Tag: ಕಾಂಗ್ರೆಸ್ ನಾಯಕರು

  • ಕಾಂಗ್ರೆಸ್ ನಾಯಕರಿಗೆ ಖಡಕ್ ವಾರ್ನಿಂಗ್ ಕೊಟ್ಟ ರಾಹುಲ್ ಗಾಂಧಿ!

    ಕಾಂಗ್ರೆಸ್ ನಾಯಕರಿಗೆ ಖಡಕ್ ವಾರ್ನಿಂಗ್ ಕೊಟ್ಟ ರಾಹುಲ್ ಗಾಂಧಿ!

    ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕವೂ ರಾಜ್ಯದ ದೋಸ್ತಿ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ದೃಢ ನಿರ್ಧಾರ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರದೇಶ ಕಾಂಗ್ರೆಸ್ ನಾಯಕರನ್ನು ದೆಹಲಿಗೆ ಕರೆಸಿಕೊಂಡಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೆಡಿಎಸ್ ಅವರ ಜೊತೆ ಸೌಮ್ಯ ಸಂಬಂಧವನ್ನು ಕಾಯ್ದುಕೊಳ್ಳಿ ಎಂದು ಮೈತ್ರಿಭಂಗಕ್ಕೆ ಕಾರಣವಾಗುವ ವಿವಾದಾತ್ಮಕ ಹೇಳಿಕೆಯನ್ನು ಯಾರೂ ನೀಡಬೇಡಿ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.

    ಸಭೆಯಲ್ಲಿ ಕೈ ಪಕ್ಷದ ಯಾವುದೇ ನಾಯಕರು ಜೆಡಿಎಸ್ ವಿರುದ್ಧ ಮಾತನಾಡಬಾರದು. ಸಮ್ಮಿಶ್ರ ಸರ್ಕಾರದ ವಿರುದ್ಧ ಅಸಂಬದ್ಧ ಹೇಳಿಕೆಗಳನ್ನು ನೀಡಬಾರದು. ಒಂದು ವೇಳೆ ಮೈತ್ರಿ ನಿಯಮ ಪಾಲನೆ ಮಾಡದಿದ್ದರೆ ಹಾಗೂ ಕಾಂಗ್ರೆಸ್ ನಿಯಮವನ್ನು ಉಲ್ಲಂಘಿಸಿದರೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಯನ್ನು ರಾಹುಲ್ ಗಾಂಧಿ ನೀಡಿದ್ದಾರೆ ಎನ್ನಲಾಗಿದೆ.

    ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಜಿ. ಪರಮೇಶ್ವರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಪಕ್ಷದ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಚಿವ ಡಿ.ಕೆ.ಶಿವಕುಮಾರ್ ಅವರೊಂದಿಗೆ ರಾಹುಲ್ ಭಾನುವಾರದಂದು ಮಹತ್ವದ ಸಭೆ ನಡೆಸಿದರು. ಯಾವುದೇ ಪರಿಸ್ಥಿತಿಯಲ್ಲೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರಿಯಬೇಕು. ಪಾರ್ಲಿಮೆಂಟ್ ಎಲೆಕ್ಷನ್ ಫಲಿತಾಂಶ ಬರುತ್ತಿದ್ದಂತೆ ಬಿರುಸಿನ ರಾಜಕೀಯ ಚಟುವಟಿಕೆ ನಡೆಯಬಹುದು. ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆಯ ಸಾಧ್ಯತೆಗಳಿವೆ ಎಂದಿದ್ದಾರೆ.

    ಈ ವೇಳೆ ಕರ್ನಾಟಕದ ಮೈತ್ರಿಯಲ್ಲಿ ಗೊಂದಲವಾದರೆ ಕಷ್ಟವಾಗುತ್ತದೆ. ಕೇಂದ್ರದಲ್ಲಿ ಬಿಜೆಪಿಯನ್ನು ದೂರವಿಡಲು ಕರ್ನಾಟಕದ ಮೈತ್ರಿಯೇ ಅಡಿಪಾಯ. ಒಂದು ವೇಳೆ ಮಹಾಮೈತ್ರಿಕೂಟದಲ್ಲಿ ಏರುಪೇರು ಆದರೆ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ. ಅಲ್ಲದೆ ಕೆಲವು ದಿನಗಳ ಹಿಂದೆ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡ ಅವರು ಕಾಂಗ್ರೆಸ್ ರಾಜ್ಯ ಉಸ್ತುವಾರಿ ನಾಯಕ ವೇಣುಗೋಪಾಲ್ ಅವರನ್ನು ಕರೆಸಿ ಕೆಲವು ನಾಯಕರು ಸಿಎಂ ಕುಮಾರಸ್ವಾಮಿ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ದೂರಿದ್ದರು ಎನ್ನಲಾಗಿತ್ತು. ಅಲ್ಲದೆ ರಾಜ್ಯದಲ್ಲಿ ಬಹುತೇಕ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಅವರೇ ನಮ್ಮ ಸಿಎಂ ಎಂಬ ಹೇಳಿಕೆ ಕೊಡುತ್ತಿರುವುದು ದೋಸ್ತಿ ಸರ್ಕಾರದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

    ರಾಹುಲ್ ಸಭೆ ಬಳಿಕ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಜ್ಯದಲ್ಲಿ ಪಕ್ಷವನ್ನು ಸಂಘಟನೆ ಬಗ್ಗೆ ಉತ್ತಮ ಚರ್ಚೆಯಾಗಿದೆ. ಜತೆಗೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಬಲಗೊಳಿಸಲು ಸಮಾಲೋಚಿಸಲಾಗಿದೆ. ಮೇ 23ರ ಫಲಿತಾಂಶ ಕಾಂಗ್ರೆಸ್ ಮೈತ್ರಿಕೂಟಕ್ಕೆ ದೊಡ್ಡ ಶಕ್ತಿ ನೀಡುವ ವಿಶ್ವಾಸವಿದೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

    ಹಾಗೆಯೇ ಇನ್ನೊಂದು ಟ್ವೀಟ್‍ನಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಸಮಸ್ಯೆ ತಂದೊಡ್ಡುವ ವಿವಾದಾತ್ಮಕ ಹೇಳಿಕೆಯನ್ನು ಯಾರೂ ನೀಡಬಾರದು. ಕಾಂಗ್ರೆಸ್ ಜತೆಗೆ ಜೆಡಿಎಸ್ ಮುಖಂಡರಿಗೂ ಇದು ಅನ್ವಯವಾಗುತ್ತದೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವುದೇ ಮುಖ್ಯವಾಗಬೇಕು ಮನವಿ ಮಾಡಿಕೊಂಡಿದ್ದರು.

  • ಬರೀ ಮಾತಿನಿಂದ ಏನು ಆಗಲ್ಲ, ಮೋದಿ ಮಾಡಿ ತೋರಿಸಬೇಕು: ದಿನೇಶ್ ಗುಂಡೂರಾವ್

    ಬರೀ ಮಾತಿನಿಂದ ಏನು ಆಗಲ್ಲ, ಮೋದಿ ಮಾಡಿ ತೋರಿಸಬೇಕು: ದಿನೇಶ್ ಗುಂಡೂರಾವ್

    ಮಂಡ್ಯ: ನಾವು ಮೋದಿಯವರ ಜೊತೆಗಿದ್ದೇವೆ. ಮಾತಿನಿಂದ ಏನು ಆಗಲ್ಲ, ಮೋದಿ ಅವರು ಮಾತನ್ನು ಕಾರ್ಯ ರೂಪಕ್ಕೆ ತಂದು ತೋರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

    ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧ ಗುರು ಸ್ವಗ್ರಾಮ ಗುಡಿಗೆರೆಗೆ ಕಾಂಗ್ರೆಸ್ ನಾಯಕರು ಭೇಟಿ ಪತ್ನಿ ಕಲಾವತಿ, ತಾಯಿ ಚಿಕ್ಕತಾಯಮ್ಮ, ತಂದೆ ಹೊನ್ನಯ್ಯ ಸೇರಿದಂತೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

    ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ 5 ಲಕ್ಷ, ಮನ್ಮುಲ್‍ನಿಂದ 3ಲಕ್ಷ ಹಾಗೂ ಡಿಸಿಸಿ ಬ್ಯಾಂಕ್ ನಿಂದ 2 ಲಕ್ಷ ಸೇರಿ ಒಟ್ಟಾರೆ 10 ಲಕ್ಷ ರೂ. ಹಣವನ್ನು ಯೋಧ ಗುರು ಕುಟುಂಬಕ್ಕೆ ನೀಡಲಾಯಿತು.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗುಂಡೂರಾವ್, ಮೋದಿಯವರು ಉಗ್ರರ ದಾಳಿಗೆ ಸರಿಯಾದ ಪ್ರತ್ಯುತ್ತರ ನೀಡಲಿದ್ದಾರೆ. ನಾವು ಮೋದಿಯವರ ಜೊತೆಗಿದ್ದೇವೆ. ಕಳೆದ 5 ವರ್ಷದಲ್ಲಿ ಈ ರೀತಿಯ ದಾಳಿಗಳು ಆಗುತ್ತಲೇ ಇದೆ. ಇತ್ತೀಚಿನ ದಿನಗಳಲ್ಲಿ ಯೋಧರ ಹತ್ಯೆಯಾಗುತ್ತಿದೆ. ಮಾತಿನಿಂದ ಏನು ಆಗಲ್ಲ, ಮೋದಿ ಮಾಡಿ ತೋರಿಸಬೇಕು. ಪಾಕಿಸ್ತಾನವನ್ನ ಉಗ್ರ ರಾಷ್ಟ್ರ ಎಂದು ಘೋಷಿಸಿ ಸರಿಯಾದ ಪಾಠ ಕಲಿಸಬೇಕು ಎಂದು ಹೇಳಿದರು.

    ಮೈತ್ರಿ ಪಕ್ಷದಲ್ಲಿ ಸೀಟು ಹಂಚಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಲೋಕಸಭೆ ಚುನಾವಣೆ ಸಂಬಂಧ ನಮ್ಮ ಸೀಟು ಅವರು ಕೇಳೋದು, ಅವರ ಸೀಟು ನಾವು ಕೇಳೋದು ಸಹಜ. ಸೀಟು ಹಂಚಿಕೆ ಬಗ್ಗೆ ಕುಳಿತು ಮಾತನಾಡಿ ತೀರ್ಮಾನಿಸಬೇಕಿದೆ. ಪರ್ಯಾಯ ವ್ಯವಸ್ಥೆ ಏನೂ ಇಲ್ಲ. ನಾನೂ ಕುಮಾರಸ್ವಾಮಿ ಅವರ ಹತ್ತಿರ ಮಾತನಾಡಿದ್ದೇನೆ. ಅವರು ಚೆನ್ನಾಗಿಯೇ ಮಾತಾಡಿದ್ದಾರೆ. ಮೈತ್ರಿಯಾಗಿಯೇ ಚುನಾವಣೆ ಎದುರಿಸುತ್ತೇವೆ ಎಂದರು. ನಂತರ ಮೈತ್ರಿ ಕುರಿತು ಬಿಜೆಪಿ ಹೇಳಿಕೆ ವಿಚಾರ ಪ್ರಸ್ತಾಪಿಸಿ ಅವರು ಹಾಗೆ ಹೇಳಲೇ ಬೇಕು. ನಾವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾತ್ರಿ ಆಸ್ಪತ್ರೆಗೆ ಕೈ ನಾಯಕರ ಭೇಟಿ- ಒಂದೂವರೆ ಗಂಟೆ ಆನಂದ್ ಸಿಂಗ್ ಜೊತೆ ಚರ್ಚೆ

    ರಾತ್ರಿ ಆಸ್ಪತ್ರೆಗೆ ಕೈ ನಾಯಕರ ಭೇಟಿ- ಒಂದೂವರೆ ಗಂಟೆ ಆನಂದ್ ಸಿಂಗ್ ಜೊತೆ ಚರ್ಚೆ

    ಬೆಂಗಳೂರು: ತಡರಾತ್ರಿ ಅಪೋಲೋ ಆಸ್ಪತ್ರೆ ಅಕ್ಷರಶಃ ಕಾಂಗ್ರೆಸ್ ನಾಯಕರಿಂದ ತುಂಬಿಹೋಗಿತ್ತು. ಈಗಲ್ಟನ್ ರೆಸಾರ್ಟ್ ನಲ್ಲಿ ನಡೆದ ಗಲಾಟೆಯಲ್ಲಿ ಹಲ್ಲೆಗೊಳಗಾದ ಶಾಸಕ ಆನಂದ್ ಸಿಂಗ್ ಆರೋಗ್ಯ ವಿಚಾರಿಸಲು ತಡರಾತ್ರಿ ಕಾಂಗ್ರೆಸ್ ನಾಯಕರ ದಂಡೇ ಆಸ್ಪತ್ರೆಗೆ ಹರಿದು ಬಂದಿತ್ತು.

    ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್, ಗೃಹಸಚಿವ ಎಂ.ಬಿ ಪಾಟೀಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಡಿ.ಕೆ ಶಿವಕುಮಾರ್, ಸಚಿವ ದೇಶಪಾಂಡೆ, ಸಚಿವ ಜಮೀರ್ ಅಹಮದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಂಸದರಾದ ಡಿ.ಕೆ ಸುರೇಶ್, ಉಗ್ರಪ್ಪ ತಡರಾತ್ರಿ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಆನಂದ್ ಸಿಂಗ್ ಆರೋಗ್ಯ ವಿಚಾರಿಸಿದ್ದಾರೆ.

    ಮಧ್ಯರಾತ್ರಿ 12 ಗಂಟೆಗೆ ಆಸ್ಪತ್ರೆಗೆ ಬಂದ ಕಾಂಗ್ರೆಸ್ ಘಟಾನುಘಟಿ ನಾಯಕರು ಸರಿಸುಮಾರು ಒಂದೂವರೆ ಗಂಟೆಗಳ ಕಾಲ ಆನಂದ್ ಸಿಂಗ್ ಜೊತೆ ಮಾತುಕತೆ ನಡೆಸಿದ್ದಾರೆ. ಹಾಗೆಯೇ ಅವರ ಆರೋಗ್ಯ ವಿಚಾರಿಸಿ ಹೊರಬಂದ ರಾಜ್ಯ ನಾಯಕರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲಿಲ್ಲ. ಕೊನೆಗೆ ಮಾತನಾಡಿದ ಸಂಸದ ಡಿಕೆ ಸುರೇಶ್, ಆನಂದ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಎದೆನೋವು ಕಡಿಮೆ ಆಗಿದೆ. ನಮ್ಮ ನಾಯಕರೆಲ್ಲ ಬಂದು ಆರೋಗ್ಯ ವಿಚಾರಿಸಿದ್ದಾರೆ. ನಾವೆಲ್ಲಾ ಅವರ ಜೊತೆ ಇದ್ದೇವೆ. ಅವರ ಕುಟುಂಬದವರ ಜೊತೆಗೂ ಮಾತನಾಡಿದ್ದೇವೆ. ಪೊಲೀಸರಿಗೆ ದೂರು ನೀಡುವುದು ಅವರ ಕುಟುಂಬಕ್ಕೆ ಬಿಟ್ಟ ವಿಚಾರವಾಗಿದ್ದು ಅದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಹೇಳಿದರು.

    ನಂತರ ಜಮೀರ್ ಅಹಮದ್ ಏನು ಹೇಳಿದ್ದಾರೆ ಅಂತ ಗೊತ್ತಿಲ್ಲ. ಆನಂದ್ ಸಿಂಗ್ ಅವರೇ ಈಗ ಮಾತನಾಡುತ್ತಿದ್ದಾರೆ. ಪೊಲೀಸರು ಕೂಡ ಬಂದಿದ್ದರು. ಆದ್ರೆ ವೈದ್ಯರು ಸದ್ಯಕ್ಕೆ ಮಾಹಿತಿ ನೀಡುವ ಪರಿಸ್ಥಿತಿ ಇಲ್ಲ ಅಂತ ಹೇಳಿದ್ದರಿಂದ ವಾಪಸ್ ಹೋಗಿದ್ದಾರೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೈಸೂರಿನಲ್ಲಿ ಕಾನೂನು ಉಲ್ಲಂಘಿಸಿದ ಕಾಂಗ್ರೆಸ್..!

    ಮೈಸೂರಿನಲ್ಲಿ ಕಾನೂನು ಉಲ್ಲಂಘಿಸಿದ ಕಾಂಗ್ರೆಸ್..!

    ಮೈಸೂರು: ಫ್ಲೆಕ್ಸ್ ಮುಕ್ತ ನಗರಿ ಎಂದು ಕರೆಯಲ್ಪಡುವ ಮೈಸೂರಿನಲ್ಲಿ ಕಾಂಗ್ರೆಸ್ ಕಚೇರಿಯ ಸುತ್ತಮುತ್ತ ನಾಯಕರ ಫ್ಲೆಕ್ಸ್ ಗಳು ರಾರಾಜಿಸುತ್ತಿವೆ. ಈ ಮೂಲಕ ರಸ್ತೆ ಬದಿಗಳಲ್ಲಿ ಫ್ಲೆಕ್ಸ್ ಹಾಕಬಾರದು ಎಂಬ ಕಾನೂನನ್ನು ಕಾಂಗ್ರೆಸ್ ಉಲ್ಲಂಘಿಸಿದೆ.

    ಇದರಿಂದ ಕಾನೂನು ಸಾಮಾನ್ಯ ಪ್ರಜೆಗಳಿಗೆ ಮಾತ್ರ ಅನ್ವಯ ಆಗುತ್ತಾ, ರಾಜಕೀಯ ನಾಯಕರಿಗೆ ಅದು ಅನ್ವಯವಾಗಲ್ವ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಏಕೆಂದರೆ ಮೈತ್ರಿ ಸರಕಾರದ ಭಾಗವಾಗಿರೋ ಕಾಂಗ್ರೆಸ್ ಫ್ಲೆಕ್ಸ್ ಮುಕ್ತ ನಗರಿಯೆಂಬ ಕಾನೂನು ತನಗೆ ಅನ್ವಯವಾಗಲ್ಲ ಅನ್ನೋ ರೀತಿ ನಡೆದುಕೊಂಡಿದೆ.

    ಜಿಲ್ಲೆಯ ರೈಲ್ವೆ ನಿಲ್ದಾಣದ ಬಳಿ ಇರುವ ಕಾಂಗ್ರೆಸ್ ಕಚೇರಿಯ ಸುತ್ತಮುತ್ತ ಕಾಂಗ್ರೆಸ್ ನಾಯಕರ ಫ್ಲೆಕ್ಸ್ ಗಳು ರಾರಾಜಿಸುತ್ತಿವೆ. ಈ ಮೂಲಕ ಫ್ಲೆಕ್ಸ್ ಮುಕ್ತ ನಗರ ಎಂಬ ಕಾನೂನಿಗೆ ಕಾಂಗ್ರೆಸ್ ಕಿಂಚಿತ್ತು ಕಿಮ್ಮತ್ತು ಕೊಟ್ಟಿಲ್ಲ ಎಂದಂತೆ ಕಾಣಿಸುತ್ತಿದೆ. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಅವರ ಸನ್ಮಾನ ಕಾರ್ಯಕ್ರಮದ ನಿಮಿತ್ತ ರಾಶಿ ರಾಶಿ ಫ್ಲೆಕ್ಸ್ ಗಳನ್ನು ಮೈಸೂರಿನ ದಾಸಪ್ಪ ವೃತ್ತದಿಂದ ರೈಲ್ವೆ ನಿಲ್ದಾಣ ವೃತ್ತದವರೆಗೂ ಅಳವಡಿಸಲಾಗಿದೆ. ಇದರಿಂದ ರಸ್ತೆ ಬದಿಗಳಲ್ಲಿ ಫ್ಲೆಕ್ಸ್ ಹಾಕಬಾರದು ಎಂಬ ಕಾನೂನನ್ನು ಕಾಂಗ್ರೆಸ್ ಮರೆತಿದೆಯಾ ಅಂತ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಇಷ್ಟೆಲ್ಲ ಆದರೂ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಮಾತ್ರ ಫ್ಲೆಕ್ಸ್ ಗಳನ್ನು ಕಂಡು ಕಾಣದಂತೆ ವರ್ತಿಸುತ್ತಿದ್ದಾರೆ. ಈ ಮೂಲಕ ಆಳುವವರಿಗೊಂದು ನೀತಿ, ಜನ ಸಾಮಾನ್ಯರಿಗೊಂದು ನೀತಿಯನ್ನು ಪಾಲಿಕೆ ಅಧಿಕಾರಿಗಳು ಅನುಸರಿಸುತ್ತಿದ್ದಾರೆ ಅಂತ ಸ್ಥಳೀಯರು ಕಿಡಿಕಾರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎಚ್‍ಡಿಕೆಯನ್ನ ಅಧಿಕಾರದಿಂದ ಕೆಳಗಿಳಿಸಲು ‘ಕೈ’ ನಾಯಕರಿಂದ್ಲೇ ಹೊಂಚು- ಬಿ.ವೈ ವಿಜಯೇಂದ್ರ

    ಎಚ್‍ಡಿಕೆಯನ್ನ ಅಧಿಕಾರದಿಂದ ಕೆಳಗಿಳಿಸಲು ‘ಕೈ’ ನಾಯಕರಿಂದ್ಲೇ ಹೊಂಚು- ಬಿ.ವೈ ವಿಜಯೇಂದ್ರ

    – ಕಾಂಗ್ರೆಸ್‍ನ ಮೂವರಿಂದ ಈ ಕುತಂತ್ರ
    – ಆಪರೇಷನ್ ಕಮಲದ ನೆಪ ಹೇಳಿ ಜೆಡಿಎಸ್‍ಗೆ ಬೆದರಿಕೆ

    ತುಮಕೂರು: ಆಪರೇಷನ್ ಕಮಲ ಎಂಬ ಬೆದರುಬೊಂಬೆ ಇಟ್ಕೊಂಡು ಕಾಂಗ್ರೆಸ್ ನಾಯಕರು ಕುಮಾರಸ್ವಾಮಿ ಅವರನ್ನ ಅಧಿಕಾರದಿಂದ ಕೆಳಗಿಳಿಸಲು ಹೊಂಚು ಹಾಕಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನದಿಂದ ಎಚ್.ಡಿ ಕುಮಾರಸ್ವಾಮಿಯನ್ನು ಕೆಳಗಿಳಿಸಲು ಕೆಲ ಕಾಂಗ್ರೆಸ್ ನಾಯಕರು ಕುತಂತ್ರ ಮಾಡುತ್ತಿದ್ದಾರೆ. ಅದಕ್ಕೆ ಆಪರೇಷನ್ ಕಮಲ ಎಂಬ ಬೆದರು ಬೊಂಬೆ ಇಟ್ಕೊಂಡು ಕಾಂಗ್ರೆಸ್‍ನ ಮೂವರು ಹಿರಿಯ ಮುಖಂಡರು ಸಿಎಂ ಕುಮಾರಸ್ವಾಮಿ ವಿರುದ್ಧ ಹೊಂಚು ಹಾಕುತ್ತಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಸ್ಥಾನಮಾನ ಪಡೆಯಲು ಕೈ ಪಡೆಯವರೇ ತೆರೆಮರೆಯ ಕಸರತ್ತು ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಒಬ್ಬರು ಸಚಿವರಾದರೆ ಇನ್ನಿಬ್ಬರು ಸಚಿವ ಸ್ಥಾನ ಸಿಗದೇ ಇದ್ದವರು ಈ ರೀತಿ ಹೊಂಚು ಹಾಕಿ ಬಿಜೆಪಿ ಹೆಸರನ್ನು ಹಾಳು ಮಾಡುತ್ತಿದ್ದಾರೆ. ಕುಮಾರಸ್ವಾಮಿ ಅವರು ಅಧಿಕಾರದಿಂದ ಕೆಳಗಿಳಿಯುವುದನ್ನೇ ಕಾಯ್ತಾ ಇದ್ದಾರೆ. ಆದರೆ ಬಿಜೆಪಿ ಪಕ್ಷ ಸರ್ಕಾರವನ್ನ ಅಸ್ಥಿರಗೊಳಿಸುವ ಯಾವ ಪ್ರಯತ್ನವೂ ಮಾಡುತ್ತಿಲ್ಲ. ತಮ್ಮ ಬೇಳೆ ಬೇಯಿಸಿಕೊಳ್ಳಲು ಆಪರೇಷನ್ ಕಮಲ ಎಂಬ ಭೂತ ಇಟ್ಟುಕೊಂಡು ಜೆಡಿಎಸ್ ನಾಯಕರನ್ನು ಬೆದರಿಸುತ್ತಿದ್ದಾರೆ. ಹೀಗೆ ಕುತಂತ್ರ ಮಾಡುತ್ತಿರುವ ಆ ಮೂವರು ಯಾರು ಅಂತಾ ಮುಂದಿನ ದಿನದಲ್ಲಿ ಗೊತ್ತಾಗಲಿದೆ ಎಂದು ಗುಡುಗಿದ್ದಾರೆ.

    ಅಷ್ಟೇ ಅಲ್ಲದೆ ಸರ್ಕಾರದ ಆಡಳಿತ ಕೇವಲ ರಾಮನಗರ, ಹಾಸನ ಹಾಗೂ ಮಂಡ್ಯ ಕ್ಷೇತ್ರಕ್ಕೆ ಮಾತ್ರ ಸೀಮಿತವಾದಂತಿದೆ. ಕರ್ನಾಟಕದಲ್ಲಿ ತುಘಲಕ್ ದರ್ಬಾರ್ ನಡೀತಿದೆ. ರಾಜ್ಯದ ಆಡಳಿತ ಕುಮಾರಸ್ವಾಮಿ ಹಾಗೂ ರೇವಣ್ಣ ಕುಟುಂಬಕ್ಕೆ ಸೀಮಿತವಾಗಿಬಿಟ್ಟಿದೆ. ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ಮಾಡ್ತೀವಿ ಎಂದು ವಿಜಯೇಂದ್ರ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಾಸಕ ಸುರೇಶ್‍ಗೌಡ ತಲೆ ಹಿಡಿಯೋದರಲ್ಲಿ ಎತ್ತಿದ ಕೈ: ಕಾಂಗ್ರೆಸ್ ಮುಖಂಡ ರಾಜೇಶ್

    ಶಾಸಕ ಸುರೇಶ್‍ಗೌಡ ತಲೆ ಹಿಡಿಯೋದರಲ್ಲಿ ಎತ್ತಿದ ಕೈ: ಕಾಂಗ್ರೆಸ್ ಮುಖಂಡ ರಾಜೇಶ್

    ಮಂಡ್ಯ: ಮಂಡ್ಯ ಲೋಕಸಭೆ ಉಪಚುನಾವಣೆ ಘೋಷಣೆಯಾದ ನಂತರ ಮಂಡ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ನಾಯಕರ ನಡುವೆ ಮಾತಿನ ಸಮರ ತಾರಕಕ್ಕೇರಿದ್ದು, ಶಾಸಕ ಸುರೇಶ್‍ಗೌಡ ತಲೆ ಹಿಡಿಯೋದರಲ್ಲಿ ಎತ್ತಿದ ಕೈ ಎಂದು ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ವಾಗ್ದಾಳಿ ನಡೆಸಿದ್ದಾರೆ.

    ಶಾಸಕ ಸುರೇಶ್‍ಗೌಡ, ಮಾಜಿ ಶಾಸಕ ಚೆಲುವರಾಯಸ್ವಾಮಿಯವರನ್ನು ರಾಜಕೀಯ ವ್ಯಭಿಚಾರಿ ಎಂದು ಜರಿದಿದ್ದರು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಮುಖಂಡರು, ಶಾಸಕ ಸುರೇಶ್‍ಗೌಡ ತಲೆ ಹಿಡಿಯೋದರಲ್ಲಿ ಎತ್ತಿದ ಕೈ. ತಾಲೂಕಿನ ನಾವು ಇದನ್ನು ಹತ್ತಿರದಿಂದ ನೋಡಿದ್ದೇವೆ. ಸುರೇಶ್‍ಗೌಡ ಗೆಲ್ಲಲು ಮಾಜಿ ಶಾಸಕ ಶಿವರಾಮೇಗೌಡ, ಎಂಎಲ್‍ಸಿ ಅಪ್ಪಾಜಿಗೌಡ ಸೇರಿದಂತೆ ಹಲವರು ಕಾರಣರಾಗಿದ್ದಾರೆ.

    ಸುರೇಶ್‍ಗೌಡ ಈಗಾಗಲೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷೇತರರಾಗಿ ನಿಲ್ಲುವ ಮೂಲಕ ಅವರ ಗಂಡಸ್ತನ ತೋರಿಸಲಿ. ಸುರೇಶ್‍ಗೌಡ ಎಣ್ಣೆ ಕುಡಿದು ನಾಲೆ ಮೇಲೆ ಓಡಾಡುತ್ತಾರೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಸುರೇಶ್‍ಗೌಡ ಇನ್ನು ಮುಂದಾದರೂ ಚಿಕ್ಕ ಚಿಕ್ಕ ಮಾತುಗಳನ್ನಾಡುವುದು ಬಿಟ್ಟು ಅಭಿವೃದ್ಧಿ ಕೆಲಸ ಮಾಡಲಿ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಇದೇ ವೇಳೆ ಮಾಡನಾಡಿದ ಕಾಂಗ್ರೆಸ್ ಮುಖಂಡ ತುರುಬನಹಳ್ಳಿ ರಾಜೇಗೌಡ ಅವರು ಶಾಸಕ ಸುರೇಶ್‍ಗೌಡ ಅವರನ್ನು ಅಪ್ಪ ಇಲ್ಲದೆ ಹುಟ್ಟಿದ ಮಗು ತರಹ ಎಂದು ಜರಿದು, ಇನ್ನು ಮುಂದೆ ಮಾತನಾಡುವಾಗ ಎಚ್ಚರಿಕೆಯಿಂದ ಇರುವಂತೆ ಆಗ್ರಹಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv