Tag: ಕಾಂಗ್ರೆಸ್ ಮುಖಂಡ

  • ಹೈದರ್ ಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ – ರಾಜಿ ಮಾಡಿಕೊಂಡು ಒಂದೇ ವರ್ಷಕ್ಕೆ ಉಸಿರು ನಿಲ್ಲಿಸಿದ ಗ್ಯಾಂಗ್‌!

    ಹೈದರ್ ಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ – ರಾಜಿ ಮಾಡಿಕೊಂಡು ಒಂದೇ ವರ್ಷಕ್ಕೆ ಉಸಿರು ನಿಲ್ಲಿಸಿದ ಗ್ಯಾಂಗ್‌!

    ಬೆಂಗಳೂರು: ಕಾಂಗ್ರೆಸ್ ಮುಖಂಡ (Congress Leader) ಹೈದರ್ ಅಲಿ ಕೊಲೆ ಪ್ರಕರಣದಲ್ಲಿ ರೋಚಕ ಟ್ವಿಸ್ಟ್‌ ಸಿಕ್ಕಿದೆ. ರಾಜಿಗೆ ಕರೆದು ವಿಶ್ವಾಸಗಳಿಸಿ ಒಬ್ಬಂಟಿಯಿದ್ದಾಗ ಅಟ್ಯಾಕ್ ಮಾಡಿ ಗ್ಯಾಂಗ್‌ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

    ದುಷ್ಮನಿ ಬೇಡ ಎಂದು ಧರ್ಮಗ್ರಂಥದ ಮೇಲೆ ಪ್ರಮಾಣ ಮಾಡಿ, ಅಬ್ಬಾಸ್, ನಾಜ್ ಹಾಗೂ ಹೈದರ್ ಅಲಿಯನ್ನ ಕರೆಸಿ ಸಂಧಾನ ಮಾಡಲಾಗಿತ್ತು. ಆದಿನ ಎಲ್ಲರೂ ಒಂದೇ ತಟ್ಟೆಯಲ್ಲಿ ಊಟ ಕೂಡ ಮಾಡಿದ್ದರು. ಹೈದರ್ ಅಲಿ ಖುದ್ದು ಅಬ್ಬಾಸ್ ಬಾಯಿಗೆ ತುತ್ತು ತಿನ್ನಿಸಿದ್ದ. ಕಳೆದ ರಂಜಾನ್ ಹಬ್ಬದ ವೇಳೆ ಮೂವರಿಗೂ ರಾಜಿ ಸಂಧಾನ ಮಾಡಿಸಲಾಗಿತ್ತು. ಆದರೆ ಈ ವರ್ಷ ರಂಜಾನ್ ಬರುವುದರೊಳಗೆ ಹೈದರ್ ಅಲಿಯ ಉಸಿರನ್ನು ಗ್ಯಾಂಗ್‌ ನಿಲ್ಲಿಸಿದೆ.

    – ವಿಚಾರಣೆ ವೇಳೆ ಸ್ಫೋಟಕ ರಹಸ್ಯ ಬಯಲು
    ಕಾಂಗ್ರೆಸ್ ಮುಖಂಡ (Congress Leader) ಹೈದರ್ ಅಲಿ ಮರ್ಡರ್ ಪ್ರಕರಣದ ಬಂಧಿತ ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಗಳು ಹೊರಬರುತ್ತಿದೆ. ಶಿವಮೊಗ್ಗದಿಂದ (Shivamogga) ಗಡಿಪಾರು ಆಗಿದ್ದ ನಾಲ್ವರು ಆರೋಪಿಗಳನ್ನ (Accused) ಕರೆಸಿ ಸುಪಾರಿ ಕೊಟ್ಟು ಕೊಲೆ ಮಾಡಿಸಿರೋ ಬಗ್ಗೆ ಒಂದಷ್ಟು ಪುರಾವೆಗಳು ಪೊಲೀಸರಿಗೆ ಸಿಕ್ಕಿದೆ ಎನ್ನಲಾಗಿದೆ.

    ಬಂಧಿತ 7 ಮಂದಿ ಆರೋಪಿಗಳಲ್ಲಿ ಮತೀನ್, ಸದ್ದಾಂ ಸೇರಿ ನಾಲ್ವರು ಆರೋಪಿಗಳು ಶಿವಮೊಗ್ಗದವರಾಗಿದ್ದು, ಆರೋಪಿಗಳ ವಿರುದ್ಧ ಶಿವಮೊಗ್ಗದ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದೆ. ನಿರಂತರ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ಕಾರಣ ಆರೋಪಿಗಳನ್ನ ಶಿವಮೊಗ್ಗದಿಂದ ಗಡಿಪಾರು ಮಾಡಲಾಗಿತ್ತು.

    ಆರೋಪಿಗಳಿಗೆ ಶಿವಮೊಗ್ಗದಿಂದ ಗಡಿಪಾರು ಮಾಡಿದ್ದ ಕಾರಣ ಬೆಂಗಳೂರಿನಲ್ಲಿ ಬಂದು ವಾಸವಾಗಿದ್ದರು. ಈ ಹಿಂದೆ ಕೊಲೆಯಾದ ಹೈದರ್ ಅಲಿ ಆಪ್ತನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು. ಆಗ ಆರೋಪಿಗಳಿಗೆ ಹೈದರ್ ಅಲಿ ಬೆದರಿಕೆ ಹಾಕಿದ್ದ. ಆದ್ದರಿಂದ ಆರೋಪಿಗಳಿಗೆ ಹೈದರ್ ಮೇಲೆ ವೈಷ್ಯಮ್ಯ ಇತ್ತು. ಈ ವಿಚಾರ ತಿಳಿದಿದ್ದ ಪ್ರಕರಣದ ಪ್ರಮುಖ ಆರೋಪಿ ನಯಾಜ್ ಪಾಷಾ ಆರೋಪಿಗಳನ್ನ ಬಳಸಿಕೊಂಡು ಹೈದರ್ ಅಲಿಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾನೆಂದು ತಿಳಿದು ಬಂದಿದೆ.

    ನಾಜ್ ಮತ್ತು ಹೈದರ್ ಅಲಿ ದಶಕಗಳಿಂದ ಒಬ್ಬರ ಮೇಲೆ ಒಬ್ಬರು ಕತ್ತಿ ಮಸೆಯುತ್ತಿದ್ದರು. ಮೃತ ಹೈದರ್, ನಾಜ್‌ನನ್ನ ಕೊಲೆ ಮಾಡಲು ಪ್ಲಾನ್ ಮಾಡಿಕೊಂಡಿದ್ದಾನೆಂಬ ವಿಚಾರ ತಿಳಿದ ಆರೋಪಿ ನಾಜ್, ಹೈದರ್‌ಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಬಗ್ಗೆ ಮಾಹಿತಿಗಳು ಲಭ್ಯವಾಗಿದೆ.

  • ʻಕೈʼಮುಖಂಡನ ಹತ್ಯೆ ಕೇಸ್‌ – ಶಿವಮೊಗ್ಗದಿಂದ ಗಡಿಪಾರಾಗಿದ್ದ ಆರೋಪಿಗಳಿಗೆ ಸುಪಾರಿ ಕೊಟ್ಟು ಕೊಲೆ

    ʻಕೈʼಮುಖಂಡನ ಹತ್ಯೆ ಕೇಸ್‌ – ಶಿವಮೊಗ್ಗದಿಂದ ಗಡಿಪಾರಾಗಿದ್ದ ಆರೋಪಿಗಳಿಗೆ ಸುಪಾರಿ ಕೊಟ್ಟು ಕೊಲೆ

    – ವಿಚಾರಣೆ ವೇಳೆ ಸ್ಫೋಟಕ ರಹಸ್ಯ ಬಯಲು

    ಬೆಂಗಳೂರು: ಕಾಂಗ್ರೆಸ್ ಮುಖಂಡ (Congress Leader) ಹೈದರ್ ಅಲಿ ಮರ್ಡರ್ ಪ್ರಕರಣದ ಬಂಧಿತ ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಗಳು ಹೊರಬರುತ್ತಿದೆ. ಶಿವಮೊಗ್ಗದಿಂದ (Shivamogga) ಗಡಿಪಾರು ಆಗಿದ್ದ ನಾಲ್ವರು ಆರೋಪಿಗಳನ್ನ (Accused) ಕರೆಸಿ ಸುಪಾರಿ ಕೊಟ್ಟು ಕೊಲೆ ಮಾಡಿಸಿರೋ ಬಗ್ಗೆ ಒಂದಷ್ಟು ಪುರಾವೆಗಳು ಪೊಲೀಸರಿಗೆ ಸಿಕ್ಕಿದೆ ಎನ್ನಲಾಗಿದೆ.

    ಬಂಧಿತ 7 ಮಂದಿ ಆರೋಪಿಗಳಲ್ಲಿ ಮತೀನ್, ಸದ್ದಾಂ ಸೇರಿ ನಾಲ್ವರು ಆರೋಪಿಗಳು ಶಿವಮೊಗ್ಗದವರಾಗಿದ್ದು, ಆರೋಪಿಗಳ ವಿರುದ್ಧ ಶಿವಮೊಗ್ಗದ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದೆ. ನಿರಂತರ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ಕಾರಣ ಆರೋಪಿಗಳನ್ನ ಶಿವಮೊಗ್ಗದಿಂದ ಗಡಿಪಾರು ಮಾಡಲಾಗಿತ್ತು. ಇದನ್ನೂ ಓದಿ: ತಲೆ ಬುರುಡೆ ಛಿದ್ರ, ಕಿವಿ ಕಟ್ – 56 ಕಡೆ ಕೊಚ್ಚಿ ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ

    ಆರೋಪಿಗಳಿಗೆ ಶಿವಮೊಗ್ಗದಿಂದ ಗಡಿಪಾರು ಮಾಡಿದ್ದ ಕಾರಣ ಬೆಂಗಳೂರಿನಲ್ಲಿ ಬಂದು ವಾಸವಾಗಿದ್ದರು. ಈ ಹಿಂದೆ ಕೊಲೆಯಾದ ಹೈದರ್ ಅಲಿ ಆಪ್ತನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು. ಆಗ ಆರೋಪಿಗಳಿಗೆ ಹೈದರ್ ಅಲಿ ಬೆದರಿಕೆ ಹಾಕಿದ್ದ. ಆದ್ದರಿಂದ ಆರೋಪಿಗಳಿಗೆ ಹೈದರ್ ಮೇಲೆ ವೈಷ್ಯಮ್ಯ ಇತ್ತು. ಈ ವಿಚಾರ ತಿಳಿದಿದ್ದ ಪ್ರಕರಣದ ಪ್ರಮುಖ ಆರೋಪಿ ನಯಾಜ್ ಪಾಷಾ ಆರೋಪಿಗಳನ್ನ ಬಳಸಿಕೊಂಡು ಹೈದರ್ ಅಲಿಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾನೆಂದು ತಿಳಿದು ಬಂದಿದೆ. ಇದನ್ನೂ ಓದಿ: ನಾಮಕರಣಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ – ಮಗು ಸೇರಿ ಮೂವರಿಗೆ ತೀವ್ರ ಗಾಯ

    ನಾಜ್ ಮತ್ತು ಹೈದರ್ ಅಲಿ ದಶಕಗಳಿಂದ ಒಬ್ಬರ ಮೇಲೆ ಒಬ್ಬರು ಕತ್ತಿ ಮಸೆಯುತ್ತಿದ್ದರು. ಮೃತ ಹೈದರ್, ನಾಜ್‌ನನ್ನ ಕೊಲೆ ಮಾಡಲು ಪ್ಲಾನ್ ಮಾಡಿಕೊಂಡಿದ್ದಾನೆಂಬ ವಿಚಾರ ತಿಳಿದ ಆರೋಪಿ ನಾಜ್, ಹೈದರ್‌ಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಬಗ್ಗೆ ಮಾಹಿತಿಗಳು ಲಭ್ಯವಾಗಿದೆ. ಇದನ್ನೂ ಓದಿ: ಪ್ರೀತಿಸುತ್ತಿದ್ದ ಹುಡುಗಿ ಕೈಕೊಟ್ಟಿದ್ದಕ್ಕೆ ಸಿಟ್ಟು; ಆಕೆಯ ಗಂಡನಿಗೆ ಇರಿದು ಹತ್ಯೆ ಮಾಡಿದ ಪಾಗಲ್‌ ಪ್ರೇಮಿ

  • ತಲೆ ಬುರುಡೆ ಛಿದ್ರ, ಕಿವಿ ಕಟ್ – 56 ಕಡೆ ಕೊಚ್ಚಿ ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ

    ತಲೆ ಬುರುಡೆ ಛಿದ್ರ, ಕಿವಿ ಕಟ್ – 56 ಕಡೆ ಕೊಚ್ಚಿ ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ

    – ತನಿಖೆಗೆ ವಿಶೇಷ ತಂಡ ರಚನೆ

    ಬೆಂಗಳೂರು: ಕಾಂಗ್ರೆಸ್ ಮುಖಂಡ (Congress Leader) ಹೈದರ್ ಅಲಿ (Hyder Ali) ಹತ್ಯೆ ಪ್ರಕರಣ ಸಂಬಂಧ ಮರಣೋತ್ತರ ಪರೀಕ್ಷೆ ವರದಿ (Postmortem report) ಬಂದಿದ್ದು, ದೇಹದ 56 ಕಡೆ ಮಚ್ಚಿನಿಂದ ಕೊಚ್ಚಿ, ತಲೆ ಬುರುಡೆ ಛಿದ್ರಗೊಳಿಸಿ, ಕಿವಿ ಕಟ್ ಮಾಡಿರುವುದಾಗಿ ವೈದ್ಯರು ತಿಳಿಸಿದ್ದಾರೆ.

    ಬೆಂಗಳೂರಿನ ಅಶೋಕನಗರದ (Ashok Nagar) ಗರುಡ ಮಾಲ್ ಬಳಿ ಘಟನೆ ಶನಿವಾರ ರಾತ್ರಿ ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡನ ಹತ್ಯೆ ಮಾಡಿದ್ದಾರೆ. ಶವ ಪತ್ತೆಯಾದಾಗ ಮೊದಲು ಅಪರಿಚಿತ ವ್ಯಕ್ತಿ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದ್ದರು. ಇದನ್ನೂ ಓದಿ: ಕಲಬುರಗಿ | ಜಿಮ್ಸ್ ಆಸ್ಪತ್ರೆಯ ವೈದ್ಯರ ಎಡವಟ್ಟು – ಬಾಣಂತಿ ಹೊಟ್ಟೆಯಲ್ಲೇ ಬಟ್ಟೆ ಉಂಡೆ, ಹತ್ತಿ ಬಿಟ್ಟು ಹೊಲಿಗೆ

    ಡಾ.ದಿಲೀಪ್ ನೇತೃತ್ವದಲ್ಲಿ ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದ್ದು, ಹಂತಕರು ಹೈದರ್ ಅಲಿಯ ದೇಹದ 56 ಕಡೆ ಕೊಚ್ಚಿದ್ದಾರೆ. ತಲೆ ಬುರುಡೆ ಛಿದ್ರಗೊಳಿಸಿದ್ದು, ಕಿವಿ ಕಟ್ ಮಾಡಿದ್ದಾರೆ. ದೇಹದ ಮೇಲೆಯೇ 10 ಕಡೆ ಮಚ್ಚಿನ ಗುರುತು ಪತ್ತೆಯಾಗಿದ್ದು, ಕಾಲುಗಳ ಮಾಂಸಖಂಡ ಹೊರ ಬರುವಂತೆ ಹಾಗೂ ಮುಖ ಗುರುತು ಸಿಗದ ರೀತಿಯಲ್ಲಿ ಕೊಚ್ಚಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಪಾರ್ಕ್ ಮಾಡಿದ್ದ ಕಾರಿನಲ್ಲೇ ಹೃದಯಾಘಾತದಿಂದ ಯುವಕ ಸಾವು

    ಕೊಲೆಯಾದ ಹೈದರ್ ಅಲಿಯ ಸಹೋದರ ಸಾಮಾಜಿಕ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹಂತಕರ ಹುಡುಕಾಟಕ್ಕಾಗಿ ಅಶೋಕ್ ನಗರ ಇನ್ಸ್‌ಪೆಕ್ಟರ್‌ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ. ಹಂತಕರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಡಿಸಿಪಿ ಶೇಖರ್ ತಿಳಿಸಿದ್ದಾರೆ. ಇದನ್ನೂ ಓದಿ: ನೀವು ಹೇಳಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ – ಪಟ್ಟದ ಫೈಟ್‌ ನಡುವೆ ಪರಂ ಮಾತು

    ಶೇಖ್ ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ತಡರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಹೈದರ್ ಅಲಿ ಲೈವ್ ಬ್ಯಾಂಡ್‌ನಿಂದ ರಾತ್ರಿ ಸ್ನೇಹಿತನ ಜೊತೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಆರೋಪಿಗಳು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಅಡ್ಡಗಟ್ಟಿಕೊಲೆ ಮಾಡಿದ್ದಾರೆ. ಘಟನೆಯಲ್ಲಿ ಜೊತೆಯಲ್ಲಿದ್ದ ಸ್ನೇಹಿತನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದ ಮಡುವಲ್ಲಿ ಬಿದಿದ್ದ ಹೈದರ್ ಅವರನ್ನು ಪೊಲೀಸರು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಾಗಲೇ ಆನೆಪಾಳ್ಯ ನಿವಾಸಿ ಹೈದರ್ ಸಾವನ್ನಪ್ಪಿದ್ದರು. ಇದನ್ನೂ ಓದಿ: ಮಂಡ್ಯದಲ್ಲಿ ನಾಡ ಬಾಂಬ್ ಸ್ಫೋಟ – ವಿದ್ಯಾರ್ಥಿಯ ಅಂಗೈ ಛಿದ್ರ

    ವಿಚಾರ ತಿಳಿದು ಬೌರಿಂಗ್ ಆಸ್ಪತ್ರೆ ಬಳಿ ನೂರಾರು ಜನ ಜಮಾಯಿಸಿದ್ದು, ಆಸ್ಪತ್ರೆ ಗೇಟ್ ತಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಶೇಖ್ ಹೈದರ್ ಅಲಿ ಶಾಸಕ ಎನ್.ಎ.ಹ್ಯಾರಿಸ್ ಜೊತೆ ಗುರುತಿಸಿಕೊಂಡಿದ್ದರು. ಹೈದರ್ ಅಲಿ ಹ್ಯಾರಿಸ್ ಪರ ಪ್ರಚಾರದಲ್ಲಿ ಭಾಗಿಯಾಗುತ್ತಿದ್ದರು. ಘಟನೆ ಸಂಬಂಧ ಅಶೋಕನಗರ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ. ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: Champions Trophy; ಟೀಂ ಇಂಡಿಯಾ ಗೆಲುವಿಗಾಗಿ ಮಹಾ ಕುಂಭದಲ್ಲಿ ವಿಶೇಷ ಪೂಜೆ

    ಘಟನೆ ಸಂಬಂಧ ಡಿಸಿಪಿ ಶೇಖರ್ ಮಾತನಾಡಿ, ತಡರಾತ್ರಿ 1 ಗಂಟೆ ವೇಳೆ ಫುಟ್ಬಾಲ್ ಸ್ಟೇಡಿಯಂ ಗೇಟ್ ಬಳಿ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿ ರೌಡಿಶೀಟರ್. ಹೈದರ್ ಅಲಿ ವಿರುದ್ಧ 11 ಪ್ರಕರಣಗಳಿವೆ. ಮಾರಣಾಂತಿಕ ಹಲ್ಲೆ, ಸಾಮಾನ್ಯ ಹಲ್ಲೆ, ಎನ್ಡಿಪಿಎಸ್ ಕೇಸ್‌ಗಳು ಇದೆ. ಹೈದರ್ ಅಶೋಕನಗರ ಪೊಲೀಸ್ ಠಾಣಾ ರೌಡಿಶೀಟರ್. 2016ರಿಂದ ರೌಡಿಶೀಟರ್ ಮಾಡಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಕೊಲೆಯಾದ ವ್ಯಕ್ತಿಗೆ ರಾಜಕೀಯ ಹಿನ್ನೆಲೆ ಇಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

  • ಬೆಂಗಳೂರಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

    ಬೆಂಗಳೂರಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

    – ಶಾಸಕ ಹ್ಯಾರಿಸ್ ಜೊತೆ ಗುರುತಿಸಿಕೊಂಡಿದ್ದ ಹೈದರ್

    ಬೆಂಗಳೂರು: ಶನಿವಾರ ತಡರಾತ್ರಿ ಲೈವ್ ಬ್ಯಾಂಡ್‌ನಿಂದ ಹೊರ ಬರುತ್ತಿದ್ದ ಕಾಂಗ್ರೆಸ್ ಶಾಸಕನನ್ನು (Congress Leader) ಅಡ್ಡಗಟ್ಟಿ ಭೀಕರ ಹತ್ಯೆಗೈದಿರುವ ಘಟನೆ ಬೆಂಗಳೂರಿನ (Bengaluru) ಅಶೋಕನಗರದ (Ashoknagar) ಗರುಡ ಮಾಲ್ ಬಳಿ ನಡೆದಿದೆ.

    ಶೇಖ್ ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ತಡರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಹೈದರ್ ಅಲಿ ಲೈವ್ ಬ್ಯಾಂಡ್‌ನಿಂದ ರಾತ್ರಿ ಸ್ನೇಹಿತನ ಜೊತೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಆರೋಪಿಗಳು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಅಡ್ಡಗಟ್ಟಿಕೊಲೆ ಮಾಡಿದ್ದಾರೆ. ಘಟನೆಯಲ್ಲಿ ಜೊತೆಯಲ್ಲಿದ್ದ ಸ್ನೇಹಿತನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದ ಮಡುವಲ್ಲಿ ಬಿದಿದ್ದ ಹೈದರ್ ಅವರನ್ನು ಪೊಲೀಸರು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಾಗಲೇ ಆನೆಪಾಳ್ಯ ನಿವಾಸಿ ಹೈದರ್ ಸಾವನ್ನಪ್ಪಿದ್ದರು. ಇದನ್ನೂ ಓದಿ: Champions Trophy | ಇಂಡೋ-ಪಾಕ್ ಕಾದಾಟದ ರೋಚಕ ಇತಿಹಾಸ – ಹೈವೋಲ್ಟೇಜ್ ಕದನದಲ್ಲಿ ಯಾರ ಕೈ ಮೇಲು?

    ವಿಚಾರ ತಿಳಿದು ಬೌರಿಂಗ್ ಆಸ್ಪತ್ರೆ ಬಳಿ ನೂರಾರು ಜನ ಜಮಾಯಿಸಿದ್ದು, ಲಾಂಗು-ಮಚ್ಚು ಝಳಪಿಸಿ ಆಸ್ಪತ್ರೆ ಗೇಟ್ ತಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಶೇಖ್ ಹೈದರ್ ಅಲಿ ಶಾಸಕ ಎನ್.ಎ.ಹ್ಯಾರಿಸ್ ಜೊತೆ ಗುರುತಿಸಿಕೊಂಡಿದ್ದರು. ಹೈದರ್ ಅಲಿ ಹ್ಯಾರಿಸ್ ಪರ ಪ್ರಚಾರದಲ್ಲಿ ಭಾಗಿಯಾಗುತ್ತಿದ್ದರು. ಘಟನೆ ಸಂಬಂಧ ಅಶೋಕನಗರ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ. ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.  ಇದನ್ನೂ ಓದಿ: ಪಾಕಿಸ್ತಾನಕ್ಕಿಂದು ಮಾಡು ಇಲ್ಲವೇ ಮಡಿ ಪಂದ್ಯ – ಸೋತರೆ ಬಹುತೇಕ ಮನೆಗೆ

    ಘಟನೆ ಸಂಬಂಧ ಡಿಸಿಪಿ ಶೇಖರ್ ಮಾತನಾಡಿ, ತಡರಾತ್ರಿ 1 ಗಂಟೆ ವೇಳೆ ಫುಟ್ಬಾಲ್ ಸ್ಟೇಡಿಯಂ ಗೇಟ್ ಬಳಿ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿ ರೌಡಿಶೀಟರ್. ಹೈದರ್ ಅಲಿ ವಿರುದ್ಧ 11 ಪ್ರಕರಣಗಳಿವೆ. ಮಾರಣಾಂತಿಕ ಹಲ್ಲೆ, ಸಾಮಾನ್ಯ ಹಲ್ಲೆ, ಎನ್ಡಿಪಿಎಸ್ ಕೇಸ್‌ಗಳು ಇದೆ. ಹೈದರ್ ಅಶೋಕನಗರ ಪೊಲೀಸ್ ಠಾಣಾ ರೌಡಿಶೀಟರ್. 2016ರಿಂದ ರೌಡಿಶೀಟರ್ ಮಾಡಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಕೊಲೆಯಾದ ವ್ಯಕ್ತಿಗೆ ರಾಜಕೀಯ ಹಿನ್ನೆಲೆ ಇಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರೀತಿಸುತ್ತಿದ್ದ ಹುಡುಗಿ ಕೈಕೊಟ್ಟಿದ್ದಕ್ಕೆ ಸಿಟ್ಟು; ಆಕೆಯ ಗಂಡನಿಗೆ ಇರಿದು ಹತ್ಯೆ ಮಾಡಿದ ಪಾಗಲ್‌ ಪ್ರೇಮಿ

  • ಕಾಂಗ್ರೆಸ್ ಮುಖಂಡನ ಅಟ್ಟಾಡಿಸಿ ಹೊಡೆದು, ನೇಣು ಬಿಗಿದು ಹತ್ಯೆ

    ಗದಗ: ಕಾಂಗ್ರೆಸ್ ಮುಖಂಡನನ್ನು (Congress Leader) ಹತ್ಯೆಗೈದು ಮರಕ್ಕೆ ನೇಣು ಹಾಕಿರುವ ಘಟನೆ ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ಬಳಿ ನಡೆದಿದೆ.

    ಡೋಣಿ ಗ್ರಾಮದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಕಾರ್ಯನಿರ್ವಹಿಸುತ್ತಿದ್ದ ಶರಣಪ್ಪ ಸಂದೀಗೌಡರ್ (40) ಕೊಲೆಯಾದ ದುರ್ದೈವಿ. ಕೊಲೆಗೂ ಮುನ್ನ ಅವರನ್ನು ಅಟ್ಟಾಡಿಸಿ ಹೊಡೆದು, ಕಣ್ಣಿಗೆ ಖಾರದ ಪುಡಿ ಎರಚಿ, ಮರಕ್ಕೆ ಕೈಕಾಲು ಕಟ್ಟಿ ವಿಕೃತಿ ಮೆರೆದಿದ್ದಾರೆ. ಬಳಿಕ ಹತ್ಯೆಗೈದು ಮರಕ್ಕೆ ನೇಣು ಬಿಗಿಯಲಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮೊದಲ ಬಾರಿಗೆ ತೇಜಸ್ ಫೈಟರ್ ಜೆಟ್ ಪತನ- ಪೈಲಟ್ ಸೇಫ್

    ಹತ್ಯೆಯಾದ ಶರಣಪ್ಪ ಮರಳು ದಂಧೆ ನಡೆಸುತ್ತಿದ್ದ. ಆತನ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಘಟನೆಯಿಂದ ಡೋಣಿ ಹಾಗೂ ಡಾಂಬಳ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

    ಸ್ಥಳಕ್ಕೆ ಮುಂಡರಗಿ ಪೊಲೀಸರು (Police), ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಬೈಕ್ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮಗಳನ್ನು ಪೀಡಿಸುತ್ತಿದ್ದ ಯುವಕನಿಗೆ ಬುದ್ಧಿ ಹೇಳಿದ್ದಕ್ಕೆ ಯುವತಿಯ ತಂದೆಯನ್ನೇ ಕೊಚ್ಚಿ ಕೊಂದ!

  • ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

    ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

    ರಾಯಚೂರು: ಮಾನ್ವಿಯ ಕಾಂಗ್ರೆಸ್ ಮುಖಂಡ (Congress Leader) ಪ್ರಸಾದ್ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು (Police) ಬಂಧಿಸಿದ್ದಾರೆ. ಬಂಧಿತರನ್ನು ಕೇಶವ, ರಾಮು ಹಾಗೂ ದೇವ ಎಂದು ಗುರುತಿಸಲಾಗಿದೆ.

    ಅ.30ರ ಮುಂಜಾನೆ ರಬಣಕಲ್ ಕ್ಯಾಂಪ್ ಬಳಿ ಜಮೀನಿಗೆ ನೀರು ಕಟ್ಟಲು ತೆರಳಿದ್ದ ಪ್ರಸಾದ್‍ನನ್ನು ಆರೋಪಿಗಳು ಕೊಡಲಿಯಿಂದ ಕೊಚ್ಚಿ ಕೊಲೆಗೈದಿದ್ದರು. ಬಳಿಕ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಆರೋಪಿಗಳು ಪ್ರಸಾದ್‍ನನ್ನು ಕೊಲೆಗೈದಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಕಲ್ಲುಗಳನ್ನು ಕಟ್ಟಿಕೊಂಡು ಕೆರೆಗೆ ಹಾರಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ

    ಕೊಲೆಯ ಬಳಿಕ ಆರೋಪಿಗಳ ಬಂಧನಕ್ಕೆ ಎಸ್‍ಪಿ ನಿಖಿಲ್.ಬಿ ಮಾರ್ಗದರ್ಶನದಲ್ಲಿ 3 ತಂಡಗಳನ್ನು ರಚನೆ ಮಾಡಲಾಗಿತ್ತು. ಮಾನ್ವಿ ಇನ್ಸ್‌ಪೆಕ್ಟರ್ ವೀರಭದ್ರಯ್ಯ ಸ್ವಾಮಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಿದೆ. ಇದೀಗ ಕೊಲೆ ನಡೆದ ಮೂರೇ ದಿನದಲ್ಲಿ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.

    ಈ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಐಬ್ರೋಸ್ ಮಾಡಿಸಿದ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ

    Web Stories

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾರು, ಲಾರಿ ಮುಖಾಮುಖಿ ಡಿಕ್ಕಿ – ಕಾಂಗ್ರೆಸ್ ಮುಖಂಡ ಸ್ಥಳದಲ್ಲೇ ಸಾವು

    ಕಾರು, ಲಾರಿ ಮುಖಾಮುಖಿ ಡಿಕ್ಕಿ – ಕಾಂಗ್ರೆಸ್ ಮುಖಂಡ ಸ್ಥಳದಲ್ಲೇ ಸಾವು

    ರಾಯಚೂರು: ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು (Collision) ರಾಯಚೂರಿನ (Raichur) ಲಿಂಗಸುಗೂರಿನ ಕಾಂಗ್ರೆಸ್ ಮುಖಂಡ (Congress leader) 65 ವರ್ಷದ ಚನ್ನವೀರಪ್ಪ ಗೌಡ ಪಾಗದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಬಾಗಲಕೋಟೆಯ (Bagalkot) ಇಳಕಲ್ ಬಳಿಯ ತುಂಬಾ ಕ್ರಾಸ್‌ನಲ್ಲಿ ಅಪಘಾತ (Accident) ನಡೆದಿದೆ. ಲಿಂಗಸುಗೂರು ತಾಲೂಕಿನ ಆದಪೂರ ಗ್ರಾಮದ ಚನ್ನವೀರಪ್ಪ ಗೌಡ ಲಿಂಗಸುಗೂರಿನಿಂದ ಇಳಕಲ್ ಹೊರಟಿದ್ದಾಗ ದುರ್ಘಟನೆ ನಡೆದಿದೆ.

    ಲಿಂಗಸುಗೂರು ಎಪಿಎಂಸಿ ಮಾಜಿ ಅಧ್ಯಕ್ಷ ಚನ್ನವೀರಪ್ಪ ಗೌಡ ಪಾಗದ, ಲಿಂಗಸುಗೂರಿನ ಬನ್ನಿಗೋಳ ತಾಲೂಕ ಪಂಚಾಯತ್‌ಗೆ 2 ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದರು. ಇದೀಗ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಖಾಸಗಿ ಬಸ್, ಇನ್ನೋವಾ ಭೀಕರ ಅಪಘಾತ- 10 ಮಂದಿ ದುರ್ಮರಣ

    ಇಳಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅಪಘಾತದಲ್ಲಿ ಚನ್ನವೀರಪ್ಪ ಗೌಡ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಇದನ್ನೂ ಓದಿ: ಉದ್ಯೋಗ ಸಿಗದೆ ಖಿನ್ನತೆಗೊಳಗಾಗಿ ಯುವತಿ ಆತ್ಮಹತ್ಯೆ

  • ಕಾಂಗ್ರೆಸ್ ಮುಖಂಡ ಚನ್ನಬಸಪ್ಪ ಹುಲ್ಲತ್ತಿ ಮನೆ ಮೇಲೆ IT ರೇಡ್ – ಕೋಟಿ ಕೋಟಿ ಹಣ ಸೀಜ್

    ಕಾಂಗ್ರೆಸ್ ಮುಖಂಡ ಚನ್ನಬಸಪ್ಪ ಹುಲ್ಲತ್ತಿ ಮನೆ ಮೇಲೆ IT ರೇಡ್ – ಕೋಟಿ ಕೋಟಿ ಹಣ ಸೀಜ್

    ಹಾವೇರಿ: ಚುನಾವಣೆಗೆ (Election) ಇನ್ನೂ ಮೂರು ದಿನಗಳು ಬಾಕಿಯಿದ್ದು, ಸತತವಾಗಿ ಐಟಿ ಅಧಿಕಾರಿಗಳು ದಾಳಿ (IT Raid) ಮುಂದುವರಿಸಿದ್ದಾರೆ. ಜಿಲ್ಲೆಯ ಕಾಂಗ್ರೆಸ್ ಮುಖಂಡ ಚನ್ನಬಸಪ್ಪ ಹುಲ್ಲತ್ತಿ (Channabasappa Hullatti) ಮನೆ ಮೇಲೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, 2.85 ಕೋಟಿ ಹಣ ವಶಪಡಿಸಿಕೊಂಡಿದ್ದಾರೆ.

    ಬ್ಯಾಡಗಿ ಪಟ್ಟಣದ ವಿದ್ಯಾನಗರದಲ್ಲಿರುವ ಚನ್ನಬಸಪ್ಪ ಮನೆ ಮೇಲೆ ಭಾನುವಾರ ಬೆಳಗ್ಗೆ ದಾಳಿ ನಡೆಸಿದ ಐಟಿ ಅಧಿಕಾರಿಗಳು ದಾಖಲೆಯಿಲ್ಲದ ಕೋಟ್ಯಂತರ ರೂಪಾಯಿ ಹಣವನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಐಟಿ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಬೆಂಗ್ಳೂರು, ಮೈಸೂರಿನ ಫೈನಾನ್ಸಿಯರ್ ಮನೆಗಳ ಮೇಲೆ IT ರೇಡ್ – 20 ಕೋಟಿ ಹಣ ವಶ

    ಎಪಿಎಂಸಿ ಮಾಜಿ ಅಧ್ಯಕ್ಷನಾಗಿರುವ ಚನ್ನಬಸಪ್ಪ ಹುಲ್ಲತ್ತಿ, CKLE ಅಂಡ್‌ ಸನ್ಸ್ ಮೇಣಸಿನಕಾಯಿ ದಲಾಲ ಅಂಗಡಿಯಲ್ಲಿ ಕೇಲಸ ಮಾಡುತ್ತಿದ್ದರು. ಜೊತೆಗೆ ಬ್ಯಾಡಗಿ ಕಾಂಗ್ರೆಸ್ ಅಭ್ಯರ್ಥಿಯ ಜೊತೆ ನಿಕಟ ಸಂಬಂಧ ಹೊಂದಿದ್ದರು. ಬ್ಯಾಡಗಿಯಲ್ಲಿ ನಡೆಯುವ ಕಾಂಗ್ರೆಸ್ ಕಾರ್ಯಕ್ರಮಗಳ ಉಸ್ತುವಾರಿಯನ್ನು ತಾವೇ ನೋಡಿಕೊಳ್ತಾ ಇದ್ರು. ಇದೀಗ ಚನ್ನಬಸಪ್ಪ ಮನೆ ಮೇಲೆ ದಾಳಿ ನಡೆದಿರುವುದು ಉದ್ದೇಶಪೂರ್ವಕವಾಗಿ ಮಾಡಲಾಗಿದೆ ಎಂದು ಕೈ ಕಾರ್ಯಕರ್ತರು ಆರೋಪಿಸಿದ್ದಾರೆ.

    ಸದ್ಯ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿರುವ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ ಸಾಬೀತಾದ್ರೆ ನಾನೇ ನೇಣು ಹಾಕ್ಕೋತೀನಿ: ಬ್ರಿಜ್ ಭೂಷಣ್

  • ಸ್ಪಾದಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ – ಕಾಂಗ್ರೆಸ್ ಮುಖಂಡನ ಬಂಧನ

    ಸ್ಪಾದಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ – ಕಾಂಗ್ರೆಸ್ ಮುಖಂಡನ ಬಂಧನ

    ಧಾರವಾಡ: ತನ್ನದೇ ಸ್ಪಾದಲ್ಲಿ (Spa) ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಡಿ ಕಾಂಗ್ರೆಸ್ ಮುಖಂಡನಿಗೆ(Congress leader) ಯುವತಿ(Young Women) ಸ್ನೇಹಿತರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

    ಹೌದು, ಧಾರವಾಡದ ಕಾಂಗ್ರೆಸ್ ಮುಖಂಡ ಮನೋಜ್‍ ಕರ್ಜಗಿ(Manoj Karjagi) ಎಂಬಾತ ಸಿದ್ದರಾಮಯ್ಯ (Siddaramaiah) ಸರ್ಕಾರದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ದೇಶಕ ಆಗಿದ್ದ. ಈತ ಮಾಜಿ ಸಚಿವ ವಿನಯ್ ಕುಲಕರ್ಣಿ (Vinay Kulkarni) ಅವರ ಪರಮ ಆಪ್ತ. ಕರ್ಜಗಿ ವೃತ್ತಿಯಿಂದ ಧಾರವಾಡದ (Darwad) ವಿದ್ಯಾಗಿರಿ ಬಡಾವಣೆಯಲ್ಲಿ ಲೇಮೋಸ್ ಯುನಿಸೆಕ್ಸ್ ಸಲೂನ್ ಆ್ಯಂಡ್ ಸ್ಪಾ ನಡೆಸುತ್ತಿದ್ದಾನೆ. ಇದನ್ನೂ ಓದಿ: ನನ್ನ ನೋಡಿ ಬೊಗಳುತ್ತೆ – ನಾಯಿಯನ್ನು ಅಟ್ಟಾಡಿಸಿಕೊಂಡು ಗುಂಡಿಕ್ಕಿ ಕೊಂದ

    ಭಾನುವಾರ (Sunday) ಮಧ್ಯಾಹ್ನ ಸ್ಪಾದಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಬ್ಯೂಟಿಷಿಯನ್ (Beautician) ಜೊತೆ ಸ್ಪಾ ಕ್ಲೀನ್ ಆಗಿ ಇಟ್ಟಿಲ್ಲ ಎಂಬ ವಿಚಾರವಾಗಿ ಕಿರಿಕ್ ಮಾಡಿದ್ದಾನೆ. ಬಳಿಕ ಆಕೆಯನ್ನು ತಬ್ಬಿಕೊಂಡು ಮುತ್ತು ಕೊಡಲು ಯತ್ನಿಸಿದ್ದಾನೆ. ಈ ವೇಳೆ ಅಲ್ಲಿಂದ ಕೂಗಾಡುತ್ತಾ ಹೊರ ಬಂದ ಯುವತಿ, ತನ್ನ ಸ್ನೇಹಿತರನ್ನು (Friends) ಅಲ್ಲಿಗೆ ಕರೆಯಿಸಿಕೊಂಡಿದ್ದಾಳೆ. ಆಗ ಸ್ಪಾಗೆ ಬಂದ ಯುವತಿಯ ಸ್ನೇಹಿತರ ಗುಂಪು ಮನೋಜ್‍ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೇಳೆ ಯುವತಿಗೆ ಕ್ಷಮೆ ಕೇಳಿ ಎಲ್ಲವೂ ಮುಗಿದಿತ್ತು.

    ಹೀಗಿದ್ದರೂ ತಾನು ಸಾಚಾ ಎಂದು ತೋರಿಸಿಕೊಳ್ಳಲು ಹೋಗಿ ಕಾಂಗ್ರೆಸ್ ಮುಖಂಡ ತಾನೇ ತೋಡಿದ ಖೆಡ್ಡಾದಲ್ಲಿ ತಾನೇ ಬಿದ್ದಿದ್ದಾನೆ. ಗಲಾಟೆ ವೇಳೆ ಆಯನ್ ನದಾಫ್(Ayan Nadaf) ಎಂಬಾತನಿಗೆ ಗಾಯವಾಗಿದ್ದು, ಈತನೊಂದಿಗೆ ಮನೋಜ್‍ ಕರ್ಜಗಿ ನಮ್ಮ ಮೇಲೆ ಗುಂಪೊಂದು ಹಲ್ಲೆ ಮಾಡಿ ಪರಾರಿಯಾಗಿದೆ ಅಂತಾ ಎಂಎಲ್‍ಸಿ(MLC) ಮಾಡಿಸಿ ಚಿಕಿತ್ಸೆ ಪಡೆದುಕೊಂಡಿದ್ದರು. ಘಟನೆಯಲ್ಲಿ ಕರ್ಜಗಿ ಕೈಗೆ ಏಟಾಗಿದ್ದರೆ, ಆಯನ್ ಬೆನ್ನಿಗೆ ಇರಿತ ಆಗಿದೆ. ಕರ್ಜಗಿ ಇತ್ತ ಎಂಎಲ್‍ಸಿ ಮಾಡಿಸುತ್ತಿದ್ದಂತೆಯೇ ವಿದ್ಯಾಗಿರಿ ಠಾಣೆಗೆ ಬಂದ ಯುವತಿ, ಮನೋಜ್‍ ಕರ್ಜಗಿ ವಿರುದ್ಧ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಿಸಿದ್ದು, ಸದ್ಯ ಕರ್ಜಗಿಯನ್ನು ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಮತ್ತೊಂದು ಕಡೆ ಅಯಾನ್ ಹಾಗೂ ಕರ್ಜಗಿ ಮೇಲೆ ಹಲ್ಲೆ ಮಾಡಿದವರ ಮೇಲೂ ವಿದ್ಯಾಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ಈ ಸಂಬಂಧ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಸ್ಮಾರ್ಟ್ ಫೋನ್ ಬಳಕೆದಾರರೇ ಎಚ್ಚರ! – ಎಂಟ್ರಿಕೊಟ್ಟಿದೆ ರಷ್ಯಾದ ಸೋವಾ-5.0 ವೈರಸ್

    Live Tv
    [brid partner=56869869 player=32851 video=960834 autoplay=true]

  • ಮದುವೆಯಾಗೋ ನೆಪದಲ್ಲಿ ಕಾರ್ಯಕರ್ತೆ ಮೇಲೆ ತೆಲಂಗಾಣದ ಕಾಂಗ್ರೆಸ್ ಮುಖಂಡನಿಂದ ಅತ್ಯಾಚಾರ

    ಮದುವೆಯಾಗೋ ನೆಪದಲ್ಲಿ ಕಾರ್ಯಕರ್ತೆ ಮೇಲೆ ತೆಲಂಗಾಣದ ಕಾಂಗ್ರೆಸ್ ಮುಖಂಡನಿಂದ ಅತ್ಯಾಚಾರ

    ಹೈದರಾಬಾದ್: ಮದುವೆಯಾಗುವ ನೆಪದಲ್ಲಿ ಪಕ್ಷದ ಕಾರ್ಯಕರ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ತೆಲಂಗಾಣದ ನಾರಾಯಣಪೇಟೆ ಜಿಲ್ಲಾ ಕಾಂಗ್ರೆಸ್ ಮುಖಂಡ ಕುಂಬಂ ಶಿವಕುಮಾರ್ ರೆಡ್ಡಿ ವಿರುದ್ಧ ಹೈದರಾಬಾದ್‍ನ ಪುಂಜಗುಟ್ಟ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    ಮದ್ಯದ ಅಮಲಿನಲ್ಲಿದ್ದ ಶಿವಕುಮಾರ್ ರೆಡ್ಡಿ ನನ್ನ ಮೇಲೆ ನಗರದ ಹೊಟೇಲ್‍ನಲ್ಲಿ ಅತ್ಯಾಚಾರವೆಸಗಿದ್ದಾರೆ ಮತ್ತು ನನ್ನ ಖಾಸಗಿ ಫೋಟೋಗಳನ್ನು ಕ್ಲಿಕ್ಕಿಸಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಇದನ್ನೂ ಓದಿ: ಪಂದ್ಯ ಸೋತ್ರೂ ರೋಮ್ಯಾಂಟಿಕ್ ಮೂಡ್- ಗೆಳತಿಗೆ ಪ್ರಪೋಸ್ ಮಾಡಿದ ಕ್ರಿಕೆಟಿಗ

    ಈ ಕುರಿತಂತೆ ದೂರು ನೀಡಿರುವ ಮಹಿಳೆ ತಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯೆಯಾಗಿದ್ದು, 2020ರಲ್ಲಿ ಮುನ್ಸಿಪಲ್ ಚುನಾವಣೆಗಳನ್ನು ಪ್ರಚಾರ ಮಾಡಲು ಸಂಘಟಿಸಲು ನಿಯೋಜನೆಗೊಂಡಿದ್ದೆ. ಈ ವೇಳೆ ನನಗೆ ನಾರಾಯಣಪೇಟೆ ಕ್ಷೇತ್ರ ಮಂಜೂರಾಗಿತ್ತು. ಹೀಗಾಗಿ ನಾರಾಯಣಪೇಟೆಗೆ ತೆರಳಿದ್ದೆ. ಆಗ ನಾರಾಯಣಪೇಟೆಗೆ ಆಗಮಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕುಂಬಂ ಶಿವಕುಮಾರ್ ರೆಡ್ಡಿ ಅವರನ್ನು ಭೇಟಿಯಾದೆ. ಅಂದಿನಿಂದ ಅವರು ನನಗೆ ಹತ್ತಿರ ಆಗಲು ಯತ್ನಿಸಿದರು. ಮೊಬೈಲ್‍ನಲ್ಲಿ ಸಂದೇಶ ಕಳುಹಿಸಲು ಆರಂಭಿಸಿದರು. ಒಂದು ದಿನ ನನ್ನನ್ನು ಮದುವೆಯಾಗುವ ಇಚ್ಛೆಯನ್ನು ವ್ಯಕ್ತಪಸಿದ್ದರು ಎಂದು ಹೇಳಿದ್ದಾರೆ.

    ಈ ಬಗ್ಗೆ ಶಿವಕುಮಾರ್ ರೆಡ್ಡಿ ಅವರನ್ನು ಪ್ರಶ್ನಿಸಿದಾಗ, ನನ್ನ ಪತ್ನಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರು ಮೂರು ವರ್ಷಕ್ಕಿಂತಲೂ ಹೆಚ್ಚು ದಿನ ಬದುಕುಳಿಯುವುದಿಲ್ಲ. ಹಾಗಾಗಿ ಅವರನ್ನು ನೋಡಿಕೊಳ್ಳಲು ಮಹಿಳೆಯ ಅಗತ್ಯವಿದೆ ಎನ್ನುತ್ತಿದ್ದರು ಅಂತ ತಿಳಿಸಿದ್ದಾರೆ. ಇದನ್ನೂ ಓದಿ: ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿದ್ದಕ್ಕೆ ಸೌದಿ ಮಹಿಳೆಗೆ 45 ವರ್ಷ ಜೈಲು ಶಿಕ್ಷೆ

    POLICE JEEP

    ಮಹಿಳೆ ದುಬ್ಬಾಕ ಜಿಲ್ಲೆಯಲ್ಲಿ ತಂಗಿದ್ದರು. ಒಮ್ಮೆ ಮದ್ಯದ ಅಮಲಿನಲ್ಲಿ ಮಹಿಳೆಯ ರೂಮ್‍ಗೆ ನುಗ್ಗಿದ ಶಿವಕುಮಾರ್ ರೆಡ್ಡಿ, ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಒತ್ತಾಯಿಸಿದ್ದರು. ಇದಕ್ಕೆ ನಿರಾಕರಿಸಿದಾಗ ತನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ನನ್ನನ್ನು ನಂಬಿಸಲು ಹಿಂದೂ ಸಂಪ್ರದಾಯದಂತೆ ಹಳದಿ ದಾರವನ್ನು ಕಟ್ಟಿ ನನ್ನನ್ನು ಮದುವೆಯಾಗಿದ್ದರು. ನಂತರ ಮಾತನಾಡಬೇಕೆಂದು ಹೋಟೆಲ್‍ಗೆ ಕರೆಸಿಕೊಂಡು ನನಗೆ ಕೆಲವು ಮಾತ್ರೆಗಳನ್ನು ತಿನ್ನಿಸಿ ಅತ್ಯಾಚಾರ ಎಸಗಿದ್ದಾರೆ. ನನಗೆ ಪ್ರಜ್ಞೆ ಬಂದ ಬಳಿಕ ನನ್ನ ಫೋಟೋಗಳನ್ನು ಕ್ಲಿಕ್ಕಿಸಿಕೊಂಡು, ನಾನು ಹೇಳಿದಂತೆ ಕೇಳಲಿಲ್ಲ ಎಂದರೆ, ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಪೋಸ್ಟ್ ಮಾಡುತ್ತೇನೆ ಅಂತ ಬೆದರಿಕೆಯೊಡ್ಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಇದೀಗ ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 420 (ವಂಚನೆ), 476 ಐಪಿಸಿ (ಅತ್ಯಾಚಾರ) ಮತ್ತು 506 ಐಪಿಸಿ (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ.

    Live Tv
    [brid partner=56869869 player=32851 video=960834 autoplay=true]