Tag: ಕಾಂಪ್ಲೆಕ್ಸ್

  • ಬಸ್ ನಿಲ್ದಾಣ ರಾತ್ರೋ ರಾತ್ರಿ ಮಾಯ – ಕಬ್ಬಿಣದ ಶೆಲ್ಟರ್‌ನನ್ನೇ ಕದ್ದ ಕಿಡಿಗೇಡಿಗಳು

    ಬಸ್ ನಿಲ್ದಾಣ ರಾತ್ರೋ ರಾತ್ರಿ ಮಾಯ – ಕಬ್ಬಿಣದ ಶೆಲ್ಟರ್‌ನನ್ನೇ ಕದ್ದ ಕಿಡಿಗೇಡಿಗಳು

    ಬೆಂಗಳೂರು/ಆನೇಕಲ್: ಸಾರ್ವಜನಿಕ ಬಸ್ ನಿಲ್ದಾಣ ರಾತ್ರೋ ರಾತ್ರಿ ಮಾಯವಾಗಿರುವ ಘಟನೆ ಕೆ.ಆರ್. ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    BUS STAND

    ಕೆ.ಆರ್ ಪುರದ ಟಿ.ಸಿ.ಪಾಳ್ಯ ಮುಖ್ಯರಸ್ತೆಯಲ್ಲಿರುವ ಆನಂದಪುರದ ಬಸ್ ನಿಲ್ದಾಣದಲ್ಲಿ ಕಬ್ಬಿಣದ ಶೆಲ್ಟರ್‌ನನ್ನೇ ಕಳ್ಳತನ ಮಾಡಿದ್ದು, ಆ ಮುಖ್ಯರಸ್ತೆಯಲ್ಲಿ ಹಲವು ವರ್ಷಗಳಿಂದ ಬಸ್ ನಿಲ್ದಾಣವಿತ್ತು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಅರಗ ಜ್ಞಾನೆಂದ್ರಗೆ ತಾವು ಸಚಿವರು ಅಂತ ಜ್ಞಾನವಿರಲಿ: ಎಚ್. ಕೆ. ಪಾಟೀಲ್

    BUS STAND

    ಶುಕ್ರವಾರ ರಾತ್ರಿ ಕಿಡಿಗೇಡಿಗಳು ಕಬ್ಬಿಣದಿಂದ ನಿರ್ಮಿಸಿದ್ದ ಬಸ್ ನಿಲ್ದಾಣವನ್ನು ವೆಲ್ಡಿಂಗ್ ಕಟರ್ ಮೂಲಕ ಕಟ್ ಮಾಡಿ ಕದ್ದೊಯ್ದಿದ್ದಾರೆ. ಇನ್ನು ಆರ್.ಎನ್.ಎಸ್ ಕಾಂಪ್ಲೆಕ್ಸ್ ಮೇಲೆ ಬಸ್ ನಿಲ್ದಾಣ ನಿರ್ಮಾಣದ ಬಳಿಕ ಇದರ ಹಿಂದೆ ಇದ್ದ ಸೈಟ್ ನಲ್ಲಿ ಆರ್‌ಎನ್ಎಸ್ ಕಾಂಪ್ಲೆಕ್ಸ್ ನಿರ್ಮಾಣ ಮಾಡಿ ಅದರಲ್ಲಿ ರೂಟ್ ಅಂಡ್ ಶೂಟ್ಸ್ ಫ್ರೂಟ್ಸ್ ಮಳಿಕೆ ಹಾಗೂ ಮಂಜುನಾಥ ನೇತ್ರಾಲಯ ಆಸ್ಪತ್ರೆಗೆ ಬಾಡಿಗೆ ನೀಡಲಾಗಿತ್ತು.

    BUS STAND

    ಆನಂದಪುರ ಮುಖ್ಯರಸ್ತೆಯಲ್ಲಿನ ಈ ಕಾಂಪ್ಲೆಕ್ಸ್‌ಗೆ ಬಸ್ ನಿಲ್ದಾಣ ಅಡ್ಡಲಾಗಿತ್ತು. ಇದರಿಂದ ಬ್ಯುಸಿನೆಸ್ ಸಹ ಕಡಿಮೆ ಆಗಿತ್ತು. ಈ ಬಸ್ ನಿಲ್ದಾಣವನ್ನು ಹೇಗಾದರೂ ತೆರವು ಮಾಡಬೇಕೆಂದು ಹಲವು ವರ್ಷಗಳಿಂದ ಕಾಯುತ್ತಿದ್ದು, ಶುಕ್ರವಾರ ವೆಲ್ಡಿಂಗ್ ಕಟರ್ ಮೂಲಕ ರಾತ್ರೋ ರಾತ್ರಿ ಬಸ್ ನಿಲ್ದಾಣದ ಶೆಲ್ಟರ್‌ನನ್ನೇ ಕದ್ದಿದ್ದಾರೆ ಎಂದು ಸ್ಥಳೀಯರಾದ ಲಕ್ಷ್ಮಣ್ ಆರೋಪಿಸಿದ್ದಾರೆ. ಜೊತೆಗೆ ಪೊಲೀಸರು ಸಿಸಿ ಕ್ಯಾಮೆರಾ ದೃಶ್ಯಾವಳಿಯನ್ನು ವಶಕ್ಕೆ ಪಡೆದಿದ್ದು ಬಸ್ ನಿಲ್ದಾಣ ಮಾಯವಾಗಿರುವ ಕುರಿತು ತನಿಕೆ ಕೈಗೊಂಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೆಆರ್ ಪುರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಇದನ್ನೂ ಓದಿ:ಅತ್ಯಾಚಾರ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರಿಗೆ ಬಹುಮಾನ ಘೋಷಿಸಿದ ಜಗ್ಗೇಶ್

  • ವಾಯುಸೇನೆ ಕಚೇರಿ ಇರೋ ದೆಹಲಿಯ ಸಿಜಿಒ ಕಾಂಪ್ಲೆಕ್ಸ್‌ನಲ್ಲಿ  ಅಗ್ನಿ ಅವಘಡ

    ವಾಯುಸೇನೆ ಕಚೇರಿ ಇರೋ ದೆಹಲಿಯ ಸಿಜಿಒ ಕಾಂಪ್ಲೆಕ್ಸ್‌ನಲ್ಲಿ ಅಗ್ನಿ ಅವಘಡ

    ನವದೆಹಲಿ: ವಾಯುಸೇನೆ ಕಚೇರಿ ಇರುವ ಸದೆಹಲಿಯ ಸಿಜಿಒ ಕಾಂಪ್ಲೆಕ್ಸ್‌ನ ಪಂಡಿತ್ ದೀನದಯಾಳ್ ಅಂತ್ಯೋದಯ ಭವನದ ಐದನೇ ಅಂತಸ್ತಿನಲ್ಲಿ ಇಂದು ಬೆಳಗ್ಗೆ ಸುಮಾರು 8.30ಕ್ಕೆ ಅಗ್ನಿ ಅವಘಡ ಸಂಭವಿಸಿದೆ.

    ಕಾಂಪ್ಲೆಕ್ಸ್‌ನಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಸ್ಥಳೀಯರು ಬೆಳಗ್ಗೆ ಸುಮಾರು 8.34ಕ್ಕೆ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಸುಮಾರು 24 ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

    ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್‌ನ ಅಧಿಕಾರಿಯೊಬ್ಬರು ಅಗ್ನಿ ಅವಘಡದಲ್ಲಿ ಸಿಲುಕಿ ಪ್ರಜ್ಞೆ ಕಳೆದುಕೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

    ಕೇಂದ್ರದ ಮಹತ್ವ ಇಲಾಖೆಗಳು ಇಲ್ಲಿ ಕೆಲಸ ಮಾಡುತ್ತಿವೆ. ಪರಿಸರ ಸಚಿವಾಲಯ ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯಗಳು ಇದೇ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ.

    ಈ ಕಟ್ಟಡವನ್ನು ಮೊದಲು ಪರ್ಯಾವರಣ್ ಭವನ್ ಎಂದು ಕರೆಯುತ್ತಿದ್ದರು. ಶಾರ್ಟ್ ಸರ್ಕ್ಯೂಟ್‍ನಿಂದ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 11ರ ಬಾಲಕಿಯ ಮೇಲೆ 22 ಮಂದಿಯಿಂದ ಗ್ಯಾಂಗ್‍ರೇಪ್: ಆರೋಪಿಗಳಿಗೆ ಕೋರ್ಟ್‍ನಲ್ಲಿ ಥಳಿತ

    11ರ ಬಾಲಕಿಯ ಮೇಲೆ 22 ಮಂದಿಯಿಂದ ಗ್ಯಾಂಗ್‍ರೇಪ್: ಆರೋಪಿಗಳಿಗೆ ಕೋರ್ಟ್‍ನಲ್ಲಿ ಥಳಿತ

    ಚೆನ್ನೈ: 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬಂಧಿತರಾಗಿದ್ದ ಆರೋಪಿಗಳನ್ನು ಕೋರ್ಟ್‍ನಲ್ಲಿ ವಕೀಲರು, ಸಾರ್ವಜನಿಕರು ಥಳಿಸಿದ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ.

    ಅತ್ಯಾಚಾರ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸುತ್ತಿದ್ದಂತೆ, ಅವರನ್ನು ವಕೀಲರು ಥಳಿಸಿ, ಆರೋಪಿಗಳ ಪರ ವಾದ ಮಾಡಲು ನಿರಾಕರಿಸಿದರು.

    ನಡೆದದ್ದು ಏನು?
    ಸಂತ್ರಸ್ತ ಬಾಲಕಿ ತನ್ನ ಪೋಷಕರೊಂದಿಗೆ 300 ಅಪಾರ್ಟ್ ಮೆಂಟ್ ಇರುವ ಕಾಂಪ್ಲೆಕ್ಸ್‍ನಲ್ಲಿ ವಾಸವಾಗಿದ್ದಳು. ಶಾಲೆಯಿಂದ ಮನೆಗೆ ಮರಳುತ್ತಿದ್ದ ಬಾಲಕಿಯನ್ನು ತಡೆದು 66 ವರ್ಷದ ಲಿಫ್ಟ್ ಆಪರೇಟರ್ ಸಾಫ್ಟ್ ಡ್ರಿಂಕ್ಸ್‍ನಲ್ಲಿ ಅಮಲು ಬರುವ ಪದಾರ್ಥ ಹಾಕಿಕೊಟ್ಟಿದ್ದನು. ನಂತರ ಆಕೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದನು. ಇದಾದ ಬಳಿಕ ಮತ್ತೊಬ್ಬ ವ್ಯಕ್ತಿಯನ್ನು ಕರೆದಿದ್ದು, ವಿಡಿಯೋ ಮಾಡಲು ಹೇಳಿದ್ದನು. ವಿಡಿಯೋ ಮಾಡಲು ಬಂದಿದ್ದ ವ್ಯಕ್ತಿಯಿಂದಲೂ ಬಾಲಕಿಯ ಅತ್ಯಾಚಾರಕ್ಕೆ ಒಳಗಾಗಿದ್ದಳು. ಹೀಗೆ ನಿರಂತರವಾಗಿ ಸೆಕ್ಯುರಿಟಿ ಗಾರ್ಡ್, ವಿದ್ಯುತ್ ಕೆಲಸಗಾರರು, ಪ್ಲಂಬರ್ ಸೇರಿದಂತೆ 18 ಜನರು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು.

    ವಿಡಿಯೋವನ್ನು ಬಹಿರಂಗ ಪಡಿಸುವುದಾಗಿ ಹೆದರಿಸಿ, ಬಾಲಕಿಯನ್ನು ಸುಮಾರು ವಾರಗಳಿಂದ ಕಾಂಪ್ಲೆಕ್ಸ್‍ನ ಬೆಸ್‍ಮೆಂಟ್, ಟೆರಸ್, ಜಿಮ್ ಮತ್ತು ಪಬ್ಲಿಕ್ ರೆಸ್ಟ್ ರೂಮ್‍ಗಳಿಗೆ ಸಾಗಿಸಲಾಗಿತ್ತು. ಬಾಲಕಿಯ ಅಕ್ಕ ಆಕೆಯನ್ನು ಪತ್ತೆ ಹಚ್ಚಿ ಮನೆಗೆ ಕರೆದು ತಂದಾಗ, ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಸಂತ್ರಸ್ತ ಬಾಲಕಿಯ ಪೋಷಕರು ಭಾನುವಾರ ಪ್ರಕರಣ ದಾಖಲಿಸಿದ್ದರು. ಸದ್ಯ ಆರೋಪಿಗಳನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.

  • ಕಟ್ಟಡ ನಿರ್ಮಾಣದ ಗುಂಡಿಯಲ್ಲಿ ಬಿದ್ದಿದ್ದ ಹೋರಿಯ ರಕ್ಷಣೆ

    ಕಟ್ಟಡ ನಿರ್ಮಾಣದ ಗುಂಡಿಯಲ್ಲಿ ಬಿದ್ದಿದ್ದ ಹೋರಿಯ ರಕ್ಷಣೆ

    ಬಳ್ಳಾರಿ: ಕಾಂಪೆಕ್ಸ್ ಕಟ್ಟಡ ನಿರ್ಮಾಣಕ್ಕಾಗಿ ತೆಗೆದಿದ್ದ ಆಳವಾದ ಬುನಾದಿಯ ಗುಂಡಿಯಲ್ಲಿ ಹೋರಿಯೊಂದು ಬಿದ್ದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

    ಇಲ್ಲಿನ ದೇವಿನಗರದ ಕುರುಬರ ಹಾಸ್ಟೆಲ್ ಸಮೀಪದಲ್ಲಿ ಘಟನೆ ನಡೆದಿದ್ದು, ಹೋರಿಗೆ ಯಾವುದೇ ಗಂಭೀರವಾದ ಗಾಯಗಳಾಗಿಲ್ಲ. ಆದರೆ ಕೆಲವು ಗಂಟೆಗಳ ಕಾಲ ಮಾತ್ರ ಹೋರಿ ಮೇಲೆ ಬರಲಾರದೇ ಒದ್ದಾಡಿದೆ. ಇದನ್ನು ಓದಿ:  ಕೇಬಲ್ ಗುಂಡಿಗೆ ಬಿದ್ದು, ಒದ್ದಾಡಿ ಹಸು ಸಾವು

    ಕಾಂಪ್ಲೆಕ್ಸ್ ಕಟ್ಟಡ ನಿರ್ಮಾಣದ ಉದ್ದೇಶದಿಂದ ಕೆಲವು ಗುಂಡಿಗಳನ್ನು ತೆಗೆಯಲಾಗಿದೆ. ರಸ್ತೆ ಪಕ್ಕದಲ್ಲಿದ್ದ ಆಳವಾದ ಗುಂಡಿಗೆ ಜಾರಿ ಬಿದ್ದ ಹೋರಿ, ಮೇಲೆಕ್ಕೆ ಬರಲು ಸಾಧ್ಯವಾಗಿಲ್ಲ. ಹೋರಿ ಬಿದ್ದಿರುವುದು ತಿಳಿಯುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

    ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಒಟ್ಟಾಗಿ ಹೋರಿಯನ್ನು ಮೇಲೆತ್ತಿ ಮಾನವೀಯತೆ ಮೆರೆದಿದ್ದಾರೆ. ಇತ್ತೀಚೆಗೆ ಚರಂಡಿಯಲ್ಲಿ ಬಿದ್ದು ಹಸುವೊಂದು ಮೇಲಕ್ಕೆ ಬರಲಾರದೇ ಸಾವನ್ನಪ್ಪಿತ್ತು.

  • 9 ಮಂದಿ ಏಕಾಏಕಿ ಕ್ಯಾಂಟೀನ್ ಗೆ ನುಗ್ಗಿ ಯುವಕನನ್ನ ಕೊಚ್ಚಿ ಕೊಂದ್ರು

    9 ಮಂದಿ ಏಕಾಏಕಿ ಕ್ಯಾಂಟೀನ್ ಗೆ ನುಗ್ಗಿ ಯುವಕನನ್ನ ಕೊಚ್ಚಿ ಕೊಂದ್ರು

    ಶಿವಮೊಗ್ಗ: ಕ್ಯಾಂಟೀನ್ ನಡೆಸುತ್ತಿದ್ದ ಯುವಕನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಆಟೋ ಕಾಂಪ್ಲೆಕ್ಸ್ ನಲ್ಲಿ ನಡೆದಿದೆ.

    ಇಂದಿರಾನಗರದ ಮಧು ಕೊಲೆಯಾದ ಯುವಕನಾಗಿದ್ದು, ಈತ ಈ ಮುಂಚೆ ಆಟೋ ಚಾಲಕನಾಗಿದ್ದನು. ರಾತ್ರಿ ಮೂರು ಬೈಕ್ ಗಳಲ್ಲಿ ಬಂದ ಒಂಭತ್ತು ಯುವಕರು ಏಕಾಏಕಿ ಮಧು ಮೇಲೆ ದಾಳಿ ನಡೆಸಿದ್ದಾರೆ. ಮಚ್ಚು, ಲಾಂಗು, ಚೂರಿ ಸಮೇತ ಬಂದಿದ್ದ ತಂಡ ನೇರವಾಗಿ ಕ್ಯಾಂಟೀನ್ ಗೆ ನುಗ್ಗಿದ್ದು, ಇದರಿಂದ ಮಧು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಪರಿಣಾಮ ತಂಡದ ದಾಳಿಗೆ ಸಿಲುಕಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಈ ಕ್ಯಾಂಟೀನ್ ನಲ್ಲಿ ಮಧು ಓಸಿ ದಂಧೆ ನಡೆಸುತ್ತಿದ್ದನು. ಓಸಿ ದಂಧೆಯ ಮೇಲೆ ನಿಯಂತ್ರಣ ಸಾಧಿಸಲು ಪ್ರವೀಣ್ ಮತ್ತು ಮಧು ಗ್ಯಾಂಗ್ ನಡುವೆ ಪೈಪೋಟಿ ಇತ್ತು. ಈ ವಿಚಾರವಾಗಿ ಆಗಾಗ ಗಲಾಟೆ ಕೂಡ ನಡೆದಿತ್ತು. ಇದೇ ವಿಷಯಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ.

    ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆಯಾದ ಮಧು ಹಾಗೂ ಕೊಲೆ ಮಾಡಿದ ಆರೋಪಿ ಪ್ರವೀಣ್ ವಾಸವಿದ್ದಾರೆ. ಹಳೆಯ ಗಲಾಟೆಗೆ ಸಂಬಂಧಿಸಿದಂತೆ ಕಳೆದ ವಾರವಷ್ಟೇ ಇಲ್ಲಿನ ಯುವಕರು ಹೊಡೆದಾಡಿಕೊಂಡಿದ್ದರು. ಆಗ ಪೊಲೀಸರು ಸೂಕ್ತ ಕ್ರಮ ಕೈಗೊಂಡಿದ್ದರೆ ಇಂದಿನ ಕೊಲೆ ತಪ್ಪಿಸಬಹುದಿತ್ತು ಅಂತ ಸ್ಥಳೀಯರು ಹೇಳುತ್ತಿದ್ದಾರೆ.

    ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಅಭಿನವ್ ಖರೆ ಹಾಗೂ ವಿನೋಬ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸಚಿವ ಜಾರ್ಜ್ ರ 700 ಕೋಟಿ ರೂ. ಮಹಾ ಹಗರಣ ಬಯಲು- 60 ವರ್ಷದವರೆಗೆ ಎಂಬೆಸ್ಸಿ ಗ್ರೂಪ್ ಪಾಲಾಗಲಿರೋ ಇಂದಿರಾನಗರ ಕಾಂಪ್ಲೆಕ್ಸ್

    ಸಚಿವ ಜಾರ್ಜ್ ರ 700 ಕೋಟಿ ರೂ. ಮಹಾ ಹಗರಣ ಬಯಲು- 60 ವರ್ಷದವರೆಗೆ ಎಂಬೆಸ್ಸಿ ಗ್ರೂಪ್ ಪಾಲಾಗಲಿರೋ ಇಂದಿರಾನಗರ ಕಾಂಪ್ಲೆಕ್ಸ್

    ಬೆಂಗಳೂರು: ಇಡೀ ಬೆಂಗಳೂರನ್ನೇ ಗುತ್ತಿಗೆ ಪಡೆಯಲು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಹೊರಟಿದ್ದಾರಾ ಅನ್ನೋ ಪ್ರಶ್ನೆ ಎದ್ದಿದೆ. ಯಾಕಂದ್ರೆ ಬೆಂಗಳೂರಿನ ಕಾಸ್ಟ್ಲಿ ಪ್ರಾಪರ್ಟಿ ಜಾರ್ಜ್ ಒಡೆತನದ ಎಂಬೆಸ್ಸಿ ಕೈಗೆ ಸಿಕ್ತಿದೆ. ಎಂಬೆಸ್ಸಿ ಸುಪರ್ದಿಗೆ ಇಂದಿರಾನಗರ ಬಿಡಿಎ ಕಾಂಪ್ಲೆಕ್ಸ್ ಮರು ನಿರ್ಮಾಣ ಗುತ್ತಿಗೆ ನೀಡಲಾಗ್ತಿದೆ.

    ಮೊನ್ನೆ ತಾನೆ ಬಿಬಿಎಂಪಿಯ ಮಹತ್ವಾಕಾಂಕ್ಷೆಯ ಯೋಜನೆಯಾದ ಪಾಡ್ ಟ್ಯಾಕ್ಸಿಯ ಗುತ್ತಿಗೆಯನ್ನು ಪಾಲುದಾರಿಕೆಯಲ್ಲಿ ಪಡೆದ ಸಚಿವ ಕೆ.ಜೆ ಜಾರ್ಜ್, ಅದನ್ನು ಮಾನ್ಯತಾ ಟೆಕ್ ಪಾರ್ಕ್‍ವರೆಗು ವಿಸ್ತರಿಸುವಲ್ಲಿ ಯಶಸ್ವಿಯಾಗಿದ್ರು. ಈಗ ಬಿಡಿಎಗೆ ಕಾಲಿಟ್ಟಿರೋ ಕೆ.ಜೆ. ಜಾರ್ಜ್ ಅಂಡ್ ಕಂಪನಿ ಬಿಡಿಎನ ಪ್ರಮುಖ ಶಾಪಿಂಗ್ ಕಾಂಪ್ಲೆಕ್ಸ್ ಗಳ ಮರು ಅಭಿವೃದ್ದಿಯ ಯೋಜನೆಯಡಿಯಲ್ಲಿ ತಮ್ಮ ಪಾಲುದಾರಿಕೆಯ ಕಂಪನಿ ಎಂಬೆಸ್ಸಿ ಗ್ರೂಪ್‍ಗೆ ಗುತ್ತಿಗೆ ಕೊಡಿಸುವಲ್ಲಿ ಯಶ್ವಸ್ವಿಯಾಗಿದ್ದಾರೆ.

    ಈಗಾಗಲೇ ಇಂದಿರಾ ನಗರದ ಶಾಂಪಿಂಗ್ ಕಾಂಪ್ಲೆಕ್ಸ್ ಗುತ್ತಿಗೆಯನ್ನು ಪಡೆಯೋ ಅಂತಿಮ ಹಂತದಲ್ಲಿರೋ ಎಂಬೆಸ್ಸಿ ಗ್ರೂಪ್ ಇನ್ನುಳಿದ ಆಸ್ಟೀನ್ ಟೌನ್, ಕೋರಮಂಗಲ, ಆರ್.ಟಿ. ನಗರ, ಸದಾಶಿವನಗರ ಕಾಂಪ್ಲೆಕ್ಸ್ ಸೇರಿದಂತೆ 6 ಕಾಂಪ್ಲೆಕ್ಸ್ ಗಳಿಗೂ ಅರ್ಜಿ ಸಲ್ಲಿಸಿದೆ. ಒಂದು ವೇಳೆ ಎಲ್ಲಾ ಕಂಪ್ಲೆಕ್ಸ್ ಗಳ ಗುತ್ತಿಗೆಯನ್ನು ಎಂಬೆಸ್ಸಿ ಗ್ರೂಪ್ ಪಡೆದರೆ ಬಿಡಿಎನ ಪ್ರಮುಖ ಆಸ್ತಿ ಕೆ.ಜೆ. ಜಾರ್ಜ್ ಪಾಲಾಗೋದ್ರಲ್ಲಿ ಯಾವುದೇ ಸಂಶಯವಿಲ್ಲ. 657 ಕೋಟಿ ರೂಪಾಯಿಯ ಬೃಹತ್ ಯೋಜನೆ ಇದಾಗಿದ್ದು, 60 ವರ್ಷದವರೆಗೆ ಗುತ್ತಿಗೆ ಒಪ್ಪಂದ ಮಾಡಿಕೊಳ್ಳಲಾಗ್ತಾಯಿದೆ.

    ಇದನ್ನೂ ಓದಿ: ಬೆಂಗಳೂರಿನಲ್ಲಿ ಓಡಲಿದೆ ಸಚಿವ ಜಾರ್ಜ್ ಅಂಡ್ ಕಂಪೆನಿಯ ಪಾಡ್ ಟ್ಯಾಕ್ಸಿ!