Tag: ಕಾಂಗ್ರೆಸ್‌ ಗ್ಯಾರಂಟಿ

  • ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಬದಲಾವಣೆ ತಂದಿವೆ – ಯಶವಂತರಾಯಗೌಡ ಪಾಟೀಲ್

    ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಬದಲಾವಣೆ ತಂದಿವೆ – ಯಶವಂತರಾಯಗೌಡ ಪಾಟೀಲ್

    ವಿಜಯಪುರ: ಗ್ಯಾರಂಟಿ ಯೋಜನೆಗಳು (Guarantee Scheme) ಬಡವರ ಬದುಕಿಗೆ ಬದಲಾವಣೆ ತಂದಿವೆ ಎಂದು ಇಂಡಿ (Indi)ಶಾಸಕ ಯಶವಂತರಾಯಗೌಡ ಪಾಟೀಲ್ (Yashvantraygoud Patil) ಹೇಳಿದರು.

    ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಪಕ್ಕದ ರಾಜ್ಯ ಮಹರಾಷ್ಟ್ರದಲ್ಲಿ (Maharashtra) ವಿರೋಧ ಪಕ್ಷದವರು ಸರ್ಕಾರ ರಚನೆ ಮಾಡುತ್ತಿದ್ದಾರೆ. ನಿಮಗೆ ಗೊತ್ತಿದೆ ಅಲ್ಲಿ ಯಾವ ಆಧಾರದ ಮೇಲೆ ಆಯ್ಕೆ ಆಗಿದ್ದಾರೆ. ನಮ್ಮ ರಾಜ್ಯದಲ್ಲಿ ಗ್ಯಾರಂಟಿಗಳು ಬಡವರ ಬದುಕಿನಲ್ಲಿ ಬದಲಾವಣೆ ತಂದಿವೆ. ನಾವು ಕೇವಲ ಬಿಪಿಎಲ್ ಕೊಟ್ಟರೆ, ಮಹರಾಷ್ಟ್ರದಲ್ಲಿ ಎಲ್ಲರಿಗೂ ಗ್ಯಾರಂಟಿ ಯೋಜನೆ ಎಂದು ಬಿಜೆಪಿಗರ ಕಾಲೆಳೆದರು.ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಫಡ್ನವಿಸ್‌ ರಾಜ್ಯಭಾರ ಶುರು – ಡಿಸಿಎಂಗಳಾಗಿ ಶಿಂಧೆ, ಪವಾರ್ ಪದಗ್ರಹಣ

    ಬಿಜೆಪಿಯವರೇ (BJP) ಗ್ಯಾರಂಟಿ ಯೋಜನೆಗಳಿಗೆ ವಿರೋಧ ಮಾಡಿದ್ದರು. ಇವತ್ತು ಗ್ಯಾರಂಟಿಗಳ ಮೇಲೆ ಅವರು ಸರ್ಕಾರ ರಚನೆ ಮಾಡುತ್ತಿರುವುದಾಗಿ ಅವರೇ ಹೇಳಿದ್ದಾರೆ ಎಂದು ಟಾಂಗ್ ಕೊಟ್ಟರು.

    ಇನ್ನೂ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿ, ಅದು ಸಿಎಂ ಅವರ ಪರಮಾಧಿಕಾರ. ವಿಧಾನಸಭೆ ಚುನಾವಣೆ ವೇಳೆ ಜಿಲ್ಲೆಯ ಮೂವರನ್ನು ಕರೆಸಿ, ಮೂವರು ಸೇರಿ ಚುನಾವಣೆ ಮಾಡಿ, ಮೂವರಿಗೂ ಒಳ್ಳೆಯ ಸ್ಥಾನಮಾನ ಕೊಡುತ್ತೇವೆ ಎಂದಿದ್ದರು. ಅದೇ ರೀತಿ ಇಬ್ಬರಿಗೆ ಜಿಲ್ಲೆಯಲ್ಲಿ ಪ್ರಾತಿನಿಧ್ಯ ನೀಡಿದ್ದಾರೆ. ಈಗ ಸಿಎಂ ಅವರು ಅದನ್ನು ಗಮನದಲ್ಲಿಟ್ಟು ನೋಡುತ್ತಾರೆ ಅಂದುಕೊಂಡಿದ್ದೀನಿ ಎಂದು ಸಚಿವ ಸ್ಥಾನದ ಆಕಾಂಕ್ಷಿ ಎನ್ನುವುದನ್ನು ಪರೋಕ್ಷವಾಗಿ ಹೇಳಿದರು.ಇದನ್ನೂ ಓದಿ: ಜನಕಲ್ಯಾಣ ಸಮಾವೇಶಕ್ಕೆ ತೆರಳುವಾಗ ಸಚಿವ ಮುನಿಯಪ್ಪ ಕಾರು ಅಪಘಾತ

  • GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್ – ಸಿದ್ದರಾಮಯ್ಯ

    GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್ – ಸಿದ್ದರಾಮಯ್ಯ

    – ರೈತ ಸಮುದಾಯಕ್ಕೆ ಬೆಲೆ ಫಿಕ್ಸ್ ಮಾಡುವ ಅಧಿಕಾರ ಬರಬೇಕೆಂದ ಸಿಎಂ

    ಮಂಡ್ಯ: GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್, ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ. ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ಉದ್ಘಾಟಿಸಿ ಹಲವು ಫಲಾನುಭವಿಗಳಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿದ ಅವರು, ಕೈಗಾರಿಕೋದ್ಯಮಿಗಳು ಅವರು ತಯಾರಿಸಿದ ವಸ್ತುಗಳಿಗೆ ಅವರೇ ಬೆಲೆ ನಿಗದಿ ಮಾಡ್ತಾರೆ. ಇದೇ ಅಧಿಕಾರ ನಮ್ಮ‌ ರೈತರಿಗೂ ಸಿಗಬೇಕು. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಒಕ್ಕೂಟ ವ್ಯವಸ್ಥೆ ಯಶಸ್ವಿ ಆಗಬೇಕಾದರೆ ದೇಶದ 140 ಕೋಟಿ ಜನರಿಗೂ ಸಕಲ ಸಹಕಾರ ಕೊಡಬೇಕು. ನಮ್ಮ ರೈತ ಸಮುದಾಯಕ್ಕೆ ಬೆಲೆ ಫಿಕ್ಸ್ ಮಾಡುವ ಅಧಿಕಾರ ಬರಬೇಕು. ಆಗ ತಾರತಮ್ಯ ನಿವಾರಣೆ ಆಗುತ್ತದೆ ಎಂದರು.

    ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು, ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಬದಲಾಗಿದೆ ಅಷ್ಟೆ. ತೆರಿಗೆ ಕಟ್ಟುವವರಿಗೆ ಅನ್ನಭಾಗ್ಯದ ಅಗತ್ಯ ಇಲ್ಲ ಅಲ್ಲವೇ? ಎಂದು ಪ್ರಶ್ನಿಸಿದರು.

    ಈ ದೇಶಕ್ಕೆ ಸಿಕ್ಕ ರಾಜಕೀಯ ಸ್ವಾತಂತ್ರ್ಯ ಯಶಸ್ವಿ ಆಗಬೇಕಾದರೆ, ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗಬೇಕು ಎನ್ನುವ ಅಂಬೇಡ್ಕರ್ ಅವರ ಮಾತನ್ನು ಉಲ್ಲೇಖಿಸಿ ಈ ಕಾರಣಕ್ಕೇ ನಾವು ಅನ್ನ ಭಾಗ್ಯ ಮತ್ತು ಆರ್ಥಿಕ ಶಕ್ತಿ ಕೊಡುವ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಬಡ ಕುಟುಂಬದವರ ಮತ್ತು ನಮ್ಮ ಹೆಣ್ಣು ಮಕ್ಕಳ ಹಣ ಉಳಿತಾಯ ಆಗಲಿ ಎನ್ನುವ ಕಾರಣದಿಂದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆಗಳನ್ನು ನಮ್ಮ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ಕೈಯಲ್ಲಿ ಕಾಸಿದ್ದರೆ ತಾನೆ ನಮ್ಮ ಜನ ಖರೀದಿಗೆ ಹೋಗೋದು. ಅದಕ್ಕೇ ಜನರ ಕೈಯಲ್ಲಿ ಕಾಸು ಇರುವ ಯೋಜನೆ ಜಾರಿ ಮಾಡಿದ್ದೇವೆ ಎಂದು ಹೇಳಿದರು.

    ಕೆ.ಆರ್ ಪೇಟೆಯಲ್ಲಿ ಹಾಳಾಗಿರುವ ರಸ್ತೆ, ಕೆರೆ, ಸೇತುವೆಗೆ ಹಣ ಕೊಡಬೇಕು ಎನ್ನುವ ಮನವಿ ಬಂದಿದೆ. ನಾವು ಬೇಡಿಕೆಗೆ ತಕ್ಕಷ್ಟು ಹಣವನ್ನು ಖಂಡಿತಾ ಬಿಡುಗಡೆ ಮಾಡ್ತೀವಿ ಎಂದು ಭರವಸೆ ನೀಡಿದರು.‌ ರಾಜ್ಯದಲ್ಲಿ ಪ್ರತೀ ಲೀಟರ್ ಹಾಲಿಗೆ 5 ರೂಪಾಯಿ ಸಹಾಯ ಧನ ಜಾರಿ ಮಾಡಿದ್ದು ನಾವು. ದಿನಕ್ಕೆ ರಾಜ್ಯದಲ್ಲಿ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಅಂದರೆ ಪ್ರತೀ ದಿನ 5 ಕೋಟಿ ರೂಪಾಯಿಯನ್ನು ಹಾಲು ಉತ್ಪಾದಕರಿಗೆ ಕೊಡುತ್ತಿದ್ದೇವೆ ಎಂದು ಲೆಕ್ಕ ವಿವರಿಸಿದರು.

  • ಗ್ಯಾರಂಟಿಯಿಂದ ದುಡ್ಡು ಇಲ್ಲದೇ ಇದ್ರೆ ಸರ್ಕಾರಿ ಆಸ್ತಿ ಮಾರಿ ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಿ: ಎಸ್.ಆರ್ ಪಾಟೀಲ್ ಆಕ್ರೋಶ

    ಗ್ಯಾರಂಟಿಯಿಂದ ದುಡ್ಡು ಇಲ್ಲದೇ ಇದ್ರೆ ಸರ್ಕಾರಿ ಆಸ್ತಿ ಮಾರಿ ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಿ: ಎಸ್.ಆರ್ ಪಾಟೀಲ್ ಆಕ್ರೋಶ

    – 75 ಸಾವಿರ ಕೋಟಿ ಅನುದಾನವನ್ನು ನೀಡುವ ಭರವಸೆ ನೀಡಿದ್ದ ಸಿಎಂ
    – ಎರಡು ಬಜೆಟ್‌ ಮಂಡನೆಯಾದ್ರೂ ಅನುದಾನ ಸಿಕ್ಕಿಲ್ಲ

    ಬಾಗಲಕೋಟೆ: ಪಂಚ ಗ್ಯಾರಂಟಿಗಳಿಂದ (Congress Guarantee) ಸರ್ಕಾರದಲ್ಲಿ ದುಡ್ಡಿಲ್ಲ ಎಂಬ ಸಬೂಬು ಹೇಳಬೇಡಿ, ಬೆಂಗಳೂರಿನಲ್ಲಿರುವ (Bengaluru) ಒಂದು ಸರ್ಕಾರಿ ಆಸ್ತಿ ತೆಗೆದು ನಮ್ಮ ಕೃಷ್ಣಾ ಮೇಲ್ದಂಡೆ ಯೋಜನೆಗೆ (Upper Krishna Project) ದುಡ್ಡು ಕೊಡಿ ಎಂದು ಮಾಜಿ ಸಚಿವ ಎಸ್ ಆರ್ ಪಾಟೀಲ್ (SR Patil) ಕಾಂಗ್ರೆಸ್‌ ಸರ್ಕಾರದ ವಿರುದ್ಧವೇ ಗುಡುಗಿದ್ದಾರೆ.

    ಕೃಷ್ಣ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಆಗ್ರಹಿಸಿ, ಮುಳುಗಡೆ ಹಿತರಕ್ಷಣಾ ಸಮಿತಿ ವತಿಯಿಂದ ಬಾಗಲಕೋಟೆಯಲ್ಲಿ (Bagalkot) ಮಂಗಳವಾರ ಬೃಹತ್ ಹೋರಾಟದ ಧರಣಿ ಸತ್ಯಾಗ್ರಹದಲ್ಲಿ ಹಮ್ಮಿಕೊಳ್ಳಲಾಗಿತ್ತು. ಆ ಹೋರಾಟದಲ್ಲಿ ಸಾವಿರಾರು ರೈತರು ಎಲ್ಲಾ ಪಕ್ಷದ ನಾಯಕರು ಭಾಗವಹಿಸಿದ್ದರು.

    ಹೋರಾಟದಲ್ಲಿ ಭಾಗವಹಿಸಿ ರೈತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಎಸ್.ಆರ್ ಪಾಟೀಲ್, 1964 ರಲ್ಲಿ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರೀ ಅವರಿಂದ ಅಡಿಗಲ್ಲು ಹಾಕಿದ ನಂತರ ಕುಂಟುತ್ತಾ ಸಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು. ಚುನಾವಣೆಗೂ ಮುನ್ನ ವಿಜಯಪುರದಲ್ಲಿ ಭಾಷಣ ಮಾಡುವ ವೇಳೆ ಈಗಿನ ಸಿಎಂ ಸಿದ್ದರಾಮಯ್ಯ ಅವರು ಕೃಷ್ಣ ಮೇಲ್ದಂಡೆ ಯೋಜನೆ ಕಾಮಗಾರಿ ಪೂರ್ಣಗೊಳಿಸಲು 75 ಸಾವಿರ ಕೋಟಿ ರೂ. ಅನುದಾನವನ್ನು ನೀಡುವ ಭರವಸೆಯನ್ನು ನೀಡಿದ್ದರು. ರಾಜ್ಯದ ಎಲ್ಲ ನೀರಾವರಿ ಯೋಜನೆಗಳಿಗಾಗಿ ಪ್ರತೀ ವರ್ಷ 40 ಸಾವಿರ ಕೋಟಿ ರೂ. ಮೀಸಲಿಡುವುದಾಗಿ ತಿಳಿಸಿದ್ದರು. ಆದರೆ ಈಗ ಸರ್ಕಾರ ಬಂದು ಎರಡು ಬಜೆಟ್ ಆಗಿವೆ. ನೀರಾವರಿ ಯೋಜನೆಗೆ 40 ಸಾವಿರ ಕೋಟಿ ರೂ. ಇಟ್ಟಿಲ್ಲ ಎಂದು ತಮ್ಮದೇ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಪ್ರತಿ ತಿಂಗಳು ಸರಿಯಾಗಿ ನಿಮಗೆ ಸಂಬಳ ಸಿಗುತ್ತಾ – ಗೃಹಲಕ್ಷ್ಮಿ ಹಣ ವಿಳಂಬಕ್ಕೆ ಹೆಬ್ಬಾಳ್ಕರ್‌ ಮೊಂಡುವಾದ

    ಯಾವುದೇ ಸರ್ಕಾರ ಬಂದರೂ ಕೃಷ್ಣ ಮೇಲ್ದಂಡೆ ಯೋಜನೆಗೆ ಸರಿಯಾಗಿ ಅನುದಾನವನ್ನು ನೀಡುತ್ತಿಲ್ಲ. ಹೀಗೆ ಆದರೆ ಯೋಜನಾ ವೆಚ್ಚ ಹೆಚ್ಚಾಗುತ್ತಾ ಹೋಗುತ್ತದೆ. ಇದರಿಂದ ಮನೆ ಮಠ ಜಮಿನುಗಳನ್ನು ಕಳೆದುಕೊಂಡ ಸಂತ್ರಸ್ತರು ಪರಿಹಾರಕ್ಕಾಗಿ ಪರಿತಪಿಸುತ್ತಿದ್ದಾರೆ ಎಂದರು.

    ಯಾವುದೇ ಸರ್ಕಾರ ಬಂದರೂ ಕೃಷ್ಣಾ ಮೇಲ್ದಂಡೆ ಯೋಜನೆಗೆ ದುಡ್ಡು ನೀಡುತ್ತಿಲ್ಲ. ಕೃಷ್ಣೆಗೆ ಈ ರೀತಿಯ ತಾತ್ಸಾರ ಯಾಕೆ ಎಂದು ಅಧಿಕಾರ ಅನುಭವಿಸಿದ ಮೂರು ಸರ್ಕಾರಗಳಿಗೂ ಪ್ರಶ್ನೆ ಮಾಡಿದರು.

    ಕೃಷ್ಣ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಈಗಿನ ಸರ್ಕಾರ ಪಂಚ ಗ್ಯಾರಂಟಿ ಇಂದ ಸರ್ಕಾರದಲ್ಲಿ ದುಡ್ಡಿಲ್ಲ ಎನ್ನುವ ಸಬೂಬು ಹೇಳುವ ಬದಲು ಬೆಂಗಳೂರಿನಲ್ಲಿರುವ ಒಂದು ಸರ್ಕಾರಿ ಆಸ್ತಿಯನ್ನ ಮಾರಿ ನಮ್ಮ ಕೃಷ್ಣ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಿ. ಟರ್ಫ್ ಕ್ಲಬ್, ರೇಸ್ ಕೋರ್ಸ್ ಮೈದಾನ ಹಾಗೂ ಗಾಲ್ಫ್ ಮೈದಾನ ತೆಗೆದರೆ 50 ಲಕ್ಷ ಕೋಟಿ ರೂ. ಬರುತ್ತದೆ. ಹೀಗೆ ನೂರರಷ್ಟು ಸರ್ಕಾರಿ ಆಸ್ತಿಗಳಿವೆ. ಅದರಲ್ಲಿ ಒಂದನ್ನು ತೆಗೆದು ಉತ್ತರ ಕರ್ನಾಟಕ ಭಾಗದ ಜನರ ಜೀವನ ಕೃಷ್ಣಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಪೂರ್ಣಗೊಳಿಸಿ ಎಂದು ಸರ್ಕಾರಕ್ಕೆ ಕಟುವಾಗಿ ಆಗ್ರಹಿಸಿದರು.

    ನಾನು ಹಿಂದೆ ವಿಪಕ್ಷ ನಾಯಕನಾಗಿದ್ದಾಗ ಕೃಷ್ಣ ಮೇಲ್ದಂಡೆ ಯೋಜನೆಯ ಕಾಮಗಾರಿಗಾಗಿ ಪಾದಯಾತ್ರೆ, ಟ್ರ್ಯಾಕ್ಟರ್ ರ‍್ಯಾಲಿ ಮಾಡಿ ಸದನದಲ್ಲಿ ಕೃಷ್ಣೆಗಾಗಿ ಅನುದಾನ‌ ನೀಡುವಂತೆ ಆಗ್ರಹಿಸಿದ್ದೆ. ಕೃಷ್ಣೆಗಾಗಿ ಹೋರಾಟ ಮಾಡಿದ್ದಕ್ಕೆ ನಾನು ಸದನದಿಂದ ಹೊರ ಬರಬೇಕಾಯಿತು ಎಂದು ತಮಗೆ ಪರಿಷತ್‌ ಸದಸ್ಯರಾಗಿ ಆಯ್ಕೆ ಮಾಡದ್ದಕ್ಕೆ ಪಕ್ಷದ ನಾಯಕರ ಬಗ್ಗೆ ಪರೋಕ್ಷ ಬೇಸರವನ್ನು ಹೊರಹಾಕಿದರು.

    ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯೋಣ. ಉಪವಾಸ ಸತ್ಯಾಗ್ರಹ ಮಾಡೋಣ, ಅದಕ್ಕೂ ಬಗ್ಗದಿದ್ದರೆ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡಿ ಕೃಷ್ಣಾ ಕಾಮಗಾರಿಗೆ ದುಡ್ಡು ನೀಡುವಂತೆ ಸರ್ಕಾರಕ್ಕೆ ಆಗ್ರಹಿಸೋಣ ಎಂದು ರೈತರಿಗೆ ಕರೆ ನೀಡಿದರು.

     

  • ಕೇಂದ್ರದಿಂದ ಅನುದಾನ ತಂದು ಸಂಪನ್ಮೂಲ ಹೆಚ್ಚಿಸಿಕೊಳ್ತೇವೆ – ಪರಮೇಶ್ವರ್‌

    ಕೇಂದ್ರದಿಂದ ಅನುದಾನ ತಂದು ಸಂಪನ್ಮೂಲ ಹೆಚ್ಚಿಸಿಕೊಳ್ತೇವೆ – ಪರಮೇಶ್ವರ್‌

    – ಶಾಸಕರು ಅನುದಾನ ಕೇಳೋದು ತಪ್ಪಲ್ಲ, ನಾನೂ ಕೇಳ್ತೀನಿ ಎಂದ ಸಚಿವ

    ಬೆಂಗಳೂರು: ರಾಜ್ಯ ಸರ್ಕಾರ ಶಾಸಕರಿಗೆ (MLAs) ಅನುದಾನ ಕೊಡ್ತಿದೆ. ಆದ್ರೆ ಕೇಂದ್ರ ಸರ್ಕಾರ ಸರಿಯಾಗಿ ಅನುದಾನ ಕೊಡ್ತಿಲ್ಲ. ಕೇಂದ್ರದಿಂದ ಶೀಘ್ರದಲ್ಲೇ ಅನುದಾನ ತಂದು, ನಮ್ಮ ಸಂಪನ್ಮೂಲ ಹೆಚ್ಚಿಸಿಕೊಳ್ತೇವೆ ಎಂದು ಗೃಹಸಚಿವ ಜಿ.ಪರಮೇಶ್ವರ್‌ (G Parameshwar) ಹೇಳಿದರು.

    ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಗಳ ಬಗ್ಗೆ ಶಾಸಕ ಗವಿಯಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದರು. ಗ್ಯಾರಂಟಿಗಳ ಬಗ್ಗೆ ಪಕ್ಷ, ಸರ್ಕಾರ (Congress Government) ತೀರ್ಮಾನ ಕೈಗೊಂಡಿದೆ. ಗ್ಯಾರಂಟಿ ಜಾರಿಗೆ ತರೋದಕ್ಕೆ ಕದ್ದು ಮುಚ್ಚಿ ತೀರ್ಮಾನ ಮಾಡಿಲ್ಲ. ಇದರಿಂದ ಜನ ನಮಗೆ ಮತ ಹಾಕಿದ್ದಾರೆ. ಗ್ಯಾರಂಟಿಗಳನ್ನು ನಿಲ್ಲಿಸಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಬಾಂಗ್ಲಾ-ಪಾಕ್‌ ಲವ್‌ಸ್ಟೋರಿ – ಭಾರತಕ್ಕೆ ಇರೋ ಆತಂಕ ಏನು?

    ಗ್ಯಾರಂಟಿಗಳನ್ನು ಜಾರಿ ಮಾಡೋದು ನಮ್ಮ ಕರ್ತವ್ಯ. ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ ಕೇಳಲಿ, ತಪ್ಪಿಲ್ಲ, ನಾನೂ ಕೇಳ್ತೀನಿ. ಸರ್ಕಾರ ಅನುದಾನ ಕೊಡ್ತಿದೆ. ಕಾರ್ಯಕ್ರಮಗಳು ಯಾವುದೂ ನಿಂತಿಲ್ಲ. ಹಿಂದಿನ ಸರ್ಕಾರ ಸಾಕಷ್ಟು ಬಿಲ್ ಬಾಕಿ ಉಳಿಸಿಹೋಗಿದ್ರು. ಕೇಂದ್ರವೂ ಸರಿಯಾದ ಅನುದಾನ ಕೊಡ್ತಿಲ್ಲ. ಕೇಂದ್ರದ ಅನುದಾನ ತಂದು, ನಮ್ಮ ಸಪನ್ಮೂಲವೂ ಹೆಚ್ಚಿಸಿಕೊಳ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಜಾನ್ಸ್ ಟಿನ್ನಿಸ್‌ವುಡ್ 112ನೇ ವಯಸ್ಸಿನಲ್ಲಿ ನಿಧನ

    ಕಲಬುರಗಿ ಜೈಲಿನಲ್ಲಿ ಕೈದಿಗಳ ಪ್ರತಿಭಟನೆ ವಿಚಾರ ಕುರಿತು ಮಾತನಾಡಿ, ಇದರ ಬಗ್ಗೆ ಡಿಜಿಪಿ ಜೊತೆ ಚರ್ಚೆ ಮಾಡ್ತೇನೆ, ಏನು ಸಮಸ್ಯೆ ಇದೆ ಅಂತ ಮಾತಾಡ್ತೇನೆ ಎಂದರಲ್ಲದೇ, ಸಂಪುಟ ಪುನಾರಚನೆ ಬಗ್ಗೆ ಗೊತ್ತಿಲ್ಲ. ಈ ವಿಚಾರ ಸಿಎಂಗೆ ಬಿಟ್ಟಿದ್ದು, ಸಿಎಂ, ಕೆಪಿಸಿಸಿ ಅಧ್ಯಕ್ಷರ ಜೊತೆ ಚರ್ಚೆ ನಡೆಸಿ ಪುನಾರಚನೆ ಮಾಡೋದು ಪದ್ಧತಿ. ಅವರಿಬ್ರೂ ಯಾವ ತೀರ್ಮಾನ ತಗೋತಾರೋ ನಮಗೆ ಗೊತ್ತಿಲ್ಲ, ಹೈಕಮಾಂಡ್ ಜೊತೆಗೂ ಚರ್ಚೆ ಮಾಡಬೇಕು ಎಂದರು.

    ಇಂದಿರಾನಗರ ಕೊಲೆ ಪ್ರಕರಣದ ಕುರಿತು ಮಾಹಿತಿ ನೀಡಿದ ಸಚಿವರು, ತುಂಬಾ ಪರಿಚಯಸ್ಥನೇ ಈ ಕೊಲೆ ಮಾಡಿದ್ದಾನೆ. ಅವರಿಬ್ಬರೂ ಪ್ರೀತಿಸ್ತಿದ್ರು, ಹೊಟೇಲ್‌ಗೆ ಕರೆದೊಯ್ದು ಕೊಲೆ ಮಾಡಿದ್ದಾನೆ. ಆಕೆ ಕೇರಳದವರು, ಆತ ಅಸ್ಸಾಂ ಮೂಲ, ಈಥರ ಆದಾಗ ನಾವೂ ಗಮನಿಸ್ತಿರ್ತೀವಿ, ತನಿಖೆ ನಡೀತಿದೆ ಎಂದರು. ಇದನ್ನೂ ಓದಿ: ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್‌-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ

    545 ಪಿಎಸ್‌ಐ ಹುದ್ದೆಗೆ ಅಂತಿಮ ಪಟ್ಟಿಗೂ ಮುನ್ನವೇ ನೇಮಕಾತಿ ಆದೇಶ ನೀಡಲು ಗಡುವು ವಿಚಾರ ಕುರಿತು ಮಾತನಾಡಿ, ಸಿಂಧುತ್ವಕ್ಕೆ ಡಿಸಿಗಳಿಗೆ ಕಳಿಸಿದ್ದಾರೆ. ಸಿಂಧುತ್ವ ವೆರಿಫಿಕೇಷನ್ ಮಾಡಿ ಆರ್ಡರ್ ಕೊಡ್ತಾರೆ. ನಾನು ಅದಕ್ಕೂ ಒಂದು ಹೆಜ್ಜೆ ಮುಂದೆ ಹೋಗಿ ನೀವು ಆರ್ಡರ್ ಕೊಡಿ ಅಂತ ಹೇಳಿದ್ದೇನೆ. ಆಮೇಲೆ ಸಿಂಧುತ್ವ ಪರಿಶೀಲನೆ ಏನಾದರೂ ತಪ್ಪು ಬಂದರೇ ಕ್ಯಾನ್ಸಲ್ ಮಾಡೋಣ ಅಂತ ಹೇಳಿದ್ದೇವೆ. ಸಿಂಧುತ್ವ ವೆರಿಫಿಕೇಶನ್ ಆಗುವ ತನಕ ಮಾಡೋದಿಲ್ಲ ಎಂದು ಹೇಳಿದರು.

  • ಮಹಾರಾಷ್ಟ್ರ ಬಿಜೆಪಿ ವಿರುದ್ಧ ಕೇಸ್‌ ದಾಖಲಿಸಲು ಕರ್ನಾಟಕ ಸರ್ಕಾರ ನಿರ್ಧಾರ

    ಮಹಾರಾಷ್ಟ್ರ ಬಿಜೆಪಿ ವಿರುದ್ಧ ಕೇಸ್‌ ದಾಖಲಿಸಲು ಕರ್ನಾಟಕ ಸರ್ಕಾರ ನಿರ್ಧಾರ

    ಬೆಂಗಳೂರು: ಪಂಚ ಗ್ಯಾರಂಟಿಗಳ ಕುರಿತು ಸುಳ್ಳು ಜಾಹೀರಾತು ನೀಡಿದ್ದ ಆರೋಪದ ಮೇಲೆ ಮಹಾರಾಷ್ಟ್ರ ಬಿಜೆಪಿ (Maharashtra BJP) ಘಟಕದ ವಿರುದ್ಧ ಕರ್ನಾಟಕ ಸರ್ಕಾರ (Karnataka Govt) ಪ್ರಕರಣ ದಾಖಲಿಸಲು ನಿರ್ಧರಿಸಿದೆ. ಈ ಕುರಿತು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರೇ ಎಚ್ಚರಿಕೆ ನೀಡಿದ್ದಾರೆ.

    ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ, ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡದೆ ವಂಚಿಸಿದೆ ಎನ್ನುವ ಸುಳ್ಳು ಜಾಹೀರಾತನ್ನು (Advertisement) ಪುಟಗಟ್ಟಲೆ ನೀಡಿದ್ದ ಮಹಾರಾಷ್ಟ್ರದ ಬಿಜೆಪಿ ವಿರುದ್ಧ ಕರ್ನಾಟಕ ಸರ್ಕಾರ ಕೇಸು ದಾಖಲಿಸಿ, ಸರಿಯಾದ ಪಾಠ ಕಲಿಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಬಳ್ಳಾರಿ| ಒಂದೇ ದಿನ ಸಿಸೇರಿಯನ್‌ – ಮೂವರು ಗರ್ಭಿಣಿಯರು ಸಾವು, ಐಸಿಯುನಲ್ಲಿ ನಾಲ್ವರಿಗೆ ಚಿಕಿತ್ಸೆ

    ಮುಂದುವರಿದು ಅಲ್ಲದೇ ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು (Guarantee Scheme) ಜಾರಿ ಆಗದೆ ಕಾಂಗ್ರೆಸ್ ಸರ್ಕಾರ ಕರ್ನಾಟಕ ಜನತೆಗೆ ವಂಚಿಸಿದ್ದಾಗಿ ಮಹಾರಾಷ್ಟ್ರ ಬಿಜೆಪಿ ಘಟಕ ಸುಳ್ಳು ಜಾಹಿರಾತು ನೀಡಿದೆ. ಇವರಿಗೆ ನಾಚಿಕೆ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಸುಳ್ಳಿನ ಸರದಾರರೇ ಕರ್ನಾಟಕಕ್ಕೆ ಬಂದು ನೋಡಿ. ನಿಮಗೆ ವಿಶೇಷ ವಿಮಾನದ ವ್ಯವಸ್ಥೆ ನಾನೇ ಮಾಡ್ತೀನಿ. ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿ ಆಗಿಲ್ಲ ಎಂದರೆ ನಾನು ರಾಜೀನಾಮೆ ಕೊಡ್ತೀನಿ. ನಮ್ಮ ನೆಲದಲ್ಲಿ ಗ್ಯಾರಂಟಿಗಳು ಜಾರಿ ಆಗಿರುವುದು ಸತ್ಯ ಆದರೆ ನಿಮ್ಮ ಸುಳ್ಳುನ ಜಾಹಿರಾತನ್ನು ವಾಪಾಸ್ ಪಡೆದು ಮಹಾರಾಷ್ಟ್ರ ಜನತೆಯ ಕ್ಷಮೆ ಕೇಳಬೇಕು. ಈ ಸವಾಲು ಸ್ವೀಕರಿಸುತ್ತೀರಾ? ಎಂದು ಪ್ರಶ್ನೆ ಮಾಡಿದ್ದಾರೆ.

    ವರ್ಷಕ್ಕೆ 56 ಸಾವಿರ ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ನಮ್ಮ ರಾಜ್ಯದ ಕೋಟಿ ಕೋಟಿ ಜನರ ಖಾತೆಗೆ ನೇರವಾಗಿ ಹಣ ಹಾಕುತ್ತಿದ್ದೇವೆ. ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ ಮತ್ತು ಮಹಾ ವಿಕಾಸ್ ಅಘಾಡಿ ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇಲ್ಲೂ ಮಹಾ ಆಘಾಡಿ ಅಧಿಕಾರಕ್ಕೆ ಬಂದು ಎಲ್ಲಾ ಭರವಸೆಗಳನ್ನು ಈಡೇರಿಸುವುದು ಶತಸಿದ್ದ. ಏಕೆಂದರೆ ನುಡಿದಂತೆ ನಡೆದ ಚರಿತ್ರೆ ಕಾಂಗ್ರೆಸ್ ಪಕ್ಷಕ್ಕೆ ಇದೆ. ಆದ್ದರಿಂದ ಬಿಜೆಪಿ ಸೋಲಿಸಿ ಆರ್ಥಿಕ ಶಕ್ತಿ ಪಡೆಯಿರಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಿಕ್ಷೆ ಬೇಡುವವಳಿಗೆ ಮಗು ಕೊಟ್ಟು ತಾಯಿ ಕಣ್ಣೀರು – ಮಗುವಿನೊಂದಿಗೆ ಮಹಿಳೆ ಪರಾರಿ

  • ಕರ್ನಾಟಕವನ್ನ ಲೂಟಿ ಹೊಡೀತಿದ್ದಾರೆ.. ರಕ್ಷಣೆ ಮಾಡಿ – ನಿರ್ಮಲಾ ಸೀತಾರಾಮನ್ ಎದುರು ಹೈಡ್ರಾಮಾ

    ಕರ್ನಾಟಕವನ್ನ ಲೂಟಿ ಹೊಡೀತಿದ್ದಾರೆ.. ರಕ್ಷಣೆ ಮಾಡಿ – ನಿರ್ಮಲಾ ಸೀತಾರಾಮನ್ ಎದುರು ಹೈಡ್ರಾಮಾ

    – ಸಚಿವ ಮಹದೇವಪ್ಪ ಎದುರೇ ವಿತ್ತ ಸಚಿವರಿಗೆ ದೂರು

    ಮೈಸೂರು: ಗ್ಯಾರಂಟಿಗಳ (Guarantee) ಹೆಸರಲ್ಲಿ ರಾಜ್ಯ ಸರ್ಕಾರ ಕರ್ನಾಟಕವನ್ನು ಲೂಟಿ ಹೊಡೀತಿದೆ.. ರಕ್ಷಣೆ ಮಾಡಿ ಅಂತ ವ್ಯಕ್ತಿಯೊಬ್ಬ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala sitharaman) ಅವರಿಗೆ ಮನವಿ ಮಾಡಿದ್ದಾರೆ. ಸಚಿವ ಹೆಚ್.ಸಿ ಮಹದೇವಪ್ಪ ಅವರೂ ವೇದಿಕೆಯಲ್ಲಿದ್ದಾಗಲೇ ಮಧ್ಯ ಪ್ರವೇಶಿಸಿ, ದೂರಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

    `ಸಂಗೀತ ಸುಗಂಧ’ ಕಾರ್ಯಕ್ರಮದಲ್ಲಿ ದಿಢೀರ್ ವೇದಿಕೆ ಬಳಿಕ ನುಗ್ಗಿದ ವ್ಯಕ್ತಿಯೊಬ್ಬ ಘೋಷಣೆ ಕೂಗಿದರು. ತಾಯಿ ಚಾಮುಂಡಿಗೆ ಹೂ ಹಾಕಿ ಲೂಟಿ ಹೊಡೆಯುತ್ತಿದ್ದಾರೆ. ನೀವು ಮಹಾರಾಷ್ಟ್ರ ಚುನಾವಣೆಯಲ್ಲಿ (Maharashtra Election) ದಯಮಾಡಿ ಉಚಿತ ಗ್ಯಾರಂಟಿ ಯೋಜನೆ ಘೋಷಣೆ ಮಾಡಬೇಡಿ ಎಂದು ಕೋರಿದ್ದಾರೆ. ಇದನ್ನೂ ಓದಿ: ಜಮಾತ್-ಎ-ಇಸ್ಲಾಮಿ ಬೆಂಬಲದೊಂದಿಗೆ ಪ್ರಿಯಾಂಕಾ ವಯನಾಡಿನಲ್ಲಿ ಸ್ಪರ್ಧೆ – ಪಿಣರಾಯಿ ವಿಜಯನ್‌

    ಈ ವೇಳೆ, ಕಾರ್ಯಕ್ರಮದಲ್ಲಿದ್ದ ಗಣ್ಯರೆಲ್ಲ ತಬ್ಬಿಬ್ಬಾಗಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಭಾಗಿಯಾಗಿದ್ದು, ತೀವ್ರ ಮುಜುಗರ ಅನುಭವಿಸಿದರು. ಘೋಷಣೆ ಕೂಗಿದ ವ್ಯಕ್ತಿಯನ್ನು ಪೊಲೀಸರು ಎಳೆದೊಯ್ದರು. ಬಳಿಕ ವ್ಯಕ್ತಿಯನ್ನು ಬಿಟ್ಟುಬಿಡಿ ಅಂತ ನಿರ್ಮಲಾ ಸೀತಾರಾಮನ್ ಸೂಚಿಸಿದರು. ಇದನ್ನೂ ಓದಿ: ಕರಾಟೆ ತರಗತಿಯಲ್ಲಿ ‘ವಿದ್ಯಾಪತಿ’ಯ ತಲೆ ಹರಟೆ-ನಾಗಭೂಷಣ್ ಸಿನಿಮಾ ಹಾಡಿಗೆ‌ ಧ್ವನಿಯಾದ ಜಗ್ಗೇಶ್‌

    ಸಚಿವರಿಗೆ ದೂರು ನೀಡಿದ ವ್ಯಕ್ತಿಯನ್ನು ಕೆಆರ್ ನಗರ ತಾಲೂಕಿನ ಶುದ್ದನಹಳ್ಳಿ ಗ್ರಾಮದ ನಿವಾಸಿ ರವಿ ಎಂದು ಗುರುತಿಸಲಾಗಿದೆ. ಈತ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ

    ಇನ್ನೂ ಕಾರ್ಯಕ್ರಮ ಮುಗಿಸಿ ಹೊರಡುತ್ತಿದ್ದ ವೇಳೆ ರೈತ ಮುಖಂಡರು ವಿತ್ತ ಸಚಿವರಿಗೆ ಮುತ್ತಿಗೆ ಹಾಕುವ ಪ್ರಯತ್ನ ಮಾಡಿದರು. ಕೃಷಿ ಸಾಲಕ್ಕೆ ರೈತರ ಸಿಬಿಲ್ ಸ್ಕೋರ್ ಪರಿಗಣಿಸುವ ನಿಯಮ ರದ್ದು ಮಾಡಬೇಕು. ಕೃಷಿ ಸಾಲ ವಸೂಲಿಗೆ ಬ್ಯಾಂಕುಗಳು ರೈತರ ಜಮೀನು ಮುಟ್ಟುಗೂಲು ಹಾಕಿ ಹರಾಜು ಮಾಡುವ ಸರ್ಫೈಸಿ ಕಾಯ್ದೆ ರದ್ದು ಮಾಡಬೇಕು. ಮಹಿಳಾ ಸ್ವಸಹಾಯ ಸಂಘಗಳಿಗೆ ಖಾಸಗಿ ಫೈನಾನ್ಸ್ ಗಳು ವಸುಲಾತಿ ಕಿರುಕುಳ ನೀಡುತ್ತಿರುವುದಕ್ಕೆ ಕಡಿವಾಣ ಹಾಕಲು ಕಠಿಣ ಕಾನೂನು ಜಾರಿಗೆ ತರಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಆಗ್ರಹಿಸಿ ಮನವಿ ಸಲ್ಲಿಸಿದರು. ಮನವಿಗೆ ಸ್ವೀಕರಿಸಿದ ವಿತ್ತ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು.

  • ಅವಾಸ್ತವಿಕ ಭರವಸೆಗಳನ್ನು ನೀಡುವುದು ಸುಲಭ, ಆದ್ರೆ ಸಮರ್ಪಕ ಜಾರಿ ಕಷ್ಟ: ಕಾಂಗ್ರೆಸ್‌ ಗ್ಯಾರಂಟಿ ಪರಿಷ್ಕರಣೆ ವಿವಾದಕ್ಕೆ ಮೋದಿ ತರಾಟೆ

    ಅವಾಸ್ತವಿಕ ಭರವಸೆಗಳನ್ನು ನೀಡುವುದು ಸುಲಭ, ಆದ್ರೆ ಸಮರ್ಪಕ ಜಾರಿ ಕಷ್ಟ: ಕಾಂಗ್ರೆಸ್‌ ಗ್ಯಾರಂಟಿ ಪರಿಷ್ಕರಣೆ ವಿವಾದಕ್ಕೆ ಮೋದಿ ತರಾಟೆ

    – ಕರ್ನಾಟಕದಲ್ಲಿ ಕಾಂಗ್ರೆಸ್‌ ಒಳರಾಜಕೀಯದಲ್ಲಿ ನಿರತವಾಗಿದೆ

    ನವದೆಹಲಿ: ಶಕ್ತಿ ಯೋಜನೆ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಿಡಿಕಾರಿದ್ದಾರೆ. ಅವಾಸ್ತವಿಕ ಭರವಸೆಗಳನ್ನು ಈಡೇರಿಸುವುದು ಸುಲಭ. ಆದರೆ, ಅವುಗಳನ್ನು ಸಮರ್ಪಕವಾಗಿ ಜಾರಿಗೊಳಿಸುವುದು ತುಂಬಾ ಕಷ್ಟ ಎಂದು ಮೋದಿ ಕಿಡಿಕಾರಿದ್ದಾರೆ.

    ಶಕ್ತಿ ಯೋಜನೆ ಪರಿಷ್ಕರಣೆ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಗ್ಯಾರಂಟಿ ಘೋಷಿಸಿಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದ್ದರು. ಖರ್ಗೆ ಸಲಹೆ ಬೆನ್ನಲ್ಲೇ ಕಾಂಗ್ರೆಸ್ ಅನ್ನು ಪ್ರಧಾನಿ ಮೋದಿ ಕುಟುಕಿದ್ದಾರೆ. ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಾಕಿ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಅಧಿಕಾರಿಗಳ ಯಡವಟ್ಟಿನಿಂದ ವಕ್ಫ್‌ ಆಸ್ತಿ ಎಂದು ದಾಖಲಾತಿಯಲ್ಲಿ ನಮೂದಾಗಿದೆ: ಸಚಿವ ಬೋಸರಾಜು

    ಅವಾಸ್ತವಿಕ ಭರವಸೆಗಳನ್ನು ನೀಡುವುದು ಸುಲಭ. ಆದರೆ, ಅವುಗಳನ್ನು ಸಮರ್ಪಕವಾಗಿ ಜಾರಿಗೊಳಿಸುವುದು ಕಠಿಣ. ಇದು ಅಸಾಧ್ಯ, ಕಠಿಣ ಮಾರ್ಗ ಎಂದು ಕಾಂಗ್ರೆಸ್ ಅರಿತುಕೊಂಡಿದೆ. ಅವರು ಜನರಿಗೆ ಭರವಸೆ ಮಾತ್ರ ನೀಡುತ್ತಾರೆ. ಅದರೆ ಅದನ್ನು ಎಂದಿಗೂ ಪೂರೈಸಲು ಸಾಧ್ಯವಿಲ್ಲ ಎಂದು ಅವರಿಗೆ ತಿಳಿದಿದೆ. ಹಿಮಾಚಲ ಪ್ರದೇಶ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ಅವರು ಜನರ ಮುಂದೆ ಕೆಟ್ಟದಾಗಿ ನಿಂತಿದ್ದಾರೆ. ಅವರ ಭರವಸೆಗಳು ಈಡೇರಿಲ್ಲ. ಇದು ಈ ರಾಜ್ಯಗಳ ಜನರಿಗೆ ಕಾಂಗ್ರೆಸ್ ಮಾಡಿದ ಭೀಕರ ಮೋಸ ಎಂದು ವಾಗ್ದಾಳಿ ನಡೆಸಿದ್ದಾರೆ.

    ಕರ್ನಾಟಕದಲ್ಲಿ ಕಾಂಗ್ರೆಸ್ ಒಳರಾಜಕೀಯದಲ್ಲಿ ನಿರತವಾಗಿದೆ. ಅಭಿವೃದ್ಧಿಯ ಬಗ್ಗೆ ಕಾಳಜಿ ವಹಿಸುವ ಬದಲು ಲೂಟಿ ಮಾಡುತ್ತಿದೆ. ಅಷ್ಟೇ ಅಲ್ಲ, ಈಗಿರುವ ಸ್ಕೀಮ್‌ಗಳನ್ನು ಹಿಂಪಡೆಯಲು ಕೂಡ ಹೊರಟಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಸರ್ಕಾರಿ ನೌಕರರಿಗೆ ಸರಿಯಾದ ಸಮಯಕ್ಕೆ ಸಂಬಳ ಸಿಗುತ್ತಿಲ್ಲ. ತೆಲಂಗಾಣದಲ್ಲಿ ರೈತರಿಗೆ ಭರವಸೆ ನೀಡಿದ ಸಾಲ ಮನ್ನಾಕ್ಕಾಗಿ ಕಾಯುತ್ತಿದ್ದಾರೆ. ಈ ಹಿಂದೆ ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಅವರು ಕೆಲವು ಭರವಸೆ ನೀಡಿದ್ದರು. ಅದನ್ನು ಐದು ವರ್ಷಗಳವರೆಗೆ ಜಾರಿ ಮಾಡಲಿಲ್ಲ. ಕಾಂಗ್ರೆಸ್ ಹೇಗೆ ಕೆಲಸ ಮಾಡುತ್ತದೆ ಎಂಬುದಕ್ಕೆ ಇಂತಹ ಹಲವಾರು ಉದಾಹರಣೆಗಳಿವೆ ಎಂದು ಕರ್ನಾಟಕ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ ಮೋದಿ ಚಾಟಿ ಬೀಸಿದ್ದಾರೆ.

    ಕಾಂಗ್ರೆಸ್‌ನ ಪ್ರಾಯೋಜಿತ ನಕಲಿ ಭರವಸೆಯ ಸಂಸ್ಕೃತಿಯ ವಿರುದ್ಧ ದೇಶದ ಜನತೆ ಎಚ್ಚೆತ್ತುಕೊಳ್ಳಬೇಕಾಗಿದೆ. ಹರಿಯಾಣದ ಜನರು ಕಾಂಗ್ರೆಸ್ ಸುಳ್ಳನ್ನು ತಿರಸ್ಕರಿಸಿದರು. ಸ್ಥಿರ, ಪ್ರಗತಿ ಆಧಾರಿತ ಮತ್ತು ಕಾರ್ಯಚಾಲಿತ ಸರ್ಕಾರಕ್ಕೆ ಆದ್ಯತೆ ನೀಡಿದರು. ಕಾಂಗ್ರೆಸ್‌ಗೆ ನೀಡುವ ಮತವು ಆಡಳಿತವಿಲ್ಲದ, ಕಳಪೆ ಆರ್ಥಿಕತೆ ಮತ್ತು ಸಾಟಿಯಿಲ್ಲದ ಲೂಟಿಗೆ ನೀಡುವ ಮತ ಎಂಬ ಅರಿವು ಭಾರತದಾದ್ಯಂತ ಬೆಳೆಯುತ್ತಿದೆ. ಭಾರತದ ಜನರು ಅಭಿವೃದ್ಧಿ ಮತ್ತು ಪ್ರಗತಿಯನ್ನು ಬಯಸುತ್ತಾರೆ. ಅದೇ ಹಳೆಯ ನಕಲಿ ಭರವಸೆಯ ಕಾಂಗ್ರೆಸ್‌ನ್ನಲ್ಲ. ಕಾಂಗ್ರೆಸ್ ಆಡಳಿತ ಇರುವ ಯಾವುದೇ ರಾಜ್ಯವನ್ನು ಪರಿಶೀಲಿಸಿ. ಹಿಮಾಚಲ ಪ್ರದೇಶ, ಕರ್ನಾಟಕ ಮತ್ತು ತೆಲಂಗಾಣ. ಅಭಿವೃದ್ಧಿಯ ಪಥ ಮತ್ತು ಹಣಕಾಸಿನ ಶಿಸ್ತು ಹದಗೆಡುತ್ತಿದೆ. ಅವರ ಗ್ಯಾರಂಟಿಗಳು ಈಡೇರಿಲ್ಲ. ಇದು ಈ ರಾಜ್ಯಗಳ ಜನರಿಗೆ ಮಾಡಿದ ಭೀಕರ ವಂಚನೆಯಾಗಿದೆ. ಬಡವರು, ಯುವಕರು, ರೈತರು ಮತ್ತು ಮಹಿಳೆಯರು ಇಂತಹ ರಾಜಕೀಯದ ಬಲಿಪಶುಗಳು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ಹಗರಣಗಳ ಬಗ್ಗೆ ಸಿನಿಮಾ ಮಾಡಿದ್ರೆ ಬಾಕ್ಸ್ಆಫೀಸ್ ಹಿಟ್ ಆಗುತ್ತೆ: ಸಿ.ಸಿ ಪಾಟೀಲ್

  • ಪಂಚ ಗ್ಯಾರಂಟಿಗಳಿಗೆ ಕರ್ನಾಟಕ ಸರ್ಕಾರವೇ ಮಾದರಿ: ಲಕ್ಷ್ಮಿ ಹೆಬ್ಬಾಳ್ಕರ್

    ಪಂಚ ಗ್ಯಾರಂಟಿಗಳಿಗೆ ಕರ್ನಾಟಕ ಸರ್ಕಾರವೇ ಮಾದರಿ: ಲಕ್ಷ್ಮಿ ಹೆಬ್ಬಾಳ್ಕರ್

    – ರಾಜ್ಯದಲ್ಲಿ ಗ್ಯಾರಂಟಿಗಳು ನಿಲ್ಲುವುದಿಲ್ಲ

    ಉಡುಪಿ: ಪಂಚ ಗ್ಯಾರಂಟಿಗಳಿಗೆ ಕರ್ನಾಟಕ ಸರ್ಕಾರವೇ ಮಾದರಿ ಎಂದು ಶಕ್ತಿ ಯೋಜನೆ ವಿಚಾರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

    ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಪೂರ್ವ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಪಂಚ ಗ್ಯಾರಂಟಿಗಳಿಗೆ ಕರ್ನಾಟಕ ಸರ್ಕಾರವೇ ಮಾದರಿ. ಈ ಮಾದರಿಯನ್ನು ಇಡೀ ದೇಶದಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಶಕ್ತಿ ಯೋಜನೆ ಬಗ್ಗೆ ಯಾವುದೇ ಗೊಂದಲ ಬೇಡ. ರಾಜ್ಯದಲ್ಲಿ ಪಂಚ ಗ್ಯಾರಂಟಿಗಳು ನಿಲ್ಲುವುದಿಲ್ಲ. ಮುಂದಾಲೋಚನೆ ಇಟ್ಟುಕೊಂಡೆ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಮಹಿಳೆಯರ ಆರ್ಥಿಕ ಸಬಲೀಕರಣ ಮಾಡಲು ಜಾರಿಗೆ ತಂದಿದ್ದೇವೆ. ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ಈ ಯೋಜನೆಗಳು ಜಾರಿಯಾಗಿವೆ ಎಂದು ಸ್ಪಷ್ಟನೆ ನೀಡಿದರು.ಇದನ್ನೂ ಓದಿ: Haveri| ವಕ್ಫ್ ಆಸ್ತಿ ಗಲಾಟೆ- 28ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

    ಡಿಕೆ ಶಿವಕುಮಾರ್ ಅವರನ್ನು ನಾವು ಇವತ್ತು ನೋಡುತ್ತಿಲ್ಲ. ಡಿಕೆಶಿ ಅಧ್ಯಕ್ಷರಾದಾಗ ಕೋವಿಡ್ ಇತ್ತು. ಆಗ ರಾಜ್ಯದಲ್ಲಿ ಬಹಳಷ್ಟು ಮಹಿಳೆಯರು ಬೆಲೆ ಏರಿಕೆ ಕುರಿತಾಗಿ ದೂರಿದ್ದರು. ಈ ಬಗ್ಗೆ ಏನಾದರೂ ಮಾಡಬೇಕು ಎಂದು ಯೋಚಿಸಿ, ಬೆಲೆ ಏರಿಕೆ ಕಡಿಮೆ ಮಾಡಲು ಈ ಯೋಜನೆಗಳನ್ನು ತಂದರು. ಇದರ ಬಗ್ಗೆ ವಿಚಾರ ಮಾಡಿ, ಮಹಿಳೆಯರ ಜೊತೆ ಚರ್ಚೆ, ಸಂವಾದ ಮಾಡಿ ಗ್ಯಾರಂಟಿ ಯೋಜನೆಗಳನ್ನು ಜಾರಿ ತಂದವರು ಡಿಕೆಶಿವಯರೇ. ಅವರ ಉದ್ದೇಶ ಸ್ಪಷ್ಟವಾಗಿದೆ. ಈ ಯೋಜನೆಯಿಂದ ಲಕ್ಷಾಂತರ ಮಹಿಳೆಯರಿಗೆ ಅನುಕೂಲವಾಗಿದೆ. ಯಾವುದೇ ಪರಿಸ್ಥಿತಿಯಲ್ಲಿ ಪಂಚ ಗ್ಯಾರಂಟಿಗಳನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಹೇಳಿದರು.

    ಒಬ್ಬರು, ಇಬ್ಬರು ಮಹಿಳೆಯರು ಹೇಳಿದರೆ ಜನಾದೇಶ ಆಗುವುದಿಲ್ಲ. ಲಕ್ಷಾಂತರ ಮಹಿಳೆಯರು ಇದರ ಉಪಯೋಗ ಪಡೆಯುತ್ತಿದ್ದಾರೆ. ಒಬ್ಬರು ಇಬ್ಬರು ಹೇಳುತ್ತಿದ್ದರೆ ಅವರು ಪ್ರಯಾಣ ಮಾಡುವುದನ್ನು ಬಿಡಲಿ. ದೇವರು ಅವರನ್ನು ಅನುಕೂಲವಾಗಿಟ್ಟಿರಬಹುದು ಒಳ್ಳೆಯದಾಗಲಿ. ನಿಗಮಕ್ಕೆ ಇದರಿಂದ ಯಾವುದೇ ನಷ್ಟವಿಲ್ಲ. ಶಕ್ತಿ ಯೋಜನೆ ಬರುವ ಮುಂಚೆ ನಿಗಮಗಳು ತೊಂದರೆಯಲ್ಲಿದ್ದವು. ಶಕ್ತಿ ಯೋಜನೆ ಬಂದ ನಂತರ ನಿಗಮಗಳು ಚೆನ್ನಾಗಿವೆ ಎಂದು ತಿಳಿಸಿದರು.

    ಉಪಚುನಾವಣೆ ವಿಚಾರ:
    ಉಪಚನಾವಣೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಪಕ್ಷ, ಧರ್ಮ, ಭಾಷಾತೀತವಾಗಿ ಸರ್ವೇ ಜನ ಸುಖಿನೋಭವಂತು ಎಂದು ಕಾಂಗ್ರೆಸ್ ಕೆಲಸ ಮಾಡುತ್ತಿದೆ. ನಮ್ಮನ್ನು ಜನ ಒಪ್ಪಿದ್ದಾರೆ, ಗೆಲ್ಲಿಸುತ್ತಾರೆ.

    ವಕ್ಫ್ ವಿವಾದ ವಿಚಾರ:
    ಸಿಎಂ ಸಿದ್ದರಾಮಯ್ಯ ನಿನ್ನೆಯೇ ಸ್ಪಷ್ಟಪಡಿಸಿದ್ದಾರೆ. ಒಂದು ಇಂಚು ಜಾಗ ಬಿಟ್ಟು ಕೊಡುವುದಿಲ್ಲ ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ. ಕಾಗೆ ಕುಳಿತುಕೊಳ್ಳುವುದಕ್ಕೂ ಟೊಂಗೆ ಮುರಿಯುವುದಕ್ಕೂ ಸರಿಯಾಗಿದೆ. ನಾವು ಪಕ್ಷಾತೀತ ಜಾತ್ಯತೀತವಾಗಿ ಸರ್ಕಾರ ನಡೆಸುತ್ತೇವೆ. ಇಂಥ ವಿಚಾರಗಳಿಗೆ ಕಿವಿ ಕೊಡಬೇಡಿ. ನೋಟಿಸ್ ಹಿಂದೆ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಕೂಡ ವೈಯಕ್ತಿಕವಾಗಿ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಯಾವುದೇ ಸಂಘಟನೆ, ಜಾತಿಯನ್ನು ಓಲೈಸುವ ಕೆಲಸ ಆಗಬಾರದು.

    ದರ್ಶನ್‌ಗೆ ಮಧ್ಯಂತರ ಬೇಲ್ ವಿಚಾರ:
    ದೇಶದ ಕಾನೂನು ನೆಲದ ಕಾನೂನಿಗೆ ಎಲ್ಲರೂ ಗೌರವ ಕೊಡಬೇಕು. ನಾನೂ ಗೌರವ ಕೊಡಬೇಕು ಅವರೂ ಗೌರವ ಕೊಡಬೇಕು. ಮಧ್ಯಂತರ ಜಾಮೀನು ಸಿಕ್ಕಿದೆ. ದೀಪಾವಳಿ ಹಬ್ಬ ಇದೆ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಶುಭ ಕೋರಿದರು.ಇದನ್ನೂ ಓದಿ: ಚನ್ನಪಟ್ಟಣ ಚುನಾವಣೆಯಲ್ಲಿ ಕುಟುಂಬ ರಾಜಕಾರಣ ಅಂತ್ಯವಾಗುತ್ತೆ: ಪೊನ್ನಣ್ಣ

  • ಸರ್ಕಾರ ಕೆಡವಲು 1,000 ಕೋಟಿ ರೆಡಿ ಮಾಡಿಕೊಂಡಿದ್ದಾರೆಂದು ಬಿಜೆಪಿ ನಾಯಕರೇ ಹೇಳಿದ್ದಾರೆ: ಶರಣ ಪ್ರಕಾಶ್ ಪಾಟೀಲ್

    ಸರ್ಕಾರ ಕೆಡವಲು 1,000 ಕೋಟಿ ರೆಡಿ ಮಾಡಿಕೊಂಡಿದ್ದಾರೆಂದು ಬಿಜೆಪಿ ನಾಯಕರೇ ಹೇಳಿದ್ದಾರೆ: ಶರಣ ಪ್ರಕಾಶ್ ಪಾಟೀಲ್

    ವಿಜಯಪುರ: ಸರ್ಕಾರ ಕೆಡವಲು 1,000 ಕೋಟಿ ರೆಡಿ ಮಾಡಿಕೊಂಡಿದ್ದಾರೆಂದು ಬಿಜೆಪಿ (BJP) ನಾಯಕರೇ ಹೇಳಿದ್ದಾರೆ ಎಂದು ಸಚಿವ ಶರಣ ಪ್ರಕಾಶ ಪಾಟೀಲ್  (Sharan Prakash Patil), ವಿಜಯಪುರ ಶಾಸಕ ಬಸನಗೌಡ ಪಾಟೀಲ್ (Basanagouda Patil Yatnal) ಅವರ ಹೇಳಿಕೆಯನ್ನ ಪುನರುಚ್ಛರಿಸಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಯತ್ನಾಳ್ ಹೇಳಿಕೆ ವಿಚಾರವಾಗಿ ಮಾತನಾಡಿ, ಸರ್ಕಾರ ಕೆಡವಲು 1000 ಕೋಟಿ ರೂ. ತಯಾರಿ ಮಾಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬಿಜೆಪಿಯಲ್ಲಿ ಅವರೊಬ್ಬ ಪ್ರಮುಖ ನಾಯಕರಿದ್ದಾರೆ. ಅವರಿಗೆ ಏನು ಮಾಹಿತಿ ಇದೆ, ನನಗೆ ಗೊತ್ತಿಲ್ಲ. ಆದ್ರೆ ಸರ್ಕಾರ ಬೀಳಿಸಲು ಬಹಳ ದೊಡ್ಡ ಹಣ ಉಪಯೋಗ ಆಗಿದೆ ಎಂದು ಎಲ್ಲರಿಗೂ ಗೊತ್ತಿದೆ. ಈ ಹಿಂದೆಯೂ 17 ಶಾಸಕರು ರಾಜೀನಾಮೆ ನೀಡಿದ್ದರು. ಇದೆಲ್ಲ ಹಣಬಲದ ಮೇಲೆ ಆಗಿದೆ. ಈಗಲೂ ಅದೇ ರೀತಿ ಪಿತೂರಿ ನಡೆಯುತ್ತಿರಬಹುದು ಎಂದು ಆಗ್ರಹಿಸಿದರು.ಇದನ್ನೂ ಓದಿ: ಭೋಪಾಲ್‌ನಲ್ಲಿ 1,814 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್‌ – ಇಬ್ಬರು ಅರೆಸ್ಟ್‌

    ಬಿಜೆಪಿಯವರು 4 ವರ್ಷ 2019 ರಿಂದ 2023ರ ವರೆಗೆ ರಾಜ್ಯವನ್ನ ವ್ಯವಸ್ಥಿತವಾಗಿ ಲೂಟಿ ಹೊಡೆದಿದ್ದಾರೆ. ಅವರು ಮಾಡಿದ ಕೆಲಸ ಕಾರ್ಯಗಳು, ನಡೆದುಕೊಂಡಂತಹ ರೀತಿ ಇದೆಲ್ಲವನ್ನು ನೋಡಿಯೇ ರಾಜ್ಯದ ಜನರು ನಮಗೆ ಬೆಂಬಲ ನೀಡಿದ್ದಾರೆ. 135 ಶಾಸಕರನ್ನ ಆಯ್ಕೆ ಮಾಡುವ ಮುಖಾಂತರ ಸ್ಥಿರ ಸರ್ಕಾರವನ್ನ ರಾಜ್ಯದ ಜನರು ನೀಡಿದ್ದಾರೆ. ಇದನ್ನ ಅಸ್ಥಿರಗೊಳಿಸುವ ಕೆಲಸ ಬಿಜೆಪಿ ಮಾಡುತ್ತಿದೆ. ಇದು ಸಂವಿಧಾನ ವಿರೋಧಿ ನೀತಿಯಾಗಿದೆ. ಇದರಿಂದ ರಾಜ್ಯದ ಜನರಿಗೆ ಹಾನಿಯಾಗುತ್ತಿದೆ. ರಾಜ್ಯದ ಜನರು ಇದನ್ನು ನೋಡುತ್ತಿದ್ದಾರೆ ಎಂದು ಕಿಡಿಕಾರಿದರು.

    ವಿಪಕ್ಷದ ನಾಯಕ ಸ್ಥಾನಕ್ಕೆ ಆರ್.ಅಶೋಕ್ (R.Ashok) ರಾಜೀನಾಮೆ ವಿಚಾರವಾಗಿ ಮಾತನಾಡಿ, ನೋಡಿ ಅಧಿಕಾರದಲ್ಲಿದ್ದಾಗ ನೀವು ರಾಜೀನಾಮೆ ಕೊಟ್ಟು, ನಮಗೂ ಕೊಡಿ ಎಂದರೆ ಅದಕ್ಕೆ ಅರ್ಥ? ಆಗ ಅವರು ಕೊಟ್ಟಿಲ್ಲ. ಒಂದು ವೇಳೆ ಕೊಟ್ಟಿದ್ದರೆ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳಬಹುದಿತ್ತು. ಸಿದ್ದರಾಮಯ್ಯ (CM Siddaramaiah) ಓರ್ವ ನಿಷ್ಕಳಂಕ, ಜನಪರ ನಾಯಕ. ಒಳ್ಳೆಯ ಆಡಳಿತ ನೀಡಿರುವಂತಹ ಸಿಎಂ ಇವರು ಎಂದರು.

    ಗ್ಯಾರಂಟಿಗಳ ಬಗ್ಗೆ ಬಿಜೆಪಿ ಸುಳ್ಳು ಪ್ರಚಾರ:
    ಇವತ್ತು ಬಿಜೆಪಿ ಅವರಿಗೆ ತಕರಾರು ಏನು ಎಂದರೆ, ನಮ್ಮ ಸರಕಾರ ರಾಜ್ಯದ ಜನರಿಗೆ 5 ಗ್ಯಾರಂಟಿಗಳನ್ನ (Gurantee) ನೀಡಿದೆ. ಇದರಿಂದ ರಾಜ್ಯದ ಜನರ ಮನಸ್ಥಿತಿ ಬದಲಾಗುತ್ತಿದೆ ಎಂಬ ಭಯ ಬಿಜೆಪಿಯವರಿಗೆ ಕಾಡುತ್ತಿದೆ. ಅದಕ್ಕಾಗಿ ಗ್ಯಾರಂಟಿಗಳನ್ನು ನೀಡಲು ಆಗುವುದಿಲ್ಲ ಎಂದು ಬಿಜೆಪಿಯವರು ಸುಳ್ಳು ಪ್ರಚಾರ ಮಾಡಿದ್ದಾರೆ. ಆದರೆ ನಾವು ಯಶಸ್ವಿಯಾಗಿ ಗ್ಯಾರಂಟಿಗಳನ್ನ ಈಡೇರಿಸಿದ್ದೇವೆ. ಈ ಗ್ಯಾರಂಟಿಗಳು ಈಡೇರಲ್ಲ ಎಂದು ಮೋದಿಯವರು (PM Modi) ಕೂಡ ಹೇಳಿದ್ದರು. ಅವರಿಗೆ ಭಯ ಶುರುವಾಗಿದೆ. ಅದಕ್ಕೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

    ಇದೇ ವೇಳೆ ಎಐಸಿಸಿ ಅಧ್ಯಕ್ಷ ಹಾಗೂ ಸಚಿವ ಸತೀಶ ಜಾರಕಿಹೋಳಿ ಭೇಟಿ ವಿಚಾರವಾಗಿ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸಿಎಂ ಆಗುವ ಬಗ್ಗೆ ಚರ್ಚೆ ವದಂತಿಯಷ್ಟೇ. ಈ ಭೇಟಿ ಕುರಿತು ಈಗಾಗಲೇ ಸಿಎಂ ಸ್ಪಷ್ಟನೆ ನೀಡಿದ್ದಾರೆ. ದೆಹಲಿಗೆ ಹೋದ ಸಚಿವರು ಎಐಸಿಸಿ (AICC) ಆಧ್ಯಕ್ಷರನ್ನ ಭೇಟಿಯಾಗುತ್ತಾರೆ, ಇದು ಸಹಜ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಹೇಳಿದರು.

    ದಲಿತ ಸಿಎಂ ಆಗುವ ಕುರಿತು ಚರ್ಚೆ ವಿಚಾರವಾಗಿ ಮಾತನಾಡಿ, ಆ ರೀತಿ ಯಾವುದೇ ಮಾಹಿತಿ ಇಲ್ಲ. ಆ ರೀತಿಯ ಚಲನ ವಲನ ನಮ್ಮ ಗಮನಕ್ಕೆ ಬಂದಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ ಅಷ್ಟೇ. ದಲಿತ ಸಿಎಂ ಆಗುವ ವಿಚಾರದ ಕುರಿತು ನನಗೆ ಗೊತ್ತಿಲ್ಲ ಎಂದು ತಿಳಿಸಿದರು.ಇದನ್ನೂ ಓದಿ: ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅನ್ನೋದಾದ್ರೆ ಹೋಗಲಿ: ಹರಿಪ್ರಸಾದ್‌ ಸ್ಫೋಟಕ ಹೇಳಿಕೆ

  • ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಗೋಲ್ಮಾಲ್ ಆರೋಪ – ಲೋಕಾಯುಕ್ತಕ್ಕೆ ದೂರು

    ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಗೋಲ್ಮಾಲ್ ಆರೋಪ – ಲೋಕಾಯುಕ್ತಕ್ಕೆ ದೂರು

    ಧಾರವಾಡ: ಒಂದೆಡೆ ಮುಡಾ ಹಗರಣದ (MUDA Scam) ಆರೋಪ ಹೊತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶಿದೆ. ಇದರ ಮಧ್ಯೆ ಧಾರವಾಡದಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ (Guarantee convention) ಯೋಜನೆಗಳ ಸಮಾವೇಶದಲ್ಲಿ ದೊಡ್ಡ ಗೋಲ್ಮಾಲ್ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ (Lokayukta Police) ದೂರು ಸಲ್ಲಿಕೆಯಾಗಿದೆ.

    ರಾಜ್ಯ ಕಾಂಗ್ರೆಸ್ ಸರ್ಕಾರ (Government of Karnataka) ಅಧಿಕಾರಕ್ಕೆ ಬರುವ ಮುಂಚೆ ಐದು ಗ್ಯಾರಂಟಿಗಳನ್ನು ರಾಜ್ಯದ ಜನತೆಗೆ ನೀಡಿ ಅಧಿಕಾರದ ಚುಕ್ಕಾಣಿ ಹಿಡಿಯಿತು. ಅಧಿಕಾರಕ್ಕೆ ಬಂದ ನಂತರ ಪಂಚ ಗ್ಯಾರಂಟಿಗಳನ್ನೇನೋ (Guarantee Scheme) ಜಾರಿಗೆ ಮಾಡಿತು. ಆ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ದೊಡ್ಡ ದೊಡ್ಡ ಸಮಾವೇಶಗಳನ್ನು ರಾಜ್ಯ ಸರ್ಕಾರ ಮಾಡಿತು. ಆ ಸಮಾವೇಶಗಳು ಧಾರವಾಡ ಜಿಲ್ಲೆಯಲ್ಲೂ ನಡೆದಿದ್ದವು. ಆದರೆ, ಆ ಸಮಾವೇಶಗಳಲ್ಲಿ ಗೋಲ್ಮಾಲ್ ನಡೆದಿದ್ದು, ಅದರ ಸಂಪೂರ್ಣ ತನಿಖೆ ನಡೆಸುವಂತೆ ಧಾರವಾಡ ಜಿಲ್ಲೆಯ ನವಲಗುಂದದ ಆರ್‌ಟಿಐ ಕಾರ್ಯಕರ್ತ (RTI Worker) ಮಾಬುಸಾಬ್ ಯರಗುಪ್ಪಿ ಇದೀಗ ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ.

    ಕಳೆದ ಫೆಬ್ರುವರಿ ಮತ್ತು ಮಾರ್ಚ್ ತಿಂಗಳಲ್ಲಿ ಧಾರವಾಡ ಜಿಲ್ಲೆಯಲ್ಲಿ ಒಟ್ಟು 5 ಗ್ಯಾರಂಟಿ ಸಮಾವೇಶಗಳು ನಡೆದಿದ್ದವು. ಒಂದು ಸಮಾವೇಶದಲ್ಲಿ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಭಾಗಿಯಾಗಿದ್ದರು. ಸಿದ್ದರಾಮಯ್ಯ ಅವರೇ ಭಾಗಿಯಾಗಿದ್ದ ಸಮಾವೇಶದ ಲೆಕ್ಕಪತ್ರಗಳೇ ಏರುಪೇರಾಗಿವೆ ಎಂದು ನವಲಗುಂದದ ಆರ್‌ಟಿಐ ಕಾರ್ಯಕರ್ತ ಮಾಬುಸಾಬ್ ಅವರು ಪಡೆದ ಮಾಹಿತಿಯಲ್ಲಿ ಬಹಿರಂಗಗೊಂಡಿದೆ. ಇದನ್ನೂ ಓದಿ: Bilkis Bano case | ಕಟು ಟೀಕೆಯನ್ನು ಆದೇಶದಿಂದ ತೆಗೆಯುವಂತೆ ಗುಜರಾತ್ ಮಾಡಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

    ನವಲಗುಂದದ ಸಮಾವೇಶದಲ್ಲಿ ಸಿಎಂ ಭಾಗಿಯಾಗಿದ್ದರು. ಈ ಸಮಾವೇಶದ ದಿನಾಂಕ ಮತ್ತು ಖರ್ಚು ವೆಚ್ಚದ ದಾಖಲೆಗಳೇ ಏರುಪೇರಾಗಿವೆ. ಸಮಾವೇಶ ಮುಗಿದ ಬಳಿಕ ಊಟದ ಕೊಟೇಶನ್ ಪಡೆಯಲಾಗಿದೆ. ಕೊಟೇಶನ್ ಸಲ್ಲಿಕೆಗೂ ಮುನ್ನವೇ ಊಟ, ಉಪಾಹಾರ ಪೂರೈಕೆ ಮಾಡಲಾಗಿದೆ. ಕುಂದಗೋಳ ಸಮಾವೇಶದಲ್ಲಿನ ಊಟ, ಉಪಹಾರದ ಕೊಟೇಶನ್‌ಗೆ ಸಹಿಯೇ ಇಲ್ಲ. ಆದರೂ ಏಜೆನ್ಸಿಯೊಂದಕ್ಕೆ ಊಟ, ಉಪಹಾರದ ಜವಾಬ್ದಾರಿಯನ್ನು ಜಿಲ್ಲಾಡಳಿತ ವಹಿಸಿಕೊಟ್ಟಿತ್ತು. ಈ ಸಮಾವೇಶಗಳ ಬಹುತೇಕ ಲೆಕ್ಕಪತ್ರಗಳು ಸರಿಯಾಗಿಲ್ಲ ಎಂದು ಆರೋಪಿಸಿರುವ ಆರ್‌ಟಿಐ ಕಾರ್ಯಕರ್ತ, ಗ್ಯಾರಂಟಿ ಸಮಾವೇಶದ ಕಾರ್ಯಕ್ರಮ ನಿರ್ವಹಣಾ ಸಮಿತಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ದುರ್ಗಾ ಪೂಜೆಯಂದು ರಜೆ ನೀಡಬಾರದು, ಮೂರ್ತಿಯನ್ನು ನೀರಿನಲ್ಲಿ ವಿಸರ್ಜಿಸಬಾರದು: ಬಾಂಗ್ಲಾ ಹಿಂದೂಗಳಿಗೆ ಎಚ್ಚರಿಕೆ

    ಈ ಸಮಿತಿ ಡಿಸಿ ದಿವ್ಯ ಪ್ರಭು, ಎಡಿಸಿ ಗೀತಾ, ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ, ಪಿಡಬ್ಲುಡಿ ಎಇ ವಿಜಯಕುಮಾರ, ಪಾಲಿಕೆ ಲೆಕ್ಕಾಧಿಕಾರಿ ವಿಶ್ವನಾಥ ಅವರನ್ನೊಳಗೊಂಡಿದೆ. ಇವರ ಹೆಸರನ್ನೊಳಗೊಂಡು ಇದೀಗ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ನವಲಗುಂದದ ಸಮಾವೇಶದಲ್ಲಿ 87 ಲಕ್ಷ ರೂ., ಧಾರವಾಡ ಸಮಾವೇಶದಲ್ಲಿ 1.37 ಕೋಟಿ ರೂ., ಹುಬ್ಬಳ್ಳಿ ಸಮಾವೇಶದಲ್ಲಿ 1.24 ಕೋಟಿ ರೂ., ಕಲಘಟಗಿ ಸಮಾವೇಶದಲ್ಲಿ 57 ಲಕ್ಷ ರೂ. ಹಾಗೂ ಕುಂದಗೋಳ ಸಮಾವೇಶಕ್ಕೆ 54 ಲಕ್ಷ ರೂ. ಖರ್ಚು ಮಾಡಲಾಗಿದ್ದು, ಇದರಲ್ಲಿ ವ್ಯತ್ಯಾಸವಿದೆ ಎಂದು ದೂರು ಸಲ್ಲಿಕೆಯಾಗಿದೆ. ಇದನ್ನೂ ಓದಿ: ಕೇಂದ್ರದಿಂದ ದುರುಪಯೋಗ ತಡೆಯಲು ಸಿಬಿಐಗೆ ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ: ಚಲುವರಾಯಸ್ವಾಮಿ