Tag: ಕಾಂಗೋ

  • ಕಾಂಗೋದಲ್ಲಿ M23 ಬಂಡುಕೋರರ ಲೂಟಿ – 100ಕ್ಕೂ ಹೆಚ್ಚು ಬಲಿ, ಸಾವಿರಾರು ಜನರಿಗೆ ಗಾಯ

    ಕಾಂಗೋದಲ್ಲಿ M23 ಬಂಡುಕೋರರ ಲೂಟಿ – 100ಕ್ಕೂ ಹೆಚ್ಚು ಬಲಿ, ಸಾವಿರಾರು ಜನರಿಗೆ ಗಾಯ

    ಬ್ರೆಜ್‌ವಿಲ್ಲೆ: ಡೆಮೊಕ್ರೆಟಿಕ್ ರಿಪಬ್ಲಿಕ್ ಕಾಂಗೋ (Democratic Republic of Congo) ದೇಶದಲ್ಲಿ ಆಂತರಿಕ ಸಂಘರ್ಷ ಮುಗಿಲುಮುಟ್ಟಿದ್ದು, M23 ಬಂಡುಕೋರರ ಲೂಟಿಯಿಂದ 100ಕ್ಕೂ ಹೆಚ್ಚು ಜನರು ಬಲಿಯಾಗಿದ್ದು, 1,000 ಜನರು ಗಾಯಗೊಂಡಿದ್ದಾರೆ.ಇದನ್ನೂ ಓದಿ: 23 ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರ ಆಯ್ಕೆ ಮಾಡಿದ ಬಿಜೆಪಿ – ಯಾವ ಜಿಲ್ಲೆಗೆ ಯಾರು ಅಧ್ಯಕ್ಷರು?

    ರುವಾಂಡಾ ಬೆಂಬಲಿತ ಎಂ-23 ಬಂಡುಕೋರರ ಲೂಟಿಗೆ ಇಳಿದಿದ್ದು, ರುವಾಂಡಾ, ಫ್ರಾನ್ಸ್, ಬೆಲ್ಜಿಯಂ, ಕೀನ್ಯಾ, ಉಗಾಂಡಾ ಸೇರಿ ಹಲವು ದೇಶಗಳ ರಾಯಭಾರಿ ಕಚೇರಿಗಳನ್ನು ದೋಚಿ, ಬೆಂಕಿ ಹಚ್ಚಿದ್ದಾರೆ. ಇದರಿಂದ ಬಂಡೆಕೋರರನ್ನು ಚೆದುರಿಸಲು ಪೊಲೀಸರು ಗುಂಡು ಹಾರಿಸಿ, ಆಶ್ರುವಾಯು ಪ್ರಯೋಗಿಸಿದ್ದಾರೆ.

    ಜೊತೆಗೆ 20 ಲಕ್ಷ ಜನಸಂಖ್ಯೆಯುಳ್ಳ ಗೋಮಾ ನಗರವನ್ನು ಬಂಡುಕೋರರು ವಶಕ್ಕೆ ಪಡೆದಿದ್ದು, 1,200ಕ್ಕೂ ಹೆಚ್ಚು ಕಾಂಗೋಲೀಸ್ ಸೈನಿಕರು ಶರಣಾಗಿದ್ದಾರೆ. ಈ ಹಿಂಸಾಚಾರವನ್ನು ತಡೆಗಟ್ಟಲು ಕಾಂಗೋಲೀಸ್ ಭದ್ರತಾ ಪಡೆಗಳು ಕಾರ್ಯನಿರತರಾಗಿವೆ. ಇನ್ನೂ ಈ ಸಂಘರ್ಷದಿಂದಾಗಿ ಗೋಮಾ ನಗರದ ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ. ಘರ್ಷಣೆಯ ತೀವ್ರತೆಯಿಂದಾಗಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸುಮಾರು 1,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಇದನ್ನೂ ಓದಿ: ಅಂಜನಾದ್ರಿ ಬೆಟ್ಟ ಹತ್ತುವಾಗ ಹೃದಯಾಘಾತದಿಂದ ಯುವಕ ಸಾವು

     

  • ಕಾಂಗೋದಲ್ಲಿ ಧಾರಾಕಾರ ಮಳೆ; 22 ಮಂದಿ ಸಾವು

    ಕಾಂಗೋದಲ್ಲಿ ಧಾರಾಕಾರ ಮಳೆ; 22 ಮಂದಿ ಸಾವು

    ಬೆನಿ (ರಿಪಬ್ಲಿಕ್‌ ಆಫ್‌ ಕಾಂಗೊ): ಕಾಂಗೋದ (Congo Rains) ಕಸಾಯಿ ಪ್ರದೇಶದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಕನಿಷ್ಠ 22 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

    ಕಾಂಗೋದ ಕಸಾಯಿ-ಮಧ್ಯ ಪ್ರಾಂತ್ಯದಲ್ಲಿ ಮಂಗಳವಾರ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಿತು. ಪ್ರದೇಶದಲ್ಲಿ ಪ್ರವಾಹ ಉಂಟಾಗಿ ಜನಜೀವನ ಅಸ್ತವ್ಯಸ್ತವಾಯಿತು. ಮೂಲಸೌಕರ್ಯವಿಲ್ಲದೇ ಸ್ಥಳೀಯ ಜನ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಕನಂಗಾ ಪಟ್ಟಣದ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್- ಜಿಲ್ಲಾಡಳಿತದ ಆದೇಶವೇನು?

    ಧಾರಾಕಾರ ಮಳೆಯಿಂದಾಗಿ ಅಲ್ಲಲ್ಲಿ ಭೂಕುಸಿತ ಉಂಟಾಗಿದೆ. ಹಲವೆಡೆ ಮನೆಗಳು, ಚರ್ಚ್‌ಗಳು ಮತ್ತು ರಸ್ತೆಗಳು ಸಹ ಕುಸಿತ ಕಂಡಿವೆ. ಪರಿಣಾಮವಾಗಿ ಅನೇಕರು ಸಾವಿಗೀಡಾಗಿದ್ದು, ಅವರು ಕುಟುಂಬಸ್ಥರು ನಿರಾಶ್ರಿತರಾಗಿದ್ದಾರೆ.

    ಕನಂಗಾದ ಕಮ್ಯೂನ್‌ಗೆ ಹೆಚ್ಚಿನ ಪ್ರಮಾಣದ ಹಾನಿಯಾಗಿದೆ ಎಂದು ಗವರ್ನರ್ ಜಾನ್ ಕಬೆಯಾ ತಿಳಿಸಿದ್ದಾರೆ. ಹಾನಿಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲಾಗುವುದು ಎಂದು ಪ್ರಾಂತೀಯ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ 5 ಖಾಸಗಿ ಬಸ್‌ಗಳ ನಡುವೆ ಸರಣಿ ಅಪಘಾತ

    ಸೂಕ್ತವಲ್ಲದ ಜಾಗದಲ್ಲಿ ಮನೆಗಳನ್ನು ನಿರ್ಮಿಸಿದ್ದೇ ಈ ಸಾವುಗಳಿಗೆ ಕಾರಣವಾಗಿದೆ. ಮನೆಗಳ ಗೋಡೆಗಳು ಕುಸಿದು ಹೆಚ್ಚಿನ ಜೀವಹಾನಿಯಾಗಿದೆ ಎಂದು ಕನಂಗಾ ಮೇಯರ್ ರೋಸ್ ಮುವಾಡಿ ಮುಸುಬೆ ತಿಳಿಸಿದ್ದಾರೆ.

    ಮೃತರ ಅಂತ್ಯಸಂಸ್ಕಾರಕ್ಕೆ ಸರ್ಕಾರದಿಂದ ಸೂಕ್ತ ವ್ಯವಸ್ಥೆ ಮಾಡಲಾಗುವುದು. ಸಂತ್ರಸ್ತರಿಗೆ ಅಗತ್ಯ ನೆರವು ನೀಡಲಾಗುವುದು ಎಂದು ಹೇಳಿದ್ದಾರೆ. ಪೂರ್ವ ಕಾಂಗೋದಲ್ಲಿ ಡಿಸೆಂಬರ್ ಆರಂಭದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ 14 ಜನರು ಸಾವನ್ನಪ್ಪಿದ್ದರು. ಇದನ್ನೂ ಓದಿ: ಪಿಜಿ ಅಸೋಸಿಯೇಷನ್‍ಗಳಿಂದ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ

  • ಉದ್ಘಾಟನೆ ಮಾಡುತ್ತಿದ್ದಂತೆಯೇ ಕುಸಿದುಬಿಡ್ತು ಸೇತುವೆ

    ಉದ್ಘಾಟನೆ ಮಾಡುತ್ತಿದ್ದಂತೆಯೇ ಕುಸಿದುಬಿಡ್ತು ಸೇತುವೆ

    ಕಿನ್ಶಾಸಾ: ಸಾರ್ವಜನಿಕರ ಅನುಕೂಲಕ್ಕಾಗಿ ಮಾಡಲಾಗುವ ಕಾಮಗಾರಿಗಳು ಕೆಲವೊಮ್ಮೆ ಕೆಲವೇ ದಿನಗಳಲ್ಲಿ ಕಳಪೆಯೆಂದು ಗೊತ್ತಾಗುತ್ತದೆ. ಆಗಾಗ ಜನರು ಅದರ ಸಿಟ್ಟನ್ನು ಸರ್ಕಾರದ ಮೇಲೆ ತೆಗೆಯುವುದುಂಟು. ಇಲ್ಲೊಂದು ಸೇತುವೆ ಉದ್ಘಾಟನೆಯ ಸಮಯವೇ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಇದರ ವೀಡಿಯೋಗಳು ವೈರಲ್ ಆಗಿರುವುದು ಮಾತ್ರವಲ್ಲದೇ ಸೇತುವೆ ನಿರ್ಮಾಣದ ಗುಣಮಟ್ಟದ ಬಗ್ಗೆ ಜನರು ಅಪಹಾಸ್ಯ ಮಾಡುತ್ತಿದ್ದಾರೆ.

    ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ(ಡಿಆರ್‌ಸಿ) ಸೇತುವೆಯೊಂದನ್ನು ಉದ್ಘಾಟಿಸಲು ಅಧಿಕಾರಿಗಳು ತಯಾರಾಗಿದ್ದು, ಉದ್ಘಾಟನೆಗೆ ರಿಬ್ಬನ್ ಕತ್ತರಿಸುವ ವೇಳೆಗೆ ಸರಿಯಾಗಿ ಸೇತುವೆ ಕುಸಿದಿದೆ. ಈ ಕಿರು ಸೇತುವೆಯನ್ನು ಮಳೆಗಾಲದಲ್ಲಿ ಸ್ಥಳೀಯರಿಗೆ ನದಿ ದಾಟಲು ನಿರ್ಮಿಸಲಾಗಿತ್ತು ಎಂದು ವರದಿಗಳು ತಿಳಿಸಿವೆ.

    ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ ಸೇತುವೆಯನ್ನು ಉದ್ಘಾಟಿಸಲು ಅಧಿಕಾರಿಗಳು ಸೇತುವೆ ಮೇಲೆ ನಿಂತಿರುವುದು ಕಾಣಿಸುತ್ತದೆ. ಸೇತುವೆಯ ಒಂದು ಬದಿಯಲ್ಲಿ ಕೆಂಪು ರಿಬ್ಬನ್ ಅನ್ನು ಕಟ್ಟಲಾಗಿದ್ದು, ಅದನ್ನು ಮಹಿಳಾ ಅಧಿಕಾರಿಯೊಬ್ಬರು ಕತ್ತರಿಸಿದ್ದಾರೆ. ಆದರೆ ರಿಬ್ಬನ್‌ಗೆ ಕತ್ತರಿ ತಾಗುತ್ತಲೇ ಸೇತುವೆ ಕುಸಿಯಲಾರಂಭಿಸಿದೆ. ಇದನ್ನೂ ಓದಿ: ಮಂಗೋಲಿಯಾ ಅಧ್ಯಕ್ಷನಿಂದ ರಾಜನಾಥ್ ಸಿಂಗ್‍ಗೆ ವಿಭಿನ್ನ ಉಡುಗೊರೆ

    ಸೇತುವೆ ಕುಸಿಯುತ್ತಿದ್ದಂತೆ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅಧಿಕಾರಿಗಳನ್ನು ಸೇತುವೆಯಿಂದ ಎಳೆದು ರಕ್ಷಿಸಿದ್ದಾರೆ. ಸದ್ಯ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎನ್ನಲಾಗಿದೆ. ಆದರೆ ಉದ್ಘಾಟನೆಯಾಗಿ ಒಂದು ಕ್ಷಣವೂ ನಿಲ್ಲದ ಸೇತುವೆ ಕುಸಿದು 2 ಭಾಗವಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಚೀನಾ ಭೂಕಂಪ – ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ ವೀಡಿಯೋಗಳು

    Live Tv
    [brid partner=56869869 player=32851 video=960834 autoplay=true]

  • ಕಾಂಗೋದಲ್ಲಿ ಯುಎನ್ ವಿರೋಧಿ ಪ್ರತಿಭಟನೆ: ಇಬ್ಬರು ಭಾರತೀಯ ಶಾಂತಿಪಾಲನ ಸೈನಿಕರು ಹುತಾತ್ಮ

    ಕಾಂಗೋದಲ್ಲಿ ಯುಎನ್ ವಿರೋಧಿ ಪ್ರತಿಭಟನೆ: ಇಬ್ಬರು ಭಾರತೀಯ ಶಾಂತಿಪಾಲನ ಸೈನಿಕರು ಹುತಾತ್ಮ

    ಕಿನ್ಶಾಸ: ಪೂರ್ವ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ನಡೆಯುತ್ತಿರುವ ಯುಎನ್ ವಿರೋಧಿ ಪ್ರತಿಭಟನೆಯಲ್ಲಿ ಇಬ್ಬರು ಭಾರತೀಯ ಶಾಂತಿಪಾಲನ ಸೈನಿಕರು ಹುತಾತ್ಮರಾಗಿದ್ದಾರೆ.

    ಈ ಕುರಿತು ಬಾರ್ಡರ್ ಸೆಕ್ಯುರಿಟಿ ಫೋರ್ಸ್(ಬಿಎಸ್‍ಎಫ್) ಟ್ವೀಟ್ ಮಾಡಿದ್ದು, 26 ಜುಲೈ ರಂದು ಎಚ್‍ಸಿ ಶಿಶುಪಾಲ್ ಸಿಂಗ್ ಮತ್ತು ಎಚ್‍ಸಿ ಸನ್ವಾಲಾ ರಾಮ್ ವಿಷ್ಣೋಯ್ ಅವರು ನಿಧನರಾಗಿದ್ದಾರೆ. ಅವರಿಗೆ ಸಂತಾಪ ವ್ಯಕ್ತಪಡಿಸುತ್ತೇವೆ. ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ನಡೆಯುತ್ತಿರುವ ಪ್ರತಿಭಟನೆ ತಡೆಯಲು ಯುಎನ್ ಶಾಂತಿಪಾಲನಾ ತಂಡದೊಂದಿಗೆ ಇವರನ್ನು ನಿಯೋಜಿಸಲಾಗಿತ್ತು. ಈ ಸಂಕಷ್ಟದ ಸಮಯದಲ್ಲಿ ನಾವು ಮೃತರ ಕುಟುಂಬದೊಂದಿಗೆ ಇದ್ದೇವೆ. ಜೈಹಿಂದ್ ಎಂದು ಬರೆದು ಮಾಹಿತಿ ತಿಳಿಸಿದೆ.  ಇದನ್ನೂ ಓದಿ: ಕಾಂಗೋದಲ್ಲಿ ಯುಎನ್ ವಿರೋಧಿ ಪ್ರತಿಭಟನೆ: 3 ಶಾಂತಿಪಾಲಕರು, 12 ನಾಗರಿಕರು ಮೃತ 

    ಏನಿದು ಘಟನೆ?
    MONUSCO ಎಂದು ಕರೆಯಲ್ಪಡುವ ಯುಎನ್ ಮಿಷನ್, ಮಿಲಿಟರಿಯ ಹಿಂಸಾಚಾರದ ವಿರುದ್ಧ ನಾಗರಿಕರನ್ನು ರಕ್ಷಿಸಲು ವಿಫಲವಾಗಿದೆ ಎಂದು ಪ್ರತಿಭಟನೆಗಳು ನಡೆಯುತ್ತಿದೆ. ಯುಎನ್ ಉಪ ವಕ್ತಾರ ಫರ್ಹಾನ್ ಹಕ್ ಈ ಕುರಿತು ಮಾತನಾಡಿದ್ದು, ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರೆಸ್ ಅವರು ಹಿಂಸಾಚಾರವನ್ನು ಖಂಡಿಸಿದ್ದಾರೆ ಎಂದು ತಿಳಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕಾಂಗೋದಲ್ಲಿ ಯುಎನ್ ವಿರೋಧಿ ಪ್ರತಿಭಟನೆ: 3 ಶಾಂತಿಪಾಲನ ಸೈನಿಕರು, 12 ನಾಗರಿಕರು ಮೃತ

    ಕಾಂಗೋದಲ್ಲಿ ಯುಎನ್ ವಿರೋಧಿ ಪ್ರತಿಭಟನೆ: 3 ಶಾಂತಿಪಾಲನ ಸೈನಿಕರು, 12 ನಾಗರಿಕರು ಮೃತ

    ಕಿನ್ಶಾಸ: ಪೂರ್ವ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ಮಂಗಳವಾರ ನಡೆದ ಯುಎನ್ ವಿರೋಧಿ ಪ್ರತಿಭಟನೆಯ ಎರಡನೇ ದಿನ ಯುಎನ್‌ ಮೂವರು ಶಾಂತಿಪಾಲಕರು ಮತ್ತು 12 ನಾಗರಿಕರು ಸಾವನ್ನಪ್ಪಿದ್ದಾರೆ.

    MONUSCO ಎಂದು ಕರೆಯಲ್ಪಡುವ ಯುಎನ್ ಮಿಷನ್, ಮಿಲಿಟರಿಯ ಹಿಂಸಾಚಾರದ ವಿರುದ್ಧ ನಾಗರಿಕರನ್ನು ರಕ್ಷಿಸಲು ವಿಫಲವಾಗಿದೆ ಎಂದು ಪ್ರತಿಭಟನೆಗಳು ನಡೆಯುತ್ತಿದೆ. ಯುಎನ್ ಉಪ ವಕ್ತಾರ ಫರ್ಹಾನ್ ಹಕ್ ಈ ಕುರಿತು ಮಾತನಾಡಿದ್ದು, ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರೆಸ್ ಅವರು ಹಿಂಸಾಚಾರವನ್ನು ಖಂಡಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಭಾರೀ ಮಳೆ ತಾತ್ಕಾಲಿಕ ಸ್ಥಗಿತಗೊಂಡ ಅಮರನಾಥ ಯಾತ್ರೆ – ಪ್ರವಾಹದ ಭೀತಿ

    ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗಳ ವಿರುದ್ಧ ನಿರ್ದೇಶಿಸಿದ ಯಾವುದೇ ದಾಳಿಯು ಯುದ್ಧ ಅಪರಾಧವಾಗಬಹುದು. ಈ ಘಟನೆಗಳ ಬಗ್ಗೆ ತ್ವರಿತವಾಗಿ ತನಿಖೆ ನಡೆಸುವಂತೆ ಕಾಂಗೋ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ಇದಕ್ಕೆ ಕಾರಣರಾದವರನ್ನು ನ್ಯಾಯಾಂಗಕ್ಕೆ ತನ್ನಿ ಎಂದು ಮನವಿ ಮಾಡಿಕೊಂಡರು.

    ಏನಿದು?
    ಸೋಮವಾರದಂದು ಗೋಮಾ ನಗರದಲ್ಲಿ ಪ್ರತಿಭಟನೆಗಳು ಪ್ರಾರಂಭವಾದವು. ಮಂಗಳವಾರ ಬುಟೆಂಬೊಗೆ ಹರಡಿತು. ಪ್ರತಿಭಟನೆ ವೇಳೆ ಯುಎನ್ ಸೈನಿಕ ಮತ್ತು ಇಬ್ಬರು ಯುಎನ್ ಪೊಲೀಸರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಇದನ್ನೂ ಓದಿ: ‘ಎಗ್ ಬೋಂಡಾ’ ಮಾಡುವ ಸರಳವಾದ ವಿಧಾನ – ಟ್ರೈ ಮಾಡಿ

    ಎರಡೂ ನಗರಗಳಲ್ಲಿ ನೂರಾರು ಪ್ರತಿಭಟನಾಕಾರರು ಕಲ್ಲುಗಳು ಮತ್ತು ಪೆಟ್ರೋಲ್ ಬಾಂಬ್‍ಗಳನ್ನು ಎಸೆದು ಯುಎನ್ ಕಟ್ಟಡಗಳನ್ನು ಧ್ವಂಸಗೊಳಿಸಿದರು. ಪ್ರತಿಭಟನಾಕಾರರು U.N ಶಾಂತಿಪಾಲನಾ ಪಡೆಗಳ ಪ್ರತಿದಾಳಿಯಿಂದ ಆಕ್ರೋಶಗೊಳುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

    ಗೋಮಾದಲ್ಲಿ ಯುಎನ್ ಶಾಂತಿಪಾಲನ ಸೈನಿಕರು ಇಬ್ಬರು ಪ್ರತಿಭಟನಾಕಾರರನ್ನು ಗುಂಡಿಕ್ಕಿ ಕೊಂದಿದ್ದಾರೆ. ಸರ್ಕಾರದ ವಕ್ತಾರ ಪ್ಯಾಟ್ರಿಕ್ ಮುಯಾಯಾ ಅವರು ಈ ಕುರಿತು ಮಾಹಿತಿ ಕೊಟ್ಟಿದ್ದು, ಈ ಪ್ರತಿಭಟನೆಯಲ್ಲಿ ಐದು ಜನರು ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಆಕೆಯ ಮೇಲೆ ಪದೇ-ಪದೇ ಅತ್ಯಾಚಾರ ಮಾಡಿದ್ರು, ನರಮಾಂಸ ತಿನ್ನುವಂತೆ ಒತ್ತಾಯಿಸಿದ್ರು!

    ಆಕೆಯ ಮೇಲೆ ಪದೇ-ಪದೇ ಅತ್ಯಾಚಾರ ಮಾಡಿದ್ರು, ನರಮಾಂಸ ತಿನ್ನುವಂತೆ ಒತ್ತಾಯಿಸಿದ್ರು!

    ಬನ್ಗುಯಿ: ಕಾಂಗೋನಲ್ಲಿ ಉಗ್ರಗಾಮಿಗಳು ಮಹಿಳೆಯೊಬ್ಬರನ್ನು ಎರಡು ಬಾರಿ ಅಪಹರಿಸಿದ್ದಾರೆ. ಪದೇ ಪದೇ ಅತ್ಯಾಚಾರ ಎಸಗಿದ್ದಲ್ಲದೇ ಆಕೆಗೆ ನರ ಮಾಂಸವನ್ನು ಬೇಯಿಸಿ ತಿನ್ನುವಂತೆ ಒತ್ತಾಯಿಸಿದ್ದಾರೆ ಎಂದು ಕಾಂಗೋಲೀಸ್ ಹಕ್ಕುಗಳ ಗುಂಪು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ತಿಳಿಸಿದೆ.

    STOP RAPE

    ಮಹಿಳಾ ಹಕ್ಕುಗಳ ಗುಂಪಿನ ಮಹಿಳಾ ಸಾಲಿಡಾರಿಟಿ ಫಾರ್ ಇಂಟಿಗ್ರೇಟೆಡ್ ಪೀಸ್ ಅಂಡ್ ಡೆವಲಪ್‌ಮೆಂಟ್ (SOFEPADI)ನ ಅಧ್ಯಕ್ಷೆ ಜೂಲಿಯೆನ್ ಲುಸೆಂಗೆ, ಕಾಂಗೋದ ಪೂರ್ವದ ಸಂಘರ್ಷದ ಬಗ್ಗೆ 15 ಸದಸ್ಯರ ಮಂಡಳಿಯನ್ನು ಉದ್ದೇಶಿಸಿ ಮಾತನಾಡುವಾಗ ಅತ್ಯಾಚಾರಕ್ಕೆ ಸಿಕ್ಕಿ ನಲುಗಿದ ಮಹಿಳೆಯೊಬ್ಬರ ಕರಾಳ ಕಥೆಯನ್ನು ಎಳೆ-ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಟಾಯ್ಲೆಟ್‌ ನೀರು ಮರುಬಳಸಿ ತಯಾರಿಸಿದ ಬಿಯರ್‌ ಸೂಪರ್‌ ಎಂದ ಮದ್ಯಪ್ರಿಯರು!

    ಕಳೆದ ಮೇ ತಿಂಗಳಿನಲ್ಲಿ ಕಾಂಗೋ ಸರ್ಕಾರ ಹಾಗೂ ಬಂಡಾಯ ಗುಂಪುಗಳ ನಡುವೆ ನಡೆಯುತ್ತಿದ್ದ ಹೋರಾಟವು ಹಿಂಸಾಚಾರಕ್ಕೆ ತಿರುಗಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಈ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಕಾಂಗೋ ಹಾಗೂ ಅಲ್ಲಿನ ನಿಯಮಗಳ ಕುರಿತು ವಿಶ್ಲೇಷಣೆ ನಡೆಸಿತು.

    ಈ ವೇಳೆ ಅಪಹರಣಕ್ಕೊಳಗಾದ ಕುಟುಂಬ ಸದಸ್ಯರೊಬ್ಬರನ್ನು ಬಿಡುಗಡೆ ಮಾಡಲು ಹೋದಾಗ CODECO ಉಗ್ರಗಾಮಿಗಳು ಮಹಿಳೆಯನ್ನು ಅಪಹರಿಸಿದ್ದರು. ಆಕೆಯ ಮೇಲೆ ಪದೇ-ಪದೇ ಅತ್ಯಾಚಾರ ನಡೆಸಿದರು. ದೈಹಿಕವಾಗಿ ಹಿಂಸಿಸಿದ್ರು. ಇಷ್ಟು ಸಾಲದೆಂಬಂತೆ ಒಬ್ಬ ವ್ಯಕ್ತಿಯ ಕತ್ತನ್ನು ಸೀಳಿ, ಅವನ ಕರುಳನ್ನು ಹೊರತೆಗೆದು ಬೇಯಿಸುವಂತೆ ಹೇಳಿದ್ದಾರೆ. ಜೊತೆಗೆ ಅದರಿಂದಲೇ ಅಡುಗೆ ತಯಾರಿಸಲು ಹೇಳಿದ್ದಾರೆ. ಊಟ ತಯಾರಿಸಿದ ಬಳಿಕ ಎಲ್ಲ ಕೈದಿಗಳಿಗೂ ಮನುಷ್ಯನ ಮಾಂಸವನ್ನೇ ತಿನ್ನಿಸಿದ್ದಾರೆ ಎಂದು ಲುಸೆಂಜ್ ಮಹಿಳೆಯ ಕಥೆ ವಿವರಿಸುತ್ತಾ ಭದ್ರತಾ ಮಂಡಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಸೆಪ್ಟೆಂಬರ್‌ವರೆಗೂ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಿದ ದೆಹಲಿ ಸರ್ಕಾರ

    ಅಲ್ಲಿಂದ ಕೆಲ ದಿನಗಳ ನಂತರ ಮಹಿಳೆಯನ್ನು ಬಿಡುಗಡೆ ಮಾಡಲಾಯಿತು. ಮಹಿಳೆ ಮನೆಗೆ ಮರಳುತ್ತಿರುವಾಗ ಮತ್ತೊಂದು ಉಗ್ರಗಾಮಿಗಳ ಗುಂಪೊಂದು ಆಕೆಯನ್ನು ಅಪಹರಿಸಿದೆ. ಅಲ್ಲಿಯೂ ಕೂಡ ಆಕೆಯ ಮೇಲೆ ನಿರಂತರ ಅತ್ಯಾಚಾರ ಎಸಗಲಾಗಿದೆ. ಮತ್ತೆ ನರ ಮಾಂಸವನ್ನು ಬೇಯಿಸಿ ತಿನ್ನುವಂತೆ ಒತ್ತಾಯಿಸಲಾಗಿದೆ. ಅಂತಿಮವಾಗಿ ಅಲ್ಲಿಂದ ತಪ್ಪಿಸಿಕೊಂಡ ಮಹಿಳೆ ತನ್ನ ಕಥೆಯನ್ನು ಹೇಳಿಕೊಂಡಿರುವುದಾಗಿ ವಿವರಿಸಿದ್ದಾರೆ.

    ದೀರ್ಘಕಾಲ ಹೋರಾಡುತ್ತಿರುವ ಹಲವು ಸಶಸ್ತ್ರ ಸೇನಾ ಪಡೆಗಳಲ್ಲಿ ಕಾಂಗೋದ CODECO ಸಹ ಒಂದಾಗಿದೆ. ಕಳೆದ ದಶಕಗಳಲ್ಲಿ ಈ ಪಡೆಯು ಸಾವಿರಾರು ಜನರನ್ನು ಕೊಂದು ಲಕ್ಷಾಂತರ ಜನರನ್ನು ಸ್ಥಳಾಂತರಿಸಿದೆ ಎಂದು ಯುನ್ ಭದ್ರತಾ ಮಂಡಳಿ ಸಭೆಯಲ್ಲಿ ತಿಳಿದುಬಂದಿದೆ.

    Live Tv

  • ಇಬ್ಬರು ಯುಎನ್ ತಜ್ಞರ ಹತ್ಯೆ – 51 ಮಂದಿಗೆ ಮರಣದಂಡನೆ

    ಇಬ್ಬರು ಯುಎನ್ ತಜ್ಞರ ಹತ್ಯೆ – 51 ಮಂದಿಗೆ ಮರಣದಂಡನೆ

    ಕಿನ್ಶಾಸ: ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ಮಿಲಿಟರಿ ನ್ಯಾಯಾಲಯ ಶನಿವಾರ ಇಬ್ಬರು ವಿಶ್ವಸಂಸ್ಥೆಯ ತಜ್ಞರ ಹತ್ಯೆಗೈದ 51 ಜನರಿಗೆ ಮರಣದಂಡನೆ ವಿಧಿಸಿದೆ.

    2017ರಲ್ಲಿ ಇಬ್ಬರು ಯುಎನ್ ತಜ್ಞರ ಹತ್ಯೆಯಾಗಿತ್ತು. ಈ ಹತ್ಯೆಗೆ ಸಂಬಂಧ ಪಟ್ಟ 50 ಕ್ಕೂ ಹೆಚ್ಚು ಜನರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಕಳೆದ ನಾಲ್ಕು ವರ್ಷಗಳಿಂದ ನಡೆಯುತ್ತಿರುವ ವಿಚಾರಣೆಯಲ್ಲಿ ಹಲವರು ನ್ಯಾಯಾಲಯಕ್ಕೆ ಗೈರಾಗುತ್ತಿದ್ದು. ಈಗ ಕೋರ್ಟ್ ಬರೋಬ್ಬರಿ 51 ಮಂದಿಗೆ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ.

    2017ರಲ್ಲಿ ಸರ್ಕಾರ ಹಾಗೂ ಸ್ಥಳೀಯ ಗುಂಪಿನ ನಡುವೆ ಸಂಘರ್ಷ ಏರ್ಪಟ್ಟಿತ್ತು. ಈ ಸಂದರ್ಭದಲ್ಲಿ ಅಮೆರಿಕ ಮೂಲದ ಮೈಕೆಲ್ ಶಾರ್ಪ್ ಹಾಗೂ ಚಿಲಿ ಮೂಲದ ಝೈದಾ ಕ್ಯಾಟಲಾನ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಅವರು ಸಾವನ್ನಪ್ಪಿದ 16 ದಿನಗಳ ಬಳಿಕ 2017 ಮಾರ್ಚ್ 28ರಂದು ಶವ ಪತ್ತೆಯಾಗಿತ್ತು. ಇದನ್ನೂ ಓದಿ: ಇರಾಕ್ ಏರ್‌ಸ್ಟ್ರೈಕ್ – 6 ಐಸಿಸ್‌ ಉಗ್ರರ ಹತ್ಯೆ

    2016ರಲ್ಲಿ ಸ್ಥಳೀಯ ಸಾಂಪ್ರದಾಯಿಕ ಮುಖ್ಯಸ್ಥ ಕಮುಯಿನಾ ನ್ಸಾಪು ಅವರ ಹತ್ಯೆಯ ಬಳಿಕ ಈ ಸಂಘರ್ಷ ಪ್ರಾರಂಭವಾಗಿತ್ತು. ಸಂಘರ್ಷದಲ್ಲಿ 3,400 ಜನರು ಪ್ರಾಣ ಬಿಟ್ಟಿದ್ದು, ಸಾವಿರಾರು ಜನರು ಊರು ಬಿಟ್ಟಿದ್ದರು. ಈ ವೇಳೆ ವಿಶ್ವಸಂಸ್ಥೆ ದೇಶದಲ್ಲಿ ಶಾಂತಿ ಸ್ಥಾಪಿಸಲು ಶಾಂತಿಪಾಲನ ಪಡೆಯ ಜೊತೆ ತಜ್ಞರನ್ನು ಕಳುಹಿಸಿಕೊಟ್ಟಿತ್ತು. ಇದನ್ನೂ ಓದಿ: ಅಮೆರಿಕದಲ್ಲಿ ಭಾರಿ ಹಿಮಪಾತದ ಸುಳಿವು – ನ್ಯೂಯಾರ್ಕ್ ಸೇರಿ ಹಲವೆಡೆ ತುರ್ತು ಪರಿಸ್ಥಿತಿ ಘೋಷಣೆ

    ವಿಶ್ವಸಂಸ್ಥೆಯ ವಿರುದ್ಧ ಸೇಡು ತೀರಿಸಿಕೊಳ್ಳಲು ಇಬ್ಬರು ಯುಎನ್ ತಜ್ಞರ ಹತ್ಯೆಗೈಯಲಾಗಿತ್ತು. ಶಿಕ್ಷೆ ಒಳಗಾದವರ ಪೈಕಿ 22 ಮಂದಿ ಪರಾರಿಯಾಗಿದ್ದಾರೆ.

  • 11 ಸಾವಿರ ಜನರ ಬಲಿ ಪಡೆದಿದ್ದ ಎಬೋಲಾ ಮತ್ತೆ ಬಂತು – ಈ ತಿಂಗಳಲ್ಲಿ ಸತ್ತಿದ್ದು 27 ಮಂದಿ!

    11 ಸಾವಿರ ಜನರ ಬಲಿ ಪಡೆದಿದ್ದ ಎಬೋಲಾ ಮತ್ತೆ ಬಂತು – ಈ ತಿಂಗಳಲ್ಲಿ ಸತ್ತಿದ್ದು 27 ಮಂದಿ!

    ಕಾಂಗೋ/ಬೆಂಗಳೂರು: ಕೇರಳದಲ್ಲಿ ನಿಪಾ ವೈರಸ್ ಪತ್ತೆಯಾದ ಬೆನ್ನಲ್ಲೇ, 2014ರಲ್ಲಿ ವಿಶ್ವವನ್ನೇ ಬೆಚ್ಚಿಬೀಳಿಸಿದ್ದ ಎಬೋಲಾ ಆಫ್ರಿಕಾದಲ್ಲಿ ಮತ್ತೆ ಕಾಣಿಸಿಕೊಂಡಿದೆ. ಮಧ್ಯ ಆಫ್ರಿಕಾದ ಕಾಂಗೋದಲ್ಲಿ ಈ ತಿಂಗಳಲ್ಲೇ ಒಟ್ಟು 27 ಮಂದಿ ಈ ಮಹಾಮಾರಿಗೆ ಬಲಿಯಾಗಿದ್ದಾರೆ. 2014ರಲ್ಲಿ ಎಬೋಲಾ ವೈರಸ್‍ನಿಂದಾಗಿ 11310 ಜನರು ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಎಬೋಲಾವನ್ನು ಜಾಗತಿಕ ಮಹಾಮಾರಿ ಎಂದು ಘೋಷಿಸಿತ್ತು.

    ಈ ಬಾರಿ ಈಗಾಗಲೇ 58 ಎಬೋಲಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಈ ನಡುವೆ ಎಬೋಲಾ ಪತ್ತೆಯಾಗಿ ಎಂಬಂಡ್ಕ ನಗರದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಆಸ್ಪತ್ರೆಯಿಂದ ಪರಾರಿಯಾಗಿದ್ದರು. ಇವರನ್ನು ಪತ್ತೆ ಹಚ್ಚಿ ಹಿಡಿದರೂ ಇವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಆರೋಗ್ಯ ಇಲಾಖೆಯ ಪ್ರತ್ಯೇಕ ತಂಡ ಇವರ ಅಂತ್ಯಸಂಸ್ಕಾರ ನಡೆಸಿದೆ. 15 ಲಕ್ಷ ಜನಸಂಖ್ಯೆ ಇರುವ ಎಂಬಂಡ್ಕ ನಗರದಲ್ಲಿ ರೋಗ ಇನ್ನಷ್ಟು ಉಲ್ಬಣವಾಗುವ ಸಾಧ್ಯತೆಯಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

    ಎಬೋಲಾ ಎಂದರೇನು?: 1976ರಲ್ಲಿ ಕಾಂಗೋದ ಎಬೋಲಾ ನದಿ ತೀರದ ಪ್ರದೇಶದಲ್ಲಿ ಪತ್ತೆಯಾದ ವೈರಾಣು. ಹೀಗಾಗಿ ಇದಕ್ಕೆ ಎಬೋಲಾ ಎಂಬ ಹೆಸರು ಬಂತು. ಪೀಟರ್ ಪೈಯೋಟ್ ಎಂಬವರು ಎಬೋಲಾ ವೈರಸನ್ನು ಪತ್ತೆ ಹಚ್ಚಿದ್ದರು. ಈವರೆಗಿನ ವೈರಾಣುಗಳ ಪೈಕಿ ಅತ್ಯಂತ ಅಪಾಯಕಾರಿಯಾಗಿರುವ ವೈರಸ್. 1976ರಲ್ಲಿ ಈ ಮಹಾಮಾರಿ 400ಕ್ಕೂ ಹೆಚ್ಚು ಜನರನ್ನು ಬಲಿ ಪಡೆಯಿತು. ಇದು ಕೋತಿ, ಗೊರಿಲ್ಲಾ, ಚಿಂಪಾಂಜಿ, ಬಾವಲಿಗಳ ಮೂಲಕ ಹರಡುವ ರೋಗ.

    ಎಬೋಲಾ ಲಕ್ಷಣಗಳೇನು?: ತಲೆನೋವು, ಗಂಟಲು ಕೆರೆತ, ಸ್ನಾಯುಗಳಲ್ಲಿ ನೋವು, ಜ್ವರ, ಹೊಟ್ಟೆನೋವು, ದೇಹದಲ್ಲಿ ಗುಳ್ಳೆಗಳು ಕಾಣಿಸುತ್ತದೆ. ಮುಂದಿನ ಹಂತದಲ್ಲಿ ದೇಹದ ಒಳಭಾಗ ಸೇರಿ ಕಿವಿ, ಮೂಗಿನ ಮೂಲಕ ರಕ್ತ ಸೋರಿಕೆಯಾಗುತ್ತದೆ. ಕಾಯಿಲೆ ಪೀಡಿತರ ನೇರಸಂಪರ್ಕದಿಂದ ಇದು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ರೋಗಿಯ ರಕ್ತ, ಬೆವರು, ವಾಂತಿ, ಮೂತ್ರ, ವೀರ್ಯದ ಸಂಪರ್ಕದಿಂದ ಕಾಯಿಲೆ ಹರಡುತ್ತದೆ.

    ಎಬೋಲಾ ಹರಡಿದ 10 ಜನರಲ್ಲಿ 9 ಜನರ ಸಾವು ಬಹುತೇಕ ಖಚಿತ ಎಂಬ ಕಾರಣಕ್ಕೆ ಎಬೋಲಾ ಅಪಾಯಕಾರಿ ವೈರಸ್ ಎಂದೇ ಕುಖ್ಯಾತಿ. ಈ ವೈರಸ್ ರೋಗಿಯ ಶರೀರ ಪ್ರವೇಶಿಸಿದ 2ರಿಂದ 21 ದಿನದ ಒಳಗಡೆ ರೋಗಲಕ್ಷಣಗಳು ಕಾಣಿಸುತ್ತವೆ. ಇದಾಗಿ 16 ದಿನದೊಳಗೆ ಸಾವು ಸಂಭವಿಸುವ ಸಾಧ್ಯತೆಯೂ ಇದೆ. ಒಂದು ಬಾರಿ ಈ ವೈರಸ್ ಪತ್ತೆಯಾದರೆ ರೋಗಿಯನ್ನು ಬೇರೆಯವರ ಸಂಪರ್ಕಕ್ಕೆ ಬಿಡದಿರುವುದೇ ಈ ವೈರಸ್ ಹರಡದಿರುವಂತೆ ಮಾಡುವ ಸುಲಭೋಪಾಯ.

    ರೋಗಿ ಸತ್ತರೂ ಸಾಯಲ್ಲ ವೈರಾಣು!: ಎಬೋಲಾ ರೋಗದಿಂದ ಸಾವನ್ನಪ್ಪಿದ ವ್ಯಕ್ತಿಯ ದೇಹದಲ್ಲಿ ಎಬೋಲಾ ವೈರಸ್ ಸುಮಾರು 7 ದಿನಗಳ ಕಾಲ ಜೀವಂತವಾಗಿರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧ್ಯಯನ ವರದಿಯೇ ಹೇಳಿದೆ. ಸತ್ತ ವ್ಯಕ್ತಿಯನ್ನು ಮುಟ್ಟುವುದರಿಂದಲೂ ಈ ರೋಗ ಹರಡುವ ಸಾಧ್ಯತೆಯಿದೆ. ಎಬೋಲಾದಿಂದ ಸಾವನ್ನಪ್ಪಿದ ವ್ಯಕ್ತಿಯ ಮೃತದೇಹ ಭಾರೀ ಅಪಾಯಕಾರಿ. ಮೃತದೇಹವನ್ನು ಸುಟ್ಟರೂ ಎಬೋಲಾ ಇತರರಿಗೆ ಹರಡುವ ಸಾಧ್ಯತೆ ಇರುತ್ತದೆ.

    ಎಬೋಲಾ ಹರಡುವಿಕೆ ಹೇಗೆ?: ಐದು ಬೇರೆ ಬೇರೆ ವಿಧದ ವೈರಸ್‍ಗಳು ಈ ಕಾಯಿಲೆಯನ್ನು ಹರಡುತ್ತವೆ. ಈ ಎಲ್ಲಾ ವಿಧದ ವೈರಸ್‍ಗಳು ಮನುಷ್ಯರಲ್ಲಿಯೂ ಈ ಕಾಯಿಲೆಯನ್ನು ಹರಡಲು ಸಮರ್ಥವಾಗಿವೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿಗಳ ಪ್ರಕಾರ ಬಾಧಿತ ಪ್ರಾಣಿಯ ರಕ್ತ, ದೇಹದ ಸ್ರಾವಗಳು, ಅಂಗಾಂಗಗಳು ಅಥವಾ ದೇಹದ ಇತರ ದ್ರವಾಂಶಗಳ ಮೂಲಕ ಆರೋಗ್ಯವಂತ ವ್ಯಕ್ತಿಗೆ ಸೋಂಕು ಬಾಧಿಸಬಹುದು.

    ಮನುಷ್ಯರಲ್ಲಿ ಹರಡುವಿಕೆ ಹೇಗೆ?
    – ಬಾಧಿತ ವ್ಯಕ್ತಿಯ ರಕ್ತ, ದೇಹದ – ಸ್ರಾವಗಳು, ಅಂಗಾಂಗಗಳು ಅಥವಾ ದೇಹದ ಇತರ ದ್ರವಾಂಶಗಳ ಸಂಪರ್ಕದ ಮೂಲಕ ಹರಡಬಹುದು.
    – ಸೋಂಕು ಬಾಧಿತರ ದೇಹ ದ್ರವಾಂಶಗಳ ಸಂಪರ್ಕದಿಂದ ಆರೋಗ್ಯ ಕಾರ್ಯಕರ್ತರಿಗೆ ಈ ಕಾಯಿಲೆಯು ಹರಡಬಹುದು.
    – ಸೋಂಕು ಬಾಧಿತ ಪ್ರಾಣಿಯ ಮಾಂಸದ ನಿರ್ವಹಣೆಯ ಮೂಲಕ ಕಾಯಿಲೆಯು ಹರಡಬಹುದು.
    – ಸೋಂಕಿನಿಂದ ಮರಣ ಹೊಂದಿದ ವ್ಯಕ್ತಿಯ ದೇಹ ದ್ರವದ ಸಂಪರ್ಕದಿಂದ ಕಾಯಿಲೆಯು ಹರಡಬಹುದು.

    ಯಾರಿಗೆ ಅಪಾಯಕಾರಿ?: ಇದು ಸೋಂಕು ಕಾಯಿಲೆ ಆಗಿರುವ ಕಾರಣ, ಅಲೆಮಾರಿಗಳಲ್ಲಿ ಈ ಕಾಯಿಲೆ ಕಾಣಿಸಿಕೊಳ್ಳುವ ಮತ್ತು ಅವರ ಮೂಲಕ ಹರಡುವ ಸಾಧ್ಯತೆಗಳು ಹೆಚ್ಚು. ಇದು ಆಸ್ಪತ್ರೆಯ ಮೂಲಕವೂ ಹರಡಬಹುದಾದ ಸೋಂಕು ಎನ್ನುವುದು ಕುತೂಹಲದ ವಿಚಾರ. ಹಾಗಾಗಿ, ಈ ಕಾಯಿಲೆಯು ಸಾಮಾನ್ಯವಾಗಿ ಆಸ್ಪತ್ರೆಯ ಸಿಬ್ಬಂದಿಗೂ ಹರಡುವ ಸಾಧ್ಯತೆಗಳು ಇವೆ. ಇಷ್ಟೇ ಅಲ್ಲದೆ, ಈ ಸೋಂಕು ಬಾಧಿಸಬಹುದಾದ ಇನ್ನಿತರ ವರ್ಗದ ವ್ಯಕ್ತಿಗಳು ಅಂದರೆ, ಮಧುಮೇಹ ಕಾಯಿಲೆ ಇರುವವರು, ರೋಗ ಪ್ರತಿರೋಧಕ ಶಕ್ತಿ ಕಡಿಮೆ ಇರುವ ಜನರು, ಮೂತ್ರಪಿಂಡ ಮತ್ತು ಪಿತ್ತಜನಕಾಂಗ ವೈಫಲ್ಯ ಇರುವ ರೋಗಿಗಳು, ಮತ್ತು ಎಚ್‍ಐವಿ ಬಾಧಿತ ರೋಗಿಗಳು.