Tag: ಕಾಂಗ್ರೆಸ್ ಅಭ್ಯರ್ಥಿ

  • ಶಿರಾ ಉಪಚುನಾವಣೆ – ಟಿಬಿ ಜಯಚಂದ್ರ ಕೈ ಅಭ್ಯರ್ಥಿ

    ಶಿರಾ ಉಪಚುನಾವಣೆ – ಟಿಬಿ ಜಯಚಂದ್ರ ಕೈ ಅಭ್ಯರ್ಥಿ

    – ಕೊರೊನಾ ಮುಕ್ತರಾಗಿ ಕೆಪಿಸಿಸಿ ಕಚೇರಿಗೆ ಡಿಕೆಶಿ

    ಬೆಂಗಳೂರು; ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮೊದಲ ಬಾರಿಗೆ ಕೆಪಿಸಿಸಿ ಕಚೇರಿಗೆ ಬಂದ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಶಿರಾ ಉಪಚುನಾವಣೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ

    ಇಂದು ಶಿರಾ ಬೈ ಎಲೆಕ್ಷನ್ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ತುಮಕೂರು ಜಿಲ್ಲೆಯ ಕಾಂಗ್ರೆಸ್ ಮುಖಂಡರ ಜೊತೆ ಡಿಕೆಶಿ ಸಭೆ ಮಾಡಿದ್ದರು. ಈ ಸಭೆಯಲ್ಲಿ ಮಾಜಿ ಸಚಿವ ಟಿಬಿ ಜಯಚಂದ್ರ, ಕೆ.ಎನ್ ರಾಜಣ್ಣ, ಷಡಾಕ್ಷರಿ, ಚಂದ್ರಪ್ಪ ಅವರು ಭಾಗವಹಿಸಿದ್ದರು. ಈ ಸಭೆಯಲ್ಲಿ ಶಿರಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಟಿ.ಬಿ ಜಯಚಂದ್ರ ಅವರನ್ನು ಆಯ್ಕೆ ಮಾಡಲಾಗಿದೆ. ಇದನ್ನು ಓದಿ: ದೇವೇಗೌಡರ ಪಕ್ಷದಲ್ಲಿ ಟಿಕೆಟ್ ಪಡೆಯಲು ದುಡ್ಡು ಕೊಡಬೇಕು: ಕೆ.ಎನ್.ರಾಜಣ್ಣ

    ಈ ವಿಚಾರವಾಗಿ ಮಾತನಾಡಿದ ಡಿಕೆಶಿ, ತುಮಕೂರು ಜಿಲ್ಲೆಯ ನಾಯಕರ ಜೊತೆ ಸಭೆ ಮಾಡಿದ್ದೇವೆ. ಶಿರಾ ಉಪ ಚುನಾವಣೆಯನ್ನು ಪರಮೇಶ್ವರ್ ಅವರ ನೇತೃತ್ವತ್ವದಲ್ಲಿ ನಡೆಸುತ್ತೇವೆ. ರಾಜಣ್ಣ ಕೋ ಚೇರ್ಮನ್ ಆಗಿ ಸಾಥ್ ಕೊಡುತ್ತಾರೆ. ಪಕ್ಷದ ಅಭ್ಯರ್ಥಿಯಾಗಿ ಜಯಚಂದ್ರ ಇರುತ್ತಾರೆ. ರಾಜಣ್ಣನವರೇ ಜಯಚಂದ್ರ ಹೆಸರು ಸೂಚಿಸಿದ್ದಾರೆ. ಅವರ ಅಭಿಪ್ರಾಯವನ್ನು ನಾವು ಪಡೆದಿದ್ದೇವೆ. ನಮ್ಮ ವರಿಷ್ಠರಿಗೆ ಇದನ್ನೇ ಕಳಿಸಿಕೊಡುತ್ತೇವೆ. ಇಂದಿನಿಂದಲೇ ಚುನಾವಣೆ ಕಾರ್ಯ ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದರು.

    ಇಂದು ಬೆಳಗ್ಗೆ ತಾನೇ ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ್ದ ರಾಜಣ್ಣ, ನಾನು ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಜೊತೆ ಮಾತನಾಡಿ ಬಂದಿದ್ದೇನೆ. ಶಿರಾ ಕ್ಷೇತ್ರದಲ್ಲಿ ಹಿಂದುಳಿದ ಸಮುದಾಯಕ್ಕೆ ಟಿಕೆಟ್ ಕೊಡಬೇಕು ಅನ್ನೋದು ನನ್ನ ಅಭಿಪ್ರಾಯ. ಪಕ್ಷ ಅಭ್ಯರ್ಥಿಗಳಿಗೆ ಟಿಕೆಟ್ ಕೊಡುವ ಜೊತೆಗೆ ಚುನಾವಣೆಗಾಗಿ ದುಡ್ಡು ಕೂಡ ಕೊಡಬೇಕು ಎಂದು ಹೇಳಿದ್ದರು. ಆದರೆ ಸಭೆ ನಂತರ ಅಧ್ಯಕ್ಷರ ಅಭಿಪ್ರಾಯಕ್ಕೆ ನಾವೆಲ್ಲರೂ ಸಾಥ್ ನೀಡುತ್ತೇವೆ ಎಂದು ಉಲ್ಟಾ ಹೊಡೆದಿದ್ದಾರೆ.

  • ನನ್ನ ಗೆಲುವು ನಿಶ್ಚಿತ, ಸಂಭ್ರಮಾಚರಣೆ ಮಾಡಿ ಕೇಸ್ ಹಾಕಿಸಿಕೊಳ್ಳಬೇಡಿ: ಕಾಂಗ್ರೆಸ್ ಅಭ್ಯರ್ಥಿ

    ನನ್ನ ಗೆಲುವು ನಿಶ್ಚಿತ, ಸಂಭ್ರಮಾಚರಣೆ ಮಾಡಿ ಕೇಸ್ ಹಾಕಿಸಿಕೊಳ್ಳಬೇಡಿ: ಕಾಂಗ್ರೆಸ್ ಅಭ್ಯರ್ಥಿ

    ಮೈಸೂರು: ನನ್ನ ಗೆಲುವು ನಿಶ್ಚಿತ ಎಂದು ಹುಣಸೂರು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ ಮಂಜುನಾಥ್ ಹೇಳಿಕೆ ನೀಡಿದ್ದಾರೆ.

    ಉಪಚುನಾವಣೆ ಫಲಿತಾಂಶ ಪ್ರಕಟವಾಗುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ ಮಂಜುನಾಥ್ ಸಾಯಿ ಬಾಬಾ ದರ್ಶನ ಪಡೆದರು. ಮಂಜುನಾಥ್ ಅವರು ತಮ್ಮ ಕುಟುಂಬ ಸಮೇತ ಸಾಯಿ ಬಾಬಾ ದೇವಸ್ಥಾನಕ್ಕೆ ಆಗಮಿಸಿ ಬೆಳ್ಳಿ ಪಾದವನ್ನು ಕಾಣಿಕೆಯಾಗಿ ನೀಡಿದ್ದಾರೆ. ವಿಶೇಷ ಪೂಜೆಯಲ್ಲಿ ಭಾಗಿಯಾಗಿ ಅರ್ಚನೆ, ಹಾಲಿನ ಅಭಿಷೇಕ ಮಾಡಿಸಿದ್ದಾರೆ.

    ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಮಂಜುನಾಥ್, ನನ್ನ ಗೆಲುವು ನಿಶ್ಚಿತ ಎಂದು ಹೇಳಿದ್ದಾರೆ. ಅಲ್ಲದೆ ಕ್ಲುಲ್ಲಕ ಕಾರಣಕ್ಕೆ ಜಗಳವಾಡಬೇಡಿ ಎಂದು ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

    ನಾನು ಗೆದ್ದ ಬಳಿಕ ಸಂಭ್ರಮಾಚರಣೆ ಮಾಡಿ ಕೇಸ್ ಹಾಕಿಸಿಕೊಳ್ಳಬೇಡಿ. ಭಾನುವಾರ ಕೂಡ ಮೂರು ಜನ ಹೊಡೆದಾಡಿ ಆಸ್ಪತ್ರೆ ಸೇರಿದ್ದಾರೆ. ಎಲ್ಲರೂ ಕೂಡ ಸಮಯೋಚಿತದಿಂದ ವರ್ತಿಸಿ ಎಂದು ತಮ್ಮ ಕಾರ್ಯಕರ್ತರ ಬಳಿ ಮನವಿ ಮಾಡಿಕೊಂಡರು.

    ಇದೇ ವೇಳೆ ಸರ್ಕಾರ ಇದೆ ಎಂದು ದೌರ್ಜನ್ಯ ನಡೆಸುವುದು ಸರಿಯಲ್ಲ ಎಂದು ಮಂಜುನಾಥ್ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

  • ಲಕ್ಷ್ಮಿ ಏನ್ ಮಲ್ಲಿಕಾ ಶೆರಾವತ್, ರಾಖಿ ಸಾವಂತ್, ಸನ್ನಿ ಲಿಯೋನ್: ಕಾಂಗ್ರೆಸ್ ಕಾರ್ಯಕರ್ತೆ

    ಲಕ್ಷ್ಮಿ ಏನ್ ಮಲ್ಲಿಕಾ ಶೆರಾವತ್, ರಾಖಿ ಸಾವಂತ್, ಸನ್ನಿ ಲಿಯೋನ್: ಕಾಂಗ್ರೆಸ್ ಕಾರ್ಯಕರ್ತೆ

    ವಿಜಯಪುರ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಏನು ಮಲ್ಲಿಕಾ ಶೆರಾವತ್, ರಾಖಿ ಸಾವಂತ್, ಸನ್ನಿ ಲಿಯೋನ್‍ನಾ ಎಂದು ಕಾಂಗ್ರೆಸ್ ಬೆಳಗಾವಿ ಕಾರ್ಯಕರ್ತೆ ವಾಗ್ದಾಳಿ ನಡೆಸಿರುವ ವಿಡಿಯೋ ವೈರಲ್ ಆಗಿದೆ.

    ಮಾಧ್ಯಮಗಳಲ್ಲಿ ನಮ್ಮನ್ನು ಸ್ವಲ್ಪ ಹೈಲೆಟ್ ಮಾಡಿ ತೋರಿಸಿ. ಯಾವಾಗಲೂ ಕೇವಲ ಲಕ್ಷ್ಮೀ ಹೆಬ್ಬಾಳ್ಕರ್ ನನ್ನು ತೋರಿಸುತ್ತೀರಾ. ಅವಳೇನು ಮಹಾರಾಣಿ ನಾ? ಅಥವಾ ಲಕ್ಷ್ಮಿ¸ ಏನು ಮಲ್ಲಿಕಾ ಶೆರಾವತ್, ರಾಖಿ ಸಾವಂತ್ ಹಾಗೂ ಸನ್ನಿ ಲಿಯೊನ್ ನಾ? ಲಕ್ಷ್ಮಿ, ಮಾಜಿ ಸಚಿವ ಡಿ.ಕೆ ಶಿವಕುಮಾರ್ ಸಹಾಯದಿಂದ ಎಲ್ಲ ಕೆಲಸವನ್ನು ಮಾಡಿಸಿಕೊಂಡಿದ್ದಾಳೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

    ಇದೇ ವೇಳೆ ಕಾರ್ಯಕರ್ತೆ ಅಥಣಿ ಕಾಂಗ್ರೆಸ್ ಅಭ್ಯರ್ಥಿ ಪರವು ವಾಗ್ದಾಳಿ ನಡೆಸಿದ್ದಾರೆ. ಗಜಾನನ ಮಂಗಸೂಳಿ ಡಮ್ಮಿ ಕ್ಯಾಂಡಿಡೇಟ್. ಮಂಗಸೂಳಿ ಪರವಾಗಿ ಎಲ್ಲಿಯೇ ಪ್ರಚಾರಕ್ಕೆ ಹೋದರು ಜನರು ತಂದೆ- ತಾಯಿಯನ್ನೆ ಹೊರಗಡೆ ಇಟ್ಟಿದ್ದಾನೆ ಎಂದು ಹೇಳುತ್ತಾರೆ. ಅವನ ಬಗ್ಗೆ ಜನರಲ್ಲಿ ಒಳ್ಳೆಯ ಅಭಿಪ್ರಾಯ ಇಲ್ಲ. ನಮಗೆ ಹಣ ಕೊಡುತ್ತಿಲ್ಲ ಸುಮ್ಮನೆ ಪಕ್ಷದಲ್ಲಿದ್ದೇವೆ ಎಂದು ಪ್ರಚಾರಕ್ಕಾಗಿ ಓಡಾಡುತ್ತಿದ್ದೇವೆ ಎಂದು ತಮ್ಮ ಅಸಾಮಾಧಾನ ವ್ಯಕ್ತಪಡಿಸಿದ್ದಾರೆ.

  • ಕಾಂಗ್ರೆಸ್ ಅಭ್ಯರ್ಥಿಗೆ 90 ಸಾವಿರ ರೂ. ಹಣ ನೀಡಿದ ಗ್ರಾಮಸ್ಥರು

    ಕಾಂಗ್ರೆಸ್ ಅಭ್ಯರ್ಥಿಗೆ 90 ಸಾವಿರ ರೂ. ಹಣ ನೀಡಿದ ಗ್ರಾಮಸ್ಥರು

    ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿ ಹೆಚ್.ಬಿ ಮಂಜಪ್ಪ ಅವರಿಗೆ ಗ್ರಾಮಸ್ಥರು 90 ಸಾವಿರ ರೂ. ಹಣ ದೇಣಿಗೆ ನೀಡಿದ್ದಾರೆ.

    ದಾವಣಗೆರೆ ತಾಲೂಕಿನ ಬಾಡ ಗ್ರಾಮದ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿ ಹೆಚ್. ಬಿ ಮಂಜಪ್ಪ ಅವರಿಗೆ ದೇಣಿಗೆ ನೀಡಿದ್ದಾರೆ. ಹೆಚ್. ಬಿ ಮಂಜಪ್ಪ ಗ್ರಾಮದಲ್ಲಿ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ದೇಣಿಗೆ ನೀಡಿದ್ದಾರೆ.

    ಕಾಂಗ್ರೆಸ್ ಅಭ್ಯರ್ಥಿ ರೈತ ಕುಟುಂಬದಿಂದ ಬಂದಿದ್ದಾರೆ. ಅವರಿಗೆ ಪ್ರಚಾರಕ್ಕೆ ಹಣ ಇಲ್ಲ. ಹೀಗಾಗಿ ಪ್ರಚಾರಕ್ಕೆ ಹೋದ ಕಡೆ ಗ್ರಾಮಸ್ಥರು ಮಂಜಪ್ಪ ಅವರಿಗೆ ಹಣ ನೀಡುತ್ತಿದ್ದಾರೆ. ಈಗಾಗಲೇ ಗ್ರಾಮಸ್ಥರು ಹಾಗೂ ಕಾರ್ಯಕರ್ತರು ಲಕ್ಷಾಂತರ ರೂ. ಹಣ ದೇಣಿಗೆ ನೀಡಿದ್ದಾರೆ.

  • ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ, ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ದೂರು ದಾಖಲು

    ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ, ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ದೂರು ದಾಖಲು

    ಕೊಪ್ಪಳ: ಮತದಾರರಿಗೆ ಹಣದ ಆಮಿಷವೊಡ್ಡಿದ ಆರೋಪದಡಿ ಮಾಜಿ ಶಾಸಕ ಮತ್ತು ನಗರಸಭೆ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ದೂರು ದಾಖಲಾಗಿದೆ.

    ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ, ನಗರಸಭೆ ಕಾಂಗ್ರೆಸ್ ಅಭ್ಯರ್ಥಿ ಖಾಸಿಂ ಸಾಬ್ ಗದ್ವಾಲ್ ವಿರುದ್ಧ ಗಂಗಾವತಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಎಂ.ಸಿ.ಸಿ ತಂಡದ ಪರಸಪ್ಪರಿಂದ ಅನ್ಸಾರಿ ಹಾಗೂ ಖಾಸಿಂ ಸಾಬ್ ವಿರುದ್ಧ ದೂರು ದಾಖಲಿಸಿದ್ದಾರೆ.

    ಕೆಲವು ದಿನಗಳ ಹಿಂದೆ ಸ್ಥಳೀಯ ಸಂಸ್ಥೆಗಳ ಚುನವಾಣೆ ಪ್ರಚಾರದಲ್ಲಿ ಇಕ್ಬಾಲ್ ಅನ್ಸಾರಿ ಹಣದ ಆಮಿಷ ನೀಡುವ ಬಗ್ಗೆ ಭಾಷಣ ಮಾಡಿದ್ದರು. ಹಾಲಿ ಶಾಸಕ ಪರಣ್ಣ ಮುನವಳ್ಳಿಗೆ ಟಾಂಗ್ ಕೊಡಲು ಹೋಗಿ ಹಣದ ಆಮಿಷ ಒಡ್ಡಿದ್ದರು.

    ನಿಮಗೆ ಖೋಟಾ ನೋಟು ಬೇಕಾ ಅಥವಾ ಅನ್ಸಾರಿ ಹಾಗೂ ಖಾಸಿಂ ಸಾಬ್‍ನ ಅಸಲಿ ನೋಟು ಬೇಕಾ ಎಂದು ಭಾಷಣ ಮಾಡಿದ್ದಾರೆ. ನಿಮಗೆ ಅಸಲಿ 100 ನೋಟು ಬೇಕಾ ಅಥವಾ ವಿರೋಧ ಪಕ್ಷಗಳು ಕೊಡುವ  500 ಮತ್ತು 1000 ರೂ. ಖೋಟಾ ನೋಟು ಬೇಕಾ ಎಂದು ಬಹಿರಂಗವಾಗಿ ಹೇಳಿದ್ದಾರೆ.

    ಇದೇ 25 ರಂದು ವಾರ್ಡ್ ನಂ8 ರಲ್ಲಿ ಭಾಷಣ ಮಾಡಿದ್ದರು. ಆದ್ದರಿಂದ ಈ ರೀತಿ ಭಾಷಣ ಮಾಡಿ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿರುವುದರಿಂದ ಅವರ ವಿರುದ್ಧ ದೂರು ದಾಖಲಾಗಿದೆ. ಈ ಸಂಬಂಧ ಗಂಗಾವತಿ ನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 171(ಇ) ಅಡಿಯಲ್ಲಿ ದೂರು ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗಾಗಿ ಮುಸ್ಲಿಂ ಯುವಕನಿಂದ ದೇವಾಲಯದಲ್ಲಿ ದೀರ್ಘ ದಂಡ ನಮಸ್ಕಾರ

    ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗಾಗಿ ಮುಸ್ಲಿಂ ಯುವಕನಿಂದ ದೇವಾಲಯದಲ್ಲಿ ದೀರ್ಘ ದಂಡ ನಮಸ್ಕಾರ

    ಗದಗ: ಜಿಲ್ಲೆಯ ರೋಣ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಿ.ಎಸ್. ಪಾಟೀಲ್ ಗೆಲುವಿಗಾಗಿ ಮುಸ್ಲಿಂ ಯುವಕನೋರ್ವ ದೀರ್ಘ ದಂಡ ನಮಸ್ಕಾರ ಹಾಕಿದ್ದಾರೆ.

    ಪಟ್ಟಣದ ರಾಜಾಬಕ್ಷಿ ಬಿಲ್ಲು ಖಾನ್ ಎಂಬವರು ವೀರಭದ್ರೇಶ್ವರ ದೇವಸ್ಥಾನದಿಂದ ದಾವಲ್ ಮಲ್ಲಿಕ್ ದರ್ಗಾದವರೆಗೆ ದೀರ್ಘ ದಂಡ ನಮಸ್ಕಾರ ಹಾಕಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಅಂತಾ ರಾಜಾಭಕ್ಷಿ ಹರಕೆಯನ್ನು ಹೊತ್ತಿದ್ದಾರೆ.

    ಜಿ.ಎಸ್.ಪಾಟೀಲ್ ಈ ಬಾರಿಯೂ ರೋಣದಿಂದ ಚುನಾಯಿತರಾಗಬೇಕು. ಜೊತೆಗೆ ಸಚಿವ ಸಂಪುಟದಲ್ಲಿ ಮಹತ್ವದ ಸಚಿವ ಖಾತೆ ಪಡೆಯಬೇಕು ಎಂದು ಹಿಂದು ಹಾಗೂ ಮುಸ್ಲಿಂ ದೇವರಲ್ಲಿ ರಾಜಾಬಕ್ಷಿ ಹರಕೆ ಹೊತ್ತಿದ್ದಾರೆ.

    ಸುಮಾರು ಒಂದೂವರೆ ಕಿಲೋಮಿಟರ್ ದೂರದವರೆಗೆ ದೀರ್ಘ ದಂಡ ನಮಸ್ಕಾರ ಹಾಕುವ ಮೂಲಕ ಪಕ್ಷದ ನಾಯಕರ ಹಾಗೂ ಕಾರ್ಯಕರ್ತರ ಮೆಚ್ಚುಗೆಗೆ ರಾಜಾಭಕ್ಷಿ ಪಾತ್ರರಾಗಿದ್ದಾರೆ. ಈ ದೀರ್ಘ ದಂಡ ನಮಸ್ಕಾರ ವೇಳೆ ಪಕ್ಷದ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

  • ಕುಡಿಯಲು ನೀರಿಲ್ಲ ಅಂದಿದ್ದಕ್ಕೆ ಕೈ ತಿರುವಿ ರೈತನ ಮೇಲೆ ಹಲ್ಲೆಗೆ ಯತ್ನಿಸಿದ ಎಂಎಲ್‍ಸಿ!

    ಕುಡಿಯಲು ನೀರಿಲ್ಲ ಅಂದಿದ್ದಕ್ಕೆ ಕೈ ತಿರುವಿ ರೈತನ ಮೇಲೆ ಹಲ್ಲೆಗೆ ಯತ್ನಿಸಿದ ಎಂಎಲ್‍ಸಿ!

    ರಾಯಚೂರು: ಮತಯಾಚನೆ ವೇಳೆ ಯುವರೈತನೋರ್ವ ಬೆಳೆಗೆ ಹಾಗೂ ಕುಡಿಯಲು ನೀರು ಕೇಳಿದಕ್ಕೆ ಎಮ್ ಎಲ್ ಸಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯ ಬೆಂಬಲಿಗರು ಹಲ್ಲೆಗೆ ಮುಂದಾದ ಘಟನೆ ರಾಯಚೂರಿನ ಅತ್ತನೂರು ಗ್ರಾಮದಲ್ಲಿ ನಡೆದಿದೆ.

    ಮಾನ್ವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಹಂಪಯ್ಯ ನಾಯಕ್ ರ ಬೆಂಬಲಿಗರು ಹಾಗೂ ಎಂ.ಎಲ್.ಸಿ, ಕೆಪಿಸಿಸಿ ಉಪಾಧ್ಯಕ್ಷ ಎನ್ ಎಸ್ ಬೋಸರಾಜು ದರ್ಪ ಮೆರೆದಿದ್ದಾರೆ.

    ಕಾಂಗ್ರೆಸ್ ಪರ ಮತಯಾಚನೆಗೆ ಅತ್ತನೂರು ಗ್ರಾಮಕ್ಕೆ ತೆರಳಿದ್ದ ನಾಯಕರಿಗೆ ಭತ್ತ ಬೆಳೆಗೆ ಹಾಗೂ ಕುಡಿಯಲು ನೀರಿಲ್ಲ. ಈಗ ಮತ ಯಾಚನೆಗೆ ಬಂದಿದ್ದೀರಲ್ಲ ಅಂತ ರೈತ ಮಲ್ಲಪ್ಪ ಮಡಿವಾಳ ಖಾರವಾಗಿ ಪ್ರಶ್ನಿಸಿದ್ದಕ್ಕೆ ಕೊಪಗೊಂಡ ಎಂಎಲ್ ಸಿ ಬೋಸರಾಜ, ಸ್ವತಃ ರೈತನ ಕೈತಿರುವಿ ಹಲ್ಲೆಗೆ ಮುಂದಾಗಿದ್ದಾರೆ. ಬಳಿಕ ಕಾಂಗ್ರೆಸ್ ಅಭ್ಯರ್ಥಿ ಹಂಪಯ್ಯ ಅವರ ಬೆಂಬಲಿಗರು ರೈತನಿಗೆ ಮನಸೋ ಇಚ್ಛೆ ಬೈದು ಕಳಿಸಿದ್ದಾರೆ.

    ನೀರು ಕೇಳಿದ್ದಕ್ಕೆ ನನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆಂದು ರೈತ ಮಲ್ಲಪ್ಪ ಇದೀಗ ಆರೋಪಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಪ್ರಚಾರ ಮೊಟಕುಗೊಳಿಸಿ ಶಾಸಕ ಹಂಪಯ್ಯ ನಾಯಕ್ ಹಾಗೂ ಎನ್ ಎಸ್ ಬೋಸರಾಜ್ ಗ್ರಾಮದಿಂದ ಹೊರಟು ಹೋಗಿದ್ದಾರೆ.

    ಇತ್ತೀಚೆಗಷ್ಟೇ ಮಾನ್ವಿಯ ತಡಕಲ್ ಗ್ರಾಮದಲ್ಲಿ ಮತಯಾಚನೆ ವೇಳೆ ಶಾಸಕ ಹಂಪಯ್ಯ ನಾಯಕ್ ಗೆ ಜನ ಬೆವರಿಳಿಸಿದ್ದರು. ಎರಡು ಬಾರಿ ಶಾಸಕರಾದ್ರೂ ಏನೂ ಅಭಿವೃದ್ಧಿ ಮಾಡಿಲ್ಲ ಅಂತ ತರಾಟೆಗೆ ತೆಗೆದುಕೊಂಡಿದ್ದರು.