Tag: ಕವಿತಾ ರೆಡ್ಡಿ

  • ರಮ್ಯಾಗೊಂದು ನ್ಯಾಯ, ಕವಿತಾರೆಡ್ಡಿಗೊಂದು ನ್ಯಾಯ – ಕಾಂಗ್ರೆಸ್‍ನಲ್ಲಿ ಭಿನ್ನಮತ ಸ್ಫೋಟ

    ರಮ್ಯಾಗೊಂದು ನ್ಯಾಯ, ಕವಿತಾರೆಡ್ಡಿಗೊಂದು ನ್ಯಾಯ – ಕಾಂಗ್ರೆಸ್‍ನಲ್ಲಿ ಭಿನ್ನಮತ ಸ್ಫೋಟ

    ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಇದೀಗ ಕಾಂಗ್ರೆಸ್ ನಲ್ಲಿ ದೊಡ್ಡವರಿಗೊಂದು ನ್ಯಾಯ ಚಿಕ್ಕವರಿಗೊಂದು ನ್ಯಾಯ ಎಂಬಂತಾಗಿರುವುದು ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

    ದೊಡ್ಡವರು ಏನು ಬೇಕಾದರೂ ಮಾತನಾಡಬಹುದು, ಸಾಮಾನ್ಯ ಕಾರ್ಯಕರ್ತರು ಮಾತನಾಡಿದರೆ, ನೋಟಿಸ್ ಗ್ಯಾರಂಟಿ ಎನ್ನುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವರ್ತಿಸುತ್ತಿದೆ ಎಂದು ಹಲವರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಳೆದ ಎಂಟು ವರ್ಷಗಳಿಂದ ಬಡವರಿಗಾಗಿ ಮೋದಿ ಸರ್ಕಾರ ಕೆಲಸ ಮಾಡ್ತಿದೆ: ಪ್ರಹ್ಲಾದ್ ಜೋಶಿ

    dkshivakumar

    ಪರಿಷತ್ ಸ್ಥಾನಕ್ಕೆ ಮಹಿಳೆಯರಿಗೆ ಅವಕಾಶ ಕೊಡದ್ದಕ್ಕೆ ಆಕ್ಷೇಪವೆತ್ತಿದ ಕವಿತಾ ರೆಡ್ಡಿಗೆ ಶಿಸ್ತು ಪಾಲನಾ ಸಮಿತಿ ನೋಟಿಸ್ ನೀಡಿದೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧವೇ ಹಿಗ್ಗಾಮುಗ್ಗಾ ಜಾಡಿಸಿದ ರಮ್ಯಾಗೆ ನೋಟಿಸ್ ನೀಡದೇ ಫುಲ್ ಸೈಲೆಂಟ್ ಆಗಿದ್ದು ಯಾಕೆ ಎಂಬ ಪ್ರಶ್ನೆ ಎದ್ದಿದೆ.

    ಮಾಜಿ ಸಂಸದೆ ರಮ್ಯಾ ಅಂದರೆ ಕೆಪಿಸಿಸಿ ಆಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಅಷ್ಟೊಂದು ಭಯವೇ ಎಂಬ ಪ್ರಶ್ನೆಗಳು ಕಾರ್ಯಕರ್ತರ ವಲಯದಿಂದಲೇ ಎದ್ದಿದೆ. ಇದನ್ನೂ ಓದಿ: ಸೊಳ್ಳೆ ಉತ್ಪಾದನೆಗೆ ಕಾರಣವಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ – 50 ಸಾವಿರ ರೂ. ದಂಡ ವಿಧಿಸಿ: ಡೆಲ್ಲಿ ಹೈಕೋರ್ಟ್

    RAMYA

    ಡಿಕೆಶಿ ಈ ಹಿಂದೆಯೂ ಸಾಮಾನ್ಯ ಕಾರ್ಯಕರ್ತರ ಮೇಲೆ ಕ್ರಮ ಕೈಗೊಂಡು ನಾಯಕರ ವಿಚಾರದಲ್ಲಿ ಸೈಲೆಂಟ್ ಆಗಿದ್ದರು. ಸಲೀಂ – ಉಗ್ರಪ್ಪ ಪ್ರಕರಣದಲ್ಲಿ ಸಲೀಂ ವಿರುದ್ಧ ಕ್ರಮ ಕೈಗೊಂಡು ಉಗ್ರಪ್ಪನವರನ್ನು ಹಾಗೆಯೇ ಬಿಟ್ಟಿದ್ದರು. ಮಾಜಿ ಶಾಸಕ ಅಶೋಕ್ ಪಟ್ಟಣ್ ಪ್ರಕರಣದಲ್ಲಿ ಕಾರಣ ಕೇಳಿ ನೋಟಿಸ್ ಜಾರಿಯಾದರೂ ಅಷ್ಟಕ್ಕೆ ಪ್ರಕರಣ ಕೈಬಿಟ್ಟಿದ್ದರು.

    ಹೋದಲ್ಲಿ ಬಂದಲ್ಲಿ ಮುಂದಿನ ಸಿಎಂ ಬಗ್ಗೆ ಹೇಳಿಕೆ ಕೊಡುತ್ತಿರುವ ಶಾಸಕ ಜಮೀರ್ ವಿರುದ್ಧವೂ ಯಾವುದೇ ಶಿಸ್ತುಕ್ರಮವಿಲ್ಲ. ಆದರೆ ಪರಿಷತ್ ಚುನಾವಣೆ ಟಿಕೆಟ್ ಬಗ್ಗೆ ಮಾತನಾಡಿದ್ದ ಕವಿತಾ ರೆಡ್ಡಿಗೆ ಮಾತ್ರ ನೋಟಿಸ್ ಜಾರಿಗೊಳಿಸಿದ್ದಕ್ಕೆ ಕಾಂಗ್ರೆಸ್ ವಲಯದಲ್ಲೇ ಅಸಮಾಧಾನಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಆರ್‌ಎಸ್‌ಎಸ್‌ನ ತತ್ವವನ್ನು ಮಕ್ಕಳ ತಲೆಗೆ ತುಂಬಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ: ಡಿಕೆಶಿ

    ಕವಿತಾ ರೆಡ್ಡಿಗೆ ಶಿಸ್ತು ಸಮಿತಿ ನೀಡಿದ ನೋಟಿಸನ್ನು ಟ್ವೀಟ್ ಮಾಡಿರುವ ಕೆಪಿಸಿಸಿ ವಕ್ತಾರ ನಟರಾಜ್ ಗೌಡ, ಬನ್ನಿ ಶೇ.33 ಮಹಿಳಾ ಮೀಸಲಾತಿಗೆ ಕೈ ಜೋಡಿಸೋಣ ಎಂದು ಬರೆದುಕೊಂಡಿದ್ದು, ಟ್ವೀಟ್ ಅನ್ನು ರಾಹುಲ್‍ಗಾಂಧಿ, ಸುರ್ಜೆವಾಲ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ಗೆ ಟ್ಯಾಗ್ ಮಾಡಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್ ನಾಯಕರ ತಾರತಮ್ಯ ಧೋರಣೆ ಸಾಮಾನ್ಯ ಕಾರ್ಯಕರ್ತರು ಮತ್ತು ಮುಖಂಡರ ಕೆಂಗಣ್ಣಿಗೆ ಗುರಿಯಾಗಿರುವುದಂತೂ ಸತ್ಯ.

  • ಸಂಯುಕ್ತ ಹೆಗ್ಡೆ ಮೇಲೆ ಹಲ್ಲೆ ಪ್ರಕರಣ- ಕವಿತಾ ರೆಡ್ಡಿ ಅರೆಸ್ಟ್, ಬಿಡುಗಡೆ

    ಸಂಯುಕ್ತ ಹೆಗ್ಡೆ ಮೇಲೆ ಹಲ್ಲೆ ಪ್ರಕರಣ- ಕವಿತಾ ರೆಡ್ಡಿ ಅರೆಸ್ಟ್, ಬಿಡುಗಡೆ

    ಬೆಂಗಳೂರು: ಪಾರ್ಕ್ ಬಳಿ ವರ್ಕ್ ಔಟ್ ಮಾಡುತ್ತಿದ್ದ ನಟಿ ಸಂಯುಕ್ತ ಹೆಗ್ಡೆ ಹಾಗೂ ಸ್ನೇಹಿತರ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ಕಾಗ್ರೆಸ್ ನಾಯಕಿ ಕವಿತಾ ರೆಡ್ಡಿಯನ್ನು ಬಂಧಿಸಲಾಗಿದೆ.

    ಹೆಚ್.ಎಸ್.ಆರ್ ಲೇಔಟ್ ಪೋಲಿಸರು ಕವಿತಾ ರೆಡ್ಡಿಯನ್ನು ಬಂಧಿಸಿದ್ದು, ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಹೋಗಿದ್ದರು. ಇತ್ತ ಪ್ರಕರಣದ ಎರಡನೇ ಅರೋಪಿ ಅನಿಲ್ ರೆಡ್ಡಿ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಸದ್ಯ ಕವಿತಾ ರೆಡ್ಡಿ ಅವರು ಸ್ಟೇಷನ್ ಬೇಲ್ ಮೇಲೆ ಬಿಡುಗಡೆಯಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಘಟನೆಗೆ ಸಂಬಂಧಿಸಿದಂತೆ ಕವಿತಾ ರೆಡ್ಡಿ ಕ್ಷಮೆ ಕೋರಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ ಮಾಡಿದ್ದರು. ಇದರ ನಡುವೆಯೇ ಸಂಯುಕ್ತ ಹೆಗ್ಡೆ ಹಾಗೂ ಕವಿತಾ ರೆಡ್ಡಿ ನಡುವೆ ಸಂಧಾನ ಮಾಡಲಾಗಿತ್ತು. ಆದರೆ ಸಂಧಾನ ಪತ್ರದಲ್ಲಿ ರಾಜಿಗೆ ಒಪ್ಪಿಗೆ ಇಲ್ಲ. ಒತ್ತಾಯದಿಂದ ರಾಜಿಗೆ ಸಹಿ ಮಾಡುತ್ತಿದ್ದೇನೆ ಎಂದು ಸಂಯುಕ್ತ ಹೆಗ್ಡೆ ಬರೆದಿದ್ದರು. ಪ್ರಕರಣದ 2ನೇ ಆರೋಪಿ ಅನಿಲ್ ರೆಡ್ಡಿ ವಿರುದ್ಧ ಕ್ರಮಕ್ಕೆ ಸಂಯುಕ್ತ ಮಾಡಿದ್ದರು. ಹೀಗಾಗಿ ಪೊಲೀಸರು ಐಪಿಸಿ ಸೆಕ್ಷನ್ 264ಬಿ, 323 224, 504, 509, 506 ಅಡಿ ಎಫ್‍ಐಆರ್ ದಾಖಲು ಮಾಡಿ ಕವಿತಾ ರೆಡ್ಡಿಯನ್ನು ಬಂಧಿಸಿದ್ದರು.

    ಹಲ್ಲೆ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದ ಸಂಯುಕ್ತ, ಪಾರ್ಕ್ ಬಳಿ ನಾವು  ವರ್ಕ್ ಔಟ್ ಮಾಡುತ್ತಿದ್ದಾಗ ಕವಿತಾ ರೆಡ್ಡಿ ನಮ್ಮನ್ನು ನಿಂದಿಸಿ, ಹಲ್ಲೆ ಮಾಡಲು ಯತ್ನಿಸಿದರು ಎಂದು ಆರೋಪಿಸಿದ್ದರು. ನಮ್ಮ ದೇಶದ ಭವಿಷ್ಯವು ಇಂದು ನಾವು ಏನು ಮಾಡುತ್ತೇವೆ ಎಂಬುದರ ಮೇಲೆ ಅವಲಂಬಿತವಾಗಿದೆ. ಅಗರ ಕೆರೆ ಬಳಿಯ ಉದ್ಯಾನವನದಲ್ಲಿ ಕವಿತಾ ರೆಡ್ಡಿ ನಮ್ಮನ್ನು ನಿಂದಿಸಿ, ಅಸಹ್ಯಕರವಾಗಿ ವರ್ತಿಸಿದರು. ಇದಕ್ಕೆ ಸಾಕ್ಷಿದಾರರು ಹಾಗೂ ಹೆಚ್ಚಿನ ವಿಡಿಯೋ ಪುರಾವೆಗಳು ಸಹ ಇವೆ. ಈ ಕುರಿತು ಗಮನಹರಿಸಬೇಕೆಂದು ನಾನು ವಿನಂತಿಸುತ್ತೇನೆ ಎಂದು ಬೆಂಗಳೂರು ಪೊಲೀಸರಿಗೆ ಹಾಗೂ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಟ್ಯಾಗ್ ಮಾಡಿದ್ದರು.

     

    View this post on Instagram

     

    A post shared by Samyuktha Hegde (@samyuktha_hegde) on

    ಸಿಲಿಕಾನ್ ಸಿಟಿಯ ಅಗರ ಉದ್ಯಾನವನದಲ್ಲಿ ಸಂಯುಕ್ತ ಅಸಭ್ಯವಾಗಿ ವರ್ತನೆ ಮಾಡಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದರು. ಸಾರ್ವಜನಿಕರು ವಾಕಿಂಗ್ ಮಾಡುವ ಪಾರ್ಕ್‍ನಲ್ಲಿ ಸಂಯುಕ್ತ ಹೆಗ್ಡೆ ಮತ್ತವರ ಸಂಗಡಿಗರು ಹುಲಾ ಹೂಪ್ ಡ್ಯಾನ್ಸ್ ಮಾಡಿದ್ದರು. ತುಂಡು ಬಟ್ಟೆ ತೊಟ್ಟು ಡ್ಯಾನ್ಸ್ ಮಾಡಿದ್ದಾರೆ ಎಂದು ಕವಿತಾ ರೆಡ್ಡಿ ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ಕವಿತಾ ರೆಡ್ಡಿ ವಿರುದ್ಧ ನಟಿ ಸಂಯುಕ್ತ ಆಕ್ರೋಶ ವ್ಯಕ್ತಪಡಿಸಿದ್ದು, ಈ ರೀತಿ ಮಾಡಿದ್ದಾರೆ ಎಂದು ವಿಡಿಯೋ ಮೂಲಕ ಕೂಗಾಡಿದ್ದರು. ಈ ವೇಳೆ ಸ್ಥಳೀಯರು ನಟಿಯ ವಿರುದ್ಧ ಧಿಕ್ಕಾರ ಕೂಗಿ, ನಂತರ ಪಾರ್ಕ್ ಗೇಟ್ ಲಾಕ್ ಮಾಡಿ ಪೊಲೀಸರಿಗೆ ಕರೆ ಮಾಡಿದ್ದರು.

    ಗೇಟ್ ಓಪನ್ ಮಾಡುವಂತೆ ಸಂಯುಕ್ತ ಮತ್ತು ಕವಿತಾ ರೆಡ್ಡಿ ನಡುವೆ ವಾಗ್ವಾದ ನಡೆದಿತ್ತು. ಅಷ್ಟರಲ್ಲಿ ಪೊಲೀಸರು ಸ್ಥಳಕ್ಕೆ ಬಂದಿದ್ದರು. ಆಗ ತಕ್ಷಣ ಇನ್‍ಸ್ಟಾಗ್ರಾಮ್‍ನಲ್ಲಿ ಲೈವ್ ಬಂದ ಸಂಯುಕ್ತ, ನಾನು ಏನೂ ತಪ್ಪು ಮಾಡಿಲ್ಲ. ಸುಮ್ಮನೆ ನಮ್ಮನ್ನು ಕೂಡಿ ಹಾಕಿದ್ದಾರೆ ಎಂದು ದೂರಿದ್ದರು. ನಂತರ ಪೊಲೀಸರು ಸಂಯುಕ್ತ ಹಾಗೂ ಅವರ ಸ್ನೇಹಿತರನ್ನು ಅಲ್ಲಿಂದ ಕರೆದುಕೊಂಡು ಹೋಗಿದ್ದರು.

    ಈ ಕುರಿತು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದು, ಹಲವರು ಸಂಯುಕ್ತ ಹೆಗ್ಡೆ ಪರ ಪೋಸ್ಟ್ ಮಾಡಿ, ಈ ಘಟನೆಯಲ್ಲಿ ಸಂಯುಕ್ತಾ ಅವರದ್ದು ತಪ್ಪಿಲ್ಲ. ಕವಿತಾ ರೆಡ್ಡಿಯವರದ್ದೇ ತಪ್ಪಿದೆ ಎಂದು ಹೇಳುತ್ತಿದ್ದಾರೆ. ಇನ್ನೂ ಕೆಲವರು ಸಾರ್ವಜನಿಕ ಸ್ಥಳಗಳಲ್ಲಿ ಡ್ರೆಸ್ ಹೇಗೆ ಧರಿಸಬೇಕು ಎಂಬುದನ್ನು ನಟಿಯರು ತಿಳಿದುಕೊಂಡಿರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿ ಕವಿತಾ ರೆಡ್ಡಿ ಪರ ಪೋಸ್ಟ್ ಮಾಡುತ್ತಿದ್ದಾರೆ. ಸಂಯುಕ್ತ ಹೆಗ್ಡೆ ಅವರ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, ತುಂಬಾ ಜನ ಸಂಯುಕ್ತ ಹೆಗ್ಡೆ ಪರ ಮಾತನಾಡುತ್ತಿದ್ದಾರೆ.

  • ಬಾಯಿಗೆ ಬಂದಂತೆ ಬೈದು ಕಿರಿಕ್‌ – ಸಂಯುಕ್ತ ಬಳಿ ಕ್ಷಮೆ ಕೇಳಿದ ಕವಿತಾ ರೆಡ್ಡಿ

    ಬಾಯಿಗೆ ಬಂದಂತೆ ಬೈದು ಕಿರಿಕ್‌ – ಸಂಯುಕ್ತ ಬಳಿ ಕ್ಷಮೆ ಕೇಳಿದ ಕವಿತಾ ರೆಡ್ಡಿ

    ಬೆಂಗಳೂರು: ಪಾರ್ಕ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ನಟಿ ಸಂಯುಕ್ತ ಹೆಗ್ಡೆ ಮತ್ತು ಗೆಳತಿಯರಿಗೆ ಬಾಯಿಗೆ ಬಂದಂತೆ ಬೈದಿದ್ದ ಕಾಂಗ್ರೆಸ್‌ ನಾಯಕಿ ಕವಿತಾ ರೆಡ್ಡಿ ಈಗ ಬಹಿರಂಗ ಕ್ಷಮೆಯಾಚಿಸಿದ್ದಾರೆ.

    ಫೇಸ್‌ಬುಕ್‌ನಲ್ಲಿ ವಿಡಿಯೋ ಪೋಸ್ಟ್‌ ಮಾಡಿದ ಅವರು, ನನಗೆ ನನ್ನ ತಪ್ಪು ಗೊತ್ತಾಗಿದೆ. ನೈತಿಕ ಪೊಲೀಸ್‌ಗಿರಿಯನ್ನು ನಾನು ಯಾವಾಗಲೂ ವಿರೋಧಿಸುತ್ತೇನೆ. ಪ್ರಗತಿಪರ ಮಹಿಳೆಯಾಗಿ ಈ ವಿಷಯದಲ್ಲಿ ಸಂಯುಕ್ತಾ ಹೆಗಡೆ ಮತ್ತು ಇಬ್ಬರು ಸ್ನೇಹಿತರ ಜೊತೆ ನಾನು ಹಾಗೂ ಸಾರ್ವಜನಿಕರು ನಡೆದುಕೊಂಡ ಬಗೆಗೆ ನಾನು ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.

    ಕವಿತಾ ರೆಡ್ಡಿ ಅವರ ಕ್ಷಮೆಯನ್ನು ನಾನು ಒಪ್ಪಿಕೊಳ್ಳುತ್ತೇನೆ ಎಂದು ಸಂಯುಕ್ತ ಹೆಗ್ಡೆ ಟ್ವೀಟ್‌ ಮಾಡಿದ್ದು ಕಿರಿಕ್‌ ಪ್ರಕರಣ ಅಂತ್ಯ ಕಂಡಿದೆ.

    ನಡೆದಿದ್ದೇನು?
    ಬೆಂಗಳೂರಿನ ಅಗರ ಉದ್ಯಾನವನದಲ್ಲಿ ಸಂಯುಕ್ತಾ ಹೆಗಡೆ ಸ್ನೇಹಿತರೊಂದಿಗೆ ಹುಲಾ ಹೂಪ್ ಅಭ್ಯಾಸ ಮಾಡುತ್ತಿದ್ದರು. ಸಾಮಾಜಿಕ ಅಂತರ ಕಾಪಾಡಿಕೊಂಡು ಸಂಯುಕ್ತಾ ಮತ್ತು ಅವರ ಸ್ನೇಹಿತರು ವರ್ಕೌಟ್ ಮಾಡುತ್ತಿದ್ದರೂ ಕೂಡ ಕವಿತಾ ರೆಡ್ಡಿ ಸಂಯುಕ್ತಾಗೆ ಬೈಯ್ಯುತ್ತಿದ್ದರು. ಈ ವಿಚಾರ ನಟಿ ಸಂಯುಕ್ತ ಹೆಗ್ಡೆ ಪ್ರತಿಕ್ರಿಯಿಸಿದ್ದಾಗ ನಿಮ್ಮ ಮೇಲೆ ಡ್ರಗ್‌ ಕೇಸ್‌ ಫಿಟ್‌ ಮಾಡುತ್ತೇನೆ ಎಂದು ಗದರಿದ್ದರು. ಅಷ್ಟೇ ಅಲ್ಲದೇ ತುಂಡು ಬಟ್ಟೆ ತೊಟ್ಟು ಡ್ಯಾನ್ಸ್ ಮಾಡಿದ್ದಾರೆ ಎಂದು ಕವಿತಾ ರೆಡ್ಡಿ ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ಅಲ್ಲಿದ್ದ ಸ್ಥಳೀಯರು ನಟಿಯ ವಿರುದ್ಧ ಧಿಕ್ಕಾರ ಕೂಗಿ, ನಂತರ ಪಾರ್ಕ್ ಗೇಟ್ ಲಾಕ್ ಮಾಡಿ ಪೊಲೀಸರಿಗೆ ಕರೆ ಮಾಡಿದ್ದರು.

    https://twitter.com/ShobhaBJP/status/1302112068565266432

    ನಂತರ ಏನಾಯ್ತು?
    ಸಂಯುಕ್ತ ಹೆಗ್ಡೆ ಲೈವ್‌ ವಿಡಿಯೋ ಮಾಡಿ ನಾವು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದರು. ಅಷ್ಟೇ ಅಲ್ಲದೇ ಕವಿತಾ ರೆಡ್ಡಿ ತನ್ನ ಗೆಳತಿಗೆ ಹಲ್ಲೆ ಮಾಡುತ್ತಿರುವ ವಿಡಿಯೋವನ್ನು ಅಪ್ಲೋಡ್‌ ಮಾಡಿದ್ದರು. ಈ ಕುರಿತು ಟ್ವಿಟ್ಟರ್ ನಲ್ಲಿ ವಿಡಿಯೋ ಹಾಕಿ ಕಿಡಿ ಕಾರಿದ್ದ ಅವರು ನಮ್ಮ ದೇಶದ ಭವಿಷ್ಯವು ಇಂದು ನಾವು ಏನು ಮಾಡುತ್ತೇವೆ ಎಂಬುದರ ಮೇಲೆ ಅವಲಂಬಿತವಾಗಿದೆ. ಅಗರ ಕೆರೆ ಬಳಿಯ ಉದ್ಯಾನವನದಲ್ಲಿ ಕವಿತಾ ರೆಡ್ಡಿ ನಮ್ಮನ್ನು ನಿಂದಿಸಿ, ಅಸಹ್ಯಕರವಾಗಿ ವರ್ತಿಸಿದರು. ಇದಕ್ಕೆ ಹೆಚ್ಚಿನ ವಿಡಿಯೋ ಪುರಾವೆಗಳು ಸಹ ಇವೆ. ಈ ಕುರಿತು ಗಮನಹರಿಸಬೇಕೆಂದು ನಾನು ವಿನಂತಿಸುತ್ತೇನೆ ಎಂದು ಬೆಂಗಳೂರು ಪೊಲೀಸರಿಗೆ ಹಾಗೂ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದರು. ದೂರಿನ ಬಳಿಕ ಎಫ್‌ಐಆರ್‌ ಸಹ ದಾಖಲಾಗಿತ್ತು.

    ನೆಟ್ಟಿಗರಿಂದ ವ್ಯಾಪಕ ಬೆಂಬಲ:
    ಕವಿತಾ ರೆಡ್ಡಿ ಹೊಡೆಯುತ್ತಿರುವ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಭಾರೀ ಸಂಖ್ಯೆಯಲ್ಲಿ ನೆಟ್ಟಿಗರು ಸಂಯುಕ್ತ ಹೆಗ್ಡೆ ಪರ ಅಭಿಪ್ರಾಯ ಹಂಚಿಕೊಳ್ಳಲು ಆರಂಭಿಸಿದರು. ಶೋಭಾ ಕರಂದ್ಲಾಜೆ, ನಟಿ ರಮ್ಯಾ, ಕಾಜಲ್‌ ಅಗರ್‌ವಾಲ್‌, ಜಗ್ಗೇಶ್, ಹಿತಾ ಚಂದ್ರಶೇಖರ್, ಮೇಘನಾ, ಸಂತೋಷ್ ಆನಂದರಾಮ್, ಸಿಂಪಲ್ ಸುನಿ ಸೇರಿದಂತೆ ಅನೇಕರು ಕವಿತಾ ರೆಡ್ಡಿ ನಡೆ ವಿರೋಧಿಸಿ ಟ್ವೀಟ್‌ ಮಾಡಿದ್ದರು.

  • ಕವಿತಾ ರೆಡ್ಡಿ ನಮ್ಮನ್ನು ನಿಂದಿಸಿ, ಅಸಹ್ಯವಾಗಿ ವರ್ತಿಸಿದರು: ಸಂಯುಕ್ತ ಕಿಡಿ

    ಕವಿತಾ ರೆಡ್ಡಿ ನಮ್ಮನ್ನು ನಿಂದಿಸಿ, ಅಸಹ್ಯವಾಗಿ ವರ್ತಿಸಿದರು: ಸಂಯುಕ್ತ ಕಿಡಿ

    – ಸಂಯುಕ್ತ ಹೆಗ್ಡೆಯದ್ದು ಯಾವುದೇ ತಪ್ಪಿಲ್ಲ
    – ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧ ಚರ್ಚೆ

    ಬೆಂಗಳೂರು: ಪಾರ್ಕ್ ಬಳಿ ನಾವು ವರ್ಕ್ಔಟ್ ಮಾಡುತ್ತಿದ್ದಾಗ ಕವಿತಾ ರೆಡ್ಡಿ ನಮ್ಮನ್ನು ನಿಂದಿಸಿ, ಹಲ್ಲೆ ಮಾಡಲು ಯತ್ನಿಸಿದರು ಎಂದು ನಟಿ ಸಂಯುಕ್ತಾ ಹೆಗ್ಡೆ ಆರೋಪಿಸಿದ್ದಾರೆ.

    ಈ ಕುರಿತು ಟ್ವಿಟ್ಟರ್ ನಲ್ಲಿ ವಿಡಿಯೋ ಹಾಕಿ ಕಿಡಿ ಕಾರಿರುವ ಅವರು, ನಮ್ಮ ದೇಶದ ಭವಿಷ್ಯವು ಇಂದು ನಾವು ಏನು ಮಾಡುತ್ತೇವೆ ಎಂಬುದರ ಮೇಲೆ ಅವಲಂಬಿತವಾಗಿದೆ. ಅಗರ ಕೆರೆ ಬಳಿಯ ಉದ್ಯಾನವನದಲ್ಲಿ ಕವಿತಾ ರೆಡ್ಡಿ ನಮ್ಮನ್ನು ನಿಂದಿಸಿ, ಅಸಹ್ಯಕರವಾಗಿ ವರ್ತಿಸಿದರು. ಇದಕ್ಕೆ ಸಾಕ್ಷಿದಾರರು ಹಾಗೂ ಹೆಚ್ಚಿನ ವಿಡಿಯೋ ಪುರಾವೆಗಳು ಸಹ ಇವೆ. ಈ ಕುರಿತು ಗಮನಹರಿಸಬೇಕೆಂದು ನಾನು ವಿನಂತಿಸುತ್ತೇನೆ ಎಂದು ಬೆಂಗಳೂರು ಪೊಲೀಸರಿಗೆ ಹಾಗೂ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಟ್ಯಾಗ್ ಮಾಡಿದ್ದಾರೆ.

    ಸಿಲಿಕಾನ್ ಸಿಟಿಯ ಅಗರ ಉದ್ಯಾನವನದಲ್ಲಿ ಸಂಯುಕ್ತ ಅಸಭ್ಯವಾಗಿ ವರ್ತನೆ ಮಾಡಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದರು. ಸಾರ್ವಜನಿಕರು ವಾಕಿಂಗ್ ಮಾಡುವ ಪಾರ್ಕ್‍ನಲ್ಲಿ ಸಂಯುಕ್ತ ಹೆಗ್ಡೆ ಮತ್ತವರ ಸಂಗಡಿಗರು ಹುಲಾ ಹೂಪ್ ಡ್ಯಾನ್ಸ್ ಮಾಡಿದ್ದರು. ತುಂಡು ಬಟ್ಟೆ ತೊಟ್ಟು ಡ್ಯಾನ್ಸ್ ಮಾಡಿದ್ದಾರೆ ಎಂದು ಕವಿತಾ ರೆಡ್ಡಿ ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ಕವಿತಾ ರೆಡ್ಡಿ ವಿರುದ್ಧ ನಟಿ ಸಂಯುಕ್ತ ಆಕ್ರೋಶ ವ್ಯಕ್ತಪಡಿಸಿದ್ದು, ಈ ರೀತಿ ಮಾಡಿದ್ದಾರೆ ಎಂದು ವಿಡಿಯೋ ಮೂಲಕ ಕೂಗಾಡಿದ್ದರು. ಈ ವೇಳೆ ಸ್ಥಳೀಯರು ನಟಿಯ ವಿರುದ್ಧ ಧಿಕ್ಕಾರ ಕೂಗಿ, ನಂತರ ಪಾರ್ಕ್ ಗೇಟ್ ಲಾಕ್ ಮಾಡಿ ಪೊಲೀಸರಿಗೆ ಕರೆ ಮಾಡಿದ್ದರು.

     

    View this post on Instagram

     

    A post shared by Samyuktha Hegde (@samyuktha_hegde) on

    ಗೇಟ್ ಓಪನ್ ಮಾಡುವಂತೆ ಸಂಯುಕ್ತ ಮತ್ತು ಕವಿತಾ ರೆಡ್ಡಿ ನಡುವೆ ವಾಗ್ವಾದ ನಡೆದಿತ್ತು. ಅಷ್ಟರಲ್ಲಿ ಪೊಲೀಸರು ಸ್ಥಳಕ್ಕೆ ಬಂದಿದ್ದರು. ಆಗ ತಕ್ಷಣ ಇನ್‍ಸ್ಟಾಗ್ರಾಮ್‍ನಲ್ಲಿ ಲೈವ್ ಬಂದ ಸಂಯುಕ್ತ, ನಾನು ಏನೂ ತಪ್ಪು ಮಾಡಿಲ್ಲ. ಸುಮ್ಮನೆ ನಮ್ಮನ್ನು ಕೂಡಿ ಹಾಕಿದ್ದಾರೆ ಎಂದು ದೂರಿದ್ದರು. ನಂತರ ಪೊಲೀಸರು ಸಂಯುಕ್ತ ಹಾಗೂ ಅವರ ಸ್ನೇಹಿತರನ್ನು ಅಲ್ಲಿಂದ ಕರೆದುಕೊಂಡು ಹೋಗಿದ್ದರು.

    ಈ ಕುರಿತು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದು, ಹಲವರು ಸಂಯುಕ್ತ ಹೆಗ್ಡೆ ಪರ ಪೋಸ್ಟ್ ಮಾಡಿ, ಈ ಘಟನೆಯಲ್ಲಿ ಸಂಯುಕ್ತಾ ಅವರದ್ದು ತಪ್ಪಿಲ್ಲ. ಕವಿತಾ ರೆಡ್ಡಿಯವರದ್ದೇ ತಪ್ಪಿದೆ ಎಂದು ಹೇಳುತ್ತಿದ್ದಾರೆ. ಇನ್ನೂ ಕೆಲವರು ಸಾರ್ವಜನಿಕ ಸ್ಥಳಗಳಲ್ಲಿ ಡ್ರೆಸ್ ಹೇಗೆ ಧರಿಸಬೇಕು ಎಂಬುದನ್ನು ನಟಿಯರು ತಿಳಿದುಕೊಂಡಿರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿ ಕವಿತಾ ರೆಡ್ಡಿ ಪರ ಪೋಸ್ಟ್ ಮಾಡುತ್ತಿದ್ದಾರೆ. ಸಂಯುಕ್ತ ಹೆಗ್ಡೆ ಅವರ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, ತುಂಬಾ ಜನ ಸಂಯುಕ್ತ ಹೆಗ್ಡೆ ಪರ ಮಾತನಾಡುತ್ತಿದ್ದಾರೆ.

  • ಶ್ರೀರಾಮುಲುಗೆ “ತೆಲುಗಿನಿಂದ ಕನ್ನಡ ಕಲಿಯಿರಿ” ಪುಸ್ತಕ ಕಳುಹಿಸಿದ ಕವಿತಾ ರೆಡ್ಡಿ

    ಶ್ರೀರಾಮುಲುಗೆ “ತೆಲುಗಿನಿಂದ ಕನ್ನಡ ಕಲಿಯಿರಿ” ಪುಸ್ತಕ ಕಳುಹಿಸಿದ ಕವಿತಾ ರೆಡ್ಡಿ

    ರಾಯಚೂರು: ನಗರದ ಪೊಲೀಸ್ ಮೈದಾನದಲ್ಲಿ ಗಣರಾಜ್ಯೋತ್ಸವ ವೇಳೆ ಧ್ವಜಾರೋಹಣ ಬಳಿಕ ಮಾತನಾಡಿದ ಭಾಷಣ ವೇಳೆ ಕನ್ನಡ ತಪ್ಪುತಪ್ಪಾಗಿ ಉಚ್ಛರಿಸಿದ್ದ ಆರೋಗ್ಯ ಸಚಿವ ಶ್ರೀರಾಮುಲುಗೆ ಕಾಗಜ್ ಇಂಡಿಯಾ ಸಂಸ್ಥಾಪಕಿ, ಪರ್ವತಾರೋಹಿ ಕವಿತಾ ರೆಡ್ಡಿ “ತೆಲುಗಿನಿಂದ ಕನ್ನಡ ಕಲಿಯಿರಿ” ಪುಸ್ತಕವನ್ನು ಕಳುಹಿಸುವ ಮೂಲಕ ಅಣುಕಿಸಿದ್ದಾರೆ.

    ಗೌರವಾನ್ವಿತ ರಾಮುಲು ಅಣ್ಣನವರೇ ಕನ್ನಡ ಕೊಲ್ಲಬೇಡಿ. ನಿಮಗಾಗಿ ತೆಲುಗಿನಿಂದ ಕನ್ನಡ ಕಲಿಯಿರಿ ಪುಸ್ತಕ ಕಳುಹಿಸುವೆ. ಮುಂದಿನ ಆಗಸ್ಟ್ 15 ರೊಳಗಾಗಿ ಕನ್ನಡ ಕಲಿಯಿರಿ. ಮತ್ತೊಮ್ಮೆ ಕನ್ನಡ ಕೊಲ್ಲದಿರಿ. ಕುಮಾರಸ್ವಾಮಿಯವರನ್ನು ಪಾಕಿಸ್ತಾನಕ್ಕೆ ಹೋಗು ಎಂದು ಹೇಳುವ ಮುಂಚೆ ಕನ್ನಡ ಕಲಿಯಿರಿ ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಈ ಮೂಲಕ ಶ್ರೀರಾಮುಲು ಕನ್ನಡ ಉಚ್ಛಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತವಾಗಿದೆ. 75 ರೂಪಾಯಿ ಬೆಲೆಯ ಪುಸ್ತಕವನ್ನು ರಾಮುಲು ಬಳ್ಳಾರಿ ನಿವಾಸದ ವಿಳಾಸಕ್ಕೆ ಕವಿತಾ ರೆಡ್ಡಿ ಆರ್ಡರ್ ಮಾಡಿದ್ದಾರೆ.