Tag: ಕಸಾಯಿಖಾನೆ

  • ಮಂಗಳೂರು ಸೆಂಟ್ರಲ್ ಮಾರ್ಕೆಟ್‌ನ ನೀಲನಕ್ಷೆಯಲ್ಲಿ ಬೀಫ್ ಸ್ಟಾಲ್ – ಬಿಜೆಪಿ ವಿರುದ್ಧ ಹಿಂದೂ ಸಂಘಟನೆಗಳ ಆಕ್ರೋಶ

    ಮಂಗಳೂರು ಸೆಂಟ್ರಲ್ ಮಾರ್ಕೆಟ್‌ನ ನೀಲನಕ್ಷೆಯಲ್ಲಿ ಬೀಫ್ ಸ್ಟಾಲ್ – ಬಿಜೆಪಿ ವಿರುದ್ಧ ಹಿಂದೂ ಸಂಘಟನೆಗಳ ಆಕ್ರೋಶ

    ಮಂಗಳೂರು: ವಿವಾದದ ಕೇಂದ್ರ ಬಿಂದುವಾಗಿದ್ದ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ (Mangaluru Central Market) ಮತ್ತೆ ವಿವಾದದಿಂದ ಸುದ್ದಿಯಾಗಿದೆ. ನೂತನವಾಗಿ ನಿರ್ಮಾಣ ಆಗುತ್ತಿರುವ ಮಾರುಕಟ್ಟೆಯಲ್ಲಿ ಅಧಿಕೃತ ಬೀಫ್ ಸ್ಟಾಲ್‌ಗೆ (Beef Stall) ಪಾಲಿಕೆ ಅವಕಾಶ ನೀಡಿದೆ. ಬಿಜೆಪಿ (BJP) ಆಡಳಿತ ಇರುವ ಪಾಲಿಕೆಯೇ ಈ ನಿರ್ಧಾರ ಮಾಡಿರುವುದು ಹಿಂದೂ ಸಂಘಟನೆಗಳ (Hindu Organization) ಕೆಂಗಣ್ಣಿಗೆ ಗುರಿಯಾಗಿದೆ.

    ಬ್ರಿಟಿಷರ ಕಾಲದಿಂದ ಇದ್ದ ಈ ಮಾರುಕಟ್ಟೆಯನ್ನು ನವೀಕರಣಗೊಳಿಸಲು ಕಳೆದ ವರ್ಷ ನೆಲಸಮಗೊಳಿಸಲಾಗಿತ್ತು. ಆಗಲೇ ಮಾರ್ಕೆಟ್‌ನಲ್ಲಿದ್ದ ಎಲ್ಲಾ ಅಂಗಡಿಯವರು ವಿರೋಧ ವ್ಯಕ್ತಪಡಿಸಿ ನ್ಯಾಯಾಲಯದ ಮೆಟ್ಟಿಲು ಏರಿದ್ದರು. ಇದೀಗ ಪಾಲಿಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 114 ಕೋಟಿ ರೂ. ವೆಚ್ಚದಲ್ಲಿ ಹೊಸ ಮಾರ್ಕೆಟ್‌ನ ಕಾಮಗಾರಿ ಆರಂಭಿಸಿದೆ. ಅದರ ನೀಲನಕ್ಷೆಯನ್ನು (Blueprint) ರೆಡಿ ಮಾಡಿದ್ದು ಅದರಲ್ಲಿರುವ ಮಾಹಿತಿ ಇದೀಗ ವಿವಾದವನ್ನು ಸೃಷ್ಟಿಸಿದೆ.

    ಹೊಸ ಮಾರ್ಕೆಟ್‌ನಲ್ಲಿ ಬರೋಬ್ಬರಿ 9 ಬೀಫ್ ಸ್ಟಾಲ್‌ಗಳು ಬರುತ್ತದೆ ಎಂದು ನೀಲನಕ್ಷೆಯಲ್ಲಿ ನಮೂದಿಸಿರುವುದು ಇದೀಗ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಜಿಲ್ಲೆಯಲ್ಲಿ ಸಾಕಷ್ಟು ಗೋಕಳ್ಳತನ, ಗೋಹತ್ಯೆ, ಅಕ್ರಮ ಕಸಾಯಿಖಾನೆಗಳು ಮಿತಿ ಮೀರಿ ನಡೆಯುತ್ತಿದೆ. ಅದಕ್ಕೆ ಬೆಂಬಲವೆಂಬಂತೆ ಇದೀಗ ಪಾಲಿಕೆಯೇ ಬೀಫ್ ಸ್ಟಾಲ್‌ನ ಪ್ರಸ್ತಾವನೆ ಸಲ್ಲಿಸಿದ್ದು ಸರಿಯಲ್ಲ. ತಕ್ಷಣ ಇದನ್ನು ರದ್ದು ಮಾಡಬೇಕು. ಒಂದು ವೇಳೆ ಮುಂದುವರಿಸಿದರೆ ಅದರ ವಿರುದ್ಧದ ತೀವ್ರವಾದ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅವಕಾಶ ಕೇಳಿದ್ದ ಬೆನ್ನಲ್ಲೇ ಇದೀಗ ಕನಕದಾಸ ಜಯಂತಿಗೂ ಮನವಿ

    ಮಾರ್ಕೆಟ್‌ನ ನೀಲನಕ್ಷೆಯಲ್ಲಿ ಕೋಳಿ, ಮೀನು, ಕುರಿಮಾಂಸದ ಸ್ಟಾಲ್‌ಗಳ ಜೊತೆಗೇ 9 ಬೀಫ್ ಸ್ಟಾಲ್‌ನ ಬಗ್ಗೆಯೂ ನಮೂದಿಸಲಾಗಿದೆ. ಪಾಲಿಕೆಯಲ್ಲಿ ಬಿಜೆಪಿ ಆಡಳಿತ ಇದ್ದರೂ, ಸ್ಥಳೀಯ ಶಾಸಕರು ಬಿಜೆಪಿಯವರೇ ಆಗಿದ್ದರೂ, ಗೋ ಹತ್ಯೆ ನಿಷೇಧದ ಬಗ್ಗೆ ಸಾಕಷ್ಟು ಮಾತನಾಡುವ ಬಿಜೆಪಿಗರೇ ಈ ರೀತಿ ಮಾಡಿರುವುದು ಯಾಕೆ ಎನ್ನುವುದು ಹಿಂದೂ ಸಂಘಟನೆಗಳ ಆಕ್ರೋಶದ ಮಾತು. ಈ ನಿರ್ಧಾರದಿಂದ ಹಿಂದೆ ಸರಿದು ಬೀಫ್ ಸ್ಟಾಲ್ ಅನ್ನು ಕೈ ಬಿಡಬೇಕೆಂದು ಸ್ಥಳೀಯ ಶಾಸಕ ವೇದವ್ಯಾಸ ಕಾಮತ್‌ಗೆ ವಿಹೆಚ್‌ಪಿ – ಬಜರಂಗದಳ ಮನವಿ ಮಾಡಿದೆ. ಬೀಫ್ ಸ್ಟಾಲ್ ಅನ್ನು ಕೈಬಿಡುತ್ತಾರೆ ಎನ್ನುವ ನಂಬಿಕೆ ಇದೆ. ಒಂದು ವೇಳೆ ಕೈಬಿಡದೇ ಹೋದರೆ ಉಗ್ರ ಹೋರಾಟದ ಚಿಂತನೆ ನಡೆಸಲು ಹಿಂದೂ ಸಂಘಟನೆಗಳು ತೀರ್ಮಾನಿಸಿದೆ. ಬಿಜೆಪಿ ಆಡಳಿತ ಇರುವ ಪಾಲಿಕೆ ಈ ಬೀಫ್ ಸ್ಟಾಲ್‌ನ ನಿರ್ಧಾರ ಮಾಡಿರುವುದು ಯಾಕೆ ಎನ್ನುವುದೇ ಕುತೂಹಲ. ಇದನ್ನೂ ಓದಿ: ಬಿಜೆಪಿ ಸರ್ಕಾರದ ಮೇಲೆ ಹೇಸಿಗೆ ಬರುತ್ತಿದೆ : ಶ್ರೀರಾಮಸೇನೆ

    Live Tv
    [brid partner=56869869 player=32851 video=960834 autoplay=true]

  • ಕಸಾಯಿಖಾನೆ ಮೇಲೆ ದಾಳಿ – 3 ಲಕ್ಷ ರೂ ಮೌಲ್ಯದ ಎಮ್ಮೆ ಮಾಂಸ ವಶಕ್ಕೆ

    ಕಸಾಯಿಖಾನೆ ಮೇಲೆ ದಾಳಿ – 3 ಲಕ್ಷ ರೂ ಮೌಲ್ಯದ ಎಮ್ಮೆ ಮಾಂಸ ವಶಕ್ಕೆ

    ಮುಂಬೈ: ಅಕ್ರಮವಾಗಿ ನಡೆಸುವ ಕಸಾಯಿಖಾನೆ ಮೇಲೆ ದಾಳಿ ನಡೆಸಿದ ನಗರ ಸಭೆ ಅಧಿಕಾರಿಗಳು 3 ಲಕ್ಷ ಮೌಲ್ಯದ 2 ಸಾವಿರ ಕೆಜಿ ಎಮ್ಮೆ ಮಾಂಸವನ್ನು ವಶಪಡಿಸಿಕೊಂಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.

    ದೂರಿನ ಮೇರೆಗೆ ಥಾಣೆ ಮುನ್ಸಿಪಲ್ ಕಾರ್ಪೋರೇಶನ್ (ಟಿಎಂಸಿ) ಅಧಿಕಾರಿಗಳು ಮುಂಬ್ರಾ ಪ್ರದೇಶದ ಕೌಸಾದಲ್ಲಿರುವ ಕಸಾಯಿಖಾನೆಯ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 2 ಸಾವಿರ ಕೆಜಿ ಎಮ್ಮೆ ಮಾಂಸವನ್ನು ವಶಪಡಿಸಿಕೊಳ್ಳುವುದರ ಜೊತೆಗೆ ಈ ಸಂಬಂಧ ಒಬ್ಬನನ್ನು ಬಂಧಿಸಿದ್ದಾರೆ.

    ಯಾವುದೇ ಪರವಾನಿಗೆ ಇಲ್ಲದೆ ಕಸಾಯಿಖಾನೆ ನಡೆಸಲಾಗುತ್ತಿತ್ತು ಎಂದು ಟಿಎಂಸಿಯ ಪಶುವೈದ್ಯಕೀಯ ವಿಭಾಗದ ಉಸ್ತುವಾರಿ ಅಧಿಕಾರಿ ಶಾಮಾ ಶಿರೋಡ್ಕರ್ ಹೇಳಿದ್ದಾರೆ.

    ದಾಳಿಯಲ್ಲಿ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ 2 ಸಾವಿರ ಕೆಜಿ ಎಮ್ಮೆ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ ಮತ್ತು ಈ ಪ್ರದೇಶದಲ್ಲಿ ಅಕ್ರಮವಾಗಿ ನಡೆಸುತ್ತಿರುವ ಇತರ ಕಸಾಯಿಖಾನೆಗಳನ್ನು ಪತ್ತೆಹಚ್ಚಲು ಮುಂಬ್ರಾದಲ್ಲಿ ಇನ್ನು ಹಲವು ಕಡೆ ದಾಳಿ ನಡೆಸುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಕಸಾಯಿಖಾನೆಗೆ ಸಾಗಿಸದಂತೆ ಮಂಡಿಯೂರಿ ಬೇಡಿಕೊಂಡ ಗರ್ಭಿಣಿ ಎಮ್ಮೆ- ವಿಡಿಯೋ

    ಕಸಾಯಿಖಾನೆಗೆ ಸಾಗಿಸದಂತೆ ಮಂಡಿಯೂರಿ ಬೇಡಿಕೊಂಡ ಗರ್ಭಿಣಿ ಎಮ್ಮೆ- ವಿಡಿಯೋ

    – ಎಮ್ಮೆ ಕಣ್ಣೀರಿಟ್ಟ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್
    – ಎಮ್ಮೆ ಉಳಿಸಲು 2.5 ಲಕ್ಷ ರೂ. ನೀಡಿದ ನೆಟ್ಟಿಗರು

    ಬೀಜಿಂಗ್: ಕಸಾಯಿಖಾನೆಗೆ ಸಾಗಿಸದಂತೆ ಗರ್ಭಿಣಿ ಎಮ್ಮೆಯೊಂದು ಮಂಡಿಯೂರಿ ಬೇಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

    ತನ್ನ ಹಾಗೂ ಮಗುವಿನ ಜೀವ ಉಳಿಸುವಂತೆ ಎಮ್ಮೆಯು ಕಸಾಯಿಖಾನೆ ಸಿಬ್ಬಂದಿ ಮುಂದೆ ಮೊಣಕಾಲುಗಳ ಮೇಲೆ ಕುಳಿತುಕೊಂಡಿದೆ. ಎಮ್ಮೆಯು ತನ್ನ ಯಜಮಾನನನ್ನು ಬಿಡಲು ಸಿದ್ಧರಿಲ್ಲ. ಜೊತೆಗೆ ಕಣ್ಣೀರನ್ನು ಸಹ ಹಾಕಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

    ಮಾಧ್ಯಮ ವರದಿಗಳ ಪ್ರಕಾರ, ಈ ಘಟನೆ ಭಾನುವಾರ ಸಂಭವಿಸಿದೆ. ಗ್ವಾಂಡೊಂಗ್ ಪ್ರಾಂತ್ಯದ ಶಾಂತೌನಲ್ಲಿ ಎಮ್ಮೆಯನ್ನು ಕಸಾಯಿಖಾನೆಗೆ ಮಾರಾಟ ಮಾಡಲಾಗುತ್ತಿತ್ತು. ಆದರೆ ಎಮ್ಮೆ ಹೋಗಲು ಸಿದ್ಧವಾಗಿಲ್ಲ. ಕಸಾಯಿಖಾನೆ ಸಿಬ್ಬಂದಿಯ ಭಾರೀ ಪ್ರಯತ್ನ ಬಳಿಕ ಎಮ್ಮೆ ಲಾರಿಯಿಂದ ಕೆಳಗೆ ಇಳಿಯಿತು. ಅಷ್ಟೇ ಅಲ್ಲದೆ ಅಲ್ಲಿಯೂ ಮೊಣಕಾಲುಗಳ ಮೇಲೆ ನಿಂತು ಪರಿಪರಿಯಾಗಿ ಬೇಡಿಕೊಂಡಿತು. ಈ ದೃಶ್ಯವನ್ನು ಸ್ಥಳದಲ್ಲಿದ್ದ ಯಾರೋ ಒಬ್ಬರು ವಿಡಿಯೋ ಮಾಡಿದ್ದಾರೆ. ಬಳಿಕ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ವಿಡಿಯೋವನ್ನು ನೋಡಿದ ನೆಟ್ಟಿಗರು ಮರುಕ ವ್ಯಕ್ತಪಡಿಸಿ, ಎಮ್ಮೆಯನ್ನು ಉಳಿಸಲು ಮುಂದಾದರು. ಈ ನಿಟ್ಟಿನಲ್ಲಿ ಆನ್‍ಲೈನ್‍ನಲ್ಲಿ 2.5 ಲಕ್ಷ ರೂಪಾಯಿಗಳನ್ನು ಸಂಗ್ರಹಿಸಿ ಕಸಾಯಿಖಾನೆಯ ನೌಕರರಿಗೆ ಹಸ್ತಾಂತರಿಸಿದ್ದಾರೆ. ಈ ಮೂಲಕ ಗರ್ಭಿಣಿ ಎಮ್ಮೆಯ ಪ್ರಾಣ ಉಳಿದಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಸಾಯಿಖಾನೆ ಉದ್ಯೋಗಿ, ನಾವು ಎಮ್ಮೆಯನ್ನು ಲಾರಿಯಿಂದ ಕೆಳಗೆ ಇಳಿಸುವಾಗ ಅದು ನೆಲದ ಮೇಲೆ ಕುಳಿತುಕೊಳ್ಳುತ್ತಿತ್ತು. ಅಷ್ಟೇ ಅಲ್ಲದೆ ಜೋರಾಗಿ ಕೂಗುತ್ತಿತ್ತು ಎಂದು ತಿಳಿಸಿದ್ದಾರೆ.

    ಮಾಧ್ಯಮವೊಂದರ ಪ್ರಕಾರ, ಈ ವಿಡಿಯೋದಲ್ಲಿ ಎಮ್ಮೆಯು ತಾನು ಬದುಕಬೇಕು ಎಂಬ ಬಯಕೆಯನ್ನು ತೋರಿಸಿದೆ. ಇದನ್ನು ಅನೇಕ ಪ್ರಾಣಿಪ್ರೀಯರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದರ ನಂತರ ಕೆಲವರು ಎಮ್ಮೆ ಉಳಿಸಲು ಬೆಲೆಯನ್ನು ನಿಗದಿಪಡಿಸಲು ಕಸಾಯಿಖಾನೆಯ ಮಾಲೀಕರನ್ನು ಕೇಳಿದ್ದರು. ಹೀಗಾಗಿ ಎಮ್ಮೆಯ ಬೆಲೆಯನ್ನು 24,950 ಯುವಾನ್‍ಗೆ (ಸುಮಾರು 2.5 ಲಕ್ಷ ರೂಪಾಯಿಗಳಿಗೆ) ಖರೀದಿಸಿದರು. ನಂತರ ಎಮ್ಮೆಯನ್ನು ಸ್ಥಳೀಯ ಬೌದ್ಧ ದೇವಾಲಯಕ್ಕೆ ಹಸ್ತಾಂತರಿಸಿದ್ದಾರೆ ಎಂದು ಹೇಳಲಾಗಿದೆ.

    ಜನರು ಎಮ್ಮೆಯನ್ನು ವಾಹನದಲ್ಲಿ ಹೊತ್ತುಕೊಂಡು ಹೋಗಿ ಬೌದ್ಧ ದೇವಾಲಯಕ್ಕೆ ಹಸ್ತಾಂತರಿಸಿದ ವಿಡಿಯೋವನ್ನು ಮಾಡಲಾಗಿದೆ. ಜೊತೆಗೆ ದಾನಿಗಳು ಎಮ್ಮೆಯ ಆರೈಕೆಗಾಗಿ 40 ಸಾವಿರ ರೂ. (4,000 ಯುವಾನ್) ಪ್ರತ್ಯೇಕವಾಗಿ ನೀಡಿದ್ದಾರೆ ಎಂದು ವರದಿಯಾಗಿದೆ.

  • ಕೇರಳದ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ-ಇಬ್ಬರ ಬಂಧನ

    ಕೇರಳದ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ-ಇಬ್ಬರ ಬಂಧನ

    ರಾಮನಗರ: ಕೇರಳದ ಕಸಾಯಿಖಾನೆಗೆ ಸಾಗಿಸುತ್ತಿದ್ದ 20ಕ್ಕೂ ಹೆಚ್ಚು ಗೋವುಗಳನ್ನು ಸಾರ್ವಜನಿಕರೇ ರಕ್ಷಣೆ ಮಾಡಿರುವ ಘಟನೆ ಚನ್ನಪಟ್ಟಣದ ಸುಣ್ಣಘಟ್ಟ ಬಳಿ ನಡೆದಿದೆ.

    ಇಂದು ಚನ್ನಪಟ್ಟಣದ ಸಾತನೂರು-ಹಲಗೂರು ರಸ್ತೆಯಲ್ಲಿ ಟೆಂಪೋದಲ್ಲಿ ಸಾಗಿಸುತ್ತಿದ್ದ ವೇಳೆ ಸಾರ್ವಜನಿಕರು ವಾಹನವನ್ನು ತಡೆದು ನಿಲ್ಲಿಸಿದ್ದಾರೆ. ಬಳಿಕ ಟೆಂಪೋವನ್ನು ಪರಿಶೀಲನೆ ನಡೆಸಲಾಗಿದ್ದು, 20ಕ್ಕೂ ಹೆಚ್ಚು ಗೋವುಗಳನ್ನು ಹಗ್ಗಗಳಿಂದ ಕಟ್ಟಿ, ಚೀಲದಲ್ಲಿ ಕಟ್ಟಿ ಹಾಕಿದ್ದು ಕಂಡುಬಂದಿದೆ.

    ಕೂಡಲೇ ಟೆಂಪೋದಲ್ಲಿದ್ದವರನ್ನು ಸಾರ್ವಜನಿಕರು ಪ್ರಶ್ನಿಸಿದ್ದು, ಯಾವುದಕ್ಕೂ ಉತ್ತರಿಸಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಗೋವುಗಳನ್ನು ಕೇರಳಕ್ಕೆ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ಅಲೀಮ್ ಹಾಗೂ ಅಬ್ಬಾಸ್ ಎಂಬವರನ್ನು ಬಂಧಿಸಿದ್ದಾರೆ. ಟೆಂಪೋ ಚಾಲಕ ಅಯಾಜ್ ಎಂಬಾತ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ರಕ್ಷಿಸಿದ ಗೋವುಗಳನ್ನು ರಾಮನಗರದಲ್ಲಿನ ಗೋವು ಸಂರಕ್ಷಣಾ ಕೇಂದ್ರಕ್ಕೆ ರವಾನಿಸಲಾಗಿದೆ.

  • ಕಸಾಯಿಖಾನೆಗೆ ಸಾಗಿಸಿದ್ದ 15 ಹಸುಗಳ ರಕ್ಷಣೆ – ಠಾಣೆಯಲ್ಲಿಯೇ ಮೇವು ಹಾಕಿ ಸಾಕುತ್ತಿದ್ದಾರೆ ಪೊಲೀಸರು

    ಕಸಾಯಿಖಾನೆಗೆ ಸಾಗಿಸಿದ್ದ 15 ಹಸುಗಳ ರಕ್ಷಣೆ – ಠಾಣೆಯಲ್ಲಿಯೇ ಮೇವು ಹಾಕಿ ಸಾಕುತ್ತಿದ್ದಾರೆ ಪೊಲೀಸರು

    ರಾಯಚೂರು: ಅಕ್ರಮವಾಗಿ ಕಸಾಯಿಖಾನೆಗೆ ಸಾಗಣೆ ಮಾಡುತ್ತಿದ್ದ ಜಾನುವಾರುಗಳನ್ನು ರಾಯಚೂರು ಪೊಲೀಸರು ರಕ್ಷಿಸಿ, ಅವುಗಳನ್ನು ಎಲ್ಲಿ ಬಿಡುವುದು ಅಂತ ತಿಳಿಯದೇ ಠಾಣೆಯಲ್ಲೇ ಈಗ ಸಾಕುವ ಪರಿಸ್ಥಿತಿ ನಿರ್ಮಾಣವಾಗಿದೆ.

    ನಗರದಲ್ಲಿ ಬಿಡಾಡಿ ದನಗಳ ಹಾವಳಿ ನಗರದಲ್ಲಿ ಮಿತಿಮೀರಿದ್ದರೆ, ಇನ್ನೊಂದೆಡೆ ಕಸಾಯಿಖಾನೆಯಲ್ಲಿ ಸಿಕ್ಕಸಿಕ್ಕವರು ಜಾನುವಾರುಗಳನ್ನ ತಂದು ಕತ್ತರಿಸುತ್ತಿದ್ದಾರೆ. ಕಸಾಯಿಖಾನೆ ಗುತ್ತಿಗೆಯನ್ನು ಇದುವರೆಗೂ ನಗರಸಭೆ ಅಧಿಕಾರಿಗಳು ಯಾರಿಗೂ ನೀಡಿಲ್ಲ. ಆದರೆ ಜಾನುವಾರುಗಳನ್ನು ತರುವ ಕಟುಕರಿಂದ ದುಡ್ಡುವಸೂಲಿ ಮಾಡುತ್ತಿದ್ದಾರೆ. ಇದರಿಂದಾಗಿ ಸಿಕ್ಕ ಸಿಕ್ಕ ಜಾನುವಾರುಗಳನ್ನು ಕಸಾಯಿಖಾನೆಗೆ ತರಲಾಗುತ್ತಿದೆ. ಈ ಕುರಿತು ಖಚಿತ ಮಾಹಿತಿ ಪಡೆದ ಸದರಬಜಾರ್ ಠಾಣೆಯ ಪೊಲೀಸರು 70 ಜಾನುವಾರುಗಳಲ್ಲಿ 15 ದನ ಹಾಗೂ ಕರುಗಳನ್ನು ರಕ್ಷಿಸಿದ್ದಾರೆ.

    ನಗರದಲ್ಲಿರುವ ಬಿಡಾಡಿ ದನಗಳನ್ನೇ ಕೆಲವರು ನೇರವಾಗಿ ಕಸಾಯಿಖಾನೆಗೆ ಸಾಗಣೆ ಮಾಡುತ್ತಿದ್ದಾರೆ. ಅಂತವರನ್ನು ಗುರುತಿಸಿ ಸೂಕ್ತ ಕ್ರಮಕೈಗೊಳ್ಳದೇ ನಗರಸಭೆ ಕೈಕಟ್ಟಿ ಕುಳಿತಿದೆ. ಗುತ್ತಿಗೆ ಪಡೆಯದೇ ಸಿಕ್ಕಸಿಕ್ಕವರು ಕಸಾಯಿಖಾನೆಯಲ್ಲಿ ಜಾನುವಾರುಗಳನ್ನು ಕತ್ತರಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲದೇ ದನದ ಮಾಂಸ ಹಾಗೂ ಚರ್ಮ ಪಡೆದು ಉಳಿದ ತ್ಯಾಜ್ಯಗಳನ್ನು ಹಾಗೇ ಬಿಡುತ್ತಿದ್ದಾರೆ. ಇದರಿಂದಾಗಿ ಕೆಟ್ಟವಾಸನೆ ಬರುತ್ತಿದೆ. ಕಸಾಯಿಖಾನೆಯನ್ನೇ ಸ್ಥಳಾಂತರಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

    ನಗರದಲ್ಲಿ ಓಡಾಡಿ ಪ್ಲಾಸ್ಟಿಕ್ ನಂತ ಪದಾರ್ಥಗಳನ್ನು ತಿನ್ನುವ ಬಿಡಾಡಿ ದನಗಳನ್ನು ಗೋಶಾಲೆಗೆ ಸೇರಿಸಿಕೊಳ್ಳಲು ಅಲ್ಲಿನ ಆಡಳಿತ ಮಂಡಳಿ ಹಿಂದೇಟು ಹಾಕುತ್ತಿದೆ. ಇದರಿಂದಾಗಿ ಪೊಲೀಸ್ ಠಾಣೆಯಲ್ಲಿಯೇ ಹಸುಗಳು ಉಳಿದಿವೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ನಗರಸಭೆ ಆಯುಕ್ತ ರಮೇಶ್ ನಾಯಕ್ ಅವರು, ಕಸಾಯಿಖಾನೆಯಲ್ಲಿ 70 ಹಸುಗಳು ಇರುವ ಬಗ್ಗೆ ನಮಗೆ ಮಾಹಿತಿಯಿಲ್ಲ. ಅಲ್ಲಿನ ಕೆಲಸಗಾರರಿಂದ ಮಾಹಿತಿ ಪಡೆದು ಹಾಗೂ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ಪಶು ಸಂಗೋಪನಾ ಇಲಾಖೆಯ ಜೊತೆಗೆ ಸೇರಿ ಬಿಡಾಡಿ ದನಗಳನ್ನು ರಕ್ಷಿತ ಸ್ಥಳಕ್ಕೆ ಸಾಗಿಸುವಂತೆ ನಮ್ಮ ಸಿಬ್ಬಂದಿಗೆ ತಿಳಿಸಿದ್ದೇನೆ ಎಂದು ಹೇಳಿದರು.

    ನಗರಸಭೆ ಗೋವು ರಕ್ಷಣೆಯಲ್ಲಿ ಕ್ರಮಕೈಗೊಳ್ಳುತ್ತಿಲ್ಲ. ನಗರ ಕಸಾಯಿಖಾನೆಯನ್ನು ನಿರ್ದಿಷ್ಟ ವ್ಯಕ್ತಿಗೆ ಗುತ್ತಿಗೆ ನೀಡಿಲ್ಲ. ಇದರಿಂದಾಗಿ ಅಲ್ಲಿ ಅಕ್ರಮ ನಡೆಯುತ್ತಿದೆ. ಈ ಕುರಿತು ಅನೇಕ ಬಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ. ಪೊಲೀಸರು ಹಸುಗಳನ್ನು ರಕ್ಷಿಸಿದ್ದಾರೆ. ಆದರೂ ಕಟುಕರು ತಮ್ಮ ಅಕ್ರಮವಾಗಿ ದನಗಳನ್ನು ಕತ್ತರಿಸವುದನ್ನು ನಿಲ್ಲಿಸಿಲ್ಲ ಎಂದು ಸ್ಥಳೀಯರಾದ ಸಂದೀಪ್ ಅವರು ಆರೋಪಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಸಾಯಿಖಾನೆಗೆ ಹಣ ಕೊಟ್ಟಿದ್ದು ಯಾಕೆ: ಕಟೀಲ್‍ಗೆ ಸವಾಲು ಎಸೆದು ಸಮರ್ಥನೆ ಕೊಟ್ಟ ಖಾದರ್

    ಕಸಾಯಿಖಾನೆಗೆ ಹಣ ಕೊಟ್ಟಿದ್ದು ಯಾಕೆ: ಕಟೀಲ್‍ಗೆ ಸವಾಲು ಎಸೆದು ಸಮರ್ಥನೆ ಕೊಟ್ಟ ಖಾದರ್

    ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯ 15 ಕೋಟಿ ರೂಪಾಯಿ ಅನುದಾನವನ್ನು ಮಂಗಳೂರಿನ ಕಸಾಯಿಖಾನೆಗೆ ನೀಡಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಸಮರ್ಥನೆ ನೀಡಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುದ್ರೋಳಿಯಲ್ಲಿರುವ ಕಸಾಯಿಖಾನೆ ಬಹಳ ಹಳೆಯದ್ದಾಗಿದೆ. ಕಸಾಯಿಖಾನೆ ಅಭಿವೃದ್ಧಿಗೆ ಜನ ಬೇಡಿಕೆಯನ್ನಿಟ್ಟಿದ್ದರು. ಈ ವಿಚಾರ ಬಿಜೆಪಿಯವರಿಗೂ ಗೊತ್ತಿದೆ. ಸ್ಮಾರ್ಟ್ ಸಿಟಿಯಿಂದ ಹಣ ಬರೋದು ಸ್ವಚ್ಛತೆಗಾಗಿ. ಹೀಗಾಗಿ ಘನ ತಾಜ್ಯ ನಿಯಂತ್ರಣ ಬರಬೇಕಾದರೆ ಕಸಾಯಿಖಾನೆಯ ಅಭಿವೃದ್ಧಿ ಆಗಬೇಕಿದೆ. ಬಿಜೆಪಿಯವರು ಈ ವಿಚಾರದಲ್ಲಿ ಸುಮ್ಮನೆ ರಾಜಕೀಯ ಮಾಡುತ್ತಿದ್ದಾರೆ. ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರಕ್ಕೆ ಪತ್ರ ಬರೆದು ಅನುದಾನ ನಿಲ್ಲಿಸಲಿ ಅಂತ ಯುಟಿ ಖಾದರ್ ಸವಾಲು ಹಾಕಿದ್ದಾರೆ. ಇದನ್ನು ಓದಿ: ಸ್ಮಾರ್ಟ್ ಸಿಟಿಯ 15 ಕೋಟಿ ರೂ. ಕಸಾಯಿಖಾನೆಗೆ ನೀಡಿದ್ರು ಸಚಿವ ಖಾದರ್!

    ಮಂಗಳೂರಿನ ಸ್ವಚ್ಛತೆಗೆ ಕಸಾಯಿಖಾನೆಗೆ 15 ಕೋಟಿ ರೂ ನೀಡಲಾಗಿದೆ. ಕಸಾಯಿಖಾನೆಯಲ್ಲಿ ಡಾಕ್ಟರ್‍ಗಳಿಗೆ ಕೂರುವ ವ್ಯವಸ್ಥೆ ಇಲ್ಲ. ಘನತಾಜ್ಯದ ವಿಲೇವಾರಿಗೆ ವ್ಯವಸ್ಥೆ ಇರಲಿಲ್ಲ. ಹೀಗಾಗಿ 15 ಕೋಟಿ ರೂಪಾಯಿ ನೀಡಲಾಗಿದೆ. ಬಿಜೆಪಿಯವರಿಗೆ ಆಡಳಿತದ ಅನುಭವ ಕಡಿಮೆ ಇದೆ ಎಂದು ತಿರುಗೇಟು ನೀಡಿದರು.

    ಈ ವಿಚಾರವಾಗಿ ಬೋರ್ಡ್ ಮೀಟಿಂಗ್ ನಲ್ಲಿ ತೀರ್ಮಾನಿಸಿ ನಿರ್ಧಾರ ಮಾಡಲಾಗಿದೆ. ಬೋರ್ಡ್ ಮೀಟಿಂಗ್ ನಲ್ಲಿ ಬಿಜೆಪಿಯವರೂ ಇದ್ದಾರೆ. ಮೀಟಿಂಗ್ ನಲ್ಲಿ ಯಾಕೆ ಬಿಜೆಪಿಯವರು ಚಕಾರ ಎತ್ತಿಲ್ಲ. ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಹೋಗಿದೆ. ಬಿಜೆಪಿಯವರು ಬೇಕಿದ್ದರೆ ಪ್ರಸ್ತಾವನೆ ನಿಲ್ಲಿಸಲಿ. ಕೇಂದ್ರ ಸರ್ಕಾರಕ್ಕೆ ಅನುದಾನ ಕಡಿತಗೊಳಿಸುವಂತೆ ಪತ್ರ ಬರೆಯಿರಿ. ವಿರುದ್ಧ ಮಾತನಾಡಿದ ಎಲ್ಲಾ ಬಿಜೆಪಿ ನಾಯಕರು ಪತ್ರ ಬರೆದು ಅನುದಾನ ನಿಲ್ಲಿಸಲಿ. ಗೋಶಾಲೆಗಳಿಗೆ ಅನುದಾನ ನೀಡಲು ಕೇಂದ್ರಕ್ಕೆ ಪತ್ರ ಬರೆಯಲಿ. ಬಿಜೆಪಿಯವರು ಪತ್ರ ಬರೆಯುದಿಲ್ಲ ಎಂದರೆ ಛೀಮಾರಿ ಹಾಕುತ್ತಾರೆ ಎಂದು ಪತ್ರ ಬರೆಯುತ್ತಿಲ್ಲ. ಕೇಂದ್ರ ಅನುದಾನ ಕೊಟ್ಟರೆ ಗೋಶಾಲೆಗೆ ಎರಡು ಪಟ್ಟು ಜಾಸ್ತಿ ಹಣ ನೀಡುತ್ತೇವೆ ಎಂದರು. ಇದನ್ನು ಓದಿ: ಸಚಿವ ಖಾದರ್‌ಗೆ ಸ್ಮಾರ್ಟ್ ಸಿಟಿಗಿಂತ ಕಸಾಯಿಖಾನೆಯೇ ಮುಖ್ಯ: ಸುನೀಲ್ ಕುಮಾರ್

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಚಿವ ಖಾದರ್‌ಗೆ ಸ್ಮಾರ್ಟ್ ಸಿಟಿಗಿಂತ ಕಸಾಯಿಖಾನೆಯೇ ಮುಖ್ಯ: ಸುನೀಲ್ ಕುಮಾರ್

    ಸಚಿವ ಖಾದರ್‌ಗೆ ಸ್ಮಾರ್ಟ್ ಸಿಟಿಗಿಂತ ಕಸಾಯಿಖಾನೆಯೇ ಮುಖ್ಯ: ಸುನೀಲ್ ಕುಮಾರ್

    ಉಡುಪಿ: ವಸತಿ ಸಚಿವ ಯು.ಟಿ.ಖಾದರ್ ಅವರಿಗೆ ಸ್ಮಾರ್ಟ್ ಸಿಟಿಗಿಂತ ಕಸಾಯಿಖಾನೆಗಳ ಬಗ್ಗೆ ಜಾಸ್ತಿ ಆಸಕ್ತಿ ಇದೆ ಅಂತ ವಿಧಾನ ಸಭೆಯ ವಿಪಕ್ಷ ಮುಖ್ಯ ಸಚೇತಕ ಹಾಗೂ ಶಾಸಕ ಸುನೀಲ್ ಕುಮಾರ್ ಆರೋಪ ಮಾಡಿದ್ದಾರೆ.

    ಕಾರ್ಕಳದಲ್ಲಿ ಮಾತನಾಡಿದ ಅವರು, ರಾಜ್ಯದ ಜನ ಸುಂದರ ನಗರವನ್ನು ಬಯಸುತ್ತಾರೆ. ಆದರೆ ಕಸಾಯಿಖಾನೆ ಮುಚ್ಚಲು, ಅಕ್ರಮ ಗೋವು ಸಾಗಾಟ ತಡೆಯಲು ರಾಜ್ಯ ಸರ್ಕಾರಕ್ಕೆ ತಾಕತ್ತಿಲ್ಲ. ಸ್ಮಾರ್ಟ್ ಸಿಟಿಯ ಅನುದಾನ ಹಣವನ್ನು ಅಭಿವೃದ್ಧಿಗೆ ಬಳಸಬೇಕಾಗಿತ್ತು. ಅದರ ಬದಲು ಕಸಾಯಿಖಾನೆಗೆ ಹಣ ಬಳಸಿರುವ ಹಿಂದೆ ದೊಡ್ಡ ಹುನ್ನಾರ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕೂಡಲೇ ಸಚಿವ ಯು.ಟಿ.ಖಾದರ್ ಇದಕ್ಕೆ ಸ್ಪಷ್ಟನೆ ಕೊಡಬೇಕು. 15 ಕೋಟಿ ರೂಪಾಯಿ ಹಣವನ್ನು ನಾವು ಕಸಾಯಿಖಾನೆಗೆ ಬಳಕೆ ಮಾಡಲು ಬಿಡಲ್ಲ. ಇದು ಮಹಾನಗರ ಪಾಲಿಕೆಗೆ ಸಂಬಂಧಪಟ್ಟ ವಿಷಯವಲ್ಲ. ಮೂರು ಜಿಲ್ಲೆಗಳಲ್ಲಿ ದೊಡ್ಡ ಹೋರಾಟ ಮಾಡುತ್ತೇವೆ. ಹಿಂದೂ ವಿರೋಧಿ ನೀತಿಯನ್ನು ತಕ್ಷಣ ಕೈಬಿಟ್ಟು, ಅವರ ನಿಲುವನ್ನು ಸ್ಪಷ್ಟ ಪಡಿಸಬೇಕೆಂದು ಆಗ್ರಹಿಸಿದರು.

    ಖಾದರ್ ಮತ್ತು ಬೆಂಬಲಿಗರು ಅಪರಾಧಿ ಚಟುವಟಿಕೆಗೆ ಬೆಂಬಲಿಸುತ್ತಿದ್ದಾರೆ. ಸರ್ಕಾರಿ ಹಣ ಅಭಿವೃದ್ಧಿಗೆ ಉಪಯೋಗವಾಗಲಿ. ಅಲ್ಲದೇ ಮಹಾನಗರಪಾಲಿಕೆ ಅಧಿಕಾರಿಗಳೂ ಸಹ ಈ ಬಗ್ಗೆ ಗಮನಹರಿಸಬೇಕು ಎಂದು ಒತ್ತಾಯಿಸಿದರು.

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸ್ಮಾರ್ಟ್ ಸಿಟಿಯ 15 ಕೋಟಿ ರೂ. ಕಸಾಯಿಖಾನೆಗೆ ನೀಡಿದ್ರು ಸಚಿವ ಖಾದರ್!

    ಸ್ಮಾರ್ಟ್ ಸಿಟಿಯ 15 ಕೋಟಿ ರೂ. ಕಸಾಯಿಖಾನೆಗೆ ನೀಡಿದ್ರು ಸಚಿವ ಖಾದರ್!

    ಮಂಗಳೂರು: ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಯುಟಿ ಖಾದರ್ ದೊಡ್ಡ ವಿವಾದಕ್ಕೀಡಾಗಿದ್ದಾರೆ. ಮಂಗಳೂರನ್ನ ಸ್ಮಾರ್ಟ್ ಸಿಟಿ ಮಾಡಿ ಅಂತ ಕೊಟ್ಟಿರೋ 15 ಕೋಟಿ ಹಣವನ್ನ ಅಕ್ರಮಗಳ ಆರೋಪ ಹೊತ್ತಿರುವ ಕುದ್ರೋಳಿ ಕಸಾಯಿಖಾನೆಗೆ ಕೊಟ್ಟಿದ್ದಾರೆ.

    ಜಿಲ್ಲೆಯಲ್ಲಿ ಕದ್ದ ದನಗಳನ್ನೆಲ್ಲಾ ಕುದ್ರೋಳಿ ಕಸಾಯಿಖಾನೆಯಲ್ಲೇ ವಧೆ ಮಾಡಲಾಗುತ್ತದೆ ಎಂಬ ಆರೋಪವಿದೆ. ಆದ್ರೆ ಈಗ ಅದೇ ಕಸಾಯಿಖಾನೆ ಅಭಿವೃದ್ಧಿಗೆ ಸಚಿವ ಯುಟಿ ಖಾದರ್ 15 ಕೋಟಿ ರೂಪಾಯಿ ಅನುದಾನ ನೀಡಿರೋದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಒಂದೆಡೆ ಗೋಶಾಲೆಗಳಿಗೆ ಕೊಡಬೇಕಾದ ಅನುದಾನ ಇನ್ನೂ ಮಂಜೂರಾಗಿಲ್ಲ. ಇದ್ರಿಂದ ಗೋ ಶಾಲೆಗಳು ಸರ್ಕಾರ ಮುಂದೆ ಕೈಯೊಡ್ಡುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಈ ನಡುವೆ ಯು.ಟಿ. ಖಾದರ್ ಒಂದೇ ಕಸಾಯಿಖಾನೆಗೆ 15 ಕೋಟಿ ಅನುದಾನ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಜನರು ತಿನ್ನುವ ಆಹಾರ ಶುಚಿಯಾಗಿರಬೇಕೆಂದು ಹಣ ನೀಡಿದ್ದೇನೆ ಅಂತಾ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕದ್ದು ಸಾಗಿಸುತ್ತಿದ್ದ ಗೋವುಗಳನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಕುಮಟಾ ಪೊಲೀಸರು!

    ಕದ್ದು ಸಾಗಿಸುತ್ತಿದ್ದ ಗೋವುಗಳನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಕುಮಟಾ ಪೊಲೀಸರು!

    ಕಾರವಾರ: ಗೋವುಗಳನ್ನು ಕದ್ದು ಕಸಾಯಿಖಾನೆಗೆ ಸಾಗಿಸುತ್ತಿದ್ದ ವಾಹನವನ್ನು ಸಿನಿಮೀಯ ರೀತಿಯಲ್ಲಿ ವಶಪಡಿಸಿಕೊಂಡ ಘಟನೆ ಕುಮಟಾದ ಹಳಕಾರ್ ಹರಿಕಾಂತ್ರ ಕೇರಿ ಕ್ರಾಸ್‍ನಲ್ಲಿ ನಡೆದಿದೆ.

    ಆರೋಪಿಗಳು ತಪ್ಪಿಸಿಕೊಂಡಿದ್ದು, ಮಾರುತಿ ಇಗ್ನೀಸ್ ಕಾರನ್ನು ವಶಕ್ಕೆ ಪಡೆದು, ಅದರಲ್ಲಿದ್ದ ಎರಡು ಆಕಳು ಹಾಗೂ ಒಂದು ಹೋರಿಯನ್ನು ಕುಮಟಾ ಠಾಣೆ ಪಿಎಸ್‍ಐ ಸಂಪತ್ ಕುಮಾರ್ ತಂಡ ರಕ್ಷಿಸಿದೆ.

    ಶುಕ್ರವಾರ ಮುಂಜಾನೆ ರಿಜಿಸ್ಟರ್ ಆಗದ ಹೊಸ ಮಾರುತಿ ಇಗ್ನೀಸ್ ಕಾರಿನಲ್ಲಿ ಕಳ್ಳರು ಬಂದಿದ್ದರು. ಕುಮಟಾದ ಹರಕಾರ್ ನ ಹರಿಕಾಂತ್ರ ಕೇರಿಯಲ್ಲಿ ಹಸುಗಳನ್ನು ಕದ್ದು, ಕಾರಿನಲ್ಲಿ ಹಾಕಿಕೊಂಡು ಹೋಗುತ್ತಿದ್ದರು. ರಾತ್ರಿ ಪಾಳೆಯ ಗಸ್ತಿನಲ್ಲಿದ್ದ ಕುಮಟಾ ಠಾಣೆ ಪಿಎಸ್‍ಐ ಸಂಪತ್ ಕುಮಾರ್ ತಂಡವು ಇದನ್ನು ಗಮನಿಸಿ ಕಾರನ್ನು ಬೆನ್ನು ಹತ್ತಿದ್ದರು. ಆದರೆ ದಾರಿ ಮಧ್ಯದಲ್ಲಿ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದ್ದು, ಅದರಲ್ಲಿದ್ದ ಎರಡು ಆಕಳು ಹಾಗೂ ಒಂದು ಹೋರಿಯನ್ನು ಅಲ್ಲಿಯೇ ಬಿಟ್ಟು ಕಳ್ಳರು ತಪ್ಪಿಸಿಕೊಂಡಿದ್ದಾರೆ.

    ಸದ್ಯ ಪೊಲೀಸರು ಕಾರನ್ನು ತಮ್ಮ ವಶಕ್ಕೆ ಪಡೆದಿದ್ದು, ಹಸುಗಳನ್ನು ರಕ್ಷಿಸಿದ್ದಾರೆ. ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮಣಿಪಾಲದಲ್ಲಿ ಗೂಳಿ ಮೇಲೆ ತಲ್ವಾರ್ ದಾಳಿ- ಚಿಂತಾಜನಕ ಸ್ಥಿತಿಯಲ್ಲಿ ಮೂಕ ಪ್ರಾಣಿ!

    ಮಣಿಪಾಲದಲ್ಲಿ ಗೂಳಿ ಮೇಲೆ ತಲ್ವಾರ್ ದಾಳಿ- ಚಿಂತಾಜನಕ ಸ್ಥಿತಿಯಲ್ಲಿ ಮೂಕ ಪ್ರಾಣಿ!

    ಉಡುಪಿ: ಅಕ್ರಮ ಕಸಾಯಿಖಾನೆಗೆ ಕೊಂಡೊಯ್ಯಲು ತಲವಾರಿನಿಂದ ಗೂಳಿಗೆ ಕಡಿದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ.

    ಎರಡು ದಿನಗಳ ಹಿಂದೆ ಕಸಾಯಿಖಾನೆಯ ಗುಂಪೊಂದು ಮಣಿಪಾಲದಲ್ಲಿ ಹೊರಿಯನ್ನು ಟೆಂಪೋದೊಳಗೆ ತುಂಬಿಸಲು ಯತ್ನಿಸಿತ್ತು. ಈ ಸಂದರ್ಭ ಗೂಳಿ ಸಹಕರಿಸದಿದ್ದಾಗ ದುಷ್ಕರ್ಮಿಗಳು ತಲ್ವಾರಿನಿಂದ ಕಡಿದಿದ್ದಾರೆ. ತೀವ್ರ ಸ್ವರೂಪದಲ್ಲಿ ಗಾಯಗೊಂಡು ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿದ್ದ ಗೂಳಿಯನ್ನು ಸಮಾಜ ಸೇವಕ ನಿತ್ಯಾನಂದ ರಕ್ಷಿಸಿದ್ದಾರೆ.

    ಮಣಿಪಾಲ ವಿವಿಯ ವಿದ್ಯಾರ್ಥಿಗಳು ಈ ಮಾನವೀಯ ಕಾರ್ಯಕ್ಕೆ ಸಹಕಾರ ನೀಡಿದ್ದಾರೆ. ಮಣಿಪಾಲದ ಎಂ.ಐ.ಸಿ ಬಳಿ ಗೂಳಿಯೊಂದು ಮಾರಕಾಯುಧಗಳಿಂದ ಕಡಿದ ರೀತಿಯಲ್ಲಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡು ರಸ್ತೆ ಬದಿಯಲ್ಲಿ ಒದ್ದಾಡುತ್ತಿತ್ತು. ಮಣಿಪಾಲ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಾಗೂ ಈ ಪರಿಸರದ ನಿವಾಸಿಗಳು ಹೋರಿಗೆ ಔಷದೋಪಚಾರ ಮಾಡಿದ್ದಾರೆ.

    ಹೋರಿಯು ಚಿಂತಾಜನಕ ಸ್ಥಿತಿಗೆ ತಲುಪಿದಾಗ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿ ಹೋರಿಯನ್ನು ರಕ್ಷಿಸುವಂತೆ ಫೋನ್ ಕರೆ ಮೂಲಕ ಕಾಲೇಜು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳ ಕರೆಗೆ ಸ್ಪಂದಿಸಿದ ನಿತ್ಯಾನಂದ, ವಿನಯಚಂದ್ರ ಹೋರಿಯ ರಕ್ಷಣೆಗೆ ಮುಂದಾದರು.

    ಹೋರಿಗೆ ಪ್ರಾಥಮಿಕ ಚಿಕಿತ್ಸೆಯನ್ನು ಡಾ. ಪ್ರಶಾಂತ್ ನೀಡಿದರು. ಸದ್ಯ ಬ್ರಹ್ಮಾವರದ ನೀಲಾವರ ಗೋ ಶಾಲೆಗೆ ಗೂಳಿಯನ್ನು ರವಾನಿಸಲಾಗಿದೆ. ಉಡುಪಿ ಅಗ್ನಿ ಶಾಮಕ ದಳ ಹಾಗೂ ಸಾರ್ವಜನಿಕ ನೆರವಿನಿಂದ ಹೊರಿಯನ್ನು ವಿನೋದ್ ನಾಯಕ್ ಇವರ ವಾಹನದಲ್ಲಿ ಉಚಿತವಾಗಿ ಸಾಗಿಸಲಾಯಿತು.