Tag: ಕಾಂಗ್ರಸ್

  • ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ಇನ್ನಿಲ್ಲ

    ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ಇನ್ನಿಲ್ಲ

    ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ (Dhruva Narayan) ಅವರು ಶನಿವಾರ ಮೃತಪಟ್ಟಿದ್ದಾರೆ.

    ಧ್ರುವ ನಾರಾಯಣ್‌ (61) ಅವರು ಶನಿವಾರ ಹೃದಯಾಘಾತದಿಂದ ಮೈಸೂರಿನ (Mysuru) ಡಿಆರ್‌ಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 1961 ಜುಲೈ 31ರಂದು ಚಾಮರಾಜನಗರದ ಹಗ್ಗವಾಡಿಯಲ್ಲಿ ಜನಿಸಿದ್ದ ಇವರು ಬೆಂಗಳೂರಿನ (Bengaluru) ಜಿಕೆವಿಕೆಯಲ್ಲಿ ಪದವಿ ಪಡೆದಿದ್ದರು. ಕಳೆದ 2 ವರ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ವಿಧಾನಸಭೆ ಚುನಾವಣೆ ಸ್ಪರ್ಧೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. 2 ಬಾರಿ ಶಾಸಕ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

    1983ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಧ್ರುವನಾರಾಯಣ್‌ 1984 ರಲ್ಲಿ ಜಿಕೆವಿಕೆಯ ಎನ್‌ಎಸ್‌ಯುಐ ಅಧ್ಯಕ್ಷನಾಗಿ ಆಯ್ಕೆಯಾದರು. ನಂತರ 1986 ರಲ್ಲಿ ರಾಜ್ಯ ಯುವ ಕಾಂಗ್ರೆಸ್ (Congress) ಪ್ರಧಾನ ಕಾರ್ಯದರ್ಶಿಯಾಗಿದ್ದರು. ಆದರೆ 1999ರಲ್ಲಿ ಮೊದಲ ಬಾರಿಗೆ ಸಂತೆಮಾರಳ್ಳಿ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಿ ಸೋಲನ್ನನುಭವಿಸಿದ್ದರು. ಆದರೆ 2004ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ 1 ಮತದ ಅಂತರದ ಗೆಲುವು ಸಾಧಿಸಿ ಇತಿಹಾಸವನ್ನು ಸೃಷ್ಟಿಸಿದ್ದರು. ಇದನ್ನೂ ಓದಿ: ಡಿಸ್ಕೌಂಟ್ ಸಮಯ ವಿಸ್ತರಣೆಯಾದ್ರೂ, ಟ್ರಾಫಿಕ್ ಫೈನ್ ಕಟ್ಟೋಕೆ ಆಸಕ್ತಿ ತೋರದ ವಾಹನ ಸವಾರರು

    ನಂತರ 2008ರಲ್ಲಿ ಕೊಳ್ಳೆಗಾಲ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಅದಾದ ಬಳಿಕ 2009 ಹಾಗೂ 2014 ರ ಲೋಕಸಭಾ ಚುನಾವಣೆಯಲ್ಲಿ ಸತತ ಗೆಲುವು ಸಾಧಿಸಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಸೋಲನ್ನನುಭವಿಸಿದ್ದರು. ಆದರೆ ಸೋಲಿನ ಬಳಿಕವೂ ಪಕ್ಷದಲ್ಲಿ ಹಾಗೂ ಕ್ಷೇತ್ರದಲ್ಲಿ ಆ್ಯಕ್ಟೀವ್ ಆಗಿದ್ದರು.

    ಸಂಸದರಾಗಿದ್ದ ವೇಳೆ ಅನುದಾನ ಬಳಕೆ ವಿಚಾರದಲ್ಲೂ ಧ್ರುವನಾರಾಯಣ್ ಉತ್ತಮ ಹೆಸರು ಪಡೆದಿದ್ದರು. ಚಾಮರಾಜನಗರ (Chamarajanagar) ಲೋಕಸಭಾ ಕ್ಷೇತ್ರದಲ್ಲಿ ಉತ್ತಮ ಹೆಸರು ಪಡೆದಿದ್ದರು. ವಿಧಾನಸಭಾ ಚುನಾವಣೆಗೆ ನಂಜನಗೂಡು ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದರು. ಈ ಬಾರಿ ಚುನಾವಣೆಯಲ್ಲಿ ನಂಜನಗೂಡು ಕಾಂಗ್ರೆಸ್‌ ಅಭ್ಯಥಿಯಾಗಿ ಸ್ಪರ್ಧಿಸುವವರಿದ್ದರು. ಈ ಹಿನ್ನೆಲೆಯಲ್ಲಿ ಮತದಾರರನ್ನು ಭೇಟಿ ಮಾಡುವ ಕಾರ್ಯದಲ್ಲಿ ತೊಡಗಿದ್ದರು. ಇದನ್ನೂ ಓದಿ: ವೋಟಿಗಾಗಿ ಫ್ರೀ ಸ್ಕೀಂಗಳ ಆಮಿಷ- ಉಚಿತ ಸೈಟ್ ನೀಡಲು ಮುಂದಾದ ಬಿಜೆಪಿ ಟಿಕೆಟ್ ಆಕಾಂಕ್ಷಿ

  • ರಾಜ್ಯ ಕಾಂಗ್ರೆಸ್‌ನಲ್ಲಿ ಎರಡೆರಡು 90+ ಟೆನ್ಶನ್ ಬಲು ಜೋರು

    ರಾಜ್ಯ ಕಾಂಗ್ರೆಸ್‌ನಲ್ಲಿ ಎರಡೆರಡು 90+ ಟೆನ್ಶನ್ ಬಲು ಜೋರು

    ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ (Congress) 90 ವರ್ಷ ತುಂಬಿದ ಇಬ್ಬರು ಹಿರಿಯ ನಾಯಕರು ಟಿಕೆಟ್‌ಗಾಗಿ ಪಟ್ಟು ಹಿಡಿದು ಕುಳಿತಿದ್ದು, ಕೈ ಪಾಳಯಕ್ಕೆ ತಲೆ ನೋವಾಗಿದೆ ಎನ್ನಲಾಗಿದೆ. ಎಷ್ಟೇ ಪ್ರಯತ್ನಿಸಿದರೂ ಮನವೊಲಿಕೆ ಆಗುತ್ತಿಲ್ಲ ಏನು ಮಾಡುವುದು ಎಂಬ ಸಂಕಷ್ಟ ಕೈ ನಾಯಕರಿಗೆ ಎದುರಾಗಿದೆ ಎನ್ನಲಾಗುತ್ತಿದೆ.

    90 ವರ್ಷ ಮೀರಿದ ಇಬ್ಬರು ನಾಯಕರು ಈಗಲೂ ತಮಗೆ ಟಿಕೆಟ್ ಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದಾರೆ ಎನ್ನಲಾಗಿದೆ. 90 ವರ್ಷ ದಾಟಿರುವ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ (Kagodu Thimmappa) ಹಾಗೂ ಶಾಮನೂರು ಶಿವಶಂಕರಪ್ಪ (Shamanur Shivashankarappa). ಒಬ್ಬರದು ನನಗೆ ಇಲ್ಲಾ ನನ್ನ ಮಗಳಿಗೆ ಟಿಕೆಟ್ ಬೇಕು ಎಂಬ ಡಿಮ್ಯಾಂಡ್. ಮಗಳಿಗೆ ಕೊಡದಿದ್ದರೆ ನನಗೆ ಹೊರತು ಬೇರೆಯವರಿಗೆ ಟಿಕೆಟ್ ಕೊಡಬಾರದು. ಇದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪಟ್ಟಾಗಿದ್ದು, ಹಿರಿಯ ನಾಯಕನ ಪಟ್ಟಿಗೆ ಕೈ ನಾಯಕರೇ ತಲೆ ಕೆಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಸಿಲಿಂಡರ್ ಬ್ಲಾಸ್ಟ್- ಗುಡಿಸಲು ಬೆಂಕಿಗಾಹುತಿ, ಮಗಳ ಚಿಕಿತ್ಸೆಗೆ ತೆಗೆದಿಟ್ಟ ಹಣವೂ ಭಸ್ಮ

    ಇನ್ನೊಂದು ಕಡೆ ನನ್ನ ಕುಟುಂಬದಲ್ಲಿ ಬೇರೆಯವರಿಗೆ ಕೊಟ್ಟರು ನಾನು ಒಪ್ಪಲ್ಲ. ಟಿಕೆಟ್ ನನಗೆ ಕೊಡಬೇಕು ಎಂಬ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಹಿರಿಯರಾದ ಶಾಮನೂರು ಶಿವಶಂಕರಪ್ಪ ಈ ಬಾರಿಯೂ ತಮಗೆ ಟಿಕೆಟ್ ಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದಾರೆ ಎನ್ನಲಾಗಿದೆ. ಇಬ್ಬರು 90+ ನಾಯಕರ ಮನವೊಲಿಸುವಲ್ಲಿ ಕೈ ನಾಯಕರು ವಿಫಲರಾಗಿದ್ದಾರೆ ಎನ್ನಲಾಗಿದೆ. ಇಬ್ಬರೂ 90+ ನಾಯಕರ ಟಿಕೆಟ್ ಡಿಮ್ಯಾಂಡ್ ಅವರನ್ನು ಮನವೊಲಿಕೆ ಸಾಧ್ಯವಾಗದಿರುವುದು ಕಾಂಗ್ರೆಸ್ ಪಾಲಿಗೆ ದೊಡ್ಡ ತಲೆ ಬಿಸಿಯಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಮೋದಿ ಆಗಮನ ಹಿನ್ನೆಲೆ ವೈಮನಸ್ಸು ಮರೆತು ಒಂದಾದ ಬಿಜೆಪಿ ನಾಯಕರು

  • ಪಿಎಂ ಆವಾಸ್ ಯೋಜನೆಯಲ್ಲಿ ರಾಜ್ಯಕ್ಕೆ ಅನುದಾನ ಕಡಿತ – ಬಿಜೆಪಿಗೆ ವೋಟ್ ಹಾಕಿದ ತಪ್ಪಿಗೆ ಈ ಶಿಕ್ಷೆಯೇ?: ದಿನೇಶ್ ಗುಂಡೂರಾವ್

    ಪಿಎಂ ಆವಾಸ್ ಯೋಜನೆಯಲ್ಲಿ ರಾಜ್ಯಕ್ಕೆ ಅನುದಾನ ಕಡಿತ – ಬಿಜೆಪಿಗೆ ವೋಟ್ ಹಾಕಿದ ತಪ್ಪಿಗೆ ಈ ಶಿಕ್ಷೆಯೇ?: ದಿನೇಶ್ ಗುಂಡೂರಾವ್

    ಬೆಂಗಳೂರು: ಪಿಎಂ ಆವಾಸ್ ಯೋಜನೆಯಲ್ಲಿ ನೆರೆಯ ಆಂಧ್ರ, ತಮಿಳುನಾಡು, ಮಹಾರಾಷ್ಟ್ರಗಳಿಗೆ ಅನುದಾನ ಹೆಚ್ಚಳವಾಗಿದೆ. ಆದರೆ ಕರ್ನಾಟಕಕ್ಕೆ ಅರ್ಧದಷ್ಟು ಅನುದಾನ ಕಡಿತವಾಗಿದೆ. ಕೇಂದ್ರದಿಂದ ಕರ್ನಾಟಕಕ್ಕೆ ಯಾಕೆ ಈ ತಾರತಮ್ಯ? ರಾಜ್ಯದ ಜನರು ಬಿಜೆಪಿಗೆ ವೋಟ್‌ ಹಾಕಿದ ತಪ್ಪಿಗೆ ಈ ಶಿಕ್ಷೆಯೇ ಎಂದು ಕೇಂದ್ರ ಸರ್ಕಾರದ ವಿರುದ್ಧ ದಿನೇಶ್ ಗುಂಡೂರಾವ್ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ಜಿಎಸ್‍ಟಿ ಪರಿಹಾರದಲ್ಲೂ ರಾಜ್ಯಕ್ಕೆ ಅನ್ಯಾಯ. ಜಿಎಸ್‍ಟಿ ಬಾಕಿಯಲ್ಲೂ ಅನ್ಯಾಯ. 5,495 ಕೋಟಿ ರೂ. ವಿಶೇಷ ಅನುದಾನದಲ್ಲೂ ರಾಜ್ಯಕ್ಕೆ ಅನ್ಯಾಯ. ಈಗ ಪಿಎಂ ಆವಾಸ್ ಯೋಜನೆಯ ಅನುದಾನದಲ್ಲೂ ಅನ್ಯಾಯ. ಬಿಜೆಪಿಯ 25 ಸಂಸದರನ್ನು ಆಯ್ಕೆ ಮಾಡಿದ ರಾಜ್ಯದ ಜನರಿಗೆ ಇದೇನಾ ಪ್ರತಿಫಲ? ಬಿಜೆಪಿಯವರೇ ಡಬಲ್ ಇಂಜಿನ್ ಸರ್ಕಾರದ ಸ್ವರ್ಗ ಸೃಷ್ಟಿಯೆಂದರೆ ರಾಜ್ಯಕ್ಕೆ ಅನ್ಯಾಯವೆಸಗುವುದೇ? ಇದನ್ನೂ ಓದಿ: ಸಂಪಾಜೆ ಘಾಟ್‌ ರಸ್ತೆಯಲ್ಲಿ ನಾಳೆಯಿಂದ ಎಲ್ಲ ವಾಹನಗಳ ಸಂಚಾರಕ್ಕೆ ಅನುಮತಿ: ಸಿಸಿ ಪಾಟೀಲ್‌

    ಪಿಎಂ ಆವಾಸ್ ಯೋಜನೆಯಲ್ಲಿ ನೆರೆಯ ಆಂಧ್ರ, ತಮಿಳುನಾಡು, ಮಹಾರಾಷ್ಟ್ರಗಳಿಗೆ ಅನುದಾನ ಹೆಚ್ಚಳವಾಗಿದೆ. ಆದರೆ ಕರ್ನಾಟಕಕ್ಕೆ ಅರ್ಧದಷ್ಟು ಅನುದಾನ ಕಡಿತವಾಗಿದೆ. ಕೇಂದ್ರದಿಂದ ಕರ್ನಾಟಕಕ್ಕೆ ಯಾಕೆ ಈ ತಾರತಮ್ಯ? ರಾಜ್ಯದ ಜನರು ಬಿಜೆಪಿಗೆ ವೋಟ್ ಹಾಕಿದ ತಪ್ಪಿಗೆ ಈ ಶಿಕ್ಷೆಯೇ? ಅಥವಾ ರಾಜ್ಯದ ಜನ ಹೇಗಿದ್ದರೂ ಕೇಳುವುದಿಲ್ಲ ಎಂಬ ಉದಾಸೀನವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ದಂತಚೋರರ ಬೆನ್ನಿಗೆ ನಿಂತ್ರಾ ಪ್ರಜ್ವಲ್‌ ರೇವಣ್ಣ? – ಸಿಎಂಗೆ ಮನೇಕಾ ಪತ್ರ

    Live Tv
    [brid partner=56869869 player=32851 video=960834 autoplay=true]

  • ಯೋಗಿ ಸರ್ಕಾರ ಕೆಲವೇ ಬಂಡವಾಳಶಾಹಿಗಳ ಬಗ್ಗೆ ಮಾತ್ರ ಯೋಚನೆ: ಪ್ರಿಯಾಂಕಾ

    ಯೋಗಿ ಸರ್ಕಾರ ಕೆಲವೇ ಬಂಡವಾಳಶಾಹಿಗಳ ಬಗ್ಗೆ ಮಾತ್ರ ಯೋಚನೆ: ಪ್ರಿಯಾಂಕಾ

    ನವದಹಲಿ: ಬಡವರ, ಮಧ್ಯಮ ವರ್ಗದವರ ಮಾತನ್ನು ಕೇಳದ ಸಿಎಂ ಯೋಗಿ ಸರ್ಕಾರ ಕೆಲವೇ ಬಂಡವಾಳಶಾಹಿ ಸ್ನೇಹಿತರ ಲಾಭದ ಬಗ್ಗೆ ಯೋಚಿಸುತ್ತಿದೆ ಎಂದು ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿಕಾರಿದ್ದಾರೆ.

    ಉತ್ತರಪ್ರದೇಶದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವನ್ನು ವಿರೋಧಿಸಿ ಪ್ರಿಯಾಂಕಾ ಅವರು ವಾಗ್ದಾಳಿ ನಡೆಸಿದ್ದು, ಯೋಗಿ ಸರ್ಕಾರ ಬಡವರು, ಮಧ್ಯಮ ವರ್ಗದವರ ಮಾತನ್ನು ಕೇಳುವುದಿಲ್ಲ. ಅವರು ಕೇವಲ ಲಾಭದ ಬಗ್ಗೆ ಮಾತ್ರ ಯೋಚಿಸುತ್ತದೆ. ಅವರು `ಬಂಡವಾಳಶಾಹಿ ಸ್ನೇಹಿತರು` ಎಂದು ಟೀಕಿಸಿದ್ದಾರೆ. ಇದನ್ನೂ ಓದಿ:  ರಾಜ್ಯದಲ್ಲಿಂದು 10 ಸಾವಿರಕ್ಕೂ ಕಡಿಮೆ ಪ್ರಕರಣ ದಾಖಲು – 47 ಸಾವು

    ನೋಯ್ಡಾದ ಡೂಬ್ ಪ್ರದೇಶದ ನಿವಾಸಿಗಳು ವಿದ್ಯುತ್ ಮತ್ತು ನೀರನ್ನು ಹೊಂದಲು ತಮ್ಮ ಹಕ್ಕಿಗೆ ಅರ್ಹರಾಗಿದ್ದಾರೆ ಎಂದ ಅವರು, ನೋಯ್ಡಾದ ದೂಬ್ ಪ್ರದೇಶದ ನಿವಾಸಿಗಳಿಗೆ ಅನ್ಯಾಯವನ್ನು ಮಾಡಲಾಗುತ್ತಿದೆ. ಅವರಿಗೆ ವಿದ್ಯುತ್ ಮತ್ತು ನೀರು ಪಡೆಯುವ ಎಲ್ಲ ಹಕ್ಕಿದೆ. ಈ ಸರ್ಕಾರ ಬಡವರು, ಮಧ್ಯಮ ವರ್ಗದವರ ಮಾತನ್ನು ಕೇಳುವುದಿಲ್ಲ. ಇದು ತನ್ನ ಕೆಲವೇ ಬಂಡವಾಳಶಾಹಿ ಸ್ನೇಹಿತರ ಪ್ರಯೋಜನಗಳ ಬಗ್ಗೆ ಮಾತ್ರ ಯೋಚಿಸುತ್ತದೆ. ನಾವು ಒಟ್ಟಾಗಿ ಬದಲಾವಣೆಯನ್ನು ತರಬೇಕಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

    ದೂಬ್ ಪ್ರದೇಶದ ನಿವಾಸಿಗಳಿಗಾಗಿ ನಮ್ಮ ಪಕ್ಷವು ಒಗ್ಗಟ್ಟಿನಿಂದ ನಿಂತಿದೆ. ಅವರ ಸಮಸ್ಯೆಗಳನ್ನು ಪರಿಹರಿಸಲು ನಾವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತೇವೆ. ಈ ಮೂಲಕ ಡೂಬ್‍ಬಲ್ಲಿರುವ ನನ್ನ ಎಲ್ಲ ಸಹೋದರ, ಸಹೋದರಿಯರಿಗೆ ಹೇಳಲು ಬಯಸುತ್ತೇನೆ ಎಂದು ಮತ್ತೊಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: Google Chrome – 8 ವರ್ಷಗಳ ನಂತರ ಹೊಸ ಲೋಗೋ!

  • ಮತಾಂತರ ಬಿಲ್ ತರಲು ಕಾಂಗ್ರೆಸ್ ಸಜ್ಜಾಗಿತ್ತು – ಅಂದಿನ ಸಭೆ ಬಗ್ಗೆ ಸಿದ್ದರಾಮಯ್ಯ ಮಾತು

    ಮತಾಂತರ ಬಿಲ್ ತರಲು ಕಾಂಗ್ರೆಸ್ ಸಜ್ಜಾಗಿತ್ತು – ಅಂದಿನ ಸಭೆ ಬಗ್ಗೆ ಸಿದ್ದರಾಮಯ್ಯ ಮಾತು

    ಬೆಳಗಾವಿ: 2016ರಲ್ಲಿ ಕಾಂಗ್ರೆಸ್ ಸರ್ಕಾರ ಮತಾಂತರ ಬಿಲ್ ತರಲು ತಯಾರಿ ನಡೆಸಿತ್ತು. ಬಿಲ್ ತರೋದನ್ನು ತಡೆದಿದ್ದು ಸೋನಿಯಾ ಗಾಂಧಿ. ಕುರ್ಚಿಗೆ ಕಂಟಕ ಬರುತ್ತೆ ಎಂಬ ಭಯದಲ್ಲಿ ಸಿದ್ದರಾಮಯ್ಯ ಈ ಮಸೂದೆ ತರಲಿಲ್ಲ ಎಂದು ಬಿಜೆಪಿ ಆರೋಪದ ಬೆನ್ನಲ್ಲೇ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

    ಪೋಸ್ಟ್‌ನಲ್ಲಿ ಏನಿದೆ?
    ಬಲವಂತವಾಗಿ, ಆಸೆ ಆಮಿಷ ಒಡ್ಡಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅದು ಶಿಕ್ಷಾರ್ಹ ಅಪರಾಧ ಎಂದು ನಮ್ಮ ಸಂವಿಧಾನದಲ್ಲೇ ಸ್ಪಷ್ಟವಾಗಿ ಇರುವುದರಿಂದ ರಾಜ್ಯ ಬಿಜೆಪಿ ಸರ್ಕಾರಕ್ಕೆ ಹೊಸ ಮತಾಂತರ ನಿಷೇಧ ಕಾಯ್ದೆಯ ಅಗತ್ಯವೇನಿದೆ? ಇದೇ ಕಾರಣಕ್ಕೆ ನಾವು ಕಾಯ್ದೆಯನ್ನು ವಿರೋಧ ಮಾಡುತ್ತಿದ್ದೇವೆ. ನಮ್ಮ ಸರ್ಕಾರದ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆಯ ಕರಡು ಸಂಪುಟದಲ್ಲಿ ಚರ್ಚೆಯೂ ಆಗಿಲ್ಲ, ಅನುಮೋದನೆಯೂ ಆಗಿಲ್ಲ. ಕೇವಲ ಸಂಪುಟದ ಚರ್ಚೆಗೆ ತನ್ನಿ ಎಂದು ಸಹಿ ಹಾಕಿದ ಕಡತಗಳೆಲ್ಲವೂ ಸರ್ಕಾರದ ನಿಲುವು ಆಗುವುದಿಲ್ಲ. ಇದನ್ನೂ ಓದಿ: 2016ರಲ್ಲೇ ಮತಾಂತರ ಬಿಲ್ – ಕಾಂಗ್ರೆಸ್ ಡಬಲ್ ಸ್ಟ್ಯಾಂಡರ್ಡ್

    ಸಂಸದೀಯ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ಎಂದರೆ ಸಮಾನರಲ್ಲಿ ಮೊದಲಿಗ ಎಂಬ ವ್ಯಾಖ್ಯಾನವಿದೆ. ಮುಖ್ಯಮಂತ್ರಿಯಾಗಿ ನಾನೊಬ್ಬನೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲು ಬರಲ್ಲ, ಕರಡು ಪ್ರತಿ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿ ಎಂಬ ಕಾರಣಕ್ಕೆ ಸಹಿ ಮಾಡಿದ್ದೆ. ಸಹಿ ಮಾಡಿದ ಮಾತ್ರಕ್ಕೆ ಒಪ್ಪಿದ್ದೆ ಎಂದಲ್ಲ. ನಾನು ಮತಾಂತರ ನಿಷೇಧ ಕಾಯಿದೆಯ ಕಡತವನ್ನು ಸಂಪುಟದ ಮುಂದೆ ತರುವಂತೆ ಸಹಿ ಹಾಕಿದ್ದು 2015 ರ ನವೆಂಬರ್ ತಿಂಗಳಿನಲ್ಲಿ. ಇದಾಗಿ ಎರಡೂವರೆ ವರ್ಷ ನಾವು ಅಧಿಕಾರದಲ್ಲಿ ಇದ್ದರೂ ಒಮ್ಮೆಯೂ ಅದನ್ನು ಸಂಪುಟದ ಮುಂದೆ ತರುವ ಪ್ರಯತ್ನ ಮಾಡಲಿಲ್ಲ. ಕಾರಣ ನಮ್ಮ ಸರ್ಕಾರಕ್ಕೆ ಇಂಥಾ ಮಸೂದೆಯ ಬಗ್ಗೆ ಆಸಕ್ತಿ ಇರಲಿಲ್ಲ. ಮತಾಂತರ ನಿಷೇಧ ಕುರಿತ ಈ ಹಿಂದಿನ ಕರಡು ಪ್ರತಿಗೂ, ಈಗಿನ ಮಸೂದೆಗೂ ಇರುವ ಪ್ರಮುಖ ವ್ಯತ್ಯಾಸಗಳೆಂದರೆ. ಮೊದಲನೆಯದು ಹಿಂದಿನ ಕರಡು ಪ್ರತಿಯ ನಿಯಮ 3ರಲ್ಲಿ ವಿವಾಹ ಎಂಬ ಪದ ಬಳಕೆ ಇರಲಿಲ್ಲ. ಬಿಜೆಪಿಯವರು ತಮ್ಮ ಕಾಯ್ದೆಯಲ್ಲಿ ವಿವಾಹವನ್ನು ಹೊಸದಾಗಿ ಸೇರಿಸಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಮತಾಂತರ ತಡೆ ವಿಧೇಯಕ ಅಂಗೀಕಾರ

    ಭಾರತೀಯ ದಂಡ ಸಂಹಿತೆಯ ಪ್ರಕಾರ ಸಾಕ್ಷಾಧಾರಗಳ ಕೊರತೆ ಕಂಡುಬಂದರೆ ಆರೋಪಿಯನ್ನು ತಪ್ಪಿತಸ್ಥ ಎಂದು ಪರಿಗಣಿಸಲು ಸಾಧ್ಯವಿಲ್ಲ. ಆದರೆ ಈ ಹೊಸ ಮಸೂದೆಯ ನಿಯಮ 12 ರ ಪ್ರಕಾರ ಸಾಕ್ಷಾಧಾರ ಕೊರತೆ ಇದ್ದರೂ ಅದು ದೂರುದಾರನಿಗೆ ಅನುಕೂಲ ಮಾಡಿಕೊಡಲಿದೆ. ಹೀಗಾಗಿ ಇದು ಕಾನೂನಿನ ನಿಯಮಗಳಿಗೆ ವಿರುದ್ಧವಾಗಿದೆ. ಸಂವಿಧಾನದ 21 ಮತ್ತು 25ನೇ ವಿಧಿಯನ್ವಯ ಒಬ್ಬ ವ್ಯಕ್ತಿ ತನಗಿಷ್ಟವಾದ (ಯಾವುದೇ ಧರ್ಮಕ್ಕೆ ಸೇರಿದವರಾದರೂ ಸರಿ) ವ್ಯಕ್ತಿಯನ್ನು ಪ್ರೀತಿಸಿ ಮದುವೆಯಾಗಲು ಸಂಪೂರ್ಣ ಸ್ವಾತಂತ್ರ್ಯ ನೀಡಿರುವಾಗ, ಅದನ್ನು ಬೇಡ ಎನ್ನಲು ಸರ್ಕಾರಕ್ಕೇನು ಹಕ್ಕಿದೆ? ಇದೇ ಕಾರಣಕ್ಕೆ ಗುಜರಾತ್ ಸರ್ಕಾರ ಜಾರಿಗೊಳಿಸಲು ಹೊರಟಿದ್ದ ಮತಾಂತರ ನಿಷೇಧ ಕಾಯ್ದೆಗೆ ತಡೆಯಾಜ್ಞೆ ನೀಡಿರುವ ಗುಜರಾತ್ ಹೈಕೋರ್ಟ್, ಅಲ್ಲಿನ ಸರ್ಕಾರಕ್ಕೆ ಛೀಮಾರಿ ಹಾಕಿದೆ.  ಇದನ್ನೂ ಓದಿ: ಮತಾಂತರ ತಡೆ ಮಸೂದೆಯಲ್ಲಿರುವ ಪ್ರಮುಖ ಅಂಶಗಳು ಏನು? 

    ಗುಜರಾತ್, ಉತ್ತರ ಪ್ರದೇಶ ಸರ್ಕಾರಗಳ ಮತಾಂತರ ನಿಷೇಧ ಕಾಯ್ದೆಯಲ್ಲಿ ಬಳಕೆ ಮಾಡಿರುವ ಪದಗಳು, ವಾಕ್ಯಗಳೇ ಇಲ್ಲಿಯೂ ಯಥಾವತ್ತಾಗಿವೆ. ಈ ಎಲ್ಲಾ ಸರ್ಕಾರಗಳ ಕರಡು ತಯಾರಿಕೆಯ ಹಿಂದೆ ಯಾವುದೋ ಒಂದು ಕಾಣದ ಕೈ ಇದೆ ಎಂಬ ಅನುಮಾನ ನನಗಿದೆ. ಅದು ಯಾವುದು ಎಂದು ಬಿಜೆಪಿ ಸರ್ಕಾರ ಬಹಿರಂಗಪಡಿಸಬೇಕು. ದೇಶದಲ್ಲಿ ಶತಮಾನಗಳ ಹಿಂದಿನಿಂದಲೂ ಮತಾಂತರ ನಡೆದುಕೊಂಡು ಬಂದಿದೆ. ಬ್ರಾಹ್ಮಣ ಜಾತಿಯಲ್ಲಿ ಹುಟ್ಟಿದ ಪಂಪ, ರನ್ನರು ಜೈನ ಧರ್ಮಕ್ಕೆ ಮತಾಂತರ ಗೊಂಡರು. ಸಾಮ್ರಾಟ್ ಆಶೋಕ ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಹೋಗಿಲ್ಲವೇ? ಇದಕ್ಕೆ ಕಾರಣವೇನು ಎಂಬುದು ಯಾರಿಗೂ ತಿಳಿಯದ ವಿಷಯವಲ್ಲ. ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣ ಬ್ರಾಹ್ಮಣರಾಗಿ ಹುಟ್ಟಿ ಲಿಂಗಾಯತ ಧರ್ಮ ಸ್ಥಾಪನೆ ಮಾಡಿಲ್ಲವೇ? ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಲಕ್ಷಾಂತರ ಜನರ ಜೊತೆಗೆ ಬೌದ್ಧ ಧರ್ಮಕ್ಕೆ ಮತಾಂತರ ಆಗಿಲ್ಲವೇ? ಇವರ್ಯಾರು ಅಧಿಕಾರವೋ ಅಥವಾ ಇನ್ಯಾವುದೋ ಕಾರಣಕ್ಕೆ ಮತಾಂತರಗೊಂಡವರಲ್ಲ. ರಾಜ್ಯದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗುತ್ತಿದೆ, ಕ್ರಿಶ್ಚಿಯನ್ ಮತ್ತು ಮುಸ್ಲಿಂಮರ ಜನಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ ಎಂದು ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ.

    2001 ಮತ್ತು 2011 ರ ಜನಗಣತಿಯನ್ನು ನೋಡಿದರೆ ಸತ್ಯ ಏನೆಂದು ಅರಿವಾಗುತ್ತದೆ. 2001 ರ ಜನಗಣತಿ ಪ್ರಕಾರ ರಾಜ್ಯದ ಜನಸಂಖ್ಯೆಯಲ್ಲಿ 83.86% ಹಿಂದೂಗಳ ಪ್ರಮಾಣ ಇತ್ತು, ಅದು 2011 ಕ್ಕೆ ಶೇ. 84 ಕ್ಕೆ ಏರಿಕೆಯಾಗಿದೆ. ಮುಸ್ಲಿಮರ ಪ್ರಮಾಣ 12.23% ಇಂದ 12.92 ಕ್ಕೆ ಹೆಚ್ಚಾಗಿದೆ. ಕ್ರೈಸ್ತರ ಪ್ರಮಾಣ 1.91% ಇಂದ 1.87% ಗೆ ಇಳಿಕೆಯಾಗಿದೆ. ಇದು ನಮ್ಮ ರಾಜ್ಯದ ವಾಸ್ತವ ಸ್ಥಿತಿ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬುದು ಸಂವಿಧಾನದ ಮೂಲ ನಿಯಮ. ಆದರೆ ರಾಜ್ಯ ಸರ್ಕಾರದ ಮತಾಂತರ ನಿಷೇಧ ಕಾಯ್ದೆಯಲ್ಲಿ ಮಹಿಳೆಯರು, ಅಪ್ರಾಪ್ತರು, ಬುದ್ಧಿಭ್ರಮಣೆಯಾದವರು, ಪರಿಶಿಷ್ಟ ಜಾತಿ ಮತ್ತು ವರ್ಗದವರನ್ನು ಕಾನೂನು ಬಾಹಿರವಾಗಿ ಮತಾಂತರ ಮಾಡಿದರೆ ಮಾತ್ರ ಗರಿಷ್ಠ ಶಿಕ್ಷೆ ವಿಧಿಸಲಾಗಿದೆ. ಈ ಅಸಮಾನತೆಗೆ ಸಂವಿಧಾನದಲ್ಲಿ ಅವಕಾಶವಿಲ್ಲ. ಹಿಂದೂ ಧರ್ಮದ ಜಾತಿಯತೆ, ಅಸ್ಪೃಶ್ಯತೆ, ಅಸಮಾನತೆಗಳನ್ನು ಕಿತ್ತುಹಾಕಲು ಪ್ರಯತ್ನ ಮಾಡಿದ ಬಾಬಾ ಸಾಹೇಬರು, ಅದು ಸಾಧ್ಯವಾಗದಿದ್ದಾಗ “ಹಿಂದೂವಾಗಿ ಹುಟ್ಟಿದ್ದೇನೆ, ಹಿಂದೂವಾಗಿ ಸಾಯಲಾರೆ” ಎಂದು ಬೌದ್ಧ ಧರ್ಮಕ್ಕೆ ಮತಾಂತರ ಗೊಂಡರು. ಜೊತೆಗೆ ಲಕ್ಷಾಂತರ ಜನರಿಗೆ ಸ್ವ ಇಚ್ಛೆಯಿಂದ ಮತಾಂತರಗೊಳ್ಳಲು ಕರೆನೀಡಿದ್ದು ನಿಜವಲ್ಲವೇ? ಬಲವಂತದಿಂದ, ಆಸೆ ಆಮಿಷ ಒಡ್ಡಿ, ಹೆದರಿಸಿ ಬೆದರಿಸಿ, ಮೋಸದ ಮೂಲಕ ಮತಾಂತರ ಮಾಡುವುದನ್ನು ನಾನು ವಿರೋಧಿಸುತ್ತೇನೆ. ಇದರ ಜೊತೆಗೆ ಜಾತೀಯತೆ, ಅಸ್ಪೃಶ್ಯತೆ ಅನುಸರಿಸುತ್ತಿರುವವರಿಗೂ ಕಠಿಣ ಶಿಕ್ಷೆಯಾಗಬೇಕು ಎಂಬುದು ನನ್ನ ಒತ್ತಾಯ.

    ಮತಾಂತರವನ್ನು ದೂಷಿಸುವ ಬದಲು, ಮತಾಂತರವಾಗಲು ನಮ್ಮಲ್ಲಿರುವ ದೋಷಗಳೇನು ಎಂಬುದನ್ನು ಗುರುತಿಸಿ ಸರಿಪಡಿಸುವ ಕೆಲಸವನ್ನು ಮಾಡಬೇಕು ಎಂದು ಮಹಾತ್ಮ ಗಾಂಧಿ, ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಇದು ನಾವು ಮಾಡಲೇಬೇಕಾದ ಕೆಲಸ. ರಾಜ್ಯ ಬಿಜೆಪಿ ಸರ್ಕಾರದ ಮತಾಂತರ ನಿಷೇಧ ಕಾಯ್ದೆ ಅಮಾನವೀಯ, ಸಂವಿಧಾನ ಬಾಹಿರ ಮತ್ತು ವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು, ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯ ಮಾಡುತ್ತೇನೆ.

  • ಬಿಎಸ್‍ವೈ ಶಿವಮೊಗ್ಗಕ್ಕೆ ತಕ್ಷಣ ಭೇಟಿ ಕೊಡಬೇಕು: ಡಿ.ಕೆ ಶಿವಕುಮಾರ್

    ಬಿಎಸ್‍ವೈ ಶಿವಮೊಗ್ಗಕ್ಕೆ ತಕ್ಷಣ ಭೇಟಿ ಕೊಡಬೇಕು: ಡಿ.ಕೆ ಶಿವಕುಮಾರ್

    ಬೆಂಗಳೂರು: ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ದುರಂತ ಹಿನ್ನೆಲೆ ತಕ್ಷಣ ಸಿಎಂ ಅವಘಡ ಸಂಭವಿಸಿರುವ ಸ್ಥಳಕ್ಕೆ ಭೇಟಿ ಕೊಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

    ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ಆಗಿರುವ ದುರಂತ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತವರು ಕ್ಷೇತ್ರದಲ್ಲಿ ನಡೆದ ದುರಂತ ಸ್ಥಳಕ್ಕೆ ಸಿಎಂ ತಕ್ಷಣ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ನೂತನ ಸಚಿವ ನಿರಾಣಿ ಕೂಡ ಅಲ್ಲಿ ಭೇಟಿ ನೀಡಬೇಕು. ಅಲ್ಲಿ ನಡೆದಿರುವ ಅವಘಡ ಮತ್ತು ಸಾವು ನೋವಿನ ಕುರಿತಾಗಿ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

    ನಾನು ಗ್ರಾನೈಟ್ ಹಿನ್ನೆಲೆಯಿಂದ ಬಂದವನು. ಅಷ್ಟು ದೊಡ್ಡ ಪ್ರಮಾಣದ ಗ್ರಾನೈಟ್ ಹೇಗೆ ಸಂಗ್ರಹಿಸಿಟಿದ್ದರು. ಒಂದು ಕಡೆಯಿಂದ ಇನ್ನೊಂದು ಕಡೆ ಸಾಗಿಸುವಾಗ ಬೇಕಾದಂತ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ತನಿಖೆ ಎಂದರೆ ಈಗ ನಡೀತಾ ಇರೋ ಲೀಗಲ್ ಆಗಿರೋದನ್ನು ಬಂದ್ ಮಾಡಬೇಕು ಅಂತ ಅಲ್ಲ. ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ಆಗಬೇಕು. ದುರಂತದಿಂದಾಗಿ ಮೂರು ನಾಲ್ಕು ಜಿಲ್ಲೆಗೆ ಹಾನಿ ಆಗಿದೆ. ಇದಕ್ಕೆಲ್ಲ ಯಾರು ಹೊಣೆಯಾಗಿದ್ದಾರೆ. ಯಾರು ಜವಾಬ್ದಾರಿ ತಗೋತಾರೆ ಎಂದು ಪ್ರಶ್ನಿಸಿದ್ದಾರೆ.

    ಇನ್ನು ಈ ಸಂಬಂಧ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿರುವ ಸಿಎಂ, ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗುತ್ತದೆ. ಅಕ್ರಮ ಗಣಿಗಾರಿಕೆಗಳ ಕುರಿತು ಕ್ರಮ ಕೈಗೊಳ್ಳಲಾಗುತ್ತದೆ. ಇನ್ನು ನಾಳೆ ಶಿವಮೊಗ್ಗಕ್ಕೆ ಭೇಟಿ ನೀಡಿ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.

  • ಉಮಾಶ್ರೀಗೆ ಯಾವ ಸಮಯದಲ್ಲಿ ಯಾವ ಪಾತ್ರ ಮಾಡ್ಬೇಕು ಅನ್ನೋದು ಗೊತ್ತಿದೆ: ಸಿದ್ದು ಸವದಿ

    ಉಮಾಶ್ರೀಗೆ ಯಾವ ಸಮಯದಲ್ಲಿ ಯಾವ ಪಾತ್ರ ಮಾಡ್ಬೇಕು ಅನ್ನೋದು ಗೊತ್ತಿದೆ: ಸಿದ್ದು ಸವದಿ

    – ಪರಸಭೆ ಸದಸ್ಯೆ ನೂಕಾಟ- ತಳ್ಳಾಟ ಪ್ರಕರಣ
    – ಶಾಸಕ ಸೇರಿ 31 ಮಂದಿ ವಿರುದ್ಧ ಕೇಸ್ ದಾಖಲು

    ಬಾಗಲಕೋಟೆ: ಮಹಾಲಿಂಗಪೂರ ಪುರಸಭೆ ಸದಸ್ಯೆ ತಳ್ಳಾಟ-ನೂಕಾಟ ರಾಜಕೀಯ ದುರುದ್ದೇಶದಿಂದ ನಮ್ಮ ಹೆಸರು ಕೆಡಿಸಲು ನಡೆಸಿದ ಉಮಾಶ್ರೀ ಕುತಂತ್ರವಿದು. ಉಮಾಶ್ರೀಗೆ ಡ್ರಾಮಾ ಬರುತ್ತೆ ಆದರೆ ನನಗೆ ಬರುವುದಿಲ್ಲ ಎಂದು ಮಾಜಿ ಸಚಿವೆ ಉಮಾಶ್ರೀ ವಿರುದ್ಧ ಶಾಸಕ ಸಿದ್ದು ಸವದಿ ವ್ಯಂಗ್ಯವಾಡಿದ್ದಾರೆ.

    ಮಹಾಲಿಂಗಪೂರ ಪುರಸಭೆ ಸದಸ್ಯೆ ತಳ್ಳಾಟ ನೂಕಾಟ ಪ್ರಕರಣವಾಗಿ ಶಾಸಕ ಸಿದ್ದು ಸವದಿ ಸೇರಿ 31 ಜನರ ವಿರುದ್ಧ ಕೇಸ್ ದಾಖಲಾಗಿದೆ. ಈ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯ ರಬಕವಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ, ರಾಜಕೀಯ ದುರುದ್ದೇಶದಿಂದ ನಮ್ಮ ಹೆಸರು ಕೆಡಿಸಲು ಉಮಾಶ್ರೀ ಕುತಂತ್ರ ಇದಾಗಿದೆ. ಅವರ ನಿರ್ದೆಶನದ ನಾಟಕ ಇದಾಗಿದೆ. ಉಮಾಶ್ರೀಗೆ ಡ್ರಾಮಾ ಬರುತ್ತೆ ಆದರೆ ನನಗೆ ಬರುವುದಿಲ್ಲ. ಯಾವಾಗ ಯಾವ ಪಾತ್ರ ಮಾಡ ಬೇಕೆನ್ನೋದು ಅವರಿಗೆ ಚೆನ್ನಾಗಿ ಗೊತ್ತಿದೆ. ಅಂತಹ ಪಾತ್ರವನ್ನು ಈಗ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

    ಮಹಾಲಿಂಗಪೂರ ಪ್ರಕರಣಕ್ಕೂ ನಮಗೂ ಎಳ್ಳು ಕಾಳಿನಷ್ಟು ಸಂಬಂಧವಿಲ್ಲ. ಕಾಂಗ್ರೆಸ್ಸಿನವರಿಗೆ ದುಡ್ಡು ಹೆಚ್ಚಾಗಿದೆ. ಉಮಾಶ್ರೀ & ನಾಡಗೌಡ ಮಾಡುತ್ತಿರೋ ಕುತಂತ್ರ ಇದಾಗಿದೆ. ನೇರವಾಗಿ ಆಯ್ಕೆಯಾಗಿ ಬರುವಷ್ಟು ಶಕ್ತಿ ಇಲ್ಲ. ಹಿಂಬಾಗಿಲಿನಿಂದ ಅಧಿಕಾರ ಪಡೆಯೋಕೆ ಮುಂದಾಗಿದ್ದರು ಎಂದು ಹೇಳಿದ್ದಾರೆ.

    ಪುರಸಭಾ ಸದಸ್ಯೆಗೆ ಗರ್ಭಪಾತ ಆಗಿದೆ ಅನ್ನೋದೆಲ್ಲಾ ಬೋಗಸ್. ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ. ನಾವು ಸಹ ಪ್ರಕರಣ ಸಂಬಂಧ 35 ಜನರ ವಿರುದ್ಧ ಕೇಸ್ ದಾಖಲಿಸ್ತೇವೆ. ಜಾತಿ ನಿಂದನೆ ಸೇರಿದಂತೆ ಅವರಂತೆ ನಾವು ಸಹ ಕೇಸ್ ಹಾಕ್ತೇವೆ. ಈ ಗೊಂದಲ ಸೃಷ್ಟಿ ಆಗಿದ್ದು ನಮ್ಮಿಂದಲ್ಲ, ಕಾಂಗ್ರೆಸ್ ನವರಿಂದಾಗಿದೆ. ನಾನು ವಿಪ್ ಕೊಡಲು ನಿಂತಾಗ ಆಕಸ್ಮಿಕವಾಗಿ ನಡೆದ ಘಟನೆ ಇದಾಗಿದೆ. ಉದ್ದೇಶಪೂರ್ವಕವಾಗಿ ಅಲ್ಲ ಎಂದಿದ್ದಾರೆ.

    ನೂಕು ನುಗ್ಗಲಿನಲ್ಲಿ ಹೆಣ್ಮಕ್ಕಳು, ಗಂಡು ಮಕ್ಕಳು ಅನ್ನೋದೇ ಬರೋಲ್ಲ. ಆ ಘಟನೆಯಲ್ಲಿ ಎಳೆದುಕೊಂಡು ಬಂದಿದ್ದೇ ಕಾಂಗ್ರೆಸ್‍ನವರಾಗಿದ್ದಾರೆ. ಆದರೆ ಯಾವುದೇ ಉದ್ದೇಶಪೂರ್ವಕವಾಗಿ ದುರುದ್ದೇಶದಿಂದ ಮಾಡಿದ ಘಟನೆ ಆಗಿರಲಿಲ್ಲ ಎಂದು ಸಿದ್ದು ಸವದಿ ತಿಳಿಸಿದ್ದಾರೆ.

  • ವಿಜಯೋತ್ಸವ ವೇಳೆ ಕೈ, ಕಮಲ ಕಾರ್ಯಕರ್ತರ ಗಲಾಟೆ – ತಂದೆ, ಮಗ ಸಾವು

    ವಿಜಯೋತ್ಸವ ವೇಳೆ ಕೈ, ಕಮಲ ಕಾರ್ಯಕರ್ತರ ಗಲಾಟೆ – ತಂದೆ, ಮಗ ಸಾವು

    ಜೈಪುರ: ಬಿಜೆಪಿಯ ವಿಜಯೋತ್ಸವದಲ್ಲಿ ನಡೆದ ಕೈ ಕಾರ್ಯಕರ್ತರ ಗಲಾಟೆಯಲ್ಲಿ ತಂದೆ-ಮಗ ಸಾವನ್ನಪ್ಪಿರುವ ಘಟನೆ ಜೈಪುರದ ಘತೇಪುರ ಪಟ್ಟಣದ ಬಲೋಡ್ ಬಡಿ ಗ್ರಾಮದಲ್ಲಿ ನಡೆದಿದೆ.

    ರಾಜಸ್ಥಾನದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದ ಹಿನ್ನೆಲೆಯಲ್ಲಿ ನಡೆಯುತ್ತಿದ್ದ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. ಈ ವೇಳೆ ತಂದೆ ಮತ್ತು ಮಗ ಮೃತಪಟ್ಟಿರುವುದು ತಿಳಿದು ಬಂದಿದೆ.

     

    ಮೃತರನ್ನು ಕನ್ಹನ್ಯಾಲಾಲ್(35) ಮತ್ತು ಇವರ ತಂದೆ ಪ್ಯಾರೆಲಾಲ್(57) ಎಂದು ಗುರುತಿಸಲಾಗಿದೆ. ಗಲಾಟೆಯಲ್ಲಿ ಗಾಯಗೊಂಡಿದ್ದ ತಂದೆ-ಮಗ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುವ ವೇಳೆ ಮಗ ಕನ್ಹನ್ಯಾಲಾಲ್ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ಪ್ಯಾರೆಲಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುವ ವೇಳೆ ಸಾವನ್ನಪ್ಪಿದ್ದಾರೆ. ಈ ಗಲಾಟೆಯಲ್ಲಿ ಕನಿಷ್ಠ 10 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

     

    ಗಲಾಟೆಗೆ ಕಾರಣವೇನು?
    ಪಂಚಾಯತ್ ಸಮಿತಿ ಫತೇಪುರ್ ವಾರ್ಡ್ ನಂ 19ರಲ್ಲಿ ಬಿಜೆಪಿ ಅಭ್ಯರ್ಥಿ ರುಬಿನಾ ಖಾನ್ ಜಯಗಳಿಸಿದ್ದಾರೆ. ಹೀಗಾಗಿ ಮೆರವಣಿಗೆ ನಡೆಸಿ ಸಂಭ್ರಮಿಸಿ ವಿಜಯೋತ್ಸವವನ್ನು ಬಿಜೆಪಿ ಆಚರಿಸುತ್ತಿತ್ತು. ಈ ವೇಳೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಯುವಕನನ್ನು ಯಾರೋ ಥಳಿಸಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಮತ್ತು ಬಿಜಿಪಿ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿದೆ. ಕೈಯಲ್ಲಿ ಕೋಲುಗಳನ್ನು ಹಿಡಿದು ಪರಸ್ಪರ ಘರ್ಷಣೆ ನಡೆಸಿದ್ದಾರೆ. ಕೆಲವರು ಮನೆಗೆ ಕಲ್ಲು ತೂರಾಟ ಮಾಡಿದ್ದಾರೆ. ಈ ವೇಳೆ ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ನಿಂಯತ್ರಣಕ್ಕೆ ತಂದಿದ್ದಾರೆ. ಇದನ್ನು ಓದಿ:ರಾಜಸ್ಥಾನ ಪಂಚಾಯತ್‌ ಚುನಾವಣೆ – ಬಿಜೆಪಿಗೆ ಭರ್ಜರಿ ಜಯ, ಗೆಹ್ಲೋಟ್‌ಗೆ ಮುಖಭಂಗ

    ಈ ಪ್ರಕರಣದಲ್ಲಿ ನಾವು ಈ ವರೆಗೆ 22 ಜನರನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಸಂಪೂರ್ಣ ವಿಷಯವನ್ನು ತನಿಖೆ ಮಾಡುತ್ತಿದ್ದೇವೆ. ಸಾಕ್ಷ್ಯಗಳನ್ನು ಸಂಗ್ರಹಿಸುತ್ತೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಗಗನ್‍ದೀಪ್ ಸಿಂಕ್ಲಾ ಹೇಳಿದ್ದಾರೆ.

  • ಕಾಂಗ್ರೆಸ್ ಅಧಿಕಾರ ಕಳ್ಕೊಂಡಾಗ್ಲೆಲ್ಲಾ ದೇಶದ ಆಸ್ತಿಗೆ ಬೆಂಕಿ ಹಚ್ಚುವ ಕೆಲಸ ಮಾಡುತ್ತೆ: ಪಿ. ರಾಜೀವ್

    ಕಾಂಗ್ರೆಸ್ ಅಧಿಕಾರ ಕಳ್ಕೊಂಡಾಗ್ಲೆಲ್ಲಾ ದೇಶದ ಆಸ್ತಿಗೆ ಬೆಂಕಿ ಹಚ್ಚುವ ಕೆಲಸ ಮಾಡುತ್ತೆ: ಪಿ. ರಾಜೀವ್

    ಶಿವಮೊಗ್ಗ: ಕಾಂಗ್ರಸ್ ಪಕ್ಷ ಅಧಿಕಾರ ಕಳೆದುಕೊಂಡಾಗೆಲ್ಲಾ ಅಮಾಯಕರ ಕೈಗೆ ಕಲ್ಲು ಕೊಡುವ ಕೆಲಸ ಮಾಡಿದೆ. ದೇಶದ ಆಸ್ತಿಪಾಸ್ತಿಗೆ ಬೆಂಕಿ ಹಚ್ಚಿ ದೇಶವನ್ನು ನಾಶ ಮಾಡುವ ಕೆಲಸಕ್ಕೆ ಕೈ ಹಾಕಿದೆ ಎಂದು ಕುಡಚಿ ಶಾಸಕ ಪಿ. ರಾಜೀವ್ ಗಂಭೀರ ಆರೋಪ ಮಾಡಿದ್ದಾರೆ.

    ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಹಿನ್ನೆಲೆಯಲ್ಲಿ ನಗರದ ಛೇಂಬರ್ಸ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ಪ್ರಬುದ್ಧರ ಜೊತೆ ಸಂವಾದ ಸಭೆಯಲ್ಲಿ ಪಿ. ರಾಜೀವ್ ಅವರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಅಧಿಕಾರ ಕಳೆದುಕೊಂಡಾಗೆಲ್ಲಾ ಅಮಾಯಕರ ಕೈಗೆ ಕಲ್ಲು ಕೊಡುವ ಕೆಲಸ ಮಾಡಿದೆ. ದೇಶದ ಆಸ್ತಿಪಾಸ್ತಿಗೆ ಬೆಂಕಿ ಹಚ್ಚಿ ದೇಶವನ್ನು ನಾಶ ಮಾಡುವ ಕೆಲಸಕ್ಕೆ ಕೈ ಹಾಕಿದೆ ಎಂದು ಕಿಡಿಕಾರಿದರು.

    ಕಾಂಗ್ರೆಸ್ ಹಾಗೂ ಕಮ್ಯುನಿಸ್ಟ್ ರಿಗೆ ಭಾರತ ದೇಶ ಅಂದರೆ ಸ್ವಾರ್ಥಕ್ಕಾಗಿ ಉಪಯೋಗಿಸುವ ಒಂದು ವಸ್ತುವಾಗಿದೆ. ಈ ಎರಡು ಪಕ್ಷಗಳು ಸ್ವಾರ್ಥಕ್ಕಾಗಿ ಏನು ಬೇಕಾದರೂ ಮಾಡುತ್ತವೆ. ಆದರೆ ಬಿಜೆಪಿ ಪಕ್ಷಕ್ಕೆ, ಬಿಜೆಪಿ ಕಾರ್ಯಕರ್ತರಿಗೆ ಭಾರತ ಅಂದರೆ ಸ್ವಾರ್ಥಕ್ಕಾಗಿ ಬಳಸುವ ವಸ್ತುವಲ್ಲ. ಬದಲಿಗೆ ಬಿಜೆಪಿ ಪಾಲಿಗೆ ಭಾರತ ದೇಶ ಪುಣ್ಯ ಭೂಮಿ, ಶ್ರದ್ಧಾ ಭೂಮಿ ಆಗಿದೆ ಎಂದರು.

    ರಾಷ್ಟ್ರದ ಹಿತದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದ್ದಾರೆ. ಈ ಬಗ್ಗೆ ಕೆಲವು ಸ್ವಾರ್ಥಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ನಾವು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ನಮ್ಮ ಕಾರ್ಯಕರ್ತರು ಮನೆ ಮನೆಗೆ ತೆರಳಿ ಕಾಯ್ದೆ ಬಗ್ಗೆ ಇರುವ ಗೊಂದಲ ನಿವಾರಿಸುವ ಕೆಲಸ ಮಾಡಿ ಎಂದು ಶಾಸಕ ರಾಜೀವ್ ಕರೆ ಕೊಟ್ಟರು.

  • ಪೆಟ್ರೋಲ್, ಡೀಸೆಲ್ ದರ ಯುಪಿಎ Vs ಎನ್‍ಡಿಎ – ಎಷ್ಟು ಏರಿಕೆಯಾಗಿದೆ: ಕೈಗೆ ತಿರುಗೇಟು ಕೊಟ್ಟ ಬಿಜೆಪಿ

    ಪೆಟ್ರೋಲ್, ಡೀಸೆಲ್ ದರ ಯುಪಿಎ Vs ಎನ್‍ಡಿಎ – ಎಷ್ಟು ಏರಿಕೆಯಾಗಿದೆ: ಕೈಗೆ ತಿರುಗೇಟು ಕೊಟ್ಟ ಬಿಜೆಪಿ

    ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಕೇಂದ್ರದ ನೀತಿಯನ್ನು ಖಂಡಿಸಿ ಭಾರತ ಬಂದ್‍ಗೆ ಕರೆ ನೀಡಿದ್ದ ಕಾಂಗ್ರೆಸ್ ವಿರುದ್ಧ ಬಿಜೆಪಿ ಈಗ ಸಂಖ್ಯಾ ಮಾಹಿತಿಯನ್ನು ಬಿಡುಗಡೆ ಮಾಡಿ ತಿರುಗೇಟು ನೀಡಿದೆ.

    ರಾಷ್ಟ್ರ ರಾಜಧಾನಿಯಾದ ದೆಹಲಿಯ ಇಂದಿನ ದರವನ್ನು ಮುಖ್ಯವಾಗಿಟ್ಟುಕೊಂಡು ಯುಪಿಎ ಸರ್ಕಾರದ ಎರಡು ಅವಧಿಯ 5 ವರ್ಷ ಬೆಲೆ ಏರಿಕೆಯಾಗಿದ್ದು ಮೋದಿ ಸರ್ಕಾರಕ್ಕೆ ಹೋಲಿಕೆ ಮಾಡಿಕೊಂಡು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಬಾರ್ ಗ್ರಾಫಿಕ್ಸ್ ಬಿಡುಗಡೆ ಮಾಡಿದೆ.

    ಪೆಟ್ರೋಲ್ ಬೆಲೆ:
    2004ರಲ್ಲಿ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ಮೇ 16 ರಂದು 1 ಲೀಟರ್ ಪೆಟ್ರೋಲ್ ಬೆಲೆ 33.71 ರೂ. ಇತ್ತು. 2009ರ ಮೇ 16 ರಂದು ಈ ದರ ಶೇ.75.8ರಷ್ಟು ಏರಿಕೆಯಾಗಿ 40.62 ರೂ. ತಲುಪಿತ್ತು. 2014ರ ಮೇ 16 ರಂದು ಈ ದರ ಶೇ.75.8 ರಷ್ಟು ಏರಿಕೆಯಾಗಿ 71.41 ರೂ. ಆಗಿದೆ. ಆದರೆ ನಮ್ಮ ಅವಧಿಯಲ್ಲಿ 2018ರ ಸಪ್ಟೆಂಬರ್ 10ರ ವೇಳೆಗೆ 80.73 ರೂ. ಆಗಿದ್ದು ಶೇ.13 ರಷ್ಟು ಬೆಲೆ ಏರಿಕೆ ಕಂಡಿದೆ ಎಂದು ಹೇಳಿದೆ.

    ಡೀಸೆಲ್ ಬೆಲೆ:
    ಮೇ 16ರಂದು 1 ಲೀಟರ್ ಡೀಸೆಲ್‍ಗೆ 21.71 ರೂ. ದರ ನಿಗದಿಯಾಗಿತ್ತು. ಬಳಿಕ 2009ರ ಮೇ ವೇಳೆ ಈ ದರ ಶೇ.42 ರಷ್ಟು ಹೆಚ್ಚಾಗಿ 40.62 ರೂ. ತಲುಪಿತ್ತು. 2014ರ ಮೇ 16ರ ವೇಳೆ ದರ ಶೇ.83.7 ಏರಿಕೆಯಾಗಿ 56.71 ರೂ. ತಲುಪಿತ್ತು. ಈಗ ಸೆಪ್ಟೆಂಬರ್ 10 ರಂದು ನಮ್ಮ ಸರ್ಕಾರದಲ್ಲಿ 72.83 ರೂ. ಇದ್ದು ಶೇ.28 ಮಾತ್ರ ಏರಿಕೆಯಾಗಿದೆ ಎಂದು ಹೇಳಿಕೊಂಡಿದೆ.

    2012-2014 ರ ತನಕ ಯುಪಿಎ ಸರ್ಕಾರದ ಅವಧಿಯಲ್ಲಿ ಜಾಗತಿಕವಾಗಿ ತೈಲ ದರ ಹೆಚ್ಚಿದ್ದರೂ, ದೇಶೀಯವಾಗಿ ತೈಲ ದರಗಳು ಏರಿಕೆಯಾಗಿರಲಿಲ್ಲ. ಆದರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾಗಿದ್ದರೂ ಭಾರತದಲ್ಲಿ ಕಡಿಮೆಯಾಗಿಲ್ಲ ಎಂದು ಕಾಂಗ್ರೆಸ್ ಟೀಕಿಸುತ್ತಿದೆ. ಆದರೆ ಆಗ ಯುಪಿಎ ಸರ್ಕಾರ 1.44 ಲಕ್ಷ ಕೋಟಿ ರೂ. ಮೌಲ್ಯದ ತೈಲ ಬಾಂಡ್ ಖರೀದಿಸಿತ್ತು. ಇದಕ್ಕೆ ಕೇವಲ ಬಡ್ಡಿಯಾಗಿ 70 ಸಾವಿರ ಕೋಟಿ ರೂ.ಗಳನ್ನು ಎನ್‍ಡಿಎ ಸರಕಾರ ಪಾವತಿಸಿದೆ. ಒಟ್ಟು 2 ಲಕ್ಷ ಕೋಟಿ ರೂ.ಗಳನ್ನು ಮೋದಿ ಸರಕಾರ ಮರು ಪಾವತಿಸಿದೆ. ಯುಪಿಎ ಸರ್ಕಾರ ಹಗರಣಗಳ ಪರಿಣಾಮ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ಇರಲಿಲ್ಲ. ಹೀಗಾಗಿ ತೈಲ ಬಾಂಡ್‍ಗಳ ಮೂಲಕ ಭಾರೀ ಸಾಲವನ್ನು ತೆಗೆದುಕೊಂಡಿತ್ತು ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಈ ಹಿಂದೆ ಪ್ರತಿಕ್ರಿಯಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv