುಲೈ 26 ರಂದು ಇದನ್ನು ಇಂಡಿಯಾ ಬುಕ್ ಆಫ್ ರೆಕಾ​ರ್ಡ್ಸ್ ನಲ್ಲಿ ಕಿರಿಯ ಕವಿಯತ್ರಿ ಎಂದು ದೃಢಪಡಿಸಲಾಗಿದೆ.

    ಇಲ್ಲಿಯವರೆಗೆ ಅವಳು 275ಕ್ಕೂ ಹೆಚ್ಚು ಕವಿತೆಗಳನ್ನು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಬರೆದಿದ್ದಾಳೆ. ಆಕೆಯ 2ನೇ ಪುಸ್ತಕ ಪ್ರಕಟವಾಗುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಒಟ್ಟಿನಲ್ಲಿ ಕರ್ನಾಟಕದ ವಿದ್ಯಾರ್ಥಿನಿಯೊಬ್ಬಳು ಭಾರತದ ಬುಕ್ ಆಫ್ ರೆಕಾರ್ಡ್‍ನಲ್ಲಿ ಪ್ರವೇಶ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ. ಇದನ್ನೂ ಓದಿ: ಲೇಡಿಸ್ ಬೀಚ್‍ನಲ್ಲಿ ಮೂರು ದಿನದಿಂದ ಆಹಾರವಿಲ್ಲದೆ ಸಿಲುಕಿಕೊಂಡಿದ್ದ ಮೀನುಗಾರನ ರಕ್ಷಣೆ

  • ಹೇ ಸಾಗರವೇ ನಿನಗೆ ನನ್ನ ವಂದನೆ: ಸ್ವರಚಿತ ಕವನ ಹಂಚಿಕೊಂಡ ಮೋದಿ

    ಹೇ ಸಾಗರವೇ ನಿನಗೆ ನನ್ನ ವಂದನೆ: ಸ್ವರಚಿತ ಕವನ ಹಂಚಿಕೊಂಡ ಮೋದಿ

    ನವದೆಹಲಿ: ‘ಹೇ ಸಾಗರವೇ ನಿನಗೆ ನನ್ನ ವಂದನೆ’ ಎಂಬ ಸ್ವರಚಿತ ಕವನನ್ನು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ಭಾರತ ಮತ್ತು ಚೀನಾ ನಡುವಿನ ಅನೌಪಚಾರಿಕ ಶೃಂಗಸಭೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ತಮಿಳುನಾಡಿನ ದೇಗುಲ ನಗರಿ ಮಹಾಬಲಿಪುರಂನಲ್ಲಿ ಶುಕ್ರವಾರ ಹಾಗೂ ಶನಿವಾರ ವಾಸ್ತವ್ಯ ಹೂಡಿದ್ದರು. ಮೊದಲ ದಿನ ತಮಿಳುನಾಡಿನ ಸಾಂಪ್ರದಾಯಿಕ ಧಿರಿಸು ಬಿಳಿ ಪಂಚೆ, ಬಿಳಿ ಅಂಗಿ, ಶಲ್ಯ ಧರಿಸಿದ್ದ ಮೋದಿ, ಚೀನಾ ಅಧ್ಯಕ್ಷ ಜಿನ್‍ಪಿಂಗ್ ಅವರಿಗೆ ಆತ್ಮೀಯ ಸ್ವಾಗತ ಕೋರಿದರು. ಆರಾಮವಾಗಿ ಸುತ್ತಾಡುತ್ತಾ ಪಲ್ಲವರ ಕಾಲದ ದೇಗುಲಗಳ ಪರಿಚಯ ಮಾಡಿಕೊಟ್ಟರು. ಮಹಾಭಾರತದ ಅರ್ಜುನ ತಪಸ್ಸು ಮಾಡಿದ್ದ ಸ್ಥಳ, ಒಂದೇ ಕಲ್ಲಿನಲ್ಲಿ ಕೆತ್ತಿದ ಪಂಚರಥ, ಹೀಗೆ ಹಲವು ಸ್ಥಳಗಳ ಮಹಿಮೆಯನ್ನು ವಿವರಿಸಿದ್ದರು.

    ಪ್ರಧಾನಿ ಮೋದಿ ಶನಿವಾರ ಬೆಳಗ್ಗೆ ತಮ್ಮ ವಾಯು ವಿಹಾರದ ಸಮಯದಲ್ಲಿ ಮಾಮಲ್ಲಪುರಂ ಸಮುದ್ರ ತೀರಕ್ಕೆ ತೆರಳಿದ್ದರು. ಈ ವೇಳೆ ಬಂಡೆಯ ಮೇಲೆ ಕುಳಿತು ಸಮುದ್ರ ಅಲೆಗಳ ಆಟ, ಅಲ್ಲಿನ ಸೊಬಗನ್ನು ಸವಿದಿದ್ದರು. ಈ ಸನ್ನಿವೇಶವನ್ನು ಮೋದಿ ಕವನದ ಮೂಲಕ ವಿವರಿಸಿದ್ದಾರೆ.

    ಪ್ರಧಾನಿ ಮೋದಿ ತಮ್ಮ ಮಾತೃ ಭಾಷೆ ಗುಜರಾತಿಯಲ್ಲಿ ಕವನ ಬರೆಯಲು ಇಷ್ಟಪಡುತ್ತಾರೆ. ಜೊತೆಗೆ ಮನದ ಮಾತನ್ನು ಕವನ ರೂಪದಲ್ಲಿ ಹಿಂದಿ ಭಾಷೆಯಲ್ಲಿಯೂ ಬರೆಯುತ್ತಾರೆ. 2018ರಲ್ಲಿ ಅವರು ‘ರಾಮತಾ ರಾಮ್ ಅಕೇಲ್’ ಶೀರ್ಷಿಕೆ ಅಡಿ ಗುಜರಾತಿ ಭಾಷೆಯ ಕವನವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

    ಮಾಮಲ್ಲಪುರಂ ಸಮುದ್ರ ಬಂಡೆಯ ಮೇಲೆ ಕುಳಿತು ಸ್ವಲ್ಪ ಕಾಲ ಪ್ರಧಾನಿ ಕಳೆದ ಮೋದಿ, ಬೀಚ್‍ನಲ್ಲಿ ಹೆಜ್ಜೆ ಹಾಕಿದ್ದರು. ಈ ವೇಳೆ ಅಲ್ಲಿಯೇ ಬಿದ್ದಿದ್ದ ಪ್ಲಾಸ್ಟಿಕ್ ಕಸವನ್ನು ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯವನ್ನು ಮಾಡಿದ್ದರು. ಈ ಕುರಿತ ವಿಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್, ಸಂಗ್ರಹಿಸಲಾದ ಕಸವನ್ನು ಹೋಟೆಲ್‍ನ ಸಿಬ್ಬಂದಿ ಜಯರಾಜ್ ಅವರಿಗೆ ನೀಡಿದ್ದಾಗಿ ತಿಳಿಸಿದ್ದರು. ಅಷ್ಟೇ ಅಲ್ಲದೇ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡುವ ಕಾರ್ಯವನ್ನು ಮಾಡೋಣ, ಸದೃಢ ದೇಹ, ಆರೋಗ್ಯವನ್ನು ಪಡೆಯೋಣ ಎಂದು ಕರೆಕೊಟ್ಟಿದ್ದರು.

    ಆದರೆ ಈ ಕುರಿತು ವ್ಯಂಗ್ಯವಾಡಿದ್ದ ತಮಿಳುನಾಡು ಕಾಂಗ್ರೆಸ್, ಇದೊಂದು ಮೋದಿ ನಾಟಕ. ಭಾರತ ಮತ್ತು ಚೀನಾ ಅನೌಪಚಾರಿಕ ಶೃಂಗಸಭೆ ಉದ್ದೇಶದಿಂದ ಬೀಚ್‍ನಲ್ಲಿ ಬಿದ್ದಿದ್ದ ಕಸ, ಪ್ಲಾಸ್ಟಿಕ್ ಹೆಕ್ಕಿ ಸ್ವಚ್ಛಗೊಳಿಸಲಾಗಿತ್ತು ಎಂದಿತ್ತು. ಆದಾಗ್ಯೂ ಹೆಚ್ಚಿನ ಸಂಖ್ಯೆಯಲ್ಲಿ ನೆಟ್ಟಿಗರು ಪ್ರಧಾನಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ನಾವು ಮುಂದೆ ಮುಂದೆ ಸಾಗುತ್ತೇವೆ, ನೀವೂ ಜೊತೆಗೆ ಬನ್ನಿ ಅಂತಾ ಕವಿತೆ ಹೇಳಿದ್ರು ಜೇಟ್ಲಿ!

    ನವದೆಹಲಿ: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಇಂದು ಕೇಂದ್ರ ಬಜೆಟ್ ಮಂಡನೆ ಮಾಡಿದ ಭಾಷಣದಲ್ಲಿ ಕವಿತೆಗಳನ್ನೂ ಸೇರಿಸಿಕೊಂಡಿದ್ದರು. ಕೆಲವು ಕವನಗಳನ್ನು ಬಳಸಿ ವಿಪಕ್ಷಗಳನ್ನು ಕಾಲೆಳೆದ ಪ್ರಸಂಗವೂ ನಡೆಯಿತು.

    ನೋಟ್ ಬ್ಯಾನ್ ಹಾಗೂ ಡಿಜಿಟಲ್ ಪೇಮೆಂಟ್ ಬಗ್ಗೆ ಬಜೆಟ್‍ನಲ್ಲಿ ಉಲ್ಲೇಖಿಸಿದ ಜೇಟ್ಲಿ, ಹಿಂದಿ ಕವನದ ಸಾಲುಗಳನ್ನು ವಾಚಿಸಿದಾಗ ಲೋಕಸಭಾ ಸದಸ್ಯರು ಕರತಾಡನದೊಂದಿಗೆ ಮೆಚ್ಚುಗೆ ಸೂಚಿಸಿದರು.

    ಇಸ್ ಮೋಡ್ ಪರ್ ಗಬರಾಕರ್ ಥಮ್ ಜಾಯಿಯೇ ಆಪ್| ಜೋ ಬಾತ್ ನಯೀ ಹೈ ಉಸೇ ಅಪ್‍ನಾಯಿಯೇ ಆಪ್| ಡರ್‍ತೇ ಹೈ ನಯೀ ರಾಹ್ ಪೇ ಕ್ಯೂ ಚಲ್ ನೇ ಸೇ| ಹಮ್ ಆಗೇ ಆಗೇ ಚಲ್ತೇ ಹೈ, ಆಯಿಯೇ ಆಪ್
    (ಅರ್ಥ: ನೀವು ಇಂಥಾ ಪರಿಸ್ಥಿತಿ ಬಂದಾಗ ಹೆದರಬೇಡಿ, ಹೊಸತನ್ನು ನೀವು ನಿಮ್ಮದಾಗಿಸಿಕೊಳ್ಳಿ. ಹೊಸ ದಾರಿಯಲ್ಲಿ ನಡೆಯಲು ನಿಮಗೆ ಹೆದರಿಕೆ ಏಕೆ, ನಾವು ಮುಂದೆ ಮುಂದೆ ಸಾಗುತ್ತೇವೆ, ನೀವೂ ನಮ್ಮ ಜೊತೆಗೆ ಬನ್ನಿ)

    ಈ ಸಾಲುಗಳು ನೋಟು ರದ್ದತಿ ನಿರ್ಧಾರವನ್ನು ವಿರೋಧಿಸಿದ ವಿಪಕ್ಷಗಳಿಗೆ ಟಾಂಗ್ ಕೊಟ್ಟಂತಿತ್ತು.

    ಇದಾದ ಬಳಿಕ ಬಜೆಟಲ್ಲಿ ತೆರಿಗೆ ಬಗ್ಗೆ ಪ್ರಸ್ತಾಪಿಸುತ್ತಾ ಮತ್ತೊಂದು ಕವಿತೆಯನ್ನು ಜೇಟ್ಲಿ ಹೇಳಿದರು.

    ನಯೀ ದುನಿಯಾ ಹೈ, ನಯಾ ದೌರ್ ಹೈ, ನಯೀ ಹೈ ಉಮಂಗ್| ಕುಚ್ ಥೆ ಪೆಹಲೇ ಕೆ ತರೀಕೆ, ತೋ ಕುಚ್ ಹೈ ಆಜ್ ಕೆ ಡಂಗ್ | ರೋಶನಿ ಆಕೆ ಅಂಧೇರೋಂ ಸೇ ಜೊ ಟಕರಾಯೀ ಹೈ| ಕಾಲೇ ಧನ್ ಕೋ ಭೀ ಬದಲ್ನಾ ಪಡಾ, ಆಜ್ ಅಪ್‍ನಾ ರಂಗ್||

    (ಅರ್ಥ: ಇದೊಂದು ಹೊಸ ಲೋಕ, ಹೊಸ ನಡೆ, ಹೊಸ ಉತ್ಸಾಹ. ಕೆಲವು ಹಳೇ ರೀತಿಗಳಿದ್ದವು, ಇನ್ನು ಕೆಲವು ಈಗಿನ ಹೊಸ ರೀತಿಗಳಾಗಿವೆ. ಹೊಸ ಬೆಳಕೊಂದು ಬಂದು ಕತ್ತಲನ್ನು ಬಡಿದಾಗ, ಕಪ್ಪು ಹಣಕ್ಕೂ ಕೂಡಾ ತನ್ನ ಬಣ್ಣ ಬದಲಾಯಿಸಬೇಕಾಗಿ ಬಂತು).

    2017ರ ಬಜೆಟ್‍ನಲ್ಲಿ 2 ಬಾರಿ ಕವನ ವಾಚಿಸಿದ ಅರುಣ್ ಜೇಟ್ಲಿ ಈ ರೀತಿ ಕವನ ವಾಚನ ಮಾಡಿದ್ದು ಇದೇ ಮೊದಲೇನೂ ಅಲ್ಲ. ಕಳೆದ ವರ್ಷ ಬಜೆಟ್ ಭಾಷಣ ಮಾಡುವಾಗಲೂ ಅವರು ಕವನ ವಾಚನ ಮಾಡಿದ್ದರು.