Tag: ಕಾಂಗ್ರೆಸ್-ಜೆಡಿಎಸ್

  • ಆಪರೇಷನ್ ಕಮಲಕ್ಕೆ ಪ್ರತ್ಯುತ್ತರ – 6 ಮಂದಿಯ ಸುತ್ತ `ಗುಪ್ತ’ ಬೇಹುಗಾರಿಕೆ

    ಆಪರೇಷನ್ ಕಮಲಕ್ಕೆ ಪ್ರತ್ಯುತ್ತರ – 6 ಮಂದಿಯ ಸುತ್ತ `ಗುಪ್ತ’ ಬೇಹುಗಾರಿಕೆ

    ಬೆಂಗಳೂರು: ಆಪರೇಷನ್ ಕಮಲಕ್ಕೆ ಪ್ರತ್ಯುತ್ತರ ನೀಡಲು ಸಮ್ಮಿಶ್ರ ಸರ್ಕಾರ ಸಜ್ಜಾಗಿದ್ದು, ಡಿಸೆಂಬರ್ ಟಾರ್ಗೆಟ್ ಫೇಲ್ಯೂರ್ ಮಾಡಲು ಮಹಾಪ್ಲಾನ್ ರೂಪಿಸಲಾಗಿದ್ದು, 6 ಮಂದಿಯ ಸುತ್ತ ಗುಪ್ತಚರ ಇಲಾಖೆ ಬೇಹುಗಾರಿಕೆ ನಡೆಸುತ್ತಿದೆ ಅನ್ನೋ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ‘ಆ’ 6 ಮಂದಿ ಯಾರು?
    ಬಿಎಸ್‍ವೈ ಪಿಎ ಸಂತೋಷ್ ಅವರು ಕೆಲ ಶಾಸಕರ ಜೊತೆ ಸಂಪರ್ಕ ಇರುವ ಗುಮಾನಿ ಎದ್ದಿದೆ. ಸಚಿವ ರಮೇಶ್ ಜಾರಕಿಹೊಳಿ ಜತೆ ನಿಕಟ ಸಂಪರ್ಕ ಹಾಗೂ ಬಹುತೇಕ ಶಾಸಕರ ಜತೆ ಡೀಲ್ ಮಾಡ್ತಾರೆ ಅನ್ನೋ ಮಾಹಿತಿ ಇದೆ. ಹಾಗಾಗಿಯೇ ಬೇಹುಗಾರಿಕೆ ಟೀಂ ಸಂತೋಷ್ ಅವರನ್ನು ಬೆನ್ನತ್ತಿದೆ ಎನ್ನಲಾಗಿದೆ.

    ಮಾಜಿ ಶಾಸಕ ಸಿ.ಪಿ. ಯೋಗೀಶ್ವರ್ ಅವರು ಕಳೆದ ಬಾರಿ ಆಪರೇಷನ್ ಕಮಲದಲ್ಲಿ ಇದ್ದರು ಅನ್ನೋ ಮಾಹಿತಿ ಲಭ್ಯವಾಗಿದ್ದು, ಜಿಮ್, ಕ್ಲಬ್‍ಗಳಲ್ಲಿ ಕೈ-ತೆನೆ ಶಾಸಕರನ್ನ ಸಂಪರ್ಕಿಸಿದ್ರು ಅನ್ನೋ ಗುಮಾನಿ ಇದೆ. ಈಗಲೂ ಆಡಳಿತ ಪಕ್ಷದ ಶಾಸಕರನ್ನ ಟಚ್ ಮಾಡ್ತಿದ್ದಾರೆ. ಹಾಗಾಗಿಯೇ ಸಿ.ಪಿ.ಯೋಗೇಶ್ವರ್ ಮೇಲೆ `ಬೇಹು’ ಪಡೆ ಹದ್ದಿನಗಣ್ಣಿಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಮಲ್ಲೇಶ್ವರಂ ಶಾಸಕ ಅಶ್ವತ್ಥನಾರಾಯಣ ಅವರು ಕಳೆದ ಬಾರಿ ಮಹತ್ವದ ಪಾತ್ರ ವಹಿಸಿದ್ರು ಅನ್ನೋ ಮಾಹಿತಿ ಇದೆ. ಇವರು ಹಲವು ಶಾಸಕರ ಜತೆ ಮಾತುಕತೆ ನಡೆಸಿ ಇನ್ನು ಸಂಪರ್ಕದಲ್ಲಿದ್ದಾರೆ. ಈಗಲೂ ಹಲವು ಶಾಸಕರ ಜತೆ ವರ್ಕ್ ಔಟ್‍ನಲ್ಲಿ ಬ್ಯುಸಿ ಆಗಿರುವ ಮಾಹಿತಿ ಇದೆ. ಹಾಗಾಗಿಯೇ ಬೇಹುಗಾರಿಕೆ ಟೀಂ ಶಾಸಕ ಅಶ್ವತ್ಥನಾರಾಯಣ್  ಅವರ ಬೆನ್ನುಬಿದ್ದಿದೆ.

    ಬಿಎಸ್‍ವೈ ಪುತ್ರ ವಿಜಯೇಂದ್ರ ಅವರು ಬಹಳಷ್ಟು ಶಾಸಕರನ್ನ ಮನವೊಲಿಸ್ತಿದ್ದಾರೆ. ಅಲ್ಲದೇ ಆಪರೇಷನ್ ಟೀಂ ಆಪರೇಟ್ ಮಾಡುವುದು ಇವರೇ ಅನ್ನೋ ಮಾಹಿತಿ ಸಿಕ್ಕಿದೆ. ಕಳೆದ ಬಾರಿಯೂ ಶಾಸಕರ ಜೊತೆ ಡೀಲ್ ಮಾಡಿದ್ದಾರೆ ಅಂತಾ ಆರೋಪಿಸಲಾಗಿತ್ತು. ಹೀಗಾಗಿ ಬೇಹುಗಾರಿಕೆ ಟೀಂ ಬಿ.ವೈ.ವಿಜಯೇಂದ್ರ ಅವರ ಹಿಂದೆ ಬಿದ್ದಿದೆ ಎನ್ನಲಾಗಿದೆ.

    ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಎಚ್‍ಡಿಕೆಯೇ ನನ್ನ ಬಂಧನ ಮಾಡಿಸಿದ್ದು ಅಂತಾ ಗರಂ ಆಗಿದ್ದಾರೆ. ಕಳೆದ ವಾರದಿಂದ ಜನಾರ್ದನ ರೆಡ್ಡಿ ಹಲವು ಶಾಸಕರ ಸಂಪರ್ಕಿಸಿದ್ದಾರೆ ಅನ್ನೋ ಮಾಹಿತಿಯಿದ್ದು, ದೊಡ್ಡ ದೊಡ್ಡ ಶಾಸಕರಿಗೆ ಕೈ ಹಾಕ್ತಿದ್ದಾರೆ ಅನ್ನೋ ಗುಪ್ತ ವರದಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಟೀಂ ಇವರನ್ನು ಕೂಡ ಫಾಲೋ ಮಾಡುತ್ತಿದೆ ಎಂಬುದಾಗಿ ತಿಳಿದುಬಂದಿದೆ.

    ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಗುಪ್ತಚರ ಇಲಾಖೆ ಕಳೆದ ಒಂದು ತಿಂಗಳಿನಿಂದ ಕಣ್ಗಾವಲು ಇಟ್ಟಿದೆ. ಬಿಎಸ್‍ವೈ ಮನೆ ಸುತ್ತ ಹೆಚ್ಚುವರಿ ಗುಪ್ತಚರ ಇಲಾಖೆ ಪೊಲೀಸರು ಕಾವಲು ಕಾಯುತ್ತಿದ್ದಾರೆ. ಇಡೀ ಆಪರೇಷನ್ ಕೇಂದ್ರ ಬಿಂದು ಬಿಎಸ್‍ವೈ ಅವರೇ ಅನ್ನೋ ಮಾಹಿತಿ ಇದ್ದು, ಬೇಹುಗಾರಿಕೆ ಬಿಸಿ ತಾಳಲಾರದೇ ಬಿಎಸ್‍ವೈ ಅವರೇ ಕೇರಳಕ್ಕೆ ಹೋಗಿದ್ದಾರಂತೆ. ಈ ಎಲ್ಲಾ ಬೆಳವಣಿಗೆಗಳಿಂದ ಬಿಎಸ್‍ವೈ ನಡೆಗಳ ಬಗ್ಗೆ ಬೇಹುಗಾರಿಕೆ ಟೀಂ ಆಲರ್ಟ್ ಆಗಿದೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಜ್ಯದಿಂದ ಧೂಳೀಪಟ ಮಾಡಿ, ದಕ್ಷಿಣ ಭಾರತದಿಂದಲೇ ಬಿಜೆಪಿಯನ್ನು ಹೊರಹಾಕ್ತೀವಿ: ದಿನೇಶ್ ಗುಂಡೂರಾವ್

    ರಾಜ್ಯದಿಂದ ಧೂಳೀಪಟ ಮಾಡಿ, ದಕ್ಷಿಣ ಭಾರತದಿಂದಲೇ ಬಿಜೆಪಿಯನ್ನು ಹೊರಹಾಕ್ತೀವಿ: ದಿನೇಶ್ ಗುಂಡೂರಾವ್

    ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ದೇಶದ ರಾಜಕಾರಣವನ್ನು ಬದಲಾಯಿಸುತ್ತೇವೆ. ರಾಜ್ಯದಿಂದ ಧೂಳೀಪಟ ಮಾಡಿ, ದಕ್ಷಿಣ ಭಾರತದಿಂದಲೇ ಬಿಜೆಪಿಯನ್ನು ಹೊರಹಾಕುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

    ಉಪಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಜಯಗಳಿಸಿದ ಹಿನ್ನೆಲೆಯಲ್ಲಿ, ಈ ಬಾರಿ ರಾಜ್ಯದಲ್ಲಿ ಸ್ಪಷ್ಟ ಬಹುಮತದಿಂದ ಮೈತ್ರಿ ಸರ್ಕಾರ ಉಪಚುನಾವಣೆಯ 4 ಕ್ಷೇತ್ರದಲ್ಲಿ ಗೆಲವು ಸಾಧಿಸಿದೆ. ಈಗಾದರೂ ಬಿಜೆಪಿ ತನ್ನ ಉದ್ಧಟತನವನ್ನು ಬಿಡಬೇಕು ಎಂದರು.  ಇದನ್ನು ಓದಿ: ದಿನೇಶ್ ಅವರೇ 4:1 ಅಲ್ಲ, 1:1 ಗೆಲುವು: ಇದು ಪ್ರತಾಪ್ ಸಿಂಹ ವಿಶ್ಲೇಷಣೆ

    ನಾಯಕರ ನಕಾರಾತ್ಮಕ ರಾಜಕೀಯ ಹಾಗೂ ಕೇಂದ್ರದಲ್ಲಿ ಮೋದಿ ಸರ್ಕಾರದ ವೈಫಲ್ಯದಿಂದ ಈ ಬಾರಿ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಜನ ತಿರಸ್ಕರಿಸಿದ್ದಾರೆ. ಮೋದಿ ಸರ್ಕಾರ ಯಾವುದೇ ಜನಪರ ಕೆಲಸ ಮಾಡಿಲ್ಲ, ಕೇವಲ ಭಾವನಾತ್ಮಕ ಭಾಷಣ ಬಿಟ್ಟರೇ ಜನರಿಗಾಗಿ ಕೆಲಸ ಮಾಡಿಲ್ಲ. ರಾಜ್ಯದಲ್ಲೂ ಅಷ್ಟೇ ಬಿಜೆಪಿ ಜನಪರ ಕೆಲಸ ಮಾಡಿಲ್ಲ. ಮೈತ್ರಿ ಸರ್ಕಾರ ಬಂದಾಗ ವಿರೋಧ ಪಕ್ಷವಾಗಿ ಹೇಗೆ ಅಧಿಕಾರ ಪಡೆಯಬೇಕು ಅಂತ ಬಿಜೆಪಿ ತಲೆ ಕೆಡಿಸಿಕೊಂಡಿತ್ತೆ ಹೊರತು ಜನರಿಗಾಗಿ ಏನೂ ಮಾಡಿಲ್ಲ. ಯಾವುದೇ ಹೋರಾಟ ಮಾಡಿಲ್ಲ, ಜನಪರ ವಿಚಾರವನ್ನು ಮಾತಾಡಿಲ್ಲ ಎಂದು ಕಿಡಿಕಾರಿದರು.

    ಮೈತ್ರಿ ಸರ್ಕಾರ ಎಷ್ಟು ಗಟ್ಟಿಯಾಗಿದೆ ಎಂದು ಈ ಉಪಚುನಾವಣೆಯಿಂದ ತಿಳಿದಿದೆ. ಬಳ್ಳಾರಿಯಲ್ಲಿ ಯಾವ ಅಭ್ಯರ್ಥಿಯನ್ನು ನಿಲ್ಲಿಸಬೇಕು ಅಂತಾ ತುಂಬಾ ಯೋಚನೆಮಾಡಿ ನಂತರ ಉಗ್ರಪ್ಪ ಅವರನ್ನು ಆಯ್ಕೆಮಾಡಲಾಗಿತ್ತು. ಈಗ ಬಿಜೆಪಿಯನ್ನು ಬಳ್ಳಾರಿಯಲ್ಲಿ ಛಿದ್ರ ಛಿದ್ರ ಮಾಡಿ ಜಯ ಗಳಿಸಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.

    ಬಳ್ಲಾರಿಯಲ್ಲಿ ಧಣಿಗಣಿಗಳ ದಬ್ಬಾಳಿಕೆಗೆ, ಅಹಂಕಾರಕ್ಕೆ ಜನರೇ ಉತ್ತರ ಕೊಟ್ಟಿದ್ದಾರೆ. ಒಳ್ಳೆಯ ರೀತಿಯಲ್ಲಿ ನಾವು ಸರ್ಕಾರವನ್ನು ನಡೆಸಿಕೊಂಡು ಬರುತ್ತಿದ್ದೇವೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ದೇಶದ ರಾಜಕಾರಣವನ್ನು ಬದಲಾಯಿಸುತ್ತೇವೆ. ಮೋದಿಯವರ ಯಾವುದೇ ಭಾಷಣ ನಡೆಯುವುದಿಲ್ಲ. ನಮಗೆ ಸುಳ್ಳು ಹೇಳೋ ಪ್ರಧಾನಿ ಬೇಡ, ಕೆಲಸ ಮಾಡೋ ಪ್ರಧಾನಿ ಬೇಕು ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

     

     

     

     

     

     

     

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv