Tag: ಕಾಂಗ್ರೆಸ್‌ ಗೃಹಲಕ್ಷ್ಮಿ

  • 2028ರಲ್ಲಿ ನಮ್ಮ ಸರ್ಕಾರ ಬಂದ್ರೆ ಗೃಹಲಕ್ಷ್ಮಿ ಹಣವನ್ನ 4,000 ರೂ.ಗೆ ಏರಿಸುತ್ತೇವೆ : ಕುಣಿಗಲ್ ರಂಗನಾಥ್

    2028ರಲ್ಲಿ ನಮ್ಮ ಸರ್ಕಾರ ಬಂದ್ರೆ ಗೃಹಲಕ್ಷ್ಮಿ ಹಣವನ್ನ 4,000 ರೂ.ಗೆ ಏರಿಸುತ್ತೇವೆ : ಕುಣಿಗಲ್ ರಂಗನಾಥ್

    ಬೆಂಗಳೂರು: 2028ರಲ್ಲಿ ನಮ್ಮ ಸರ್ಕಾರ ಬಂದರೆ 2000 ರೂ. ಇರುವ ಗೃಹಲಕ್ಷ್ಮಿ ಹಣವನ್ನ 4,000 ರೂ.ಗೆ ಏರಿಸುತ್ತೇವೆ ಎಂದು ಶಾಸಕ ಕುಣಿಗಲ್ ರಂಗನಾಥ್ (Kunigal Ranganath) ಹೇಳಿದರು.

    ವಿಧಾನಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರು ಪದಗ್ರಹಣ ಮಾಡಿದ ದಿನವೇ ನಾನು ಹೇಗಾದರೂ ಬಡವರಿಗೆ ಸಹಾಯ ಮಾಡಬೇಕು ಎಂದು ಹೇಳಿದ್ದರು. ಗೃಹಲಕ್ಷ್ಮಿಯು ವಿಶೇಷವಾದ ಹಣಕಾಸು ಯೋಜನೆಯಾಗಿದೆ. ಇವತ್ತು ಬಹಳಷ್ಟು ಜನರು ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಾರೆ. 2000 ರೂ ಏನಾಗುತ್ತೆ? 2,000ದಲ್ಲಿ ಏನು ಬದಲಾಗುತ್ತದೆ. ಈ ಬದಲಾವಣೆಯನ್ನು ನಾನು ಕಣ್ಣಾರೆ ನೋಡಿದ್ದೇನೆ ಎಂದರು. ಇದನ್ನೂ ಓದಿ: ಕಲುಷಿತ ಆಹಾರ ಸೇವನೆ ಕೇಸ್‌ | ಚಿಕಿತ್ಸೆ ಪಡೆಯುತ್ತಿರುವ ಮೇಘಾಲಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿ – ಮಂಡ್ಯ ಡಿಸಿ

    ಹಳ್ಳಿಯಲ್ಲಿ ಇರುವವರಿಗೆ ಇನ್ನೂ 5,000 ಮನೆಗಳನ್ನು ಕೊಡಿಸಬೇಕು ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ಕೆಲವು ಕುಟುಂಬಗಳು ಗುಡಿಸಲಲ್ಲಿ ವಾಸಮಾಡುತ್ತಿದ್ದಾರೆ. 24,000 ಸಾವಿರ ರೂ. ಪ್ರತಿ ವರ್ಷ ಕೊಟ್ಟರೇ ಆ ಬದುಕಿನ ಬದಲಾವಣೆಯ ಬೆಳಕನ್ನು ನೋಡಬೇಕು ಅಂದರೆ ಬೆಂಗಳೂರಲ್ಲಿ ಇರೋರು ಬಂದು ನೋಡಬೇಕು ಎಂದು ನುಡಿದರು. ಇದನ್ನೂ ಓದಿ: ಕರ್ನಾಟಕದ ಶಾಸಕರಿಗೆ ತಿರುಪತಿಯಲ್ಲಿ ದರ್ಶನ ಭಾಗ್ಯ ಕೊಡಿಸಿ: ಟಿ.ಎ.ಶರವಣ ಮನವಿ

    ದಯವಿಟ್ಟು ಗ್ಯಾರಂಟಿ ಸ್ಕೀಂ ಗೃಹಲಕ್ಷ್ಮಿ ಬಗ್ಗೆ ಯಾರಾದರು ವಿರೋಧ ಮಾಡಿದರೆ ಆ ಶಾಪ ತಟ್ಟುತ್ತದೆ ಎಂದು ಹೇಳಲು ಇಚ್ಛೆ ಪಡುತ್ತೇನೆ. ಇವತ್ತು ನಾನು ಚಾಲೆಂಜ್ ಹಾಕುತ್ತಿದ್ದೇನೆ. ಮುಂದಿನ ಸರ್ಕಾರ ಯಾವುದೇ ಬದಲಾವಣೆ ಆದರೂ ಯಾರೂ ಗ್ಯಾರೆಂಟಿ ಸ್ಕೀಂ ನಿಲ್ಲಸಲು ಆಗುವುದಿಲ್ಲ. ಮುಂದಿನ ಸಾಲಿನ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ವಾಪಾಸ್ ಅಧಿಕಾರಕ್ಕೆ ಬಂದರೆ 2000 ರೂ. ಅನ್ನು 4000 ರೂ.ಗೆ ಏರಿಕೆ ಮಾಡಲು ನಾವು ತಯರಾಗುತ್ತೇವೆ ಎಂದರು. ಇದನ್ನೂ ಓದಿ: ಕೋಲಾರ| ಕುಡಿಯಲು ಹಣ ನೀಡದ ಚಿಕ್ಕಮ್ಮ – ಬಿಯರ್ ಬಾಟಲಿಯಿಂದ ತಿವಿದು ಕೊಲೆ ಯತ್ನ

  • ಮನೆಗೆ ಅತ್ತೆಯೇ ಸಿನಿಯರ್, ಅತ್ತೆ ಒಪ್ಪಿದ್ರಷ್ಟೇ ಸೊಸೆಗೆ 2,000 – ಲಕ್ಷ್ಮಿ ಹೆಬ್ಬಾಳ್ಕರ್

    ಮನೆಗೆ ಅತ್ತೆಯೇ ಸಿನಿಯರ್, ಅತ್ತೆ ಒಪ್ಪಿದ್ರಷ್ಟೇ ಸೊಸೆಗೆ 2,000 – ಲಕ್ಷ್ಮಿ ಹೆಬ್ಬಾಳ್ಕರ್

    ಬೆಳಗಾವಿ: ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಷರತ್ತು ಅನ್ವಯಿಸುತ್ತೆ. ಮನೆಗೆ ಅತ್ತೆಯೇ ಸೀನಿಯರ್, ಆದ್ದರಿಂದ ಗೃಹಲಕ್ಷ್ಮಿ ಯೋಜನೆ ಯಾರಿಗೆ ಬೇಕೆಂದು ಅತ್ತೆಯನ್ನು ಕೇಳುತ್ತೇವೆ. ಅತ್ತೆ ನನ್ನ ಬದಲು ಸೊಸೆಗೆ ಯೋಜನೆ ಕೊಡಿ ಅಂದ್ರೆ `ಗೃಹಲಕ್ಷ್ಮಿ’ ಯೋಜನೆ ಸೊಸೆಗೆ ಸಿಗುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.

    ಗೃಹಲಕ್ಷ್ಮಿ ಗ್ಯಾರಂಟಿ (Congress Guarantee) ಯೋಜನೆ ಜಾರಿ ಸಂಬಂಧ ನಗರದ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಬಹಳಷ್ಟು ಸರಳವಾಗಿ ಯೋಜನೆ ಜಾರಿಗೆ ತರುವ ಚಿಂತನೆ ಇದೆ. ಇಲಾಖೆ ಮಂತ್ರಿಗಳು ಮತ್ತು ಅಧಿಕಾರಿಗಳ ಸಭೆಯನ್ನು ಸಿಎಂ ಸಿದ್ದರಾಮಯ್ಯ ಕರೆದಿದ್ದಾರೆ. ನಮ್ಮ ಇಲಾಖೆಯ ಜೊತೆ ಆರ್‌ಡಿಪಿಆರ್, ಕಂದಾಯ ಇಲಾಖೆ ಅಧಿಕಾರಿಗಳ ಸಭೆಯೂ ನಡೆಯಲಿದೆ ಎಂದು ಹೇಳಿದರು. ಇದನ್ನೂ ಓದಿ: ಉಡುಪಿ, ದ.ಕ, ಶಿವಮೊಗ್ಗದಲ್ಲಿ ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿ: ಸುನಿಲ್ ಕುಮಾರ್

    ಈ ವೇಳೆ ಗೃಹಲಕ್ಷ್ಮಿ ಯೋಜನೆಯನ್ನ ಅತ್ತೆಗೆ ಕೊಡಬೇಕೋ? ಸೊಸೆಗೆ ಕೊಡಬೇಕೋ ಎಂಬ ಪ್ರಶ್ನೆಗೆ ದನಿಗೂಡಿಸಿದ ಸಚಿವ ಸತೀಶ್ ಜಾರಕಿಹೊಳಿ (Satish Jarkiholi), ಯಾರಿಗೆ ಕೊಡಬೇಕು ಎಂಬುದಕ್ಕೆ ಷರತ್ತು ಅನ್ವಯವಾಗುತ್ತದೆ. ಅತ್ತೆ ಸ್ವಯಂಪ್ರೇರಿತವಾಗಿ ಸೊಸೆಗೆ ಕೊಡುತ್ತೇನೆ ಅಂದರೆ ಆ ಕಂಡಿಷನ್ ಇಲ್ಲಿ ಅನ್ವಯಿಸುತ್ತೆ. ಗೃಹಲಕ್ಷ್ಮಿ ಯೋಜನೆ ಯಾರಿಗೆ ಬೇಕೆಂದು ಮೊದಲು ಅತ್ತೆಯನ್ನ ಕೇಳುತ್ತೇವೆ. ನನ್ನ ಬದಲು ಸೊಸೆಗೆ ಯೋಜನೆ ನೀಡಿ ಅಂದ್ರೆ ಗೃಹಲಕ್ಷ್ಮಿ ಯೋಜನೆ ಸೊಸೆಗೆ ಕೊಡುತ್ತೇನೆ. ಮೊದಲ ಆದ್ಯತೆಯನ್ನ ಮನೆಯಲ್ಲಿ ಅತ್ತೆಗೆ ಕೊಡುತ್ತೆವೆ. ಅತ್ತೆ ಪ್ರೀತಿಯಿಂದ ಸೊಸೆಗೆ ಕೊಡುವುದಾದರೆ ಕೊಡಲಿ. ಹಾಗೆ ಕೊಡುವುದಾದರೆ ಅತ್ತೆ ಲಿಖಿತ ರೂಪದಲ್ಲಿ ಬರೆದುಕೊಡಬೇಕು ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದ ಎಲ್ಲ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ – ರಾಮಲಿಂಗಾರೆಡ್ಡಿ ಭರವಸೆ

    ಇದಕ್ಕೆ ದನಿಗೂಡಿಸಿದ ಲಕ್ಷ್ಮಿ ಹೆಬ್ಬಾಳ್ಕರ್, ಮನೆಗೆ ಅತ್ತೆಯೇ ಸೀನಿಯರ್, ಹೀಗಾಗಿ ಅತ್ತೆಗೆ ಯೋಜನೆ ಕೊಡುವುದು ನಮ್ಮ ಆದ್ಯತೆ. ನಮ್ಮ ಸಂಸ್ಕೃತಿ ಪ್ರಕಾರ ಮನೆಗೆ ಅತ್ತೆಯೇ ಯಜಮಾನಿ. ಅತ್ತೆಯೇ ಪ್ರೀತಿಯಿಂದ ಸೊಸೆಗೆ ಹಣ ಕೊಡಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದ್ದಾರೆ.