Tag: ಕಸ

  • ರಸ್ತೆಗೆ ತ್ಯಾಜ್ಯ ಎಸೆದವರಿಗೆ ತಕ್ಕ ಪಾಠ – ಹಾಕಿದವ್ರ ಮನೆ ಮುಂದೆಯೇ ಕಸ ವಾಪಸ್ ಸುರಿದ BSWML ಸಿಬ್ಬಂದಿ

    ರಸ್ತೆಗೆ ತ್ಯಾಜ್ಯ ಎಸೆದವರಿಗೆ ತಕ್ಕ ಪಾಠ – ಹಾಕಿದವ್ರ ಮನೆ ಮುಂದೆಯೇ ಕಸ ವಾಪಸ್ ಸುರಿದ BSWML ಸಿಬ್ಬಂದಿ

    ಬೆಂಗಳೂರು: ರಸ್ತೆಗೆ ತ್ಯಾಜ್ಯ ಎಸೆದವರಿಗೆ ತಕ್ಕ ಪಾಠ ಕಲಿಸಲು ಬಿಎಸ್‌ಡಬ್ಲ್ಯೂಎಂಎಲ್‌ (Bengaluru Solid Waste Management Limited) ಸಿಬ್ಬಂದಿ ಅವರು ಹಾಕಿದ ಕಸವನ್ನು ಅವರ ಮನೆ ಮುಂದೆಯೇ ಸುರಿದು 100 ರೂ. ದಂಡ ವಿಧಿಸಿದ್ದಾರೆ.

    ಬೆಂಗಳೂರಿನ (Bengaluru) ದತ್ತಾತ್ರೇಯ ಟೆಂಪಲ್ ರಸ್ತೆ, ಬನಶಂಕರಿ ಸೆಕೆಂಡ್ ಸ್ಟೇಜ್‌ನಲ್ಲಿ ನಿವಾಸಿಗಳು ಮನೆ ಮುಂದೆ ಆಟೋ ಬಂದರೂ ಕೂಡ ಕಸ ಹಾಕದೇ, ಕಸವನ್ನು ರಸ್ತೆಗೆ ಎಸೆಯುತ್ತಿದ್ದರು. ಇದನ್ನು ಗಮನಿಸಿದ ಬಿಎಸ್‌ಡಬ್ಲ್ಯೂಎಂಎಲ್‌ ಸಿಬ್ಬಂದಿ ಅದೇ ಕಸವನ್ನು ಎತ್ತಿಕೊಂಡು ಹಾಕಿದವರ ಮನೆ ಮುಂದೆಯೇ ಸುರಿದು, 100 ರೂ. ದಂಡ ಹಾಕಿದ್ದಾರೆ.ಇದನ್ನೂ ಓದಿ: ನೇರಳೆ ಮಾರ್ಗ ಮಧ್ಯೆಯೇ ನಿಂತ ನಮ್ಮ ಮೆಟ್ರೋ ರೈಲು – ಒಂದು ಗಂಟೆ ಕಾಲ ಪರದಾಡಿದ ಪ್ರಯಾಣಿಕರು

    ಈ ಮೂಲಕ ನಿವಾಸಿಗಳಿಗೆ ಬಿಎಸ್‌ಡಬ್ಲ್ಯೂಎಂಎಲ್‌ ಸಿಬ್ಬಂದಿ ಪಾಠ ಕಲಿಸುವುದರ ಜೊತೆಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

  • ಬೆಂಗಳೂರಿಗರೇ ಗಮನಿಸಿ, ಮನೆ ಮನೆ ಕಸ ಸಂಗ್ರಹದ ಆಟೋಗಳ ಸಮಯ ಬದಲಾವಣೆ

    ಬೆಂಗಳೂರಿಗರೇ ಗಮನಿಸಿ, ಮನೆ ಮನೆ ಕಸ ಸಂಗ್ರಹದ ಆಟೋಗಳ ಸಮಯ ಬದಲಾವಣೆ

    ಬೆಂಗಳೂರು: ಬಿಬಿಎಂಪಿ (BBMP)  ವ್ಯಾಪ್ತಿಯಲ್ಲಿ ಘನತ್ಯಾಜ್ಯ ಸಂಗ್ರಹಣೆಯ (Garbage Collection) ಆಟೋ ಟಿಪ್ಪರ್ ವಾಹನಗಳ ಮಸ್ಟರಿಂಗ್ (ಹಾಜರಾತಿ ದಾಖಲೆ) ಸಮಯವನ್ನು ಪರಿಷ್ಕರಿಸಿದ್ದು, ಇಂದಿನಿಂದ ವಾಹನಗಳ ಸ್ಕ್ಯಾನಿಂಗ್ ಸಮಯವನ್ನು ಬೆಳಿಗ್ಗೆ 5:30 ರಿಂದ 6:30 ರವರೆಗೆ ನಿಗದಿಪಡಿಸಲಾಗಿದೆ.

    ಬೆಂಗಳೂರು ನಗರದಲ್ಲಿ ಸ್ವಚ್ಛತಾ ಕಾರ್ಯಗಳ ಗುಣಮಟ್ಟವನ್ನು ಹೆಚ್ಚಿಸಲು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಗರದ ವಿವಿಧ ವಾರ್ಡ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆಟೋ ಟಿಪ್ಪರ್ ವಾಹನಗಳ ಮಸ್ಟರಿಂಗ್ ಸಮಯವನ್ನು ಪರಿಷ್ಕರಿಸಲಾಗಿದೆ. ಇದನ್ನೂ ಓದಿ: ಆನ್‌ಲೈನ್ ಗೇಮಿಂಗ್ ನಿಷೇಧ – BCCI ಪ್ರಾಯೋಜಕತ್ವದಿಂದ ಹಿಂದೆ ಸರಿದ Dream11

    ಈ ಹಿಂದೆ ಬೆಳಿಗ್ಗೆ 6 ರಿಂದ 7:30 ರವರೆಗೆ ಘನತಾಜ್ಯ ಸಂಗ್ರಹಣೆ ಮಾಡಲಾಗುತ್ತಿತ್ತು. ಆದದರೆ ಈಗ ಒಂದು ಗಂಟೆ ಮುಂಚಿತಗೊಳಿಸುವ ಮೂಲಕ ತ್ಯಾಜ್ಯ ಸಂಗ್ರಹಣೆಯನ್ನು ಜನರ ದೈನಂದಿನ ಕಾರ್ಯವೈಖರಿಯ ಜೊತೆಗೆ ಹೊಂದುವಂತೆ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಬೆಂಗಳೂರು ಟೆಕ್ಕಿಗೆ 2.65 ಲಕ್ಷ ವಂಚನೆ – ಟ್ರಾಫಿಕ್‌ ಫೈನ್‌ ಕಟ್ಟೋ ಮುನ್ನ ಎಚ್ಚರವಾಗಿರಿ

    ಈ ಬದಲಾವಣೆಯ ಮೂಲಕ ನಿವಾಸಿಗಳು ಕೆಲಸಕ್ಕೆ ಹೊರಡುವ ಮೊದಲು ತ್ಯಾಜ್ಯವನ್ನು ನೀಡಲು ಅನುಕೂಲವಾಗುವುದರ ಜೊತೆಗೆ, ಸಾರ್ವಜನಿಕರಿಂದ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವ ಪ್ರಕರಣ ಮತ್ತು ಕಪ್ಪು ಚುಕ್ಕಿ (Black Spot) ಗಳು ರೂಪುಗೊಳ್ಳುವುದನ್ನು ತಡೆಗಟ್ಟಲಾಗುವುದು.

    ಈ ಕ್ರಮವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಲು ಸಾರ್ವಜನಿಕರ ಸಹಕಾರವನ್ನು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಕರೀಗೌಡ ರವರು ಕೋರಿದ್ದಾರೆ.

  • ಹೋಟೆಲ್‌ಗಳಿಗೆ ಬರೆ – ತಿಂಗಳಿಗೆ 30 ಸಾವಿರ ಕಸದ ಸೆಸ್!

    ಹೋಟೆಲ್‌ಗಳಿಗೆ ಬರೆ – ತಿಂಗಳಿಗೆ 30 ಸಾವಿರ ಕಸದ ಸೆಸ್!

    – ಬೆಂಗಳೂರು ಹೋಟೆಲ್ ಮಾಲೀಕರ ಕಿಡಿ

    ಬೆಂಗಳೂರು: ಮೆಟ್ರೋ ದರ, ಬಸ್ ದರ, ವಿದ್ಯುತ್ ದರ ಏರಿಕೆಯಾಯ್ತ. ಈಗ ಏಪ್ರಿಲ್ 1ರಿಂದ ಕಸದ ಸೆಸ್ ಬರೆ ಶುರುವಾಗಲಿದೆ. ಬೆಂಗಳೂರಿನ (Bengaluru) ಹೋಟೆಲ್‌ಗಳಿಗೆ ಕಸದ ಸೆಸ್ (Garbage Cess) ಬರೆಯ ಬಿಸಿ ತಟ್ಟಿದ್ದು, ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ದರ ಏರಿಕೆಯ ಹೊರೆ ಜನರ ಪಾಲಿಗೆ ಬಿಸಿ ತುಪ್ಪದಂತಾಗಿದೆ. ಇದರ ಮಧ್ಯೆ ಈಗ ಏಪ್ರಿಲ್‌ನಿಂದ ಕಸದ ಸೆಸ್ ಬರೆ ಬೀಳಲಿದೆ. ಕಸದ ಸೆಸ್‌ಗೆ ಈಗ ಬೆಂಗಳೂರು ಹೋಟೆಲ್ ಅಸೋಸಿಯೇಷನ್ (Hotel Association) ಕಿಡಿಕಾರಿದೆ. ಒಂದು ಕೆಜಿಗೆ 12 ರೂ. ಫಿಕ್ಸ್ ಮಾಡಿದ್ದು, ಈ ಹಿಂದೆ ತಿಂಗಳಿಗೆ 5 ಸಾವಿರ ಕಸದ ಸೆಸ್ ಕಟ್ಟಲಾಗುತ್ತಿತ್ತು. ಆದರೆ ಈಗ ಬರೋಬ್ಬರಿ 30 ಸಾವಿರ ರೂ. ಕಸದ ಸೆಸ್ ಕಟ್ಟಬೇಕಾಗುತ್ತದೆ. ಇದನ್ನೂ ಓದಿ: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ – ರನ್ಯಾ ರಾವ್‌ ಜಾಮೀನು ಅರ್ಜಿ ಆದೇಶ ಇಂದು

    ಸಾಮಾನ್ಯವಾಗಿ ದರ್ಶಿನಿ ಹೋಟೆಲ್‌ನಲ್ಲಿ, ದಿನಕ್ಕೆ 60-100 ಕೆಜಿಯಷ್ಟು ಕಸ ಉತ್ಪಾದನೆಯಾಗಲಿದೆ. ಮೊದಲೆಲ್ಲ ಪ್ರತಿ ತಿಂಗಳು ಕಸದ ಸೆಸ್ ಅಂತ ಬಿಬಿಎಂಪಿಗೆ ಕಟ್ಟಲಾಗುತ್ತಿತ್ತು. ಆದರೆ ಈಗ ಏಕಾಏಕಿ ಕಸದ ಸೆಸ್ 30 ಸಾವಿರಕ್ಕೆ ಏರಿಕೆ ಮಾಡಿರೋದು ಸರಿಯಲ್ಲ. ಇದು ಅವೈಜ್ಞಾನಿಕ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಐಎಎಸ್ ಅಧಿಕಾರಿ ಅಂತ ಹೇಳ್ಕೊಂಡು ದೇಶ್ಯಾದ್ಯಂತ 20ಕ್ಕೂ ಅಧಿಕ ಮಹಿಳೆಯರಿಗೆ ವಂಚನೆ

    ಒಟ್ಟಾರೆ, ದರ ಏರಿಕೆಯ ಭಾರವನ್ನು ಹೊರಲಾರದೇ ಜನ ಹೈರಾಣಾಗಿದ್ದಾರೆ. ಅದರ ಮಧ್ಯೆ ದಿನಕ್ಕೊಂದು ದರ ಏರಿಕೆ ಬಿಸಿಗೆ ಜನ ಹಿಡಿಶಾಪ ಹಾಕುವ ಪರಿಸ್ಥಿತಿ ಉದ್ಭವವಾಗಿದೆ. ಇದನ್ನೂ ಓದಿ: ಚಾಮರಾಜನಗರ| ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ – 18 ಅಡಿ ಉದ್ದದ ಸರಳಲ್ಲಿ ಬಾಯಿ ಬೀಗ

  • ಬೆಂಗಳೂರಿನಲ್ಲಿ ಇನ್ಮುಂದೆ ಕಸಕ್ಕೂ ಶುಲ್ಕ – ತಿಂಗಳಿಗೆ ವಸತಿ, ವಾಣಿಜ್ಯ ಕಟ್ಟಡಗಳಿಗೆ ಎಷ್ಟು?

    ಬೆಂಗಳೂರಿನಲ್ಲಿ ಇನ್ಮುಂದೆ ಕಸಕ್ಕೂ ಶುಲ್ಕ – ತಿಂಗಳಿಗೆ ವಸತಿ, ವಾಣಿಜ್ಯ ಕಟ್ಟಡಗಳಿಗೆ ಎಷ್ಟು?

    ಬೆಂಗಳೂರು: ದರ ಏರಿಕೆಯಿಂದ ತತ್ತರಿಸಿರುವ ಬೆಂಗಳೂರು ಮಂದಿಗೆ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಮನೆಮನೆಯಿಂದ ಸಂಗ್ರಹಿಸುವ ತ್ಯಾಜ್ಯಕ್ಕೆ (Garbage) ಏಪ್ರಿಲ್ 1ರಿಂದ ಸೇವಾ ಶುಲ್ಕ (Service Charge) ವಿಧಿಸಲು ಸರ್ಕಾರ ಮುಂದಾಗಿದೆ.

    ಕಳೆದ ಐದಾರು ವರ್ಷದಿಂದ ಬೆಂಗಳೂರಲ್ಲಿ ಘನತ್ಯಾಜ್ಯ ಸೇವಾ ಶುಲ್ಕ ವಿಧಿಸುವ ಸಂಬಂಧ ಚರ್ಚೆ ನಡೆಯುತ್ತಿತ್ತು. ಈಗ ಕಾರ್ಯರೂಪಕ್ಕೆ ತರಲು ಬಿಬಿಎಂಪಿ (BBMP) ಮುಂದಾಗಿದೆ.

    ಆರು ತಿಂಗಳಿಗೊಮ್ಮೆ ಆಸ್ತಿ ತೆರಿಗೆ ಜೊತೆ ಈ ಸೇವಾ ಶುಲ್ಕ ಸಂಗ್ರಹಿಸಲಾಗುತ್ತದೆ. ವಾರ್ಷಿಕ 800 ಕೋಟಿ ಸಂಗ್ರಹದ ಗುರಿಯನ್ನು ಸರ್ಕಾರ ಹೊಂದಿದೆ.

    ಈ ವಿಚಾರದ ಬಗ್ಗೆ ಮಾಧ್ಯಮಗಳಿಗೆ ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ಪ್ರತಿಕ್ರಿಯಿಸಿ, ಇದು ತೆರಿಗೆ (Tax) ಅಲ್ಲ. ಇದು ಸರ್ವಿಸ್ ಚಾರ್ಜ್ ಆಗಿದ್ದು, ಪ್ರಾಪಾರ್ಟಿ ಟ್ಯಾಕ್ಸ್ ಜೊತೆಗೆ ವರ್ಷಕ್ಕೆ ಎರಡು ಬಾರಿ ಹಣ ಕಟ್ಟಬಹುದು ಎಂದು ತಿಳಿಸಿದರು.

    ವಸತಿ ಕಟ್ಟಡಗಳಿಗೆ (ಮಾಸಿಕ)
    * 600 ಚದರಡಿವರೆಗೆ – 10 ರೂ.
    * 601-1000 ಚದರಡಿ – 50 ರೂ.
    * 1001-2000 ಚದರಡಿ – 100 ರೂ.
    * 2001-3000 ಚದರಡಿ – 150 ರೂ.
    * 3001-4000 ಚದರಡಿ – 200 ರೂ.
    * 4000 ಚದರಡಿ ಮೇಲ್ಪಟ್ಟು – 400 ರೂ.
    * ನಿವೇಶನ ಪ್ರತಿ ಚದರಡಿಗೆ – 20 ಪೈಸೆ

    ವಾಣಿಜ್ಯ ಕಟ್ಟಡಗಳಿಗೆ (ಮಾಸಿಕ)
    * ನಿತ್ಯ 5 ಕೆಜಿವರೆಗೆ – 500 ರೂ.
    * ನಿತ್ಯ 10 ಕೆಜಿವರೆಗೆ – 1400 ರೂ.
    * ನಿತ್ಯ 25 ಕೆಜಿವರೆಗೆ – 3500 ರೂ.
    * ನಿತ್ಯ 50 ಕೆಜಿವರೆಗೆ – 7000 ರೂ.
    * ನಿತ್ಯ 100 ಕೆಜಿವರೆಗೆ – 14000 ರೂ.

     

  • ಬೆಂಗಳೂರಿನಲ್ಲಿ ಇನ್ನು ಮುಂದೆ ಕಸಕ್ಕೂ ಸರ್ವಿಸ್‌ ಚಾರ್ಜ್‌ – ಏ.1 ರಿಂದ ಜಾರಿ

    ಬೆಂಗಳೂರಿನಲ್ಲಿ ಇನ್ನು ಮುಂದೆ ಕಸಕ್ಕೂ ಸರ್ವಿಸ್‌ ಚಾರ್ಜ್‌ – ಏ.1 ರಿಂದ ಜಾರಿ

    ಬೆಂಗಳೂರು: ಇನ್ನು ಮುಂದೆ ಬೆಂಗಳೂರಿನಲ್ಲಿ (Bengaluru) ಕಸಕ್ಕೂ (Garbage) ಸೇವಾ ಶುಲ್ಕ ಪಾವತಿಸಬೇಕು. ಇದೇ ಏಪ್ರಿಲ್‌ 1 ರಿಂದ ಇದು ಜಾರಿಗೆ ಬರಲಿದೆ ಎಂದು ಬಿಬಿಎಂಪಿ (BBMP) ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದ್ದಾರೆ.

    ಈ ವಿಚಾರದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಇದು ತೆರಿಗೆ (Tax) ಅಲ್ಲ.  ಇದು ಸರ್ವಿಸ್ ಚಾರ್ಜ್ ಆಗಿದ್ದು,  ಪ್ರಾಪಾರ್ಟಿ ಟ್ಯಾಕ್ಸ್ ಜೊತೆಗೆ ವರ್ಷಕ್ಕೆ ಎರಡು ಬಾರಿ ಹಣ ಕಟ್ಟಬಹುದು ಎಂದು ತಿಳಿಸಿದರು.

    ವಿದ್ಯುತ್‌ ಬಿಲ್‌ ರೀತಿ ಪ್ರತಿ ಮನೆ ಮನೆಗೆ ಹೋಗಿ ಸಂಗ್ರಹಿಸಲು ಸಾಧ್ಯವಿಲ್ಲ. ಹೀಗಾಗಿ ಸರ್ವಿಸ್‌ ಚಾರ್ಜ್‌ ಹಾಕಲಾಗುತ್ತದೆ ಎಂದು ವಿವರಿಸಿದರು.

    ನಗರದಲ್ಲಿ ಕಸ ವಿಲೇವಾರಿಯಾಗದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಕಸ ವಿಲೇವಾರಿ ಒಂದು ದಿನ ಸ್ಥಗಿತವಾಗಿದೆ, ರಾತ್ರಿಯಿಡಿ ಅನ್ ಲೋಡ್ ಮಾಡಲಾಗುತ್ತಿದೆ. ಅವರನ್ನು ಮನವೊಲಿಸಲು ಯಶಸ್ವಿಯಾಗಿದ್ದು ರಾತ್ರಿ ವೇಳೆ ಕಸ ವಿಲೇವಾರಿ ಆಗಲಿದೆ ಎಂದು ತಿಳಿಸಿದರು.

  • ರಸ್ತೆಯಲ್ಲಿ ಕಸ ಎಸೆದ್ರೆ ನಿಮ್ಮ ಮನೆಗೆ ಬಂದು ದಂಡ ಹಾಕ್ತಾರೆ ಬಿಬಿಎಂಪಿ ಸಿಬ್ಬಂದಿ!

    ರಸ್ತೆಯಲ್ಲಿ ಕಸ ಎಸೆದ್ರೆ ನಿಮ್ಮ ಮನೆಗೆ ಬಂದು ದಂಡ ಹಾಕ್ತಾರೆ ಬಿಬಿಎಂಪಿ ಸಿಬ್ಬಂದಿ!

    ಬೆಂಗಳೂರು: ನಗರದ ರಸ್ತೆಗಳಲ್ಲಿ ಕಸ (Garbage) ಎಸೆದರೆ ಇನ್ನು ಮುಂದೆ ನಿಮ್ಮ ಮನೆಗೆ ಬಂದು ಬಿಬಿಎಂಪಿ (BBMP) ಸಿಬ್ಬಂದಿ ದಂಡ ವಿಧಿಸುತ್ತಾರೆ.

    ಹೊಸಕೆರೆಹಳ್ಳಿಯಲ್ಲಿ ಸರವಣ ಎಂಬವರು ರಸ್ತೆ ಬದಿ ಕಸ ಎಸೆದು ಹೋಗಿದ್ದರು. ಕಸ ಎಸೆದು ಹೋಗುತ್ತಿರುವ ದೃಶ್ಯ ಸಮಿಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

    ಈ ದೃಶ್ಯದ ಆಧಾರದ ಮೇಲೆ ಬಿಬಿಎಂಪಿ ಹೆಲ್ತ್‌ ಸೂಪರ್‌ವೈಸರ್‌ ಲೋಕೇಶ್‌ ಅವರು ಸರವಣ ಮನೆಗೆ ತೆರಳಿ 100 ರೂ. ದಂಡ ವಿಧಿಸಿದ್ದಾರೆ.

  • ಮನೆ ಮನೆಗಳಿಂದ ಕಸ ಸಂಗ್ರಹಕ್ಕೆ ಶುಲ್ಕ ವಸೂಲಿ – ರಾಜ್ಯ ಸರ್ಕಾರಕ್ಕೆ ಬಿಬಿಎಂಪಿಯಿಂದ ಪ್ರಸ್ತಾವನೆ

    ಮನೆ ಮನೆಗಳಿಂದ ಕಸ ಸಂಗ್ರಹಕ್ಕೆ ಶುಲ್ಕ ವಸೂಲಿ – ರಾಜ್ಯ ಸರ್ಕಾರಕ್ಕೆ ಬಿಬಿಎಂಪಿಯಿಂದ ಪ್ರಸ್ತಾವನೆ

    ಬೆಂಗಳೂರು: ಮನೆ ಮನೆಯಿಂದ ಕಸ ಸಂಗ್ರಹಿಸಲು ಶುಲ್ಕ ವಸೂಲಿಗೆ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿದೆ. 46 ಲಕ್ಷ ಮನೆಗಳಿಂದ 2025 ರಿಂದ ಶುಲ್ಕ ವಸೂಲಿ ಆರಂಭಿಸಲು ಚಿಂತನೆ ನಡೆಸಿದೆ.

    ಬೆಂಗಳೂರು ಘನತ್ಯಾಜ್ಯ ನಿರ್ವಹಣೆಯಿಂದ ಪ್ರಸ್ತಾವನೆ ಸಲ್ಲಿಕೆಯಾಗಿದೆ. 2025 – 06ನೇ ಆರ್ಥಿಕ ವರ್ಷದಿಂದ ಈ ಮಾದರಿಯ ಶುಲ್ಕ ವಸೂಲಾತಿಗೆ ಬಿಬಿಎಂಪಿಯಿಂದ ಪ್ರಸ್ತಾವನೆ ಹೋಗಿದ್ದು, ಸರ್ಕಾರ ಒಪ್ಪಿಗೆ ನೀಡಿಲ್ಲ. ಇದನ್ನೂ ಓದಿ: ಅನ್ನಭಾಗ್ಯ ಫಲಾನುಭವಿಗಳಿಗೆ ಸರ್ಕಾರ ಶಾಕ್ – ಕಳೆದೆರಡು ತಿಂಗಳಿಂದ ಸಿಕ್ಕಿಲ್ಲ ಅಕ್ಕಿ ದುಡ್ಡು

    46 ಲಕ್ಷ ಮನೆಗಳಿಂದ ಪ್ರತಿ ತಿಂಗಳು 200 ರಿಂದ 400 ರೂಪಾಯಿ ಶುಲ್ಕ ನಿಗದಿ ಮಾಡುವ ಪ್ರಸ್ತಾವನೆ ಇದಾಗಿದೆ. ಆಸ್ತಿ ತೆರಿಗೆ ಜೊತೆಗೆ ಕಸದ ಶುಲ್ಕವನ್ನ ಸಂಗ್ರಹ ಮಾಡೋದರ ಬಗ್ಗೆ ಬಿಬಿಎಂಪಿ ಚಿಂತನೆ ನಡೆಸಿದೆ. ಈಗಾಗಲೇ ತ್ಯಾಜ್ಯ ವಿಲೇವಾರಿಗೆ ಬಿಬಿಎಂಪಿ ಟೆಂಡರ್ ಕರೆದಿದೆ. ತ್ಯಾಜ್ಯ ವಿಲೇವಾರಿಯಲ್ಲಿ ಹೊಸ ವ್ಯವಸ್ಥೆ ಜಾರಿಗೆ ತರುವ ಸಂಬಂಧ ಬೆಂಗಳೂರು ಘನ ತ್ಯಾಜ್ಯ ನಿರ್ವಹಣಾ ನಿಗಮ ಟೆಂಡರ್ ಕರೆದಿದೆ.

    ಮನೆ ಮನೆಯಿಂದ ಕಸ ಸಂಗ್ರಹ, ದ್ವಿತೀಯ ಹಂತದ ವರ್ಗಾವಣೆ ಕೇಂದ್ರಗಳಿಗೆ ಸಾಗಣೆ, ಈ ಕೇಂದ್ರಗಳಿಂದ ಸಂಸ್ಕರಣ ಘಟಕಗಳಿಗೆ ದ್ವಿತೀಯ ಹಂತದ ಸಾಗಣೆ ಒಳಗೊಂಡ ಪ್ಯಾಕೇಜ್ ಇದಾಗಿದೆ. ಪ್ರತಿ ಮನೆಯಿಂದ ಕಸ ಸಂಗ್ರಹದ ಶುಲ್ಕ ವಸೂಲಿ ಮಾಡುವುದರಿಂದ ಬ್ಲಾಕ್ ಸ್ಪಾಟ್‌ಗಳ ಸಂಖ್ಯೆ ಇಳಿಮುಖ ಆಗಲಿದೆ ಎನ್ನಲಾಗಿದೆ. ಇದನ್ನೂ ಓದಿ: ಸುಪ್ರೀಂ ಕೋರ್ಟ್​ನಲ್ಲೂ ಪ್ರಜ್ವಲ್‌ ರೇವಣ್ಣಗೆ ಸಿಗಲಿಲ್ಲ ಜಾಮೀನು!

  • ರಾಜ್ಯಕ್ಕೆ ಎಂಟ್ರಿಯಾಗ್ತಿದೆ ಕೇರಳ ತ್ಯಾಜ್ಯ – ವಾಹನಗಳನ್ನು ಹಿಡಿದ ಗಡಿಜಿಲ್ಲೆಯ ಜನರು

    ರಾಜ್ಯಕ್ಕೆ ಎಂಟ್ರಿಯಾಗ್ತಿದೆ ಕೇರಳ ತ್ಯಾಜ್ಯ – ವಾಹನಗಳನ್ನು ಹಿಡಿದ ಗಡಿಜಿಲ್ಲೆಯ ಜನರು

    -ತ್ಯಾಜ್ಯ ಹೊತ್ತು ತಂದ ಐದು ಲಾರಿ ಸೀಜ್, ಐವರ ವಿರುದ್ಧ ಎಫ್‌ಐಆರ್

    ಚಾಮರಾಜನಗರ: ಗಡಿಜಿಲ್ಲೆ ಚಾಮರಾಜನಗರಕ್ಕೆ (Chamarajangar) ಮತ್ತೇ ಮತ್ತೇ ಕೇರಳದಿಂದ ಕಸ ಬರುತ್ತಿದೆ. ಜಿಲ್ಲೆಯ ಗುಂಡ್ಲುಪೇಟೆ ಕೇರಳದ ತ್ಯಾಜ್ಯ ಸುರಿಯುವ ಕಸದ ತೊಟ್ಟಿಯಾಗಿದೆ.

    ಕೇರಳಿಗರು ತಮ್ಮ ರಾಜ್ಯದಿಂದ ನಾನಾ ರೀತೀಯ ತ್ಯಾಜ್ಯವನ್ನು ಗುಂಡ್ಲುಪೇಟೆ ತಾಲೂಕಿನ ನಿರ್ಜನ ಪ್ರದೇಶಗಳಲ್ಲಿ ಸುರಿದು ಹೋಗುತ್ತಿದ್ದು, ಜಿಲ್ಲಾಡಳಿತ ಮೌನವಹಿಸಿದೆ. ಹೀಗೆ ನಿತ್ಯ ಇಲ್ಲಿಗೆ ಬಂದು ತ್ಯಾಜ್ಯ ಸುರಿದು ಹೋಗುತ್ತಿರುವುದರಿಂದ ಪರಿಸರ ಮಾಲಿನ್ಯ ಉಂಟಾಗಿ ರೋಗರುಜಿನಗಳು ಹರಡುವ ಆತಂಕ ಎದುರಾಗಿದೆ.ಇದನ್ನೂ ಓದಿ: ಎಡನೀರು ಮಠದ ಶ್ರೀಗಳ ಕಾರಿನ ಮೇಲೆ ಅನ್ಯ ಕೋಮಿನ ಯುವಕರಿಂದ ದಾಳಿ

    ರಾಷ್ಟ್ರೀಯ ಹೆದ್ದಾರಿ 766ರ ಮೂಲಕ ಕೇರಳದಿಂದ ಮೆಡಿಕಲ್ ವೇಸ್ಟ್, ಚಪ್ಪಲಿ, ಮಾಂಸ, ಕೊಳೆತ ತರಕಾರಿ, ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯ ತಂದು ಗಡಿಭಾಗದ ನಿರ್ಜನ ಪ್ರದೇಶಗಳಲ್ಲಿ ಸುರಿದು ಹೋಗುವುದು ಅಥವಾ ಗುಂಡ್ಲುಪೇಟೆ ಮೂಲಕ ಬೇರೆ ಜಿಲ್ಲೆಗಳಿಗೆ ಸಾಗಣೆ ಮಾಡುವುದು ನಿರಂತರವಾಗಿ ನಡೆಯುತ್ತಲೇ ಇದೆ. ಇಷ್ಟೆಲ್ಲಾ ಆಗುತ್ತಿದ್ದರೂ ಕರ್ನಾಟಕ ಗಡಿಭಾಗದ ಚೆಕ್‌ಪೋಸ್ಟ್ನಲ್ಲಿ ಯಾವುದೇ ತಪಾಸಣೆ ನಡೆಯದೆ ಕೇವಲ ಗ್ರೀನ್ ಟ್ಯಾಕ್ಸ್ ವಸೂಲಿಗಷ್ಟೇ ಸೀಮಿತವಾಗಿದೆ.

    ನೆರೆಯ ಕೇರಳಿಗರು ಎಗ್ಗಿಲ್ಲದೇ ಚೆಕ್‌ಪೋಸ್ಟ್ ದಾಟಿ ಲಾರಿ ಮತ್ತು ಟೆಂಪೋಗಳಲ್ಲಿ ಕರ್ನಾಟಕಕ್ಕೆ ಕಸ ಸಾಗಣೆ ಮಾಡುತ್ತಿದ್ದಾರೆ. ಚೆಕ್‌ಪೋಸ್ಟ್ನಲ್ಲಿರುವ ಪೊಲೀಸ್ ಹಾಗು ಅರಣ್ಯ ಇಲಾಖೆ ಸಿಬ್ಬಂದಿ ಇದರಲ್ಲಿ ಶಾಮೀಲಾಗಿದ್ದಾರೆ ಎಂಬ ಗಂಭೀರ ಆರೋಪವು ಇದೆ.

    ಇನ್ನೂ ಕೇರಳದಿಂದ ಕರ್ನಾಟಕಕ್ಕೆ ಕಸ ನಿರಂತರವಾಗಿ ಸಾಗಣೆಯಾಗುತ್ತಿದ್ದರೂ ಕೂಡ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ. ಇದರಿಂದ ಬೇಸತ್ತ ಕನ್ನಡಪರ ಸಂಘಟನೆಗಳು ಕೇರಳದಿಂದ ತ್ಯಾಜ್ಯ ತುಂಬಿಕೊಂಡು ಬಂದ 5 ಲಾರಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಕೇರಳದ ಐವರು ಲಾರಿ ಚಾಲಕರ ವಿರುದ್ಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.

    ಚೆಕ್‌ಪೋಸ್ಟ್ನಲ್ಲಿ ವಾಹನಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸುವ ಕೆಲಸಕ್ಕೆ ಅರಣ್ಯ ಇಲಾಖೆ ಹಾಗು ಪೊಲೀಸ್ ಇಲಾಖೆ ಮುಂದಾಗಬೇಕಿದೆ. ಇದರ ಜೊತೆಗೆ ಕೇರಳ ಸರ್ಕಾರದೊಂದಿಗೆ ರಾಜ್ಯ ಸರ್ಕಾರ ಮಾತುಕತೆ ನಡೆಸಿ ತ್ಯಾಜ್ಯ ಸಾಗಾಣಿಕೆಗೆ ಕಡಿವಾಣ ಹಾಕಬೇಕಿದೆ.ಇದನ್ನೂ ಓದಿ: ಅಥಣಿ | ಅಂತರರಾಜ್ಯ ಕಳ್ಳರ ಸೆರೆ : 40 ಲಕ್ಷ ರೂ. ಚಿನ್ನಾಭರಣ ವಶಕ್ಕೆ

  • ಅಶರೀರವಾಣಿಯ ಭಯ, ತಂಗಿಗೆ ಸೆರೆವಾಸ – ಕೃಷ್ಣ ಹುಟ್ಟಿದಾಗ ಏನಾಯ್ತು?

    ಅಶರೀರವಾಣಿಯ ಭಯ, ತಂಗಿಗೆ ಸೆರೆವಾಸ – ಕೃಷ್ಣ ಹುಟ್ಟಿದಾಗ ಏನಾಯ್ತು?

    ಶರೀರವಾಣಿಯ ಭಯ, 6 ಮಕ್ಕಳ ಹತ್ಯೆ, ತಂಗಿಗೆ ಸೆರೆವಾಸ, ಕೊನೆಗೆ ಕೃಷ್ಣನಿಂದ (Krishna) ಹತ್ಯೆ. ಪುರಾಣದಲ್ಲಿ ಕೃಷ್ಣ ಮತ್ತು ಕಂಸನ (Kamsa) ಕಥೆ ಬಹಳ ರೋಚಕ. ಹುಟ್ಟುವ ಮೊದಲೇ ಸಾಯಿಸಲು ಮುಂದಾಗಿದ್ದ ಕಂಸ ಕೃಷ್ಣ ಹುಟ್ಟಿದ ನಂತರವೂ ಸಾಕಷ್ಟು ಕಾಟ ಕೊಡುತ್ತಾನೆ. ಕೊನೆಗೆ ವಿಧಿ ಲಿಖಿತದಂತೆ ಕೃಷ್ಣನಿಂದಲೇ ಸಾವನ್ನಪ್ಪುತ್ತಾನೆ.

    ಮಥುರೆಯ ರಾಜನಾದ ಕಂಸ, ತನ್ನ ತಂಗಿ ದೇವಕಿಯಯನ್ನು (Devaki) ವಸುದೇವನಿಗೆ ಕೊಟ್ಟು ಮದುವೆ ಮಾಡಿಸುತ್ತಾನೆ. ವಿವಾಹದ ಅನಂತರ ಮೆರವಣಿಗೆಯಲ್ಲಿ ಸಾಗುತ್ತಿರುವ ಸಂದರ್ಭದಲ್ಲಿ,”ದೇವಕಿಯ 8ನೇ ಮಗನಿಂದ ನಿನಗೆ ಮರಣ ಬರಲಿದೆ” ಎಂಬ ಅಶರೀರವಾಣಿಯೊಂದು ಕೇಳಿಸುತ್ತದೆ. ಅಶರೀರವಾಣಿ ಕೇಳಿ ಭಯಗೊಂಡ ಕಂಸ ತಂಗಿ, ಬಾವರನ್ನೇ ಕೊಲ್ಲಲು ಮುಂದಾಗುತ್ತಾನೆ. ಈ ವೇಳೆ ಪ್ರಾಣ ಭಿಕ್ಷೆ ಕೇಳಿದ ದಂಪತಿ, ಇದು ನ್ಯಾಯಸಮ್ಮತವಲ್ಲ, 8ನೇ ಮಗು ಹುಟ್ಟಿದ ಮೇಲೆ ಅದನ್ನು ನಿನಗೆ ತಂದುಕೊಡುತ್ತೇವೆ ಎಂದು ಹೇಳುತ್ತಾರೆ.

    ದೇವಕಿಯ ಮಕ್ಕಳಿಂದಲೇ ಮೃತ್ಯು ಎಂದು ತಿಳಿದು ದೇವಕಿ ಮತ್ತು ವಸುದೇವನನ್ನ (Vasdeva) ಅರಮನೆಯ ಸೆರೆಮನೆಯಲ್ಲಿ (Jail) ಇರಿಸುತ್ತಾನೆ. ದೇವಕಿ 6 ಮಕ್ಕಳನ್ನು ಹೆತ್ತರೂ ಕಂಸ ಆ ಮಕ್ಕಳನ್ನು ಬೆಳೆಸುತ್ತಿರುತ್ತಾನೆ. ಈ ವೇಳೆ ನಾರದರು ಬಂದು ಮುಂದೆ ಈ ಮಕ್ಕಳು ಹುಟ್ಟುವ 8ನೇ ಮಗುವಿನೊಂದಿಗೆ ಸೇರಿ ನಿನ್ನನ್ನು ಕೊಲ್ಲಲು ಮುಂದಾದರೆ ಏನು ಮಾಡುತ್ತೀಯಾ ಎಂದು ಕೇಳುತ್ತಾರೆ. ಇದರಿಂದ ಭಯಗೊಂಡು ಕಂಸ ಆ 6 ಮಂದಿ ಮಕ್ಕಳನ್ನು ಹತ್ಯೆ ಮಾಡುತ್ತಾನೆ. ಇದನ್ನೂ ಓದಿ: ಕೃಷ್ಣ ಜನ್ಮಾಷ್ಟಮಿ: ಬಾಲಕೃಷ್ಣ, ಲೋಲ, ಮುರಳಿ ಕೊಳಲ ಲೀಲ- ಎಲ್ಲೆಲ್ಲೂ ಭಗವಾನ್ ಶ್ರೀಕೃಷ್ಣ ಜಪ

    ಕಂಸನ ಕೃತ್ಯದಿಂದ ದು:ಖಿತಳಾದ ದೇವಕಿ 7ನೇ ಬಾರಿ ಗರ್ಭ ಧರಿಸುತ್ತಾಳೆ. ಈ ಬಾರಿ ದೇವಕಿ ಮತ್ತು ವಸುದೇವ ವಿಷ್ಣುವಿನ ಮೊರೆ ಹೋಗುತ್ತಾರೆ. ಈ ವೇಳೆ ವಿಷ್ಣು ಯೋಗಮಾಯೆ ಶಕ್ತಿ ಬಳಸಿ ದೇವಕಿ ಗರ್ಭದಲ್ಲಿನ ಪಿಂಡವನ್ನು ತೆಗೆದು ರೋಹಿಣಿಯ ಸ್ತ್ರೀ ಗರ್ಭದಲ್ಲಿ ಇರಿಸುತ್ತಾನೆ. ರೋಹಿಣಿ ಹೊಟ್ಟೆಯಲ್ಲಿ ಹುಟ್ಟುವ ಮಗುವೇ ಬಲರಾಮ. 7ನೇ ಮಗು ಹುಟ್ಟದ್ದನ್ನು ಕಂಡು ದೇವಕಿಗೆ ಗರ್ಭಪಾತವಾಯಿತು ಎಂದು ಕಂಸ ಅಂದುಕೊಳ್ಳುತ್ತಾನೆ.

    ದೇವಕಿ 8ನೇ ಮಗುವಿಗೆ ಗರ್ಭವತಿಯಾಗುತ್ತಿದ್ದಂತೆಯೇ ಕಾರಾಗೃಹದ ಸುತ್ತಾ ಸೈನಿಕರನ್ನು ನಿಯೋಜಿಸಿದ. ಬಹಳ ಎಚ್ಚರವಾಗಿರಬೇಕೆಂದು ತನ್ನ ಸೈನಿಕರಿಗೆ ಸೂಚಿಸಿದ್ದ. ಹೇಗೂ 8ನೇ ಮಗುವನ್ನು ಕಂಸ ಸಾಯಿಸುತ್ತಾನೆ. ಅದರ ಬದಲು ನಾನೇ ಮಗುವನ್ನು ಸಾಯಿಸುತ್ತೇನೆ ಎಂದು ದೇವಕಿ ಹೊಟ್ಟೆಗೆ ಬಡಿಯಲು ಆರಂಭಿಸುತ್ತಾಳೆ. ಈ ವೇಳೆ ವಿಷ್ಣು ದೇವರು ಪ್ರತ್ಯಕ್ಷವಾಗಿ, ನಾನು ನಿನ್ನ ಹೊಟ್ಟೆಯಲ್ಲಿ 8ನೇ ಮಗುವಾಗಿ ಜನಿಸಬೇಕೆಂದುಕೊಂಡಿದ್ದೇನೆ ಎಂದು ಹೇಳುತ್ತಾನೆ.

    ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿಯ ದಿನದ ರಾತ್ರಿ ದೇವಕಿಗೆ ಜೋರಾಗಿ ಹೆರಿಗೆ ನೋವು ಪ್ರಾರಂಭವಾಗುತ್ತದೆ. ಮಧ್ಯರಾತ್ರಿ ಮಗು ಜನಿಸುತ್ತದೆ. ಮಗು ಜನಿಸುತ್ತಿದ್ದಂತೆ ಜೈಲಿನಲ್ಲಿ ಕಾವಲು ಕಾಯುತ್ತಿದ್ದ ಸೈನಿಕರು ನಿದ್ದೆಗೆ ಜಾರುತ್ತಾರೆ. ಸೆರೆಮನೆಯ ಬಾಗಿಲುಗಳು ತಾನಾಗಿಯೇ ತೆರೆಯುತ್ತದೆ. ಈ ಸಂದರ್ಭದಲ್ಲಿ ವಸುದೇವನ ಕನಸಿನಲ್ಲಿ ವಿಷ್ಣು ಬರುತ್ತಾನೆ. ನಿನಗೆ ಹುಟ್ಟಿದ 8ನೇ ಮಗುವನ್ನು ಗೋಕುಲದಲ್ಲಿರುವ ನಂದ ಮತ್ತು ಯಶೋಧೆಗೆ ನೀಡಬೇಕು. ಅವರಿಗೆ ಹುಟ್ಟಿದ ಹೆಣ್ಣು ಮಗುವನ್ನು ನೀನು ಪಡೆಯಬೇಕು ಎಂದು ಹೇಳುತ್ತಾನೆ. ಇದನ್ನೂ ಓದಿ: ಕೃಷ್ಣ ಜನ್ಮಾಷ್ಟಮಿ 2024: ಕೃಷ್ಣ ಜನ್ಮಭೂಮಿ ಮಥುರಾ ಅಂಗಳದ ಪ್ರಮುಖ ಕೃಷ್ಣ ಮಂದಿರಗಳು

    ವಿಷ್ಣುವಿನ ಆದೇಶದಂತೆ ವಸುದೇವನು ತಲೆಮೇಲೆ ಬುಟ್ಟಿಯಲ್ಲಿ ಮಗುವನ್ನು ಹೊತ್ತು ರಾತ್ರಿ ಹೊರಡುತ್ತಾನೆ. ಅಂದು ರಾತ್ರಿ ಭಾರೀ ಮಳೆ ಸುರಿದಿದ್ದರಿಂದ ಯುಮುನಾ ನದಿ ಉಕ್ಕಿ ಹರಿಯುತ್ತಿರುತ್ತಾಳೆ. ನದಿಯಲ್ಲಿ ತಲೆಯವರೆಗೂ ನೀರು ಬಂದರೂ ವಸುದೇವ ಮಗುವನ್ನು ಎತ್ತಿಕೊಂಡು ನಡೆಯುತ್ತಿದ್ದನು. ಈ ವೇಳೆ ಒಂದು ಪವಾಡವೇ ನಡೆಯಿತು. ಯಮುನಾ ಎರಡು ಭಾಗವಾಗಿ ಮಧ್ಯಬಾಗದಲ್ಲಿ ಅವರಿಗೆ ದಾರಿ ಮಾಡಿಕೊಟ್ಟಿತು. ಗೋಕುಲವನ್ನು ತಲುಪಿದ ವಸುದೇವನು ಯಶೋಧೆಯ ಮಡಿಲಲ್ಲಿ ತನ್ನ ಮಗುವನ್ನು ಮಲಗಿಸಿ ಅಲ್ಲಿ ಯಶೋಧೆಗೆ ಆಗ ತಾನೇ ಜನಿಸಿದ ಹೆಣ್ಣು ಮಗುವಿನೊಂದಿಗೆ ಮಥುರೆಗೆ ಮರಳುತ್ತಾನೆ.

    ದೇವಕಿ 8ನೇ ಮಗುವಿಗೆ ಜನ್ಮ ನೀಡಿದ್ದನ್ನು ಕೇಳಿ ಆಮಗುವನ್ನು ಕೊಲ್ಲಲು ಮುಂದಾಗುತ್ತಾನೆ. ಈ ವೇಳೆ ಆ ಹಣ್ಣು ಮಗು ಆಕಾಶಕ್ಕೆ ಹಾರಿ ನಿನ್ನನ್ನು ಹತ್ಯೆ ಮಾಡಲಿರುವ ಮಗು ಬೇರೆ ಕಡೆ ಬೆಳೆಯುತ್ತಿದೆ ಎಂದು ಹೇಳಿ ಮಾಯವಾಗುತ್ತದೆ. ಕೃಷ್ಣ ಗೋಕುಲದಲ್ಲಿ ಬೆಳೆಯುತ್ತಿದ್ದಾನೆ ಎಂದು ತಿಳಿದು ಕಂಸ ನಾನಾ ರಾಕ್ಷಸರನ್ನು ಕಳುಹಿಸುತ್ತಾನೆ. ಕೃಷ್ಣ ಆ ರಾಕ್ಷಸರನ್ನು ಕೊಂದು ಕೊನೆಗೆ ಕಂಸನನ್ನು ಬಾಲ್ಯದಲ್ಲೇ ಕೊಲ್ಲುತ್ತಾನೆ.

     

  • ಬೆಂಗ್ಳೂರಲ್ಲಿ ಕಸ ತೆಗೆಯಲು 30 ವರ್ಷಕ್ಕೆ ಗುತ್ತಿಗೆ – 45 ಸಾವಿರ ಕೋಟಿ ಟೆಂಡರ್‌ನಲ್ಲಿ 15 ಸಾವಿರ ಕೋಟಿ ಕಿಕ್‌ ಬ್ಯಾಕ್‌: ಹೆಚ್‌ಡಿಕೆ ಬಾಂಬ್‌

    ಬೆಂಗ್ಳೂರಲ್ಲಿ ಕಸ ತೆಗೆಯಲು 30 ವರ್ಷಕ್ಕೆ ಗುತ್ತಿಗೆ – 45 ಸಾವಿರ ಕೋಟಿ ಟೆಂಡರ್‌ನಲ್ಲಿ 15 ಸಾವಿರ ಕೋಟಿ ಕಿಕ್‌ ಬ್ಯಾಕ್‌: ಹೆಚ್‌ಡಿಕೆ ಬಾಂಬ್‌

    ಮಂಡ್ಯ: ಬೆಂಗಳೂರಿನಲ್ಲಿ ಕಸ ತೆಗೆಯಲು ಬ್ಲಾಕ್‌ ಲಿಸ್ಟ್‌ನಲ್ಲಿ ಇರುವ ಗುತ್ತಿಗೆದಾರನಿಗೆ ಸಚಿವರೊಬ್ಬರು ಟೆಂಡರ್ (Garbage Tender) ಕೊಟ್ಟಿದ್ದಾರೆ. 30 ವರ್ಷಕ್ಕೆ ಲೀಸ್‌ಗೆ (ಬೋಗ್ಯ) ಕೊಟ್ಟಿದ್ದಾರೆ. 45 ಸಾವಿರ ಕೋಟಿ ರೂ.ಗೆ ಟೆಂಡರ್‌ ಕೊಟ್ಟು, 15 ಸಾವಿರ ಕೋಟಿ ರೂ. ಕಿಕ್ ಬ್ಯಾಕ್ ಪಡೆಯಲು ಪೆನ್ನು ಪೇಪರ್ ಪಡೆದವರು ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹೊಸ ಬಾಂಬ್‌ ಸಿಡಿಸಿದ್ದಾರೆ.

    ಮಂಡ್ಯದ (Mandya) ಪಾಂಡವಪುರ ಪಟ್ಟಣದಲ್ಲಿ ತಮಗೆ ನಡೆದ ಅಭಿನಂದನಾ ಹಾಗೂ ಕೃತಜ್ಞತಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕಸ ಎತ್ತಲು ಬ್ಲಾಕ್‌ ಲಿಸ್ಟ್‌ನಲ್ಲಿ ಇರುವ ಗುತ್ತಿಗೆದಾರನಿಗೆ ಟೆಂಡರ್ ಕೊಟ್ಟಿದ್ದಾರೆ. 30 ವರ್ಷಕ್ಕೆ ಲೀಸ್‌ಗೆ (ಬೋಗ್ಯ) ಕೊಟ್ಟಿದ್ದಾರೆ. ಅದರಲ್ಲೂ 15 ಸಾವಿರ ಕೋಟಿ ರೂ. ಕಿಕ್ ಬ್ಯಾಕ್ ತೆಗೆದುಕೊಂಡಿದ್ದಾರೆ. 45 ಸಾವಿರ ಕೋಟಿ ರೂ.ಗೆ ಟೆಂಡರ್‌ ಕೊಟ್ಟು, 15 ಸಾವಿರ ಕೋಟಿ ರೂ. ಕಿಕ್ ಬ್ಯಾಕ್ ಪಡೆಯಲು ಪೆನ್ನು ಪೇಪರ್ ಪಡೆದವರು ಮುಂದಾಗಿದ್ದಾರೆ. 30 ವರ್ಷಕ್ಕೆ ನಾವು ನೀವು ಬದುಕಿರುತ್ತೀವೋ ಇಲ್ಲವೋ ಎಂದು ಬಾಂಬ್‌ ಸಿಡಿಸಿದ್ದಾರೆ. ಇದನ್ನೂ ಓದಿ: Karnataka Assembly Session| ಟಾರ್ಗೆಟ್‌ ಸಿದ್ದರಾಮಯ್ಯ – ಪ್ರತಿಪಕ್ಷಗಳಿಗೆ ಸಿಕ್ಕಿವೆ 3 ಬ್ರಹ್ಮಾಸ್ತ್ರಗಳು

    ಪೇಪರ್ ಪೆನ್ನು ಕೇಳಿದವರಿಗೂ ಮಂಡ್ಯ ಜನ 6 ಸ್ಥಾನ ಕೊಟ್ಟರು. ಈಗ ಏನಾಗಿದೆ, ಕಿಕ್ ಬ್ಯಾಕ್ ತೆಗೆದುಕೊಳ್ಳುವುದರಲ್ಲಿ ಉಪಯೋಗ ಮಾಡ್ತಿದ್ದಾರೆ. ನೀವು ನನಗೆ ಕೊಟ್ಟ ಶಕ್ತಿ ರಾಜ್ಯದ ಅಭಿವೃದ್ಧಿಗೆ ಮುಡಿಪು. ನನಗೆ ಕಾಂಗ್ರೆಸ್ ನಾಯಕರ ಸರ್ಟಿಫಿಕೇಟ್ ಬೇಡ. ಜನರ ಋಣ ತೀರಿಸಿ ಮಣ್ಣಲ್ಲಿ ಮಣ್ಣಾಗುತ್ತೇನೆ ಎಂದು ಭಾವುಕರಾಗಿದ್ದಾರೆ. ಇದನ್ನೂ ಓದಿ: Wimbledon Champion: ಸತತ 2ನೇ ಬಾರಿಗೆ ಅಲ್ಕರಾಜ್‌ಗೆ ವಿಂಬಲ್ಡನ್‌ ಕಿರೀಟ – ಜೊಕೊವಿಕ್‌ಗೆ ಮತ್ತೆ ಸೋಲು!

    ಇದಕ್ಕೂ ಮುನ್ನ ಮಾತನಾಡಿದ ಹೆಚ್‌ಡಿಕೆ, ಅಲ್ಲದೇ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಇದು ನನ್ನ ಮನಸ್ಸಿಗೆ ಹೆಚ್ಚಿನ ನೋವುಂಟು ಮಾಡಿದೆ. ಕೇಂದ್ರ ಸಚಿವನಾದ ನಂತರ ಮಂಡ್ಯದಲ್ಲಿ ಜನತಾ ದರ್ಶನ ಮಾಡಿದೆ. ಅಂದು ಸಂದಾಯವಾದ ಅರ್ಜಿಗಳಲ್ಲಿ 400ಕ್ಕೂ ಹೆಚ್ಚು ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು. ಆರ್ಥಿಕ ನೆರವಿಗೆ ಕೋರಿ 300ಕ್ಕೂ ಹೆಚ್ಚು ಅರ್ಜಿಗಳು, ನಿರುದ್ಯೋಗ ಸಮಸ್ಯೆ ಕುರಿತ 300ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಮನೆ ಹಾಗೂ ನಿವೇಶನ ಕೋರಿದ ಅರ್ಜಿಗಳು ಬಂದಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ವರೆಗೂ ಹೋಗೋಣ – ರಾಜ್ಯ ಸರ್ಕಾರಕ್ಕೆ ಆರ್‌. ಅಶೋಕ್‌ ಬೆಂಬಲ!

    ಜನ ನೀಡಿದ ಅರ್ಜಿಗಳ ವಿಲೇವಾರಿಗೆ ಮಂಡ್ಯದಲ್ಲಿ ಡಿಸಿ ಆಗಿ ಕೆಲಸ ಮಾಡಿದ್ದ ಕೃಷ್ಣಯ್ಯ ಅವ್ರನ್ನ ವಿಶೇಷಾಧಿಕಾರಿಯಾಗಿ ನೇಮಕ ಮಾಡಿದ್ದೇನೆ. ಅವರು ನಿಮ್ಮ ಸಮಸ್ಯೆ ಆಲಿಸಿ ನನ್ನ ಗಮನಕ್ಕೆ ತರುತ್ತಾರೆ. ಪ್ರತಿ ಮಂಗಳವಾರ, ಬುಧವಾರ ಸಂಸದರ ಕಚೇರಿಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಜನರಿಗೆ ಭರವಸೆ ನೀಡಿದರು.