Tag: ಕಾಗಿನೆಲೆ ಸ್ವಾಮೀಜಿ

  • ನಿಮ್ಮ ರಾಜಕೀಯ ದ್ವೇಷಕ್ಕೆ ಕಾಗಿನೆಲೆ ಶ್ರೀಗಳನ್ನು ಬೀದಿಗೆ ತರಬೇಡಿ: ಭಕ್ತರ ಮನವಿ

    ನಿಮ್ಮ ರಾಜಕೀಯ ದ್ವೇಷಕ್ಕೆ ಕಾಗಿನೆಲೆ ಶ್ರೀಗಳನ್ನು ಬೀದಿಗೆ ತರಬೇಡಿ: ಭಕ್ತರ ಮನವಿ

    ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪರ-ವಿರೋಧ ಹೇಳಿಕೆ ನೀಡುವಲ್ಲಿ, ಕಾಗಿನೆಲೆ ಸ್ವಾಮೀಜಿ ಹಾಗೂ ಶಾಸಕ ಎಚ್.ವಿಶ್ವನಾಥ್ ಅವರ ನಡುವೆ ಭಾರೀ ವಾಗ್ದಾಳಿ ನಡೆದಿದ್ದು, ಸದ್ಯ ಇದನ್ನು ಶಮನಮಾಡಲು ಭಕ್ತರೇ ಮುಂದಾಗಿದ್ದಾರೆ.

    ಕಾಗಿನೆಲೆ ನಿರಂಜನಾನಂದಪುರಿ ಶ್ರೀಗಳ ವಿರುದ್ಧ ಶಾಸಕ ಎಚ್.ವಿಶ್ವನಾಥ್ ನೀಡಿರುವ ಹೇಳಿಕೆಯಿಂದ ಎಚ್ಚೆತ್ತ ಕಾಗಿನೆಲೆ ಮಠದ ಭಕ್ತರು, ಇನ್ನೊಂದು ವಾರದಲ್ಲಿ ವಿಶ್ವನಾಥ್ ಹಾಗೂ ಕಾಗಿನೆಲೆ ಶ್ರೀಗಳನ್ನು ಭೇಟಿ ಮಾಡಿಸಲು ಮುಂದಾಗಿದ್ದಾರೆ.

    ಪಬ್ಲಿಕ್ ಟಿವಿಗೆ ಮಾಹಿತಿ ನೀಡಿರುವ ಭಕ್ತರು, ನಿಮ್ಮ ರಾಜಕೀಯ ಭಿನ್ನಾಭಿಪ್ರಾಯದಿಂದ ಶ್ರೀಗಳನ್ನು ಬೀದಿಗೆ ತರುವ ಕೆಲಸ ಮಾಡಬೇಡಿ. ವಿಶ್ವನಾಥ್ ಅವರನ್ನು ಶ್ರೀಗಳಿಗೆ ನೇರವಾಗಿ ಭೇಟಿ ಮಾಡಿಸಿ, ತಮ್ಮ ಅಸಮಾಧಾನಕ್ಕೆ ಕಾರಣ ಏನು ಎನ್ನುವುದನ್ನು ಚರ್ಚೆ ಮಾಡಿಸುತ್ತೇವೆ. ಅಷ್ಟೇ ಅಲ್ಲದೇ ಸಭೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕರೆಸುವ ಪ್ರಯತ್ನ ಮಾಡುತ್ತೇವೆ ಎಂದರು.

    ಕಾಗಿನೆಲೆ ಮಠ ಯಾವತ್ತು ವಿಶ್ವನಾಥ್ ಅವರಿಗೆ ಮೋಸ ಅಥವಾ ಅನ್ಯಾಯ ಮಾಡಿಲ್ಲ. ಸಿದ್ದರಾಮಯ್ಯ, ವಿಶ್ವನಾಥ್, ಈಶ್ವರಪ್ಪ, ಬಂಡೆಪ್ಪ ಕಾಶೇಂಪುರ್ ಅವರ ಬೆಂಬಲಕ್ಕೆ ಮಠ ಇದ್ದೆ ಇರುತ್ತದೆ. ಆದರೆ ವಿಶ್ವನಾಥ್ ಅವರು ಈ ರೀತಿ ಹೇಳಿಕೆ ನೀಡುತ್ತಿರುವುದು ಸೂಕ್ತವಲ್ಲ. ತಮಗಾಗಿರುವ ಅನ್ಯಾಯದ ಬಗ್ಗೆ ಮಠದಲ್ಲಿಯೇ ಚರ್ಚೆ ಮಾಡಬೇಕೇ ಹೊರತು ಶ್ರೀಗಳ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಬಾರದು ಎಂದು ಸೂಚಿಸಿದರು.

  • ತಮ್ಮ ತಲೆ ಮೇಲೆ ಮಣ್ಣು ಹಾಕ್ಕೊಂಡು ಈಗ ಸಮಾಜದ ಮೇಲೆ ಹಾಕ್ತಿದ್ದಾರೆ: ವಿಶ್ವನಾಥ್ ವಿರುದ್ಧ ಕಾಗಿನೆಲೆ ಶ್ರೀ ಗರಂ

    ತಮ್ಮ ತಲೆ ಮೇಲೆ ಮಣ್ಣು ಹಾಕ್ಕೊಂಡು ಈಗ ಸಮಾಜದ ಮೇಲೆ ಹಾಕ್ತಿದ್ದಾರೆ: ವಿಶ್ವನಾಥ್ ವಿರುದ್ಧ ಕಾಗಿನೆಲೆ ಶ್ರೀ ಗರಂ

    ದಾವಣಗೆರೆ: ಶಾಸಕ ವಿಶ್ವನಾಥ್ ತಮ್ಮ ತಲೆ ಮೇಲೆ ಮಣ್ಣು ಹಾಕಿಕೊಂಡು ಸಮಾಜದ ಹಾಗೂ ಮಠದ ಮೇಲೆ ಹಾಕುತ್ತಿರುವುದು ಸೂಕ್ತವಲ್ಲ ಎಂದು ಹರಿಹರ ತಾಲೂಕಿನ ಬೆಳ್ಳೋಡಿಯ ಕಾಗಿನೆಲೆ ಸ್ವಾಮೀಜಿ ಕಿಡಿಕಾರಿದ್ದಾರೆ.

    ಶಾಸಕ ವಿಶ್ವನಾಥ್ ಹೇಳಿಕೆ ಖಂಡಿಸಿ, ಮಾಧ್ಯಮಗಳ ಜೊತೆಗೆ ಮಾತನಾಡಿದ ಶ್ರೀಗಳು, ನಮ್ಮ ಸಮಾಜದ ನಾಯಕರಾಗಿರುವ ವಿಶ್ವನಾಥ್ ಅವರು ತಮ್ಮ ವೈಯಕ್ತಿಕ ಪ್ರತಿಷ್ಠೆಗಾಗಿ ಈ ರೀತಿ ಹೇಳಿಕೆ ಮಾಡಿದ್ದಾರೆ. ಆದರೆ ನಾನು ಕುರುಬ ಸಮಾಜದ ಪರ ಇದ್ದೇನೆ. ಯಾರೇ ಬಂದರೂ ನಮಗಾಗುವ ಶೋಷಣೆ ವಿರುದ್ಧ ಧ್ವನಿ ಎತ್ತುವುದನ್ನು ನಿಲ್ಲಿಸುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದರು. ಇದನ್ನು ಓದಿ:  ನನಗೆ ಅನ್ಯಾಯವಾದಾಗ ಎಲ್ಲಿ ಹೋಗಿದ್ರಿ – ಕಾಗಿನೆಲೆ ಶ್ರೀಗಳ ವಿರುದ್ಧ ವಿಶ್ವನಾಥ್ ಗರಂ

    ರಾಜಕೀಯದಲ್ಲಿ ನಾನು ಮೂಗು ತೂರಿಸಿಲ್ಲ. ಆದರೆ ವಿಶ್ವನಾಥ್ ಅವರು ಈ ಹಿಂದೆ ಜೆಡಿಎಸ್ ವರಿಷ್ಠ ದೇವೇಗೌಡ ಅವರನ್ನು ಘಟ ಸರ್ಪ ಹಾಗೂ ಸಿದ್ದರಾಮಯ್ಯ ಅವನ್ನು ಕಪ್ಪೆ ಎಂದು ವ್ಯಂಗ್ಯವಾಡಿದ್ದರು. ಈಗ ಅವರಿಂದ ಅಧಿಕಾರ ಪಡೆಯಲು ಮುಂದಾಗುತ್ತಿದ್ದಾರೆ ಎಂದು ಕಾಲೆಳೆದರು.

    ರಾಜಕೀಯ ವಲಯದಲ್ಲಿ ವಿಶ್ವನಾಥ್ ಅವರ ಕೆಲವು ನಡವಳಿಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬೇಸರ ತಂದಿದೆ. ಆದರೂ ನಾವು ಸಿದ್ದರಾಮಯ್ಯ ಅವರನ್ನು ಒಪ್ಪಿಸಲು ಮುಂದಾಗಿದ್ದೇವು, ಪ್ರಯತ್ನ ವಿಫಲವಾಯಿತು. ಅನೇಕ ಬಾರಿ ವಿಶ್ವನಾಥ್ ಅವರು ನನ್ನ ಬಳಿ ತಮ್ಮ ನೋವು ಹಂಚಿಕೊಂಡಿದ್ದಾರೆ. ಈಗ ಅದನ್ನು ಮರೆತು ನನ್ನ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಕುರುಬ ಸಮುದಾಯ ಹಾಗೂ ನನ್ನ ವಿರುದ್ಧ ಮಾತನಾಡಿದರೆ ಅವರಿಗೆ ಒಳ್ಳೆಯದು ಆಗುತ್ತದೆ ಎನ್ನುವುದಾದರೆ ನನ್ನ ಅಡ್ಡಿ ಇಲ್ಲ ಎಂದು ಟಾಂಗ್ ನೀಡಿದರು.

  • ಕೃಷ್ಣಮಠಕ್ಕೆ 1 ಬಾರಿಯೂ ಹೋಗಿಲ್ಲ, ಪೇಜಾವರಶ್ರೀಯನ್ನು ಮಾತಾಡ್ಸಿಲ್ಲ- 6ನೇ ಬಾರಿಗೆ ನಾಳೆ ಸಿಎಂ ಉಡುಪಿಗೆ

    ಕೃಷ್ಣಮಠಕ್ಕೆ 1 ಬಾರಿಯೂ ಹೋಗಿಲ್ಲ, ಪೇಜಾವರಶ್ರೀಯನ್ನು ಮಾತಾಡ್ಸಿಲ್ಲ- 6ನೇ ಬಾರಿಗೆ ನಾಳೆ ಸಿಎಂ ಉಡುಪಿಗೆ

    ಉಡುಪಿ: ಮುಖ್ಯಮಂತ್ರಿ ಸ್ಥಾನ ಅಲಂಕರಿಸಿಕೊಂಡ ಬಳಿಕ ಸಿಎಂ ಸಿದ್ದರಾಮಯ್ಯ 6ನೇ ಬಾರಿ ಉಡುಪಿಗೆ ಬರ್ತಾ ಇದ್ದಾರೆ. ಸಿಎಂ ಸಿದ್ದರಾಮಯ್ಯ ಉಡುಪಿಗೆ ಬಂದ್ರೂ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲ್ಲ ಅನ್ನೋದು ಸದ್ಯ ಚರ್ಚೆಯಲ್ಲಿರುವ ವಿಚಾರವಾಗಿದೆ.

    ಭಾನುವಾರ ಸಿಎಂ ಮತ್ತೆ ಉಡುಪಿಗೆ ಆಗಮಿಸಲಿದ್ದು, ಸರ್ಕಾರ ಸಹಭಾಗಿತ್ವದ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ ಆಸ್ಪತ್ರೆಯನ್ನು ಉದ್ಘಾಟನೆ ಮಾಡಲಿದ್ದಾರೆ. ಕೃಷ್ಣ ಮಠದಿಂದ ಈ ಆಸ್ಪತ್ರೆ ಉದ್ಘಾಟನೆ ಆಗುವ ಸ್ಥಳ ಕೇವಲ 200 ಮೀಟರ್ ಅಂತರದಲ್ಲಿದೆ. ಹೀಗಾಗಿ ಊರಿಗೆ ಬಂದವರು ನೀರಿಗೆ ಬರುವುದಿಲ್ಲವೇ ಎಂಬ ಚರ್ಚೆ ವಾಟ್ಸಪ್ ಫೇಸ್‍ಬುಕ್ ಗಳಲ್ಲಿ ಆರಂಭವಾಗಿದೆ.

    ಉಡುಪಿ ಶ್ರೀಕೃಷ್ಣಮಠ, ಇಲ್ಲಿರುವ ಆಚಾರ ವಿಚಾರ ಪದ್ಧತಿಗಳ ಬಗ್ಗೆ ಬಹಳ ವಿರೋಧವಿದ್ದ ಕಾಗಿನೆಲೆ ಸ್ವಾಮೀಜಿ ಅವರು ವಾರದ ಹಿಂದೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ಕೊಟ್ಟಿದ್ದರು. ಪೇಜಾವರ ಶ್ರೀಗಳಿಂದ ಸನ್ಮಾನ ಮಾಡಿಸಿ, ಪರ್ಯಾಯ ಪೇಜಾವರಶ್ರೀ ಮತ್ತು ಕಿರಿಯ ಶ್ರೀಗಳಿಗೆ ಕರಿ ಕಂಬಳಿ ಹೊದಿಸಿ ಗೌರವಾರ್ಪಣೆ ಸಲ್ಲಿಸಿದ್ದರು.

    ಅದೇ ಕುರುಬ ಸಮುದಾಯದ ಸಿಎಂ ಸಿದ್ದರಾಮಯ್ಯ ಕನಕನಿಗೆ ಒಲಿದ ಕೃಷ್ಣನ ನೋಡಲು ಯಾಕೆ ಉಡುಪಿಗೆ ಬರುತ್ತಿಲ್ಲ ಎಂಬುದು ಚರ್ಚೆಯ ವಿಚಾರ. ಪ್ರತಿ ಬಾರಿ ಉಡುಪಿಗೆ ಬಂದಾಗ ಕೃಷ್ಣ ಮಠಕ್ಕೆ ಹೋಗಲು, ಪೇಜಾವರ ಶ್ರೀಗಳನ್ನು ಭೇಟಿ ಮಾಡಲು ಕಾಲ ಕೂಡಿ ಬಂದಿಲ್ಲ ಎಂದು ಹೇಳುತ್ತಲೇ ಸಿಎಂ ಸಿದ್ದರಾಮಯ್ಯ ನುಣುಚಿಕೊಳ್ಳುತ್ತಿದ್ದರು.

    ನಾಳೆ ಉಡುಪಿಗೆ ಬರುವ ಸಿಎಂ ಸಿದ್ದರಾಮಯ್ಯ ಶ್ರೀಕೃಷ್ಣ ಮಠಕ್ಕೆ ಬರ್ತಾರಾ? ಪೇಜಾವರ ಶ್ರೀಗಳನ್ನು ಭೇಟಿ ಮಾಡ್ತಾರಾ? ಎನ್ನುವ ಪ್ರಶ್ನೆ ಈಗ ಮತ್ತೆ ಹುಟ್ಟಿಕೊಂಡಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ಅವರ ನಾಳಿನ ನಡೆಯ ಬಗ್ಗೆ ಕುತೂಹಲವಿದೆ.

    ಐದು ಬಾರಿ ಸಿಎಂ ಕಾರ್ಯಕ್ರಮ ಉಡುಪಿಯಲ್ಲಿ ನಿಗದಿಯಾದಾಗ ಮಠದಿಂದ ಆಮಂತ್ರಣ ನೀಡಿದ್ದೆವು. ಬರುತ್ತೇನೆ ಎಂದು ಹೇಳುತ್ತಾರೆ, ಆದ್ರೆ ಬಂದಿಲ್ಲ. ಪರ್ಯಾಯಕ್ಕೂ ಆಹ್ವಾನ ನೀಡಿದ್ದೆವು ಅದಕ್ಕೂ ಬರಲಿಲ್ಲ. ಐದು ಬಾರಿ ಬಾರದಿದ್ದಾಗ ಈ ಬಾರಿ ಆಹ್ವಾನ ನೀಡಿಲ್ಲ. ಬಂದರೆ ಸಂತೋಷ, ಬರದಿದ್ದರೆ ಬೇಸರ ಮಾಡಿಕೊಳ್ಳುವುದಿಲ್ಲ ಅಂತ ಪರ್ಯಾಯ ಮಠ ಹೇಳಿದೆ.